Updated News From Kaup

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಶಿರ್ವ : ನೂತನ ಅಧ್ಯಕ್ಷರಾಗಿ ಗೋಪಾಲ ಪೂಜಾರಿ‌ ಆಯ್ಕೆ

Posted On: 25-09-2025 04:43PM

ಶಿರ್ವ : ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ 2026-2028ನೇ ಸಾಲಿಗೆ ‌ನೂತನ ಅಧ್ಯಕ್ಷರಾಗಿ ಗೋಪಾಲ ಪೂಜಾರಿ‌, ಪ್ರಧಾನ ಕಾರ್ಯದರ್ಶಿಯಾಗಿ ವೀರೇಂದ್ರ ಎಸ್ ಪೂಜಾರಿ ಶಿರ್ವ,‌ ಜೊತೆ ಕಾರ್ಯದರ್ಶಿಯಾಗಿ ರಮೇಶ್ ಪೂಜಾರಿ ಶಿರ್ವ ‌ಹಾಗೂ ಕೋಶಾಧಿಕಾರಿಯಾಗಿ ಸುಕೇಶ್ ಪೂಜಾರಿ ವಲದೂರು ಪುನರಾಯ್ಕೆ ಯಾಗಿರುತ್ತಾರೆ.

ಶಿರ್ವ : ಬಂಟಕಲ್ ಸನ್ ಶೈನ್ ಸೀನಿಯರ್ ಚೇಂಬರ್ ವತಿಯಿಂದ ವನಮಹೋತ್ಸವ

Posted On: 25-09-2025 04:38PM

ಶಿರ್ವ : ತಾಲೂಕಿನ ಬಂಟಕಲ್ ಸನ್ ಶೈನ್ ಸೀನಿಯರ್ ಚೇಂಬರ್ ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನೆರವೇರಿತು.

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಲೇಖನ ಯಜ್ಞದ ಪುಣ್ಯ ಭೂಮಿಗೆ ಚಾಲನೆ

Posted On: 25-09-2025 04:30PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿಯಲ್ಲಿ ಶರನ್ನವರಾತ್ರಿ ಮಹೋತ್ಸವದ 4 ನೇ ದಿನವಾದ ಸೆ. 25ರಂದು ಬೆಳಿಗ್ಗೆ ನವದುರ್ಗಾ ಲೇಖನ ಯಜ್ಞ ಲೇಖನ ಮಂಟಪದಲ್ಲಿ ದೇವಳದಲ್ಲಿಯೇ ನವದುರ್ಗಾ ಲೇಖನವನ್ನು ಬರೆಯಲು ಲೇಖನ ಯಜ್ಞದ ಪುಣ್ಯ ಭೂಮಿಗೆ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ ಮತ್ತು ಪ್ರಧಾನ ಅರ್ಚಕರಾದ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಇವರ ಉಪಸ್ಥಿತಿಯಲ್ಲಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಸಮಕ್ಷಮದಲ್ಲಿ ಚಾಲನೆ ನೀಡಲಾಯಿತು.

ಬೆಳ್ಳೆ : ರೋಜ್‌ಗಾರ್ ದಿವಸ್ ಮತ್ತು ಆರೋಗ್ಯ ತಪಾಸಣೆ

Posted On: 21-09-2025 05:45PM

ಶಿರ್ವ : ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕರ "ರೋಜ್‌ಗಾರ್ ದಿವಸ್" ಆಚರಣೆ ಮತ್ತು ಆರೋಗ್ಯ ತಪಾಸಣಾ ಕಾರ್ಯಕ್ರಮ ಶನಿವಾರ ಶ್ರೀಪಾಜಕ ಕ್ಷೇತ್ರದ ಆವರಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಬೆಳ್ಳೆ ಗ್ರಾ.ಪಂ.ಅಧ್ಯಕ್ಷೆ ದಿವ್ಯಾ ವಿ.ಆಚಾರ್ಯ ವಹಿಸಿದ್ದರು. ಪಾಕಜಕ್ಷೇತ್ರದ ಪ್ರಧಾನ ಅರ್ಚಕರಾದ ವೇ.ಮೂ.ಮಾಧವ ಉಪಾಧ್ಯಾಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ಮಾಡಿದರು.

ಹೆಜಮಾಡಿ‌ ವಿಶ್ವ ಹಿಂದೂ ಪರಿಷತ್‌, ಸಾರ್ವಜನಿಕ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿಯಿಂದ ರೂ.1,11,111 ದೇಣಿಗೆ

Posted On: 21-09-2025 02:53PM

ಹೆಜಮಾಡಿ‌ : ಇಲ್ಲಿನ ವಿಶ್ವ ಹಿಂದೂ ಪರಿಷತ್‌, ಹೆಜಮಾಡಿ ಸಾರ್ವಜನಿಕ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿಯ ವತಿಯಿಂದ ರೂ.1,11,111 (ಒಂದು ಲಕ್ಷದ ಹನ್ನೊಂದು ಸಾವಿರದ ನೂರ ಹನ್ನೊಂದು) ಮೊತ್ತದ ಹಣವನ್ನು ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ಹಸ್ತಾಂತರಿಸಲಾಯಿತು.

ನಿನಾದ ಕ್ರಿಯೇಷನ್ ಯುಟ್ಯೂಬ್ ಚಾನಲ್ ನಲ್ಲಿ ಕಾಪು ಮಾರಿಯಮ್ಮನ ಭಕ್ತಿ ಗಾಯನ - ಕಾಪು ಶಾಸಕರಿಂದ ಬಿಡುಗಡೆ

Posted On: 21-09-2025 02:14PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಿನಾದ ಕ್ರಿಯೇಷನ್ ಯುಟ್ಯೂಬ್ ಚಾನಲ್ ಅರ್ಪಿಸುವ ಕಾಪು ಮಾರಿಯಮ್ಮನ ಭಕ್ತಿ ಗಾಯನವು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರು ಬಿಡುಗಡೆಗೊಳಿಸಿದರು.

