Updated News From Kaup
ಈಶಾನ್ಯ ರಾಜ್ಯಗಳ ಪ್ರವಾಸ ಮುಗಿಸಿದ ಕಾಪುವಿನ ಯುವಕರಿಗೆ ಕಾಪು ಹೊಸ ಮಾರಿಗುಡಿಯಲ್ಲಿ ಅಭಿನಂದನೆ
Posted On: 28-11-2024 10:34AM
ಕಾಪು : ಶಟರ್ ಬಾಕ್ಸ್ ಖ್ಯಾತಿಯ ಯೂ ಟ್ಯೂಬರ್ ಕಾಪುವಿನ ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡ ಕರಾವಳಿಯ ಪ್ರವಾಸೋದ್ಯಮ, ಧಾರ್ಮಿಕ ಮತ್ತು ವಿಶೇಷವಾಗಿ ಉತ್ತರ ಭಾರತದ ಮೇಘಾಲಯ, ಮಿಝೋರಾಂ, ಒಡಿಶಾ ಸಹಿತ 7 ರಾಜ್ಯಗಳ ಪ್ರವಾಸ ಕೈಗೊಂಡು ಕಲೆ ಸಂಸ್ಕೃತಿ ಆಹಾರದ ಅಧ್ಯಯನ ನಡೆಸಿ ಪರಂಪರೆಯನ್ನು ಎಲ್ಲೆಡೆ ಪ್ರಚುರಗೊಳಿಸುವ ಉದ್ದೇಶದೊಂದಿಗೆ ಸುಜುಕಿ ಜಿಮ್ಮಿ ವಾಹನದಲ್ಲಿ ಈಶಾನ್ಯ ರಾಜ್ಯಗಳಿಗೆ ಕಳೆದ ಅ.5ರಂದು ಪ್ರವಾಸ ಹೊರಟಿದ್ದು, ಬುಧವಾರ 53 ದಿನಗಳ ಪ್ರವಾಸ ಮುಗಿಸಿ ಕಾಪುವಿಗೆ ಆಗಮಿಸಿದ್ದರು.
ಮಟ್ಟು ಗುಳ್ಳ, ಶಂಕರಪುರ ಮಲ್ಲಿಗೆ ಚಿತ್ರದ ಅಂಚೆ ಮೊಹರು ಅನಾವರಣ
Posted On: 27-11-2024 08:12PM
ಉಡುಪಿ : ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ವತಿಯಿಂದ ಭಾರತೀಯ ಸಂವಿಧಾನದ ಅಮೃತೋತ್ಸವದ ಅಂಗವಾಗಿ ಕಟಪಾಡಿ ಮತ್ತು ಶಂಕರಪುರ ಉಪ ಅಂಚೆ ಕಚೇರಿಗಳಲ್ಲಿ ಕ್ರಮವಾಗಿ ತುಳುನಾಡಿನ ಜನಪ್ರಿಯ ವಸ್ತು ಗಳಾದ ಮಟ್ಟು ಗುಳ್ಳ ಮತ್ತು ಶಂಕರಪುರ ಮಲ್ಲಿಗೆಗಳ ಶಾಶ್ವತ ಚಿತ್ರಾತ್ಮಕ ಅಂಚೆ ಮೊಹರನ್ನು ಅನಾವರಣಗೊಳಿಸಲಾಯಿತು.
ಎರ್ಮಾಳು ಮಾಧವ ಎಸ್. ಸುವರ್ಣ ನಿಧನ
Posted On: 27-11-2024 07:03PM
ಪಡುಬಿದ್ರಿ : ಸುವರ್ಣ ಸಂಭ್ರಮದ ಜೇಸಿಐ ಪಡುಬಿದ್ರಿಯ ಸ್ಥಾಪಕ ಸದಸ್ಯರಾಗಿದ್ದ ಎರ್ಮಾಳು ಮಾಧವ ಎಸ್. ಸುವರ್ಣ(72) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತೆಂಕ ಎರ್ಮಾಳು ಸ್ವಗೃಹ "ಸುರಕ್ಷಾ"ದಲ್ಲಿ ನಿಧನರಾದರು.
ಬಂಟಕಲ್ಲು ಶಾಲೆಗೆ ನಾಸಾ ಸಂಸ್ಥೆಯ ನಿವೃತ್ತ ಹಿರಿಯ ವಿಜ್ಞಾನಿ ಭೇಟಿ ; ಮಕ್ಕಳೊಂದಿಗೆ ಸಂವಾದ
Posted On: 27-11-2024 05:49PM
ಶಿರ್ವ : ಅಮೇರಿಕದ ನಾಸಾ (ಬಾಹ್ಯಾಕಾಶ ಸಂಶೋಧನ ಕೇಂದ್ರ)ಸಂಸ್ಥೆಯ ಹಿರಿಯ ವಿಜ್ಞಾನಿ ಬಿಳಿಯಾರು ಡಾ. ನರಸಿಂಹ ಭಟ್ ರವರು ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾರ್ಥಮಿಕ ಶಾಲೆ ಗೆ ಭೇಟಿ ನೀಡಿದರು.
