Updated News From Kaup

ಇಂದು (ಮೇ 16) : ಕಾಪು ಪಿಲಿ ಕೋಲ

Thumbnail
Posted On: 16 May 2026, 08:09 AM

ಕಾಪು : ದ್ವೈವಾರ್ಷಿಕವಾಗಿ ಕಾಪು ಶ್ರೀ ಮುಗ್ಗೇರ್ಕಳ ಹುಲಿ ಚಂಡಿ ದೈವಸ್ಥಾನದಲ್ಲಿ ಜರಗಲಿರುವ "ಪಿಲಿ ಕೋಲ" ಮೇ 16, ಶನಿವಾರ ಜರುಗಲಿದೆ.

ನಲ್ವತ್ತು ವರ್ಷಗಳಿಗೂ ಅಧಿಕ ಕಾಲ ಪಿಲಿ ಕೋಲ ಕಟ್ಟಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಮೂಳೂರು ಗುಡ್ಡ ಪಾಣಾರ ಅವರ ಪುತ್ರ ಸುಧಾಕರ ಪಾಣಾರ ಈ ಬಾರಿ ಅಭಯ ದೊರೆತು ಪಿಲಿ ಕೋಲ ಕಟ್ಟಲಿದ್ದಾರೆ.

ಜನರು ಹುಲಿಯನ್ನು ನೋಡಿ ಹುಲಿಯಿಂದ ತಪ್ಪಿಸಿಕೊಳ್ಳುವ ದೃಶ್ಯ ರೋಚಕವಾಗಿರುತ್ತದೆ. ಹುಲಿಯನ್ನು ಹಗ್ಗದ ಮೂಲಕ ನಿಯಂತ್ರಿಸುವವರೂ ಇರುತ್ತಾರೆ. ಬೇಟೆಯ ವೇಳೆ ಯಾರನ್ನಾದರು ಮುಟ್ಟಿದರೆ ಅವರಿಗೆ ಕಂಟಕವಿದೆ ಎಂಬ ನಂಬಿಕೆಯಿದೆ.

ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆವ ಕೋಲವನ್ನು ವೀಕ್ಷಿಸಲು ವಿವಿಧ ಭಾಗದಿಂದ ಜನರು ಆಗಮಿಸುತ್ತಾರೆ.

