Updated News From Kaup
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ : ಬಾಲಾಲಯಗಳ ಶಿಲಾನ್ಯಾಸ
Posted On: 06 Mar 2025, 09:18 PM
ಪಡುಬಿದ್ರಿ : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಸಮಗ್ರ ಜೀರ್ಣೋದ್ದಾರವು ಶೀಘ್ರದಲ್ಲಿ ನಡೆಯಲ್ಲಿದ್ದು ಅದರ ಪೂರ್ವಭಾವಿಯಾಗಿ ಮಾ.6ರ ಪೂರ್ವಾಹ್ನ ವೃಷಭ ಲಗ್ನ ಸುಮೂರ್ತದಲ್ಲಿ ಶ್ರೀ ದೇವಳದ ತಂತ್ರಿಗಳಾದ ಕಂಬಳ ಕಟ್ಟ ಶ್ರೀ ರಾಧಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಶ್ರೀ ದೇವರ ಬಾಲಾಲಯಗಳ ಶಿಲಾನ್ಯಾಸದ ಧಾರ್ಮಿಕ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನೆರವೇರಿತು. ಈ ಸಂದರ್ಭ ಶ್ರೀ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.
ಮಾತೃಭಾಷೆಯೇ ಇತರ ಭಾಷಾ ಕಲಿಕೆಯ ತಳಹದಿ : ಬಿ.ಪುಂಡಲೀಕ ಮರಾಠೆ ಶಿರ್ವ
Posted On: 06 Mar 2025, 09:14 PM
ಶಿರ್ವ : ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿರುವ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ಹಿ.ಪ್ರಾ.ಶಾಲಾ ಶಿಕ್ಷಕ, ಪೋಷಕರ ಸಭೆ ಗುರುವಾರ ಜರಗಿತು. ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಶಿರ್ವ ಮಾತನಾಡಿ, ಮನೆಯ ವಾತಾವರಣ, ಸಂಸ್ಕಾರ, ಪರಿಸರ ಮಗುವಿನ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. 9 ವರ್ಷದ ಒಳಗೆ ಮಕ್ಕಳಿಗೆ ಕೊಡುವ ಬಾಲ್ಯದ ಸಂಸ್ಕಾರಯುಕ್ತ ಶಿಕ್ಷಣವೇ ಭವಿಷ್ಯದ ದಿಕ್ಸೂಚಿಯಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಣ ವ್ಯಕ್ತಿಯ ಭವಿಷ್ಯದ ಭದ್ರ ಬುನಾದಿಯಾಗಿದೆ. ಮಗುವಿಗೆ ಆರಂಭದ ಶಿಕ್ಷಣ ಮಾತೃಭಾಷೆಯಲ್ಲಿಯೇ ನೀಡಬೇಕು. ಮಾತೃಭಾಷೆಯೇ ಇತರ ಭಾಷಾ ಕಲಿಕೆಯ ತಳಹದಿ ಎಂದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ರಾಮದಾಸ್ ಪ್ರಭು ವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶಶಿಧರ ವಾಗ್ಲೆ, ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ ಪ್ರಭು ಪಾಲಮೆ, ಎಸ್ಡಿಎಮ್ಸಿ ಅಧ್ಯಕ್ಷ ರವೀಂದ್ರ ಪಾಟ್ಕರ್, ಶ್ರೀದೇವಳದ ಆಡಳಿತ ಮೊಕ್ತೇಸರ ಗಂಪದಬೈಲು ಜಯರಾಮ ಪ್ರಭು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಹಬ್ಬದ ಪ್ರಮಾಣಪತ್ರವನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಸಂಗೀತಾ ಆರ್. ಪಾಟ್ಕರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ರೇಶ್ಮಾ ಪರಿಚಯಿಸಿದರು. ಶಿಕ್ಷಕಿ ಸುಮತಿ ಸಹಕರಿಸಿದರು. ಶಿಕ್ಷಕಿ ಶಾಲಿನಿ ಜಿ. ನಿರೂಪಿಸಿ, ಶಿಕ್ಷಕಿ ವಿನುತಾ ಆರ್. ವಂದಿಸಿದರು.
