Updated News From Kaup
ಬಡ ಕುಟುಂಬಕ್ಕೆ ಅಸರೆಯಾದ ಕಾರ್ಕಳದ ಕಾಂತಾವರ ಗ್ರಾಮದ ತಂಡ..
Posted On: 01 Jun 2020, 08:04 PM
ಕಳೆದ ಒಂದು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಗೆ ಗ್ರಾಸವಾಗಿರುವ ಕಾಂತಾವರ ಗ್ರಾಮ ದ ಬಡಕುಟುಂಬವೊಂದರ ಮುರುಕಲು ಮನೆಯ ರಿಪೇರಿ ಬಗ್ಗೆ ಕೆಲವು ಚರ್ಚೆಗಳು ನಡೆದಿತ್ತು. ಈ ಸಮಸ್ಯೆಯನ್ನು ಕಂಡ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯ ಎಸ್ ಕೋಟ್ಯಾನ್ ಹಾಗೂ ಗೆಳೆಯರ ಬಳಗ ಕಾಂತಾವರ ಇವರ ತಂಡ ಸೇರಿ,ಲಾಕ್ ಡೌನ್ ನಡುವೆಯೂ ಕಳೆದ ಎರಡು ವಾರದ ಸತತ ಪ್ರಯತ್ನದಿಂದ ಮನೆ ನಿರ್ಮಾಣ ಕಾರ್ಯ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಯತ್ನ ವೊಂದಿದ್ದರೆ ಯಾವುದೇ ಕೆಲಸ ಕಠಿಣ ವಲ್ಲ ಎಂದು ಈ ತಂಡ ತೋರಿಸಿಕೊಟ್ಟಿದೆ..ಇದು ಬೇರೆ ಸಂಘಟನೆಗಳಿಗೆ ಮಾದರಿಯಾಗಲಿ..ಇನ್ನು ಮುಂದೆಯೂ ನಿಮ್ಮಿಂದ ಇಂತಹ ಸಮಾಜ ಸೇವೆ ನಡೆಯಲಿ..ಕಾಂತಾವರದ ಕಾಂತೇಶ್ವರ ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರಲಿ....ವೈಯಕ್ತಿಕ ಟೀಕೆ ಗಳನ್ನು ನಿಮ್ಮ ಸಾಧನೆ ಯಿಂದ ಉತ್ತರಿಸಿ... ಪ್ರತ್ಯಕ್ಷವಾಗಿ ಪರೋಕ್ಷವಾಗಿ ಬೆಂಬಲಿಸಿದ ಸಹಕರಿಸಿದ ಎಲ್ಲಾ ಸಹೃದಯರಿಗೆ ಧನ್ಯವಾದಗಳು...
ಪಡುಬಿದ್ರಿ ಬಿಲ್ಲವ ಸಂಘ ವ್ಯಾಪ್ತಿಯ ಕುಟುಂಬಗಳಿಗೆ ಆಹಾರ ಸಾಮಾಗ್ರಿ ಕಿಟ್ ವಿರತಣೆ
Posted On: 01 Jun 2020, 07:28 PM
ಲಾಕ್ಡೌನ್ ಸಡಿಲಿಕೆಯಾದರು ಜನರಿಗೆ ತೊಂದರೆಯಾಗಬಾರದೆಂಬ ನಿಟ್ಟಿನಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇದರ ವ್ಯಾಪ್ತಿಗೆ ಒಳಪಡುವ ಸಮಾಜ ಬಾಂಧವರಿಗಾಗಿ ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಗೌರವಾಧ್ಯಕ್ಷರಾದ ವಾಸು ಡಿ. ಸಾಲ್ಯಾನ್, ಕಾರ್ಯದರ್ಶಿ ಲಕ್ಷ್ಮಣ್ ಬಿ. ಅಮೀನ್, ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾದ ಶೀನ ಪೂಜಾರಿ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಸಾದ್ ವೈ. ಕೋಟ್ಯಾನ್,ವೀರೇಂದ್ರ ಎನ್., ಲಕ್ಷ್ಮಣ ಡಿ. ಪೂಜಾರಿ, ಪ್ರಶಾಂತ್ ಕುಮಾರ್, ಶಂಕರ್ ಪಿ. ಸುವರ್ಣ, ಪೂರ್ಣಿಮ ಕೆ., ಮಹಿಳಾ ವಿಭಾಗದ ಅಧ್ಯಕ್ಷೆ ಚಿತ್ರಾಕ್ಷಿ ಕೆ.ಕೋಟ್ಯಾನ್ ಸದಸ್ಯರಾದ ಸುಚರಿತ ಎಲ್. ಅಮೀನ್, ಜಯಂತಿ ಜಿ.,ಸಾಧನ ಎಚ್. ಮುಂತಾದವರು ಉಪಸ್ಥಿತರಿದ್ದರು.
ಉಡುಪಿ.ಜೂನ್, 1: ಕೋವಿಡ್ ಆಸ್ಪತ್ರೆ ಹಾಸಿಗೆ ಸಾಮರ್ಥ್ಯ ವಿಸ್ತರಣೆ : ಉಸ್ತುವಾರಿ ಕಾರ್ಯದರ್ಶಿ
Posted On: 01 Jun 2020, 05:36 PM
ಕೋವಿಡ್ ಆಸ್ಪತ್ರೆ ಹಾಸಿಗೆ ಸಾಮರ್ಥ್ಯ ವಿಸ್ತರಣೆ: ಉಸ್ತುವಾರಿ ಕಾರ್ಯದರ್ಶಿ ಉಡುಪಿ ಜೂನ್ 1 (ಕರ್ನಾಟಕ ವಾರ್ತೆ): ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಹಾಗೂ ಸಂಬAಧಿತ ಲಕ್ಷಣಗಳಿರುವ ರೋಗಿಗಳ ಚಿಕಿತ್ಸೆಗಾಗಿ ಇನ್ನೂ ಹೆಚ್ಚುವರಿಯಾಗಿ ಆಸ್ಪತ್ರೆಗಳ ಹಾಸಿಗೆಗಳನ್ನು ವಿಸ್ತರಿಸಲಾಗುವುದು. ಇದಕ್ಕಾಗಿ ಅಗತ್ಯ ವೈದ್ಯರು, ಸಿಬ್ಬಂದಿಗಳ ನೇಮಕಾತಿಗೆ ಅನುಮೋದನೆ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಕೈಗಾರಿಕೆ, , ವಾರ್ತಾ ಇಲಾಖೆಯ ಪ್ರದಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ರಾಜ್ಯ ಸರಕಾರ ಆಸ್ಪತ್ರೆಗಳಲ್ಲಿ 2500 ಹೆಚ್ಚುವರಿ ಹಾಸಿಗೆಗಳನ್ನು ಸೃಷ್ಟಿಸಲು ಸೂಚಿಸಿದೆ. ಈ ನಿಟ್ಟಿನಲ್ಲಿ ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಜಿಲ್ಲಾಧಿಕಾರಿಗಳ ಪ್ರಸ್ತಾವನೆಗೆ ಸರಕಾರದ ಅನುಮತಿ ನೀಡಲಾಗುವುದು ಎಂದು ಅವರು ತಿಳಿಸಿದರು. ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಲಾಗುವ ಉಪಕರಣಗಳ ಕಾರ್ಯಕ್ಷಮತೆ ಹಾಗೂ ಸಿಬ್ಬಂದಿಗಳ ತರಭೇತಿ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ವೆಂಟಿಲೇಟರ್ ಸೌಲಭ್ಯ ಒದಗಿಸುವುದರೊಂದಿಗೆ, ಹೆಚ್ಚುವರಿಯಾಗಿ ಖಾಸಗೀ ಆಸ್ಪತ್ರೆಗಳನ್ನು ಇದಕ್ಕಾಗಿ ಗುರುತಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು. ಹೊರರಾಜ್ಯದಿಂದ ಬಂದವರ ಮಾಹಿತಿ ಆಯಾ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತ್ಗಳಲ್ಲಿ ಇರಬೇಕು. ಅವರ ಕ್ವಾರೆಂಟೈನ್ ಅವಧಿಯ ಮೇಲೆ ನಿಗಾ ಇಡಬೇಕು ಎಂದು ಅವರು ತಿಳಿಸಿದರು. ಉಡುಪಿ ಜಿಲ್ಲೆಯ ಕೋವಿಡ್ ಪ್ರಯೋಗಾಲಯದ ಮೂಲಸೌಕರ್ಯ ಕಾಮಗಾರಿ ಅಂತಿಮ ಹಂತದಲ್ಲಿದ್ದು, 2-3 ದಿನಗಳೊಳಗೆ ಪೂರ್ಣಗೊಳ್ಳಲಿದೆ. ಬಳಿಕ ಪ್ರಯೋಗಾಲಯದಲ್ಲಿ ಅಗತ್ಯ ಉಪಕರಣಗಳ ಅಳವಡಿಕೆಯಾಗಿ, ಪ್ರಯೋಗಾಲಯದಲ್ಲಿ ಗಂಟಲ ದ್ರವ ಪರೀಕ್ಷೆ ಉಡುಪಿಯಲ್ಲಿಯೇ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಉದ್ಯಮಿಗಳಿಗೆ ನೆರವು: ಬ್ಯಾಂಕರ್ಗಳ ಜತೆ ಸಭೆ ಕೋವಿಡ್ ಹಿನ್ನೆಲೆಯಲ್ಲಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಉದ್ಯಮಿಗಳಿಗೆ ಕೇಂದ್ರ ಸರಕಾರ ಘೋಷಿಸಿರುವ ಹಣಕಾಸು ನೆರವು ಯೋಜನೆ ಜಾರಿಗೆ ಜಿಲ್ಲೆಯಲ್ಲಿ ಕೆಲವು ಖಾಸಗೀ ಬ್ಯಾಂಕುಗಳು ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಜಿಲ್ಲೆಯ ಬ್ಯಾಂಕುಗಳ ಜತೆ ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಈ ಬಗ್ಗೆ ಪ್ರತೀ ವಾರ ಪರಿಶೀಲನೆ ನಡೆಸಲು ಅವರು ತಿಳಿಸಿದರು. ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಭಾಗಶ: ಹಾನಿಗೊಳಗಾದ ಮನೆಗಳನ್ನು ಪುನರ್ ನಿರ್ಮಾಣ ಮಾಡಲು ಈಗಾಗಲೇ ಅನುದಾನ ಬಿಡುಗಡೆ ವಿಳಂಭದಿAದ ಕೆಲವೆಡೆ ಮನೆ ನಿರ್ಮಾಣ ಇನ್ನೂ ಪೂರ್ಣಗೊಳ್ಳದಿರುವ ಮನೆಗಳಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಲು ಅವರು ಸೂಚಿಸಿದರು. ಜಿಲ್ಲೆಯಲ್ಲಿ ಕೃಷಿ ಭಿತ್ತೆನೆ ಬೀಜಕ್ಕೆ ಹೆಚ್ಚು ಬೇಡಿಕೆ ಬರುತ್ತಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಚ್ಚು ಜನಸಂದಣಿ ಕಂಡುಬAದಿದೆ. ಜಿಲ್ಲೆಯ ಕೆಲವೆಡೆ ಈಗಾಗಲೇ ಭಿತ್ತೆನೆ ಚಟುವಟಿಕೆ ಆರಂಭಗೊAಡಿದೆ ಎಂದು ಕೃಷಿ ಜಂಟೀ ನಿರ್ದೇಶಕರು ಸಭೆಗೆ ತಿಳಿಸಿದರು. ರಾಜ್ಯ ಸರಕಾರವು ಹೂ ಬೆಳೆಗಾರರಿಗೆ ಪರಿಹಾರ ನೀಡುವ ಯೋಜನೆಯಲ್ಲಿ ಜಿಲ್ಲೆಯಲ್ಲಿ 4333 ರೈತರು ಅರ್ಜಿ ಸಲ್ಲಿಸಿದ್ದಾರೆ. ಗರಿಷ್ಠ 2.5 ಎಕರೆಗೆ ರೂ. 