Updated News From Kaup

ಎಲ್ಲೂರಿನಲ್ಲಿ ಸಿಡಿಲಾಘಾತಕ್ಕೆ ದನ ಬಲಿ ; ವಿದ್ಯುತ್ ಉಪಕರಣಗಳಿಗೆ ಹಾನಿ

Thumbnail
Posted On: 03 Dec 2024, 08:00 PM

ಪಡುಬಿದ್ರಿ : ಫೆಂಗಲ್ ಚಂಡಮಾರುತದ ಪರಿಣಾಮ ಸೋಮವಾರ ರಾತ್ರಿ ಸುರಿದ ಭಾರಿ ಮಳೆ ಮತ್ತು ಸಿಡಿಲಿಗೆ ದನದ ಹಟ್ಟಿಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿ, ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿ ಉಂಟಾದ ಘಟನೆ ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಎಲ್ಲೂರು ಜೋಗಿ ತೋಟದ ಶೇಖರ್ ಪೂಜಾರಿಯವರ ದನದ ಹಟ್ಟಿಗೆ ಸಿಡಿಲು ಬಡಿದಿದ್ದು ಇದರ ಪರಿಣಾಮ ದನ ಸಾವನ್ನಪ್ಪಿದೆ. ಹಾಲು ಕರೆಯುವ ದನ ಇದಾಗಿದ್ದು, ಸುಮಾರು 25 ಸಾವಿರ ರೂ. ನಷ್ಟ ಉಂಟಾಗಿದೆ. ಜೊತೆಗೆ ಮನೆಯ ವಿದ್ಯುತ್ ಉಪಕರಣಗಳು ಸಿಡಿಲಿಗೆ ಹಾನಿಯಾಗಿದೆ. ಎಲ್ಲೂರು ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಿಗರು ಘಟನಾ ಸ್ಥಳಕ್ಕೆ ಪರಿಶೀಲನೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ದಲಿತ ಸಂಘರ್ಷ ಸಮಿತಿ ಕಳತ್ತೂರು ಗ್ರಾಮ ಶಾಖೆ ಉದ್ಘಾಟನೆ

Thumbnail
Posted On: 03 Dec 2024, 07:55 PM

ಕಾಪು : ಪ್ರೋ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಇದರ ಕಳತ್ತೂರು ಶಾಖೆಯ ಉದ್ಘಾಟನೆ ಕಳತ್ತೂರು ಶ್ರೀ ಬಬ್ಬುಸ್ವಾಮಿ ದೇವಸ್ಥಾನದ ಆವರಣದಲ್ಲಿ ಜರಗಿತು. ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಸೃಷ್ಟಿಯಿಂದ ಪ್ರಾರಂಭವಾಗಿದ್ದಲ್ಲ, ಅದು ಮಾನವರಿಂದ ಆದದ್ದು, ಅದರ ವಿರುದ್ಧ ಅಂಬೇಡ್ಕರರು ನ್ಯಾಯೋಚಿತವಾಗಿ ಹೋರಾಡಿ ಸಂವಿಧಾನವನ್ನು ರಚಿಸಿದರು. ಅದನ್ನು ಉಳಿಸಿ ಪೋಷಿಸಿದರೆ ಮಾತ್ರ ದೇಶ ಸುಭದ್ರ. ಹಾಗಾಗಿ ನಾವೆಲ್ಲ ಸಂವಿಧಾನ ಸಂರಕ್ಷಿಸಬೇಕೆಂದು ಹೇಳಿದರು. ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ದಲಿತ ಸಮಾಜ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶ್ಯಸ್ತ್ಯ ನೀಡಿದಾಗ ಹಾಗೂ ಅಂಬೇಡ್ಕರರ ಚಿಂತನೆಯೊಂದಿಗೆ ಬದುಕಿದಾಗ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು. ಮಾಜಿ ಶಾಸಕರಾದ ಲಾಲಾಜಿ.ಆರ್.ಮೆಂಡನ್, ಕುತ್ಯಾರು ಗ್ರಾ.ಪಂ ಅಧ್ಯಕ್ಷರಾದ ಜನಾರ್ಧನ ಆಚಾರ್ಯ ನೂತನ ಶಾಖೆಗೆ ಶುಭಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಉಡುಪಿ ಜಿಲ್ಲಾಧ್ಯಕ್ಷ ರಮೇಶ್ ಕೋಟ್ಯಾನ್ ಕೆಳರ್ಕಳಬೆಟ್ಟು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಂಗನಾಥ್ ಶೆಟ್ಟಿ ಬರಬೆಟ್ಟು, ಶ್ರೀಕೃಷ್ಣ ಬಜೆ, ಅಪ್ಪುರಾಜ್, ರವಿ ಪಲಿಮಾರ್, ನಾರಾಯಣ ಗುರಿಕಾರರು ಕಳತ್ತೂರು, ಸಂದೀಪ್ ಕರ್ಕೇರ ಕಳತ್ತೂರು, ಕುತ್ಯಾರು ಗ್ರಾ.ಪಂ. ಸದಸ್ಯರಾದ ದಿವ್ಯ ಶೆಟ್ಟಿಗಾರ್, ಸ್ಟ್ಯಾನಿ ಕೋಡ್ದ, ಲೀಲಾವತಿ, ಜಗದೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ರಾಘವೇಂದ್ರ ಸ್ವಾಗತಿಸಿದರು, ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾಪು ಶ್ರೀ ಹೊಸ ಮಾರಿಗುಡಿಗೆ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಸ್ವಾಮೀಜಿ ಭೇಟಿ

