Updated News From Kaup
ಜ. 15 ರಿಂದ ಮಾ. 12 ರವರೆಗೆ ಪಡುಬಿದ್ರಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಢಕ್ಕೆಬಲಿ ಸೇವೆ
Posted On: 11 Dec 2024, 07:13 AM
ಪಡುಬಿದ್ರಿ : ಎರಡು ವರ್ಷಗಳಿಗೊಮ್ಮೆ ಜರಗುವ ಪಡುಬಿದ್ರಿಯ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಈ ಬಾರಿ ದಾಖಲೆಯ 44 ಢಕ್ಕೆಬಲಿ ಸೇವೆಗಳು ನೆರವೇರಲಿದೆ. ಜ. 15ರಂದು ಮಂಡಲ ಹಾಕುವ ಢಕ್ಕೆಬಲಿ ಸೇವೆಯೊಂದಿಗೆ ಆರಂಭಗೊಳ್ಳಲಿದೆ. ಮಾ. 12ರಂದು ಮಂಡಲ ವಿಸರ್ಜನೆಯ ಢಕ್ಕೆಬಲಿ ಸೇವೆಯೊಂದಿಗೆ ಈ ಬಾರಿಯ ಸೇವೆಗಳು ಸಂಪನ್ನಗೊಳ್ಳಲಿವೆ. ಇದರಲ್ಲಿ ಜ. 26ರಂದು ನಡೆಯಲಿರುವ ನಾಗಮಂಡಲ ಸೇವೆ, ಜ. 19ರಂದು ಹೆಜಮಾಡಿಯ ಬ್ರಹ್ಮಸ್ಥಾನ ಹಾಗೂ ಜ. 21 ರಂದು ಪಡುಬಿದ್ರಿಯ ಮುರುಡಿ ಬ್ರಹ್ಮಸ್ಥಾನದಲ್ಲಿ ಜರಗುವ ಢಕ್ಕೆಬಲಿ ಸೇವೆಗಳೂ ಸೇರಿರುವುದಾಗಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ವೈ. ಎನ್. ರಾಮಚಂದ್ರ ರಾವ್ ತಿಳಿಸಿದ್ದಾರೆ.
ಜೈ ತುಲುನಾಡ್ ಕಾರ್ಲ ವಲಯ : 2024-25 ಸಾಲ್ದ ಕೂಡು ಪಟ್ಟಾಂಗೊ
Posted On: 08 Dec 2024, 09:59 PM
ಕಾರ್ಲ : ಜೈ ತುಲುನಾಡ್ (ರಿ.) ಕಾರ್ಲ ವಲಯೊದ 2024-25 ಸಾಲ್ದ ಕೂಡು ಪಟ್ಟಾಂಗೊ ಕಾರ್ಲದ ಶ್ರೀ ಅನಂತಶಯನ ಕ್ಷೇತ್ರೊಡ್ ಐತಾರ ಜೈ ತುಲುನಾಡ್ (ರಿ.) ಕೇಂದ್ರ ಸಮಿತಿದ ಪ್ರಧಾನ ಕಾರ್ಯಂತೆರ್ ಪೂರ್ಣಿಮಾ ಬಂಟ್ವಾಳ ಮೇರ್ನ ಮುತಾಲಿಕೆಡ್ ನಡತ್ಂಡ್. ಕಾರ್ಲಡ್ ಜೈ ತುಲುನಾಡ್ (ರಿ.) ಕಾರ್ಲ ಎಗ್ಗೆದ ರಚನೆ, ತುಲು ಬಾಸೆದ ಬೊಕ್ಕ ಲಿಪಿತ ಬುಲೆಚ್ಚಿಲ್ಗ್ ಬೋಡಾಪುನ ಪುನೆಪುಗ್ ಯೋಜನೆ ಮಲ್ತೆರ್. ಜೈ ತುಲುನಾಡ್ (ರಿ.) ಸಂಘಟನೆದ ಪದುಕೆರಾಯಿನ ರವಿಚಂದ್ರ ಕಾರ್ಲ, ಅಶ್ವಿನಿ ಕಾರ್ಲ, ಮಹೇಶ್ ಮೊಯ್ಲಿ, ನಿತಿನ್ ನಲ್ಲೂರು, ವೈಶಾಖ್ ಕಾರ್ಕಳ, ಶರತ್ರಾಜ್ ಕಡಬ, ಪ್ರಶಾಂತ್, ನಿಶಾ ಶೆಟ್ಟಿ, ಸುದಿತ್ ಶಿವಪುರ ಅಂಚೆನೆ ಸ್ಥಾಪಕ ಸಮಿತಿದ ಸದಾಶಿವ ಮುದ್ರಾಡಿ, ಸುಮಂತ್ ಹೆಬ್ರಿ ಉಪಸ್ಥಿತೆರಾದಿತ್ತೆರ್.
ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ಸರಿಪಡಿಸುವಂತೆ ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯರಿಂದ ಪತ್ರ
Posted On: 08 Dec 2024, 07:36 PM
ಕಾಪು : ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಕಾಪು ಕೊಪ್ಪಲಂಗಡಿಯ ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಹೆಜಮಾಡಿಯಿಂದ ಬೈಂದೂರುವರೆಗಿನ NH: 66 ಹೆದ್ದಾರಿಯ ಅಂಚುಗಳು ಮತ್ತು ಗುಂಡಿಗಳು ದುಃಸ್ಥಿತಿಯಲ್ಲಿದ್ದು, ಇದು ಪ್ರಯಾಣಿಕರ ಸುರಕ್ಷತೆಗೆ ಗಮನಾರ್ಹ ಅಪಾಯವನ್ನುಂಟು ಮಾಡಿದೆ. ರಸ್ತೆಯ ಸ್ಥಿತಿಯು ಚಾಲಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದು ಮಾತ್ರವಲ್ಲದೆ ಅಪಘಾತಗಳು, ಪಾದಚಾರಿಗಳಿಗೆ, ವಯೋವೃದ್ಧರಿಗೆ, ಶಾಲೆಗೆ ಹೋಗುವ ಮಕ್ಕಳಿಗೆ ಅಪಾಯವನ್ನು ಹೆಚ್ಚಿಸುತ್ತದೆ. ಮೇಲಾಗಿ, ಹಾಳಾದ ರಸ್ತೆ/ಅಂಚುಗಳು, ದಾರಿಗಳು ವಾಹನಗಳಿಗೆ ಹಾನಿಯನ್ನುಂಟು ಮಾಡುತ್ತಿದ್ದು, ಪ್ರಯಾಣಿಕರಿಗೆ ಆರ್ಥಿಕ ನಷ್ಟವನ್ನು ಉಂಟುಮಾಡುತ್ತದೆ. ಸರಿಯಾದ ಬೀದಿ ದೀಪಗಳನ್ನು ಸಹ ಒದಗಿಸಿ. ಗುಂಡಿಗಳು ಮತ್ತು ಹಾಳಾಗಿರುವ ರಸ್ತೆಯ ಅಂಚುಗಳನ್ನು ಸರಿಪಡಿಸಲು ತಕ್ಷಣ ಕ್ರಮಕೈಗೊಳ್ಳಲು ಪತ್ರದಲ್ಲಿ ವಿನಂತಿಸಿದ್ದಾರೆ. ರಾತ್ರಿ ಸಂಚರಿಸುವ ವಾಹನಗಳಿಗೆ ರಸ್ತೆಯ ಫಲಕಗಳು ಸರಿಯಾಗಿ ಕಾಣಿಸದೆ ಇರುವುದರಿಂದ, ವಾಹನಗಳಿಗೆ ತೊಂದರೆಯಾಗಿ ಅಪಘಾತಕ್ಕೆ ಎಡೆ ಮಾಡಿಕೊಡುತ್ತದೆ. ಈ ಬಗ್ಗೆ ಮತ್ತು ಸರ್ವಿಸ್ ರಸ್ತೆಯನ್ನು ಮಾಡಲು ಆಗ್ರಹಿಸಿರುತ್ತಾರೆ. ಈ ಬಗ್ಗೆ ಜಿಲ್ಲಾಧಿಕಾರಿಯ ಗಮನಕ್ಕೂ ತಂದಿರುತ್ತಾರೆ.
