Updated News From Kaup

ರಾಜ್ಯಮಟ್ಟದ ‌ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತರಾದ ಎಮ್. ನೀಲಾನಂದ ನಾಯ್ಕ್

Posted On: 22-10-2024 11:13PM

ಕಾಪು : ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರಿ.) ಕರ್ನಾಟಕ (ರುಪ್ಸ) ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ನಡೆದ ರುಪ್ಸ ಸಂಭ್ರಮ ಮತ್ತು ರುಪ್ಸ ಮಿತ್ರ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಮ್. ನೀಲಾನಂದ ನಾಯ್ಕ್ ರನ್ನು ರಾಜ್ಯಮಟ್ಟದ ವಿದ್ಯಾರತ್ನ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಯಿತು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವದುರ್ಗಾ ಮಂಟಪ ಶಂಕುಸ್ಥಾಪನೆ

Posted On: 22-10-2024 06:42PM

ಕಾಪು : ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನವದುರ್ಗಾ ಮಂಟಪದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಯಿತು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಗಳ ಕಚೇರಿ, 9 ಸೇವಾ ಕೌಂಟರ್, ಮೀಟಿಂಗ್ ಹಾಲ್ ಒಳಗೊಂಡಿರುವ ಸುಸಜ್ಜಿತ ಕಟ್ಟಡದ ಕಾಮಗಾರಿಗೆ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ. ಪಿ ಕುಮಾರಗುರು ತಂತ್ರಿಯವರ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಶಂಕುಸ್ಥಾಪನೆ ಮಾಡಲಾಯಿತು.

ಅ. 23 : ಪಡುಬಿದ್ರಿ ದೇಗುಲ ಜೀರ್ಣೋದ್ಧಾರ ಕುರಿತು ಗ್ರಾಮ ಸಮಿತಿಯ ವಿಶೇಷ ಸಭೆ

Posted On: 22-10-2024 07:13AM

ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಸ್ತಾವಿತ ಕಾಮಗಾರಿ ಮತ್ತು ಪೂರ್ವಭಾವಿ ಧಾರ್ಮಿಕ ವಿಧಿ, ಸಂಕೋಚ ಹಾಗೂ ವಿಶೇಷವಾಗಿ ಧನ ಸಂಗ್ರಹಣೆ ಕುರಿತು ಚರ್ಚಿಸಲು ಅ.23ರಂದು ಸಂಜೆ 5 ಗಂಟೆಗೆ ಗ್ರಾಮ ಸಮಿತಿಯ ವಿಶೇಷ ಸಭೆ ದೇವಸ್ಥಾನದಲ್ಲಿ ನಡೆಯಲಿದೆ.

ಉಡುಪಿ : ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ತರಬೇತಿಗೆ ಮಹತ್ವವಿದೆ - ಡಾ. ಗಾಯತ್ರಿ ಎನ್

Posted On: 22-10-2024 06:58AM

ಉಡುಪಿ : ಮಾನವ ಸಂಪನ್ಮೂಲದ ಅಭಿವೃದ್ಧಿಯಲ್ಲಿ ತರಬೇತಿ ಪ್ರಧಾನ ಪಾತ್ರ ವಹಿಸುತ್ತದೆ. ಪರಿಣಾಮಕಾರಿ ತರಬೇತಿಯು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಬಹು ಮುಖ್ಯವಾದುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯ ರೆಡ್ ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ನಾಯಕರಿಗೆ ನಡೆದ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾನಾಡುತ್ತಿದ್ದರು.

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆಗೆ ಚಾಲನೆ

Posted On: 20-10-2024 04:17PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ನವದುರ್ಗಾ ಲೇಖನ ಯಜ್ಞ ಸಮಿತಿಯ ನೇತೃತ್ವದಲ್ಲಿ ನವದುರ್ಗಾ ಲೇಖನ ಯಜ್ಞ ಪೂರ್ವಭಾವಿಯಾಗಿ ನವದಿನಗಳ ಕಾಲ ಹಮ್ಮಿಕೊಂಡಿರುವ 108 ತಂಡಗಳ ಭಜನಾ ಸಂಕೀರ್ತನೆಗೆ ರವಿವಾರ ಚಾಲನೆ ನೀಡಲಾಯಿತು.

ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಸನ್ಮಾನ

Posted On: 20-10-2024 09:32AM

ಕಾಪು : ಸಮಾಜ ಸೇವೆಗಾಗಿ ಇತ್ತೀಚೆಗೆ ಗೌರವ ಡಾಕ್ಟರೆಟ್ ಪದವಿ ಪಡೆದ ಕಾಪುವಿನ ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಹಜ್ರತ್ ಸಾದಾತ್ ವೃದ್ದಾಶ್ರಮ ರವರ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ವೃದ್ದಾಶ್ರಮದ ಸ್ಥಾಪಕ ಅಧ್ಯಕ್ಷರಾದ ಮೊಹಮ್ಮದ್ ಶಾಫಿ ಮದಾರಿಯವರ ನೇತೃತ್ವದಲ್ಲಿ ಆಶ್ರಮದ ಖಾಸಗಿ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಕಾಪು ಹೊಸಮಾರಿಗುಡಿ : ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವದಿನಗಳ ಪರ್ಯಂತ ಭಜನಾ ಸಂಕೀರ್ತನೆ

Posted On: 19-10-2024 10:43AM

ಕಾಪು : ಇಲ್ಲಿನ ಮಾರಿಯಮ್ಮನ ಸನ್ನಿದಾನದಲ್ಲಿ ಪ್ರತಿಷ್ಠಾ ಬ್ರಹ್ಮಕಳಶೋತ್ಸವಕ್ಕೆ ಪೂರ್ವಭಾವಿಯಾಗಿ ನವದುರ್ಗಾ ಲೇಖನವನ್ನು ಬರೆಯುವ ಮಹಾ ಸಂಕಲ್ಪವನ್ನು ಲೋಕಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯ ವೃದ್ಧಿಗಾಗಿ ಆಯೋಜಿಸಲಾಗಿದ್ದು ಇದರ ಪ್ರಯುಕ್ತ ಅಕ್ಟೋಬರ್ 20 ರಿಂದ ಮೊದಲ್ಗೊಂಡು 28 ರ ವರೆಗೆ ನವದಿನಗಳ ಪರ್ಯಂತ ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನೊಳಗೊಂಡ 108 ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ.

ಅ. 19 (ಇಂದು) : ದೇವದಾಸ್ ಶೆಟ್ಟಿಗೆ ಜಿಲ್ಲಾ ಕ.ಸಾ.ಪ. ಪುರಸ್ಕಾರ

Posted On: 19-10-2024 10:39AM

ಕಾಪು : ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ ರುವಾರಿ, ನೆಲಮೂಲ ಪಾರಂಪರಿಕ ಹಿನ್ನೆಲೆಯ ಕೊರಗ ಸಮುದಾಯದ ಶ್ರೇಯೋಭಿವೃದ್ಧಿಗೆ ತನ್ನ ಸಮಸ್ತ ಜೀವನವನ್ನೇ ಮುಡಿಪಾಗಿರಿಸಿದ ಕಾಪು ಕಲ್ಯಾ ದೇವದಾಸ್ ಶೆಟ್ಟಿ ಅವರಿಗೆ ಅ.19ರಂದು ಸಂಜೆ 4 ಗಂಟೆಗೆ ಕಲ್ಯಾದಲ್ಲಿ ನಡೆಯುವ ಉಡುಪಿ ಜಿಲ್ಲಾ ಕಸಾಪ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 27 : ಹೇರೂರು ಫ್ರೆಂಡ್ಸ್ ಕ್ಲಬ್, 92 ಹೇರೂರು - ಗೂಡುದೀಪ ಸ್ಪರ್ಧೆ

Posted On: 19-10-2024 10:38AM

ಕಾಪು : ಹೇರೂರು ಫ್ರೆಂಡ್ಸ್ ಕ್ಲಬ್, 92 ಹೇರೂರು ಇವರ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ 92 ಹೇರೂರಿನ ಹಾಗೂ ಹೇರೂರಿನ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅಕ್ಟೋಬರ್ 27, ಆದಿತ್ಯವಾರ ಸಂಜೆ 4 ಗಂಟೆಗೆ ಸಾರ್ವಜನಿಕ ವೇದಿಕೆ, 92 ಹೇರೂರು ಇಲ್ಲಿ ಗೂಡುದೀಪ ಸ್ಪರ್ಧೆ ಏರ್ಪಡಿಸಲಾಗಿದೆ.

ನ. 10: ಫಲಿಮಾರುವಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Posted On: 18-10-2024 01:22PM

ಪಡುಬಿದ್ರಿ : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಫಲಿಮಾರು, ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.), ಉಡುಪಿ, ರಕ್ತನಿಧಿ ವಿಭಾಗ ಕೆ.ಎಂ.ಸಿ. ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 10, ಆದಿತ್ಯವಾರ ಬೆಳಿಗ್ಗೆ 9 ರಿಂದ ಅಪರಾಹ್ನ ಗಂಟೆ 2 ರ ವರೆಗೆ ಶ್ರೀ ಗಣೇಶ ಮಂಟಪ, ಫಲಿಮಾರು ಇಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜರಗಲಿದೆ.