Updated News From Kaup

ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ : ವೃದ್ಧ ದಂಪತಿಗಳಿಗೆ ಒಂದು ಲಕ್ಷ ರೂ. ನೆರವು

Thumbnail
Posted On: 01 Dec 2024, 03:35 PM

ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ವತಿಯಿಂದ ಅಂಬಿಗ ನಾ ನಿನ್ನ ನಂಬಿದೆ ಎಂಬ ವಿನೂತನ ಅಭಿಯಾನದ ಅಂಗವಾಗಿ ಗುರುಪುರ ವೃದ್ಧ ದಂಪತಿಗಳ ಫಿನೈಲ್ ಮಾರಾಟ ಮಾಡಿ ಅವರಿಗೆ ಧನ ಸಹಾಯ ನೀಡುವ ಕಾರ್ಯಕ್ರಮ ಅಜ್ಜರಕಾಡು ಎಲ್ಐಸಿ ಕಚೇರಿಯ ಹತ್ತಿರ ನಡೆಯಿತು. ಗುರುಪುರದ ವೃದ್ಧ ದಂಪತಿಗಳಾದ ಶಿವಾನಂದ ಮತ್ತು ಪಾರ್ವತಿ ಕಳೆದ 40 ವರ್ಷಗಳಿಂದ ಫಿನೈಲ್ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು ಅವರ ಕಷ್ಟಕ್ಕೆ ನೆರವಾಗುವ ಉದ್ದೇಶದಿಂದ ಈ ಅಭಿಯಾನ ನಡೆಯಿತು. ಈ ಸಂದರ್ಭ ಒಂದು ಲಕ್ಷ ರೂ. ಸಂಗ್ರಹಿಸಿ ದಂಪತಿಗಳ ಜೀವನ ನಿವ೯ಹಣಿಗೆ ನೀಡಲಾಯಿತು. ಹೋಂ ಡಾಕ್ಟರ್ ಫೌಂಡೇಶನ್ ಮುಖ್ಯಸ್ಥರಾದ ಡಾ. ಶಶಿಕಿರಣ್ ಶೆಟ್ಟಿ, ಡಾ. ಸುಮಾ ಶೆಟ್ಟಿ, ಸುಂದರ ಪೂಜಾರಿ, ಉದಯ ನಾಯ್ಕ್, ಸುಜಯ, ರಾಘವೇಂದ್ರ ಪ್ರಭು, ಕವಾ೯ಲು, ಜನಾದ೯ನ್ ಕೊಡವೂರು, ಸುಂದರ ಶೆಟ್ಟಿ, ಶಶಿಕಲಾ ಶೆಟ್ಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಪ್ರಥಮ ಎಂ.ಎಸ್.ಡಬ್ಲ್ಯೂ ವಿಭಾಗದ ವಿದ್ಯಾರ್ಥಿಗಳಾದ ಗಿರೀಶ್, ಪ್ರೇಮ್, ಸಾಯಿ, ಅಕ್ಷಯ, ಗೌತಮಿ, ದಾಕ್ಷಾಯಿಣಿ, ಅಂಕಿತಾ, ಅಕ್ಷಯ, ಬಿ.ಆರ್ ದನುಷ, ಪ್ರಿಯಾ ಉಪಸ್ಥಿತರಿದ್ದರು.

