Updated News From Kaup
ಪಡುಕುತ್ಯಾರು, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ
Posted On: 03 Dec 2024, 07:11 AM
ಕಾಪು : ಪಡುಕುತ್ಯಾರು, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಪಂಚಮ ವಾರ್ಷಿಕ ಮಹಾಸಭೆಯು ಡಿ.1ರಂದು ದುರ್ಗಾ ಮಂದಿರದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟ್ಪಾಡಿಯ ಆಡಳಿತ ಮೊಕ್ತೇಸರ ಮುರಹರಿ ಕೆ ಆಚಾರ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘವು ಉತ್ತರೋತರ ಅಭಿವೃದ್ದಿ ಹೊಂದಲಿ ಹಾಗೂ ಮಂದಿರದ ಜೀರ್ಣೋದ್ದಾರ ಕೆಲಸ ಶ್ರೀಘ್ರ ಪ್ರಾರಂಭವಾಗಲೀ ಎಂದು ಹಾರೈಸಿದರು. ಸನ್ಮಾನ : ಮುಖ್ಯ ಅತಿಥಿಯಾಗಿ ಆಗಮಿಸಿದ ಮುರಹರಿ ಕೆ ಆಚಾರ್ಯರವರನ್ನು, ಹಿರಿಯ ಸದಸ್ಯರಾದ ಸಂಜೀವ ಆಚಾರ್ಯ ದಂಪತಿಗಳನ್ನು ಮತ್ತು ಸ್ಥಳ ದಾನಿಗಳಾದ ಶಕುಂತಲ ಆರ್ ಆಚಾರ್ಯ, ಪಿ ಸಂಪತ್ ಕುಮಾರ್, ಪಿ ಮರಳಿಧರ ಆಚಾರ್ಯ, ಸುಪರ್ಣ ಡಿ. ಮತ್ತು ಸಂಘದ ಕಾರ್ಯಧ್ಯಕ್ಷರಾದ ಕಾಪು ಜಯರಾಮ ಆಚಾರ್ಯರವರನ್ನು ವಿಶೇಷ ಕಾರ್ಯಭಾರ ನಿರ್ವಹಣೆಗಾಗಿ ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರ / ಬಹುಮಾನ ವಿತರಣೆ : ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಮತ್ತು ಕಲಾ ನೈಪುಣ್ಯತೆ ಹೊಂದಿದ ಸಮಾಜದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು ಹಾಗೂ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಸಂಘದ ಅಧ್ಯಕ್ಷರಾದ ನಾಗೇಶ ಆರ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟ್ಪಾಡಿ ದೇವಸ್ಥಾನದ ಮೊಕ್ತಶ್ವರರಾದ ಬಿಳಿಯಾರು ಗಣಪತಿ ಆಚಾರ್ಯ, ಡಿಂಡಿಬೆಟ್ಟು ಗಂಗಾಧರ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾದ ಮಾಧವ ಎಸ್ ಆಚಾರ್ಯ, ಕಾರ್ಯಾಧ್ಯಕ್ಷರಾದ ಜಯರಾಮ ಆಚಾರ್ಯ, ಗೌರವ ಸಲಹೆಗಾರರು, ಮೊಕ್ತೆಶ್ವರರಾದ ಪ್ರಕಾಶ್ ಎಸ್ ಆಚಾರ್ಯ ಮತ್ತು ಚಂದ್ರಯ್ಯ ಪಿ ಆಚಾರ್ಯ, ಉಪಾಧ್ಯಕ್ಷರಾದ ಕೆ ವಿವೇಕಾನಂದ ಆಚಾರ್ಯ, ಪದಾಧಿಕಾರಿಗಳಾದ, ಪ್ರವೀಣ ಎಸ್ ಆಚಾರ್ಯ, ಪ್ರಕಾಶ್ ಎಸ್ ಆಚಾರ್ಯ, ಉದಯಕುಮಾರ್, ಹೇಮಾವತಿ ಪಿ ಆಚಾರ್ಯ, ಪ್ರಸನ್ನ ಎಸ್ ಆಚಾರ್ಯರವರು ಉಪಸ್ಥಿತರಿದ್ದರು. ಸುರೇಶ್ ಆರ್ ಆಚಾರ್ಯ ಸ್ವಾಗತಿಸಿದರು. ಗೌರವಾಧ್ಯಕ್ಷರಾದ ಹರಿಶ್ಚಂದ್ರ ಎಚ್ ಆಚಾರ್ಯ ಪ್ರಸ್ತಾವನೆಗೈದರು. ಕಾರ್ಯದರ್ಶಿ ದಿನೇಶ್ ಎಸ್ ಆಚಾರ್ಯ ವರದಿ ಮಂಡಿಸಿದರು. ಕೋಶಾಧಿಕಾರಿ ಗಂಗಾಧರ ಎಸ್ ಆಚಾರ್ಯರವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಲತಾ ಪ್ರಸಾದ್ ಆಚಾರ್ಯ ಮತ್ತು ಗಂಗಾಧರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಜ್ಯೋತಿ ಪ್ರಕಾಶ ಆಚಾರ್ಯ ವಂದಿಸಿದರು.
