Updated News From Kaup

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ಭೇಟಿ

Thumbnail
Posted On: 18 Nov 2024, 06:31 PM

ಕಾಪು : 2025ರ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜರಗಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶ ಜಸ್ಟೀಸ್ ಸವಣೂರು ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ ಅಮ್ಮನ ದರುಶನ ಪಡೆದು ನೂತನ ದೇಗುಲದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಇವರು ನ್ಯಾಯಾಧೀಶರಿಗೆ ಅಮ್ಮನ ಅನುಗ್ರಹ ಪ್ರಸಾದ ನೀಡಿ ಹರಸಿದರು. ಅಭಿವೃದ್ಧಿ ಸಮಿತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ನೂತನ ದೇಗುಲದ ಕಾಮಗಾರಿಯನ್ನು ವೀಕ್ಷಿಸಿದ ನ್ಯಾಯಾಧೀಶರಿಗೆ ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಿ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನವಿತ್ತರು. ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಮನೋಹರ್ ಎಸ್. ಶೆಟ್ಟಿ, ಸುಧಾಕರ ಶೆಟ್ಟಿ ಮಕರ, ಉಡುಪಿಯ ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು, ಪ್ರಮುಖರಾದ ಮೋಹನ್ ಬಂಗೇರ, ಸಂತೋಷ್ ಶೆಟ್ಟಿ ತೆಂಕರಗುತ್ತು, ಅರುಣ್ ಶೆಟ್ಟಿ ಪಾದೂರು, ಶೋಭಿತ್ ಶೆಟ್ಟಿ, ಮಧುಕರ್ ಎಸ್., ಉದಯ ಭಾರ್ಗವ, ಸಂತೋಷ್ ಶೆಟ್ಟಿ ಕಾಪು, ಜಯಕರ ಶೆಟ್ಟಿಗಾರ್, ಶಿವಣ್ಣ ಎಸ್.ಅಂಚನ್, ಸಂದೀಪ್ ಕುಮಾರ್, ಸೋಮನಾಥ್ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶ ಭೇಟಿ

Thumbnail
Posted On: 18 Nov 2024, 06:25 PM

ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶ ಜಸ್ಟೀಸ್ ಸವಣೂರು ವಿಶ್ವಜಿತ್ ಶೆಟ್ಟಿ ಸೋಮವಾರ ಭೇಟಿ ನೀಡಿದರು. ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಂಡು ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ಶ್ರೀ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.

