Updated News From Kaup

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆಯ ಬಗ್ಗೆ ಸಮಾಲೋಚನಾ ಸಭೆ

Thumbnail
Posted On: 19 Jan 2025, 11:56 PM

ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ. 22 ಮತ್ತು 23ರಂದು ಜರಗಲಿರುವ ಹೊರೆ ಕಾಣಿಕೆಯ ಬಗ್ಗೆ ಪೂರ್ವಭಾವಿಯಾಗಿ ಭಾನುವಾರ ಸಮಾಲೋಚನಾ ಸಭೆ ಕಾಪುವಿನ ವಿವೇಕ್ ಕಾಂಪ್ಲೆಕ್ಸ್ ನ ಸರೋಜ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜರಗಿತು. ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಭಕ್ತರು ತಮ್ಮ ಸಮಯದ ಜೊತೆಗೆ ಸಹಕಾರವನ್ನೂ ನೀಡಿ ಕಾಪು ಹೊಸ ಮಾರಿಗುಡಿಯ ಹೊರೆಕಾಣಿಕೆ ಮತ್ತು ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸಬೇಕಿದೆ. ಪೂರ್ವಭಾವಿಯಾಗಿ ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದರು. ಹೊರೆ ಕಾಣಿಕೆ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೃಹತ್ ಹೊರೆ ಕಾಣಿಕೆಯನ್ನು ನಿರೀಕ್ಷಿಸಲಾಗಿದೆ. ಫೆ.22 ರಂದು ದ.ಕ ಜಿಲ್ಲೆಯಿಂದ ಮತ್ತು ಫೆ. 23 ರಂದು ಉಡುಪಿ ಜಿಲ್ಲೆಯಿಂದ ಹೊರೆಕಾಣಿಕೆಯು ಶ್ರೀ ಕ್ಷೇತ್ರಕ್ಕೆ ಬರಲಿದೆ. ಈಗಾಗಲೇ ಉಭಯ ಜಿಲ್ಲೆಯ ದೇವಳಗಳು, ಸಂಘ ಸಂಸ್ಥೆಗಳ ಸಹಕಾರ ಕೋರಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಊರಿನಲ್ಲೂ ಸಭೆ ನಡೆಸಲಾಗುವುದು ಎಂದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಸಂದರ್ಭೋಚಿತವಾಗಿ ಮಾತನಾಡಿದರು. ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಸ್ವರ್ಣ ಗದ್ದುಗೆ ಸಮಿತಿ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಮೊಗವೀರ ಮಹಾಜನಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ಹೊರೆ ಕಾಣಿಕೆ ಸಮಿತಿ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ ಬೈಕಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಮಹಿಳಾ ಸಂಚಾಲಕಿಯರಾದ ಡಾ. ಸುನೀತಾ ಶೆಟ್ಟಿ ಕರ್ಜೆ, ಕಸ್ತೂರಿ ಪಂಜ, ಲಕ್ಷ್ಮೀ ಜನಾರ್ಧನ ದೇವಳದ ಮೊಕ್ತೇಸರ ಮನೋಹರ ಶೆಟ್ಟಿ, ಕಾಪು ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಹೊರೆ ಕಾಣಿಕೆ ಸಮಿತಿ ಕೋಶಾಧಿಕಾರಿಯಾಗಿ ಹರೀಶ್ ನಾಯಕ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಶೆಟ್ಟಿ ಪಾದೂರು ಮತ್ತಿತರರು, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ದಿವಾಕರ್ ಶೆಟ್ಟಿ ಉಪಸ್ಥಿತರಿದ್ದರು. ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿ, ಪ್ರಸ್ತಾವನೆಗೈದರು. ನಿರ್ಮಲ್ ಕುಮಾರ್ ಹೆಗ್ಡೆ ನಿರೂಪಿಸಿದರು.