ಎಸ್ಕೆಪಿಎ - ದಸರಾ ವೈಭವ ಛಾಯಾಚಿತ್ರ ಸ್ಪರ್ಧೆ : ಸಚಿನ್ ಉಚ್ಚಿಲ ದ್ವಿತೀಯ ಸ್ಥಾನ

Thumbnail
Posted On: 01 Dec 2024, 09:02 AM

ಕಾಪು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಷನ್ (ರಿ.) ಮಂಗಳೂರು ವಲಯದ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ "ದಸರಾ ವೈಭವ" ಛಾಯಾಚಿತ್ರ ಸ್ಪರ್ಧೆಯಲ್ಲಿ ಉಚ್ಚಿಲ ದಸರಾದ ಛಾಯಾಚಿತ್ರಕ್ಕೆ ಕಾಪು ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ ಅವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಮಂಗಳೂರಿನ ಸ್ಕೌಟ್ ಅಂಡ್ ಗೈಡ್ಸ್ ಸಭಾಭವನ ಲಾಲ್ ಬಾಗ್ ಮಂಗಳೂರು ಇಲ್ಲಿ ಜರಗಿದ ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಷನ್ ಮಂಗಳೂರು ವಲಯದ ವತಿಯಿಂದ ನಡೆದ "ಕಿಡ್ಸ್ ಫೋಟೋ ಫೆಸ್ಟ್" ಫೋಟೋಗ್ರಾಫಿ ಬಹುಮಾನ ವಿತರಣಾ ಸಮಾರಂಭದಲ್ಲಿ "ದಸರಾ ವೈಭವ" ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹರೀಶ್ ಅಡ್ಯಾರ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಎಸ್ಕೆಪಿಎ ಜಿಲ್ಲಾ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ದಯಾನಂದ್ ಬಂಟ್ವಾಳ, ಕರುಣಾಕರ್ ಕಾನಂಗಿ, ರಮೇಶ್ ಕಲಾಶ್ರೀ, ಅಜಯ್ ಮಂಗಳೂರು, ಅರ್ಜುನ್ ಆರ್, ವಿಶಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವ

Thumbnail
Posted On: 30 Nov 2024, 07:24 AM

ಕಾಪು : ತಾಲೂಕಿನ ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವವು ಆನೆಗುಂದಿ ಮಠದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಅನುಗ್ರಹದೊಂದಿಗೆ ಶುಕ್ರವಾರ ಜರಗಿತು. ಈ ಸಂದರ್ಭ ಕ್ಷೇತ್ರದ ದೇವರಿಗೆ ವಿಶೇಷ ಅಲಂಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆಯು ನಡೆಯಿತು. ರಾತ್ರಿ ನಡೆದ ಶ್ರೀದೇವಿಯ ಪೂಜೆ ಮತ್ತು ಕಾರ್ಯಕ್ರಮವು ಆನೆಗುಂದಿ ಮಠದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಜರಗಿ ಆಶೀರ್ವಚನ ನೀಡಿದರು. ಮೊಕ್ತೇಸರ ಪ್ರಕಾಶ ಎಸ್ ಆಚಾರ್ಯ, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಆರ್ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾದ ಮಾಧವ ಎಸ್ ಆಚಾರ್ಯ, ಕಟಪಾಡಿ ಶ್ರೀ ಕಾಳಿಕಾಂಬಾ ದೇವಸ್ಥಾನದ ನಿಕಟಪೂರ್ವಆಡಳಿತ ಮೊಕ್ತೇಸರರರಾದ ಸದಾಶಿವ ಆಚಾರ್ಯ, ಕಾರ್ಯದರ್ಶಿ ದಿನೇಶ್ ಎಸ್ ಆಚಾರ್ಯ, ಕೋಶಾಧಿಕಾರಿ ಗಂಗಾಧರ ಆಚಾರ್ಯ, ಪದಾಧಿಕಾರಿಗಳು, ಕೂಡುವಳಿಕೆಯ ಸಮಸ್ತರು, ಸಮಾಜ ಬಾಂಧವರು, ಭಕ್ತಾದಿಗಳು ಉಪಸ್ಥಿತರಿದ್ದರು.

ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ

Thumbnail
Posted On: 28 Nov 2024, 07:00 PM

ಪಡುಬಿದ್ರಿ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ), ಪಡುಬಿದ್ರಿ ಇಲ್ಲಿಗೆ ನಬಾರ್ಡ್ನ ದಕ್ಷಿಣ ಕನ್ನಡ ಜಿಲ್ಲೆಯ ಡಿ.ಡಿ.ಎಮ್ ಸಂಗೀತ ಕರ್ತ ಭೇಟಿ ನೀಡಿ ಏಕರೂಪ ತಂತ್ರಾಂಶದ ಪ್ರಗತಿಯ ಬಗ್ಗೆ ಪರಿಶೀಲಿಸಿದರು. ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ಸೊಸೈಟಿಯಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ, ನಿರ್ದೇಶಕ ವೃಂದ ಹಾಗೂ ಸಿಬ್ಬಂದಿ ವೃಂದ ಉಪಸ್ಥಿತರಿದ್ದರು.

