Updated News From Kaup

ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ

Thumbnail
Posted On: 07 Dec 2024, 07:44 PM

ಉಡುಪಿ : ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಡಿ.8 ರಂದು ವಿಜಯಪುರ ಬಸವನಬಾಗೇವಾಡಿಯಲ್ಲಿ ನಡೆಯುವ ವಾಷಿ೯ಕೋತ್ಸವ ಮತ್ತು ಶರಣ ಸಮ್ಮೇಳನದಲ್ಲಿ ನೀಡಲಾಗುವ ಬಸವ ಶ್ರೀ ಪ್ರಶಸ್ತಿಗೆ ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಆಯ್ಕೆಯಾಗಿದ್ದಾರೆ. ಕಾಯ೯ಕ್ರಮವು ಬಸವಬಾಗೇವಾಡಿಯ ವಿರಕ್ತಮಠದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.6 - 12 : ಪಡುಕುತ್ಯಾರು ಆನೆಗುಂದಿ ಮಠದಲ್ಲಿ ಕೋಟಿ ಕುಂಕುಮಾರ್ಚನೆ

Thumbnail
Posted On: 07 Dec 2024, 06:36 PM

ಪಡುಕುತ್ಯಾರು : ಪಡುಕುತ್ಯಾರಿನಲ್ಲಿರುವ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ 2025 ರ ಜನವರಿ 6ರಿಂದ 12ರ ತನಕ ಕೋಟಿ ಕುಂಕುಮಾರ್ಚನೆಯು ಶ್ರೀ ಸರಸ್ವತೀ ಮಾತೃಮಂಡಳಿ, ಆನೆಗುಂದಿ ಪ್ರತಿಷ್ಠಾನದ ವ್ಯಾಪ್ತಿಯ ದೇವಸ್ಥಾನಗಳು ಹಾಗೂ ಸ್ಥಳೀಯ ಪಂಚಾಯತುಗಳ ಹಿಂದೂ ಸಮಾಜ ಬಾಂಧವರ ನೇತೃತ್ವದಲ್ಲಿ ನಡೆಯಲಿದೆ. ಮಹಾಸಂಸ್ಥಾನದ ವಿವಿಧ ಯೋಜನೆಗಳ ಸಾಕಾರ ಮತ್ತು ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ಕೇಪಳಪುಷ್ಪದೊಂದಿಗೆ ಶ್ರೀ ಸರಸ್ವತೀ ಯಾಗ ಶಾಲೆಯಲ್ಲಿ ನಡೆಯುವ ಕೋಟಿ ಕುಂಕುಮಾರ್ಚನೆಯ ವೇಳೆ ವಿವಿಧ ಹೋಮ-ಯಜ್ಞಗಳನ್ನುಆಯೋಜಿಸಲಾಗಿದೆ. ಈ ಕೋಟಿ ಕುಂಕುಮಾರ್ಚನೆಯ ಸುಸಮಯದಲ್ಲಿ ಅಷ್ಟಚಾತ್ವಾರಿಂಶತ್ ನಾರಿಕೇಳ ಗಣಯಾಗ, ರುದ್ರ ಯಾಗ ಮಹಾ ಮೃತ್ಯುಂಜಯ ಯಾಗ, ವಿಷ್ಣು ಹವನ, ಸೌರ ಸೂಕ್ತ ಹೋಮ, ಶ್ರೀ ಸರಸ್ವತೀ ಹೋಮ, ದುರ್ಗಾ ಹೋಮ, ವಿಶ್ವಕರ್ಮ ಹೋಮ, ನವಗ್ರಹ ಹೋಮ ದಶ ಸಹಸ್ರ ಕದಳಿ ಶ್ರೀ ಲಲಿತಾ ಸಹಸ್ರನಾಮಗಳೊಂದಿಗೆ ಹೋಮಗಳು, ಶ್ರೀ ಸೂಕ್ತ ಹೋಮ ಎಂಬೀ ಹೋಮ ಯಜ್ಞಗಳು ಇದೇ ವೇಳೆ ಸಂಪನ್ನಗೊಳ್ಳಲಿದೆ. ಕೋಟಿ ಕುಂಕುಮಾರ್ಚನೆಯ ಆಯೋಜನೆಯ ಬಗ್ಗೆ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಿದ್ದರು. ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಹಿಂದೂ ಸಮಾಜದ ಮುಖಂಡರುಗಳಾದ ಪ್ರಸಾದ್‌ ಶೆಟ್ಟಿ ಕುತ್ಯಾರು, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ.ಸುವರ್ಣ, ಲತಾ ಎಸ್‌ ಆಚಾರ್ಯ ಕುತ್ಯಾರು, ದಿವ್ಯಾ ಶೆಟ್ಟಿಗಾರ್‌, ಶರ್ಮಿಳಾ, ಮೋಹಿನಿ ಸಿ. ಹೆಗ್ಡೆ, ಇಂದಿರಾ ಆಚಾರ್ಯ, ಶಿವರಾಮ ಭಂಡಾರಿ, ಪ್ರಸಾದ್‌ ಶೆಟ್ಟಿ ವಳದೂರು, ಜನಾರ್ಧನ ಆಚಾರ್ಯ ಕಳತ್ತೂರು, ನವೀನ್‌ ಶೆಟ್ಟಿ ಕುತ್ಯಾರು, ಶೈಲೇಶ್‌ ಕುತ್ಯಾರು, ನಾಗರತ್ನ, ವಿನೋದ, ಗೀತಾ, ಲತಾ ಎಸ್‌. ಎಂ. ಮುಂತಾದವರು ಭಾಗವಹಿಸಿ, ಮಾಹಿತಿ ನೀಡಿದರು. ದಶಂಬರ 11ರಂದು ಸಭೆ : ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ ಮಹಾಸಂಸ್ಥಾನದ ವ್ಯಾಪ್ತಿಯ ದೇವಸ್ಥಾನಗಳ ಮುಖಂಡರು, ಸಹಟ್ರಸ್ಟ್‌ , ಸಂಸ್ಥೆಗಳ ಮುಖಂಡರು ಹಾಗೂ ಸ್ಥಳೀಯ ಗ್ರಾಮಗಳ ಹಿಂದೂ ಸಂಘಟನೆಗಳ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರ ಸಭೆಯು ದಶಂಬರ 11ರಂದು ಅಪರಾಹ್ನ 3 ಘಂಟೆಗೆ ಪಡುಕುತ್ಯಾರು ಆನೆಗುಂದಿ ಮಠದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಮಹಾಸಂಸ್ಥಾನದ ಶ್ರೀ ಸರಸ್ವತೀ ಮಾತೃಮಂಡಳಿಯ ಅಧ್ಯಕ್ಷೆ ಸಂಧ್ಯಾಲಕ್ಷ್ಮಣ ಆಚಾರ್ಯ ಉಡುಪಿ, ಬಿ.ಸೂರ್ಯಕುಮಾರ್ ಹಳೆಯಂಗಡಿ, ಅರವಿಂದ ವೈ. ಆಚಾರ್ಯ ಬೆಳುವಾಯಿ , ಬಿ.ಎಂ ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ ನ್ಯಾಯವಾದಿ ಕೆ. ಪ್ರಭಾಕರ ಆಚಾರ್ಯ ಕೋಟೆಕಾರು, ಕೆ. ನಾಗರಾಜ ಆಚಾರ್ಯ ಕಾಡಬೆಟ್ಟು, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ತ್ರಾಸಿ ಸುಧಾಕರ ಆಚಾರ್ಯ,ಗುರುರಾಜ ಕೆ.ಜೆ ಆಚಾರ್ಯ ಮಂಗಳೂರು, ಗಣೇಶ್‌ ಆಚಾರ್ಯ ಕೆಮ್ಮಣ್ಣು, ಬೆಳುವಾಯಿ ಸುಂದರ ಆಚಾರ್ಯ ಮಂಗಳೂರು, ಜಿ.ಟಿ ಆಚಾರ್ಯ ಮುಂಬಯಿ, ದಿನೇಶ್‌ ಆಚಾರ್ಯ ಕಿನ್ನಿಗೋಳಿ, ವಿದ್ವಾನ್‌ ಬ್ರಹ್ಮಶ್ರೀ ಅಕ್ಷಯ ಶರ್ಮಾ ಕಟಪಾಡಿ, ಕೇಶವ ಶರ್ಮಾ ಇರುವೈಲು, ಮನೋಜ್‌ ಶರ್ಮಾ ಕಟಪಾಡಿ, ಲೋಲಾಕ್ಷ ಶರ್ಮಾ ಕಟಪಾಡಿ, ದಯಾನಂದ ಆಚಾರ್ಯ ತೆಂಕನಿಡಿಯೂರು, ಉಷಾ ಜಿ.ಟಿ ಆಚಾರ್ಯ, ರಮಾ ನವೀನ್‌ ಆಚಾರ್ಯ ಕಾರ್ಕಳ ಆಶಾ ಎನ್‌ ಆಚಾರ್ಯ, ಭಾಗವಹಸಿದ್ದರು. ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಎಂ.ಬಿ ಆಚಾರ್‌ ಕಂಬಾರ್‌ ಸ್ವಾಗತಿಸಿ, ಕಾರ್ಯದರ್ಶಿ ಕನ್ಯಾನ ಜನಾರ್ದನ ಆಚಾರ್ಯ ವಂದಿಸಿದರು.