25000 ಪರಿಹಾರ ದೊರಕಲಿದೆ. ಇದರೊಂದಿಗೆ ತರಕಾರಿ, ಹಣ್ಣು ಬೆಳೆಗಾರರಿಗೆ ಪರಿಹಾರ ನೀಡಲು ಹೊಸದಾಗಿ ಮಾರ್ಗದರ್ಶಿ ಬಂದಿದ್ದು, ಜಿಲ್ಲೆಯಲ್ಲಿ ಕಲ್ಲಂಗಡಿ ಹಾಗೂ ಅನಾನಸು ಬೆಳೆಗಾರರಿಗೆ ಪರಿಹಾರ ದೊರೆಯಲಿದೆ ಎಂದು ತೋಟಗಾರಿಕಾ ಉಪನಿರ್ದೇಶಕರು ಸಭೆಗೆ ತಿಳಿಸಿದರು. ಅಕ್ರಮ ಮರಳುಗಾರಿಕೆ: ಕೇಸು ದಾಖಲು ಜಿಲ್ಲೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಿರುವ ಪ್ರಕರಣಗಳಲ್ಲಿ ಸಂಬAಧಪಟ್ಟವರ ವಿರುದ್ಧ ಕೇಸು ದಾಖಲಿಸಲು ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದರು. ಪಟ್ಟಾ ಜಮೀನು ಸೇರಿದಂತೆ ಲಾಕ್ಡೌನ್ ಅವಧಿಯಲ್ಲಿ ಅಕ್ರಮ ಮರಳುಗಾರಿಕೆ ನಡೆದಿರುವ ಬಗ್ಗೆ ಉಪವಿಭಾಗಾಧಿಕಾರಿಗಳು, ಪ್ರತೀ ಜಮೀನಿಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಲು ಅವರು ನಿರ್ದೇಶಿಸಿದರು. ಜಿಲ್ಲಾಧಿಕಾರಿಗಳು ಈ ಬಗ್ಗೆ ವಿವರ ನೀಡಿ, ಈಗಾಗಲೇ ಇಂತಹ ಪ್ರಕರಣಗಳ ವಿರುದ್ಧ ಕೇಸು ದಾಖಲಿಸಲಾಗಿದೆ. 5 ವಾಹನಗಳನ್ನು ಜಫ್ತಿ ಮಾಡಲಾಗಿದೆ. ಅಲ್ಲದೇ, ಸಂಬAಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ವಿವಿಧ ಇಲಾಖಾಧಿಖಾರಿಗಳು ಉಪಸ್ಥಿತರಿದ್ದರು.
ಉಡುಪಿ. ಜೂನ್, 1 : ಸಂಚಾರಿ ನಿಯಮಗಳನ್ನು ಪಾಲಿಸದಿದ್ದಲ್ಲಿ ಕಠಿಣ ಕ್ರಮ
Posted On: 01 Jun 2020, 05:29 PM
ಸಂಚಾರಿ ನಿಯಮಗಳನ್ನು ಪಾಲಿಸದಿದ್ದಲ್ಲಿ ಕಠಿಣ ಕ್ರಮ- ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ ಜೂನ್ 1 (ಕರ್ನಾಟಕ ವಾರ್ತೆ): ಕೋವಿಡ್ -2019 (ಕೊರೋನಾ ವೈರಸ್ ಕಾಯಿಲೆ ) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಘೋಷಣೆ ಆಗಿ ನಂತರ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆಯಾಗಿದ್ದು, ಲಾಕ್ ಡೌನ್ ಸಮಯದಲ್ಲಿ ವಾಹನಗಳ ಸಂಚಾರ ವಿರಳವಾದ ಕಾರಣ ಇತ್ತೀಚಿಗೆ ಅಪಘಾತಗಳ ಸಂಖ್ಯೆ ಇಳಿಮುಖವಾಗಿರುತ್ತದೆ. ಪ್ರಸ್ತುತ ಲಾಕ್ ಡೌನ್ ಸಡಿಲಗೊಳಿಸಿ ಅನೇಕ ವಿನಾಯಿತಿಗಳನ್ನು ನೀಡಲಾಗಿರುತ್ತದೆ, ಇದರಿಂದಾಗಿ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದ್ದು ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ . ರಸ್ತೆಗಳಲ್ಲಿ ಮುಖ್ಯವಾಗಿ ರಾಷ್ರೀಯ ಹೆದ್ದಾರಿಗಳಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸದೆ ದ್ವಿಚಕ್ರ ವಾಹನ ಸವಾರರು ತಮಗೆ ನಿಗಧಿ ಪಡಿಸಿದ ಪಥದಲ್ಲಿ ಸಂಚರಿಸದೆ ಅತಿ ವೇಗದಲ್ಲಿ ಮೊದಲ ಪಥಗಳಲ್ಲಿ ಸಂಚರಿಸುತ್ತಿರುವ ಕಾರಣ ಅಪಘಾತಗಳಾಗುತ್ತಿರುವುದನ್ನು ಗಮನಿಸಲಾಗಿದೆ. ಹಾಗೂ ದ್ವಿಚಕ್ರ ವಾಹನಗಳಲ್ಲಿ 3 ಜನರು ಸಂಚರಿಸುವುದು , ಹೆಲ್ಮೆಟ್ ಧರಿಸದೆ ಇರುವುದು, ಮತ್ತು ಮಾಸ್ಕ್ ಧರಿಸದೆ ಇರುವುದು ಕಂಡು ಬಂದಿರುತ್ತದೆ. ಇಂತಹ ಅತಿರೇಕಗಳಿಂದ ಉಡುಪಿ ಜಿಲ್ಲೆಯಲ್ಲಿ ಅಪಘಾತಗಳು ಹೆಚ್ಚುತಿರುವುದು ಕಳವಳಿಕಾರಿಯಾದ ವಿಷಯವಾಗಿದೆ. ಅಲ್ಲದೇ ಮಳೆಗಾಲದ ಪ್ರಾರಂಭದಲ್ಲಿ ಗ್ರೀಸ್ , ಆಯಿಲ್ ಇತ್ಯಾದಿಗಳು ರಸ್ತೆಗೆ ಬಿದ್ದಿರುವ ಕಾರಣಗಳಿಂದಾಗಿ ಎಲ್ಲಾ ರೀತಿಯ ವಾಹನಗಳು ಸ್ಕಿಡ್ ಆಗಿ ಅಪಘಾತಗಳು ಸಂಭವಿಸುತ್ತಿವೆ . ಆದುದರಿಂದ ಅತೀ ಜಾಗ್ರತೆಯಿಂದ ನಿಯಮಿತ ವೇಗದಲ್ಲಿ ವಾಹನ ಚಲಾಯಿಸುವಂತೆ ಮತ್ತು ಸಂಚಾರಿ ನಿಯಮಗಳನ್ನು ಪಾಲಿಸಿ , ನಿಗಧಿತ ಪಥಗಳಲ್ಲಿಯೆ ಸಂಚರಿಸಿ , ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಅಪಘಾತಗಳಾಗುವುದನ್ನು ತಡೆಯುವ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಿ ಸಂಚರಿಸುವOತೆ ಸಾರ್ವಜನಿಕರಲ್ಲಿ, ಹಾಗೂ ವಾಹನ ಬಳಕೆದಾರರಲ್ಲಿ ವಿನಂತಿಸಲಾಗಿದೆ.ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.