ಮಹಾಬಲ ಮೂಲ್ಯರ ಮೇಲಿನ ಹಲ್ಲೆ ಖಂಡಿಸಿ ಕಾರ್ಕಳ ಕುಲಾಲ ಯುವ ವೇದಿಕೆಯಿಂದ ಮನವಿ

Thumbnail
Posted On: 18 Nov 2024, 06:16 PM

ಕಾರ್ಕಳ : ಇಲ್ಲಿನ ಪುರಸಭಾ ಸದಸ್ಯನಿಂದ ಕೂಲಿ ಕಾರ್ಮಿಕ ಮಹಾಬಲ ಮೂಲ್ಯ ಎನ್ನುವವರಿಗೆ ಮಾಡಿದ ಹಲ್ಲೆ ಪ್ರಕರಣ ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಕಳ ಕುಲಾಲ ಯುವ ವೇದಿಕೆ ವತಿಯಿಂದ ಸೋಮವಾರ ಕಾರ್ಕಳ ಡಿ ವೈ ಎಸ್ ಪಿ ಅರವಿಂದ ಕಲಗುಜ್ಜಿ, ನಗರ ಠಾಣಾ ಎಸ್ ಐ ಸಂದೀಪ್ ಶೆಟ್ಟಿಯವರಿಗೆ ಮನವಿ ನೀಡಲಾಯಿತು. ಪುರಸಭಾ ಸದಸ್ಯ ಸೀತಾರಾಮರು ದೊಣ್ಣೆಯಲ್ಲಿ ಹೊಡೆದ ಹೊಡೆತಕ್ಕೆ ಮಹಾಬಲ ಮೂಲ್ಯರ ಮೊಣ ಕಾಲಿನ ಮೂಳೆ ಮುರಿತಗೊಂಡಿದೆ. ಈ ಕ್ರೂರ ಪ್ರವೃತ್ತಿಯ ಬಗ್ಗೆ ಸಾಮಾಜಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯನ್ನು ಕುಲಾಲ ಯುವ ವೇದಿಕೆ ಈ ಖಂಡಿಸಿ, ಘಟನೆ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದೆ. ತಕ್ಷಣವೇ ಆರೋಪಿಯನ್ನು ಬಂಧನ ಮಾಡದಿದ್ದರೆ ತಾಲೂಕಿನಾದ್ಯoತ ತೀವ್ರ ಹೋರಾಟ ಮಾಡುವುದಾಗಿ ಯುವ ವೇದಿಕೆ ಎಚ್ಚರಿಸಿದೆ. ಮನವಿ ನೀಡಿದ ಸಂದರ್ಭ ಕುಲಾಲ ಯುವ ವೇದಿಕೆಯ ಜಿಲ್ಲಾಧ್ಯಕ್ಷ ದಿವಾಕರ ಬಂಗೇರ, ಕಾರ್ಕಳ ಕುಲಾಲ ಸಂಘದ ಅಧ್ಯಕ್ಷ ಹರೀಶ್ಚಂದ್ರ ಕುಲಾಲ್, ಕಾರ್ಕಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ಉದಯ ಕುಲಾಲ, ಹೆರ್ಮುಂಡೆ ಕುಲಾಲ ಸಂಘದ ಕಾರ್ಯದರ್ಶಿ ಹೃದಯ ಕುಲಾಲ್, ಹೆಬ್ರಿ ಕುಲಾಲ ಸಂಘದ ಅಧ್ಯಕ್ಷ ಸುರೇಂದ್ರ ಕುಲಾಲ್ ವರಂಗ, ಕಾರ್ಕಳ ಕುಲಾಲ ಯುವ ವೇದಿಕೆಯ ಕಾರ್ಯದರ್ಶಿ ಸಂದೇಶ್, ಕಾಂತಾವರ ಕುಲಾಲ ಸಂಘಟನೆಯ ಅಧ್ಯಕ್ಷ ವಿಠಲ ಮೂಲ್ಯ ಬೇಲಾಡಿ, ಸರ್ವಜ್ಞ ಆಸರೆ ಕಿರಣ ಬಳಗದ ಪ್ರಭಾಕರ್ ಇನ್ನ ಮತ್ತು ಯುವ ವೇದಿಕೆ ಸದಸ್ಯರು ಉಪಸ್ಥಿತರಿದ್ದರು.

ಕುಲದ ನೆಲೆ ಕೇಳಿದ ಕನಕದಾಸರದ್ದು ವಿಶ್ವಮಾನವ ವ್ಯಕ್ತಿತ್ವ : ತಹಶಿಲ್ದಾರ್ ಡಾ.ಪ್ರತಿಭಾ ಆರ್.

Thumbnail
Posted On: 18 Nov 2024, 04:21 PM

ಕಾಪು : ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿದ ಕನಕದಾಸರು ವಿಶ್ವಮಾನವರಾದರು ಎಂದು ಕಾಪು ತಾಲೂಕು ತಹಶಿಲ್ದಾರ್ ಪ್ರತಿಭಾ ಹೇಳಿದರು. ಅವರು ಸೋಮವಾರ ತಹಶಿಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದಾಸಶ್ರೇಷ್ಠರಾದ ಕನಕದಾಸರ ಬದುಕೇ ಮಾನವ ಕುಲಕ್ಕೆ ಒಂದು ಸಂದೇಶ. ಜಾತ್ಯಾತೀತ ಮೌಲ್ಯಗಳನ್ನು ಪ್ರತಿಪಾದಿಸಿದ ಕನಕದಾಸರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು. ಸರಳ ಜೀವನ ನಡೆಸಿ ಭಕ್ತಿ ಪರಾಕಾಷ್ಠೆಯಿಂದ ಉಡುಪಿ ಶ್ರೀಕೃಷ್ಣನನ್ನೇ ತನ್ನೆಡೆಗೆ ತಿರುಗಿಸಿಕೊಂಡ ದಾಸ ಶ್ರೇಷ್ಟರ ಜೀವನವೇ ಸಂದೇಶವಾಗಿದೆ ಎಂದು ತಹಶಿಲ್ದಾರ್ ಹೇಳಿದರು. ಈ ಸಂದರ್ಭ ತಹಶಿಲ್ದಾರ್ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ ; ಲೇಖನ ಸಂಕಲ್ಪ ಕಾರ್ಯಕ್ರಮ

