Updated News From Kaup
ಕುಶಲ ಶೇಖರ್ ಶೆಟ್ಟಿ ಇಂಟರ್ ನ್ಯಾಷನಲ್ ಹಾಲ್ ಕಾಪು ಕಳತ್ತೂರು : 78ನೇ ಸ್ವಾತಂತ್ರೋತ್ಸವ ಆಚರಣೆ

Posted On: 15-08-2024 10:45PM
ಕಾಪು : ಕುಶಲ ಶೇಖರ್ ಶೆಟ್ಟಿ ಇಂಟರ್ ನ್ಯಾಷನಲ್ ಹಾಲ್ ಹಾಗೂ ಫ್ರೆಂಡ್ಸ್ ಕ್ಲಬ್ ಕಳತ್ತೂರು ಜಂಟಿಯಾಗಿ ಆಯೋಜಿಸಿದ್ದ 78ನೇ ಸ್ವಾತಂತ್ರೋತ್ಸವದ ನಿಮಿತ್ತ ಕಾರ್ಯಕ್ರಮದಲ್ಲಿ ರಾಜ್ಯ ದತ್ತಿ ನಿಧಿ ಪ್ರಶಸ್ತಿ ಪುರಸ್ಕೃತರಾದ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರು ಧ್ವಜಾರೋಹಣಗೈದರು.
ಈ ಸಂದರ್ಭದಲ್ಲಿ ಕುಶಲ ಶೇಖರ್ ಶೆಟ್ಟಿ ಅಡಿಟೋರಿಯಂನ ಆಡಳಿತ ನಿರ್ದೇಶಕ ಶೇಖರ್ ಬಿ.ಶೆಟ್ಟಿ ಕಳತ್ತೂರು, ಕುತ್ಯಾರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಜನಾರ್ಧನ್ ಆಚಾರ್ಯ, ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರೋಹಿತ್, ರಂಗನಾಥ ಶೆಟ್ಟಿ, ಸುನೀತ ರಂಗನಾಥ ಶೆಟ್ಟಿ, ಅಮರನಾಥ ಶೆಟ್ಟಿ ಪಾಂಗಾಳ, ಸುಂದರ್ ರ ಬಿ. ಶೆಟ್ಟಿ ಕಳತ್ತೂರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ಶಶಾಂಕ್ ಮಡಿವಾಳ ವಂದಿಸಿದರು.
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ : 78ನೇ ಸ್ವಾತಂತ್ರ್ಯ ದಿನಾಚರಣೆ

Posted On: 15-08-2024 05:03PM
ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ನೆರವೇರಿಸಿದರು.
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕರುಣಾಕರ್ ಎಮ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕೆ ಪಿಸಿ ಸಿ ಸಂಯೋಜಕರಾದ ನವೀನ್ ಚಂದ್ರ ಜೆ ಶೆಟ್ಟಿ, ವೈ ಸುಕುಮಾರ್, ನವೀನ್ ಎನ್ ಶೆಟ್ಟಿ, ಅಬ್ದುಲ್ ರೆಹಮಾನ್, ರಮೀಜ್ ಹುಸೇನ್, ನಿಯಾಝ್, ಕೀರ್ತಿ ಕುಮಾರ್, ದಿನೇಶ್ ಕಂಚಿನಡ್ಕ, ಸಂಜೀವಿ ಪೂಜಾರಿ, ಲಿಯಾತತ್, ಮುನ್ನ, ಜ್ಯೋತಿ ಮೆನನ್, ವೈ ಸುಧೀರ್ ಕುಮಾರ್, ಸುಚರಿತ,, ಸುನಂದಾ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುಧಾಕರ್ ಕೆ ನಿರೂಪಿಸಿ, ವಂದಿಸಿದರು.
ಕಾಪು : ದಂಡತೀರ್ಥ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Posted On: 15-08-2024 04:32PM
ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕಾಪು ರೋಟರಿ ಕ್ಲಬ್ ನ ಅಧ್ಯಕ್ಷರಾದ ಬಾಲಕೃಷ್ಣ ಆಚಾರ್ಯ ಇವರು ಮಾತನಾಡಿ, ದೇಶದಾದ್ಯಂತ ಇಂದು ಶಾಲಾ-ಕಾಲೇಜು, ಸರಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಹಳ ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಶಕ್ಕಾಗಿ ತ್ಯಾಗ - ಬಲಿದಾನಗೈದ ವೀರ ನಾಯಕರನ್ನು ಸ್ಮರಿಸುತ್ತಿದ್ದೇವೆ. ವಿದ್ಯಾರ್ಥಿಗಳಾದ ತಾವು ಇಂತಹ ನಾಯಕರ ದೇಶಭಕ್ತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಮೂಡಿಬರಬೇಕು ಹಾಗೂ ಪರಸ್ಪರ ಸಮಾನತೆ, ಪ್ರೀತಿ, ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂಬ ಸಂದೇಶವನ್ನು ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಚಾಲಕರಾದ ಡಾ| ಕೆ. ಪ್ರಶಾಂತ್ ಶೆಟ್ಟಿಯವರು ವಹಿಸಿದ್ದರು.
ಸಮಾರಂಭದಲ್ಲಿ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರುಗಳಾದ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಶೆಟ್ಟಿ ಹಾಗೂ ಶಿಕ್ಷಕ - ಶಿಕ್ಷಕೇತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ರಿತಿಕಾ. ಆರ್. ಶೆಟ್ಟಿ ಕಾರ್ಯಕ್ರಮದ ಕುರಿತು ಮಾತನಾಡಿದರು. ಕುಶಿ. ಆರ್. ಶೆಟ್ಟಿ ಸ್ವಾಗತಿಸಿ, ಶಿಫಾನ ವಂದಿಸಿದರು. ಕಾರ್ಯಕ್ರಮವನ್ನು ಅಮೂಲ್ಯ ರಾವ್ ನಿರೂಪಿಸಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು : ಆನ್ ಲೈನ್ ವ್ಯಾಸಂಗ, ಸಮಾಲೋಚನೆ ಕೋರ್ಸ್ಗಳ ಆರಂಭ

Posted On: 15-08-2024 04:21PM
ಉಚ್ಚಿಲ : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ 20 ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕ ಐ.ಐ.ಟಿ - ಮದ್ರಾಸ್ ಇವರಿಂದ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್ಗಳ ಆರಂಭ ಸಮಾರಂಭ ಗುರುವಾರ ಉಚ್ಚಿಲ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಐ.ಐ.ಟಿ - ಮದ್ರಾಸ್ ಇವರಿಂದ ನೀಡುವ ಆನ್ ಲೈನ್ ವ್ಯಾಸಂಗ ಹಾಗೂ ಸಮಾಲೋಚನೆ ಕೋರ್ಸ್ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಅಧ್ಯಕ್ಷರಾದ ಡಾ. ಹೆಜ್.ಎಸ್ ಶೆಟ್ಟಿ, ಐ.ಐ.ಟಿ ಮದ್ರಾಸ್ ಪ್ರವರ್ತಕ ಟೆಕ್ನಾಲಜಿ ಚನೈ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಎಂ.ಜೆ ಶಂಕರಮಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಹೊಸ ಹೊಸ ದಿಗಂತ ಕನ್ನಡ ದೈನಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪಿ.ಎಸ್ ಪ್ರಕಾಶ್, ಶಾಲಾ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಕೆ ಗಣಪತಿ, ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ ಉಪ ನಿರ್ದೇಶಕರಾದ ಮಾರುತಿ, ಐ.ಐ.ಟಿ ಮದ್ರಾಸ್ ಮುಖ್ಯ ನಿರ್ವಹಣಾಧಿಕಾರಿಗಳಾದ ಜಿ. ವೀರರಾಘವನ್ ಉಪಸ್ಥಿತರಿದ್ದರು.
ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಪಲಿಮಾರು : ಶ್ರಮದಾನ ; ಆಶ್ರಮ ಭೇಟಿ

Posted On: 15-08-2024 04:12PM
ಪಲಿಮಾರು : ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಪಲಿಮಾರು ತಂಡದ ನೇತೃತ್ವದಲ್ಲಿ ಆಗಸ್ಟ್ 15ರಂದು ಅವರಾಲು ಪರಿಸರದ ರಸ್ತೆ ಹಾಗೂ ಅಂಗನವಾಡಿ ಕೇಂದ್ರದ ಬಳಿ ಶ್ರಮದಾನ ಹಾಗೂ ಕಾರುಣ್ಯ ಆಶ್ರಮ ಕಟಪಾಡಿ ಇಲ್ಲಿಗೆ ಭೇಟಿ ನೀಡಿ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸಿದರು.

