Updated News From Kaup
ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ - ಕನ್ನಡ ವೀಡಿಯೋ ಅಲ್ಬಮ್ ಸಾಂಗ್ ಬಿಡುಗಡೆ
Posted On: 14-10-2024 11:19PM
ಪಡುಬಿದ್ರಿ : ಪುರಾತನ ದೇವಸ್ಥಾನದ ಹಿನ್ನೆಲೆಯನ್ನು ಇಂದಿನ ಜನತೆಗೆ ತಿಳಿಯಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಇಂದಿನ ಯುವ ಜನತೆ ನಮ್ಮ ಸಂಸ್ಕೃತಿ, ಸಂಪ್ರದಾಯ ಉಳಿಸುವ ಕಾರ್ಯ ಮಾಡಬೇಕಾಗಿದೆ. ಇಂತಹ ಅಲ್ಬಮ್ ಸಾಂಗ್ ನ ಜೊತೆ ಚಲನಚಿತ್ರ ಕೂಡಾ ನಿರ್ಮಾಣವಾಗಲಿ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ನವೀನಚಂದ್ರ ಜೆ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಭಾರತ್ ಸಿನಿಮಾದಲ್ಲಿ ನಡೆದ "ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ" ಕನ್ನಡ ವಿಡಿಯೋ ಅಲ್ಬಮ್ ಸಾಂಗ್ ನ ಪ್ರದರ್ಶನ ವನ್ನು ಉದ್ಘಾಟಿಸಿ ಮಾತನಾಡಿದರು.
ಪಡುಬಿದ್ರಿ : ಬಾಲ ಗಣಪತಿಯ ಜಲಸ್ತಂಭನ
Posted On: 13-10-2024 10:44AM
ಪಡುಬಿದ್ರಿ : ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಹಿಂದಿನ ಕಾಲದಲ್ಲಿ ಮಕ್ಕಳಿಂದಲೇ ನಿರ್ಮಿತವಾದ ಕ್ಷೇತ್ರವೆಂಬ ಪ್ರತೀತಿಯಿರುವ ಬಾಲ ಗಣಪತಿಯ ಜಲಸ್ತಂಭನ ಶನಿವಾರ ಸಂಜೆ ಜರಗಿತು.
ಉಡುಪಿ ಉಚ್ಚಿಲ ದಸರಾ - 2024 ಸಂಪನ್ನ
Posted On: 13-10-2024 02:10AM
ಕಾಪು : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ - 2024 ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ನವದುರ್ಗೆಯರು ಸಹಿತ ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನ ಕಾರ್ಯಕ್ರಮ ಕಾಪುವಿನ ಕಡಲ ಕಿನಾರೆಯಲ್ಲಿ ನಡೆಯಿತು.
3ನೇ ವರ್ಷದ ಉಡುಪಿ ಉಚ್ಚಿಲ ದಸರಾ - 2024 ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ
Posted On: 12-10-2024 06:19PM
ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ - 2024 ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಡ್ರೋನ್ ಪುಷ್ಪ ಸಿಂಚನ : ನವದುರ್ಗೆಯರ ಸಹಿತ ಶಾರದಾ ಮೂರ್ತಿಗೆ ಮಹಾಪೂಜೆಯ ಬಳಿಕ ವಿಶೇಷವಾಗಿ ಡ್ರೋನ್ ಮೂಲಕ ಶ್ರೀ ಶಾರದಾದೇವಿ ಮತ್ತು ನವದುರ್ಗೆಯರ ವಿಗ್ರಹಗಳಿಗೆ ಪುಷ್ಪ ಸಿಂಚನ ಮಾಡಲಾಯಿತು.
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ಅವಹೇಳನ - ಕಠಿಣ ಕ್ರಮ ಕೈಗೊಳ್ಳಲು ಮನವಿ
Posted On: 12-10-2024 10:01AM
ಉಡುಪಿ : ಕೇಂದ್ರ ಸಂಪುಟ ಸಚಿವರಾದ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಅವಹೇಳನಕಾರಿ ಹಾಗೂ ಅತ್ಯಂತ ಕೀಳು ಮಟ್ಟದ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ರವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಮತ್ತು ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ, ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನು ಒಳಗೊಂಡ ತಂಡ ಅಪರ ಜಿಲ್ಲಾಧಿಕಾರಿ ಮಮತಾ ದೇವಿಯವರಿಗೆ ಮನವಿ ಸಲ್ಲಿಸಿತು.