Thumbnail
Posted On: 17 Nov 2024, 11:49 PM

ಕಾಪು‌ : ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ- ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಎಂ ಆರ್ ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಇವರ ನೇತೃತ್ವದಲ್ಲಿ ಹಾಗೂ ಮಾಣಿಲ ಮೋಹನ್ ದಾಸ್ ಪರಮಹಂಸ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಬೆಂಗಳೂರಿನ ಗಾಯತ್ರಿ ವಿಹಾರ ಗೇಟ್ ನಂ 4, ಪ್ಯಾಲೇಸ್ ಗ್ರೌಂಡ್ ಬೆಂಗಳೂರು ಇಲ್ಲಿ ಭಾನುವಾರ ಜರಗಿತು. ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ಕಾರ್ಯಕ್ರಮದಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭಾಗವಹಿಸಿ ನವದುರ್ಗಾ ಲೇಖನ ಯಜ್ಞದ ಕುರಿತು ಸಂಪೂರ್ಣ ವಿವರಣೆ ನೀಡಿ, ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಉಪಾಧ್ಯಕ್ಷರಾದ ದಿವಾಕರ್ ಶೆಟ್ಟಿ, ಮನೋಹರ್ ಶೆಟ್ಟಿ, ಸ್ವರ್ಣ ಸಮರ್ಪಣಾ ಸಮಿತಿ ಅಧ್ಯಕ್ಷರಾದ ರವಿ ಸುಂದರ್ ಶೆಟ್ಟಿ, ಆರ್ಥಿಕ ಸಮಿತಿ ಮುಖ್ಯ ಸಂಚಾಲಕರಾದ ಉದಯ್ ಸುಂದರ್ ಶೆಟ್ಟಿ, ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್, ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಯೋಗಿಶ್ ವಿ ಶೆಟ್ಟಿ ಬಾಲಾಜಿ, ಬೆಂಗಳೂರು ಸಮಿತಿ ಅಧ್ಯಕ್ಷರಾದ ಉಪೇಂದ್ರ ಶೆಟ್ಟಿ, ಸುಗ್ಗಿ ಸುಧಾಕರ್ ಶೆಟ್ಟಿ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ‌ ಯಜ್ಞ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : 3ನೇ ಬೃಹತ್ ಉದ್ಯೋಗ ಮೇಳ ಸಂಪನ್ನ

