Updated News From Kaup
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : 3ನೇ ಬೃಹತ್ ಉದ್ಯೋಗ ಮೇಳ ಸಂಪನ್ನ
Posted On: 17-11-2024 10:15PM
ಕಟಪಾಡಿ : ಮಣಿಪುರ ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಆಯೋಜನೆಯ ಎಂಆರ್ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಉಚಿತ 3ನೇ ಬೃಹತ್ ಉದ್ಯೋಗ ಮೇಳದ ಸಮಾರೋಪ ಕಾರ್ಯಕ್ರಮ ಭಾನುವಾರ ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನದಲ್ಲಿ ನೆರವೇರಿತು.
ಪಡುಬಿದ್ರಿ : ಕ್ರೀಡಾ ಮನೋಭಾವ ಬದುಕಿನಲ್ಲಿರಲಿ - ನವೀನಚಂದ್ರ ಜೆ ಶೆಟ್ಟಿ
Posted On: 17-11-2024 12:08PM
ಪಡುಬಿದ್ರಿ : ಕ್ರೀಡಾ ಸ್ಫೂರ್ತಿಯ ಗುಣಲಕ್ಷಣಗಳನ್ನು ದೃೆನಂದಿನ ಜೀವನಕ್ಕೆ ಅನ್ವಯಿಸಿದರೆ ಮೃೆದಾನ ಮತ್ತು ಬದುಕಿನಲ್ಲಿ ಯಶಸ್ವಿಗೆ ಕಾರಣವಾಗುತ್ತದೆ. ಉತ್ತಮ ಕ್ರೀಡಾ ಸ್ಪೂರ್ತಿಯನ್ನು ಹೊಂದಿರುವುದು ಒಬ್ಬ ನಾಯಕನ ಯಶಸ್ವಿನ ಗುಣಲಕ್ಷಣವಾಗಿದೆ. ಆಟಗಾರರು ತೀರ್ಪುಗಾರಿಕೆಗೆ ಗೌರವ ಸಲ್ಲಿಸುವುದರ ಮೂಲಕ ಪ್ರೀತಿ, ಸೌಹಾರ್ದತೆ ಪಂದ್ಯಕೂಟವಾಗಲಿ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ನವೀನಚಂದ್ರ ಜೆ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ನಡೆಯುವ "ಕಡಲ್ ಫಿಶ್ 2024" ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಪಲಿಮಾರು ಕನ್ನಡ ಸಾಹಿತ್ಯ ಸಮ್ಮೇಳನ - ಶಿಕ್ಷಕರಿಗೆ ಒ.ಒ.ಡಿ ಸೌಲಭ್ಯ
Posted On: 15-11-2024 10:45AM
ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಪಲಿಮಾರು ಸರಕಾರಿ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನ.16, ಶನಿವಾರ ಹಿರಿಯ ಸಾಮಾಜಿಕ ಕಾರ್ಯಕರ್ತ, ಸಂಘಟಕ,ಕೊರಗಭಾಷಾ ಸಂಶೋಧಕ ಸಾಹಿತಿ, ಪಾಂಗಾಳ ಬಾಬು ಕೊರಗ ಇವರ ಸರ್ವಾಧ್ಯಕ್ಷತೆಯಲ್ಲಿ ದಿನವಿಡೀ ವಿವಿಧ ಗೋಷ್ಠಿ/ಸಂವಾದ/ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ಜರುಗಲಿದೆ.
ನ.16-18 : ಪಡುಬಿದ್ರಿಯಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಕೂಟ - ಕಡಲ್ ಫಿಶ್ ಟ್ರೋಫಿ
Posted On: 14-11-2024 09:44PM
ಕಾಪು : ಕಡಲ್ ಫಿಶ್ ಕ್ರಿಕೆಟರ್ಸ್ ಆಶ್ರಯದಲ್ಲಿ ಪಡುಬಿದ್ರಿಯ ಬೋರ್ಡ್ ಶಾಲಾ ಮೈದಾನದಲ್ಲಿ ನ.16-18ರ ವರೆಗೆ ಪ್ರಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ತಂಡವೊಂದು ಭಾಗವಹಿಸುವ ರಾಷ್ಟ್ರಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಕಡಲ್ ಫಿಶ್ ಟ್ರೋಫಿ-2024 ನಡೆಯಲಿದೆ. ಕಾಪು ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ವಿಶ್ವಾಸ್ ವಿ.ಅಮೀನ್ ಮಾಹಿತಿ ನೀಡಿದರು. ಪಂದ್ಯಾಟದಲ್ಲಿ ಪ್ರಥಮ ಬಾರಿಗೆ ಶ್ರೀಲಂಕಾದ ತಂಡ ಪಾಲ್ಗೊಳ್ಳಲಿದೆ. ಅಲ್ಲದೆ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜ್ಯದ ಪ್ರತಿಷ್ಠಿತ ತಂಡಗಳು, ಉಭಯ ಜಿಲ್ಲೆಯ ಬಲಿಷ್ಠತಂಡಗಳು ಭಾಗವಹಿಸಲಿದ್ದು, ಒಟ್ಟು 16 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ.
ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರರಿಗೆ ಸಮಾಜ ಸೇವಾ ಮಾಣಿಕ್ಯ ರಾಷ್ಟೀಯ ಪ್ರಶಸ್ತಿ ಪ್ರದಾನ
Posted On: 13-11-2024 09:54PM
ಕಾಪು : ತುಳುಕೂಟ ಪುಣೆ (ರಿ.) ವತಿಯಿಂದ ಬೊಳ್ಳಿ ಪರ್ಬ-2024 ತುಳುನಾಡ ಜಾತ್ರೆ ತುಳುಕೂಟ ರಜತ ಸಂಭ್ರಮದ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರ ಸಮಾಜ ಸೇವೆಯನ್ನು ಪರಿಗಣಿಸಿ ಕೊಡಲ್ಪಡುವ 'ಸಮಾಜ ಸೇವಾ ಮಾಣಿಕ್ಯ' ರಾಷ್ಟೀಯ ಪ್ರಶಸ್ತಿಯನ್ನು ಪುಣೆಯ ಬಾಣೆರ್ ನ ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಲತಾ ಸುಧೀರ್ ಶೆಟ್ಟಿ ಆಡಿಟೋರಿಯಂನ ನಾಡೋಜ ಡಾ.ಜಿ ಶಂಕರ್ ವೇದಿಕೆಯಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿ, ಸನ್ಮಾನಿಸಲಾಯಿತು.
ಉತ್ಥಾನ ದ್ವಾದಶಿ ಬದುಕಿನ ಜಾಗೃತಿ ಸಾರುವ ತುಳಸಿ ಪೂಜೆ
Posted On: 13-11-2024 06:53AM
ಹಲವು ಔಷಧ ಗುಣವುಳ್ಳ ಪವಿತ್ರ ತುಳಸಿಯನ್ನು ಪೂಜಿಸುವ ತುಳಸಿ ಹಬ್ಬವನ್ನು ಭಾರತೀಯ ಹಿಂದೂ ಸಂಪ್ರದಾಯದಲ್ಲಿ ಆಚರಿಸುವ ಪದ್ಧತಿ ನೂರಾರು ವಷ೯ಗಳಿಂದ ರೂಢಿಯಲ್ಲಿದೆ. ಹಬ್ಬಗಳ ಮಾಸವಾದ ಕಾರ್ತಿಕ ಮಾಸದಲ್ಲಿ ಬರುವ ಹಬ್ಬಗಳಲ್ಲಿ ಇದೊಂದು ಪ್ರಸಿದ್ಧವಾದ ಹಬ್ಬ. ಉತ್ಥಾನ ದ್ವಾದಶಿ, ಕಾರ್ತಿಕ ಶುಕ್ಲ ದ್ವಾದಶಿಯಂದು ಆಚರಿಸಲಾಗುವ ಈ ಹಬ್ಬ ಪ್ರಮುಖವಾಗಿದೆ.
ಶ್ರೀ ಕ್ಷೇತ್ರ ಶಂಕರಪುರ : ಬೀದಿ ಶ್ವಾನ ಸಂರಕ್ಷಣಾ ಆಚರಣೆ
Posted On: 13-11-2024 06:34AM
ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾಸಂಕಲ್ಪದಂತೆ ಹೃದಯವಂತ ಪ್ರಾಣಿ ಪ್ರಿಯರ ಉಪಸ್ಥಿತಿಯಲ್ಲಿ ಬೀದಿ ಶ್ವಾನ ಸಂರಕ್ಷಣಾ ಆಚರಣೆಯನ್ನು ದೀಪ ಬೆಳಗಿಸಿ ಚಾಲನೆ ನೀಡಲಾಯಿತು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯಾರಿಗೆ ಅಭಿನಂದನೆ
Posted On: 12-11-2024 06:19PM
ಕಾಪು : ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯಾ ಅವರನ್ನು ಮಂಗಳವಾರ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಸಮ್ಮಾನಿಸಿ, ಗೌರವಿಸಲಾಯಿತು.