ಪೈಂಟಿಂಗ್ ಕ್ಷೇತ್ರದಲ್ಲಿ ಕಾಪುವಿನ ರಕ್ಷಾ ಪೂಜಾರಿಯ ಸಾಧನೆ
Posted On: 01 Jun 2020, 11:36 AM
ಸೋತು ಗೆಲ್ಲುವೆನೆಂಬ ಛಲ ತೊಟ್ಟು ಪೇಂಟಿಂಗ್ ಕ್ಷೇತ್ರದಲ್ಲಿಯೇ ಸದ್ದಿಲ್ಲದೇ ಸಾಧನೆ ಮಾಡುತ್ತಿರುವ ರಕ್ಷಾ ಪೂಜಾರಿಯವರು ಯುವ ಪೀಳಿಗೆಗೆ ಮಾದರಿ ಹಾಗೂ ಹೆಮ್ಮೆ ಕೂಡಾ.ಕಾಪುವಿನಲ್ಲಿ ನೆಲೆಸಿರುವ ಇವರ ತಂದೆ ರಮೇಶ್ ಪೂಜಾರಿ ಹಾಗೂ ತಾಯಿ ಶಶಿಕಲಾ ಕೋಟ್ಯಾನ್.ಪಿಯುಸಿ ಹಾಗೂ ಕಾಲೇಜು ಶಿಕ್ಷಣವನ್ನು ದಂಡತೀರ್ಥ ಉಳಿಯಾರಗೋಳಿಯಲ್ಲಿ ಪೂರ್ಣ ಗೊಳಿಸಿದ ಇವರು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಬೇಕೆನ್ನುವ ಉದ್ಧೇಶದಿಂದ ವಿಶುವಲ್ ಆರ್ಟ್ಸ್ ಕಲಿಯಲು ಮೂಡಬಿದ್ರೆ ಯ ಆಳ್ವಾಸ್ ಶಿಕ್ಷಣ ಸಂಸ್ಥೆ ಗೆ ಸೇರುತ್ತಾರೆ.ವಾರ್ಲಿ ಆರ್ಟ್, ವಾರ್ಲಿ ವಾಲ್ ಪೈಂಟಿಂಗ್, ಟ್ರೆಡಿಷನಲ್ ಪೇಂಟಿಂಗ್, ಪಾಟ್ ಪೈಂಟಿಂಗ್, ಪಾಟ್ರೈಟ್ ಫೈಟಿಂಗ್, ಪಾಟ್ರೈಟ್ ಸ್ಕೆಚ್ ಮತ್ತು ಓಯಿಲ್ ಕಲರ್ ಪೈಂಟಿಂಗ್ ಹಾಗೂ ಎಲ್ಲಾ ರೀತಿಯ ಕ್ಯಾನವಸ್ ಪೈಂಟಿಂಗ್ ಮಾಡುವ ಇವರು ಹಲವಾರು ಕ್ಯಾಂಪ್ ಹಾಜರಾಗಿದ್ದಾರೆ. ಉಡುಪಿಯಲ್ಲಿ ನಡೆದ ಪವರ್ ಪರ್ಬ ಎನ್ನುವ ಎಕ್ಸಿಬಿಷನ್ ನಲ್ಲಿ ಪಾಲ್ಗೊಂಡಿದ್ದಾರೆ.ರಾಜ್ಯ ಮಟ್ಟದಲ್ಲಿ ಕೂಡಾ ಇವರ ಸಾಧನೆಗೆ ಪ್ರಶಸ್ತಿ ಪಡೆದು ಕೊಂಡಿದ್ದಾರೆ.ಫೆಬ್ರವರಿ 23ರಂದು ಕಲಾಬ್ದಿ ಎನ್ನುವ ರಾಷ್ಟ್ರ ಮಟ್ಟದ ಪೈಂಟಿಂಗ್ ಸ್ಪರ್ಧೆ ಗೆ ಆಯ್ಕೆ ಯಾಗಿದ್ದರು. ಈ ಎಲ್ಲಾ ಸಾಧನೆಗೆ ಎಲ್ಲರೂ ಬೆನ್ನು ತಟ್ಟಿ ಪ್ರೋತ್ಸಾಹ ನೀಡಬೇಕಾಗಿ ವಿನಂತಿ.ಇವರನ್ನು ಸಂಪರ್ಕಿಸಲು 9964777580 ಕರೆ ಮಾಡಿ.. ಇನ್ನೂ ಹೆಚ್ಚಿನ ಸಾಧನೆಗಳು ಇವರಿಂದ ಮೂಡಿ ಬರಲಿ ಎಂಬುದು ನಮ್ಮೇಲ್ಲರ ಆಶಯ..