Thumbnail
Posted On: 17 Nov 2024, 10:15 PM

ಕಟಪಾಡಿ : ‌ಮಣಿಪುರ ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಆಯೋಜನೆಯ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಉಚಿತ 3ನೇ ಬೃಹತ್ ಉದ್ಯೋಗ ಮೇಳದ ಸಮಾರೋಪ ಕಾರ್ಯಕ್ರಮ ಭಾನುವಾರ ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿ, ಮಾತನಾಡಿ ಉತ್ತಮ ಶಿಕ್ಷಣದೊಂದಿಗೆ ಉದ್ಯೋಗವೂ ಅನಿವಾರ್ಯ. ಉದ್ಯೋಗದ ಅವಕಾಶ ಒದಗಿಸುತ್ತಿರುವ ಉಡುಪಿ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಪ್ರಾಮಾಣಿಕ ಪ್ರಯತ್ನ ಶ್ಲಾಘನೀಯ ಎಂದರು. ಇದೇ ಸಂದರ್ಭ ಲಾಲಾಜಿ ಮೆಂಡನ್‌ರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್‌ಸ್ಟಿಟ್ಯೂಟ್ ಆಫ್ ಮೆನೇಜ್‌ಮೆಂಟ್‌ನ ನಿರ್ದೇಶಕ ಡಾ. ಸುಧೀರ್ ಎಮ್, ಕಾಪು ತಹಶೀಲ್ದಾರ್‌ ಡಾ. ಪ್ರತಿಭಾ ಆರ್‌ ಮಾತನಾಡಿದರು. ಗ್ರಾಮೀಣ ಬಂಟರ ಸಂಘದ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿಯ ಉದ್ಯೋಗ ಮೇಳದಲ್ಲಿ 30 ಕಂಪೆನಿಗಳು ಭಾಗವಹಿಸಿದೆ. ಕಳೆದ 2 ಬಾರಿಯ ಉದ್ಯೋಗ ಮೇಳದಲ್ಲಿ 1,300 ಜನರು ಉದ್ಯೋಗ ಪಡೆದಿದ್ದು, ಈ ಬಾರಿ 1,700ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು, ಹೆಚ್ಚಿನ ಜನರಿಗೆ ಉದ್ಯೋಗ ಸಿಗಲಿದೆ ಎಂದರು. ಮಣಿಪಾಲ ವೈಷ್ಣವಿ ದುರ್ಗಾ ದೇವಳದ ಆಡಳಿತ ಮೊಕ್ತೇಸರ ಬಿ. ಜಯರಾಜ್ ಹೆಗ್ಡೆ, ನಿಟ್ಟೆ ಎನ್‌ಎಮ್‌ಎಎಮ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಭ್ಯುದಯ ಮುಖ್ಯಸ್ಥ ಭರತ್ ಜಿ. ಕುಮಾರ್, ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ರೋಶನ್ ಶೆಟ್ಟಿ, ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮನೋಹರ್ ಶೆಟ್ಟಿ ತೋನ್ಸೆ, ಸುರತ್ಕಲ್‌ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಸುರತ್ಕಲ್, ಮುನಿಯಾಲು ಉದಯ ಕುಮಾರ್ ಶೆಟ್ಟಿ, ನ್ಯಾಯವಾದಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಅಭಿಮತ ಆಡಳಿತ ಪಾಲುದಾರೆ ಡಾ. ಮಮತಾ ಪಿ. ಶೆಟ್ಟಿ, ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನ ಕಾರ್ಯಕ್ರಮ ನಿರ್ದೇಶಕಿ ಪ್ರೊ. ದಿವ್ಯಾ ರಾಣಿ ಪ್ರದೀಪ್, ಸಂದರ್ಶನ ಸಮಿತಿಯ ಛೇರ್ಮನ್ ಗುರುಪ್ರಶಾಂತ್ ಭಟ್ ಕೆ., ಉಡುಪಿ ಗ್ರಾಮೀಣ ಬಂಟರ ಸಂಘ ಅಧ್ಯಕ್ಷ ಡಾ. ಎಚ್. ಬಿ. ಶೆಟ್ಟಿ, ಟ್ರಸ್ಟಿಗಳಾದ ಜಗದೀಶ್ ಹೆಗ್ಡೆ ಪಳ್ಳಿ, ರಮೇಶ್ ಶೆಟ್ಟಿ ನಿಂಜೂರು, ದಯಾನಂದ ಶೆಟ್ಟಿ ಕಲ್ಮಂಜೆ, ಗೋಪಾಲ ಶೆಟ್ಟಿ ಬೆಳ್ಳೆ, ಹರೀಶ್ ಶೆಟ್ಟಿ ಬೆಳ್ಳೆ, ಟ್ರಸ್ಟಿ, ಕಾರ್ಯಕ್ರಮ ಸಂಚಾಲಕ ಪದ್ಮನಾಭ ಹೆಗ್ಡೆ, ವೇದಿಕೆಯಲ್ಲಿದ್ದರು. ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ, ಕಾರ್ಯಕ್ರಮ ಸಂಚಾಲಕ ವಿಜಿತ್ ಶೆಟ್ಟಿ ವಂದಿಸಿದರು. ಪ್ರೊ. ಡಾ. ಸುಧೀರ್‌ ರಾಜ್‌ ನಿರೂಪಿಸಿದರು.