ಬೆಳ್ಳೆ ಗ್ರಾ.ಪಂ.ಪರಿಸರದಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ
Posted On: 06 Mar 2025, 09:01 PM
ಶಿರ್ವ : ಬೆಳ್ಳೆ ಗ್ರಾಮ ಪಂಚಾಯತ್ ಬೆಳ್ಳೆ, ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ನಿಟ್ಟೆ ಇದರ "ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ-2025" ಬೆಳ್ಳೆಯಲ್ಲಿ ಜರುಗುತ್ತಿದ್ದು, ಬುಧವಾರ ವಿದ್ಯಾರ್ಥಿಗಳು ಬೆಳ್ಳೆ ಗ್ರಾಮ ಪಂಚಾಯತ್ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು. ಪರಿಸರ ಸ್ವಚ್ಛತಾ ಸೇವೆಗಾಗಿ ಶಿಬಿರಾರ್ಥಿಗಳನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಿಬಿರಾಧಿಕಾರಿಗಳು, ಸಂಸ್ಥೆಯ ಉಪನ್ಯಾಸಕರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿವರ್ಗ,ಆರೋಗ್ಯ ಇಲಾಖೆ ಕಾರ್ಯಕರ್ತರು, ಎಸ್ಎಲ್ಆರ್ಎಮ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶಾಭಿಷೇಕ ಸಂಪನ್ನ
Posted On: 05 Mar 2025, 11:08 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮನ ಬ್ರಹ್ಮಕಲಶಾಭಿಷೇಕವು ವಿಜ್ರಂಭಣೆಯಿಂದ ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಪನ್ನಗೊಂಡಿತು. ಕೊರಂಗ್ರಪಾಡಿ ವೇ.ಮೂ. ಕೆ ಜಿ. ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿಗಳ ನೇತೃತ್ವದಲ್ಲಿ ಅರ್ಚಕರಾದ ವೇ.ಮೂ. ಕಲ್ಯ ಶ್ರೀನಿವಾಸ ತಂತ್ರಿಗಳ ಸಹಯೋಗದೊಂದಿಗೆ ಬೆಳಿಗ್ಗೆ ಮಂಗಲಗಣಯಾಗ, ಶಾಂಭವೀಕಲಾ ಮಾತೃ ಕಾರಾಧನಮ್, ಕಾಲ ರಾತ್ರಿ ಕಲಾಮಾತೃಕಾ ಮಂಡಲಾರ್ಚನಮ್, ಕಾಪು ಮಾರಿಯಮ್ಮನ ಮಹಾ ಬ್ರಹ್ಮಕಲಶಾಭಿಷೇಕ, ಪ್ರತ್ಯಂಗಿರಾ ಕಲಾಮಾತೃಕಾ ಮಂಡಲಪೂಜನಮ್, ನ್ಯಾಸ ಪೂಜಾ ಮಹಾಪೂಜಾ ಮಂಗಲ ಮಂತ್ರಾಕ್ಷತೆ ಜರಗಿತು. ಪಲ್ಲ ಪೂಜೆ ನಡೆದ ಬಳಿಕ ಮಹಾ ಅನ್ನ ಸಂತರ್ಪಣೆ ನಡೆಯಿತು. ಉಡುಪಿ, ದ.