34 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕ ಗೋಪಾಲಕೃಷ್ಣ ಭಟ್ ವಯೋ ನಿವೃತ್ತಿ
Posted On: 31 May 2020, 09:15 PM
ಭವಿಷ್ಯದ ಬದುಕಿಗೆ ಅಕ್ಷರ ಕಲಿಸಿ ನಿವೃತ್ತಿ ಹೊಂದಿದ ನಮ್ಮೂರಿನ ಲೆಕ್ಕ ಮಾಸ್ಟರ್.. ಕಾಪು: ಕಾಪು ಕಳತ್ತೂರಿನ ಪಿ.ಕೆ ಎಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರು ಶ್ರೀ ಗೋಪಾಲಕೃಷ್ಣ ಭಟ್ ಕೆ.ಎಂ.. ಕಳೆದ ೨೭ ವರ್ಷಗಳ ಕಾಲ ಸಹಶಿಕ್ಷಕರಾಗಿ,ಏಳು ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ 31/05/2020 ರಂದು ವಯೋನಿವೃತ್ತಿ ಹೊಂದಿರುವ ಶ್ರೀ ಗೋಪಾಲಕೃಷ್ಣ ಭಟ್ ಕೆ ಎಂ ಇವರು ಹಲವು ವರ್ಷದಿಂದ SSLC ಪರೀಕ್ಷೆಯಲ್ಲಿ ಗಣಿತ ಶಾಸ್ತ್ರದಲ್ಲಿ ಶೇಕಡಾ ನೂರು ಫಲಿತಾಂಶ ಹಾಗೂ ಕಳೆದ ಎರಡು ವರ್ಷಗಳಿಂದ ಗಣಿತ ಶಾಸ್ತ್ರದಲ್ಲಿ ಉಡುಪಿ ಜಿಲ್ಲಾ ಸಾಧಕ ಪ್ರಶಸ್ತಿ ಪಡೆದು ಸಾಧನೆ ಮಾಡಿರುವರು ಹಾಗೂ ಸಂಸ್ಥೆಯ NCC ಘಟಕದ ಅಫೀಸರ್ ಆಗಿಯೂ ಸೇವೆ ಸಲ್ಲಿಸಿರುತ್ತಾರೆ.. ವಿದ್ಯಾರ್ಥಿಗಳಲ್ಲಿ ಉಜ್ವಲ ಭವಿಷ್ಯ ತುಂಬಿ ಇದೀಗ ವಯೋನಿವೃತ್ತಿ ಹೊಂದಿದ ತಮ್ಮ ನಿವೃತ್ತಿ ಜೀವನ ಸುಖಮಯವಾಗಿರಲಿ.. ✍
ಕಾಲನ ಹೊಡೆತಕ್ಕೆ ಸಿಕ್ಕ ಮೈಂದಡಿ ದೈವಸ್ಥಾನ ಮತ್ತು ಗರಡಿ
Posted On: 29 May 2020, 10:56 AM
ತುಳುನಾಡು ಎಂದಕ್ಷಣ ಕಣ್ಣಿಗೆ ಕಾಣುವುದು ದೈವಾರಾಧನೆ. ತುಳುವರ ರಕ್ತದಲ್ಲಿ ದೈವಾರಾಧನೆ ಬೆರೆತು ಹೋಗಿದೆ. ಏನೇ ಕಷ್ಟ ಬಂದರು ಮೊರೆ ಹೋಗುವುದು ದೈವಗಳ ಕಾಲ ಬುಡಕ್ಕೆ. ನಂಬಿದವರನ್ನು ಯಾವತ್ತು ಕೈಬಿಟ್ಟವರಲ್ಲ ಈ ಅತಿಮಾನುಷ ಶಕ್ತಿಗಳಾದ ದೈವಗಳು. ಅದೆಷ್ಟೋ ಕಾಲದ ಹೊಡೆತಕ್ಕೆ ಮಣ್ಣಿನಡಿಗೆ ಸೇರಿದ ದೈವಸ್ಥಾನಗಳು ಕೂಡ ಕಾಲ ಬಂದಾಗ ತಮ್ಮ ಇರುವಿಕೆಯನ್ನು ತೋರಿಸಿ ತಮಗೆ ಬೇಕಾದ ಸ್ಥಾನಮಾನಗಳನ್ನು ಕಟ್ಟಿಸಿಕೊಂಡು ನಂಬಿದವರಿಗೆ ಇಂಬುಕೊಟ್ಟವರು. ಇಂತಹ ದೈವಾರಾಧನೆಯಲ್ಲಿ ಗರಡಿಗಳು ಕೂಡ ಕಾಯ ಬಿಟ್ಟು ಮಾಯ ಸೇರಿದ ಅವಳಿ ಕಾರಣೀಕ ಪುರುಷರ ಆರಾಧನ ಕೇಂದ್ರ. ಪ್ರಸ್ಥುತ 250 ಮಿಕ್ಕಿ ಗರಡಿಗಳು ಇದ್ದರು ಕೂಡ ಕೆಲವು ಗರಡಿಗಳು ಮಣ್ಣಿನ ಅಡಿಯಲ್ಲಿ ಜೀರ್ಣಾವಸ್ಥೆಯಲ್ಲಿ ಇದೆ. ಹೆಸರಿಗೆ ಮಾತ್ರ ಲೆಕ್ಕದಲ್ಲಿ ಇದೆ. ಅಂತಹುದೇ ಗರಡಿಗಳಲ್ಲಿ ಮೈಂದಡಿ ಗರಡಿಯು ಒಂದು. ಶ್ರೀ ಕ್ಷೇತ್ರ ಕಟೀಲಿಗೆ ಹೋಗುವ ದಾರಿಯಲ್ಲಿ ಸಿಗುವ ನಿಡ್ಡೋಡಿ ಎಂಬ ಗ್ರಾಮದಲ್ಲಿ ಮೈಂದಡಿ ಎನ್ನುವ ಪುಟ್ಟ ಊರು. ಹಸಿರು ಕಾಂತಿಯಿಂದ ಈ ಹಳ್ಳಿ ಕಂಗೊಳಿಸುತ್ತಾ ಇದ್ದು ಎಲ್ಲರು ನೆಮ್ಮದಿಯಿಂದ ಒಟ್ಟಾಗಿ ಜೀವಿಸುತ್ತಿರುವ ಊರು. ಕಾಲದ ಹೊಡೆತಕ್ಕೆ ಸಿಕ್ಕಿ ಈ ಹಿಂದೆ ವಿಜೃಂಭಣೆಯಿಂದ ನಡೆಯುತ್ತಿದ್ದ ಗರಡಿ ಜಾತ್ರೆ ಕಾಲಗರ್ಭದಲ್ಲಿ ಹುದುಗಿ ಹೋಗಿದೆ. 