Thumbnail
Posted On: 03 Dec 2024, 01:00 PM

ಕಾಪು : ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಂಗಳವಾರ ಕಟಪಾಡಿ - ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಭೇಟಿ ನೀಡಿ ದೇವಳದ ಕಾಮಗಾರಿ ವೀಕ್ಷಿಸಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು. ದೇವಳದ ತಂತ್ರಿ ವೇದಮೂರ್ತಿ ಕುಮಾರಗುರು ತಂತ್ರಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿ, ಭಕ್ತಾದಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ, ಮಾಧ್ಯಮ ಕೇಂದ್ರ ಉದ್ಘಾಟನೆ

Thumbnail
Posted On: 03 Dec 2024, 12:48 PM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನೂತನ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಲಯ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ ಮತ್ತು ಮಾಧ್ಯಮ ಕೇಂದ್ರ ಮಂಗಳವಾರ ಉದ್ಘಾಟನೆಗೊಂಡಿತು. ಕಟಪಾಡಿ - ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ ಉದ್ಘಾಟಿಸಿ ಶುಭ ಹಾರೈಸಿದರು. ಮಾಧ್ಯಮ ಕೇಂದ್ರವನ್ನು ಉದಯವಾಣಿಯ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಮಾಧವ ಆರ್ ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ರಘುಪತಿ ಭಟ್, ದೇವಳದ ತಂತ್ರಿ ವೇಮೂ. ಕುಮಾರಗುರು ತಂತ್ರಿ, ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಜಯ ಸಿ ಕೋಟ್ಯಾನ್, ಯೋಗೀಶ್ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ, ರತ್ನಾಕರ ಶೆಟ್ಟಿ ನಡಿಕೆರೆ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಮಾಧ್ಯಮ ಸಂಚಾಲಕ ರಾಕೇಶ್ ಕುಂಜೂರು, ಜಯರಾಮ ಆಚಾರ್‌, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ, ಕಾರ್ಯನಿರ್ವಹಣಾಧಿಕಾರಿ, ಮತ್ತಿತರರು ಉಪಸ್ಥಿತರಿದ್ದರು.

