Updated News From Kaup

ಕಾಪು ಹೊಸ ಮಾರಿಗುಡಿ : ನವದುರ್ಗಾ ಲೇಖನ ಯಜ್ಞ ಪ್ರಯುಕ್ತ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಚಾಲನೆ

Posted On: 29-10-2024 07:29PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ನವದುರ್ಗಾ ಲೇಖನ ಯಜ್ಞ ಸಮಿತಿಯ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ಮತ್ತು ಸಾನಿಧ್ಯ ವೃದ್ಧಿಗಾಗಿ ಹಮ್ಮಿಕೊಂಡಿರುವ ನವದುರ್ಗಾ ಲೇಖನ ಯಜ್ಞ ಪ್ರಯುಕ್ತ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಮಂಗಳವಾರ ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ದೇಶ ವಿದೇಶದ ಭಕ್ತರನ್ನು ಒಂದುಗೂಡಿಸುವ ಪ್ರಯತ್ನಕ್ಕೆ ಕಾಪು ಶ್ರೀ ಹೊಸಮಾರಿಗುಡಿ ನಾಂದಿ ಹಾಡಿದೆ. ಲೇಖನ ಯಜ್ಞದ ಪ್ರತಿ ಅಕ್ಷರದಲ್ಲೂ ದೇವರ ಸಾನಿಧ್ಯವಿದೆ. ಅಕ್ಷರದ ಮೂಲಕ ತಾಯಿಯ ಆರಾಧನೆ. ಎಲ್ಲರಿಗೂ ಒಳಿತಾಗಲಿ ಎಂದು ಹಾರೈಸಿದರು. ದಾರಿ ತಪ್ಪುತ್ತಿರುವ ಯುವ ಪೀಳಿಗೆಗ ಲೇಖನ ಯಜ್ಞ ಅನಿವಾರ್ಯ. ಧರ್ಮ ಮತ್ತು ದೇವರ ಬಗೆಗಿನ ಭಕ್ತಿಯು ನಮ್ಮನ್ನು ಸರಿ ದಾರಿಯತ್ತ ನಡೆಯಲು ಪ್ರೇರಕವಾಗಿದೆ ಎಂದು ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಕಾಪು ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹ‌ರ್ ಎಸ್. ಶೆಟ್ಟಿ ಆಯ್ಕೆ

Posted On: 29-10-2024 07:15AM

ಕಾಪು : ಇಲ್ಲಿನ ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ಮನೋಹರ್ ಎಸ್. ಶೆಟ್ಟಿ ಆಯ್ಕೆಯಾಗಿದ್ದಾರೆ.

ಪಡುಬಿದ್ರಿ : ರಾಗ್ ರಂಗ್ ಕಲ್ಚರಲ್ ಹಾಗೂ ಸೋರ್ಟ್ಸ್ ಕ್ಲಬ್ - ಗೂಡುದೀಪ ಸ್ಪರ್ಧೆ ; ಬಹುಮಾನ ವಿತರಣೆ

Posted On: 29-10-2024 07:13AM

ಪಡುಬಿದ್ರಿ : ಪಡುಬಿದ್ರಿಯ ರಾಗ್ ರಂಗ್ ಕಲ್ಚರಲ್ ಹಾಗೂ ಸೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಪಡುಬಿದ್ರಿಯ ಕೆಪಿಎಸ್ ಶಾಲಾ ಮೈದಾನದಲ್ಲಿ ದ. ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಸಾಂಪ್ರದಾಯಿಕ ಹಾಗೂ ಆಧುನಿಕ ಗೂಡುದೀಪ ಸ್ಪರ್ಧೆ ನಡೆಯಿತು. ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಡಿ. ಆರ್. ರಾಜುರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿ, ಪಡುಬಿದ್ರಿಯ ರಾಗ್ ರಂಗ್ ಸಂಸ್ಥೆ ಅನೇಕ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಗೂಡುದೀಪಗಳ ಸ್ಪರ್ಧೆಯನ್ನೂ ಆಯೋಜಿಸಿ ರಾಷ್ಟ್ರೀಯ ಸಮಗ್ರತೆ, ಭಾವೈಕ್ಯತೆಯ ಸಂಕೇತದೊಂದಿಗೆ ಸಾಂಸ್ಕೃತಿಕವಾಗಿ ಗ್ರಾಮದ ಜನರೆಲ್ಲರೂ ಸಂತೋಷಿತರಾಗುವಂತೆ ಮಾಡಿದ್ದಾರೆ. ದೀಪಗಳ ಹಬ್ಬ ದೀಪಾವಳಿಗೆ ಅದರದ್ದೇ ಆದ ವಿಶಿಷ್ಟ ಮಹತ್ವವಿರುವುದಾಗಿ ಹೇಳಿದರು.