ಶಿರ್ವ : ಫೈಝುಲ್ ಇಸ್ಲಾಂ ಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

Posted On: 15-08-2024 03:46PM
ಶಿರ್ವ : ಇಲ್ಲಿನ ಫೈಝುಲ್ ಇಸ್ಲಾಂ ಶಾಲೆಯಲ್ಲಿ ಗುರುವಾರ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಪ್ರಮುಖರಾದ ಉಮರ್ ಇಸ್ಮಾಯಿಲ್ ಧ್ವಜಾರೋಹಣಗೈದು ಸಂದರ್ಭೋಚಿತವಾಗಿ ಮಾತನಾಡಿದರು.

ಸ್ವಾತಂತ್ರ್ಯ ದಿನದ ನಿಮಿತ್ತ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭ ಪರ್ವೆಜ್ ಸಲೀಮ್, ಯಾಕಿನುಲ್ಲ, ಶಾಲಾ ಮುಖ್ಯ ಶಿಕ್ಷಕಿ ಖೈರುನ್ನೀಸ, ಕಾರ್ಯದರ್ಶಿ ಹಪ್ಸಾ, ವಫಾ, ಉಷಾ, ಶಬನಾ ಉಪಸ್ಥಿತರಿದ್ದರು.

ವಿದ್ಯಾರ್ಥಿ ಅಲಕಮಾ ಕಾರ್ಯಕ್ರಮ ನಿರೂಪಿಸಿದರು.
ಕಾಪು ಜೆಸಿಐ : 78 ನೇ ಸ್ವಾತಂತ್ರ್ಯ ದಿನಾಚರಣೆ

Posted On: 15-08-2024 03:33PM
ಕಾಪು : ಇಲ್ಲಿನ ಜೆಸಿಐ ವತಿಯಿಂದ 78 ನೇ ಸ್ವಾತಂತ್ರೋತ್ಸವವನ್ನು ಜೇಸಿ ಸಭಾಭವನದ ಮುಂಭಾಗ ಅಧ್ಯಕ್ಷರಾದ ಸುಖಲಾಕ್ಷಿ ಬಂಗೇರ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು.
ಈ ಸಂದರ್ಭ ಕಾಪು ಜೇಸಿಐ ಸಂಸ್ಥೆಯ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಹೆಜಮಾಡಿ : ಅಟೋ ರಿಕ್ಷಾ ಯೂನಿಯನ್ - 78ನೇ ಸ್ವಾತಂತ್ರೋತ್ಸವ

Posted On: 15-08-2024 03:26PM
ಹೆಜಮಾಡಿ : ಅಟೋ ರಿಕ್ಷಾ ಯೂನಿಯನ್ ವತಿಯಿಂದ 78 ನೇ ಸ್ವಾತಂತ್ರೋತ್ಸವವನ್ನು ಹೆಜಮಾಡಿ ಮುಖ್ಯ ಪೇಟೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಶೇಖರ್ ಹೆಜ್ಮಾಡಿ ಧ್ವಜಾರೋಹಣ ಮಾಡಿ ಸ್ವಾತಂತ್ರೋತ್ಸವ ಮಹತ್ವದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಯೂನಿಯನ್ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಿದರು.
ದುರ್ಗಾ ಫ್ರೆಂಡ್ಸ್ ಹೆಜಮಾಡಿ ವತಿಯಿಂದ 78 ನೇ ಸ್ವಾತಂತ್ರೋತ್ಸವ ದಿನಾಚರಣೆ

