Updated News From Kaup

ನಾಪತ್ತೆಯಾದ ವ್ಯಕ್ತಿಯ ಮೃತದೇಹ ಎಲ್ಲೂರು ಇರಂದಾಡಿ ಹಾಡಿಯಲ್ಲಿ ಪತ್ತೆ

Posted On: 11-11-2024 07:32PM

ಪಡುಬಿದ್ರಿ : ನಾಪತ್ತೆಯಾಗಿದ್ದ ಕಟಪಾಡಿ ನಿವಾಸಿಯೋರ್ವರ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಎಲ್ಲೂರು ಗ್ರಾಮದ ಇರಂದಾಡಿಯ ಹಾಡಿಯೊಂದರಲ್ಲಿ ಭಾನುವಾರ ರಾತ್ರಿ ಪತ್ತೆಯಾಗಿದೆ.

ಕಾಪು : ವೀರ ವನಿತೆ ಒನಕೆ ಓಬವ್ವ ದಿನಾಚರಣೆ

Posted On: 11-11-2024 06:03PM

ಕಾಪು : ಒನಕೆ ಓಬವ್ವ ತಮ್ಮ ಅಸಾಧಾರಣ ಸಮಯ ಪ್ರಜ್ಞೆ, ಧೈರ್ಯ, ದೇಶಪ್ರೇಮಗಳ ಮೂಲಕ ಸಬಲ ನಾರೀಶಕ್ತಿ ಪ್ರತೀಕವಾಗಿದ್ದು ನಾವೆಲ್ಲರೂ ಅವರ ಆದರ್ಶಗಳನ್ನು ಅಳವಡಿಸಿಕೊಂಡು ದೇಶಕ್ಕೆ ಸೇವೆ ಸಲ್ಲಿಸಬೇಕು ಎಂದು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಕರೆ ನೀಡಿದರು. ಅವರು ಸೋಮವಾರ ತಹಶಿಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಒನಕೆ ಓಬವ್ವ ದಿನಾಚರಣೆಯಲ್ಲಿ ಮಾತನಾಡಿದರು.

ಬೆಂಗಳೂರಿನಲ್ಲಿ ನ.17ರಂದು ಆಯೋಜಿಸಿರುವ ನವದುರ್ಗಾ ಲೇಖನ ಯಜ್ಞದಲ್ಲಿ ಪಾಲ್ಗೊಳ್ಳಲು ಮನವಿ

Posted On: 11-11-2024 06:51AM

ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಆಯೋಜಿಸಲಾದ ನವದುರ್ಗಾ ಲೇಖನ ಯಜ್ಞದಲ್ಲಿ ಬೆಂಗಳೂರಿನ ಜನತೆ ಪಾಲ್ಗೊಳ್ಳುವ ದೃಷ್ಟಿಯಿಂದ ನ.17 ರಂದು ಬೆಂಗಳೂರಿನ ಗಾಯತ್ರಿ ವಿಹಾರ, ಗೇಟ್ ನಂ 4, ಪ್ಯಾಲೇಸ್ ಗ್ರೌಂಡ್ ಇಲ್ಲಿ ಹಮ್ಮಿಕೊಂಡಿರುವ ವಾಗೀಶ್ವರಿ ಪೂಜೆಯ ಮೂಲಕ ನವದುರ್ಗಾ ಲೇಖನವನ್ನು ಬರೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನವದುರ್ಗಾ ಲೇಖನ ಯಜ್ಞ ಬರೆದು ಕಾಪು ಅಮ್ಮನ ಕೃಪೆಗೆ ಪಾತ್ರರಾಗುವಂತೆ ಉಡುಪಿಯ ನಿಕಟ ಪೂರ್ವ ಶಾಸಕರಾದ ಕೆ ರಘುಪತಿ ಭಟ್ ಮನವಿ ಮಾಡಿದರು. ಅವರು ಕರ್ನಾಟಕ ಕರಾವಳಿ ಮಿತ್ರ ಮಂಡಳಿ ಹಾವನೂರು ಬಡಾವಣೆ, ನಾಗಸಂದ್ರ ಬೆಂಗಳೂರು ಇವರು ಬೆಂಗಳೂರಿನಲ್ಲಿ ರವಿವಾರ ಆಯೋಜಿಸಿದ ಕ್ರೀಡಾಕೂಟದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪಲಿಮಾರುವಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