ಹೇರೂರು : ಉಚಿತ ದಂತ ವೈದ್ಯಕೀಯ ಶಿಬಿರ

Thumbnail
Posted On: 03 Dec 2024, 07:42 AM

ಬ್ರಹ್ಮಾವರ : ಶ್ರೀರಾಮ್ ಫ್ರೆಂಡ್ಸ್ ಹೇರೂರು, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಹೇರೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಎಂಸಿ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ ಉಚಿತ ದಂತ ವೈದ್ಯಕೀಯ ಶಿಬಿರ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಊರಿನ ಸಹಕಾರದಿಂದ ಪ್ರತಿಯೊಂದು ಗ್ರಾಮದಲ್ಲಿ ಹೊಸ ಬದಲಾವಣೆ ಅಭಿವೃದ್ಧಿ ಸಾಧ್ಯವಾಗುವುದು ಕೇವಲ ಸರ್ಕಾರದಿಂದ ಮಾತ್ರವಲ್ಲದೆ ಗ್ರಾಮಸ್ಥರ ಸಹಕಾರ ಮತ್ತು ಮಾರ್ಗದರ್ಶನ ಇದ್ದಲ್ಲಿ ಗ್ರಾಮದ ಅದೇ ರೀತಿ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು. ಮುಖ್ಯ ಅತಿಥಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ ಪ್ರತಿ ಹಳ್ಳಿಯಲ್ಲಿ ದಂತ ಚಿಕಿತ್ಸೆ ಶಿಬಿರಗಳನ್ನು ಸಂಘ ಸಂಸ್ಥೆಗಳು ಹಮ್ಮಿ ಕೊಳ್ಳುವ ಅವಶ್ಯಕತೆ ಇದೆ ಎಂದು ತಿಳಿಸಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಮಾತನಾಡಿ, ಈ ಊರಿನ ಜನತೆಯ ಬೆಂಬಲದ ಪರಿಣಾಮ ಇಂದು ನಾನು ಪ್ರಾಧಿಕಾರದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಗ್ರಾಮದ ಅಭಿವೃದ್ಧಿಯಲ್ಲಿ ನಮ್ಮ ಸಹಕಾರ ಸದಾ ಇದೆ ಎಂದು ಹೇಳಿದರು. ಈ ಸಂದರ್ಭ ಉದ್ಯಮಿ ಚೇತನ್ ಕುಮಾರ್ ಶೆಟ್ಟಿ, ಲೆಕ್ಕಪರಿಶೋಧಕ ಜೀವನ್ ಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸುವರ್ಣ ಎಂಟರ್ಪ್ರೈಸಸ್ ನ ಸುನಿತಾ ಮಧುಸೂಧನ್ , ಬ್ರಹ್ಮಾವರ ಜಯಂಟ್ಸ್ ಗ್ರೂಪ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಜಯಕರ್, ಡಾ. ಪ್ರಜ್ಞಾ ನಾಯಕ್, ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷ ಸೂರಜ್ ಕೋಟ್ಯಾನ್, ಗೌರವಾಧ್ಯಕ್ಷ ಸುರೇಶ್ ಪೂಜಾರಿ, ಮುಂತಾದವರು ಉಪಸ್ಥಿತರಿದ್ದರು. ವಿಜಯ್ ಸನಿಲ್ ಸ್ವಾಗತಿಸಿದರು. ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು ಪ್ರಸ್ತಾವನೆಗೈದರು. ರಾಘವೇಂದ್ರ ಕವಾ೯ಲು ನಿರೂಪಿಸಿದರು, ರಾಮಕುಂದರ್ ವಂದಿಸಿದರು.