ಗೆಳೆಯರ ಬಳಗ ಅಂಬಾಗಿಲು : ಬಾಲಕಿಯೋರ್ವಳ ವೈದ್ಯಕೀಯ ವೆಚ್ಚಕ್ಕೆ ಧನ ಸಹಾಯ

Posted On: 21-09-2025 01:49PM

ಕಾಪು : ಗೆಳೆಯರ ಬಳಗ ಅಂಬಾಗಿಲು ಇವರ ವತಿಯಿಂದ ಪ್ರಥಮ ಸೇವಾರ್ಥವಾಗಿ ಚಾರ್ವಿ (9 ವರ್ಷ) ಅವರ ಶಸ್ತ್ರ ಚಿಕಿತ್ಸೆಗೆ, ಗುಂಪಿನ ಸಹಕಾರದೊಂದಿಗೆ ರೂ.21,000 ಧನ ಸಂಗ್ರಹಿಸಿ ಹಸ್ತಾಂತರಿಸಲಾಯಿತು.

ಕಾಪು : ರಾಣಿ ಅಬ್ಬಕ್ಕನ ಸ್ಮರಣೆ ನಮ್ಮ ಯುವ ಮನಸ್ಸುಗಳಿಗೆ ಸ್ಪೂರ್ತಿಯಾಗಲಿ - ಸುರೇಶ್ ಶೆಟ್ಟಿ ಗುರ್ಮೆ

Posted On: 21-09-2025 11:44AM

ಕಾಪು : ಆತ್ಮವಿಶ್ವಾಸ ಹೊಂದಿದ್ದರೆ ಅಪರಿಮಿತವಾದದ್ದನ್ನು ಸಾಧಿಸಬಹುದು ಎನ್ನುವುದಕ್ಕೆ ನಮ್ಮ ಹೆಮ್ಮೆಯ ಅಬ್ಬಕ್ಕ ರಾಣಿಯೇ ಸಾಕ್ಷಿ. ಇಂತಹ ಸಾಧಕರ ಚರಿತ್ರೆಯು ನಮ್ಮಲ್ಲಿ ಸಂಸ್ಕಾರವನ್ನು ಮೂಡಿಸುತ್ತದೆ. ಸಂಸ್ಕಾರದ ಸ್ಪರ್ಶದಿಂದ ಕಲ್ಲು ದೇವರಾಗಬಹುದು, ಹೆಪ್ಪು ತುಪ್ಪವಾಗಬಹುದು, ಕವಿಮನಸ್ಸು ಕಾಳಿದಾಸನೆನಿಸಬಹುದು. ಆತ್ಮವಿಶ್ವಾಸದೊಂದಿಗಿನ ನಿಮ್ಮ ಪ್ರಯತ್ನವೇ ಇಲ್ಲಿ ಬಹಳ ಮುಖ್ಯವಾದದ್ದು. ರಾಣಿ ಅಬ್ಬಕ್ಕನ ಸ್ಮರಣೆ ನಮ್ಮ ಯುವ ಮನಸ್ಸುಗಳಿಗೆ ಸ್ಪೂರ್ತಿಯಾಗಲಿ. ನೀವೂ ನಿಮ್ಮ ಬದುಕಿನಲ್ಲಿ ಅಪರಿಮಿತವಾದದನ್ನು ಸಾಧಿಸುವಂತಾಗಲಿ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಹಾರೈಸಿದರು. ಅವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಹಾಗೂ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಕಾಪು ದಂಡತೀರ್ಥ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ರಾಣಿ ಅಬ್ಬಕ್ಕನ ಕುರಿತಾದ ಸರಣಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸುಬ್ರಹ್ಮಣ್ಯ ಎನ್ ಭಟ್ ರವರಿಗೆ ಪ್ರಶಸ್ತಿ

Posted On: 21-09-2025 09:57AM

ಕಾಪು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇದರ 2024 - 25ನೇ ಒಕ್ಕೂಟದ 39ನೆಯ ವಾರ್ಷಿಕ ಸಾಮಾನ್ಯ ಸಭೆಯು ಸೆ. 20 ರಂದು ಕೊರ್ಡೆಲ್ ಹಾಲ್ ಚಚ್೯ಗೇಟ್ ಕುಲಶೇಖರ ಮಂಗಳೂರು ಇಲ್ಲಿ ಜರಗಿತು.

ಶಿರ್ವ : ಪೋಲಿಸ್ ಅಧಿಕಾರಿಯೆಂದು ನಂಬಿಸಿ ಸೈಬರ್ ವಂಚಕರಿಂದ ರೂ. 4ಲಕ್ಷ ವಂಚನೆ

Posted On: 20-09-2025 12:54PM

ಶಿರ್ವ : ಸೈಬರ್ ವಂಚಕರು ಪೋಲಿಸ್ ಅಧಿಕಾರಿಯೆಂದು ನಂಬಿಸಿ ಶಿರ್ವದ ವ್ಯಕ್ತಿಯೋರ್ವರಿಗೆ ಬ್ಯಾಂಕ್ ಖಾತೆಯಿಂದ ರೂ. 4 ಲಕ್ಷ ಹತ್ತು ಸಾವಿರ ಮೊತ್ತದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.