ಮೇ 22 : ತ್ರಿಶಾ ಶಿಕ್ಷಣ ಸಂಸ್ಥೆಯಿಂದ ಕಟಪಾಡಿಯಲ್ಲಿ ಅಭ್ಯುದಯ - ಉದ್ಯೋಗ ಮೇಳ

Thumbnail
Posted On: 16 May 2026, 07:55 AM

ಕಾಪು : ಕರಾವಳಿ ಕರ್ನಾಟಕದಲ್ಲಿ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ತ್ರಿಶಾ ಸಮೂಹ ಸಂಸ್ಥೆಗಳು ಇದರ ಅಂಗ ಸಂಸ್ಥೆಯಾದ ತ್ರಿಶಾ ವಿದ್ಯಾ ಕಾಲೇಜ್ ಆಪ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಮತ್ತು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ಕಟಪಾಡಿ ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ವಿಭಾಗ ಮೊತ್ತ ಮೊದಲ ಬಾರಿಗೆ ಕಟಪಾಡಿಯಲ್ಲಿ ಮೇ 22 ರಂದು ತ್ರಿಶಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ಅಭ್ಯುದಯ - ಉದ್ಯೋಗ ಮೇಳ ಆಯೋಜಿಸುತ್ತಿದೆ ಎಂದು ತ್ರಿಶಾ ವಿದ್ಯಾ ಕಾಲೇಜ್ ಆಪ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲರಾದ ಪ್ರೊ. ವಿಘ್ನೇಶ್ ಶೆಣೈ ಹೇಳಿದರು.
ಅವರು ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕರ್ನಾಟಕದ ಪ್ರತಿಷ್ಠಿತ 40ಕ್ಕೂ ಹೆಚ್ಚಿನ ಸಂಸ್ಥೆಗಳಿಂದ ಉದ್ಯೋಗಿಗಳನ್ನ ಆರಿಸಿಕೊಳ್ಳುವುದಕ್ಕೆ ಸಂದರ್ಶನ ಲಭ್ಯವಿರುತ್ತದೆ. ಇಲ್ಲಿ ಪದವಿ, ಸ್ನಾತಕೋತ್ತರ ಪದವಿ, ಐಟಿ, ಬಿಫಾರ್ಮಾ, ನರ್ಸಿಂಗ್ ಹೀಗೆ ವಿವಿದ ವಿದ್ಯಾಭ್ಯಾಸಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಸಂಧರ್ಶನದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. 
ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗ ಆಕಾಂಕ್ಷಿಗಳಿಗೆ ಮೇ 19 ಮತ್ತು 20 ರಂದು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಇಲ್ಲಿ ಸಂದರ್ಶನವನ್ನು ಎದುರಿಸುವ ರೀತಿ, ಸಿವಿಗಳನ್ನು ಬರೆಯುವುದು ಹೇಗೆ, ತಮ್ಮನ್ನು ತಾವು ವಿವಿಧ ಕಂಪನಿಗಳ ಹೆಚ್ ಆರ್ ಗಳ ಮುಂದೆ ಹೇಗೆ ನಿರೂಪಿಸಿಕೊಳ್ಳುವ ಬಗ್ಗೆ ತಿಳಿಸಿಕೊಡಲಾಗುತ್ತದೆ. ಸುಮಾರು 600ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಉದ್ಯೋಗ ಮೇಳಕ್ಕೆ ತಮ್ಮ ಹೆಸರನ್ನು ದಾಖಲಿಸಿಕೊಂಡಿದ್ದಾರೆ. 

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ಗೋಪಾಲಕೃಷ್ಣ ಭಟ್, ಗೌರವ ಅತಿಥಿಗಳಾಗಿ ಕೆ ಸತ್ಯೇಂದ್ರ ಪೈ, ಪ್ರೀತಮ್ ಪ್ರಸಾದ್ ಎಸ್ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲರಾದ ಪ್ರೊ. ವಿಘ್ನೇಶ್ ಶೆಣೈ, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಲದೀಪ್ ವೈ ಯು, ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥರಾದ ಆಲ್ಬನ್ ಉಪಸ್ಥಿತರಿರಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 6364872304 ಸಂಪರ್ಕಿಸಿಸಬಹುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಲದೀಪ್ ವೈ ಯು, ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥರಾದ ಆಲ್ಬನ್ ಆಂಥೋನಿ ಪಿರೆರಾ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಜೆಡಿಎಸ್ ಮಹಿಳಾ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಅನಸೂಯ ಶೆಟ್ಟಿ ನೇಮಕ

Thumbnail
Posted On: 16 May 2026, 07:48 AM

ಉಡುಪಿ : ಜಿಲ್ಲಾ ಜೆಡಿಎಸ್ ಮಹಿಳಾ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಅನಸೂಯ ಶೆಟ್ಟಿ ನೇಮಕ ಗೊಂಡಿದ್ದಾರೆ.

ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷರಾಗಿ  ಅನಸೂಯ ಶೆಟ್ಟಿ ಅವರನ್ನು ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್. ವಿ. ಶೆಟ್ಟಿ ಯವರು ಜಾರಿಗೆ ಬರುವಂತೆ ನೇಮಕಾತಿ ಆದೇಶ ಪತ್ರವನ್ನು ನೀಡಿದರು.