66 ಗರಡಿ 33 ತಾವುಗಳೆಂಬ ನಾಣ್ಣುಡಿಯಂತೆ ಈ ಗರಡಿಯು ಕೂಡ 66 ಗರಡಿಯಲ್ಲಿ ಸೇರಿರಬಹುದೆಂಬ ನಂಬಿಕೆಯಿದೆ. ಇಲ್ಲಿ ಅಳಿದು ಉಳಿದಿರುವ ಶಕ್ತಿ ಕಲ್ಲು, ದಂಬೆ ಕಲ್ಲು, ಆಯದ ಕಲ್ಲು, ತೀರ್ಥ ಬಾವಿ ಇವೆಲ್ಲ ಇದಕ್ಕೆ ಸಾಕ್ಷಿಯೆಂಬಂತೆ ಇದೆ. ಸುಮಾರು 150 ವರ್ಪಗಳ ಹಿಂದೆ ಬಹು ಸಡಗರದಿಂದ ನಡೆಯುತ್ತಿದ್ದ ನೇಮೋತ್ಸವವು ಯಾಕಾಗಿ ನಿಂತಿದೆ ಎನ್ನುವ ಮಾಹಿತಿ ಯಾರಿಗೂ ಇಲ್ಲ. ನೋಡಿದ ಕೇಳಿದ ಜನರು ಇರಲು ಸಾಧ್ಯವಿಲ್ಲ. ಆದರೆ 5 ಕಡೆಗಳಿಂದ ದೈವಗಳು ಮತ್ತು ಬೈದೇರುಗಳ ಭಂಡಾರ ಬಂದು ನೇಮೋತ್ಸವ ಆಗುತ್ತಿದ್ದ ಬಗ್ಗೆ ಅಲ್ಪ ಸ್ವಲ್ಪ ಮಾಹಿತಿಯಿದೆ. ಭಾವದ ಮನೆಯಿಂದ ಕೊಡಮಂದಾಯ ದೈವದ ಭಂಡಾರ, ಪಾತ್ರಬೈಲು ಮನೆಯಿಂದ ಸರಳ ಜುಮಾದಿ ಭಂಡಾರ, ಮಚ್ಚಾರು ಮನೆಯಿಂದ ಬೈದೇರುಗಳ ಭಂಡಾರ, ನಂದೊಟ್ಟು ಮನೆಯಿಂದ ಕಾಂತೇರ್ ಜುಮಾದಿ ಭಂಡಾರ ಮತ್ತು ಇನ್ನೊಂದು ಕಡೆಯಿಂದ ಜಾರಂದಾಯನ ಭಂಡಾರ ಮೈಂದಡಿ ಎನ್ನುವ ಸ್ಥಳದಲ್ಲಿ ಇರುವ ದೈವಸ್ಥಾನಕ್ಕೆ ಮತ್ತು ಗರಡಿಗೆ ಒಟ್ಟಾಗಿ ಬಂದು ಧ್ವಜಾರೋಹಣ ಆಗಿ ನೇಮೋತ್ಸವ ಆಗುತ್ತಿತ್ತಂತೆ. ಇಡೀ ಊರಿಗೆ ಇದು ಜಾತ್ರೆ. ಗ್ರಾಮಸ್ಥರು ಎಲ್ಲರು ಒಟ್ಟಾಗಿ ದೈವಗಳ ಮತ್ತು ಬೈದೇರುಗಳ ಭಂಡಾರ ಮನೆಯವರ ಮುಂದಾಳತ್ವದಲ್ಲಿ ನಡೆಸುತ್ತಿದ್ದರಂತೆ. ಆದರೆ ಯಾವುದೋ ಒಂದು ವಿಷ ಗಳಿಗೆಯಲ್ಲಿ ಎಲ್ಲವು ನಿಂತು ಹೋಗಿ ಮೈಂದಡಿಯಲ್ಲಿರುವ ದೈವಸ್ಥಾನ ಮತ್ತು ಗರಡಿ ಧರಶಾಹಿಯಾಗಿದೆ. ಈ ಬಗ್ಗೆ ಊರಿನ ಸಂಬಂಧಪಟ್ಟವರಿಂದ ಆಶಾದಾಯಕ ಬೆಳವಣಿಗೆಗಳು ನಡೆಯುತ್ತಿದ್ದು ಅತೀ ಬೇಗನೆ ಆಗಬಹುದೆಂಬ ನಂಬಿಕೆಯಿದೆ. ಒಂದಂತು ಸತ್ಯ ಯಾವ ಕಾಲಕ್ಕೆ ಯಾವುದು ಆಗಬೇಕೆನ್ನುವುದು ದೈವ ನಿರ್ಣಯ. ದೈವಗಳ ಮತ್ತು ಬೈದೇರುಗಳ ನಿರ್ಣಯ ಯಾವ ರೀತಿ ಇದೆಯೆಂಬುದು ಯಾರಿಗೂ ತಿಳಿದಿಲ್ಲ. ಆದರೆ ಆಗುತ್ತೆ ಎನ್ನುವುದು ಸಾರ್ವಕಾಲಿಕ ಸತ್ಯ. ಗ್ರಾಮಸ್ಥರೆಲ್ಲ ಈ ಬಗ್ಗೆ ಉತ್ಸುಕತೆಯಿಂದ ಕಾಯುತ್ತಿದ್ದು ಎಲ್ಲರು ಒಂದು ಕಡೆ ಸೇರಿ ಈ ಬಗ್ಗೆ ಚರ್ಚಿಸಲು ಮಾತ್ರ ಬಾಕಿಯಿರುತ್ತದೆ. ಇಲ್ಲಿನ ಪಳೆಯುಳಿಕೆಗಳಾದ ದೈವಗಳ ದೈವಸ್ಥಾನ, ಬೈದೇರುಗಳ ಗರಡಿ, ದಂಬೆಕಲ್ಲು, ಶಕ್ತಿಕಲ್ಲು, ಆಯದ ಕಲ್ಲು, ತೀರ್ಥ ಬಾವಿ ಹೊರಗಿನಿಂದ ಅಲ್ಪಸ್ವಲ್ಪ ಕಾಣುತ್ತಿದ್ದು ಚಿತ್ರಣವನ್ನು ನೋಡುವಾಗ ಮೈ ರೋಮಾಂಚಣಗೊಳ್ಳುತ್ತದೆ. ಇಂದಿಗೂ ಅಲ್ಲಿರುವ ಶಕ್ತಿಗಳು ಭಕ್ತರ ಬರುವಿಕೆಗೆ ಕಾದಿದೆಯೋ ಎನ್ನುವಂತೆ ಭಾಸವಾಗುತ್ತಿದೆ.
ಕಾಪು , ಮೇ. 27 : ಸರಕಾರದಿಂದ ಕೊರೊನ ಸೋಂಕಿತ ವ್ಯಕ್ತಿ ಡಿಸ್ಚಾರ್ಜ್ ಬಗ್ಗೆ ಹೊಸ ಮಾರ್ಗಸೂಚಿ
Posted On: 27 May 2020, 11:21 PM
ಕಾಪು, ಮೇ 27: ಕೊರೋನ ಪರೀಕ್ಷಾ ವರದಿಯಲ್ಲಿನ ತಾಂತ್ರಿಕ ಗೊಂದಲದಿಂದ ಸೋಂಕಿತ ಉಡುಪಿ ಜಿಪಂ ಸ್ವಚ್ಛತಾ ಅಭಿಯಾನ ವಿಭಾಗದ ಸಿಬ್ಬಂದಿ, ಕಟಪಾಡಿ ಸರಕಾರಿಗುಡ್ಡೆಯ 30ರ ಹರೆಯದ ಯುವಕನನ್ನು ವರದಿ ಬಂದ ಎರಡು ದಿನಗಳ ಬಳಿಕ ಇಂದು ಮಧ್ಯಾಹ್ನ ವೇಳೆಗೆ ಉದ್ಯಾವರ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮೇ 17ರಂದು ರೋಗದ ಲಕ್ಷ್ಮಣಗಳು ಕಂಡುಬಂದಿದ್ದು, ಮೇ 19ಕ್ಕೆ ಇವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಮಂಗಳೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮೇ 24ರಂದು ಇವರ ವರದಿ ಪಾಸಿಟಿವ್ ಎಂಬುದಾಗಿ ಬಂದಿತ್ತು. ಆದರೆ ಫಲಿತಾಂಶ ಬರುವ ಸಮಯದಲ್ಲಿ ಇವರಲ್ಲಿ ಯಾವುದೇ ರೋಗದ ಲಕ್ಷ್ಮಣಗಳು ಇರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಟ್ರೂನಟ್ ಯಂತ್ರದ ಮೂಲಕ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ನೆಗೆಟಿವ್ ಎಂಬುದಾಗಿ ವರದಿ ಬಂದಿತ್ತು. ಈ ತಾಂತ್ರಿಕ ಗೊಂದಲ ಮತ್ತು ಆ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿದರೆ ಸೋಂಕು ತಗಲಬಹುದು ಎಂಬ ಕಾರಣಕ್ಕಾಗಿ ಅವರನ್ನು ಮನೆಯಲ್ಲಿಯೇ ಉಳಿಸಿಕೊಳ್ಳಲಾಗಿತ್ತು. ಮೇ 27ರಂದು ಮತ್ತೊಮ್ಮೆ ಅವರ ಗಂಟಲು ದ್ರವದ ಪರೀಕ್ಷೆಯನ್ನು ಮಣಿಪಾಲ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಯನ್ನು ನಿರೀಕ್ಷಿಸ ಲಾಗುತ್ತಿದೆ. ವರದಿಯಲ್ಲಿ ಪಾಸಿಟಿವ್ ಬಂದರೆ ಕೋವಿಡ್ ಆಸ್ಪತ್ರೆಗೆ ದಾಖಲಿಸ ಲಾಗುವುದು ಮತ್ತು ನೆಗೆಟಿವ್ ಬಂದರೆ ಮನೆಗೆ ಕಳುಹಿಸಲಾಗು ವುದು ಎಂದು ಕೋವಿಡ್-19 ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ. ಈ ಮಧ್ಯೆ ಈ ವ್ಯಕ್ತಿ ಈಗಾಗಲೇ ಸೋಂಕಿತ ಎಂಬುದಾಗಿ ಗುರುತಿಸಿ ಕೊಂಡಿರುವುದರಿಂದ ಸ್ಥಳೀಯರು ಆತಂಕ ಪಡಬಾರದು ಎಂಬ ಕಾರಣಕ್ಕೆ ಇಂದು ಮಧ್ಯಾಹ್ನ ವೇಳೆ ಅವರನ್ನು ಕೋವಿಡ್ ಆಸ್ಪತ್ರೆಯ ಬದಲು ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ. ಅಲ್ಲದೆ ಜಿಲ್ಲಾಡಳಿತದ ಆದೇಶ ದಂತೆ ಸರಕಾರಿಗುಡ್ಡೆಯಲ್ಲಿ ಕಂಟೈನ್ಮೆಂಟ್ ವಲಯದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈ ಸಂಬಂಧ ಕಾಪು ತಹಶೀಲ್ದಾರ್ ಮುಹಮ್ಮದ್ ಇಸಾಕ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಡಿಸ್ಚಾರ್ಜ್ ಬಗ್ಗೆ ಹೊಸ ಮಾರ್ಗಸೂಚಿ ಮೇ 26ರಂದು ಸರಕಾರದಿಂದ ಬಂದ ಹೊಸ ಮಾರ್ಗಸೂಚಿ ಪ್ರಕಾರ, ಯಾವುದೇ ರೋಗದ ಲಕ್ಷ್ಮಣಗಳಿಲ್ಲದೆ ಪಾಸಿಟಿವ್ ಬಂದ ವ್ಯಕ್ತಿಯನ್ನು ಏಳನೇ ದಿನಕ್ಕೆ ಮತ್ತೆ ಪರೀಕ್ಷಿಸಿದಾಗ ನೆಗೆಟಿವ್ ಬಂದರೆ, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದಾಗಿದೆ. ಅದೇ ರೀತಿ ರೋಗದ ಲಕ್ಷ್ಮಣಗಳೊಂದಿಗೆ ಪಾಸಿಟಿವ್ ಬಂದ ವ್ಯಕ್ತಿಯಲ್ಲಿ ಏಳನೇ ದಿನಕ್ಕೆ ಯಾವುದೇ ರೋಗದ ಲಕ್ಷ್ಮಣ ಗಳು ಇಲ್ಲದಿದ್ದರೆ, 10ನೆ ದಿನಕ್ಕೆ ಪರೀಕ್ಷಿಸಿ, ನೆಗೆಟಿವ್ ಬಂದರೆ ಅಂತವರನ್ನು ಸಹ ಬಿಡುಗಡೆ ಮಾಡಬಹುದಾಗಿದೆ. ಒಂದು ವೇಳೆ ಸರಕಾರಿಗುಡ್ಡೆ ವ್ಯಕ್ತಿಯ ಈಗ ಕಳುಹಿಸಿರುವ ವರದಿ ನೆಗೆಟಿವ್ ಬಂದರೆ, ಮನೆಗೆ ಕಳುಹಿಸಲು ಈ ಹೊಸ ಮಾರ್ಗಸೂಚಿಯಂತೆ ಅವಕಾಶ ಇದೆ ಎಂದು ಕೋವಿಡ್-19 ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.