ಜ.17 : ಕಚ್ಚೂರು ಮಾಲ್ತಿದೇವಿ ಬಬ್ಬುಸ್ವಾಮಿ ಮೂಲಕ್ಷೇತ್ರಕ್ಕೆ ಪಡುಬಿದ್ರಿ ವಲಯದಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ

Thumbnail
Posted On: 16 Jan 2025, 12:46 PM

ಪಡುಬಿದ್ರಿ : ಕಚ್ಚೂರು ಶ್ರೀಮಾಲ್ತಿದೇವಿ ಶ್ರೀಬಬ್ಬುಸ್ವಾಮಿ ಮೂಲಕ್ಷೇತ್ರದ ವಾರ್ಷಿಕ ಜಾತ್ರೆ ಮಹೋತ್ಸವದ ಪ್ರಯುಕ್ತ ಹಸಿರು ಹೊರೆಕಾಣಿಕೆ ಸಮರ್ಪಣೆ ಜ.17ರಂದು ಮದ್ಯಾಹ್ನ 12 ಗಂಟೆಗೆ ಸರಿಯಾಗಿ ಪಡುಬಿದ್ರಿ ವಲಯ ಹೊರೆಕಾಣಿಕೆ ಸಮಿತಿಯ ನೇತೃತ್ವದಲ್ಲಿ ಪಡುಬಿದ್ರಿ ಶ್ರೀಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಪಡುಬಿದ್ರಿ ಏಳು ಮಾಗಣೆ, ವಲಯದ ವಿವಿಧ ಕೋಡ್ದಬ್ಬು ದೈವಸ್ಥಾನಗಳ ಗುರಿಕಾರರು ಹತ್ತು ಸಮಸ್ತರು, ಮುಂಡಾಲ ಯುವ ವೇದಿಕೆ ಪಡುಬಿದ್ರಿ, ವಿವಿಧ ಭಜನಾ ಮಂಡಳಿಗಳು ಮತ್ತು ಸಂಘ-ಸಂಸ್ಥೆಗಳ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಮರ್ಪಣೆಯಾಗಲಿದೆ ಎಂದು ಪಡುಬಿದ್ರಿ ವಲಯ ಹೊರೆಕಾಣಿಕೆ ಸಮಿತಿಯ ದಿನೇಶ್ ಕಂಚಿನಡ್ಕ, ರಾಜು ಹೆಜಮಾಡಿ, ರವಿ ಬೊಗ್ಗರಿಲಚ್ಚಿಲ್, ಪ್ರವೀಣ್ ಎರ್ಮಾಳು, ಪ್ರಸನ್ನ ಪಡುಬಿದ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪಡುಬಿದ್ರಿ : ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಜಾಥಾ

Thumbnail
Posted On: 15 Jan 2025, 09:28 PM

ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ, ಪಡುಬಿದ್ರಿ ಪೊಲೀಸ್ ಠಾಣೆ, ಪಡುಬಿದ್ರಿ ಲಯನ್ಸ್ ಕ್ಲಬ್, ಇನ್ನರ್‌ವೀಲ್ ಕ್ಲಬ್, ರೋಟರ‍್ಯಾಕ್ಟ್ ಕ್ಲಬ್, ಕರ್ನಾಟಕ ಪಬ್ಲಿಕ್ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬುಧವಾರ ಬೋಡ್೯ ಶಾಲಾ ಮೈದಾನದಿಂದ ಪಡುಬಿದ್ರಿ ಪೇಟೆ, ಮಾರ್ಕೆಟ್ ರಸ್ತೆಯ ಮೂಲಕ ಜಾಗೃತಿ ಜಾಥಾ ನಡೆಯಿತು. ಕಾರ್ಯಕ್ರಮದ ವೇಳೆ ಹೆಲ್ಮೆಟ್ ಧರಿಸದ ಸವಾರನಿಗೆ ಹೊಸ ಹೆಲ್ಮೆಟ್ ವಿತರಿಸುವ ಮೂಲಕ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸಲಾಯಿತು. ಜಾಗೃತಿ ಜಾಥಾದಲ್ಲಿ ಪಡುಬಿದ್ರಿ ಪೇಟೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ರಸ್ತೆ ದಾಟಲು ಝೀಬ್ರಾ ಕ್ರಾಸಿಂಗ್ ಬಳಕೆಯ ಬಗ್ಗೆ ಪಡುಬಿದ್ರಿ ಎಸ್‌ಐ ಪ್ರಸನ್ನ ಅವರು ಮಾಹಿತಿ ನೀಡಿದರು. ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷೆ ತಸ್ನೀನ್ ಅರ‍್ಹಾ, ಪೂರ್ವಾಧ್ಯಕ್ಷ ರಮೀಝ್ ಹುಸೈನ್, ಗಣೇಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಪಿ. ಬಂಗೇರ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ರಾಜೇಶ್ವರಿ ಅವಿನಾಶ್, ಸ್ನೇಹಾ, ಮುದರಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಿಯಾಝ್ ಮುದರಂಗಡಿ, ಪ್ರೌಢಶಾಲಾ ಮುಖ್ಯಶಿಕ್ಷಕಿ ಗೀತಾ ಶೆಟ್ಟಿ, ಪ್ರಾಥಮಿಕ ವಿಭಾಗದ ಜಾನೆಟ್ ಕ್ಲಾರಾ, ರೋಟರಿ ಕ್ಲಬ್‌ನ ಪುಷ್ಪಾ, ಶೋಭಾ ಉಪಸ್ಥಿತರಿದ್ದರು.

ಕಾಪು : ದಂಡತೀರ್ಥ ಕಾಲೇಜು ಸಂಸ್ಥಾಪಕ ದಿ. ಡಾll ಕೆ.ಪ್ರಭಾಕರ ಶೆಟ್ಟಿ ಪುಣ್ಯತಿಥಿ ಆಚರಣೆ

Thumbnail
Posted On: 15 Jan 2025, 08:56 PM

ಕಾಪು : ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ದಿ. ಡಾll ಕೆ.ಪ್ರಭಾಕರ ಶೆಟ್ಟಿ ಇವರ ಪುಣ್ಯತಿಥಿಯನ್ನು ಬುಧವಾರದಂದು ಕಾಲೇಜಿನಲ್ಲಿ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾll ಕೆ.ಪ್ರಶಾಂತ್ ಶೆಟ್ಟಿಯವರು ಸಂಸ್ಥಾಪಕರ ಪುತ್ಥಳಿಗೆ ಮಾಲಾರ್ಪಣೆಗೈದರು. ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ಮಾತನಾಡಿ, ದಿ. ಡಾ|| ಕೆ. ಪ್ರಭಾಕರ ಶೆಟ್ಟಿಯವರು ಕಾಪುವಿನ ಹಿರಿಯ ವೈದ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದವರು. ಜೊತೆಗೆ ಶೈಕ್ಷಣಿಕವಾಗಿ ಪರಿಸರದ ಜನರಿಗೆ ವಿಜ್ಞಾನ ವಿಭಾಗದ ಪದವಿ ಪೂರ್ವ ಕಾಲೇಜನ್ನು ಸ್ಥಾಪಿಸಿ ಬಳಿಕ ಕಲಾ ಮತ್ತು ವಾಣಿಜ್ಯ ವಿಭಾಗವನ್ನಾಗಿ ಪರಿವರ್ತಿಸಿ, ಪ್ರತೀ ವರ್ಷ ಆರು ಲಕ್ಷದಷ್ಟು ವಿದ್ಯಾರ್ಥಿವೇತನವನ್ನು ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡಿದ್ದಲ್ಲದೆ ಈ ವಿದ್ಯಾ ಸಂಸ್ಥೆಯನ್ನು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗುವಂತೆ ಮಾಡಿದವರು. ಅವರ ಆದರ್ಶ ನಮಗೆಲ್ಲ ದಾರಿದೀಪವಾಗಬೇಕು ಹಾಗೂ ಅವರು ಕಟ್ಟಿ ಬೆಳೆಸಿದ ಈ ವಿದ್ಯಾಸಂಸ್ಥೆಯ ಪ್ರಗತಿಗೆ ನಾವೆಲ್ಲ ನಿರಂತರವಾಗಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು. ಸಮಾರಂಭದಲ್ಲಿ ಕಾಲೇಜು ಪ್ರಾಂಶುಪಾಲ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಪ್ರಾಥಮಿಕ ಶಾಲಾ ಮುಖ್ಯಸ್ಥರುಗಳಾದ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಕ್ರಾಂತಿ ಜಾನಪದ ಸಂಭ್ರಮ ಮಹಿಳೆಯರಿಗಾಗಿ ಉಡುಪಿ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ

Thumbnail
Posted On: 14 Jan 2025, 07:21 PM

ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ, ಕ.ಜಾ.ಪ. ಕುಂದಾಪುರ ತಾಲೂಕು ಹಾಗೂ ರೋಟರಿ ಸಮುದಾಯ ದಳ ಕೊರವಡಿ ಇದರ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಜಾನಪದ ಸಂಭ್ರಮ ಮಹಿಳೆಯರಿಗಾಗಿ ಉಡುಪಿ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ಮಂಗಳವಾರ ಶ್ರೀ ವಿಷ್ಣುಮೂತಿ೯ ದೇವಸ್ಥಾನದ ಸಂಭಾಗಣ ಕೊರವಾಡಿಯಲ್ಲಿ ನಡೆಯಿತು. ಕಾಯ೯ಕ್ರಮದ ಉದ್ಘಾಟನೆಯನ್ನು ಗ್ರಾ.ಪಂ ಅಧ್ಯಕ್ಷ ಆನಂದ ಪೂಜಾರಿ ನೆರವೇರಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಮಾತನಾಡಿ, ಜಾನಪದವು ನಮ್ಮ ದೇಶದ ಅಪೂವ೯ ಸಂಪತ್ತಾಗಿದೆ ಇದನ್ನು ಉಳಿಸಿ ಬೆಳೆಸಬೇಕು. ಸಂಕ್ರಾಂತಿಯನ್ನು ರಂಗೋಲಿ ಹಾಕುವ ಮೂಲಕ ಮನೆಗೆ ಸ್ವಾಗತಿಸುತ್ತಾರೆ. ಇದಕ್ಕೆ ಧಾಮಿ೯ಕ ಹಿನ್ನಲೆಯೊಂದಿಗೆ ಸಾಂಸ್ಕೃತಿಕ ಪರಂಪರೆಯಿದೆ ಎಂದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಕೋಟೇಶ್ವರ ಅಧ್ಯಕ್ಷತೆ ವಹಿಸಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಮಾತನಾಡಿ, ಜಾನಪದವು ನಮ್ಮ ದೇಶದ ಅಪೂವ೯ ಸಂಪತ್ತಾಗಿದೆ ಇದನ್ನು ಉಳಿಸಿ ಬೆಳೆಸಬೇಕು. ಸಂಕ್ರಾಂತಿಯನ್ನು ರಂಗೋಲಿ ಹಾಕುವ ಮೂಲಕ ಮನೆಗೆ ಸ್ವಾಗತಿಸುತ್ತಾರೆ. ಇದಕ್ಕೆ ಧಾಮಿ೯ಕ ಹಿನ್ನಲೆಯೊಂದಿಗೆ ಸಾಂಸ್ಕೃತಿಕ ಪರಂಪರೆಯಿದೆ ಎಂದರು.ಅಧ್ಯಕ್ಷರಾದ ಸತೀಶ್ ಎಂ.ನಾಯ್ಕ್, ಸಮುದಾಯ ದಳ ಕೊರವಡಿ ಅಧ್ಯಕ್ಷ ಕೆ ಸುರೇಶ್ ವಿಠಲವಾಡಿ, ಸ್ಥಾಪಕ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ , ಉಡುಪಿ ತಾಲೂಕು ಅಧ್ಯಕ್ಷೆ ಮಾಯಾ ಕಾಮತ್, ಜಿಲ್ಲಾ ಪದಾಧಿಕಾರಿಗಳಾದ ರಾಘವೇಂದ್ರ ಪ್ರಭು ಕವಾ೯ಲು, ನರಸಿಂಹ ನಾಯಕ್, ತೀಪು೯ಗಾರರಾದ ಸಿಂಧು ಐತಾಳ, ರವಿಕಟ್ಕರೆ ಮುಂತಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕುಂದಾಪುರ ತಾಲೂಕು ಅಧ್ಯಕ್ಷೆ ಸುಪ್ರಿತಾ ಪುರಾಣಿಕ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಸಂಧ್ಯಾ ಹೆಗಡೆ ನಿರೂಪಿಸಿದರು. ವಿಜೇತರಿಗೆ ನಗದು ಬಹುಮಾನ ದೊಂದಿಗೆ ಗೌರವಿಸಲಾಯಿತು.