ಅನಸೂಯ ಶೆಟ್ಟಿ ಅವರು ಸಾಮಾಜಿಕ ಕಾರ್ಯಕರ್ತರಾಗಿ ವಿವಿಧ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಜನತಾದಳ (ಜಾತ್ಯತೀತ) ಮಹಿಳಾ ಘಟಕವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅವರ ಸೇವೆಯನ್ನು ಪರಿಗಣಿಸಿ ಈ ನೇಮಕಾತಿ ಮಾಡಲಾಗಿದೆ ಎಂದು ಯೋಗಿಶ್ ವಿ ಶೆಟ್ಟಿಯವರು ತಿಳಿಸಿರುತ್ತಾರೆ.

 ಉಡುಪಿ ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಸಂಘಟಿಸಿ, ಮಹಿಳಾ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕೆಂದು ತಿಳಿಸಿದರು.

ಈ ನೇಮಕಾತಿಯಿಂದ ಪಕ್ಷದ ಮಹಿಳಾ ಘಟಕಕ್ಕೆ ಹೊಸ ಚೈತನ್ಯ ದೊರೆಯಲಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದೆ ಎಂಬ ವಿಶ್ವಾಸವನ್ನು ಜಿಲ್ಲಾಧ್ಯಕ್ಷ ಯೋಗಿಶ್. ವಿ. ಶೆಟ್ಟಿ ವ್ಯಕ್ತಪಡಿಸಿದ್ದಾರೆ. 

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಅಚಾರ್ಯ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು,ಉಪಸ್ಥಿತರಿದ್ದರು.

 

ಮೇ 16 –ಮೇ 22 : ಉಚಿತ ಹಿಂದೂ ಸಾರ್ವಜನಿಕ ಧಾರ್ಮಿಕ ಶಿಬಿರ

Thumbnail
Posted On: 15 May 2026, 01:43 PM

ಕಾಪು : ಸುಜ್ಞಾನ ಚಾರಿಟೇಬಲ್ ಟ್ರಸ್ಟ್ (ರಿ.) ಕಾಪು ಮತ್ತು ಕಾಪು ಚಾರಿಟೇಬಲ್ ಟ್ರಸ್ಟ್ (ರಿ.) ಕಾಪು ಇವರ ಸಂಯುಕ್ತ ಆಶ್ರಯದಲ್ಲಿ
ಉಚಿತ ಹಿಂದೂ ಸಾರ್ವಜನಿಕ ಧಾರ್ಮಿಕ ಶಿಬಿರ (ಎಲ್ಲಾ ವಯಸ್ಸಿನ ಎಲ್ಲಾ ವರ್ಗದ ಮಕ್ಕಳು, ಸ್ತ್ರೀಯರು ಹಾಗೂ ಪುರುಷರಿಗೆ) ಮೇ 16 ರಿಂದ ಮೇ 22 ರವರೆಗೆ ಸುಧಾಮ ಸಭಾಭವನ, ಕಲ್ಯ, ಕಾಪು ಇಲ್ಲಿ ಪ್ರತಿದಿನ ಅಪರಾಹ್ನ ಗಂಟೆ 3 ರಿಂದ 6:30ರವರೆಗೆ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ನೋಂದಣಿಗಾಗಿ 6362023002 ವಾಟ್ಸಾಪ್ ಸಂದೇಶ ಕಳುಹಿಸಿ

ಕಾಪು : ಅಪಘಾತದಿಂದ ಗಾಯಗೊಂಡ ಮಹಿಳೆ ಸಹಾಯ ಹಸ್ತದ ನಿರೀಕ್ಷೆಯಲ್ಲಿ

Thumbnail
Posted On: 15 May 2026, 09:25 AM

ಕಾಪು :  ಇತ್ತೀಚಿಗೆ ಸಂಭವಿಸಿದ ಅಪಘಾತದಲ್ಲಿ ಇನ್ನಂಜೆ ಗ್ರಾ.ಪಂ.ಸಿಬ್ಬಂದಿ ಪ್ರೀತಿ ಶೆಟ್ಟಿಯವರಿಗೆ ಕೈ ಮತ್ತು ಕಾಲಿಗೆ ತೀವ್ರ ಏಟು ಬಿದ್ದು, ಸರಿಸುಮಾರು 5 ಲಕ್ಷಕ್ಕೂ ಹೆಚ್ಚು ಚಿಕಿತ್ಸೆ ಮತ್ತು ಆಸ್ಪತ್ರೆ ವೆಚ್ಚ ತಗಲುತ್ತದೆ ಎಂದು ವೈದ್ಯರು ತಿಳಿಸಿರುತ್ತಾರೆ.