ಪಡುಬಿದ್ರಿ : ಕ್ರೀಡಾ ಮನೋಭಾವ ಬದುಕಿನಲ್ಲಿರಲಿ - ನವೀನಚಂದ್ರ ಜೆ ಶೆಟ್ಟಿ

Thumbnail
Posted On: 17 Nov 2024, 12:08 PM

ಪಡುಬಿದ್ರಿ : ಕ್ರೀಡಾ ಸ್ಫೂರ್ತಿಯ ಗುಣಲಕ್ಷಣಗಳನ್ನು ದೃೆನಂದಿನ ಜೀವನಕ್ಕೆ ಅನ್ವಯಿಸಿದರೆ ಮೃೆದಾನ ಮತ್ತು ಬದುಕಿನಲ್ಲಿ ಯಶಸ್ವಿಗೆ ಕಾರಣವಾಗುತ್ತದೆ. ಉತ್ತಮ ಕ್ರೀಡಾ ಸ್ಪೂರ್ತಿಯನ್ನು ಹೊಂದಿರುವುದು ಒಬ್ಬ ನಾಯಕನ ಯಶಸ್ವಿನ ಗುಣಲಕ್ಷಣವಾಗಿದೆ. ಆಟಗಾರರು ತೀರ್ಪುಗಾರಿಕೆಗೆ ಗೌರವ ಸಲ್ಲಿಸುವುದರ ಮೂಲಕ ಪ್ರೀತಿ, ಸೌಹಾರ್ದತೆ ಪಂದ್ಯಕೂಟವಾಗಲಿ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ನವೀನಚಂದ್ರ ಜೆ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ನಡೆಯುವ "ಕಡಲ್ ಫಿಶ್ 2024" ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯ ಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕಡಲ್ ಫಿಶ್ ಕ್ರಿಕೆಟರ್ಸ್ ಸ್ಥಾಪಕ ಅಧ್ಯಕ್ಷ ಚೇತನ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಶ್ರೀಲಂಕಾ ಹಾಗು ಭಾರತ ಟೆನ್ನಿಸ್ ಬಾಲ್ ತಂಡದ ನಡುವೆ ಉದ್ಘಾಟನ ಪಂದ್ಯಾಟ ನಡೆಯಿತು. ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್ , ಪಡುಬಿದ್ರಿ ಕಲ್ಲಟ್ಟೆ ಶ್ರೀ ಧರ್ಮ ಜಾರಂದಾಯ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೌರವ‌ ಅಧ್ಯಕ್ಷ ಶರತ್ ಶೆಟ್ಟಿ , ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ , ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾ ಅಧ್ಯಕ್ಷ ವಿಶ್ವಾಸ್ ಅಮೀನ್, ಸುರತ್ಕಲ್ ತುಳುನಾಡ ಬಿರುವೆರ್ ಸಂಸ್ಥಾಪಕ ಲೊಕೇಶ್ ಕೊಡಿಕೆರೆ, ಪಡುಬಿದ್ರಿ ಬಂಟರ ಸಂಘ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕಾಪು ರಕ್ಷಣಾಪುರ ಜವನೆರ್ ಅಧ್ಯಕ್ಷ ನವೀನ್ ‌ಶೆಟ್ಟಿ, ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ‌ಹೊಸಬೆಟ್ಟು , ಖಾದಿ ಮತ್ತು ಗ್ರಾಮೋದ್ಯೋಗ ನಿಗಮ ಮಾಜಿ ನಿರ್ದೇಶಕ ಮಿಥುನ್ ಹೆಗ್ಡೆ, ಪಡುಬಿದ್ರಿ ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಪೂಜಾರಿ, ಕಾಪು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ರಮೀಜ್ ಹುಸೇನ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ್ ಪೂಜಾರಿ, ಉದ್ಯಮಿ ಅಶ್ವಿನ್ ಕೋಟ್ಯಾನ್, ಕಡಲ್ ಫಿಶ್ ಕ್ರಿಕೆಟರ್ಸ್ ಅಧ್ಯಕ್ಷ ಪ್ರಶಾಂತ್ ಸಾಲ್ಯಾನ್, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯ ಅಧ್ಯಕ್ಷ ‌ರಚನ್ ಸಾಲ್ಯಾನ್, ಬಾಡಿ ಬಿಲ್ಡರ್ ವಿರಾಜ್ ಸುರತ್ಕಲ್, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಪ್ರೇಮ ವಾಸುದೇವ್ ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಪ್ರಶಾಂತ್ ಸಾಲ್ಯಾನ್ ವಂದಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿದರು.

