Updated News From Kaup
ಸೂರ್ಯ ನಮಸ್ಕಾರದಲ್ಲಿ ವಿಶ್ವ ದಾಖಲೆಯತ್ತ ಉಡುಪಿಯ ರೇಣು ಗೋಪಿ
Posted On: 20 Jun 2020, 11:55 AM
ಸೂರ್ಯ ನಮಸ್ಕಾರ ಮಾಡಿ ಗಿನ್ನಿಸ್ ದಾಖಲೆ ಮಾಡಲು ಹೊರಟ ರೇಣು ಗೋಪಿ ಸೂರ್ಯ ನಮಸ್ಕಾರ : ಗಿನ್ನಿಸ್ ದಾಖಲೆಯತ್ತ ರೇಣು ಗೋಪಿ… ಉಡುಪಿ : ಶ್ರೀಮತಿ ರೇಣುಕಾ ಶುಭಪ್ರದ ಪೆರಂಪಳ್ಳಿ ಉಡುಪಿ ಜಿಲ್ಲೆಯ ಇವರು 108 ಬಾರಿ ಸೂರ್ಯನಮಸ್ಕಾರವನ್ನು ಬರೇ 15 ನಿಮಿಷದಲ್ಲಿ ಮುಗಿಸಿ ವಿಶ್ವದಾಖಲೆ ಗಿನ್ನಿಸ್ ರೆಕಾರ್ಡ್ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದರು, ಅದೇ ಸಂದರ್ಭದಲ್ಲಿ ವಕ್ಕರಿಸಿಕೊಂಡ ಕೊರೊನ ಲಾಕ್ಡೌನ್ ನಿಂದಾಗಿ ಇನ್ನು ಕೂಡ ಸಾಧನೆ ಮಾಡಲು ಪ್ರಯತ್ನ ಪಡುತ್ತಿದ್ದಾರೆ ಇವರು ಪೆರಂಪಳ್ಳಿ ದೊಡ್ಡಣ್ಣಗುಡ್ಡೆ ಪರಿಸರದಲ್ಲಿ ಗೋಪಿ ರಾಧಿಕಾ ಎಂದು ಕರೆಸಿಕೊಳ್ಳುತ್ತಿದ್ದ ಇವರಿಗೆ ಬೆನ್ನೆಲುಬಾಗಿ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಅವರ ಪತಿ ಗೋಪಾಲಕೃಷ್ಣ ಹಾಗೂ ಬಂಧುಗಳು ಮತ್ತು ಸ್ನೇಹಿತರು ಇವರೆಲ್ಲರ ಪ್ರೇರಣೆಯಿಂದ ಮತ್ತು ಪ್ರೋತ್ಸಾಹದಿಂದ, ಈ ಒಂದು ಕಾರ್ಯದ ಯಶಸ್ವಿಗೆ ನೀವು ಕೂಡ ಸಹಕರಿಸಬೇಕಾಗಿ ಗೋಪಿ ರಾಧಿಕಾ ಅವರು ವಿನಂತಿಸಿಕೊಂಡಿದ್ದಾರೆ. ಅಂದ ರೇಣು ಗೋಪಿ ಇಷ್ಟೆಲ್ಲಾ ಹರಸಾಹಸ ಮಾಡುತ್ತಿರುವುದು ಯಾವುದೇ ಗುರುಗಳ ಸಹಾಯವಿಲ್ಲದೆ, ನುರಿತ ಯೋಗ ಗುರುಗಳ ಅವಶ್ಯಕತೆ ಇದೆ, ಇದರಿಂದ ಇನ್ನಷ್ಟು ಸಾಧನೆ ಮಾಡಬಹುದು ಅನ್ನುತ್ತಾರೆ ರೇಣು ಗೋಪಿ, "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ" ಎಂಬ ನಾಣ್ಣುಡಿ ಅಕ್ಷರಶಹ ಸತ್ಯ ಎಂಬುದು ಇಲ್ಲಿ ತಿಳಿಯಬಹುದು.
ಕುಂದಾಪುರ : ಮೈ ಸುಟ್ಟುಕೊಂಡ ಎರಡು ವರ್ಷದ ಮಗು ಶ್ರಿಯಾಗೆ ನೆರವಾಗುವಿರಾ?
