Updated News From Kaup

ಕಟಪಾಡಿಯಲ್ಲಿ "ಬಲೆ ತುಲು ಲಿಪಿ ಕಲ್ಪುಗ” ತುಳು ಭಾಷಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Posted On: 10-10-2024 10:31AM

ಕಟಪಾಡಿ : ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಹಾಗೂ ಜೈ ತುಲುನಾಡ್(ರಿ.) ವತಿಯಿಂದ “ಬಲೆ ತುಲು ಲಿಪಿ ಕಲ್ಪುಗ” ತುಳು ಭಾಷಾ ತರಬೇತಿಯ ಕಾರ್ಯಕ್ರಮಕ್ಕೆ ತ್ರಿಶಾ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು. ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ನಾರಾಯಣ್ ರಾವ್ ಮಾತನಾಡಿ ಇಂದು ಭಾಷೆಯನ್ನು ಕಲಿಯಲು ಹಲವಾರು ಆಧುನಿಕ ತಂತ್ರಜ್ಞಾನಗಳಿವೆ. ಆದರೆ ನಿಜವಾಗಿಯೂ ಭಾಷೆ ಕಲಿಯುವುದೆಂದರೆ ಸಂಸ್ಕೃತಿ, ಭಾಷೆಯ ಇತಿಹಾಸ, ಪರಂಪರೆಯನ್ನು ಕೂಡ ಕಲಿಯುದಾಗಿದೆ ಎಂದರು.

ಪಡುಬಿದ್ರಿ : ಅಂತಾರಾಜ್ಯ ಬಂಟ ಕ್ರೀಡೋತ್ಸವಕ್ಕೆ ಭೂಮಿ ಪೂಜೆ

Posted On: 10-10-2024 07:08AM

ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ ಡಿಸೆಂಬರ್ 29 ರಂದು ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿ 66ರ ಭವ್ಯ ಪೆಟ್ರೋಲ್ ಬಂಕ್ ಸಮೀಪದ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಾರಾಜ್ಯ ಬಂಟ ಕ್ರೀಡೋತ್ಸವ-2024 ಎಮ್‌ಆರ್‌ಜಿ ಟ್ರೋಫಿ ಕ್ರೀಡೋತ್ಸವದ ಪೂರ್ವಭಾವಿಯಾಗಿ ಬುಧವಾರ ಭೂಮಿ ಪೂಜೆ ನೆರವೇರಿಸಲಾಯಿತು.

ಉಚ್ಚಿಲ : ರಸ್ತೆ ದಾಟುವ ಸಂದರ್ಭ ಪತಿ-ಪತ್ನಿಗೆ ಬಸ್ ಡಿಕ್ಕಿ ; ಪತಿ ಮೃತ್ಯು, ಪತ್ನಿ ತೀವ್ರ ಗಾಯ

Posted On: 10-10-2024 07:00AM

ಉಚ್ಚಿಲ : ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ. 9ರಂದು ರಾತ್ರಿ ನಡೆದಿದೆ.

ಕಾಪು ತಾಲ್ಲೂಕು ಕಸಾಪ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗಾಗಿ ಕಥೆ ಹಾಗೂ ಕವನ ಸ್ಪರ್ಧೆ

Posted On: 09-10-2024 07:20PM

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲ್ಲೂಕು ಘಟಕದವತಿಯಿಂದ ನ.೧೬ ರಂದು ಪಲಿಮಾರಿನಲ್ಲಿ ಜರುಗುವ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕಾಪು ತಾಲ್ಲೂಕಿನ ಪ್ರೌಢ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕವನ ಸ್ಪರ್ಧೆ, ಪದವಿ ಹಾಗೂ ಸಾರ್ವಜನಿಕ ವಿಭಾಗದವರಿಗಾಗಿ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ

Posted On: 09-10-2024 06:56PM

ಉಡುಪಿ : ಶರನ್ನವರಾತ್ರಿ ಮಹೋತ್ಸವದ ಪ್ರಥಮ ದಿನ ಉಡುಪಿಯ ಶ್ರೀ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಉಪಸಮಿತಿಯಾದ ಉಡುಪಿ ನಗರಸಭಾ ವ್ಯಾಪ್ತಿಯ ನೂತನ ಕಚೇರಿಯು ಸಮಿತಿಯ ಮಾರ್ಗದರ್ಶಕರು ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ, ಸಮಿತಿಯ ನೇತೃತ್ವವನ್ನು ವಹಿಸಿರುವ ಸಾಯಿರಾಧಾ ಡೆವಲಪರ್ಸ್ ನ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಮತ್ತು ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಉಪಸ್ಥಿತಿಯಲ್ಲಿ ಜರಗಿತು.

ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಕಾಪು ಜೆ.ಸಿ.ಐ ವತಿಯಿಂದ ಸನ್ಮಾನ

Posted On: 07-10-2024 09:53PM

ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿ ಸಮಾಜಕ್ಕೆ ತನ್ನಿಂದಾಗುವ ಸಹಾಯ ಮಾಡುತ್ತ ಸಮಾಜ ಸೇವೆಗಾಗಿ ಹಲವಾರು ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಪಡೆದು ಇತ್ತೀಚೆಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಘಟಕದಿಂದ ಗೌರವ ಡಾಕ್ಟರೆಟ್ ಪದವಿ ಪಡೆದ ಕಾಪುವಿನ ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಜೆ.ಸಿ.ಐ ಕಾಪು ವಲಯದಿಂದ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.

ಅಕ್ಟೋಬರ್ 8 : ಹೊಸ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಅಷ್ಟೆಮಿ ನಾಟಕ ಪ್ರದರ್ಶನ

Posted On: 07-10-2024 08:30PM

ಕಾಪು : ನವರಾತ್ರಿ ಉತ್ಸವದ ಪ್ರಯುಕ್ತ ಕಾಪು ಹೊಸ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಇವರ ಕಥೆ - ಸಂಭಾಷಣೆ - ನಿರ್ದೇಶನದ ಚೈತನ್ಯ ಕಲಾವಿದರು ಬೈಲೂರು ಅಭಿನಯಿಸುವ 10 ನೇ ನಾಟಕ ಅಷ್ಟೆಮಿ ಅಕ್ಟೋಬರ್ 8, ಮಂಗಳವಾರ ಸಂಜೆ ಗಂಟೆ 7.30 ಪ್ರದರ್ಶನಗೊಳ್ಳಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಉಡುಪಿ ಉಚ್ಚಿಲ ದಸರಾದಲ್ಲಿ ವೀಣಾ ನಿನಾದ - ಶತವೀಣಾವಲ್ಲರಿ

Posted On: 07-10-2024 08:17PM

ಉಚ್ಚಿಲ : ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ಶಾಲಿನಿ ಡಾ.ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಸೋಮವಾರ ಏಕಕಾಲದಲ್ಲಿ ನೂರೊಂದು ವೀಣಾವಾದನ ಶತವೀಣಾವಲ್ಲರಿ ಜರಗಿತು.

ಅ.11 : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ - ಹುಲಿ ವೇಷ ಕುಣಿತ ಸ್ಪರ್ಧೆ

Posted On: 07-10-2024 08:10PM

ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಅಕ್ಟೋಬ‌ರ್ 11 ರಂದು ಮಧ್ಯಾಹ್ನ 3.30 ಗಂಟೆಗೆ ಕಾಪುವಿನ ಬಂಟರ ಸಂಘದ ಆವರಣದಲ್ಲಿ ಆಯೋಜಿಲಾಗಿದೆಂದು ರಕ್ಷಣಾಪುರ ಜವನೆರ್ ಕಾಪು ತಂಡದ ಅಧ್ಯಕ್ಷ ನವೀನ್ ಎನ್ ಶೆಟ್ಟಿ ತಿಳಿಸಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಟಪಾಡಿ ಪೇಟೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Posted On: 05-10-2024 06:31PM

ಕಟಪಾಡಿ : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನವನ್ನು ಶನಿವಾರ ಕಟಪಾಡಿ ಪೇಟೆಯಲ್ಲಿ ‌ನಡೆಸಲಾಯಿತು.