ಡಿ. 20 - 23 : ಕಳತ್ತೂರು ಶ್ರೀ ಬ್ರಹ್ಮ ಬೈದೇರುಗಳ ವರ್ಷಾವಧಿ ನೇಮೋತ್ಸವ

Thumbnail
Posted On: 28 Nov 2024, 10:40 AM

ಕಳತ್ತೂರು : ಇಲ್ಲಿನ ಶ್ರೀ ಬ್ರಹ್ಮ ಬೈದೇರುಗಳ ವರ್ಷಾವಧಿ ನೇಮೋತ್ಸವವು ಡಿ.20 ರಂದು ಮೊದಲ್ಗೊಂಡು ಡಿ.23 ರ ವರೆಗೆ ನಡೆಯಲಿದೆ. ಡಿ.20, ಶುಕ್ರವಾರ ಬೆಳಿಗ್ಗೆ ನವಕ ಪ್ರಧಾನ ಹೋಮ, ರಾತ್ರಿ ಗರಡಿ ಪ್ರವೇಶ, ಡಿ.21, ಶನಿವಾರ ರಾತ್ರಿ ನೈವೇದ್ಯ ಸೇವೆ, ಡಿ.22, ಆದಿತ್ಯವಾರ ಮಧ್ಯಾಹ್ನ ಗಂಟೆ 12 ಕ್ಕೆ ಅನ್ನಸಂತರ್ಪಣೆ, ರಾತ್ರಿ ಗಂಟೆ 6-30ರಿಂದ ಶ್ರೀ ಬ್ರಹ್ಮ ಬೈದೇರುಗಳ ಜಾತ್ರೆ (ನೇಮೋತ್ಸವ), ರಾತ್ರಿ ಗಂಟೆ 7-30ಕ್ಕೆ ಅನ್ನಸಂತರ್ಪಣೆ ನೆರವೇರಲಿದೆ. ಡಿ.23, ಸೋಮವಾರ ಬೆಳಿಗ್ಗೆ ಗಂಟೆ 9 ಕ್ಕೆ ಮಾಯಾಂದಾಲ್ ದೇವಿಯ ನೇಮ, ಶುದ್ಧ ಕಲಶ, ನೈವೇದ್ಯ ಸೇವೆ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಶಾನ್ಯ ರಾಜ್ಯಗಳ ಪ್ರವಾಸ ಮುಗಿಸಿದ ಕಾಪುವಿನ ಯುವಕರಿಗೆ ಕಾಪು ಹೊಸ ಮಾರಿಗುಡಿಯಲ್ಲಿ ಅಭಿನಂದನೆ