Posted On: 18 Jun 2020, 09:32 PM
ಮೊನ್ನೆ ದಿನ ಮನೆಯೊಳಗೆ ಆಟ ಆಡುತ್ತಿದ್ದ ಕೋಟ ಯಜ್ಙೇಶ ಆಚಾರ್ರ ಎರಡು ವರುಷದ ಮಗು ಶ್ರೀಯಾ ಆಡುತ್ತಾ ಆಡುತ್ತಾ ದೇವರ ಕೋಣೇಯೊಳಗೆ ಹೋಗಿದೆ.ಅಲ್ಲಿ ಉರಿಯುತ್ತಿದ್ದ ದೀಪ ಮಗುವಿನ ಬಟ್ಟೆಗೆ ತಾಗಿ ಬೆಂಕಿ ಹತ್ತಿಕೊಂಡಿದೆ, ಮಗು ಕಿರುಚಿಕೊಂಡು ಮನೆಯವರು ಓಡೋಡಿ ಬರುವುದರೊಳಗೆ ಮಗುವಿನ ದೇಹ ಭಾಗಶಃ ಸುಟ್ಟು ಹೋಗಿದೆ..ಕೂಡಲೆ ಕುಂದಾಪುರದ ನ್ಯೂ ಮೆಡಿಕಲ್ ಸೆಂಟರ್ಗೆ ಸೇರಿಸಲಾಯಿತಾದರೂ,ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ದಾಖಲಿಸಿ ಎಂದಿದ್ದಾರೆ ವೈದ್ಯರು.. ಅಲ್ಲಿಂದ ಮಣಿಪಾಲಕ್ಕೆ ಕೊಂಡೊಯ್ದು ಮಗು ಈಗ ತೀವೃ ನಿಗಾ ಘಟಕದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದೆ.. ಆ ಎರಡು ವರುಷದ ಹೆಣ್ಣು ಮಗು ಸುಟ್ಟ ಉರಿಯಲ್ಲಿ ಅದೇಷ್ಟು ಕಷ್ಟ ಅನುಭವಿಸುತ್ತಿದೆಯೋ ಏನೊ..? ಒಮ್ಮೊಮ್ಮೆ ದೇವರು ಯಾಕೆ ಅಷ್ಟೊಂದು ಕ್ರೂರಿ ಅನ್ನಿಸುತ್ತದೆ. ಬೆಳಿಗ್ಗೆ ಮಗುವಿನ ಸುಟ್ಟ ಮೈಯ ಪೋಟೊ ಕಂಡವನಿಗೆ ಭಾರೀ ಸಂಕಟವಾಗಿ ಬಿಟ್ಟಿತು.. ಮಕ್ಕಳೇನಾದರೂ ಸಣ್ಣ ಗಾಯ ಮಾಡಿಕೊಂಡರೆ ಹೆತ್ತ ಕರುಳಿಗೆ ಸಹಿಸುವುದೇ ಕಷ್ಟ ವಾಗುತ್ತದೆ, ಅದರಲ್ಲೂ ಎರಡು ವರುಷದ ಹಸುಳೆ ಕಂದಮ್ಮ ಮೈತುಂಬಾ ಸುಟ್ಟುಕೊಂಡು ಪಡಿಪಾಟಲು ಪಡುತ್ತಿರಬೇಕಾದರೆ ಆ ಹೆತ್ತ ಜೀವಗಳಿಗೆ ಹೇಗಾಗಬೇಡ ಹೇಳಿ?? ಈ ಮಗುವಿನ ತಂದೆ ಸ್ವಿಗ್ಗಿ ಕಂಪೆನಿಯಲ್ಲಿ ಸಣ್ಣದೊಂದು ಕೆಲಸ ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದವರಿಗೆ ಇದೀಗ ಏಕಾಏಕಿ ಮಣಿಪಾಲದ ಆಸ್ಪತ್ರೆಯ ಬಿಲ್ಲು ನೋಡಿ ದಿಕ್ಕೇ ತೋಚದಂತಾಗಿದೆ.. ಹಿಂದೊಮ್ಮೆ ನಾವೆಲ್ಲಾ ಇಂತಹುದೇ ಒಂದು ಮಾನವೀಯ ಅಂತಃಕರಣದ ಅಭಿಯಾನದಲ್ಲಿ ಜೊತೆಯಾದವರು.. ಇಂದು ಕೂಡ ಮಗು ಶ್ರೀಯಾಳ ಈ ಕಷ್ಟಕ್ಕೆ ನಾವೆಲ್ಲಾ ಕೈ ಜೋಡಿಸಬೇಕಿದೆ. ನೀವೆಲ್ಲಾ ಜೊತೆಯಾಗಲಿದ್ದಿರಿ ಎನ್ನುವ ತುಂಬು ನಂಬಿಕೆ ನಮ್ಮದು. ಇದು ಶ್ರೀಯಾಳ ತಂದೆ ಯಜ್ಙೇಶ್ ಆಚಾರ್ ಅಕೌಂಟ್ ಡಿಟೈಲ್ಸ್.. ಗೆಳೆಯರೇ ನಮ್ಮೀ ಜಗತ್ತಿನಲ್ಲಿ ಮಾನವೀಯತೆಯ ಒರತೆ ಎಂದೂ ಬತ್ತದೇ ಇರಲಿ ಅಲ್ವಾ? ಮಗುವಿನ ತಂದೆಯ ಅಕೌಂಟ್ ಡಿಟೈಲ್ಸ್. Yajnesh achar Ac.No 4152500101055101 Ifsc- KARB0000415 Branch - kumbhshi Google pay/ phone pay/paytm 7892770492 ಪ್ರವೀಣ್ ಯಕ್ಷಿಮಠ
ಉಡುಪಿ.ಜೂನ್,18 : ಕೊರೊನಾ ನಿಯಂತ್ರಣ ಅಭಿಯಾನ. ಮಾಸ್ಕ್ ದಿನಾಚರಣೆ.