ಡಿ. 3 :ಫೆಂಗಲ್ ಚಂಡಮಾರುತ - ದ.ಕ. ಮತ್ತು ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ
Posted On: 02 Dec 2024, 06:38 PM
ಉಡುಪಿ : ಫೆಂಗಲ್ ಚಂಡಮಾರುತ ಪರಿಣಾಮ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಉಭಯ ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘ : ಮಹಾಸಭೆ, ಪ್ರತಿಭಾ ಪುರಸ್ಕಾರ, ಗುರಿಕಾರರಿಗೆ ಗೌರವಧನ ವಿತರಣೆ
Posted On: 01 Dec 2024, 05:01 PM
ಉದ್ಯಾವರ : ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘ (ರಿ.) ಪಿತ್ರೋಡಿ ಉದ್ಯಾವರ ಇದರ ಮಹಾಸಭೆ, ದಿl ಯು. ಸದಿಯ ಸಾಹುಕಾರರ ಸ್ಮರಣಾರ್ಥ 14 ಗ್ರಾಮ ಸಭೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ ಕಾರ್ಯಕ್ರಮ ಭಾನುವಾರ ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಸಭಾಂಗಣದಲ್ಲಿ ಜರಗಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಕೇಶವ ಎಂ. ಕೋಟ್ಯಾನ್, ಸಾಹುಕಾರ್ ಕ್ಯಾನಿಂಗ್ ಕಂ. ಮಾಲಕರಾದ ಯು. ಗಣೇಶ್, ಉಡುಪಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾl ಅಶೋಕ್, ಗುರಿಕಾರರಾದ ಸದಾರಾಮ್ ಮೆಂಡನ್ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆ
Posted On: 01 Dec 2024, 03:46 PM
ಶಿರ್ವ : ಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆಯಾಗಿದ್ದಾರೆ. ಅಂತರಾಷ್ಟ್ರೀಯ ಧರ್ಮ ಸಂಸದ್ನಲ್ಲಿ ಕರ್ನಾಟಕದ ಸಂತರ ಪರವಾಗಿ ಭಾಗವಹಿಸಿದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಸನಾತನ ಹಿಂದೂ ಧರ್ಮದ ಜಾಗೃತಿ ಹಾಗೂ ಸಂಘಟನಾ ಸೇವೆಗಳನ್ನು ಆಧಾರವಾಗಿ ಇಟ್ಟು ಮಥುರಾ ಬೃಂದಾವನದಲ್ಲಿ ನ.27ರಂದು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಖಚಿತ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷರಾದ ಮಹೇಂದರ್ ಪ್ರತಾಪ್ ಸಿಂಗ್ ರವರು ಕಳುಹಿಸಿರುತ್ತಾರೆ ಎಂದು ಮಠದ ಪ್ರಕಟನೆ ತಿಳಿಸಿದೆ.
ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ : ವೃದ್ಧ ದಂಪತಿಗಳಿಗೆ ಒಂದು ಲಕ್ಷ ರೂ. ನೆರವು
Posted On: 01 Dec 2024, 03:35 PM
ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ವತಿಯಿಂದ ಅಂಬಿಗ ನಾ ನಿನ್ನ ನಂಬಿದೆ ಎಂಬ ವಿನೂತನ ಅಭಿಯಾನದ ಅಂಗವಾಗಿ ಗುರುಪುರ ವೃದ್ಧ ದಂಪತಿಗಳ ಫಿನೈಲ್ ಮಾರಾಟ ಮಾಡಿ ಅವರಿಗೆ ಧನ ಸಹಾಯ ನೀಡುವ ಕಾರ್ಯಕ್ರಮ ಅಜ್ಜರಕಾಡು ಎಲ್ಐಸಿ ಕಚೇರಿಯ ಹತ್ತಿರ ನಡೆಯಿತು. ಗುರುಪುರದ ವೃದ್ಧ ದಂಪತಿಗಳಾದ ಶಿವಾನಂದ ಮತ್ತು ಪಾರ್ವತಿ ಕಳೆದ 40 ವರ್ಷಗಳಿಂದ ಫಿನೈಲ್ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು ಅವರ ಕಷ್ಟಕ್ಕೆ ನೆರವಾಗುವ ಉದ್ದೇಶದಿಂದ ಈ ಅಭಿಯಾನ ನಡೆಯಿತು. ಈ ಸಂದರ್ಭ ಒಂದು ಲಕ್ಷ ರೂ. ಸಂಗ್ರಹಿಸಿ ದಂಪತಿಗಳ ಜೀವನ ನಿವ೯ಹಣಿಗೆ ನೀಡಲಾಯಿತು. ಹೋಂ ಡಾಕ್ಟರ್ ಫೌಂಡೇಶನ್ ಮುಖ್ಯಸ್ಥರಾದ ಡಾ. ಶಶಿಕಿರಣ್ ಶೆಟ್ಟಿ, ಡಾ. ಸುಮಾ ಶೆಟ್ಟಿ, ಸುಂದರ ಪೂಜಾರಿ, ಉದಯ ನಾಯ್ಕ್, ಸುಜಯ, ರಾಘವೇಂದ್ರ ಪ್ರಭು, ಕವಾ೯ಲು, ಜನಾದ೯ನ್ ಕೊಡವೂರು, ಸುಂದರ ಶೆಟ್ಟಿ, ಶಶಿಕಲಾ ಶೆಟ್ಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಪ್ರಥಮ ಎಂ.ಎಸ್.ಡಬ್ಲ್ಯೂ ವಿಭಾಗದ ವಿದ್ಯಾರ್ಥಿಗಳಾದ ಗಿರೀಶ್, ಪ್ರೇಮ್, ಸಾಯಿ, ಅಕ್ಷಯ, ಗೌತಮಿ, ದಾಕ್ಷಾಯಿಣಿ, ಅಂಕಿತಾ, ಅಕ್ಷಯ, ಬಿ.ಆರ್ ದನುಷ, ಪ್ರಿಯಾ ಉಪಸ್ಥಿತರಿದ್ದರು.