ಮುಂಡಾಲ ಯುವವೇದಿಕೆ ಪಡುಬಿದ್ರಿ : ಪಿರಾಕ್ದ ಗೊಬ್ಬುಲ್ನ ಬುಲೆಚ್ಚಿಲ್ - ಗ್ರಾಮೀಣ ಕ್ರೀಡಾಕೂಟ ಉದ್ಘಾಟನೆ
Posted On: 08 Dec 2024, 01:14 PM
ಪಡುಬಿದ್ರಿ : ಮುಂಡಾಲ ಯುವವೇದಿಕೆ (ರಿ.) ಪಡುಬಿದ್ರಿ ನೇತೃತ್ವದಲ್ಲಿ ಉಡುಪಿ, ಮಂಗಳೂರುವರೆಗಿನ ಮುಂಡಾಲ ಸಮಾಜ ಬಾಂಧವರಿಗಾಗಿ ನಡೆದ "ಪಿರಾಕ್ದ ಗೊಬ್ಬುಲ್ನ ಬುಲೆಚ್ಚಿಲ್" ಗ್ರಾಮೀಣ ಕ್ರೀಡಾಕೂಟ ಭಾನುವಾರ ಪಡುಬಿದ್ರಿ ಬೋರ್ಡುಶಾಲಾ ಮೈದಾನದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿತೇಂದ್ರ ಫುಟಾರ್ಡೊ ಉದ್ಘಾಟಿಸಿ ಶುಭ ಹಾರೈಸಿದರು. ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ಯುವಕ ವೃಂದದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮಾತನಾಡಿ, ಇಂದಿನ ಮಕ್ಕಳು ಬಹುಪಾಲು ಸಮವನ್ನು ಮೊಬೈಲ್ ನಲ್ಲಿ ವ್ಯಯಿಸುವ ಇಂದಿನ ಕಾಲಘಟ್ಟದಲ್ಲಿ ತುಳುನಾಡಿನ ಹಿಂದಿನ ಕಾಲದ ಕ್ರೀಡೆಗಳನ್ನು ಮಕ್ಕಳಿಗೆ ಪರಿಚಯಿಸಬೇಕಾಗಿದೆ. ಹಳ್ಳಿಯ ಆಟಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ಉತ್ತಮ. ಈ ನಿಟ್ಟಿನಲ್ಲಿ ಪಡುಬಿದ್ರಿ ಮುಂಡಾಲ ಯುವವೇದಿಕೆಯ ಕಾರ್ಯ ಶ್ಲಾಘನೀಯ ಎಂದರು. ವೇದಿಕೆಯಲ್ಲಿ ರಮೇಶ್ ಯು., ಕಿರಣ್ ಕುಮಾರ್ ಕೊಡಿಯಾಲ್ ಬೈಲ್, ಕೃಷ್ಣ ಶೆಟ್ಟಿ ಪೊಸ್ರಾಲ್, ಕೆ. ಸತ್ಯಶಂಕರ ಶೆಟ್ಟಿ, ರಘುರಾಜ್ ಕದ್ರಿ, ವಿನಯ್, ಪ್ರಕಾಶ್ ಕೋಡಿಕಲ್, ಜಾನಪದ ವಿದ್ವಾಂಸ ಕೆ.ಕೆ. ಪೇಜಾವರ ಮತ್ತಿತರರು ಉಪಸ್ಥಿತರಿದ್ದರು. ಸುರೇಶ್ ಪಡುಬಿದ್ರಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು.
ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ
Posted On: 07 Dec 2024, 07:44 PM
ಉಡುಪಿ : ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಡಿ.8 ರಂದು ವಿಜಯಪುರ ಬಸವನಬಾಗೇವಾಡಿಯಲ್ಲಿ ನಡೆಯುವ ವಾಷಿ೯ಕೋತ್ಸವ ಮತ್ತು ಶರಣ ಸಮ್ಮೇಳನದಲ್ಲಿ ನೀಡಲಾಗುವ ಬಸವ ಶ್ರೀ ಪ್ರಶಸ್ತಿಗೆ ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಆಯ್ಕೆಯಾಗಿದ್ದಾರೆ. ಕಾಯ೯ಕ್ರಮವು ಬಸವಬಾಗೇವಾಡಿಯ ವಿರಕ್ತಮಠದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.6 - 12 : ಪಡುಕುತ್ಯಾರು ಆನೆಗುಂದಿ ಮಠದಲ್ಲಿ ಕೋಟಿ ಕುಂಕುಮಾರ್ಚನೆ
Posted On: 07 Dec 2024, 06:36 PM
ಪಡುಕುತ್ಯಾರು : ಪಡುಕುತ್ಯಾರಿನಲ್ಲಿರುವ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ 2025 ರ ಜನವರಿ 6ರಿಂದ 12ರ ತನಕ ಕೋಟಿ ಕುಂಕುಮಾರ್ಚನೆಯು ಶ್ರೀ ಸರಸ್ವತೀ ಮಾತೃಮಂಡಳಿ, ಆನೆಗುಂದಿ ಪ್ರತಿಷ್ಠಾನದ ವ್ಯಾಪ್ತಿಯ ದೇವಸ್ಥಾನಗಳು ಹಾಗೂ ಸ್ಥಳೀಯ ಪಂಚಾಯತುಗಳ ಹಿಂದೂ ಸಮಾಜ ಬಾಂಧವರ ನೇತೃತ್ವದಲ್ಲಿ ನಡೆಯಲಿದೆ. ಮಹಾಸಂಸ್ಥಾನದ ವಿವಿಧ ಯೋಜನೆಗಳ ಸಾಕಾರ ಮತ್ತು ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ಕೇಪಳಪುಷ್ಪದೊಂದಿಗೆ ಶ್ರೀ ಸರಸ್ವತೀ ಯಾಗ ಶಾಲೆಯಲ್ಲಿ ನಡೆಯುವ ಕೋಟಿ ಕುಂಕುಮಾರ್ಚನೆಯ ವೇಳೆ ವಿವಿಧ ಹೋಮ-ಯಜ್ಞಗಳನ್ನುಆಯೋಜಿಸಲಾಗಿದೆ. ಈ ಕೋಟಿ ಕುಂಕುಮಾರ್ಚನೆಯ ಸುಸಮಯದಲ್ಲಿ ಅಷ್ಟಚಾತ್ವಾರಿಂಶತ್ ನಾರಿಕೇಳ ಗಣಯಾಗ, ರುದ್ರ ಯಾಗ ಮಹಾ ಮೃತ್ಯುಂಜಯ ಯಾಗ, ವಿಷ್ಣು ಹವನ, ಸೌರ ಸೂಕ್ತ ಹೋಮ, ಶ್ರೀ ಸರಸ್ವತೀ ಹೋಮ, ದುರ್ಗಾ ಹೋಮ, ವಿಶ್ವಕರ್ಮ ಹೋಮ, ನವಗ್ರಹ ಹೋಮ ದಶ ಸಹಸ್ರ ಕದಳಿ ಶ್ರೀ ಲಲಿತಾ ಸಹಸ್ರನಾಮಗಳೊಂದಿಗೆ ಹೋಮಗಳು, ಶ್ರೀ ಸೂಕ್ತ ಹೋಮ ಎಂಬೀ ಹೋಮ ಯಜ್ಞಗಳು ಇದೇ ವೇಳೆ ಸಂಪನ್ನಗೊಳ್ಳಲಿದೆ. ಕೋಟಿ ಕುಂಕುಮಾರ್ಚನೆಯ ಆಯೋಜನೆಯ ಬಗ್ಗೆ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಿದ್ದರು. ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಹಿಂದೂ ಸಮಾಜದ ಮುಖಂಡರುಗಳಾದ ಪ್ರಸಾದ್ ಶೆಟ್ಟಿ ಕುತ್ಯಾರು, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ.ಸುವರ್ಣ, ಲತಾ ಎಸ್ ಆಚಾರ್ಯ ಕುತ್ಯಾರು, ದಿವ್ಯಾ ಶೆಟ್ಟಿಗಾರ್, ಶರ್ಮಿಳಾ, ಮೋಹಿನಿ ಸಿ. ಹೆಗ್ಡೆ, ಇಂದಿರಾ ಆಚಾರ್ಯ, ಶಿವರಾಮ ಭಂಡಾರಿ, ಪ್ರಸಾದ್ ಶೆಟ್ಟಿ ವಳದೂರು, ಜನಾರ್ಧನ ಆಚಾರ್ಯ ಕಳತ್ತೂರು, ನವೀನ್ ಶೆಟ್ಟಿ ಕುತ್ಯಾರು, ಶೈಲೇಶ್ ಕುತ್ಯಾರು, ನಾಗರತ್ನ, ವಿನೋದ, ಗೀತಾ, ಲತಾ ಎಸ್. ಎಂ. ಮುಂತಾದವರು ಭಾಗವಹಿಸಿ, ಮಾಹಿತಿ ನೀಡಿದರು. ದಶಂಬರ 11ರಂದು ಸಭೆ : ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ ಮಹಾಸಂಸ್ಥಾನದ ವ್ಯಾಪ್ತಿಯ ದೇವಸ್ಥಾನಗಳ ಮುಖಂಡರು, ಸಹಟ್ರಸ್ಟ್ , ಸಂಸ್ಥೆಗಳ ಮುಖಂಡರು ಹಾಗೂ ಸ್ಥಳೀಯ ಗ್ರಾಮಗಳ ಹಿಂದೂ ಸಂಘಟನೆಗಳ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರ ಸಭೆಯು ದಶಂಬರ 11ರಂದು ಅಪರಾಹ್ನ 3 ಘಂಟೆಗೆ ಪಡುಕುತ್ಯಾರು ಆನೆಗುಂದಿ ಮಠದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಮಹಾಸಂಸ್ಥಾನದ ಶ್ರೀ ಸರಸ್ವತೀ ಮಾತೃಮಂಡಳಿಯ ಅಧ್ಯಕ್ಷೆ ಸಂಧ್ಯಾಲಕ್ಷ್ಮಣ ಆಚಾರ್ಯ ಉಡುಪಿ, ಬಿ.ಸೂರ್ಯಕುಮಾರ್ ಹಳೆಯಂಗಡಿ, ಅರವಿಂದ ವೈ. ಆಚಾರ್ಯ ಬೆಳುವಾಯಿ , ಬಿ.ಎಂ ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ ನ್ಯಾಯವಾದಿ ಕೆ. ಪ್ರಭಾಕರ ಆಚಾರ್ಯ ಕೋಟೆಕಾರು, ಕೆ. ನಾಗರಾಜ ಆಚಾರ್ಯ ಕಾಡಬೆಟ್ಟು, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ತ್ರಾಸಿ ಸುಧಾಕರ ಆಚಾರ್ಯ,ಗುರುರಾಜ ಕೆ.ಜೆ ಆಚಾರ್ಯ ಮಂಗಳೂರು, ಗಣೇಶ್ ಆಚಾರ್ಯ ಕೆಮ್ಮಣ್ಣು, ಬೆಳುವಾಯಿ ಸುಂದರ ಆಚಾರ್ಯ ಮಂಗಳೂರು, ಜಿ.ಟಿ ಆಚಾರ್ಯ ಮುಂಬಯಿ, ದಿನೇಶ್ ಆಚಾರ್ಯ ಕಿನ್ನಿಗೋಳಿ, ವಿದ್ವಾನ್ ಬ್ರಹ್ಮಶ್ರೀ ಅಕ್ಷಯ ಶರ್ಮಾ ಕಟಪಾಡಿ, ಕೇಶವ ಶರ್ಮಾ ಇರುವೈಲು, ಮನೋಜ್ ಶರ್ಮಾ ಕಟಪಾಡಿ, ಲೋಲಾಕ್ಷ ಶರ್ಮಾ ಕಟಪಾಡಿ, ದಯಾನಂದ ಆಚಾರ್ಯ ತೆಂಕನಿಡಿಯೂರು, ಉಷಾ ಜಿ.ಟಿ ಆಚಾರ್ಯ, ರಮಾ ನವೀನ್ ಆಚಾರ್ಯ ಕಾರ್ಕಳ ಆಶಾ ಎನ್ ಆಚಾರ್ಯ, ಭಾಗವಹಸಿದ್ದರು. ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರ್ ಸ್ವಾಗತಿಸಿ, ಕಾರ್ಯದರ್ಶಿ ಕನ್ಯಾನ ಜನಾರ್ದನ ಆಚಾರ್ಯ ವಂದಿಸಿದರು.