ಜೂನ್ 1 ರಿಂದ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನದ ಅವಕಾಶವಿದೆ
Posted On: 27 May 2020, 01:14 AM
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬಂದ್ ಆಗಿರುವ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳು ಜೂನ್ 1ರಿಂದಲೇ ಆರಂಭಗೊಳ್ಳಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ರಾಜ್ಯದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿರುವ ಸುಮಾರು 36,000 ದೇವಾಲಯಗಳು ಸೋಮವಾರದಿಂದ ಬಾಗಿಲು ತೆರೆಯಲಿವೆ. ಎಲ್ಲಾ ದೇವಾಲಯಗಳಲ್ಲಿಯೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಭಕ್ತರಿಗೆ ದೇವರ ದರ್ಶನ ಹಾಗೂ ಸೇವೆಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗುತ್ತಿದೆ. ದೇವಸ್ಥಾನಗಳನ್ನು ತೆರೆಯುವಂತೆ ಭಕ್ತರಿಂದ ಒತ್ತಡ ಬಂದಿತ್ತು. ಈ ಕುರಿತು ಮುಖ್ಯಮಂತ್ರಿಗಳಲ್ಲಿ ಚರ್ಚಿಸಿದಾಗ ಅವರು ಒಪ್ಪಿಗೆಯನ್ನು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲೀಗ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಆದರೆ ದೇವಸ್ಥಾನಗಳಲ್ಲಿ ಜಾತ್ರೆ ಹಾಗೂ ಸಮಾರಂಭಗಳನ್ನು ನಡೆಸುವುದಕ್ಕೆ ಅವಕಾಶವನ್ನು ನಿರಾಕರಿಸಲಾಗಿದೆ. ಇನ್ನು ಭಕ್ತರ ಅನುಕೂಲಕ್ಕಾಗಿ ರಾಜ್ಯದ 52 ದೇವಸ್ಥಾನಗಳಲ್ಲಿ ಆನ್ ಲೈನ್ ಸೇವೆಯನ್ನು ಆರಂಭಿಸಲಾಗುತ್ತಿದೆ. ಭಕ್ತರು ತಮ್ಮ ಸೇವೆಗಳನ್ನು ಆನ್ ಲೈನ್ ಮೂಲಕ ಬುಕ್ಕಿಂಗ್ ಮಾಡಬಹುದಾಗಿದ್ದು, ಇದರಿಂದಾಗಿ ಭಕ್ತರಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ. ನಾಳೆಯಿಂದಲೇ ಆನ್ ಲೈನ್ ಬುಕ್ಕಿಂಗ್ ಆರಂಭಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಕಾಪು : ನಾಳೆಯಿಂದ ತಾಲೂಕಿನ ಎಲ್ಲಾ ಸೆಲೂನ್'ಗಳು ಕಾರ್ಯ ನಿರ್ವಹಿಸಲಿವೆ
Posted On: 26 May 2020, 10:14 PM
ಕೊರೊನಾ ಸೋಂಕಿತ ಜಿಲ್ಲಾ ಪಂಚಾಯತ್ ಸಿಬ್ಬಂದಿ ಕಟಪಾಡಿಯ ಸೆಲೂನ್ ಗೆ ಹೋಗಿದ್ದರಿಂದ ಸಾರ್ವಜನಿಕರು ಆತಂಕಗೊಂಡ ಹಿನ್ನಲೆಯಲ್ಲಿ ಕಾಪು ವಲಯದ ಸೆಲೂನ್ ಗಳು ಮೇ 26 ರಂದು ಬಂದ್ ಮಾಡಲಾಗಿತ್ತು ಮತ್ತೆ ವೈದ್ಯರ ಸಲಹೆಯ ಮೇರೆಗೆ ಮೇ 27ರಿಂದ ತೆರಯಲು ನಿರ್ಧರಿಸಿದ್ದಾರೆ ಕೊರೊನಾ ಸೋಂಕಿತಾ ಜಿಲ್ಲಾ ಪಂಚಾಯತ್ ಸಿಬ್ಬಂದಿ ಕಟಪಾಡಿಯ ಸೆಲೂನ್ ಒಂದರ ಸಂಪರ್ಕಕ್ಕೆ ಬಂದಿದ್ದು ಸಾರ್ವಜನಿಕರು ಆತಂಕ ಗೊಂಡಿದ್ದರು. ಈ ಹಿನ್ನೆಲೆ ಸೆಲೂನ್ ಗಳನ್ನು ಬಂದ್ ಮಾಡಲು ಕಾಪು ಸವಿತಾ ಸಮಾಜ ನಿರ್ಧರಿಸಿತ್ತು. ನಿನ್ನೆ ಸಂಜೆ ಸಭೆ ನಡೆಸಿ ಸೆಲೂನ್ ಗಳನ್ನು ಬಂದ್ ಮಾಡಲು ತೀರ್ಮಾನಿಸಿದ್ದರು. ಇಂದು ಕಾಪು ತಾಲೂಕಿನ ಎಲ್ಲ ಸೆಲೂನ್ ಗಳನ್ನು ಬಂದ್ ಮಾಡಿದ್ದು ಈ ಕುರಿತು ವೈದ್ಯರ ಸಲಹೆಯ ಮೇರೆಗೆ ಸವಿತಾ ಸಮಾಜದ ಮುಖಂಡರು ಸೆಲೂನ್ ಗಳನ್ನು ಮತ್ತೆ ತೆರೆಯಲು ತೀರ್ಮಾನಿಸಿದ್ದಾರೆ