ಅದರಂತೆ ಎಲ್ಲಾ ಸಹೃದಯಿ ನೌಕರರು, ಅಥಿಕಾರಿಗಳು ಮತ್ತು ಸಾರ್ವಜನಿಕರು ಅರ್ಥಿಕ ನೆರವು ನೀಡಿ ಅವರ ಚಿಕಿತ್ಸೆಗೆ ಸಹಾಯ ಮಾಡಲು ವಿನಂತಿಸಿದ್ದಾರೆ. 

ಪಡುಬಿದ್ರಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಅಶೋಕ್ ಸಾಲ್ಯಾನ್, ಸಂತೋಷ್ ಪಡುಬಿದ್ರಿಯವರಿಗೆ ಸನ್ಮಾನ

Thumbnail
Posted On: 14 May 2026, 10:07 AM

ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ    ಪಡುಬಿದ್ರಿ ಕಾಡಿಪಟ್ನ ಮೊಗವೀರ ಮಹಾಸಭಾವು ದೇವಸ್ಥಾನದ ಜೀರ್ಣೋದ್ಧಾರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಗಾಗಿ ಸಂಸ್ಥೆಯ ಅಧ್ಯಕ್ಷರಾದ ಅಶೋಕ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿ   ಸಂತೋಷ್ ಪಡುಬಿದ್ರಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ದೇವಳದ ಜೀಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ.ಕೆ.ಪ್ರಕಾಶ್ ಶೆಟ್ಟಿ ಸಹಿತ ಗಣ್ಯರು ಉಪಸ್ಥಿತರಿದ್ದರು.

 

ಬಿ.ಜೆ.ಎಂ ಮಜೂರು ಮಸ್ಜಿದ್ ಆವರಣದಲ್ಲಿ ರೈಲ್ವೆ ಇಲಾಖೆಯಿಂದ ಜನಜಾಗೃತಿ ಮಾಹಿತಿ

Thumbnail
Posted On: 14 May 2026, 09:57 AM

ಕಾಪು : ಕೊಂಕಣ್ ರೈಲ್ವೆ ಚೀಫ್ ಕಮಿಷನರ್  ಅಭಿಷೇಕ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಉಡುಪಿ ರೈಲ್ವೆ ಸ್ಟೇಷನ್‌ನ ಇನ್ಸ್‌ಪೆಕ್ಟರ್ ಸಂಜಯ್ ವಾತ್ಸ್ ಹಾಗೂ ಅವರ ಸಿಬ್ಬಂದಿಗಳು ಬದ್ರಿಯಾ ಜುಮ್ಮಾ ಮಸ್ಜಿದ್, ಮಜೂರು ಭೇಟಿ ನೀಡಿ ರೈಲುಗಳ ಮೇಲೆ ಕಲ್ಲು ತೂರಾಟ ತಡೆಯುವ ಕುರಿತು ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಬದ್ರಿಯಾ ಜುಮ್ಮಾ ಮಸ್ಜಿದ್ ಅಧ್ಯಕ್ಷರಾದ ಡಾ. ಫಾರೂಕ್ ಚಂದ್ರನಗರ, ಮಸ್ಜಿದ್‌ನ ಸದಸ್ಯರು ಹಾಗೂ ಧಾರ್ಮಿಕ ಕೇಂದ್ರದ ನಿರ್ವಹಣಾ ಸಮಿತಿಯವರು ಉಪಸ್ಥಿತರಿದ್ದರು.
    