Thumbnail
Posted On: 28 Nov 2024, 10:34 AM

ಕಾಪು : ಶಟರ್ ಬಾಕ್ಸ್ ಖ್ಯಾತಿಯ ಯೂ ಟ್ಯೂಬರ್ ಕಾಪುವಿನ ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡ ಕರಾವಳಿಯ ಪ್ರವಾಸೋದ್ಯಮ, ಧಾರ್ಮಿಕ ಮತ್ತು ವಿಶೇಷವಾಗಿ ಉತ್ತರ ಭಾರತದ ಮೇಘಾಲಯ, ಮಿಝೋರಾಂ, ಒಡಿಶಾ ಸಹಿತ 7 ರಾಜ್ಯಗಳ ಪ್ರವಾಸ ಕೈಗೊಂಡು ಕಲೆ ಸಂಸ್ಕೃತಿ ಆಹಾರದ ಅಧ್ಯಯನ ನಡೆಸಿ ಪರಂಪರೆಯನ್ನು ಎಲ್ಲೆಡೆ ಪ್ರಚುರಗೊಳಿಸುವ ಉದ್ದೇಶದೊಂದಿಗೆ ಸುಜುಕಿ ಜಿಮ್ಮಿ ವಾಹನದಲ್ಲಿ ಈಶಾನ್ಯ ರಾಜ್ಯಗಳಿಗೆ ಕಳೆದ ಅ.5ರಂದು ಪ್ರವಾಸ ಹೊರಟಿದ್ದು, ಬುಧವಾರ 53 ದಿನಗಳ ಪ್ರವಾಸ ಮುಗಿಸಿ ಕಾಪುವಿಗೆ ಆಗಮಿಸಿದ್ದರು. ಕಾಪುವಿಗೆ ಆಗಮಿಸಿದ ಸಚಿನ್ ಶೆಟ್ಟಿ ಮತ್ತು ಅವರ ತಂಡವನ್ನು ಕಾಪು ಹೊಸ ಮಾರಿಗುಡಿ ದೇಗುಲದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ಶ್ರೀ ದೇವಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದರು. ಇದೇ ಸಂದರ್ಭ ಆಡಳಿತ ಮಂಡಳಿಯ ವತಿಯಿಂದ ಸಚಿನ್ ಮತ್ತು ತಂಡವನ್ನು ಸನ್ಮಾನಿಸಲಾಯಿತು. ಮಾಧ್ಯಮದೊಂದಿಗೆ ಸಚಿನ್ ಶೆಟ್ಟಿ ಮಾತನಾಡಿ, ನಾವು ಅಕ್ಟೋಬರ್ 5ರಂದು ಕಾಪು ಶ್ರೀ ಹೊಸಮಾರಿ ಗುಡಿಯಿಂದ ಕರ್ನಾಟಕ, ಆಂಧ್ಯಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ, ಮೇಘಾಲಯ, ತ್ರಿಪುರ, ಮಿಝೊರಾಮ್, ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಿ ಈಶಾನ್ಯ ರಾಜ್ಯಗಳ ಅಧ್ಯಯನ ಪ್ರವಾಸ ಮಾಡಿ 53 ದಿನಗಳ ನಂತರ ಕಾಪುವಿಗೆ ಆಗಮಿಸಿದ್ದೇವೆ. ನಾವು ಪ್ರವಾಸದ ವೇಳೆ ವಿಡಿಯೋ ತುಣುಕನ್ನು ನನ್ನ ಶಟರ್ಬಾಕ್ಸ್ ಯುಟ್ಯೂಬ್ ಚಾನೆಲ್ನಲ್ಲಿ ಪ್ರಸಾರ ಮಾಡುವ ಮೂಲಕ ಜನರಿಗೆ ವಿವಿಧ ರಾಜ್ಯಗಳ ಮಾಹಿತಿ ನೀಡಿದ್ದೇನೆ. ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರದ ಬಗ್ಗೆ, ನವದುರ್ಗಾ ಲೇಖನ ಯಜ್ಞದ ಬಗ್ಗೆ ಎಲ್ಲಾ ಕಡೆ ಮಾಹಿತಿ ನೀಡಿದ್ದೇನೆ. ನಮ್ಮ ತಂಡದಲ್ಲಿ ಅಭಿಷೇಕ್, ಸಾಯಿ ಸಹಿತ ನಾಲ್ವರೊಂದಿಗೆ ಪ್ರವಾಸ ಕೈಗೊಂಡಿದ್ದೆವು. ನಮ್ಮ ಪ್ರವಾಸಕ್ಕೆ 8 ಜನರು ಪ್ರಾಯೋಜಕತ್ವ ನೀಡಿದ್ದರು ಎಂದೂ ಸಚಿನ್ ಶೆಟ್ಟಿ ಹೇಳಿದರು. ಈ ಸಂದರ್ಭ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಮಾಧವ ಆರ್ ಪಾಲನ್, ನವದುರ್ಗ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮಟ್ಟು ಗುಳ್ಳ, ಶಂಕರಪುರ ಮಲ್ಲಿಗೆ ಚಿತ್ರದ ಅಂಚೆ ಮೊಹರು ಅನಾವರಣ