Posted On: 18 Jun 2020, 06:32 PM
ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಇವರಿಂದ, ಕೊರೊನಾ ನಿಯಂತ್ರಣ ಅಭಿಯಾನ, ಮಾಸ್ಕ್ ದಿನಾಚರಣೆ ಕಾರ್ಯಕ್ರಮವು ಮಾರುಥಿ ವಿಥೀಕಾದಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು, ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ ನಿಯಂತ್ರಿಸುವ ಮುನ್ನೆಚ್ಚರಿಕೆಯ ಅಗತ್ಯ ಕ್ರಮಗಳನ್ನು ಹೇಳಿದರು. ಸಾಯಿರಾಂ ಬಟ್ಟೆ ಮಳಿಗೆಯವರು ಉಚಿತವಾಗಿ ಒದಗಿಸಿದ ಹತ್ತಿಬಟ್ಟೆ ಬಳಸಿಕೊಂಡು, ಕ್ಲಾಸಿಕ್ ಟಚ್ ಟೈಲರ್ಸ್ ತಂಡದವರು ತಯಾರಿಸಿದ, 6 ಅಡಿ ಉದ್ದ, 5 ಅಡಿ ಅಗಲದ ಬೃಹತ್ ಗಾತ್ರದ ಮಾಸ್ಕ್ ಪ್ರದರ್ಶನವು ನಡೆಯಿತು. ಬೃಹತ್ ಗಾತ್ರದ ಮಾಸ್ಕ್ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಕೊರೊನಾ ನೊಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಕ್ತಿವೇಲು ಸಂಪನ್ಮೂಲ ಅತಿಥಿಗಳಾಗಿದ್ದರು. ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಾಸ್ತವಿಕ ನುಡಿಗಳಾಡಿದರು. ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ವಂದಿಸಿದರು. ರಾಜೇಶ ಶೆಟ್ಟಿ, ರಾಘವೇಂದ್ರ ಪ್ರಭು,ಕರ್ವಾಲು, ಸಮಿತಿಯ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಜನರ ಸಮಸ್ಯೆಗೆ ಕ್ಯಾರೇ ಅನ್ನದ ಕಾಪು ಮೆಸ್ಕಾಂ - ನಮ್ಮ ಕಾಪು ನ್ಯೂಸ್
Posted On: 18 Jun 2020, 05:37 PM
ಕಾಪು.ಜೂನ್,18 : ತಾಲೂಕಿನ 92ನೇ ಹೇರೂರು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮನಬಂದಂತೆ ವಿದ್ಯುತ್ ಕಡಿತ ಗೊಳಿಸುತ್ತಿದ್ದು ಹೇರೂರು, ಕಳತ್ತೂರು, ಮಜೂರು, ಪಾದೂರು ಭಾಗದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ದಿನದ ಮೂರು ಹೊತ್ತು ಮನಬಂದಂತೆ ವಿದ್ಯುತ್ ಕಡಿತ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆಯೂ ಇದರ ಬಗ್ಗೆ ಕಾಪು ಮೆಸ್ಕಾಂ ಕಛೇರಿಗೆ ದೂರು ನೀಡಿದ್ದರೂ ಸರಿಯಾದ ಉತ್ತರ ನೀಡದೆ ಹೇರೂರು ವ್ಯಾಪ್ತಿಯವರು ಶಿರ್ವದ ಕಚೇರಿಯನ್ನು ಸಂಪರ್ಕಿಸಿಬೇಕು ಎಂದು ಹೇಳಿ ಕರೆ ಕಟ್ ಮಾಡುತ್ತಿದ್ದಾರೆ, ಶಿರ್ವ ಕಚೇರಿಯನ್ನು ಸಂಪರ್ಕಿಸಿದಾಗ ಕಾಪು ಕಚೇರಿಯನ್ನು ಸಂಪರ್ಕಿಸಿ ಅನ್ನುತ್ತಾರೆ ಮತ್ತು ಯಾರಿಂದಲೂ ಯಾವುದೇ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ , ಕಳೆದ ಮೂರ್ನಾಲ್ಕು ವರ್ಷಗಳಿಂದ ಈ ಸಮಸ್ಯೆ ಉದ್ಭವವಾಗಿದ್ದು, ಮಳೆಗಾಲ ಆರಂಭವಾಗುವ ಮುನ್ನ ಎಚ್ಚೆತ್ತುಕೊಳ್ಳದೆ, ಮಳೆಗಾಲ ಆರಂಭವಾದ ನಂತರ ಟ್ರಾನ್ಸ್ಫರ್ಮರ್ ಮೇಲೆ ಹೋಗಿರುವ ಮರ, ಗಿಡಗಳ ಗೆಲ್ಲುಗಳನ್ನು ಕಡಿಯಲು ವಿದ್ಯುತ್ ಕಡಿತ ಮಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಪಟ್ಟಂತೆ ಮಜೂರು, ಹೇರೂರು, ಕಲ್ಲುಗುಡ್ಡೆ, ಕುಂಜ, ಪಾದೂರು, ಶಾಂತಿಗುಡ್ಡೆ ಮತ್ತು ಕುರಾಲು ಪ್ರದೇಶದ ಗ್ರಾಮಸ್ಥರು ಇದೆ ತಿಂಗಳು ಎಂಟು ತಾರೀಕಿಗೆ ಕಾಪು ಮೆಸ್ಕಾಂ ಗೆ ವಿದ್ಯುತ್ ಕಡಿತ ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ ಸಮಸ್ಯೆ ಬಗೆಹರಿಯದೆ ಇರುವುದರಿಂದ ಮಾಧ್ಯಮದವರೊಂದಿಗೆ ಮಾತನಾಡಿದ ಸಾರ್ವಜನಿಕರು, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು ನಮಗೆ ಬೇಡವೇ ಬೇಡ.. ಶೀಘ್ರವೇ ವರ್ಗಾವಣೆ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಮೇಲಾಧಿಕಾರಿಗಳು ದಯವಿಟ್ಟು ಇದರತ್ತ ಗಮನ ಹರಿಸಬೇಕು ಮತ್ತು ಸಮಸ್ಯೆಗೆ ಶೀಘ್ರವೇ ಸ್ಪಂದನೆ ನೀಡಬೇಕೆಂದು ಆಗ್ರಹಿಸಿದ್ದಾರೆ..
ನಿರೂಪಣಾ ಲೋಕದ ಕೊಲ್ಮಿಂಚು ಸಂತೋಷ್ ವಕ್ವಾಡಿ ವೈದ್ಯಕೀಯ ಚಿಕಿತ್ಸೆಗೆ ನೆರವಾಗುವಿರಾ?