ಅ.14 : ಮುದರಂಗಡಿಯಲ್ಲಿ ವೈಜ್ಞಾನಿಕ ಅಡಿಕೆ ಕೃಷಿ ಮಾಹಿತಿ ಕಾರ್ಯಕ್ರಮ
Posted On: 12-10-2024 09:51AM
ಮುದರಂಗಡಿ : ಉಡುಪಿ ಜಿಲ್ಲಾ ಕೃಷಿಕ ಸಂಘ ಆಯೋಜಿಸಿರುವ ವೈಜ್ಞಾನಿಕ ಅಡಿಕೆ ಬೇಸಾಯ ಕೃಷಿ ಮಾಹಿತಿ ಕಾರ್ಯಕ್ರಮ ಅ.14ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ಮುದರಂಗಡಿ ಮಾಣಿಯೂರು ರಾಜಾಪುರ ಸಾರಸ್ವತ ಸಮುದಾಯ ಭವನದಲ್ಲಿ ನಡೆಯಲಿದೆ.
ಕಾಂತಾವರ ಗ್ರಾಮ ಪಂಚಾಯತ್ : ಖೋ ಖೋ ಪಂದ್ಯಾಟದಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
Posted On: 11-10-2024 04:19PM
ಕಾರ್ಕಳ : ತಾಲೂಕಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂತಾವರ ಇಲ್ಲಿಯ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟದಲ್ಲಿ ಜಯ ಗಳಿಸಿದ ವಿದ್ಯಾರ್ಥಿಗಳನ್ನು ಕಾಂತಾವರ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.
ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ - ಕನ್ನಡ ವಿಡಿಯೋ ಅಲ್ಬಮ್ ಸಾಂಗ್ ಪೋಸ್ಟರ್ ಬಿಡುಗಡೆ
Posted On: 11-10-2024 09:49AM
ಪಡುಬಿದ್ರಿ : ಇಂದಿನ ಯುವ ಜನತೆ ಸಮಾಜಿಕ ಜಾಲತಾಣದಲ್ಲಿ ಕಾಲಹರಣ ಮಾಡುವ ಈ ಸಂದರ್ಭದಲ್ಲಿ ಬಪ್ಪನಾಡು ಶ್ರೀ ದುರ್ಗ ಮಾತೆಯ ಪುರಾತನ ಕಥೆಯುಳ್ಳ ಇತಿಹಾಸ ನೆನಪಿಸುವಂತಹ ಭಕ್ತಿ ಪ್ರಧಾನ ವೀಡಿಯೋ ಅಲ್ಬಮ್ ಅನ್ನು ನಿರ್ಮಿಸಿದ್ದು ಶ್ಲಾಘನೀಯ. ಅಲ್ಬಮ್ ಸಾಂಗ್ ಅದ್ದೂರಿ ಯಶಸ್ಸಿಯಾಗಿ ನಡೆಯಲಿ, ಮುಂದೆ ಈ ತಂಡದಿಂದ ಚಲನಚಿತ್ರ ನಿರ್ಮಾಣಗೊಳ್ಳುವಂತಾಗಲಿ ಎಂದು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ನವೀನಚಂದ್ರ ಜೆ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಓಂಕಾರ ಕಲಾ ಸಂಗಮದಲ್ಲಿ ನಡೆದ ಎಸ್.ಜಿ.ಎಸ್ ಕ್ರಿಯೇಷನ್ಸ್ ಪ್ರಸುತ್ತ ಪಡಿಸಿದ "ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ" ಕನ್ನಡ ವಿಡಿಯೋ ಅಲ್ಬಮ್ ಸಾಂಗ್ ನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.