Thumbnail
Posted On: 27 Nov 2024, 08:12 PM

ಉಡುಪಿ : ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ವತಿಯಿಂದ ಭಾರತೀಯ ಸಂವಿಧಾನದ ಅಮೃತೋತ್ಸವದ ಅಂಗವಾಗಿ ಕಟಪಾಡಿ ಮತ್ತು ಶಂಕರಪುರ ಉಪ ಅಂಚೆ ಕಚೇರಿಗಳಲ್ಲಿ ಕ್ರಮವಾಗಿ ತುಳುನಾಡಿನ ಜನಪ್ರಿಯ ವಸ್ತು ಗಳಾದ ಮಟ್ಟು ಗುಳ್ಳ ಮತ್ತು ಶಂಕರಪುರ ಮಲ್ಲಿಗೆಗಳ ಶಾಶ್ವತ ಚಿತ್ರಾತ್ಮಕ ಅಂಚೆ ಮೊಹರನ್ನು ಅನಾವರಣಗೊಳಿಸಲಾಯಿತು. ಸಮಾರಂಭದಲ್ಲಿ ಅಂಚೆ ಇಲಾಖೆಯ ಅಧಿಕಾರಿಗಳು ಸಹಿತ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾರ್ವಜನಿಕರು ತಾವು ರವಾನಿಸುವ ಕಾಗದ ಪತ್ರ ಮೇಲೆ ಈ ಮೊಹರನ್ನು ಮೇಲಿನ ಅಂಚೆ ಕಛೇರಿಗಳಲ್ಲಿ ಮುದ್ರಿಸಿ, ತುಳುನಾಡಿನ ಈ ಸಂಪತ್ತುಗಳ ಕಂಪನ್ನು ಎಲ್ಲೆಡೆ ಪಸರಿಸಬಹುದಾಗಿದೆ ಎಂದು ಅಂಚೆ ಪ್ರಕಟಣೆ ತಿಳಿಸಿದೆ.

ಎರ್ಮಾಳು ಮಾಧವ ಎಸ್. ಸುವರ್ಣ ನಿಧನ

Thumbnail
Posted On: 27 Nov 2024, 07:03 PM

ಪಡುಬಿದ್ರಿ : ಸುವರ್ಣ ಸಂಭ್ರಮದ ಜೇಸಿಐ ಪಡುಬಿದ್ರಿಯ ಸ್ಥಾಪಕ ಸದಸ್ಯರಾಗಿದ್ದ ಎರ್ಮಾಳು ಮಾಧವ ಎಸ್. ಸುವರ್ಣ(72) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತೆಂಕ ಎರ್ಮಾಳು ಸ್ವಗೃಹ "ಸುರಕ್ಷಾ"ದಲ್ಲಿ ನಿಧನರಾದರು. ಅವರು ತೆಂಕ ಎರ್ಮಾಳು ಮೊಗವೀರ ಮಹಾಸಭಾದ ಅಧ್ಯಕ್ಷರಾಗಿ, ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾಗಿ, ತೆಂಕ ಕಿನಾರಾ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾಗಿ, ತೆಂಕ ಶ್ರೀರಾಮ ಮಂದಿರದ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ತೆಂಕ ಸರಕಾರಿ ಪ್ರೌಢ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಜನನುರಾಗಿಯಾಗಿದ್ದರು. ಉಡುಪಿ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿ ಹಲವು ಬಾರಿ ಭಜನಾ ಕಮ್ಮಟಗಳನ್ನು ಯಶಸ್ವಿಯಗಿ ನಡೆಸಿದ್ದರು. ಹಲವು ವರ್ಷಗಳಿಂದ ತೆಂಕ ಗ್ರಾಮದಲ್ಲಿ ನೀಟ್ ಪ್ರಿಂಟ್ ಉದ್ಯಮದ ಮೂಲಕ ಪ್ರಮುಖ ಪ್ರಿಂಟಿಂಗ್ ಪ್ರೆಸ್ ಉದ್ಯಮ ನಡೆಸುತ್ತಿದ್ದರು. ಜೇಸಿಐ ಪಡುಬಿದ್ರಿಯ ಸ್ಥಾಪಕ ಸದಸ್ಯರಾಗಿದ್ದ ಅವರು 1981ಲ್ಲಿ ಅಧ್ಯಕ್ಷರಾಗಿ ಗಣನೀಯ ಸೇವೆ ಸಲ್ಲಿಸಿದ್ದರು. ಜೆಸಿಐ ರಾಜ್ಯ ತರಬೇತುದಾರರಾಗಿದ್ದ ಅವರು, ಎರಡು ಸಾವಿರಕ್ಕೂ ಅಧಿಕ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ನಡೆಸಿ ಪ್ರಸಿದ್ಧರಾಗಿದ್ದರು. 20ಕ್ಕೂ ಅಧಿಕ ಜೆಸಿಐ ರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿದ ಗರಿಮೆ ಹೊಂದಿದ್ದರು. ಪಡುಬಿದ್ರಿ ರೋಟರಿ ಕ್ಲಬ್ ಸ್ಥಾಪಕ ಸದಸ್ಯರಾಗಿ, ಎರಡು ಬಾರಿ ಅಧ್ಯಕ್ಷರಾಗಿ, ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು. ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷರಾಗಿ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಮಿತಿಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 1989ರಲ್ಲಿ ಕಾಪು ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಬಳಿಕ ಜಿಪಂ ಸ್ಥಾನಕ್ಕೂ ಸ್ಪರ್ಧಿಸಿದ್ದರು. ಅವರ ನಿಧನಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಹಿತ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಬಂಟಕಲ್ಲು ಶಾಲೆಗೆ ನಾಸಾ ಸಂಸ್ಥೆಯ ನಿವೃತ್ತ ಹಿರಿಯ ವಿಜ್ಞಾನಿ ಭೇಟಿ ; ಮಕ್ಕಳೊಂದಿಗೆ ಸಂವಾದ