ತುಳು ಕಥಾ ಬರಹಗಾರರಿಗೆ ಸುವರ್ಣ ಅವಕಾಶ - “ಕುದ್ಕ ಬಚ್ಚಿರೆ” ತುಳು ಸಣ್ಣ ಕಥಾ ಸ್ಪರ್ಧೆ

Thumbnail
Posted On: 03 Dec 2024, 07:26 AM

ಕಾಪು : ತುಳು ಕಥೆ ಬರಹಗಾರರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಮಾಯಿಲು ಫಿಲ್ಮ್ಸ್ ಮತ್ತು ಕಡಲ್ ಸ್ಟುಡಿಯೋಸ್ ವತಿಯಿಂದ ಸುವರ್ಣ ಅವಕಾಶವನ್ನು ಕಲ್ಪಿಸಿದ್ದು “ಕುದ್ಕ ಬಚ್ಚಿರೆ” ಎಂಬ ವೇದಿಕೆಯನ್ನು ಸಿದ್ದಪಡಿಸಿ ತುಳು ಸಣ್ಣ ಕಥಾಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮೂರು ಉತ್ತಮ ಕಥೆಗಳಿಗೆ 3,000ರೂ.ಗಳಂತೆ ಮತ್ತು 7 ಮೆಚ್ಚಿದ ಕಥೆಗಳಿಗೆ 1,500ರೂ. ಗಳಂತೆ ಒಟ್ಟಿಗೆ 10 ವಿಜೇತರಿಗೆ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಆಯ್ದ ಕಥೆಗಳನ್ನು ಪುಸ್ತಕರೂಪದಲ್ಲಿ ಮುದ್ರಿಸಿ ಬಿಡುಗಡೆ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸುವವರು 800ಪದ ಮೀರದೆ ತುಳು ಭಾಷೆಯಲ್ಲಿ ತಮ್ಮ ಸ್ವಂತ ಕಥೆ ಬರೆದು kudhkabachire@gmail.comಗೆ ಇ-ಮೇಲ್ ಅಥವಾ 9900634405 ನಂಬರಿಗೆ ಪಿಡಿಎಫ್ ಅಥವಾ ವರ್ಡ್ ಫಾರ್ಮ್ಯಾಟ್ ನಲ್ಲಿ ವಾಟ್ಸಾಪ್ ಮೂಲಕ ಜನವರಿ 31 2025ರ ಒಳಗೆ ಕಳುಹಿಸಬೇಕು. ಕೈ ಬರಹದ ಮೂಲಕ ಕಥೆ ಬರೆಯುವವರು A4 ಹಾಳೆ ಪುಟದಲ್ಲಿ ಬರೆದು “ಆರ್ ಪ್ರದೀಪ್, ತಿರ್ತಗುತ್ತು ಗರ್ಡಾಡಿ ಗ್ರಾಮ ಮತ್ತು ಅಂಚೆ ಬೆಳ್ತಂಗಡಿ ತಾಲೂಕು, 574217” ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳಿಸಬಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ತಮ್ಮ ಹೆಸರು, ವಿಳಾಸ, ವಯಸ್ಸು ಮತ್ತು ಕಥೆಯ ತಲೆಬರಹವನ್ನು ಬೇರೆ ಹಾಳೆಯಲ್ಲಿ ಬರೆದು ಅದರ ಜೊತೆಗೆ ತಮ್ಮ ಕಥೆಯನ್ನು ಲಗತ್ತಿಸಿ ಪೋಸ್ಟ್ ಮೂಲಕ ಕಳಿಸಬೇಕು. ಹಾಗೂ ವಾಟ್ಸಾಪ್, ಮೇಲ್ ಮಾಡುವವರು ತಮ್ಮ ವಿವರಗಳನ್ನು ಬೇರೆಯೇ ಹಾಳೆಯಲ್ಲಿ ಬರೆದು ಕಳಿಸಬೇಕು. ನಿಮ್ಮದೇ ಸ್ವಂತ ವಿಷಯದ ಆಧಾರದ ಮೇಲೆ ಕಥೆ ಬರೆಯಬೇಕು. 14 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ. ಹೆಚ್ಚಿನ ಮಾಹಿತಿಗೆ ಆಯೋಜಕರ ಸೋಷಿಯಲ್ ಮೀಡಿಯಾವನ್ನು ಫಾಲೋ ಮಾಡಬಹುದು ಅಥವಾ 9900634405, 8762686433 ಈ ನಂಬರಿಗೆ ಕರೆಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡುಕುತ್ಯಾರು, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Thumbnail
Posted On: 03 Dec 2024, 07:11 AM