Posted On: 17 Jun 2020, 10:10 PM
ಕುಂದಾಪುರ:(ನಮ್ಮ ಕಾಪು ನ್ಯೂಸ್ 17/06/20) ಕುಂದಾಪುರ ತಾಲೂಕಿನ ವಕ್ವಾಡಿಯ ಸಂತೋಷ್ ಕುಲಾಲ್ ಇವರ ಬದುಕು ಇಂದು ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿದೆ.. ಕಡುಬಡತನದೊಂದಿಗೆ ಬದುಕು ಕಟ್ಟಿಕೊಂಡ ಸಂತೋಷ್ ಕುಲಾಲ್ ವೈದ್ಯಕೀಯ ಚಿಕಿತ್ಸೆಗೆ ಇಂದು ತಮ್ಮಲ್ಲಿ ಸಹಾಯಕ್ಕಾಗಿ ಅಂಗಲಾಚಿದೆ.. ಸಭಾ ವೇದಿಕೆಯ ನಿರೂಪಣೆಗೆ ಮೆರುಗು ನೀಡುತ್ತ ಸದಾ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದ ಇವರ ಕುಟುಂಬದ ನೋವಿನಲ್ಲಿ ಅವರ ಕಣ್ಣಿರಿಗೆ ಭಾಜನರಾಗೋಣ.. ನಿಮ್ಮ ದುಡಿಮೆಯ ಕಿಂಚಿತ್ ಸಹಾಯ ಇವರಿಗೆ ಇರಲಿ... ಬ್ಯಾಂಕ್ ಖಾತೆ ಮಾಹಿತಿ ಈ ರೀತಿ ಇದೆ. ಸಿಂಡಿಕೇಟ್ ಬ್ಯಾಂಕ್ ಕೋಟೇಶ್ವರ ಶಾಖೆ ಉಡುಪಿ ಜಿಲ್ಲೆ. ಖಾತೆ ಸಂಖ್ಯೆ:014922000059515 ಐಎಪ್ಎಸ್ಸಿ ಕೋಡ್:SYNBOOOOO149 BHIM UPI:88617676667 Contact : +9194817 48701 +919164980701
ಅಗಸರು, ಕ್ಷೌರಿಕರು ಪರಿಹಾರಕ್ಕೆ ಅರ್ಜಿ ಸಲ್ಲಿಸಿ- ಜಿಲ್ಲಾಧಿಕಾರಿ ಜಿ.ಜಗದೀಶ್
Posted On: 17 Jun 2020, 04:53 PM
ಉಡುಪಿ ಜೂನ್ 16 (ಕರ್ನಾಟಕ ವಾರ್ತೆ): ಕೋವಿಡ್ 19 ಕಾರಣ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನಲೆಯಲ್ಲಿ , ರಾಜ್ಯ ಸರ್ಕಾರದಿಂದ , ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದು ಬಾರಿಯ ಪರಿಹಾರವಾಗಿ ರೂ.5000 ನೆರವನ್ನು ಪಡೆಯುವ ಕುರಿತಂತೆ, ಜೂನ್ 30 ರೊಳಗೆ ಜಿಲ್ಲೆಯಲ್ಲಿನ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಅಗಸ ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವವರು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವವರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಅರ್ಜಿದಾರರು 18 ರಿಂದ 65 ವರ್ಷಗಳ ವಯೋಮಿತಿಯಲ್ಲಿದ್ದು, ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಪಡೆಯಲು ಅವಕಾಶವಿದ್ದು, ಬಿ.ಪಿ.ಎಲ್ ಕಾರ್ಡ್ ಹೊಂದಿದವರಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರುವುದು ಕಡ್ಡಾಯವಾಗಿದೆ ಎಂದು ಹೇಳಿದರು. ಅರ್ಜಿ ಸಲ್ಲಿಸುವಾಗ , ಅಗಸ/ಕ್ಷೌರಿಕ ವೃತಿ ನಿರ್ವಹಿಸುತ್ತಿರುವ ಕುರಿತು ನಿಗಧಿತ ನಮೂನೆಯಲ್ಲಿ ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪತ್ರ, ನಿಗಧಿತ ನಮೂನೆಯಲ್ಲಿ ಸ್ವಯಂ ಘೋಷಣೆ ಪತ್ರ ಸಲ್ಲಿಸಬೇಕು, ಬಿ.ಪಿ.