ಮಣಿಪಾಲ: ಮರ್ಡರ್ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
Posted On: 06 Dec 2024, 11:14 AM
ಮಣಿಪಾಲ: ಲಕ್ಷ್ಮೀಂದ್ರನಗರದ ಬಳಿಯ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಚುಚ್ಚಿ ಹತ್ಯೆಗೈದ ಘಟನೆ ಶುಕ್ರವಾರ(ಡಿ.6) ನಡೆದಿದೆ. ಹತ್ಯೆಯಾದವನನ್ನು ಹೊನ್ನಾವರದ ಕಾಸಕೋಡು (ನಿವಾಸಿ ಶ್ರೀಧರ ನಾಯಕ) ಎಂದು ತಿಳಿದುಬಂದಿದೆ. ಘಟನೆ ಗುರುವಾರ ರಾತ್ರಿ ಆಗಿರುವ ಸಾಧ್ಯತೆ ಇದ್ದು. ಶುಕ್ರವಾರ ಬೆಳಗ್ಗೆ ವಾಯುವಿಹಾರಕ್ಕೆ ಹೋದಾಗ ಸ್ಥಳೀಯರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕುಮಾರ್, ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜ್, ಮಂಜುನಾಥ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇನ್ನಾದಲ್ಲಿ ಅದಾನಿ ವಿದ್ಯುತ್ ಟವರ್ ನಿರ್ಮಾಣದ ವಿರುದ್ದ ಅಹೋರಾತ್ರಿ ಧರಣಿ
Posted On: 05 Dec 2024, 10:03 PM
ಕಾರ್ಕಳ : ತಾಲೂಕಿನ ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ನಂದಿಕೂರು ಅದಾನಿ ಪವರ್ ಪ್ರಾಜೆಕ್ಟ್ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿಯ ಮುನ್ಸೂಚನೆ ದೊರೆಯುತ್ತಿದ್ದಂತೆ ಬೃಹತ್ ಸಂಖ್ಯೆಯಲ್ಲಿ ಸೇರಿದ ಗ್ರಾಮಸ್ಥರು ಟವರ್ ನಿರ್ಮಾಣ ವಿರೋದಿ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮಸ್ಥರ ವಿರೋಧದ ನಡುವೆ ಕಾಮಗಾರಿ ಆರಂಭಿಸುವುದು ಖಂಡನೀಯ, ಯಾವ ಕಾರಣಕ್ಕೂ ಕಾಮಗಾರಿ ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಸಮಿತಿಯ ಅಧ್ಯಕ್ಷರಾದ ಅಮರನಾಥ ಶೆಟ್ಟಿ ಇನ್ನಾ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ತಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ, ಚಂದ್ರಹಾಸ ಶೆಟ್ಟಿ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕುಶ.ಆರ್. ಮೂಲ್ಯ, ಜಯ.ಎಸ್.ಕೋಟ್ಯಾನ್, ರಾಜಾ ಭಟ್, ಗಣಪತಿ ಹೆಗ್ಡೆ, ದೀಪಕ್ ಕಾಮತ್, ಆರ್.ಕೆ. ದಿವಾಕರ ಶೆಟ್ಟಿ, ಎಮ್.ಪಿ. ಮೊಯಿದಿನಬ್ಬ, ಹರೀಶ್ ಶೆಟ್ಟಿ, ಶುಭದ್ ರಾವ್, ಕೃಷ್ಣ ಕುಮಾರ್ ಶೆಟ್ಟಿ, ಯೋಗೀಶ್ ಇನ್ನಾ, ಅನಿತಾ ಡಿಸೋಜ, ಪ್ರದೀಪ್ ಬೇಲಾಡಿ, ಚಂದ್ರಹಾಸ ಶೆಟ್ಟಿಗಾರ್, ರಂಜಿತ್ ಸಿ.ಟಿ, ಸೂರಜ್ ಶೆಟ್ಟಿ, ಸುಹಾಸ್ ಕಾವ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಪು ಅಂಚೆ ಪ್ರಗತಿ ಪರಿಶೀಲನಾ ಸಭೆ
Posted On: 05 Dec 2024, 09:49 PM
ಕಾಪು : ಇಲ್ಲಿನ ವಿಭಾಗೀಯ ಉಪ ಅಂಚೆ ಕಚೇರಿಯಲ್ಲಿ ಅಂಚೆ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು. ಉಡುಪಿ - ಕುಂದಾಪುರ ಉಪ ವಿಭಾಗಗಳ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ರವರು ಪ್ರಸಕ್ತ ವಿತ್ತೀಯ ವರ್ಷದಲ್ಲಿ ಕಾಪು ಹಾಗು ಅದರ ಶಾಖಾ ಅಂಚೆ ಕಚೇರಿಗಳು ಸಾರ್ವಜನಿಕರಿಗೆ ನೀಡುತ್ತಿರುವ ವಿವಿಧ ಜನ ಸ್ನೇಹಿ ಸೌಲಭ್ಯಗಳ ಮತ್ತು ಕ್ಲಪ್ತ ಕಾಲಕ್ಕೆ ಅಂಚೆ ಪತ್ರಗಳ ಬಟವಾಡೆಯ ಸಾಧನೆಯ ತುಲನಾತ್ಮಕ ಪರಿಶೀಲನಾ ಸಭೆ ನಡೆಸಿ, ಇನ್ನೂ ಹೆಚ್ಚಿನ ಜನರನ್ನು ಅಂಚೆ ಸೌಲಭ್ಯಗಳು ತಲಪುವಂತೆ ಕರೆ ನೀಡಿದರು. ಕಾಪು ಅಂಚೆ ಕಚೇರಿಯ ಎಲ್ಲಾ ಸಿಬ್ಬಂದಿ, ಕಳತ್ತೂರು ಅಂಚೆ ಪಾಲಕ ದಿವಾಕರ ಶೆಟ್ಟಿ, ಕಾಪು ಅಂಚೆ ಸಹಾಯಕರುಗಳಾದ ಪ್ರವೀಣ್ ಎರ್ಮಾಳು, ಶ್ರೀನಿವಾಸ್ ರಾವ್ ಪಣಿಯೂರು, ವಸಂತಿ ಎಸ್, ಮಜೂರು, ಮಲ್ಲಾರು, ಪಾದೂರು, ಉಳಿಯಾರಗೊಳಿ (ಕೈಪುಂಜಾಲು) ಶಾಖಾ ಅಂಚೆ ಪಾಲಕರು ಮತ್ತು ಸಹಾಯಕ ಅಂಚೆ ಪಾಲಕರು ಸಭೆಯಲ್ಲಿ ಭಾಗವಹಿಸಿದರು. ಅಂಚೆ ಪಾಲಕಿ ಯಶೋಧ ಕಾರ್ಯಕ್ರಮವನ್ನು ಆಯೋಜಿಸಿ, ನಿರ್ವಹಿಸಿದರು.