Posted On: 15-08-2024 03:20PM
ಹೆಜಮಾಡಿ : ನಾನು ಭಾರತೀಯ ಎಂಬ ಹೆಮ್ಮೆಯ ಭಾವನೆ ಬೆಳೆಸಿಕೂಳ್ಳುವುದರೊಂದಿಗೆ ದೇಶ ರಕ್ಷಣೆಯ ಕರ್ತವ್ಯವನ್ನು ಪ್ರತಿಯೊಬ್ಬರೂ ಹೊತ್ತು ಕೊಳ್ಳಬೇಕು. ರಾಷ್ಟ್ರ ನಿರ್ಮಾಣ ಮತ್ತು ಅಭಿವೃದ್ಧಿ ಯಲ್ಲಿ ಯುವಕರ ಪಾತ್ರ ಬಹಳ ಮುಖ್ಯ. ಏಕೆಂದರೆ ಯಾವುದೇ ರಾಷ್ಟ್ರದ ಅಭಿವೃದ್ಧಿ ಭವಿಷ್ಯದ ಪೀಳಿಗೆ ಯಲ್ಲಿದೆ. ಯುವಕರಿಗೆ ಜಗತ್ತನ್ನು ಬದಲಿಸುವ ಶಕ್ತಿ ಇದೆ. ನಾವೆಲ್ಲರೂ ದೇಶದ ಸತ್ಪ್ರಜೆಯಾಗಿ ಬಾಳ ಬೇಕು ಎಂದು ಭಾರತೀಯ ವಾಯುಪಡೆ ಸೇನೆಯ ನಿವೃತ್ತ ಕಾರ್ಪೋರಲ್ ಪುರುಷೋತ್ತಮ್ ಗುರಿಕಾರ ಹೆಜಮಾಡಿ ಇವರು 78ನೇ ಸ್ವಾತಂತ್ರೋತ್ಸವದ ದ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸ್ವಾತಂತ್ರೋತ್ಸವ ಅಂಗವಾಗಿ ನಡೆದ ಕ್ರೀಡಾ ಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ದುರ್ಗಾ ಫ್ರೆಂಡ್ಸ್ ನ ಅಧ್ಯಕ್ಷರಾದ ಅನಿಲ್ ಎಚ್ ಕುಂದರ್, ಮಾಜಿ ಅಧ್ಯಕ್ಷರು ಪ್ರಭಾಕರ್ ಕರ್ಕೇರ, ಸಂಚಾಲಕರಾದ ಎಚ್ ರವಿ ಕುಂದರ್, ಗೌರವ ಸಲಹೆಗಾರ ದೇವದಾಸ್ ಸಾಲ್ಯಾನ್, ಉಪಾಧ್ಯಕ್ಷರಾದ ಹಿತೇಶ್ ಮೆಂಡನ್, ಹೆಜಮಾಡಿ ಗ್ರಾ.ಪಂ.ಸದಸ್ಯೆ ನಿರ್ಮಲಾ ಕೆ, ಖಡ್ಗೇಶ್ವರಿ ಭಜನಾ ಮಂದಿರದ ಅಧ್ಯಕ್ಷರಾದ ಗಣೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರಾದ ಕೃಷ್ಣ ಪೂಜಾರಿ, ಹೆಜಮಾಡಿ ದೇವಾಡಿಗರ ಸಂಘದ ಅಧ್ಯಕ್ಷರಾದ ಹರೀಶ್ ದೇವಾಡಿಗ, ಪಡುಬಿದ್ರಿ ರೋಟರಿ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷರಾದ ಸಂತೋಷ್ ಪಡುಬಿದ್ರಿ ಉಪಸ್ಥಿತರಿದ್ದರು.
ದುರ್ಗಾ ಫ್ರೆಂಡ್ಸ್ ನ ಕಾರ್ಯದರ್ಶಿ ಕೀರ್ತನ್ ಎಸ್ ಸಾಲ್ಯಾನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಪಡುಬಿದ್ರಿ : ಬಾಪೂಜಿ ಭಜನಾ ಮಂದಿರ - 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆ

Posted On: 15-08-2024 03:12PM
ಪಡುಬಿದ್ರಿ : ಇಲ್ಲಿನ ಹಿರಿಯ ಸಂಘ ಸಂಸ್ಥೆಗಳಲ್ಲಿ ಒಂದಾದ ಬಾಪೂಜಿ ಸಮಾಜ ಮಂದಿರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ಪಡುಬಿದ್ರಿ ಮುಂಡಾಲ ವೇದಿಕೆಯ ಅಧ್ಯಕ್ಷರಾದ ಶಿವಪ್ಪ ಪಡುಬಿದ್ರಿ ನೆರವೇರಿಸಿದರು.
ಈ ಸಂದರ್ಭದಲ್ಲಿ ರವಿ ಸಾಲ್ಯಾನ್ ಕಲ್ಲಟ್ಟೆ, ಸುರೇಶ್ ಪಡುಬಿದ್ರಿ, ಯಶವಂತ್, ವಾಮನ್ ಸಾಲ್ಯಾನ್, ಬಾಲಕೃಷ್ಣ, ಗೀತಾ ಮೊದಲಾದವರು ಉಪಸ್ಥಿತರಿದ್ದರು.