ಮಣಿಪಾಲ: ಮರ್ಡರ್ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

Thumbnail
Posted On: 06 Dec 2024, 11:14 AM

ಮಣಿಪಾಲ: ಲಕ್ಷ್ಮೀಂದ್ರನಗರದ ಬಳಿಯ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಚುಚ್ಚಿ ಹತ್ಯೆಗೈದ ಘಟನೆ ಶುಕ್ರವಾರ(ಡಿ.6) ನಡೆದಿದೆ. ಹತ್ಯೆಯಾದವನನ್ನು ಹೊನ್ನಾವರದ ಕಾಸಕೋಡು (ನಿವಾಸಿ ಶ್ರೀಧರ ನಾಯಕ) ಎಂದು ತಿಳಿದುಬಂದಿದೆ. ಘಟನೆ ಗುರುವಾರ ರಾತ್ರಿ ಆಗಿರುವ ಸಾಧ್ಯತೆ ಇದ್ದು. ಶುಕ್ರವಾರ ಬೆಳಗ್ಗೆ ವಾಯುವಿಹಾರಕ್ಕೆ ಹೋದಾಗ ಸ್ಥಳೀಯರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕುಮಾರ್, ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜ್, ಮಂಜುನಾಥ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇನ್ನಾದಲ್ಲಿ ಅದಾನಿ ವಿದ್ಯುತ್ ಟವರ್ ನಿರ್ಮಾಣದ ವಿರುದ್ದ ಅಹೋರಾತ್ರಿ ಧರಣಿ