ಕಳತ್ತೂರು : ಶ್ರೀ ಅಯ್ಯಣ್ಣ ಶಾಲೆಯ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಸಂಪನ್ನ

Thumbnail
Posted On: 14 Jan 2025, 04:01 PM

ಕಾಪು : ತಾಲೂಕಿನ ಕುತ್ಯಾರು ಕಳತ್ತೂರು ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಯಶಸ್ವಿಯಾಗಿ ಇತ್ತೀಚೆಗೆ ನಡೆಯಿತು. ಶಾಲೆಯ ಹಳೆವಿದ್ಯಾರ್ಥಿ, ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಶಾಲಾ ಸಂಚಾಲಕರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಶಾಲೆಯ ಶಿಕ್ಷಕರು, ಶಾಲೆಯ ಪ್ರೋತ್ಸಾಹಕರು, ಶಾಲೆಯ ವಿದ್ಯಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಐಸಿವೈಎಂ ಉದ್ಯಾವರ : ನೂತನ ಅಧ್ಯಕ್ಷರಾಗಿ ಪ್ರಿಲ್ಸನ್ ಮಾರ್ಟಿಸ್ ಆಯ್ಕೆ

Thumbnail
Posted On: 14 Jan 2025, 01:23 PM

ಉದ್ಯಾವರ : ಉದ್ಯಾವರ ಗ್ರಾಮದ ಅತ್ಯಂತ ಹಿರಿಯ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಕಥೋಲಿಕ್ ಯುವ ಸಂಚಲನ (ಐಸಿವೈಎಂ) ಉದ್ಯಾವರ ಘಟಕದ 55ನೇ ವರ್ಷದ ಅಧ್ಯಕ್ಷರಾಗಿ ಪ್ರಿಲ್ಸನ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ. ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳೂ, ಸಂಸ್ಥೆಯ ನಿರ್ದೇಶಕರು ಆಗಿರುವ ವo. ಫಾ. ಅನಿಲ್ ಡಿಸೋಜಾ ರವರ ಉಪಸ್ಥಿತಿಯಲ್ಲಿ 2025ನೇ ಸಾಲಿನ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರತಿಕ್ರಿಯೆಯು ನಡೆಯಿತು. ಕಾರ್ಯದರ್ಶಿಯಾಗಿ ಸ್ಟೆನಲ್ ಡಿಸಿಲ್ವಾ, ಉಪಾಧ್ಯಕ್ಷರಾಗಿ ರೋಲ್ವಿನ್ ಅಲ್ಮೆಡ, ಸಹ ಕಾರ್ಯದರ್ಶಿ ಸ್ಮಿತಾ ಒಲಿವೇರಾ, ಕೋಶಾಧಿಕಾರಿ ಗ್ಲ್ಯಾನಿಶ್ ಪಿಂಟೊ, ಪಿ ಆರ್ ಓ ಫರ್ಡಿನಂಡ್ ಡಿಸೋಜಾ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮರ್ವಿನ್ ಅಲ್ಮೆಡ, ಪ್ರಾರ್ಥನಾ ಕಾರ್ಯದರ್ಶಿಯಾಗಿ ಶರನ್ ಕ್ರಾಸ್ಟೊ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ 2024 ಸಾಲಿನ ಅಧ್ಯಕ್ಷ ಗ್ಲ್ಯಾನಿಶ್ ಪಿಂಟೊ, ಕಾರ್ಯದರ್ಶಿ ಸಾಷಾ ಮೊoತೆರೊ, ಸಲಹೆಗಾರರಾದ ಜೂಲಿಯಾ ಡಿಸೋಜ ಉಪಸ್ಥಿತರಿದ್ದರು.

ಕೆ.ಕೆ ಫ್ರೆಂಡ್ಸ್ ಶಿರ್ವ ಇದರ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಚಾರ್ಯ ಮೂಡುಮಟ್ಟಾರು ಆಯ್ಕೆ