ಕ, ಮುಂಬಯಿ, ವಿದೇಶದಿಂದಲೂ ಬಂದ ಲಕ್ಷಾಂತರ ಮಂದಿ ಭಕ್ತರು ಶ್ರೀ ಮಾರಿಯಮ್ಮನ ದರ್ಶನ ಪಡೆದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಬ್ರಹ್ಮ ಕಲಶೋತ್ಸವ ಸಮಿತಿಯ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾಪು ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರು ಗುರ್ಮೆ ಸುರೇಶ್ ಶೆಟ್ಟಿ, ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ ಕೊತ್ವಾಲ ಗುತ್ತು, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಮೆಂಡನ್, ರಘುಪತಿ ಭಟ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಮಾಧವ ಆರ್ ಪಾಲನ್, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಗಂಗಾಧರ ಸುವರ್ಣ, ಮನೋಹರ್ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ರವಿಕಿರಣ್, ಸದಸ್ಯರುಗಳಾದ ಕೆ.ಚಂದ್ರಶೇಖರ್ ಅಮೀನ್, ನಿರ್ಮಲ್ ಕುಮಾರ್ ಹೆಗ್ಡೆ, ಯೋಗೀಶ್ ವಿ. ಶೆಟ್ಟಿ, ರಾಜೇಶ್ ಕಾಂಚನ್, ವಿದ್ಯಾಧರ್ ಪುರಾಣಿಕ್, ಬ್ರಹ್ಮ ಕಲಶೋತ್ಸವ ಸಮಿತಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಉದಯ್ ಸುಂದರ ಶೆಟ್ಟಿ, ಜಯ ಸಿ. ಕೋಟ್ಯಾನ್, ಭಾಸ್ಕರ್ ಎಮ್. ಸಾಲಿಯಾನ್, ಭಗವಾನ್ ದಾಸ್ ಶೆಟ್ಟಿಗಾರ್, ಯೋಗೀಶ್ ಪಿ ಶೆಟ್ಟಿ ಬಾಲಾಜಿ, ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ಜೊತೆ ಕಾರ್ಯದರ್ಶಿ ಅರುಣ್ ಶೆಟ್ಟಿ ಪಾದೂರು, ಕೋಶಾಧಿಕಾರಿ ಸಿಎ ಸುದೇಶ್ ರೈ, ವ್ಯವಸ್ಥಾಪನಾ ಸಮಿತಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಸದಸ್ಯರುಗಳಾದ ಶ್ರೀನಿವಾಸ ತಂತ್ರಿ ಕಲ್ಯ, ಶೇಖರ್ ಸಾಲಿಯಾನ್, ಮನೋಹರ್ ರಾವ್, ರವೀಂದ್ರ ಮಲ್ಲಾರ್, ಶ್ರೀಧರ್ ಕಾಂಚನ್, ಜಯಲಕ್ಷ್ಮಿ ಶೆಟ್ಟಿ, ಚರಿತ ದೇವಾಡಿಗ, ಮುಂಬಯಿ ಸಮಿತಿ ಅಲ್ಲದೆ ಇತರ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾವಿರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು. ಧಾರ್ಮಿಕ ಸಭಾ ಕಾರ್ಯಕ್ರಮದ ಜೊತೆಗೆ ಖ್ಯಾತ ಸ್ಯಾಕ್ಸೋಫೋನ್ ವಾದಕಿ ಭಾರತಿ ಗೋಪಾಲ್ ಶಿವಪುರ ಇವರಿಂದ ಸ್ಯಾಕ್ಸೋಫೋನ್ ವಾದನ ಮತ್ತು ಖ್ಯಾತ ಸಂಗೀತ ಕಲಾವಿದ ರಘು ದೀಕ್ಷಿತ್ ಮತ್ತು ಬಳಗದವರಿಂದ ಸಂಗೀತ ಸಂಜೆ ಜರಗಿತು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಉಚ್ಚಂಗಿ ಬ್ರಹ್ಮಕಲಶಾಭಿಷೇಕ ; ಧಾರ್ಮಿಕ ಕಾರ್ಯಗಳು ಸಂಪನ್ನ