Thumbnail
Posted On: 05 Dec 2024, 10:03 PM

ಕಾರ್ಕಳ : ತಾಲೂಕಿನ ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ನಂದಿಕೂರು ಅದಾನಿ ಪವರ್ ಪ್ರಾಜೆಕ್ಟ್ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿಯ ಮುನ್ಸೂಚನೆ ದೊರೆಯುತ್ತಿದ್ದಂತೆ ಬೃಹತ್ ಸಂಖ್ಯೆಯಲ್ಲಿ ಸೇರಿದ ಗ್ರಾಮಸ್ಥರು ಟವರ್ ನಿರ್ಮಾಣ ವಿರೋದಿ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮಸ್ಥರ ವಿರೋಧದ ನಡುವೆ ಕಾಮಗಾರಿ ಆರಂಭಿಸುವುದು ಖಂಡನೀಯ, ಯಾವ ಕಾರಣಕ್ಕೂ ಕಾಮಗಾರಿ ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಸಮಿತಿಯ ಅಧ್ಯಕ್ಷರಾದ ಅಮರನಾಥ ಶೆಟ್ಟಿ ಇನ್ನಾ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ತಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ, ಚಂದ್ರಹಾಸ ಶೆಟ್ಟಿ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕುಶ.ಆರ್. ಮೂಲ್ಯ, ಜಯ.ಎಸ್.ಕೋಟ್ಯಾನ್, ರಾಜಾ ಭಟ್, ಗಣಪತಿ ಹೆಗ್ಡೆ, ದೀಪಕ್ ಕಾಮತ್, ಆರ್.ಕೆ. ದಿವಾಕರ ಶೆಟ್ಟಿ, ಎಮ್.ಪಿ. ಮೊಯಿದಿನಬ್ಬ, ಹರೀಶ್ ಶೆಟ್ಟಿ, ಶುಭದ್ ರಾವ್, ಕೃಷ್ಣ ಕುಮಾರ್ ಶೆಟ್ಟಿ, ಯೋಗೀಶ್ ಇನ್ನಾ, ಅನಿತಾ ಡಿಸೋಜ, ಪ್ರದೀಪ್ ಬೇಲಾಡಿ, ಚಂದ್ರಹಾಸ ಶೆಟ್ಟಿಗಾರ್, ರಂಜಿತ್ ಸಿ.ಟಿ, ಸೂರಜ್ ಶೆಟ್ಟಿ, ಸುಹಾಸ್ ಕಾವ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಪು ಅಂಚೆ ಪ್ರಗತಿ ಪರಿಶೀಲನಾ ಸಭೆ

Thumbnail
Posted On: 05 Dec 2024, 09:49 PM

ಕಾಪು : ಇಲ್ಲಿನ ವಿಭಾಗೀಯ ಉಪ ಅಂಚೆ ಕಚೇರಿಯಲ್ಲಿ ಅಂಚೆ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು. ಉಡುಪಿ - ಕುಂದಾಪುರ ಉಪ ವಿಭಾಗಗಳ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ರವರು ಪ್ರಸಕ್ತ ವಿತ್ತೀಯ ವರ್ಷದಲ್ಲಿ ಕಾಪು ಹಾಗು ಅದರ ಶಾಖಾ ಅಂಚೆ ಕಚೇರಿಗಳು ಸಾರ್ವಜನಿಕರಿಗೆ ನೀಡುತ್ತಿರುವ ವಿವಿಧ ಜನ ಸ್ನೇಹಿ ಸೌಲಭ್ಯಗಳ ಮತ್ತು ಕ್ಲಪ್ತ ಕಾಲಕ್ಕೆ ಅಂಚೆ ಪತ್ರಗಳ ಬಟವಾಡೆಯ ಸಾಧನೆಯ ತುಲನಾತ್ಮಕ ಪರಿಶೀಲನಾ ಸಭೆ ನಡೆಸಿ, ಇನ್ನೂ ಹೆಚ್ಚಿನ ಜನರನ್ನು ಅಂಚೆ ಸೌಲಭ್ಯಗಳು ತಲಪುವಂತೆ ಕರೆ ನೀಡಿದರು. ಕಾಪು ಅಂಚೆ ಕಚೇರಿಯ ಎಲ್ಲಾ ಸಿಬ್ಬಂದಿ, ಕಳತ್ತೂರು ಅಂಚೆ ಪಾಲಕ ದಿವಾಕರ ಶೆಟ್ಟಿ, ಕಾಪು ಅಂಚೆ ಸಹಾಯಕರುಗಳಾದ ಪ್ರವೀಣ್ ಎರ್ಮಾಳು, ಶ್ರೀನಿವಾಸ್ ರಾವ್ ಪಣಿಯೂರು, ವಸಂತಿ ಎಸ್, ಮಜೂರು, ಮಲ್ಲಾರು, ಪಾದೂರು, ಉಳಿಯಾರಗೊಳಿ (ಕೈಪುಂಜಾಲು) ಶಾಖಾ ಅಂಚೆ ಪಾಲಕರು ಮತ್ತು ಸಹಾಯಕ ಅಂಚೆ ಪಾಲಕರು ಸಭೆಯಲ್ಲಿ ಭಾಗವಹಿಸಿದರು. ಅಂಚೆ ಪಾಲಕಿ ಯಶೋಧ ಕಾರ್ಯಕ್ರಮವನ್ನು ಆಯೋಜಿಸಿ, ನಿರ್ವಹಿಸಿದರು.