ಪಲಿಮಾರು ಕನ್ನಡ ಸಾಹಿತ್ಯ ಸಮ್ಮೇಳನ - ಶಿಕ್ಷಕರಿಗೆ ಒ.ಒ.ಡಿ ಸೌಲಭ್ಯ

Thumbnail
Posted On: 15 Nov 2024, 10:45 AM

ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಪಲಿಮಾರು ಸರಕಾರಿ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನ.16, ಶನಿವಾರ ಹಿರಿಯ ಸಾಮಾಜಿಕ ಕಾರ್ಯಕರ್ತ, ಸಂಘಟಕ,ಕೊರಗಭಾಷಾ ಸಂಶೋಧಕ ಸಾಹಿತಿ, ಪಾಂಗಾಳ ಬಾಬು ಕೊರಗ ಇವರ ಸರ್ವಾಧ್ಯಕ್ಷತೆಯಲ್ಲಿ ದಿನವಿಡೀ ವಿವಿಧ ಗೋಷ್ಠಿ/ಸಂವಾದ/ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ಜರುಗಲಿದೆ. ಈ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಉಡುಪಿ ವಲಯದ ಎಲ್ಲ ಸರಕಾರಿ/ಅನುದಾನಿತ/ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಅನ್ಯಕಾರ್ಯ ನಿಮಿತ್ತ ಸೌಲಭ್ಯವನ್ನು ಒದಗಿಸಿ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಡುಪಿ ಇವರು ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಶಾಲಾ ಶಿಕ್ಷಣ ಇಲಾಖೆ(ಪ.ಪೂ) ಕಾಪು ತಾಲೂಕಿನ ಪದವಿ ಪೂರ್ವ ಕಾಲೇಜುಗಳ ಆಸಕ್ತ ಉಪನ್ಯಾಸಕರಿಗೆ ಉಪನಿರ್ದೇಶಕರು , ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಇವರು ಅನ್ಯಕಾರ್ಯ ನಿಮಿತ್ತ ಸೌಲಭ್ಯ ನೀಡಿ ಆದೇಶಿಸಿದ್ದಾರೆ ಎಂದು ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನ.16-18 : ಪಡುಬಿದ್ರಿಯಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಕೂಟ - ಕಡಲ್ ಫಿಶ್ ಟ್ರೋಫಿ