Thumbnail
Posted On: 14 Jan 2025, 08:11 AM

ಶಿರ್ವ : ಕೆ.ಕೆ ಫ್ರೆಂಡ್ಸ್ ಶಿರ್ವ ಇದರ 2025 - 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಚಾರ್ಯ ಮೂಡುಮಟ್ಟಾರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಜೀವನ್ ಕೋಟ್ಯಾನ್ ಮತ್ತು ಶಿವಾನಂದ ಪೂಜಾರಿ, ಕಾರ್ಯದರ್ಶಿಯಾಗಿ ರಾಕೇಶ್ ಆಚಾರ್ಯ, ಸಹ ಕಾರ್ಯದರ್ಶಿಯಾಗಿ ಹರ್ಷಿತ್ ಪೂಜಾರಿ ಕಲ್ಲಟ್ಟ, ಕೋಶಾಧಿಕಾರಿಯಾಗಿ ಅಶ್ವಿನ್ ಜೋಯ್ ಡಿಸೋಜಾ, ಕ್ರೀಡಾ ಕಾರ್ಯದರ್ಶಿಯಾಗಿ ಸುಕೇಶ್ ಆಚಾರ್ಯ, ಸಹ ಕ್ರೀಡಾ ಕಾರ್ಯದರ್ಶಿಯಾಗಿ ಸುನಿಲ್, ಸಾಮಾಜಿಕ ಕಾರ್ಯದರ್ಶಿಯಾಗಿ ಮುಕೇಶ್ ಆಚಾರ್ಯ ಆಯ್ಕೆಯಾಗಿದ್ದಾರೆ. ಸದಸ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಶ್ರೀ ವಿಶ್ವೇಶ್ವರ ದೇವಸ್ಥಾನದ ಉಪ ಸಾನಿಧ್ಯವಾದ ವೀರಾಂಜನೇಯ ಗುಡಿಯ ಸಮೀಪದ 2 ಕೋಟಿ ಅನುದಾನದ ಕೆರೆ ಉದ್ಘಾಟನೆ

Thumbnail
Posted On: 13 Jan 2025, 07:02 PM

ಕಾಪು : ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ವಿಶ್ವೇಶ್ವರ ದೇವಸ್ಥಾನದ ಉಪ ಸಾನಿಧ್ಯವಾದ ವೀರಾಂಜನೇಯ ಗುಡಿಯ ಸಮೀಪದ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ 2 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಸೋಮವಾರ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಉಪಾಧ್ಯಕ್ಷರಾದ ಉಷಾ, ಶ್ರೀ ವಿಶ್ವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಅರುಣಾಕರ ಶೆಟ್ಟಿ, ಮಾಜಿ ಅಧ್ಯಕ್ಷರಾದ ಪ್ರಪುಲ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ ಸುವರ್ಣ, ಸತೀಶ್ ಗುಡ್ಡೆಚ್ಚಿ ಹಾಗೂ ಎಲ್ಲೂರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು : ಪರೀಕ್ಷಾ ಪೂರ್ವ ತಯಾರಿ ಕಾರ್ಯಗಾರ

Thumbnail
Posted On: 13 Jan 2025, 06:56 PM

ಉಡುಪಿ : ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು ಇದರ ರಜತ ಸಂಭ್ರಮ ಪ್ರಯುಕ್ತ ಉಪ್ಪೂರು ಸರಕಾರಿ ಪ್ರೌಢ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ "ಪರೀಕ್ಷಾ ಪೂರ್ವ ತಯಾರಿ ಕಾರ್ಯಗಾರ" ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಎ. ವಿ. ಬಾಳಿಗ ಆಸ್ಪತ್ರೆಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಮಾತನಾಡಿ, ಪರೀಕ್ಷೆ ಒಂದು ವ್ಯವಸ್ಥೆ, ಆತಂಕ ಬೇಡ. ಜೀವನ ಎನ್ನುವ ಪರೀಕ್ಷೆ ಅದಕ್ಕಿಂತ ದೊಡ್ಡದು. ಪರೀಕ್ಷೆ ಎನ್ನುವುದು ಒಂದು ಹಬ್ಬ. ಧೈರ್ಯದಿಂದ ಎದುರಿಸಿ ಜೀವನದ ಗುರಿ ಸಾಧಿಸಿ ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ಯುವ ವಿಚಾರ ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿ, ಉಪ್ಪೂರು ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಸಂಧ್ಯಾ ಸರಸ್ವತಿ ಭಟ್ ಶುಭ ಹಾರೈಸಿದರು. ವೇದಿಕೆಯ ಸದಸ್ಯರಾದ ರವಿಂದ್ರ ಕುಮಾರ್ , ಶಕುಂತಲಾ, ಕೇಶವ್, ವಿದ್ಯಾರ್ಥಿಗಳ ಪೋಷಕರು, ಶಾಲಾ ಅಧ್ಯಾಪಕರುಗಳು ಉಪಸ್ಥಿತರಿದ್ದರು. ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಸ್ವಾಗತಿಸಿ, ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.