ಭಾರತದ ದಂತಕಥೆ ರತನ್: ರತನ್ ಕುರಿತ ಗೊತ್ತಿರಬೇಕಾದ ಸಂಗತಿಗಳು
Posted On: 11-10-2024 09:38AM
ರತನ್ ಟಾಟಾ ಅವರಿಗೆ ನಾಯಿಗಳ ಮೇಲೆ ಎಷ್ಟು ಪ್ರೀತಿ ಇತ್ತೆಂದರೆ 2018 ರಲ್ಲಿ ಬ್ರಿಟನ್ನ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ತಮ್ಮ ಸಾಕು ನಾಯಿಗೋಸ್ಕರ ತಿರಸ್ಕರಿಸಿದ್ದರು. ಈ ರೀತಿಯ ಅದ್ಬುತ ವ್ಯಕ್ತಿತ್ವ ಇರಲು ಅಸಾಧ್ಯ. ಇಡೀ ಭಾರತ ಪ್ರೀತಿಸುವ ಗೌರವಾನ್ವಿತ ವ್ಯಕ್ತಿ ಹಾಗೂ ಉದ್ಯಮ ಲೋಕದ ಧ್ರುವತಾರೆ ರತನ್ ಟಾಟಾ ಅವರ ನಿಧನಕ್ಕೆ ದೇಶವೇ ಕಣ್ಣೀರಿಡುತ್ತಿದೆ. ರತನ್ ಟಾಟಾ ಕೇವಲ ಕೈಗಾರಿಕೋದ್ಯಮಿಯಾಗಿರಲಿಲ್ಲ. ಅವರು ಟಾಟಾ ಗ್ರೂಪ್ಗೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟ ವ್ಯಕ್ತಿ. ಅಷ್ಟೇ ಆಗಿದ್ದರೆ, ಬಹುಶಃ ಇಡೀ ದೇಶ ಹೀಗೆ ಅವರಿಗಾಗಿ ಮಿಡಿಯುತ್ತಿರಲಿಲ್ಲ. ದೇಶದ ಬಡವರು, ಮಧ್ಯಮವರ್ಗದ ಬದುಕಿನಲ್ಲಿ ಸುಧಾರಣೆ ತರುವ, ದೇಶದ ಕಲೆ, ಸಾಹಿತ್ಯ, ಪರಿಸರವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಅವರು ತೋರಿದ ಕಾಳಜಿ ಮತ್ತು ಆಸ್ಥೆಗಳು ಅವರನ್ನು ದೇಶದ ಉಳಿದೆಲ್ಲಾ ಉದ್ಯಮಿಗಳಿಗಿಂತ ಮೇಲುಸ್ತರದಲ್ಲಿ ಇರಿಸಿವೆ. ಹಣ ಮತ್ತು ವ್ಯವಹಾರಕ್ಕಷ್ಟೇ ಸೀಮಿತವಾಗಿ ಉದ್ಯಮ ಸಾಮ್ರಾಜ್ಯ ಕಟ್ಟುವುದಷ್ಟನ್ನೇ ಬದುಕಿನ ಸರ್ವಸ್ವ ಎಂದು ಎಣಿಸದೆ, ಹಾಗೇ ದೇಶವನ್ನು ಕಟ್ಟುವ, ದೇಶದ ಬದುಕು ಕಟ್ಟುವ ಕಾಳಜಿ ತೋರಿದ್ದಕ್ಕಾಗಿ ಅವರ ಅಗಲಿಕೆಯ ಈ ಹೊತ್ತು ದೇಶ ತಮ್ಮದೇ ಮನೆ ಮಗನನ್ನು ಕಳೆದುಕೊಂಡಂತೆ ಮಿಡಿಯುತ್ತಿದೆ.
ಸಾಂತೂರು, ಪಿಲಾರು ಭಾಗದಲ್ಲಿ ಕಾಡುಕೋಣಗಳ ಹಾವಳಿ
Posted On: 11-10-2024 09:23AM
ಮುಂದರಂಗಡಿ : ಸಾಂತೂರು ಹಾಗೂ ಪಿಲಾರು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಗುರುವಾರ ಬೈಕ್ ಸವಾರ ರವಿ ಆಚಾರ್ಯ ಸಾಂತೂರು ಅನ್ನುವವರಿಗೆ ಕಾಡುಕೋಣ ಡಿಕ್ಕಿ ಹೊಡೆದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಯಲ್ಲಿ ಇರುವರು.