Posted On: 04 Mar 2025, 08:10 PM
ಕಾಪು : ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಜರುಗುತ್ತಿರುವ 8ನೇ ದಿನದಂದು ಉಚ್ಚಂಗಿ ಬ್ರಹ್ಮಕಲಶಾಭಿಷೇಕ ಸಹಿತ ಧಾರ್ಮಿಕ ಕಾರ್ಯಗಳು ಸಂಪನ್ನಗೊಂಡವು. ಧಾರ್ಮಿಕ ಕಾರ್ಯಗಳಲ್ಲಿ ಪೂರ್ವಾಹ್ನ ಭುವನೇಶ್ವರೀ ಸಹಸ್ರನಾಮಮಂತ್ರಯಾಗ, ವಿಜಯಪ್ರದ ಜಯಸೂಕ್ತಯಾಗ, ಚಾಮುಂಡಾಕಲಾ ಮಾತೃಕಾಮಂಡಲಾರಾಧನಮ್, ಚಂಡಿಕಾಸಪ್ತಶ್ಲೋಕಿ ಸಪ್ತಶತೀಯಾಗ, ಆಶ್ವಮೇಧಸೂಕ್ತಯಾಗ, ಪ್ರತ್ಯಕ್ಷ ಅಶ್ವಪೂಜಾ, ಉಚ್ಚಂಗಿ ಬ್ರಹ್ಮಕಲಶಾಭಿಷೇಕ ಧಾರ್ಮಿಕ ಕಾರ್ಯಗಳು ಜರುಗಿದವು. ಮಧ್ಯಾಹ್ನ ಮಹಾಪ್ರಸಾದ, ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು. ಸಂಜೆ ಸಾಕ್ಷಾತ್ ಗಂಗಾಭಾಗೀರಥೀ ಪೂಜನಮ್, ಕಾಳೀಕಲಾಮಾತೃಕಾ ಮಂಡಲೋಪಾಸನಮ್, ಶ್ರೀಮಾರಿಯಮ್ಮ ದೇವಿಯ ಪಂಚವಿಂಶತಿದ್ರವ್ಯಮೀಳಿತ ಸಹಸ್ರ ಕಲಶಪೂರಣಮ್, ಬ್ರಹ್ಮಕಲಶಾಧಿವಾಸಪೂಜಾ, ನವಕುಂಡಲಾಧಿವಾಸಯಾಗ, ಶ್ರೀಭೈರವೀಮಾತೃಕಾ ಮಂಡಲೋಪಾಸನಮ್, ಸರ್ವ ಮಂಗಲಕರ ಚಂಡೀಪುರಶ್ಛರಣಮ್. ಶ್ರೀತಾರಾಕಲಾಮಾತೃಕಾ ಮಂಡಲಪೂಜನಮ್ ಕಾರ್ಯಗಳು ಜರುಗಿದವು. ಧಾರ್ಮಿಕ ವಿಧಿ ವಿಧಾನಗಳು ಕೊರಂಗ್ರಪಾಡಿ ವೇ.ಮೂ.ಶ್ರೀ ಕೆ.ಜಿ. ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ.ಕೆ.ಪಿ. ಕುಮಾರಗುರು ತಂತ್ರಿಗಳ ನೇತೃತ್ವದಲ್ಲಿ ಅರ್ಚಕರಾದ ವೇ.ಮೂ. ಕಲ್ಯ ಶ್ರೀ ಶ್ರೀನಿವಾಸ ತಂತ್ರಿಗಳ ಸಹಯೋಗದಲ್ಲಿ ಜರುಗಿದವು. ಈ ಸಂದರ್ಭದಲ್ಲಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ವಿವಿಧ ಸಮಿತಿಗಳ ಪದಾಧಿಕಾರಿಗಳು, ಕ್ಷೇತ್ರದ ಭಗವದ್ಭಕ್ತರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ ವಿದ್ವಾನ್ ಗಣಪತಿ ಭಟ್ ಯಲ್ಲಪುರ, ವಿದ್ವಾನ್ ಶ್ರೀಪತಿ ಉಪಾಧ್ಯಾಯ ಕುಂಭಾಸಿ ಇವರಿಂದ "ಗಾನ ಆಖ್ಯಾನ" "ಗಂಗಾವತರಣ", ರಾತ್ರಿ ಪ್ರಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಮತ್ತು ಬಳಗದವರಿಂದ "ಸಂಗೀತಾಮೃತ" ಜರುಗಿತು.