ಎಲ್. ಕಾರ್ಡ್ , ಆಧಾರ್ ಕಾರ್ಡ್, ಜನ್ಮ ದಿನಾಂಕ ದಾಖಲೆ, ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ ಸಲ್ಲಿಸಬೇಕು, ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳು ಸಮರ್ಪಕವಾಗಿದ್ದಲ್ಲಿ , ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಪರಿಹಾರವನ್ನು ವರ್ಗಾಯಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಉದ್ಯೋಗ ದೃಢೀಕರಣ ಪತ್ರ ಪಡೆಯಲು ನಗರ ಪ್ರದೇಶದಲ್ಲಿ ನಗರಸಭೆ/ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿಗಳು /ಕಂದಾಯ ನಿರೀಕ್ಷಕರು, ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಗಳು, ಉಪ ತಹಸೀಲ್ದಾರ್ ಗಳು, ಕಂದಾಯ ನಿರೀಕ್ಷಕರು , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು/ಕಾರ್ಯದರ್ಶಿಗಳು ಮತ್ತು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿಗಳು/ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಪ್ರಭಾರ ಜಿಲ್ಲಾ ಕಾರ್ಮಿಕ ಅಧಿಕಾರಿ ಅಮರೇಂದ್ರ , ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಕ್ಷೌರಿಕ ಮತ್ತು ಅಗಸ ಸಮುದಾಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಳಪು : ಸಂಕ್ರಮಣ ಪೂಜೆಯ ಸಂದರ್ಭದಲ್ಲಿ ಕಂಡುಬಂತು ನೀರಿನಲ್ಲಿ ಶಿವನ ಆಕೃತಿ
Posted On: 16 Jun 2020, 08:39 AM
ಬೆಳಪು-ಪಣಿಯೂರು ಗ್ರಾಮದ ಮಲಂಗೋಲಿ ಪರಿಸರದಲ್ಲಿ ಇರುವ ಉಮಾಮಹೇಶ್ವರ ದೇವಸ್ಥಾನದ ಕೆರೆಯಲ್ಲಿ ತಾ/14.06.2020 ರ ಮಿಥುನ ಸಂಕ್ರಮಣದ ಪೂಜೆಯ ಸಂದರ್ಭದಲ್ಲಿ ಶಿವನ ಆಕೃತಿಯೊಂದು ಕಂಡುಬಂದಿದೆ. ಶ್ರೀ ಕ್ಷೇತ್ರವು ಬೆಳಪು-ಪಣಿಯೂರು ಗ್ರಾಮಕ್ಕೆ ಸಂಬಂಧಿಸಿದ್ದು, ಅನಾದಿ ಕಾಲದಲ್ಲಿ ಇಲ್ಲಿ ಗ್ರಾಮಸ್ಥರು ಸೇರಿ ಪೂಜಾವಿಧಿಗಳು ನಡೆಯುತ್ತಿದ್ದು ಕ್ಷೇತ್ರದಲ್ಲಿ ಶ್ರೀ ಉಮಾಮಹೇಶ್ವರ ದೇವರು, ತುಳುನಾಡಿನ ಮೂಲ ದೇವರಾದ ಬೆರ್ಮರು, ಹಾಗೂ ಲೆಕ್ಕೆಸಿರಿ ನಂದಿಗೋಣ ಸೇರಿ ಪಂಚ ದೈವಗಳ ಸಾನ್ನಿಧ್ಯವಿದೆ. ಹಲವಾರು ವರ್ಷಗಳಿಂದ ಅಜೀರ್ಣಾವಸ್ಥೆಯಲ್ಲಿ ಇರುವಂತಹ ಈ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಅನೇಕ ವರ್ಷಗಳಿಂದ ಗ್ರಾಮಸ್ಥರು ಪ್ರಯತ್ನ ಪಡುತ್ತಿದ್ದರು, ಇನ್ನೂ ಕಾಲ ಕೂಡಿ ಬರಲಿಲ್ಲ ಎಂದು ಬೇಸರದಲ್ಲಿರುವ ಗ್ರಾಮಸ್ಥರು. ನೀರಿನಲ್ಲಿ ಕಾಣಿಸಿರುವ ಆಕೃತಿ ದೇವರ ಸನ್ನೆಯಂತೆ ಎಂದು ತಿಳಿದಿದ್ದಾರೆ. ಬೆಳಪು-ಪಣಿಯೂರು ಗ್ರಾಮದ ಪಂಚಾಯಿತಿ ಅಧ್ಯಕ್ಷರು ಶ್ರೀ ಡಾ. ದೇವಿಪ್ರಸಾದ್ ಶೆಟ್ಟಿಯವರು ಹಾಗೂ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಸಮಗ್ರವಾಗಿ ಜೀರ್ಣೋದ್ಧಾರದ ಬಗ್ಗೆ ಚಿಂತನೆ ನಡೆದಿದೆ.
ವಿಶೇಷ ಸೂಚನೆ : ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ, ಕಾಪು.