ಎಪ್ರಿಲ್ 11 ರಿಂದ ಕನ್ನಂಗಾರ್ ಉರೂಸ್ ; ಕರಪತ್ರ ಬಿಡುಗಡೆ
Posted On: 05 Dec 2024, 09:38 PM
ಪಡುಬಿದ್ರಿ : ಕನ್ನಂಗಾರ್ ಜುಮ್ಮಾ ಮಸೀದಿ ಅಧೀನದಲ್ಲಿರುವ ಮೂರು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಶೈಖುನಾ ಸಿರಜುದ್ದೀನ್ ವಲಿಯುಲ್ಲಾಹಿ ದರ್ಗಾ ಕನ್ನಂಗಾರ್ ಉರೂಸ್ 2025ರ ಎಪ್ರಿಲ್ 11ರಿಂದ 19ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಉರೂಸ್ನ ಕರಪತ್ರ ಬಿಡುಗಡೆಗೊಳಿಸಲಾಯಿತು. ಕನ್ನಂಗಾರ್ ಜುಮ್ಮಾ ಮಸೀದಿ ಮುರ್ರಿಸ್ ಅಶ್ರಫ್ ಸಖಾಫಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಕನ್ನಂಗಾರ್ ಜುಮಾ ಮಸೀದಿ ಮುಂಭಾಗದಲ್ಲಿ ಅಂತ್ಯವಿಶ್ರಮ ಹೊಂದಿರುವ ಶೈಖುನಾ ಸಿರಜುದ್ದೀನ್ ವಲಿಯುಲ್ಲಾಹಿ ದರ್ಗಾ ಇತಿಹಾಸ ಪ್ರಸಿದ್ಧವಾಗಿದ್ದು, ಪ್ರತೀ ಮೂರು ವರ್ಷಗಳಿಗೊಮ್ಮೆ ನಡೆಯುವ ಉರೂಸ್ ಸಮಾರಂಭ ಈ ಭಾರಿ ನಡೆಯಲಿದ್ದು, ಈ ನಾಡಿನ ಸೌಹಾರ್ದಯುತವಾಗಿ ನಡೆಯುವ ಊರಿನ ಸಂಭ್ರಮವಾಗಿದೆ ಎಂದರು. ಉರೂಸ್ ಸಮಿತಿ ಅಧ್ಯಕ್ಷ ಹಾಜಿ ಗುಲಾಂ ಮುಹಮ್ಮದ್ ಹೆಜಮಾಡಿ ಮಾತನಾಡಿ, ಈ ಭಾರಿಯ ಉರೂಸ್ ಸಮಾರಂಭವು 2025ರ ಎಪ್ರಿಲ್ 11ರಿಂದ ನಡೆಯಲಿದ್ದು, ಉರೂಸ್ನಲ್ಲಿ ಸಾಮಾಜಿ, ಧಾರ್ಮಿಕ, ಜನಪ್ರತಿನಿಧಿಗಳು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಮಸೀದಿ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್, ಕಾರ್ಯದರ್ಶಿ ಹಾಜಿ ಶೇಖ್ ಅಬ್ದುಲ್ಲಾ ಮಿನಾ, ಕೋಶಾಧಿಕಾರಿ ಅಬ್ದುಲ್ ಖಾದರ್ ಹಾಜಿ, ಜತೆಕಾರ್ಯದರ್ಶಿ ಅಬ್ದುಲ್ ಮಜೀದ್ ಮೆಹರಾಜ್, ಅಬ್ದುಲ್ ರಹ್ಮಾನ್ ಬಾವಾ, ಮುಹಮ್ಮದ್ ಕಬೀರ್, ಉರೂಸ್ ಸಮಿತಿಯ ಉಪಾಧ್ಯಕ್ಷ ಹನೀಫ್ ಹಾಜಿ, ಇಬ್ರಾಹಿಂ ಸನಾ, ಕಾರ್ಯದರ್ಶಿ ಸುಲೈಮಾನ್ ನೂರಿ, ಹಮೀದ್ ಚಾಯ್ಸ್, ಕೋಶಾಧಿಕಾರಿಯಾಗಿ ಕಬೀರ್ ಹಾಜಿ ಉಪಸ್ಥಿತರಿದ್ದರು.