ಕಟಪಾಡಿ : ಯೂತ್ ಆಫ್ ಜಿ.ಎಸ್.ಬಿ. ವತಿಯಿಂದ ಬೇಸಿಗೆ ಶಿಬಿರದ ಉದ್ಘಾಟನೆ

Thumbnail
Posted On: 14 May 2026, 09:51 AM

ಕಟಪಾಡಿ : ಯೂತ್ ಆಫ್ ಜಿ.ಎಸ್.ಬಿ. ವತಿಯಿಂದ ಬೇಸಿಗೆ ಶಿಬಿರದ ಉದ್ಘಾಟನೆಯು  ಕಟಪಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. 

ಕಾರ್ಯಕ್ರಮವನ್ನು ಉದ್ಯಮಿ ಸತ್ಯೇಂದ್ರ ಪೈ ಉದ್ಘಾಟಿಸಿದರು.

ಈ ಸಂದರ್ಭ ಟ್ರಸ್ಟಿಗಳಾದ ರಾಜೇಂದ್ರ ಭಟ್, ಗಣೇಶ ಕಿಣಿ, ಪ್ರಧಾನ ಅರ್ಚಕರಾದ ಸುರೇಂದ್ರ ಭಟ್, ಸಂಯೋಜಕರಾದ ನಾಗೇಶ್ ಕಾಮತ್ ಉಪಸ್ಥಿತರಿದ್ದರು.

ಶಿರ್ವ : ವಲದೂರು ವೆಲ್ಫೇರ್ ಎಸೋಸಿಯೇಶನ್ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ವಲದೂರು

Thumbnail
Posted On: 13 May 2026, 06:36 PM

ಶಿರ್ವ : 14 ವರ್ಷಗಳ ಸೇವಾ ಇತಿಹಾಸ ಹೊಂದಿರುವ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಲದೂರು ವೆಲ್ಫೇರ್ ಎಸೋಸಿಯೇಶನ್ (ರಿ) ಇದರ 15ನೇ ವರ್ಷದ ನೂತನ ಅಧ್ಯಕ್ಷರಾಗಿ ಕವಿ, ನಾಟಕಕಾರ, ರಂಗ ನಿರ್ದೇಶಕ,ಯಕ್ಷಕಲಾವಿದ, ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ವಲದೂರು ಆಯ್ಕೆಯಾಗಿದ್ದಾರೆ.

 ಮುಂಬಯಿಯಲ್ಲಿ ತೆರಿಗೆ ಸಲಹೆಗಾರರಾಗಿ ವೃತ್ತಿ ನಿರತರಾಗಿದ್ದು, ಮುಂಬಯಿ ಕನ್ನಡ,ತುಳು ವೆಲ್ಫೇರ್ ಎಸೋಸಿಯೇಶನ ಇದರ ಗೌರವ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. 

ಇತರ ಪದಾಧಿಕಾರಿಗಳು :  ಗೌರವ ಅಧ್ಯಕ್ಷರು:-ಶಾಂತರಾಜ್ ವೈ.ಶೆಟ್ಟಿ, ಕಾರ್ಯದರ್ಶಿ- ಮನೋಜ್ ಎಚ್.ಶೆಟ್ಟಿ, ಜೊತೆ ಕಾರ್ಯದರ್ಶಿ: ಸುಕೇಶ್ ಕಂಪ್ಯಾಕರ್, ಕೋಶಾಧಿಕಾರಿ: ಅಜಿತ್ ಪೂಜಾರಿ ಹಾಗೂ ನಿಕಟಪೂರ್ವ ಪದಾಧಿಕಾರಿಗಳಾದ ಲೀಲಾಧರ ಶೆಟ್ಟಿ ವಲದೂರು, ಪ್ರಸಾದ್ ಶೆಟ್ಟಿ ವಲದೂರು, ಸುಕೇಶ್ ಪೂಜಾರಿ ಗೌರವ ಸಲಹರಗಾರರಾಗಿದ್ದಾರೆ. 