Posted On: 15 Jun 2020, 11:52 PM
ಪ್ರಿಯ ಭಕ್ತಾಭಿಮಾನಿಗಳೇ, ನಾಳೆಯಿಂದ, ಕಾಪು ಶ್ರೀ ಹಳೇ ಮಾರಿಯಮ್ಮ ದೇವಳದಲ್ಲಿ ಶ್ರೀದೇವಿಯ ದರ್ಶನಕ್ಕೆ ಸರ್ವರಿಗೂ ಅವಕಾಶವನ್ನು ಕಲ್ಪಿಸಲಾಗಿದೆ. ಶ್ರೀ ದೇವಳದಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಹಾಗೂ ಸರಕಾರದ ಮಾರ್ಗದರ್ಶನದಂತೆ ವಿಧಿಸಲಾದ ಈ ಕೆಳಗಿನ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಭಕ್ತಾಭಿಮಾನಿಗಳಲ್ಲಿ ವಿನಂತಿಸುತ್ತೇವೆ. ಆಡಳಿತ ಮಂಡಳಿ - ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ, ಕಾಪು.
ಇನ್ನಂಜೆ - ಕಂಬೆರ್ಲ ಪೆರಿಯಕಲ ಉಂಡಾರು ಪುನರ್ ಪ್ರತಿಷ್ಠೆ ಸಕಲ ಕಾರ್ಯಗಳು ಸಂಪನ್ನ
Posted On: 15 Jun 2020, 12:07 AM
ನಮ್ಮ ಹಿರಿಯರು ಅನಾದಿಕಾಲದಿಂದ ಆರಾಧಿಸಿಕೊಂಡು ಬಂದಿರುವ ಉಂಡಾರುವಿನ ಕಾರ್ನಿಕದ ಪರಮ ಪವಿತ್ರ ಸ್ಥಳ ಕಂಬೆರ್ಲ ಪೆರಿಯ ಕಲ ಭಗವಾನ್ ಶ್ರಿ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆಯು ಊರ ಪರವೂರ ಭಕ್ತಾದಿಗಳ ಸಹಕಾರದಿಂದ ಸರಳ ರೀತಿಯಲ್ಲಿ ಕಳೆದ ಬುಧವಾರ ಜರಗಿದ್ದು ಇದರ ಮುಂದುವರಿದ ಭಾಗವಾಗಿ ಪೆರಿಯಕಲದಲ್ಲಿ ನೆಲೆಯಾಗಿ ಭಕ್ತಾದಿಗಳಿಗೆ ಸದಾ ಅಭಯವನ್ನು ನೀಡುತ್ತಿರುವ ಸತ್ಯಗಳಿಗೆ ಪುನರ್ ಪ್ರತಿಷ್ಠೆಯ ಸಲುವಾಗಿ ಸಂದಬೇಕಾಗಿರುವ 3 ಬೋಗ ಸೇವೆಯಲ್ಲಿ 2 ಬೋಗ ಸೇವೆ (ಪಂಚಕಜ್ಜಾಯ ಸೇವೆ) ಯನ್ನು ಗ್ರಾಮದ ಭಕ್ತಾದಿಗಳು ಹತ್ತು ಸಮಸ್ತರೊಂದಿಗೆ ಸಲ್ಲಿಸಿದ್ದು 3ನೆಯ ಬೋಗ ಗಡಿಹಾರ ಸೇವೆ (ರಕ್ತಾಹಾರ ಸೇವೆ)ಯನ್ನು ಇಂದು ಪೆರಿಯಕಲದ ಸತ್ಯಗಳ ದರ್ಶನದೊಂದಿಗೆ ಗ್ರಾಮದ ಭಕ್ತಾದಿಗಳ ಸಹಕಾರದಿಂದ ಸಮರ್ಪಿಸಲಾಯಿತು. ಈ ಎಲ್ಲಾ ಕಾರ್ಯಕ್ರಮಗಳನ್ನು ಅತ್ಯಂತ ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಪುಣ್ಯ ಕಾರ್ಯಕ್ಕೆ ಕೈ ಜೋಡಿಸಿ ತನು ಮನ ಧನದ ಸಹಕಾರ ನೀಡಿದ ಎಲ್ಲರಿಗೂ ಆಡಳಿತ ಮಂಡಳಿಯು ಧನ್ಯವಾದಗಳನ್ನು ಸಲ್ಲಿಸುತ್ತದೆ.