Posted On: 10-11-2024 04:41PM

ಪಲಿಮಾರು : ಹೊಯ್ಗೆ ಫ್ರೆಂಡ್ಸ್ ಹೊಯ್ಗೆ ಪಲಿಮಾರು, ಶ್ರೀದೇವಿ ಫ್ರೇಂಡ್ಸ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ಎಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು, ರಕ್ತನಿಧಿ ವಿಭಾಗ ಕೆಎಂಸಿ ‌ಮಣಿಪಾಲ ಇವರ ಸಹಕಾರದಲ್ಲಿ ಶ್ರೀ ಗಣೇಶ ಮಂಟಪ‌ ಪಲಿಮಾರಿನಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಪಲಿಮಾರು ಮಹಾಲಿಂಗೇಶ್ವರ ದೇವಸ್ಥಾನ‌‌ ಇದರ ಪ್ರಧಾನ ಅರ್ಚಕರರಾದ ಶ್ರೀನಿವಾಸ ಉಡುಪ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಹೊಯ್ಗೆ ಫ್ರೇಂಡ್ಸ್ ಹಾಗೂ ಶ್ರಿದೇವಿ ಫ್ರೆಂಡ್ಸ್ ಕಳೆದ ಏಳು ವರ್ಷಗಳಿಂದ ರಕ್ತದಾನದಂತಹ ಮಹತ್ಕಾರ್ಯ ಆಯೋಜಿಸುವ ಮೂಲಕ ಇತರ ಸಂಘಟನೆಗಳಿಗೆ ಮಾದರಿಯಾಗಿದ್ದಾರೆ ಎಂದರು.

ಡಿ. 12 : ದಿ. ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ಸ್ಮರಣಾರ್ಥ ಕಾಪುವಿನಲ್ಲಿ ಬೃಹತ್ ರಕ್ತದಾನ ಶಿಬಿರ

Posted On: 09-11-2024 06:56AM

ಕಾಪು : ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಇವರ ನೇತೃತ್ವದಲ್ಲಿ ಡಿಸೆಂಬರ್ 12 ರಂದು ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ಸಮಾಜರತ್ನ ದಿ. ಕೆ. ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ದಿ. ವಸುಂದರಾ ಶೆಟ್ಟಿ ಸ್ಮರಣಾರ್ಥ ಅವರ ಕುಟುಂಬಿಕರ ಹಾಗೂ ಅವರ ಸರ್ವ ಧರ್ಮಗಳ ಅಭಿಮಾನಿ ಬಂಧುಗಳ ಸಹಕಾರದಿಂದ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.

ಉಡುಪಿ ಶಾಸಕರು ಶಾಸಕ ಸ್ಥಾನದ ಘನತೆಗೆ ತಕ್ಕಂತೆ ವರ್ತಿಸಿ, ಅಭಿವೃದ್ಧಿಯ ಕಡೆ ಗಮನಹರಿಸಲಿ : ಶರ್ಫುದ್ದಿನ್ ಶೇಖ್ ಮಜೂರು

Posted On: 09-11-2024 06:47AM

ಕಾಪು : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಶಾಸಕ ಸ್ಥಾನದ ಘನತೆಯನ್ನು ಮರೆತು ವರ್ತಿಸುತ್ತಿದ್ದಾರೆ. ಈ ವ್ಯಕ್ತಿ ಶಾಸಕರೋ ಅಥವಾ ಪುಡಿ ರೌಡಿಯೋ ಎಂಬ ಅನುಮಾನ ಮೂಡುತ್ತಿದೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ಅವ್ಯವಹಾರದ ಆರೋಪ ವ್ಯಾಪಕವಾಗಿ ಇವರ ಮೇಲಿದೆ ಎಂದು ಉಡುಪಿ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಶರ್ಫುದ್ದಿನ್ ಶೇಖ್ ಮಜೂರು ಹೇಳಿದ್ದಾರೆ.

ಶಿರ್ವ ರೋಟರಿ : ದೀಪಾವಳಿ ಸಂಭ್ರಮ - 2024

Posted On: 08-11-2024 07:22AM

ಶಿರ್ವ : ಹಬ್ಬಗಳ ರಾಜ "ದೀಪಾವಳಿ" ಭಾರತೀಯ ಸನಾತನ ಶ್ರೀಮಂತ ಸಂಸ್ಕೃತಿ, ಸೌಹಾರ್ದತೆಯ ಪ್ರತೀಕ ಎಂದು ಅನಿವಾಸಿ ಭಾರತೀಯ, ಬಂಟಕಲ್ಲು ಹೇರೂರಿನ ದತ್ತಾತ್ರೇಯ ಪಾಟ್ಕರ್ ನುಡಿದರು. ಅವರು ಬುಧವಾರ ಬಂಟಕಲ್ಲು ರೋಟರಿ ಭವನದಲ್ಲಿ ಶಿರ್ವ ರೋಟರಿಯಿಂದ ಏರ್ಪಡಿಸಿದ "ದೀಪಾವಳಿ ಸಂಭ್ರಮ-2024" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಲಯನ್ಸ್ ಕ್ಲಬ್ ಬಿ.ಸಿ.ರೋಡ್ ಬಂಟಕಲ್ಲು ವತಿಯಿಂದ ದೀಪಾವಳಿ ಸಂಭ್ರಮಾಚರಣೆ