ಎಸೋಸಿಯೇಶನ್‌ಗೆ ಸ್ವಂತ ಕಾರ್ಯಾಲಯ ಸಹಿತ ಸಮುದಾಯ ಭವನದ ನಿರ್ಮಾಣ, ಕೃಷಿ, ಹೈನುಗಾರಿಕೆ,ರಕ್ತದಾನ ಶಿಬಿರ ಸಹಿತ ಮಕ್ಕಳಿಗೆ ರಂಗಕಲೆ, ಸಾಹಿತ್ಯ, ಆರೋಗ್ಯಪೂರ್ಣ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದಲ್ಲದೆ, ಇತರ ಸಂಘಟನೆಗಳು ಮತ್ತು ಜನಪ್ರತಿನಿಧಿಗಳ ಸಹಕಾರದೊಂದಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಈ ಭಾಗದ ನಾಗರಿಕರಿಗೆ ಒದಗಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅಯೋಜನೆ ಮಾಡುವ ಸದುದ್ದೇಶವನ್ನು ಇಟ್ಟುಕೊಂಡಿದ್ದಾರೆ.

ಇತಿಹಾಸ ಪ್ರಸಿದ್ಧ ಪಡುಬಿದ್ರಿ ಚೆಂಡಿಗೆ ಚಾಲನೆ

Thumbnail
Posted On: 13 May 2026, 05:25 PM

ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಮರುದಿನ ನಡೆಯುವ ಇತಿಹಾಸ ಪ್ರಸಿದ್ಧ ಪಡುಬಿದ್ರಿ ಚೆಂಡಿಗೆ ಬುಧವಾರ ಸಂಜೆ ಚಾಲನೆ ನೀಡಲಾಯಿತು.

ದೇವಳದ ಅರ್ಚಕರಾದ ಪದ್ಮನಾಭ ಭಟ್ ಪೂಜೆ ಸಲ್ಲಿಸಿ, ಚೆಂಡಿನ ಸೇವಾಕರ್ತರಾದ ಬೇಬಿ ಪೂಜಾರ್ತಿ ಮನೆಯವರು ಚೆಂಡನ್ನು ನಡ್ಸಾಲು ಗುತ್ತು ಶ್ರೀನಾಥ ಹೆಗ್ಡೆ ಮತ್ತು ಬಗ್ಗೇಡಿ ಗುತ್ತು ಶೇಖರ ಶೆಟ್ಟಿ ಸಮ್ಮುಖ  ಹಸ್ತಾಂತರಿಸಿದರು.

ಪಾದೆಬೆಟ್ಟು, ನಡ್ಸಾಲು ಯುವಕರ ತಂಡ ದೇವಳದ ಮುಂಭಾಗದಲ್ಲಿ ಚೆಂಡು ಆಡುವ ಮೂಲಕ ಪಡುಬಿದ್ರಿ ಚೆಂಡು ಪ್ರತಿವರ್ಷ ಜರಗುತ್ತಿದೆ. 

ಈ ಸಂದರ್ಭ ದೇಗುಲದ ಅನುವಂಶಿಕ ಮೊಕ್ತೇಸರರಾದ ರತ್ನಾಕರ ರಾಜ್ ಅರಸು ಕಿನ್ಯಕ್ಕ ಬಲ್ಲಾಳರು ಮತ್ತು ಪಡುಬಿದ್ರಿ ಪೇಟೆಮನೆ ಭವಾನಿ ಶಂಕರ ಹೆಗ್ಡೆ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಕೆ. ರಾಜಗೋಪಾಲ ಉಪಾಧ್ಯಾಯ, ಪೇಟೆಮನೆ ಪ್ರಕಾಶ್ ಶೆಟ್ಟಿ, ಅನಿಲ್ ಶೆಟ್ಟಿ, ಸೇವಾಕರ್ತರ ಮನೆಯವರಾದ 
ಅನೂಜ್ ಕರ್ಕೇರ, ಧನುಷ್ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.