ಭಕ್ತಿ ಮತ್ತು ಶೃದ್ಧೆಯಿಂದ ಮಾಡುವ ಕಾರ್ಯಕ್ಕೆ ದೇವರ ಅನುಗ್ರಹ ಪ್ರಾಪ್ತಿ : ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ
Posted On: 04 Mar 2025, 08:04 PM
ಕಾಪು : ದುಷ್ಟ ಶಕ್ತಿಗಳನ್ನು ನಾಶ ಮಾಡಿ ಶಿಷ್ಟರನ್ನು ಸದಾ ರಕ್ಷಿಸುವ ತಾಯಿ ಮಾರಿಯಮ್ಮ. ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಅದ್ಭುತವಾದ ಸೇವೆ ನಡೆಯುತ್ತಿದೆ. ದೇವಸ್ಥಾನದ ಮರದ ಕೆಲಸ, ಶಿಲಾ ಕೆಲಸಗಳು ಅದ್ಭುತವಾಗಿವೆ. ಇದು ಶ್ರದ್ಧೆಯಿಂದ ಮಾಡಿದ ಕೆಲಸ ಆಗಿದೆ. ಭಕ್ತಿ ಮತ್ತು ಶೃದ್ಧೆಯಿಂದ ಮಾಡುವ ಕಾರ್ಯಕ್ಕೆ ದೇವರ ಅನುಗ್ರಹವೂ ಪ್ರಾಪ್ತಿಯಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ನುಡಿದರು. ಅವರು ಮಂಗಳವಾರ ಕಾಪು ಶ್ರೀಹೊಸ ಮಾರಿಗುಡಿ ನೂತನ ದೇವಸ್ಥಾನದಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪುನ:ಪ್ರತಿಷ್ಠಾಪನಾಪೂರ್ವಕ ಸಹಸ್ರ ಕುಂಭಾಭಿಷೇಕ ಪ್ರಯುಕ್ತ ಜರುಗುತ್ತಿರುವ 8ನೇ ದಿನದ ಧಾರ್ಮಿಕ ಅನುಷ್ಠಾನಗಳ ಶುಭಾವಸರದಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ನಂತರ ಜರುಗಿದ ಧಾರ್ಮಿಕ ಸಭಾಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ಉಡುಪಿ ಜಿಲ್ಲೆ, ಕಾಪು ವಲಯ ಹಾಗೂ ಒಕ್ಕೂಟದ ವತಿಯಿಂದ ಪದಾಧಿಕಾರಿಗಳು ಗೌರವಿಸಿದರು. ದೇವಸ್ಥಾನ ಅಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಉಪಾಧ್ಯಕ್ಷ ಮಾಧವ ಪಾಲನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಹರಿಯಪ್ಪ ಕೊಟ್ಯಾನ್, ಕಾಪು ದಿವಾಕರ ಶೆಟ್ಟಿ, ಮಹೇಶ್ ಕೊಟ್ಯಾನ್, ಶಶಿಧರ ಶೆಟ್ಟಿ ಮಲ್ಲಾರು, ಯೋಗೀಶ್ ವಿ.ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು. ದಾಮೋದರ ಶರ್ಮಾ ಬಾರ್ಕೂರು ಮತ್ತು ಅಶೋಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿದ ನವಕುಂಭಗಳಲ್ಲಿ ಪೂಜೆಗೊಂಡ ಗಂಗಾಜಲ
Posted On: 03 Mar 2025, 07:28 PM
ಕಾಪು : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿಧಾನದಲ್ಲಿ ನವಕುಂಭಗಳಲ್ಲಿ ಪೂಜೆಗೊಂಡ ಗಂಗಾಜಲವನ್ನು ಪೂರ್ಣಕುಂಭದ ಮೆರವಣಿಗೆಯೊಂದಿಗೆ ಸೋಮವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ತರಲಾಯಿತು. ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ, ಫೆ. 14ರ ಶುಕ್ರವಾರದಂದು ಬೆಳಿಗ್ಗಿನ ಜಾವ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಿಂದ ಶೋಭಾಯಾತ್ರೆಯ ಮೂಲಕ ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿಧಾನಕ್ಕೆ ಗಂಗಾಜಲ ತರಲಾಗಿತ್ತು. ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರ ಮೂಲಕ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲಾಗಿತ್ತು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ದಂಪತಿಗಳು, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ದಂಪತಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಉದಯ ಸುಂದರ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಒಂಬತ್ತು ಮಂದಿ ಜೊತೆಗೆ ಗಂಗಾಜಲ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಬ್ರಹ್ಮಕಲಶೋತ್ಸವ - ಧಾರ್ಮಿಕ ಸಮಿತಿ ಕಾರ್ಯಾದ್ಯಕ್ಷ ಭಗವಾನ್ ದಾಸ್ ಶೆಟ್ಟಿಗಾರ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯ ಮಾಧವ ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ರಮೇಶ್ ಹೆಗಡೆ ಕಲ್ಯ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಹರೀಶ್ ನಾಯಕ್ ಕಾಪು, ರವಿ ಸುಂದರ ಶೆಟ್ಟಿ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಉದಯ ಸುಂದರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್ ಕುಮಾರ್ ಶೆಟ್ಟಿ, ಸಂದೀಪ್ ಶೆಟ್ಟಿ ಮುಂಬಯಿ, ಗೀತಾಂಜಲಿ ಸುವರ್ಣ, ಶಾಂತಲತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯಲ್ಲಿ ಭಜನಾತಂಡಗಳು, ಚೆಂಡೆ ಬಳಗ, ಮಹಿಳೆಯರು, ಪುರುಷರ ಸರತಿ ಸಾಲು ಮೆರವಣಿಗೆಗೆ ಮೆರುಗು ತಂದಿತು.