ಎಪ್ರಿಲ್ 11 ರಿಂದ ಕನ್ನಂಗಾರ್ ಉರೂಸ್ ; ಕರಪತ್ರ ಬಿಡುಗಡೆ

Thumbnail
Posted On: 05 Dec 2024, 09:38 PM

ಪಡುಬಿದ್ರಿ : ಕನ್ನಂಗಾರ್ ಜುಮ್ಮಾ ಮಸೀದಿ ಅಧೀನದಲ್ಲಿರುವ ಮೂರು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಶೈಖುನಾ ಸಿರಜುದ್ದೀನ್ ವಲಿಯುಲ್ಲಾಹಿ ದರ್ಗಾ ಕನ್ನಂಗಾರ್ ಉರೂಸ್ 2025ರ ಎಪ್ರಿಲ್ 11ರಿಂದ 19ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಉರೂಸ್‌ನ ಕರಪತ್ರ ಬಿಡುಗಡೆಗೊಳಿಸಲಾಯಿತು. ಕನ್ನಂಗಾರ್ ಜುಮ್ಮಾ ಮಸೀದಿ ಮುರ‍್ರಿಸ್ ಅಶ್ರಫ್ ಸಖಾಫಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಕನ್ನಂಗಾರ್ ಜುಮಾ ಮಸೀದಿ ಮುಂಭಾಗದಲ್ಲಿ ಅಂತ್ಯವಿಶ್ರಮ ಹೊಂದಿರುವ ಶೈಖುನಾ ಸಿರಜುದ್ದೀನ್ ವಲಿಯುಲ್ಲಾಹಿ ದರ್ಗಾ ಇತಿಹಾಸ ಪ್ರಸಿದ್ಧವಾಗಿದ್ದು, ಪ್ರತೀ ಮೂರು ವರ್ಷಗಳಿಗೊಮ್ಮೆ ನಡೆಯುವ ಉರೂಸ್ ಸಮಾರಂಭ ಈ ಭಾರಿ ನಡೆಯಲಿದ್ದು, ಈ ನಾಡಿನ ಸೌಹಾರ್ದಯುತವಾಗಿ ನಡೆಯುವ ಊರಿನ ಸಂಭ್ರಮವಾಗಿದೆ ಎಂದರು. ಉರೂಸ್ ಸಮಿತಿ ಅಧ್ಯಕ್ಷ ಹಾಜಿ ಗುಲಾಂ ಮುಹಮ್ಮದ್ ಹೆಜಮಾಡಿ ಮಾತನಾಡಿ, ಈ ಭಾರಿಯ ಉರೂಸ್ ಸಮಾರಂಭವು 2025ರ ಎಪ್ರಿಲ್ 11ರಿಂದ ನಡೆಯಲಿದ್ದು, ಉರೂಸ್‌ನಲ್ಲಿ ಸಾಮಾಜಿ, ಧಾರ್ಮಿಕ, ಜನಪ್ರತಿನಿಧಿಗಳು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಮಸೀದಿ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್, ಕಾರ್ಯದರ್ಶಿ ಹಾಜಿ ಶೇಖ್ ಅಬ್ದುಲ್ಲಾ ಮಿನಾ, ಕೋಶಾಧಿಕಾರಿ ಅಬ್ದುಲ್ ಖಾದರ್ ಹಾಜಿ, ಜತೆಕಾರ್ಯದರ್ಶಿ ಅಬ್ದುಲ್ ಮಜೀದ್ ಮೆಹರಾಜ್, ಅಬ್ದುಲ್ ರಹ್ಮಾನ್ ಬಾವಾ, ಮುಹಮ್ಮದ್ ಕಬೀರ್, ಉರೂಸ್ ಸಮಿತಿಯ ಉಪಾಧ್ಯಕ್ಷ ಹನೀಫ್ ಹಾಜಿ, ಇಬ್ರಾಹಿಂ ಸನಾ, ಕಾರ್ಯದರ್ಶಿ ಸುಲೈಮಾನ್ ನೂರಿ, ಹಮೀದ್ ಚಾಯ್ಸ್, ಕೋಶಾಧಿಕಾರಿಯಾಗಿ ಕಬೀರ್ ಹಾಜಿ ಉಪಸ್ಥಿತರಿದ್ದರು.

ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಕುಸುಮಾ ಕೃಷ್ಣಮೂರ್ತಿ ಕಾಮತ್

Thumbnail
Posted On: 05 Dec 2024, 07:29 PM

ಉಡುಪಿ : ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಇದರ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ವಿವಿಧ ಸಾಧಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಹುಮುಖ ಪ್ರತಿಭೆಯ ಸಾಧಕಿ ಕುಸುಮಾ ಕೃಷ್ಣಮೂರ್ತಿ ಕಾಮತ್ ಇವರ ಸಾಧನೆಯನ್ನು ಗಮನಿಸಿ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇವರು,ಕಲೆ ಸಾಹಿತ್ಯ ನಾಟಕ ಜನಪದ ಮತ್ತು ಮಿಮಿಕ್ರಿ ರಂಗದಲ್ಲಿ ವಿಶೇಷವಾದ ಸಾಧನೆಯನ್ನು ಮಾಡಿದ್ದಾರೆ ಪ್ರಸ್ತುತ ಕನ್ನಡ ಜನಪದ ಪರಿಷತ್ ಉಡುಪಿ ತಾಲೂಕಿನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು ಸಂಘ-ಸಂಸ್ಥೆಯಲ್ಲಿ ಸಕ್ರಿಯರಾಗಿದ್ದಾರೆ. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರಾದ ಗಣೇಶ ಶೆಣೈ, ಕೆ.ಹೆಚ್ ಮಂಜುನಾಥ್, ಉಮೇಶ್ ಉಪಸ್ಥಿತರಿದ್ದರು.

ಕನ್ನಡ ಜಾನಪದ ಪರಿಷತ್ : ಕನ್ನಡ ಜಾನಪದ ರಾಜ್ಯೋತ್ಸವ ; ಅಭಿನಂದನಾ ಕಾರ್ಯಕ್ರಮ

Thumbnail
Posted On: 04 Dec 2024, 07:21 PM

ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು - ಉಡುಪಿ ಜಿಲ್ಲಾ ಘಟಕ ಮತ್ತು ಉಡುಪಿ ತಾಲೂಕು ವತಿಯಿಂದ ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ಬುಧವಾರ ಹನುಮಂತನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ, ಜಾನಪದವು ಎಲ್ಲಾ ಸಾಹಿತ್ಯಕ್ಕೆ ತಾಯಿಬೇರಾಗಿದೆ. ನಮ್ಮ ಜನಪದರು ನೀಡಿದ ಅಮೂಲ್ಯ ಕೊಡುಗೆಗಳನ್ನು ದಾಖಲಿಸಿ ಅವುಗಳನ್ನು ಮುಂದಿನ ಜನಾಂಗಕ್ಕೆ ತಿಳಿಸುವ ಕಾರ್ಯ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಜಾನಪದ ಪರಿಷತ್ ರಾಜ್ಯಾದ್ಯಂತ ಕೆಲಸ ಮಾಡುತ್ತಿದ್ದು ಉಡುಪಿ ಜಿಲ್ಲಾ ಘಟಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಮಲ್ಲಿಕಾ ವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಖ್ಯಾತ ಜಾನಪದ ಕಲಾವಿದರಾದ ವಾಸುದೇವ ಬನ್ನಂಜೆ ಹಾಗೂ ಕನ್ನಡ ಅಧ್ಯಾಪಕರಾದ ರೇಖಾ ಅವರನ್ನು ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಭಾಗದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಶಾಲೆಯ ವಿದ್ಯಾರ್ಥಿಗಳಾದ ದೀಕ್ಷಾ ಅಮೀನ್' ಮತ್ತು ಸೋನಿಯವರನ್ನು ಗೌರವಧನದೊಂದಿಗೆ ಅಭಿನಂದಿಸಲಾಯಿತು. ತಾಲೂಕು ಅಧ್ಯಕ್ಷೆ ಮಾಯಾ ಕಾಮತ್ ಶುಭ ಹಾರೈಸಿದರು. ವೇದಿಕೆಯಲ್ಲಿ ತಾಲೂಕು ಕಾಯ೯ದಶಿ೯ ಕುಸುಮ ಕಾಮತ್, ಜಿಲ್ಲಾ ಪದಾಧಿಕಾರಿ ಮಹಮ್ಮದ್ ಫಾರುಕ್ ಉಪಸ್ಥಿತರಿದ್ದರು. ಜಿಲ್ಲಾ ಸಂ.ಕಾಯ೯ದಶಿ೯ ರಾಘವೇಂದ್ರ ಪ್ರಭು, ಕವಾ೯ಲು ನಿರೂಪಿಸಿದರು. ಶಿಕ್ಷಕ ಜಯಪ್ರಕಾಶ್ ವಂದಿಸಿದರು.