ಡಾ. ವಿಜಯ್ ನೆಗಳೂರು ರವರಿಗೆ ಜೇಸಿ ಟೊಬಿಪ್ ಪ್ರಶಸ್ತಿ

Posted On: 29-10-2024 05:21AM

ಕಾಪು : ಜೇಸಿಐ ಭಾರತ ವಲಯ 15 ರ ವಲಯ ಸಮ್ಮೇಳನ "ಸಮ್ಮಿಲನ " 2024 ದಲ್ಲಿ ವಲಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಜೆಸಿಐ ಇಂಡಿಯಾ ದಿಂದ ಕೊಡಲ್ಪಡುವ ಮಹೋನ್ನತ ವೃತ್ತಿಪರತೆಯ ಟೋಬಿಪ್ ಪ್ರಶಸ್ತಿಯನ್ನು ವಲಯಾಧ್ಯಕ್ಷ ಗಿರೀಶ್ ಎಸ್.ಪಿ ಯವರು ಜೇಸಿಐಉಡುಪಿ ಇಂದ್ರಾಳಿಯ ಸದಸ್ಯ, ಖ್ಯಾತ ವೈದ್ಯರಾದ ಮತ್ತು ರಾಷ್ಟ್ರೀಯ ತರಬೇತುದಾರ ಡಾ. ವಿಜಯ್ ನೆಗಳೂರುರವರಿಗೆ ಪ್ರದಾನ ಮಾಡಿದರು.

ಕುಲಾಲ ಸಂಘ ಹೆಬ್ರಿ : ದ್ವಿತೀಯ ವರ್ಷದ ಕ್ರೀಡಾಕೂಟ ಸಂಪನ್ನ

Posted On: 29-10-2024 05:17AM

ಉಡುಪಿ : ಕುಲಾಲ ಸಂಘ (ರಿ.) ಹೆಬ್ರಿ ತಾಲೂಕು ವತಿಯಿಂದ ನಡೆದ ದ್ವಿತೀಯ ವರ್ಷದ ಕ್ರೀಡಾಕೂಟವು ಹೆಬ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಕರ್ನಾಟಕ ಇದರ ನೂತನ ರಾಜ್ಯ‌ಾಧ್ಯಕ್ಷರಾಗಿ ರಚನ್ ಸಾಲ್ಯಾನ್ ಹೆಜಮಾಡಿ ಆಯ್ಕೆ

Posted On: 27-10-2024 04:03PM

ಪಡುಬಿದ್ರಿ : ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ( ರಿ.) ಕರ್ನಾಟಕ ಇದರ ನೂತನ ರಾಜ್ಯ‌ಾಧ್ಯಕ್ಷರಾಗಿ ಯುವ ನಾಯಕ ರಚನ್ ಸಾಲ್ಯಾನ್ ಹೆಜಮಾಡಿ ಆಯ್ಕೆಯಾಗಿರುತ್ತಾರೆ.

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಎನ್.ಐ.ಟಿ.ಕೆ ಸೀಮನ್ಸ್ ಕೇಂದ್ರದ ಒಡಂಬಡಿಕೆ