ಭಾರತದ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ದಂಪತಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ
Posted On: 02 Mar 2025, 04:26 PM
ಕಾಪು : ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ಕಾಪು ಮೂಲದ ದೇವಿಷಾ ಶೆಟ್ಟಿ ಅವರು ರವಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿದ ಸೂರ್ಯಕುಮಾರ್ ಯಾದವ್, ಕಳೆದ ಬಾರಿ ಜುಲೈನಲ್ಲಿ ದೇವಳಕ್ಕೆ ಬಂದಾಗ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿತ್ತು. ಅಂದು ದೇವಳದ ಅರ್ಚಕರು ಟಿ20 ಕ್ಯಾಪ್ಟನ್ ಆಗಬೇಕು ಎಂದು ಪ್ರಸಾದ ನೀಡಿ ಆಶೀರ್ವದಿಸಿದ್ದರು. ಈಗ ತಂಡದ ನಾಯಕನಾಗಿದ್ದೇನೆ. ದೇವಸ್ಥಾನ ಭೇಟಿ ಖುಷಿ ನೀಡಿದೆ. ಇವತ್ತು ಅಮ್ಮನ ಬಳಿ ಏನೂ ಕೇಳಲಿಲ್ಲ. ಧನ್ಯವಾದ ಹೇಳಲು ಬಂದಿದ್ದೇನೆ ಎಂದರು. ಈ ಸಂದರ್ಭ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಪ್ರಮುಖರು ಉಪಸ್ಥಿತರಿದ್ದರು.
ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಸರ್ಕಾರ, ಪಕ್ಷದಲ್ಲಿ ಸೂಕ್ತ ಸ್ಥಾನ ಮಾನಕ್ಕಾಗಿ ಉಪಮುಖ್ಯಮಂತ್ರಿಗೆ ಮನವಿ
Posted On: 02 Mar 2025, 04:06 PM
ಕಾಪು : ಕೆಪಿಸಿಸಿ ರಾಜ್ಯಾದ್ಯಕ್ಷರು,ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರು ಉಡುಪಿ ಜಿಲ್ಲೆಗೆ ಆಗಮಿಸಿದ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿದಾಗ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರ ನೇತೃತ್ವದಲ್ಲಿ ಜಿಲ್ಲೆಯ ಪಕ್ಷದ ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಸರ್ಕಾರದಲ್ಲಿ ಹಾಗೂ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಬೇಕೆಂದು ಮನವಿ ನೀಡಲಾಯಿತು. ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಂಜುನಾಥ್ ಭಂಡಾರಿ, ಜಯಪ್ರಕಾಶ್ ಹೆಗ್ಡೆ, ಅಶೋಕ್ ಕುಮಾರ್ ಕೊಡವೂರು, ಎಂ ಎ ಗಫೂರ್, ಅಲ್ಪಸಂಖ್ಯಾತರ ಘಟಕದ ನಾಯಕರಾದ ಇಸ್ಮಾಯಿಲ್ ಆತ್ರಾಡಿ, ವಹೀದ್ ಶೇಖ್, ಯು ಎಂ ಫಾರೂಕ್ ಚಂದ್ರನಗರ, ಹಬೀಬ್ ಆಲಿ, ಪ್ರಶಾಂತ್ ಜತ್ತನ್ನ, ವಿಲ್ಸನ್, ನಿಯಾಜ್, ರಿಯಾಜ್, ಫೈಝಲ್ ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಧರ್ಮದಿಂದಲೇ ವಿಶ್ವಕ್ಕೆ ಶಾಂತಿ - ಡಿ.ಕೆ.ಶಿವಕುಮಾರ್
Posted On: 02 Mar 2025, 03:40 PM
ಕಾಪು : ಕಾಪು ಮಾರಿಯಮ್ಮ ದೇವರ ಗದ್ದುಗೆ ಪ್ರತಿಷ್ಠಾನೆಯ ಮೊದಲ ಪ್ರಸಾದ ಸಿಕ್ಕಿದ್ದು ನನ್ನ ಭಾಗ್ಯ. ಸರಕಾರದ ಹಣವಿಲ್ಲದೆ ಭಕ್ತರು ಸ್ವ ಇಚ್ಛೆಯಿಂದ ನೀಡಿದ ಹಣದಲ್ಲಿ ಇಷ್ಟು ದೊಡ್ಡ ದೇವಳ ಕಟ್ಟಿದ್ದು ಅದ್ಭುತ. ಕಷ್ಟ ದೂರ ಮಾಡಿ, ರಕ್ಷಿಸುವ ಸನ್ನಿಧಾನ ಕಾಪು. ಇಲ್ಲಿ ಜಾತಿ ಇಲ್ಲ. ಎಲ್ಲರೂ ಮಾನವ ಜಾತಿ. ಧರ್ಮ ಎದ್ದು ಕಾಣುತ್ತಿದೆ. ಧರ್ಮದಿಂದಲೇ ವಿಶ್ವಕ್ಕೆ ಶಾಂತಿ. ಎಲ್ಲರಿಗೂ ಒಳಿತಾಗಲಿ ಎಂದು ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಆದಿತ್ಯವಾರ ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವರ ಮಹಾಸ್ವರ್ಣಪೀಠದೊಂದಿಗೆ (ಗದ್ದಿಗೆ) ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಮಾರಿಯಮ್ಮನ ಪ್ರತಿಷ್ಠೆ, ಶ್ರೀ ಉಚ್ಚಂಗಿದೇವಿಯ ಸ್ವರ್ಣ ಪೀಠದೊಂದಿಗೆ ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಉಚ್ಚಂಗಿದೇವಿಯ ಪ್ರತಿಷ್ಠೆಯಲ್ಲಿ ಪಾಲ್ಗೊಂಡ ಬಳಿಕ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭ ದೇವಳದ ವತಿಯಿಂದ ಡಿ.ಕೆ.ಶಿವಕುಮಾರ್ ರವರಿಗೆ ದೇವಳದ ತಂತ್ರಿವರ್ಯರು, ಪ್ರಧಾನ ಅರ್ಚಕರು ಅನುಗ್ರಹ ಪ್ರಸಾದ ನೀಡಿ, ಗೌರವಿಸಿದರು. ಡಿ.ಕೆ.ಶಿವಕುಮಾರ್ ರೂ.9,99,999ರೂ. ಮೌಲ್ಯದ ಸ್ವರ್ಣ ಲೇಪಿತ ರಜತ ಬ್ರಹ್ಮಕಲಶ ಸಮರ್ಪಿಸಿದರು. ಈ ಸಂದರ್ಭ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾಪು ಹೊಸಮಾರಿಗುಡಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಯಪ್ರಕಾಶ್ ಹೆಗ್ಡೆ, ಮಾಧವ ಪಾಲನ್, ಡಾ. ಸುನೀತಾ ಶೆಟ್ಟಿ, ಮಿಥುನ್ ರೈ,ಮುನಿಯಾಲು ಉದಯ ಕುಮಾರ್ ಶೆಟ್ಟಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಯೋಗೀಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತಿಕ್ ಬಾಯಲ್, ಕಾಪು ತಹಶಿಲ್ದಾರ್ ಡಾ.ಪ್ರತಿಭ ಆರ್.,ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ರವಿವಾರದ ಧಾರ್ಮಿಕ ವಿಧಿಗಳು ನಡೆದವು. ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.
