Updated News From Kaup

ಕಾಪು : ಮಲ್ಲಾರು ಮೌಲನಾ ಅಜಾದ್ ಮಾದರಿ ಶಾಲೆಯ ವಾರ್ಷಿಕ ಕ್ರೀಡಾಕೂಟ

Posted On: 07-11-2024 10:20PM

ಕಾಪು : ಇಲ್ಲಿನ ಮಲ್ಲಾರು ಮೌಲನಾ ಅಜಾದ್ ಮಾದರಿ ಶಾಲೆಯ ವಾರ್ಷಿಕ ಕ್ರೀಡಾಕೂಟವು ನ.7 ರಂದು ಉರ್ದು ಶಾಲೆಯ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೆಳಪು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಶಹನವಾಜ್ ಫಾಝಲೂದ್ದಿನ್ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಹೆಜಮಾಡಿ ಮೀನುಗಾರಿಕಾ ಬಂದರು ಕಾಮಗಾರಿ ಪೂರ್ಣಗೊಳಿಸಲು ಕಾಪು ಶಾಸಕರಿಂದ ಮನವಿ

Posted On: 05-11-2024 07:38PM

ಕಾಪು : ತಾಲೂಕಿನ ಹೆಜಮಾಡಿ ಬಂದರಿಗೆ 2021-22 ಸಾಲಿನಲ್ಲಿ 180 ಕೋಟಿ ಮಂಜುರಾಗಿದ್ದು ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಮತ್ತು ಸುತ್ತಮುತ್ತಲಿನ ಮೀನುಗಾರರಿಗೆ ತೊಂದರೆ ಆಗುತ್ತಿದ್ದು ಮೀನುಗಾರಿಕಾ ದೋಣಿ ತಂಗುದಾಣಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿ ಹೆಜಮಾಡಿ ಬಂದರಿನ ಕಾಮಗಾರಿಯನ್ನು ಕೂಡಲೆ ಕೈಗೊಳ್ಳಬೇಕೆಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮೀನುಗಾರಿಕಾ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ನವೆಂಬರ್ 24 : ಉದ್ಯಾವರದಲ್ಲಿ ಎಚ್ ಪಿ ಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ

Posted On: 05-11-2024 07:22PM

ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಲಯನ್ಸ್ ಜಿಲ್ಲೆ 317Cಯ ಲಯನ್ ದಂಪತಿಗಳಿಗೆ ವಿನೂತನ ರೀತಿಯ ಆದರ್ಶ ದಂಪತಿ ಸ್ಪರ್ಧೆ ಉದ್ಯಾವರ ಚರ್ಚ್ ವಠಾರದಲ್ಲಿ ನವಂಬರ್ 24 ಆದಿತ್ಯವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಚ್'ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯ ಪೋಸ್ಟರ್ ಅನ್ನು ಎಚ್'ಪಿಆರ್ ಫಿಲಂಸ್ ಮುಖ್ಯಸ್ಥ ಮತ್ತು ಎಲ್'ಸಿಯಫ್ ಕೋಆರ್ಡಿನೇಟರ್ ಲಯನ್ ಹರಿಪ್ರಸಾದ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ ಡಾ. ಶೇಕ್ ವಹಿದ್ ಉಡುಪಿ, ಕಾಪು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಮತ್ತು ಪತ್ರಕರ್ತ ರಾಕೇಶ್ ಕುಂಜೂರು, ಪ್ರಾಂತೀಯ ಅಧ್ಯಕ್ಷ ಲಯನ್ ಮೆಲ್ವಿನ್ ಆರನ್ನ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಪು ಪ್ರೆಸ್ ಕ್ಲಬ್‌ನಲ್ಲಿ ದೀಪಾವಳಿ ಸಂಭ್ರಮ

Posted On: 05-11-2024 07:09PM

ಕಾಪು : ದೀಪದ ಬೆಳಕು ಎಲ್ಲೆಡೆ ಪಸರಿಸುವಂತೆ ಪತ್ರಕರ್ತರು ಸುದ್ದಿಯ ಮೂಲಕ ಜ್ಞಾನದ ಅರಿವನ್ನು ಸಮಾಜಕ್ಕೆ ಪಸರಿಸುತ್ತಾರೆ. ಸುದ್ದಿ ಸಮಾಚಾರಗಳು ಜನರನ್ನು ಜಾಗೃತರನ್ನಾಗಿಸಿದೆ ಎಂದು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೆ. ಪಿ. ಶ್ರೀನಿವಾಸ ತಂತ್ರಿ ಮಡುಂಬು ಹೇಳಿದರು. ಅವರು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ದೀಪಾವಳಿ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನ. 8 : ಕಾಪು ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ

Posted On: 05-11-2024 06:49PM

ಕಾಪು : ಕಾಪು ಉಳಿಯಾರಗೋಳಿ ದಂಡತೀರ್ಥ ವಿದ್ಯಾ ಸಂಸ್ಥೆ ಸಂಚಾಲಿತ ದಂಡತೀರ್ಥ ಪಿಯು ಕಾಲೇಜಿನ  ರಜತ ಮಹೋತ್ಸವ ನವಂಬರ್ 8 ರಂದು ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕರಾದ ಡಾ. ಕೆ ಪ್ರಶಾಂತ್ ಶೆಟ್ಟಿ ಹೇಳಿದರು. ಅವರು ಮಂಗಳವಾರ ಉಳಿಯಾರಗೋಳಿ ದಂಡ ತೀರ್ಥ ವಿದ್ಯಾ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾಹಿತಿ ನೀಡಿದರು.

ಅಖಿಲ ಭಾರತ ದೈವರಾಧಾಕರ ಒಕ್ಕೂಟ ಉಡುಪಿ : ಸಭೆ ; ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 05-11-2024 11:56AM

ಉಡುಪಿ : ಅಖಿಲ ಭಾರತ ದೈವರಾಧಾಕರ ಒಕ್ಕೂಟ ಉಡುಪಿ (ರಿ.) ಇದರ ಸಭೆ ನ.4ರಂದು ಉಡುಪಿ ತೆಂಕುಪೇಟೆ ಉಡುಪಿ ವುಡ್ ಲಾಂಡ್ಸ್ ಹೋಟೆಲ್ ಹತ್ತಿರ ಇರುವ ಶ್ರೀ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ಜರಗಿತು.

ಪಡುಬಿದ್ರಿ ದೇವಳದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಲೇಖನ ಯಜ್ಞದ ಕುರಿತು ಸಭೆ

Posted On: 04-11-2024 06:59PM

ಪಡುಬಿದ್ರಿ : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪಡುಬಿದ್ರಿ ವ್ಯಾಪ್ತಿಯ ಎಲ್ಲಾ ಸಮುದಾಯದ ವತಿಯಿಂದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಆದಿತ್ಯವಾರ ಜರಗಿದ ಪೂರ್ವಭಾವಿ ಸಭೆಯನ್ನು 9 ಸಮುದಾಯದ 9 ಜನ ಮಹಿಳೆಯರಿಂದ 9 ನವದುರ್ಗ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ತುಳುಕೂಟ ಪುಣೆ ರಾಷ್ಟೀಯ ತುಳು ಪ್ರಶಸ್ತಿಗೆ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಆಯ್ಕೆ

Posted On: 03-11-2024 03:13PM

ಕಾಪು : ಮಹಾರಾಷ್ಟ್ರ ತುಳುಕೂಟ ಪುಣೆ (ರಿ.) 2024 ತುಳುನಾಡ ಜಾತ್ರೆ ಬೊಳ್ಳಿ ಪರ್ಬ ಕಾರ್ಯಕ್ರಮ ನ.10, ರವಿವಾರ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನ ಸಭಾಂಗಣದಲ್ಲಿ ಹಲವಾರು ಗಣ್ಯತಿಗಣ್ಯರ ಸಮ್ಮುಖದಲ್ಲಿ ಸಮಾಜ ಸೇವೆಗಾಗಿ ಕೊಡಲ್ಪಡುವ 2024 ರ ರಾಷ್ಟ್ರೀಯ ತುಳು ಪ್ರಶಸ್ತಿಗೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಸೇರಿ ನೂರಾರು ಪ್ರಶಸ್ತಿ ಪಡೆದ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಆಯ್ಕೆಯಾಗಿದ್ದಾರೆಂದು ತುಳುಕೂಟ ಇದರ ಅಧ್ಯಕ್ಷರು ದಿನೇಶ್ ಶೆಟ್ಟಿ ಕಳತ್ತೂರು ಉಪಾಧ್ಯಕ್ಷರಾದ ಉದಯ ಶೆಟ್ಟಿ ಕಳತ್ತೂರು ಪ್ರ.ಕಾರ್ಯದರ್ಶಿ ರೋಹಿತ್ ಡಿ ಶೆಟ್ಟಿ ನಗ್ರಿಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಕರ್ನಾಟಕ ರಾಜ್ಯೋತ್ಸವ -2024 ಬಾಲಪ್ರಶಸ್ತಿಗೆ ಅರ್ಜಿ ಆಹ್ವಾನ

Posted On: 03-11-2024 02:26PM

ಕಟಪಾಡಿ : ಇನ್ವೆಂಜರ್ ಫೌಂಡೇಷನ್ ಮಂಗಳೂರು, ಸೃಷ್ಠಿ ಫೌಂಡೇಶನ್ ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ, ಮಾನ್ಯ ಎಜ್ಯುಕೇಷನಲ್ ಆಂಡ್ ಕಲ್ಚರಲ್ ಫೌಂಡೇಶನ್ ಮಸ್ಕತ್ ವತಿಯಿಂದ ನೀಡಲಾಗುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ-2024 ಬಾಲಪ್ರಶಸ್ತಿಗೆ ಅರ್ಹ ಪ್ರತಿಭಾವಂತ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಳತ್ತೂರು ದಿವಾಕರ ಡಿ. ಶೆಟ್ಟಿಯವರ ಮನೆಯಲ್ಲಿ ಸೌಹಾರ್ದ ದೀಪಾವಳಿ ಆಚರಣೆ

Posted On: 02-11-2024 10:35PM

ಕಾಪು : ಸಮಾಜ ಸೇವಕ ಕೃಷಿಕ ಕಳತ್ತೂರು ದಿವಾಕರ ಡಿ. ಶೆಟ್ಟಿಯವರ ಮನೆಯಲ್ಲಿ ಕ್ರಿಶ್ಚಿಯನ್ ಬಾಂಧವರೊಂದಿಗೆ ಹಾಗೂ ಊರಿನವರೊಂದಿಗೆ ದೀಪಾವಳಿ ಹಬ್ಬ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.