ಕಾಪು : ಪಡುಕುತ್ಯಾರು, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಪಂಚಮ ವಾರ್ಷಿಕ ಮಹಾಸಭೆಯು ಡಿ.1ರಂದು ದುರ್ಗಾ ಮಂದಿರದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟ್ಪಾಡಿಯ ಆಡಳಿತ ಮೊಕ್ತೇಸರ ಮುರಹರಿ ಕೆ ಆಚಾರ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘವು ಉತ್ತರೋತರ ಅಭಿವೃದ್ದಿ ಹೊಂದಲಿ ಹಾಗೂ ಮಂದಿರದ ಜೀರ್ಣೋದ್ದಾರ ಕೆಲಸ ಶ್ರೀಘ್ರ ಪ್ರಾರಂಭವಾಗಲೀ ಎಂದು ಹಾರೈಸಿದರು. ಸನ್ಮಾನ : ಮುಖ್ಯ ಅತಿಥಿಯಾಗಿ ಆಗಮಿಸಿದ ಮುರಹರಿ ಕೆ ಆಚಾರ್ಯರವರನ್ನು, ಹಿರಿಯ ಸದಸ್ಯರಾದ ಸಂಜೀವ ಆಚಾರ್ಯ ದಂಪತಿಗಳನ್ನು ಮತ್ತು ಸ್ಥಳ ದಾನಿಗಳಾದ ಶಕುಂತಲ ಆರ್ ಆಚಾರ್ಯ, ಪಿ ಸಂಪತ್ ಕುಮಾರ್, ಪಿ ಮರಳಿಧರ ಆಚಾರ್ಯ, ಸುಪರ್ಣ ಡಿ. ಮತ್ತು ಸಂಘದ ಕಾರ್ಯಧ್ಯಕ್ಷರಾದ ಕಾಪು ಜಯರಾಮ ಆಚಾರ್ಯರವರನ್ನು ವಿಶೇಷ ಕಾರ್ಯಭಾರ ನಿರ್ವಹಣೆಗಾಗಿ ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರ / ಬಹುಮಾನ ವಿತರಣೆ : ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಮತ್ತು ಕಲಾ ನೈಪುಣ್ಯತೆ ಹೊಂದಿದ ಸಮಾಜದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು ಹಾಗೂ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಸಂಘದ ಅಧ್ಯಕ್ಷರಾದ ನಾಗೇಶ ಆರ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟ್ಪಾಡಿ ದೇವಸ್ಥಾನದ ಮೊಕ್ತಶ್ವರರಾದ ಬಿಳಿಯಾರು ಗಣಪತಿ ಆಚಾರ್ಯ, ಡಿಂಡಿಬೆಟ್ಟು ಗಂಗಾಧರ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾದ ಮಾಧವ ಎಸ್ ಆಚಾರ್ಯ, ಕಾರ್ಯಾಧ್ಯಕ್ಷರಾದ ಜಯರಾಮ ಆಚಾರ್ಯ, ಗೌರವ ಸಲಹೆಗಾರರು, ಮೊಕ್ತೆಶ್ವರರಾದ ಪ್ರಕಾಶ್ ಎಸ್ ಆಚಾರ್ಯ ಮತ್ತು ಚಂದ್ರಯ್ಯ ಪಿ ಆಚಾರ್ಯ, ಉಪಾಧ್ಯಕ್ಷರಾದ ಕೆ ವಿವೇಕಾನಂದ ಆಚಾರ್ಯ, ಪದಾಧಿಕಾರಿಗಳಾದ, ಪ್ರವೀಣ ಎಸ್ ಆಚಾರ್ಯ, ಪ್ರಕಾಶ್ ಎಸ್ ಆಚಾರ್ಯ, ಉದಯಕುಮಾರ್, ಹೇಮಾವತಿ ಪಿ ಆಚಾರ್ಯ, ಪ್ರಸನ್ನ ಎಸ್ ಆಚಾರ್ಯರವರು ಉಪಸ್ಥಿತರಿದ್ದರು. ಸುರೇಶ್ ಆರ್ ಆಚಾರ್ಯ ಸ್ವಾಗತಿಸಿದರು. ಗೌರವಾಧ್ಯಕ್ಷರಾದ ಹರಿಶ್ಚಂದ್ರ ಎಚ್ ಆಚಾರ್ಯ ಪ್ರಸ್ತಾವನೆಗೈದರು. ಕಾರ್ಯದರ್ಶಿ ದಿನೇಶ್ ಎಸ್ ಆಚಾರ್ಯ ವರದಿ ಮಂಡಿಸಿದರು. ಕೋಶಾಧಿಕಾರಿ ಗಂಗಾಧರ ಎಸ್ ಆಚಾರ್ಯರವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಲತಾ ಪ್ರಸಾದ್ ಆಚಾರ್ಯ ಮತ್ತು ಗಂಗಾಧರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಜ್ಯೋತಿ ಪ್ರಕಾಶ ಆಚಾರ್ಯ ವಂದಿಸಿದರು.

ಡಿ. 3 :ಫೆಂಗಲ್‌ ಚಂಡಮಾರುತ - ದ.ಕ. ಮತ್ತು ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

Thumbnail
Posted On: 02 Dec 2024, 06:38 PM

ಉಡುಪಿ : ಫೆಂಗಲ್‌ ಚಂಡಮಾರುತ ಪರಿಣಾಮ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಉಭಯ ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘ : ಮಹಾಸಭೆ, ಪ್ರತಿಭಾ ಪುರಸ್ಕಾರ, ಗುರಿಕಾರರಿಗೆ ಗೌರವಧನ ವಿತರಣೆ

Thumbnail
Posted On: 01 Dec 2024, 05:01 PM

ಉದ್ಯಾವರ : ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘ (ರಿ.) ಪಿತ್ರೋಡಿ ಉದ್ಯಾವರ ಇದರ ಮಹಾಸಭೆ, ದಿl ಯು. ಸದಿಯ ಸಾಹುಕಾರರ ಸ್ಮರಣಾರ್ಥ 14 ಗ್ರಾಮ ಸಭೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ ಕಾರ್ಯಕ್ರಮ ಭಾನುವಾರ ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಸಭಾಂಗಣದಲ್ಲಿ ಜರಗಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಕೇಶವ ಎಂ. ಕೋಟ್ಯಾನ್, ಸಾಹುಕಾರ್ ಕ್ಯಾನಿಂಗ್ ಕಂ. ಮಾಲಕರಾದ ಯು. ಗಣೇಶ್, ಉಡುಪಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾl ಅಶೋಕ್, ಗುರಿಕಾರರಾದ ಸದಾರಾಮ್ ಮೆಂಡನ್ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆ

Thumbnail
Posted On: 01 Dec 2024, 03:46 PM

ಶಿರ್ವ : ಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆಯಾಗಿದ್ದಾರೆ. ಅಂತರಾಷ್ಟ್ರೀಯ ಧರ್ಮ ಸಂಸದ್‌ನಲ್ಲಿ ಕರ್ನಾಟಕದ ಸಂತರ ಪರವಾಗಿ ಭಾಗವಹಿಸಿದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಸನಾತನ ಹಿಂದೂ ಧರ್ಮದ ಜಾಗೃತಿ ಹಾಗೂ ಸಂಘಟನಾ ಸೇವೆಗಳನ್ನು ಆಧಾರವಾಗಿ ಇಟ್ಟು ಮಥುರಾ ಬೃಂದಾವನದಲ್ಲಿ ನ.27ರಂದು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಖಚಿತ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷರಾದ ಮಹೇಂದರ್ ಪ್ರತಾಪ್ ಸಿಂಗ್ ರವರು ಕಳುಹಿಸಿರುತ್ತಾರೆ ಎಂದು ಮಠದ ಪ್ರಕಟನೆ ತಿಳಿಸಿದೆ.