ಕಾಪು : ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಫ್ಯಾಕ್ಟರಿಗೆ ಬೀಗ

Thumbnail
Posted On: 04 Dec 2024, 05:16 PM

ಕಾಪು : ಪರಿಸರ ಮಾಲಿನ್ಯ ತಡೆಗಟ್ಟಲು ಕೈಗೊಳ್ಳಬೇಕಾದ ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಪರಿಸರದಲ್ಲಿ ದುರ್ವಾಸನೆ ಬೀರುತ್ತಿದ್ದ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಷ್ ಫ್ಯಾಕ್ಟರಿಯನ್ನು ಕಾಪು ತಹಶಿಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಬುಧವಾರ ಮುಟ್ಟುಗೋಲು ಹಾಕಿದೆ. ಈ ಕಾರ್ಖಾನೆಯನ್ನು ಪರಿಶೀಲಿಸಿ ಅಲ್ಲಿಯ ಅವ್ಯವಸ್ಥೆಯನ್ನು ಮನಗಂಡ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇದು ಪರಿಸರಕ್ಕೆ ಮಾರಕವಾದ ತ್ಯಾಜ್ಯಗಳನ್ನು ಹೊರಕ್ಕೆ ಬಿಡುತ್ತಿದೆ ಆದ್ದರಿಂದ ತಕ್ಷಣವೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಬಹಳ ವರ್ಷಗಳ ಹಿಂದೆಯೇ ಪರಿಸರಮಾಲಿನ್ಯ ಇಲಾಖೆ ಶಿಫಾರಸು ಮಾಡಿತ್ತು. ಉಡುಪಿ ಜಿಲ್ಲಾಧಿಕಾರಿಯವರು ಈ ವರದಿಯ ಆಧಾರದ ಮೇಲೆ ಈ ತವಕ್ಕಲ್ ಫಿಷ್ ಫ್ಯಾಕ್ಟರಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ತಹಶಿಲ್ದಾರ್ ಗೆ ಆದೇಶ ಮಾಡಿದ್ದರು.ಅದರಂತೆ ಕಾಪು ತಹಶಿಲ್ದಾರ್ ಕ್ರಮ ಕೈಗೊಂಡಿದ್ದಾರೆ. ತಹಶಿಲ್ದಾರ್ ಡಾ.ಪ್ರತಿಭಾ ಆರ್ ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ಯಾವುದೇ ಫ್ಯಾಕ್ಟರಿ ಪರಿಸರ ಮಾಲಿನ್ಯ ಉಂಟು ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದ್ದರೆ ಅದನ್ನು ತಕ್ಷಣವೇ ಮುಚ್ಚಲು ಶಿಫಾರಸು ಮಾಡಲಾಗುವುದು. ಉದ್ಯಮ-ಅಭಿವೃದ್ದಿ ಎಷ್ಟು ಮುಖ್ಯವೋ ಪರಿಸರ ರಕ್ಷಣೆಯೂ ಅಷ್ಟೇ ಮುಖ್ಯ. ಕಾರ್ಖಾನೆಗಳವರು ಸೂಕ್ತ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯೊಂದಿಗೆ ಉದ್ಯಮ ನಡೆಸಿದರೆ ನಮ್ಮ ಅಭ್ಯಂತರವೇನಿಲ್ಲ. ತಾಲ್ಲೂಕಿನ ನೆಲ-ಜಲದ ರಕ್ಷಣೆ ನನ್ನ ಆದ್ಯತೆ. ಇವತ್ತಿನ ಈ ಸೀಝ್ ಉಳಿದ ಫ್ಯಾಕ್ಟರಿ ಮಾಲೀಕರುಗಳಿಗೆ ಎಚ್ಚರಿಕೆಯ ಗಂಟೆಯಾಗಬೇಕು ಎಂದು ಹೇಳಿದರು. ಕಾಪು ತಹಶಿಲ್ದಾರ್ ರವರ ಈ ದಿಟ್ಟ ನಡೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿರುವ ಜೊತೆಗೆ ಕಾಪು ತಾಲ್ಲೂಕಿನಲ್ಲಿ ಸರಕಾರದ ಯಾವುದೇ ಮಾನದಂಡಗಳನ್ನು ಪಾಲಿಸದ ಹಲವಾರು ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿದ್ದು ಅವುಗಳ ವಿರುದ್ಧ ಇಂತಹುದೇ ಕ್ರಮ ಜರಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಕೀರ್ತಿಕುಮಾರ್ ರವರಿಗೆ ಸೀಝ್ ಮಾಡಿದ ಫ್ಯಾಕ್ಟರಿಯ ಬೀಗದ ಕೀ ಹಸ್ತಾಂತರಿಸಲಾಯಿತು. ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ವೆಂಕಟೇಶ್, ಪೋಲೀಸ್ ಇನ್ಸ್ಪೆಕ್ಟರ್, ಮೆಸ್ಕಾಂ ಎಸ್ ಒ ಅಜಯ್, ಪುರಸಭಾ ಅಧಿಕಾರಿ ಉಪಸ್ಥಿತರಿದ್ದರು.