ಬಲೆ ತುಲು ಲಿಪಿ ಕಲ್ಪುಗ - ತುಳು ಲಿಪಿ ಕಲಿಕಾ ಕಾರ್ಯಾಗಾರದ ಉದ್ಘಾಟನೆ
Posted On: 12-11-2024 10:53AM
ಉಡುಪಿ : ಜೈ ತುಲುನಾಡ್ (ರಿ.) ಉಡುಪಿ ಘಟಕ ಹಾಗೂ ಕೊಡವೂರು ಹಳೆ ವಿದ್ಯಾರ್ಥಿ ಸಂಘ ಹಾಗೂ ಯುವಕ ಸಂಘ (ರಿ.) ಕೊಡವೂರು ಇದರ ಜಂಟಿ ಆಶ್ರಯದಲ್ಲಿ 'ಬಲೆ ತುಲುಲಿಪಿ ಕಲ್ಪುಗ' ತುಳು ಲಿಪಿ ಕಲಿಕಾ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಜರಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಡಾ| ಆಕಾಶರಾಜ್ ಜೈನ್ ಉದ್ಘಾಟಿಸಿ ಮಾತನಾಡಿ, ತುಳು ಭಾಷೆಯು ಸಾವಿರಾರು ವರ್ಷಗಳ ಇತಿಹಾಸವಿರುವಂತಹ ಭಾಷೆ. ಸಂಸ್ಥೆಯು ಇಲ್ಲಿಯವರೆಗೆ ಸುಮಾರು 30000ಕ್ಕಿಂತ ಹೆಚ್ಚು ಜನರಿಗೆ ತುಳು ಲಿಪಿಯನ್ನ ಉಚಿತವಾಗಿ ಕಲಿಸಲಾಗಿದೆ. ಈ ಕ್ರಾಂತಿ ಎಲ್ಲಿಯ ತನಕ ಮುಟ್ಟಿದೆ ಎಂದರೆ ಇಂದಿನ ರಾಜಕಾರಣಿಗಳು ಮತದಾನದ ಸಂದರ್ಭದಲ್ಲಿ ತುಳು ಶಾಲು ಧರಿಸಿ, ತುಳು ಲಿಪಿಯನ್ನ ಪ್ರಚಾರದಲ್ಲಿ ಬಳಸಿ ತುಳುಭಾಷೆಯಲ್ಲಿಯೇ ಮತ ಯಾಚಿಸುವಂತಾಗಿದೆ. ಇದಕ್ಕೆ ಮೂಲ ಕಾರಣ ಜೈತುಲುನಾಡ್(ರಿ.) ಸಂಸ್ಥೆಯ ಉತ್ಸಾಹಿ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ನಡೆಸಿದಂತಹ ಮಹತ್ತರ ಬದಲಾವಣೆ. ಮುಂದೊಂದು ದಿನ ತುಳುನಾಡಿನ ಜನರೇ ನಿಮಗೆ ಮಾತೃಭಾಷೆ ತುಳುಲಿಪಿಯ ಬಗ್ಗೆ ತಿಳಿದಿಲ್ಲವೇ ಎಂದು ತಮ್ಮವರಲ್ಲಿ ಕೇಳುವ ಕಾಲ ಬರಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಳಕ್ಕೆ ಅನುದಾನ ಹಸ್ತಾಂತರ
Posted On: 11-11-2024 09:08PM
ಕಾಪು : ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಸ್ಥಾನಕ್ಕೆ ಮೂರು ಲಕ್ಷದ ಅನುದಾನ ಮಂಜೂರುಗೊಂಡಿದ್ದು ಡಿ ಡಿ ಯನ್ನು ದೇವಸ್ಥಾನ ಸಮಿತಿ ಅವರಿಗೆ ಹಸ್ತಾಂತರಿಸಲಾಯಿತು.