ಎಸ್ಕೆಪಿಎ - ದಸರಾ ವೈಭವ ಛಾಯಾಚಿತ್ರ ಸ್ಪರ್ಧೆ : ಸಚಿನ್ ಉಚ್ಚಿಲ ದ್ವಿತೀಯ ಸ್ಥಾನ
Posted On: 01 Dec 2024, 09:02 AM
ಕಾಪು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಷನ್ (ರಿ.) ಮಂಗಳೂರು ವಲಯದ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ "ದಸರಾ ವೈಭವ" ಛಾಯಾಚಿತ್ರ ಸ್ಪರ್ಧೆಯಲ್ಲಿ ಉಚ್ಚಿಲ ದಸರಾದ ಛಾಯಾಚಿತ್ರಕ್ಕೆ ಕಾಪು ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ ಅವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಮಂಗಳೂರಿನ ಸ್ಕೌಟ್ ಅಂಡ್ ಗೈಡ್ಸ್ ಸಭಾಭವನ ಲಾಲ್ ಬಾಗ್ ಮಂಗಳೂರು ಇಲ್ಲಿ ಜರಗಿದ ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಷನ್ ಮಂಗಳೂರು ವಲಯದ ವತಿಯಿಂದ ನಡೆದ "ಕಿಡ್ಸ್ ಫೋಟೋ ಫೆಸ್ಟ್" ಫೋಟೋಗ್ರಾಫಿ ಬಹುಮಾನ ವಿತರಣಾ ಸಮಾರಂಭದಲ್ಲಿ "ದಸರಾ ವೈಭವ" ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹರೀಶ್ ಅಡ್ಯಾರ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಎಸ್ಕೆಪಿಎ ಜಿಲ್ಲಾ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ದಯಾನಂದ್ ಬಂಟ್ವಾಳ, ಕರುಣಾಕರ್ ಕಾನಂಗಿ, ರಮೇಶ್ ಕಲಾಶ್ರೀ, ಅಜಯ್ ಮಂಗಳೂರು, ಅರ್ಜುನ್ ಆರ್, ವಿಶಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವ
Posted On: 30 Nov 2024, 07:24 AM
ಕಾಪು : ತಾಲೂಕಿನ ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವವು ಆನೆಗುಂದಿ ಮಠದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಅನುಗ್ರಹದೊಂದಿಗೆ ಶುಕ್ರವಾರ ಜರಗಿತು. ಈ ಸಂದರ್ಭ ಕ್ಷೇತ್ರದ ದೇವರಿಗೆ ವಿಶೇಷ ಅಲಂಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆಯು ನಡೆಯಿತು. ರಾತ್ರಿ ನಡೆದ ಶ್ರೀದೇವಿಯ ಪೂಜೆ ಮತ್ತು ಕಾರ್ಯಕ್ರಮವು ಆನೆಗುಂದಿ ಮಠದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಜರಗಿ ಆಶೀರ್ವಚನ ನೀಡಿದರು. ಮೊಕ್ತೇಸರ ಪ್ರಕಾಶ ಎಸ್ ಆಚಾರ್ಯ, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಆರ್ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾದ ಮಾಧವ ಎಸ್ ಆಚಾರ್ಯ, ಕಟಪಾಡಿ ಶ್ರೀ ಕಾಳಿಕಾಂಬಾ ದೇವಸ್ಥಾನದ ನಿಕಟಪೂರ್ವಆಡಳಿತ ಮೊಕ್ತೇಸರರರಾದ ಸದಾಶಿವ ಆಚಾರ್ಯ, ಕಾರ್ಯದರ್ಶಿ ದಿನೇಶ್ ಎಸ್ ಆಚಾರ್ಯ, ಕೋಶಾಧಿಕಾರಿ ಗಂಗಾಧರ ಆಚಾರ್ಯ, ಪದಾಧಿಕಾರಿಗಳು, ಕೂಡುವಳಿಕೆಯ ಸಮಸ್ತರು, ಸಮಾಜ ಬಾಂಧವರು, ಭಕ್ತಾದಿಗಳು ಉಪಸ್ಥಿತರಿದ್ದರು.
ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ
Posted On: 28 Nov 2024, 07:00 PM
ಪಡುಬಿದ್ರಿ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ), ಪಡುಬಿದ್ರಿ ಇಲ್ಲಿಗೆ ನಬಾರ್ಡ್ನ ದಕ್ಷಿಣ ಕನ್ನಡ ಜಿಲ್ಲೆಯ ಡಿ.ಡಿ.ಎಮ್ ಸಂಗೀತ ಕರ್ತ ಭೇಟಿ ನೀಡಿ ಏಕರೂಪ ತಂತ್ರಾಂಶದ ಪ್ರಗತಿಯ ಬಗ್ಗೆ ಪರಿಶೀಲಿಸಿದರು. ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ಸೊಸೈಟಿಯಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ, ನಿರ್ದೇಶಕ ವೃಂದ ಹಾಗೂ ಸಿಬ್ಬಂದಿ ವೃಂದ ಉಪಸ್ಥಿತರಿದ್ದರು.