ಶಿರ್ವ : ಪಂಜಿಮಾರು ಕೋಡು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ

Thumbnail
Posted On: 03 Dec 2024, 11:30 PM

ಶಿರ್ವ : ಹಗಲು ಹೊತ್ತಿನಲ್ಲಿಯೇ ಚಿರತೆ ಕಂಡು ಬಂದ ಘಟನೆ ಮಂಗಳವಾರ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಜಿಮಾರು ಕೋಡು ಪರಿಸರದಲ್ಲಿ ನಡೆದಿದೆ. ಪಂಜಿಮಾರು ಸೋದೆ ಮಠದ ಬಳಿ ರಸ್ತೆಯಲ್ಲಿ ಬೈಕ್ ಸವಾರನೋರ್ವ ರಸ್ತೆಯಲ್ಲಿ ಸಾಗುವಾಗ ಚಿರತೆ ಅಡ್ಡ ಬಂದ ಘಟನೆ ನಡೆದಿದೆ. ಹಲವು ದಿನಗಳಿಂದ ಪಡುಬೆಳ್ಳೆ, ಕುರ್ಕಾಲು, ಕುಂಜಾರು ಭಾಗದಲ್ಲಿ ಚಿರತೆಯ ಹಾವಳಿ ಬಗ್ಗೆ ದೂರುಗಳಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕೆಲವು ದಿನಗಳಿಂದ ಹಲವರ ಮನೆಗಳ ನಾಯಿಗಳೂ ಮಾಯವಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಶೆಟ್ಟಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ರಕ್ಷಕ ಚರಣ್ ಜೋಗಿ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಬೋನು ತಂದು ಇರಿಸಲಾಗಿದೆ. ಆದಷ್ಟು ಬೇಗ ಸಮಸ್ಯೆ ಪರಿಹರಿಸುವಂತೆ ಈ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