ಕಾಪು : ಮೂರು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಪನ್ನ
Posted On: 27-11-2024 05:40PM
ಕಾಪು : ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆಮಾರಿ ಗುಡಿ, ಹೊಸ ಮಾರಿ ಗುಡಿ ಹಾಗೂ ಕಲ್ಯ ಮಾರಿ ಗುಡಿಗಳಲ್ಲಿ ಏಕಕಾಲದಲ್ಲಿ ತುಳುವರ ಜಾರ್ದೆ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು.
ಕಾಪು ಶಾಸಕರ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ
Posted On: 26-11-2024 10:21PM
ಕಾಪು : ಶಾಸಕರ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ದಿನವನ್ನು ಆಚರಿಸಲಾಯಿತು.
ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆ
Posted On: 26-11-2024 10:12PM
ಕಾಪು : ಸಂವಿಧಾನ ಅಪಾಯದಲ್ಲಿದೆ. ಹಿಂದಿನ ಮನು ಆಡಳಿತ ಕೊನೆಗೊಳಿಸಿ ಪ್ರಸ್ತುತ ನಾವು ಬದುಕುತ್ತಿರುವುದು ನಮ್ಮ ಸಂವಿಧಾನದ ಶಕ್ತಿಯಿಂದ. ಸಂವಿಧಾನದಿಂದ ಆಡಳಿತದ ಚುಕ್ಕಾಣಿ ಹಿಡಿವರೇ ಸಂವಿಧಾನ ಬದಲಾವಣೆ ಬಯಸುತ್ತಿದ್ದಾರೆ. ಕನಸನ್ನು ಕೊಟ್ಟ ಗ್ರಂಥ ಸಂವಿಧಾನ ಎಂದು ವಾಗ್ಮಿ ನಿಕೇತ್ ರಾಜ್ ಮೌರ್ಯ ಹೇಳಿದರು. ಅವರು ಕಾಪು ಪೇಟೆಯಲ್ಲಿ ರಕ್ಷಣಾಪುರ ಜವನೆರ್ ಕಾಪು ಇದರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಹಿರಿಯರೆಡೆಗೆ ಸಾಹಿತ್ಯದ ನಡಿಗೆ : ಸಾಂತೂರು ವಿಠ್ಠಲ ಜೋಯಿಸರಿಗೆ ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತು ಗೌರವ
Posted On: 26-11-2024 03:27PM
ಪಡುಬಿದ್ರಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕ ಇದರ ವತಿಯಿಂದ ಕನ್ನಡ ಮಾಸಾಚರಣೆ "ತಿಂಗಳ ಸಡಗರ -2024" ಅಂಗವಾಗಿ ಸೋಮವಾರ 92ರ ಹರೆಯದ ನಿವೃತ್ತ ಶಿಕ್ಷಕರು, ಪ್ರತಿಪರ ಕೃಷಿಕರು, ಹಿರಿಯ ವಿದ್ವಾಂಸರು, ಗ್ರಾಮದೊಡೆಯ ಶ್ರೀಸುಬ್ರಹ್ಮಣ್ಯನ ಪರಮ ಆರಾಧಕರಾದ ವೇದಮೂರ್ತಿ ಶ್ರೀ ವಿಠ್ಠಲ ಜೋಯಿಸರಿಗೆ ಸಾಂತೂರು ಇವರ ನಿವಾಸದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ನೇತೃತ್ವದಲ್ಲಿ "ಹಿರಿಯರೆಡೆಗೆ ಸಾಹಿತ್ಯದ ನಡಿಗೆ" ವಿಶೇಷ ಕಾರ್ಯಕ್ರಮದಡಿಯಲ್ಲಿ ಸನ್ಮಾನಿಸಿ ಗೌರವಾರ್ಪಣೆ ಮಾಡಲಾಯಿತು.
ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ್ - ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ನಂದಿನಿ ರಾವ್
Posted On: 24-11-2024 11:07PM
ಕಾಪು : ಸಂಗೀತ ನಾಟಕ ಅಕಾಡೆಮಿಯಿಂದ ಲಘು ಶಾಸ್ತ್ರೀಯ ಸಂಗೀತಕ್ಕಾಗಿ ಸಂಗೀತ ಕಲಾವಿದೆ ನಂದಿನಿ ರಾವ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ್ - ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಶಿರ್ವ : ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿ ವಿಮೋಚನ ಸಮಿತಿಗೆ ಶ್ರೀ ಸಾಯಿ ಈಶ್ವರ ಗುರೂಜಿ ಆಯ್ಕೆ
Posted On: 24-11-2024 10:59PM
ಶಿರ್ವ : ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿ ವಿಮೋಚನ ಸಮಿತಿಗೆ ಶ್ರೀ ಸಾಯಿ ಈಶ್ವರ ಗುರೂಜಿ ಆಯ್ಕೆಯಾಗಿದ್ದಾರೆ.