Posted On: 27-10-2024 12:35PM

ಶಿರ್ವ : ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗವು ಸುರತ್ಕಲ್‌ ಎನ್.ಐ.ಟಿ.ಕೆ ಸೀಮನ್ಸ್ ಕೇಂದ್ರದೊಂದಿಗೆ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಪೂರಕವಾಗಿ ಒಂದು ಒಡಂಬಡಿಕೆಗೆ ಸಹಿ ಹಾಕಲಾಯಿತು. ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ ಸೀಮನ್ಸ್ ಕೇಂದ್ರವನ್ನು ಸ್ಥಾಪಿಸಿದೆ. ವಿದ್ಯಾರ್ಥಿಗಳಿಗೆ ಪ್ರಸ್ತುತ ಕೈಗಾರಿಕೆಗಳಲ್ಲಿ ಉದ್ಯೋಗ ಮಾಡಲು ಬೇಕಾದ ಸೂಕ್ತ ಕೌಶಲ್ಯಗಳ ತರಬೇತಿ ನೀಡುವುದು ಈ ಕೇಂದ್ರದ ಉದ್ದೇಶವಾಗಿದೆ.

ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ : ಉಡುಪಿ ಜಿಲ್ಲಾ ಚುನಾವಣೆ ; ಪದಗ್ರಹಣ ಕಾರ್ಯಕ್ರಮ

Posted On: 27-10-2024 12:25PM

ಉಡುಪಿ‌ : ವಿದ್ಯಾರ್ಥಿಗಳು ದೇಶದ ಭವಿಷ್ಯ ಸಾಮಾಜಿಕ ನ್ಯಾಯ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವವನ್ನು ಬೆಳೆಸುವ ಕೆಲಸವನ್ನು ಹಲವಾರು ವರ್ಷಗಳಿಂದ ಸರ್ವ ಕಾಲೇಜು ವಿದ್ಯಾರ್ಥಿ ಸಂಘಟನೆ ನಡೆಸುತ್ತಿದೆ ಈ ಸಂಘಟನೆಯನ್ನು ಪ್ರತಿಯೊಂದು ಕಾರ್ಯಕ್ರಮ ಗಳಲ್ಲಿ ಕೂಡ ನಾನು ಭಾಗವಹಿಸುತ್ತಿದ್ದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಸುವ ಕೆಲಸ ನಡೆಯಲಿ ಎಂದು ಶ್ರೀ ಶ್ರೀ ಶ್ರೀ ಈಶ ವಿಠ್ಠಲ್ ದಾಸ ಸ್ವಾಮೀಜಿ ಹೇಳಿದರು. ಅವರು ತುಳುಜಾ ಭವಾನಿ ಸಭಾ ಭವನ ಕುಂಜಿಬೆಟ್ಟು ಉಡುಪಿಯಲ್ಲಿ ಜರಗಿದ ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ.) ಇದರ ಉಡುಪಿ ಜಿಲ್ಲಾ 2024-25 ನೇ ಸಾಲಿನ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಕುಣಿತ ಭಜನಾ ಸ್ಪರ್ಧೆ

Posted On: 27-10-2024 11:44AM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅ.29ರಂದು ನಡೆಯಲಿರುವ ವಾಗೀಶ್ವರಿ ಪೂಜೆ ಹಾಗೂ ನವದುರ್ಗಾ ಲೇಖನ ಯಜ್ಞದ ಲೇಖನಕ್ಕೆ ಚಾಲನೆ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಮೂರು ಜಿಲ್ಲೆಗಳ 15 ತಂಡಗಳಿಂದ ನಡೆದ ಕುಣಿತ ಭಜನಾ ಸ್ಪರ್ಧೆಯನ್ನು ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ನಮ್ಮ ಸಮುದಾಯಕ್ಕೆ ಸಂದ ಗೌರವ : ಬಾಬು ಕೊರಗ

Posted On: 27-10-2024 08:27AM

ಕಾಪು : ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲ್ಲೂಕು ಘಟಕದ ವತಿಯಿಂದ ನವೆಂಬರ್ 16ರಂದು ಫಲಿಮಾರಿನಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಬಾಬು ಕೊರಗ ಅವರನ್ನು ಅವರ ಮೂಲ ಮನೆ ಪಾಂಗಾಳದ ಮಠದ ಕಾಡು, ಮಂಡೇಡಿಯ ಕುಡ್ಡು ಕೊರಗ ಅವರ ನಿವಾಸದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಜಂಟಿಯಾಗಿ ಸಮ್ಮೇಳದ ಆಹ್ವಾನ ಪತ್ರಿಕೆಯನ್ನು ನೀಡಿ‌ ಗೌರವಿಸಿದರು.