Posted On: 08-11-2024 06:59AM

ಬಂಟಕಲ್ಲು : ಹಬ್ಬಗಳು ಕೇವಲ ಆಡಂಬರದ ಹಬ್ಬವಾಗಿದೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹಬ್ಬವಾಗಬೇಕು ಎಂದು 92ನೇ ಹೇರೂರು ವಿಕಾಸ ಸೇವಾ ಸಮಿತಿ ಅಧ್ಯಕ್ಷರಾದ ಮಾಧವ ಆಚಾರ್ಯರು ತಿಳಿಸಿದರು. ಅವರು ಲಯನ್ಸ್ ಕ್ಲಬ್ ಬಿ.ಸಿ.ರೋಡ್ ಬಂಟಕಲ್ಲು ವತಿಯಿಂದ ದೀಪಾವಳಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಜೈ ತುಲುನಾಡ್ ಉಡುಪಿ ಘಟಕದ ಉದ್ಘಾಟನೆ

Posted On: 07-11-2024 10:49PM

ಉಡುಪಿ : ತುಳುಲಿಪಿ ತುಳುಭಾಷೆ ಹಾಗೂ ಸಂಸ್ಕೃತಿಯ ಉಳಿವಿಗಾಗಿ ಕಳೆದ 10 ವರ್ಷಗಳಿಂದ ಯಾವುದೇ ಫಲಾಪೇಕ್ಷೆಯಿಲ್ಲದೆ ಶ್ರಮಿಸುತ್ತಿರುವ ಜೈತುಲುನಾಡ್ (ರಿ.) ಇದರ ಉಡುಪಿ ಘಟಕದ ಉದ್ಘಾಟನಾ ಸಮಾರಂಭವು ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿರಿ ತುಳು ಚಾವಡಿ ಉಡುಪಿ ಇದರ ಅಧ್ಯಕ್ಷರಾದ ಡಾ. ಗಣನಾಥ್ ಎಕ್ಕಾರ್, ಸಮಾಜದಲ್ಲಿ ಬೇರೆ ಭಾಷೆಗಳಿಗೆ ಆಡಳಿತಾತ್ಮಕ ರಕ್ಷಣೆ ಇದೆ. ಆದರೆ ತುಳುಭಾಷೆಗೆ ಆಡಳಿತಾತ್ಮಕ ರಕ್ಷಣೆ ಇಲ್ಲ. ಹಾಗಾಗಿ ತುಳುಭಾಷೆಯನ್ನು ರಕ್ಷಣೆಮಾಡಬೇಕಾದ ಅಗತ್ಯ ತುಳು ಸಂಘಟನೆಗಳಿಗಿದೆ ಆ ನಿಟ್ಟಿನಲ್ಲಿ ಜೈತುಲುನಾಡ್ (ರಿ.) ಸಂಘಟನೆ ತುಳುಭಾಷೆಗೆ ಕೊಡುತ್ತಿರುವ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು. ರಾಜಕಾರಣಿಗಳು ವೇದಿಕೆಯಲ್ಲಿ ಮಾತ್ರ ತುಳುವಿನ ಬಗ್ಗೆ ಮಾತನಾಡುತ್ತಾರೆ ಆದರೆ ತುಳು ಭಾಷೆಯ ಏಳಿಗೆಗೆ ಯಾರೂ ಬಲವಾಗಿ ನಿಲ್ಲುವುದಿಲ್ಲ ಹಾಗಾಗಿ ತುಳು ಭಾಷೆ ತುಳುವರ ಬದುಕು ಹಿಂದುಳಿಯುತ್ತಿದೆ. ಆದರೆ ತುಳುಪರ ಸಂಘಟನೆಗಳು ತುಳುಭಾಷೆಗೆ ಗಟ್ಟಿಯಾದ ರಕ್ಷಣೆ ಕೊಟ್ಟ ಸಲುವಾಗಿ ತುಳುಭಾಷೆ ಉಳಿಯುತ್ತಿದೆ ಎಂದು ಅವರು ಹೇಳಿದರು.

ಕಾಪು : ಕೊಪ್ಪಲಂಗಡಿಯಲ್ಲಿ ಅಖಂಡ ತ್ರಿಕಾಹ ನಾಮ ಸಂಕೀರ್ತನೋತ್ಸವಕ್ಕೆ ಚಾಲನೆ

Posted On: 07-11-2024 10:37PM

ಕಾಪು : ಶ್ರೀ ಜನಾರ್ದನ ದೇವಸ್ಥಾನದ ಆಡಳಿತಕ್ಕೊಳಪಟ್ಟ ಶ್ರೀ ವಾಸುದೇವ ಸ್ವಾಮಿ ಸೇವಾ ಭಜನಾ ಮಂಡಳಿ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನ ಕೊಪ್ಪಲಂಗಡಿ ಇಲ್ಲಿ ಗುರುವಾರ ಅಖಂಡ ತ್ರಿಕಾಹ ನಾಮ ಸಂಕೀರ್ತನೋತ್ಸವಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.