ಡಿ. 20 - 23 : ಕಳತ್ತೂರು ಶ್ರೀ ಬ್ರಹ್ಮ ಬೈದೇರುಗಳ ವರ್ಷಾವಧಿ ನೇಮೋತ್ಸವ
Posted On: 28 Nov 2024, 10:40 AM
ಕಳತ್ತೂರು : ಇಲ್ಲಿನ ಶ್ರೀ ಬ್ರಹ್ಮ ಬೈದೇರುಗಳ ವರ್ಷಾವಧಿ ನೇಮೋತ್ಸವವು ಡಿ.20 ರಂದು ಮೊದಲ್ಗೊಂಡು ಡಿ.23 ರ ವರೆಗೆ ನಡೆಯಲಿದೆ. ಡಿ.20, ಶುಕ್ರವಾರ ಬೆಳಿಗ್ಗೆ ನವಕ ಪ್ರಧಾನ ಹೋಮ, ರಾತ್ರಿ ಗರಡಿ ಪ್ರವೇಶ, ಡಿ.21, ಶನಿವಾರ ರಾತ್ರಿ ನೈವೇದ್ಯ ಸೇವೆ, ಡಿ.22, ಆದಿತ್ಯವಾರ ಮಧ್ಯಾಹ್ನ ಗಂಟೆ 12 ಕ್ಕೆ ಅನ್ನಸಂತರ್ಪಣೆ, ರಾತ್ರಿ ಗಂಟೆ 6-30ರಿಂದ ಶ್ರೀ ಬ್ರಹ್ಮ ಬೈದೇರುಗಳ ಜಾತ್ರೆ (ನೇಮೋತ್ಸವ), ರಾತ್ರಿ ಗಂಟೆ 7-30ಕ್ಕೆ ಅನ್ನಸಂತರ್ಪಣೆ ನೆರವೇರಲಿದೆ. ಡಿ.23, ಸೋಮವಾರ ಬೆಳಿಗ್ಗೆ ಗಂಟೆ 9 ಕ್ಕೆ ಮಾಯಾಂದಾಲ್ ದೇವಿಯ ನೇಮ, ಶುದ್ಧ ಕಲಶ, ನೈವೇದ್ಯ ಸೇವೆ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಶಾನ್ಯ ರಾಜ್ಯಗಳ ಪ್ರವಾಸ ಮುಗಿಸಿದ ಕಾಪುವಿನ ಯುವಕರಿಗೆ ಕಾಪು ಹೊಸ ಮಾರಿಗುಡಿಯಲ್ಲಿ ಅಭಿನಂದನೆ
Posted On: 28 Nov 2024, 10:34 AM
ಕಾಪು : ಶಟರ್ ಬಾಕ್ಸ್ ಖ್ಯಾತಿಯ ಯೂ ಟ್ಯೂಬರ್ ಕಾಪುವಿನ ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡ ಕರಾವಳಿಯ ಪ್ರವಾಸೋದ್ಯಮ, ಧಾರ್ಮಿಕ ಮತ್ತು ವಿಶೇಷವಾಗಿ ಉತ್ತರ ಭಾರತದ ಮೇಘಾಲಯ, ಮಿಝೋರಾಂ, ಒಡಿಶಾ ಸಹಿತ 7 ರಾಜ್ಯಗಳ ಪ್ರವಾಸ ಕೈಗೊಂಡು ಕಲೆ ಸಂಸ್ಕೃತಿ ಆಹಾರದ ಅಧ್ಯಯನ ನಡೆಸಿ ಪರಂಪರೆಯನ್ನು ಎಲ್ಲೆಡೆ ಪ್ರಚುರಗೊಳಿಸುವ ಉದ್ದೇಶದೊಂದಿಗೆ ಸುಜುಕಿ ಜಿಮ್ಮಿ ವಾಹನದಲ್ಲಿ ಈಶಾನ್ಯ ರಾಜ್ಯಗಳಿಗೆ ಕಳೆದ ಅ.5ರಂದು ಪ್ರವಾಸ ಹೊರಟಿದ್ದು, ಬುಧವಾರ 53 ದಿನಗಳ ಪ್ರವಾಸ ಮುಗಿಸಿ ಕಾಪುವಿಗೆ ಆಗಮಿಸಿದ್ದರು. ಕಾಪುವಿಗೆ ಆಗಮಿಸಿದ ಸಚಿನ್ ಶೆಟ್ಟಿ ಮತ್ತು ಅವರ ತಂಡವನ್ನು ಕಾಪು ಹೊಸ ಮಾರಿಗುಡಿ ದೇಗುಲದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ಶ್ರೀ ದೇವಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದರು. ಇದೇ ಸಂದರ್ಭ ಆಡಳಿತ ಮಂಡಳಿಯ ವತಿಯಿಂದ ಸಚಿನ್ ಮತ್ತು ತಂಡವನ್ನು ಸನ್ಮಾನಿಸಲಾಯಿತು. ಮಾಧ್ಯಮದೊಂದಿಗೆ ಸಚಿನ್ ಶೆಟ್ಟಿ ಮಾತನಾಡಿ, ನಾವು ಅಕ್ಟೋಬರ್ 5ರಂದು ಕಾಪು ಶ್ರೀ ಹೊಸಮಾರಿ ಗುಡಿಯಿಂದ ಕರ್ನಾಟಕ, ಆಂಧ್ಯಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ, ಮೇಘಾಲಯ, ತ್ರಿಪುರ, ಮಿಝೊರಾಮ್, ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಿ ಈಶಾನ್ಯ ರಾಜ್ಯಗಳ ಅಧ್ಯಯನ ಪ್ರವಾಸ ಮಾಡಿ 53 ದಿನಗಳ ನಂತರ ಕಾಪುವಿಗೆ ಆಗಮಿಸಿದ್ದೇವೆ. ನಾವು ಪ್ರವಾಸದ ವೇಳೆ ವಿಡಿಯೋ ತುಣುಕನ್ನು ನನ್ನ ಶಟರ್ಬಾಕ್ಸ್ ಯುಟ್ಯೂಬ್ ಚಾನೆಲ್ನಲ್ಲಿ ಪ್ರಸಾರ ಮಾಡುವ ಮೂಲಕ ಜನರಿಗೆ ವಿವಿಧ ರಾಜ್ಯಗಳ ಮಾಹಿತಿ ನೀಡಿದ್ದೇನೆ. ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರದ ಬಗ್ಗೆ, ನವದುರ್ಗಾ ಲೇಖನ ಯಜ್ಞದ ಬಗ್ಗೆ ಎಲ್ಲಾ ಕಡೆ ಮಾಹಿತಿ ನೀಡಿದ್ದೇನೆ. ನಮ್ಮ ತಂಡದಲ್ಲಿ ಅಭಿಷೇಕ್, ಸಾಯಿ ಸಹಿತ ನಾಲ್ವರೊಂದಿಗೆ ಪ್ರವಾಸ ಕೈಗೊಂಡಿದ್ದೆವು. ನಮ್ಮ ಪ್ರವಾಸಕ್ಕೆ 8 ಜನರು ಪ್ರಾಯೋಜಕತ್ವ ನೀಡಿದ್ದರು ಎಂದೂ ಸಚಿನ್ ಶೆಟ್ಟಿ ಹೇಳಿದರು. ಈ ಸಂದರ್ಭ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಮಾಧವ ಆರ್ ಪಾಲನ್, ನವದುರ್ಗ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