Thumbnail
Posted On: 27 Nov 2024, 05:49 PM

ಶಿರ್ವ : ಅಮೇರಿಕದ ನಾಸಾ (ಬಾಹ್ಯಾಕಾಶ ಸಂಶೋಧನ ಕೇಂದ್ರ)ಸಂಸ್ಥೆಯ ಹಿರಿಯ ವಿಜ್ಞಾನಿ ಬಿಳಿಯಾರು ಡಾ. ನರಸಿಂಹ ಭಟ್ ರವರು ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾರ್ಥಮಿಕ ಶಾಲೆ ಗೆ ಭೇಟಿ ನೀಡಿದರು. ಇವರು ಈ ಶಾಲೆಯ ಹಳೇ ವಿದ್ಯಾರ್ಥಿಯಾಗಿದ್ದು, ಮಕ್ಕಳೊಂದಿಗೆ ಸಂವಾದ ನಡೆಸಿದ ಇವರು ಮುಂದಿನ ವರ್ಷ ನಡೆಯುವ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಇಚ್ಚೆ ವ್ಯಕ್ತಪಡಿಸಿ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿ, ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇವರೊಂದಿಗೆ ಅವರ ಸಹೋದರ ಈ ಶಾಲಾ ಹಳೇ ವಿದ್ಯಾರ್ಥಿ ಪದ್ಮನಾಭ ಭಟ್ ಜೊತೆಗಿದ್ದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶಶಿಧರ ವಾಗ್ಲೆಯವರು ಸ್ವಾಗತಿಸಿ ಶಾಲೆಯ ಅಭಿವೃದ್ದಿಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಸದಸ್ಯ ಕೆ ಆರ್ ಪಾಟ್ಕರ್, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ್ ಪ್ರಭು, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.

ಕಾಪು : ಮೂರು ಮಾರಿಗುಡಿಗಳಲ್ಲಿ ಜಾರ್ದೆ  ಮಾರಿಪೂಜೆ ಸಂಪನ್ನ

Thumbnail
Posted On: 27 Nov 2024, 05:40 PM

ಕಾಪು : ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆಮಾರಿ ಗುಡಿ, ಹೊಸ ಮಾರಿ ಗುಡಿ ಹಾಗೂ ಕಲ್ಯ ಮಾರಿ ಗುಡಿಗಳಲ್ಲಿ ಏಕಕಾಲದಲ್ಲಿ ತುಳುವರ ಜಾರ್ದೆ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು. ಸಿಡುಬು, ಸಂತಾನಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ಧಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್‌ ತಿಂಗಳ ಅಂತ್ಯಕ್ಕೆ ಸುಗ್ಗಿ ಮಾರಿಪೂಜೆ, ಜುಲೈ ತಿಂಗಳ ಅಂತ್ಯಕ್ಕೆ ಆಷಾಡ ಮಾರಿಪೂಜೆ ಹಾಗೂ ನವಂಬರ್‌ ತಿಂಗಳಾಂತ್ಯದಲ್ಲಿ ಜಾರ್ದೆ ಮಾರಿ ಪೂಜೆ ನಡೆಯುತ್ತದೆ.