ಕಾಪು : ಬ್ರಹ್ಮಬೈದರ್ಕಳ ಗರಡಿಯಲ್ಲಿ ಸೇವೆ ಮಾಡುವವರಿಗೆ ಸಹಾಯಧನ
Posted On: 14 Jun 2020, 11:37 PM
ಕೊರೋನ ಸಂಕಷ್ಟದ ಸಮಯದಲ್ಲಿ ಬಿರುವೆರ್ ಕಾಪು ಸೇವಾ ಟ್ರಸ್ಟ್ ಕೈಗೊಂಡ ಅತಿ ಪ್ರಾಮುಖ್ಯತೆಯ *ಬ್ರಹ್ಮ ಶ್ರೀ ನಾರಾಯಣ ಗುರು ಸಾಂತ್ವನ* ಎಂಬ ಯೋಜನೆಯು ಕೊನೆಯ ಹಂತದಲ್ಲಿದೆ. ತುಂಬಾ ಜನ ನಿಸ್ವಾರ್ಥ ಸೇವಾ ದಾನಿಗಳು ತಮ್ಮ ಕೈಯಲಾದ ಸಹಾಯವನ್ನು ಈ ಯೋಜನೆಗೆ ಮಾಡಿದ್ದಾರೆ. ಅದರಿಂದ ಟ್ರಸ್ಟಿನ ಮುಖಾಂತರ ಅನೇಕ ಕಷ್ಟಕ್ಕೊಳಗಾದ ಸಂಸಾರಗಳಿಗೆ ಸಹಾಯ ಮಾಡಿದ್ದಾರೆ, ಕೊನೆಯ ಹಂತದ ನಿಸ್ವಾರ್ಥ ಸೇವೆಯಾಗಿ ಬಿರುವೆರ್ ಕಾಪು ಸೇವಾ ಟ್ರಸ್ಟಿನ ಹೆಮ್ಮೆಯ ಸದಸ್ಯರಾದ ಶ್ರೀ ಸುರೇಶ್ ಪೂಜಾರಿ ಕಲ್ಲುಗುಡ್ಡೆ ಇವರ ಹೇಳಿಕೆಯ ಪ್ರಕಾರ ಬಿಲ್ಲವರ ಕುಲದೇವರ ಆರಾಧನಾಲಯವಾದ ಗರಡಿಗಳಲ್ಲಿ ಪೂ ಪೂಜೆ ಹಾಗೂ ದರ್ಶನ ಸೇವೆ ಮಾಡುವ ಆಯ್ದ ಬಡ ಸಂಸಾರಕ್ಕೆ, ಈ ಕ್ಲಿಷ್ಟಕರ ಸಮಯದಲ್ಲಿ ಟ್ರಸ್ಟ್ ನಿಂದಾದ ಸಣ್ಣ ಮಟ್ಟದ ಸಹಾಯ ಮಾಡುವ ನಿಟ್ಟಿನಲ್ಲಿ ಇಂದು ದಿನಾಂಕ 14.06.2020 ರ ಬೆಳಿಗ್ಗೆ ಆಯ್ದ 8 ಗರೋಡಿಗಳ ಸೇವಾದಾರರಿಗೆ ಸಹಾಯಧನವನ್ನು ವಿತರಿಸಲಾಯಿತು. ಈ ಕೆಲಸಕ್ಕೆ ಸಹಕರಿಸಿದ ರಾಕೇಶ್ ಕುಂಜೂರು, ವಿಜಯ್ ಧೀರಜ್ ಬಂಟಕಲ್ಲ್ ಮತ್ತು ಟ್ರಸ್ಟಿನ ಸದಸ್ಯರಾದ ಕಾರ್ತಿಕ್ ಅಮೀನ್ ಕಲ್ಲುಗುಡ್ಡೆ, ವಿಕ್ಕಿ ಪೂಜಾರಿ ಮಡುಂಬು, ಸುಧಾಕರ್ ಸಾಲ್ಯಾನ್ ಕಾಪು ಪಡು, ಅನಿಲ್ ಅಮೀನ್ ಕಾಪು ಪಡು, ಮನೋಹರ್ ಕಲ್ಲುಗುಡ್ಡೆ ಉಪಸ್ಥಿತರಿದ್ದರು, ಟ್ರಸ್ಟಿನ ಒಳ್ಳೆಯ ಕಾರ್ಯಕ್ರಮ ಆಯೋಜಿಸಿ ಅದನ್ನು ಒಳ್ಳೆಯ ರೀತಿಯಲ್ಲಿ ಮಾಡಿದ ಎಲ್ಲರಿಗೂ ಟ್ರಸ್ಟಿನ ಮುಖ್ಯಸ್ಥ ಬಾಲಕೃಷ್ಣ ಆರ್ ಕೋಟ್ಯಾನ್ ಕಾಪು (ಮಸ್ಕತ್) ಧನ್ಯವಾದಗಳನ್ನು ಅರ್ಪಿಸಿದರು.
