Updated News From Kaup

ನ. 25 : ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ

Posted On: 24-11-2024 08:46AM

ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕ ಇದರ ವತಿಯಿಂದ ಕನ್ನಡ ಮಾಸಾಚರಣೆ "ತಿಂಗಳ ಸಡಗರ -2024" ಅಂಗವಾಗಿ ನವೆಂಬರ್ 25, ಸೋಮವಾರ ಸಂಜೆ ಗಂಟೆ 4ಕ್ಕೆ ನಿವೃತ್ತ ಶಿಕ್ಷಕರು, ಹಿರಿಯ ವಿದ್ವಾಂಸರಾದ ವೇದಮೂರ್ತಿ ಶ್ರೀ ವಿಠ್ಠಲ ಜೋಯಿಸರು ಸಾಂತೂರು ಇವರ ನಿವಾಸದಲ್ಲಿ "ಹಿರಿಯರೆಡೆಗೆ ಸಾಹಿತ್ಯದ ನಡಿಗೆ" ವಿಶೇಷ ಕಾರ್ಯಕ್ರಮದಡಿಯಲ್ಲಿ ಗೌರವಾರ್ಪಣೆ ಜರುಗಲಿದೆ.

ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ ; ಸಾರ್ವಜನಿಕ ಸಭೆ

Posted On: 24-11-2024 08:01AM

ಕಾಪು : ರಕ್ಷಣಾಪುರ ಜವನೆರ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನ. 26 ರಂದು ಕಾಪು ಪೇಟೆಯಲ್ಲಿ ಸಂಜೆ 3 ಗಂಟೆಗೆ ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನ. 30 - ಡಿ.1: ವೀರಮಾರುತಿ ಕ್ರಿಕೆಟರ್ಸ್ ಇವರ ವತಿಯಿಂದ ಹನುಮ ಟ್ರೋಫಿ -2024 ; ನೂತನ ಕಚೇರಿ ಉದ್ಘಾಟನೆ ; ಆಮಂತ್ರಣ ಪತ್ರ ಬಿಡುಗಡೆ

Posted On: 23-11-2024 07:14PM

ಹೆಜಮಾಡಿ : ವೀರಮಾರುತಿ ಕ್ರಿಕೆಟರ್ಸ್ ಇವರ ವತಿಯಿಂದ ನ. 30 ಮತ್ತು ಡಿ.1 ರಂದು ಹೆಜಮಾಡಿ ಮೈದಾನದಲ್ಲಿ ನಡೆಯಲಿರುವ ಕಡಲ ತೀರದ ಮುಗ್ಗೆರ್ಕಳ ಸಮಾಜ ಬಾಂಧವರ ಕ್ರಿಕೆಟ್ ಪಂದ್ಯಾಟ ಹನುಮ ಟ್ರೋಫಿ -2024 ಇದರ ನೂತನ ಕಚೇರಿ ಉದ್ಘಾಟನೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ನಡೆಯಿತು.

ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಜಯೋತ್ಸವ

Posted On: 23-11-2024 06:51PM

ಕಾಪು : ಹೈವೋಲ್ವೇಜ್ ಕ್ಷೇತ್ರವಾದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್‌ ಗೆಲುವಿನ ಪ್ರಯುಕ್ತ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೇಟೆಯಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನ. 23 : ಸಚಿವ ಮಂಕಾಳ ವೈದ್ಯರಿಂದ ಪಡುಬಿದ್ರಿ ಬೀಚ್ ಕಾರ್ನಿವಲ್ ಉದ್ಘಾಟನೆ

Posted On: 22-11-2024 10:29AM

ಪಡುಬಿದ್ರಿ : ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪ್ರವಾಸೋದ್ಯಮ ಇಲಾಖೆಗಳ ಸಹಕಾರದೊಂದಿಗೆ 50ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಜೇಸಿಐ ಪಡುಬಿದ್ರಿ ಆತಿಥ್ಯದಲ್ಲಿ ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್ ಮತ್ತು ಮುಖ್ಯ ಬೀಚ್‌ಗಳಲ್ಲಿ ನ. 23 ಹಾಗೂ 24ರಂದು ವಿವಿಧ ಕ್ರೀಡೆಗಳು, ಪ್ರವಾಸೋದ್ಯಮ ಹಾಗೂ ಸಂಸ್ಕೃತಿಗಳ ಅನಾವರಣಗೊಳಿಸುವುದಕ್ಕಾಗಿ 'ಬ್ರಾಂಡ್ ಪಡುಬಿದ್ರಿ' ಮೂಲಕ ಜನತೆಗಾಗಿ ತೆರೆದುಕೊಳ್ಳಲಿರುವ ಪಡುಬಿದ್ರಿ ಬೀಚ್ ಕಾರ್ನಿವಲ್ - 2024ನ ಉದ್ಘಾಟನೆಯನ್ನು ರಾಜ್ಯ ಮೀನುಗಾರಿಕಾ, ಬಂದರು ಸಚಿವ ಮಂಕಾಳ ವೈದ್ಯ ಅವರು ನ.23ರಂದು ಸಂಜೆ 6 ಗಂಟೆಗೆ ನೆರವೇರಿಸಲಿರುವುದಾಗಿ ಪಡುಬಿದ್ರಿ ಜೇಸಿಐ ಅಧ್ಯಕ್ಷ ಸಂಜೀತ್ ಎರ್ಮಾಳ್ ಅವರು ತಿಳಿಸಿದರು. ಅವರು, ಕಾಪು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಪಡುಬಿದ್ರಿಯಲ್ಲಿ ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ

Posted On: 21-11-2024 10:54PM

ಪಡುಬಿದ್ರಿ : ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ನಿರ್ಮಾಣದ ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದ ಶೋಧನ್ ಶೆಟ್ಟಿ ನಾಯಕ‌ ನಟನಾಗಿರುವ ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು.

ಉದ್ಯಾವರ ನದಿಯಲ್ಲಿ ಅಪರಿಚಿತ ಶವ ಪತ್ತೆ

Posted On: 21-11-2024 07:12PM

ಉದ್ಯಾವರ : ಇಲ್ಲಿನ ಕಾನಕೊಡ ಪಡುಕೆರೆ ಪಾಪನಾಷಿನಿ‌ ನದಿಯ ಪಶ್ಚಿಮ ಬದಿಯಲ್ಲಿ 35 ರಿಂದ 40 ವರ್ಷದ ಗಂಡಸಿನ ಮೃತದೇಹ ಪತ್ತೆ ಆಗಿದ್ದು, ಗುರುತು ಪತ್ತೆಗಾಗಿ ಕಾಪು ಪೊಲೀಸರು ಮನವಿ ಮಾಡಿದ್ದಾರೆ.

ನವೆಂಬರ್ 24 : ಉದ್ಯಾವರದಲ್ಲಿ ಎಚ್ ಪಿ ಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ

Posted On: 21-11-2024 05:47PM

ಉಡುಪಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಎಚ್ ಪಿ ಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ ನವಂಬರ್ 24ರಂದು ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ. 25 ಸ್ಪರ್ಧಿಗಳು ಭಾಗವಹಿಸುತ್ತಿರುವ ಈ ಸ್ಪರ್ಧೆಯು ಮೂರು ಸುತ್ತುಗಳಲ್ಲಿ ನಡೆಯಲಿದ್ದು, ಕ್ಷಣ ಕ್ಷಣಕ್ಕೂ ಕುತೂಹಲದೊಂದಿಗೆ ಸಂಗೀತ ಸುಧೆ, ಹಾಸ್ಯ ಲಹರಿ, ಸಾಂಸ್ಕೃತಿಕ ವೈಭವದೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ನ.23 ಮತ್ತು 24 : ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನ - ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್.

Posted On: 21-11-2024 11:23AM

ಕಾಪು : ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಹೆಸರು ತೆಗೆದು ಹಾಕುವ ಕುರಿತು ನವೆಂಬರ್ 23 ಮತ್ತು 24 ರಂದು ಬೆಳೆಗ್ಗೆ 10 ರಿಂದ ಸಂಜೆ 5.30 ರವರೆಗೆ ಕಾಪು ತಾಲ್ಲೂಕಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೊದಲು ನವೆಂಬರ್ 9 ಮತ್ತು 10 ರಂದು ನಡೆದ ವಿಶೇಷ ಮತಪಟ್ಟಿ‌ ಪರಿಷ್ಕರಣೆಗೆ ಕಾಪು ತಾಲ್ಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ನ.22 - 24 : ಶ್ರೀ ಕ್ಷೇತ್ರ ಶಂಕರಪುರದಲ್ಲಿ ಶ್ರೀ ಕಾಲಭೈರವ ಜಯಂತಿ

Posted On: 21-11-2024 10:53AM

ಶಿರ್ವ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ಕಾಲಭೈರವ ಸ್ವಾಮಿ ದೇವಸ್ಥಾನ ಇಲ್ಲಿ ನವೆಂಬರ್ 22 ಶುಕ್ರವಾರದಿಂದ 24 ಆದಿತ್ಯವಾರದವರೆಗೆ ಶ್ರೀಕಾಲಭೈರವ ಜಯಂತಿಯ ಪ್ರಯುಕ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.