Thumbnail
Posted On: 14 Nov 2024, 09:44 PM

ಕಾಪು : ಕಡಲ್ ಫಿಶ್ ಕ್ರಿಕೆಟರ್ಸ್ ಆಶ್ರಯದಲ್ಲಿ ಪಡುಬಿದ್ರಿಯ ಬೋರ್ಡ್ ಶಾಲಾ ಮೈದಾನದಲ್ಲಿ ನ.16-18ರ ವರೆಗೆ ಪ್ರಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ತಂಡವೊಂದು ಭಾಗವಹಿಸುವ ರಾಷ್ಟ್ರಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್‌ ಪಂದ್ಯಾಟ ಕಡಲ್ ಫಿಶ್ ಟ್ರೋಫಿ-2024 ನಡೆಯಲಿದೆ. ಕಾಪು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ವಿಶ್ವಾಸ್ ವಿ.ಅಮೀನ್ ಮಾಹಿತಿ ನೀಡಿದರು. ಪಂದ್ಯಾಟದಲ್ಲಿ ಪ್ರಥಮ ಬಾರಿಗೆ ಶ್ರೀಲಂಕಾದ ತಂಡ ಪಾಲ್ಗೊಳ್ಳಲಿದೆ. ಅಲ್ಲದೆ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜ್ಯದ ಪ್ರತಿಷ್ಠಿತ ತಂಡಗಳು, ಉಭಯ ಜಿಲ್ಲೆಯ ಬಲಿಷ್ಠತಂಡಗಳು ಭಾಗವಹಿಸಲಿದ್ದು, ಒಟ್ಟು 16 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ವಿಜೇತರಿಗೆ ಪ್ರಥಮ ಪ್ರಶಸ್ತಿ ಸಹಿತ ನಗದು 5 ಲಕ್ಷ ರೂ., ದ್ವಿತೀಯ ಪ್ರಶಸ್ತಿ ಸಹಿತ ನಗದು 3ಲಕ್ಷ ರೂ. ಬಹುಮಾನವಿದೆ. ಜತೆಗೆ ಪಂದ್ಯಶ್ರೇಷ್ಠ ಸರಣಿ ಶ್ರೇಷ್ಠ, ಉತ್ತಮ ದಾಂಡಿಗ, ಉತ್ತಮ ಬೌಲರ್ ವೈಯಕ್ತಿಕ ಪ್ರಶಸ್ತಿಗಳಿವೆ. ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದ್ದು, ನ.18ರಂದು ಸಂಜೆ ಹೊನಲು ಬೆಳಕಿನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ನ.16ರಂದು ಸಂಜೆ 6 ಗಂಟೆಗೆ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಭಾರತ 11 ತಂಡಗಳು ಸೆಣಸಾಟ ನಡೆಸಲಿದ್ದು, ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕ ಡಾ.ಕೆ.ಪ್ರಕಾಶ್ ಶೆಟ್ಟಿ ಚಾಲನೆ ನೀಡಲಿದ್ದಾರೆ. ಸಂಸ್ಥೆಯ ಗೌರವಾಧ್ಯಕ್ಷ ನವೀನ್‌ಚಂದ್ರ ಜೆ.ಶೆಟ್ಟಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾ‌ರ್ ಸೊರಕೆ ಮತ್ತು ಪ್ರಮೋದ್ ಮಧ್ವರಾಜ್, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಸಹಿತ ಗಣ್ಯರು ಉಪಸ್ಥಿತರಿರುವರು. ನ.18ರಂದು ರಾತ್ರಿ ನಡೆಯುವ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಶಾಸಕ ಯಶಪಾಲ್ ಎ.ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ಸಾಲ್ಯಾನ್ ಭಾಗವಹಿಸುವರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಚೇತನ್ ಕುಮಾರ್, ಪದಾಧಿ ಕಾರಿಗಳಾದ ಸಂತೋಷ್ ಪಡುಬಿದ್ರಿ, ರಚನ್ ಸಾಲ್ಯಾನ್, ಪಾಂಡುರಂಗ ಕೋಟ್ಯಾನ್ ಉಪಸ್ಥಿತರಿದ್ದರು.

ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರರಿಗೆ ಸಮಾಜ ಸೇವಾ ಮಾಣಿಕ್ಯ ರಾಷ್ಟೀಯ ಪ್ರಶಸ್ತಿ ಪ್ರದಾನ

Thumbnail
Posted On: 13 Nov 2024, 09:54 PM

ಕಾಪು : ತುಳುಕೂಟ ಪುಣೆ (ರಿ.) ವತಿಯಿಂದ ಬೊಳ್ಳಿ ಪರ್ಬ-2024 ತುಳುನಾಡ ಜಾತ್ರೆ ತುಳುಕೂಟ ರಜತ ಸಂಭ್ರಮದ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರ ಸಮಾಜ ಸೇವೆಯನ್ನು ಪರಿಗಣಿಸಿ ಕೊಡಲ್ಪಡುವ 'ಸಮಾಜ ಸೇವಾ ಮಾಣಿಕ್ಯ' ರಾಷ್ಟೀಯ ಪ್ರಶಸ್ತಿಯನ್ನು ಪುಣೆಯ ಬಾಣೆರ್ ನ ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಲತಾ ಸುಧೀರ್ ಶೆಟ್ಟಿ ಆಡಿಟೋರಿಯಂನ ನಾಡೋಜ ಡಾ.ಜಿ ಶಂಕರ್ ವೇದಿಕೆಯಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪರಮಾಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಓಡಿಯೂರು, ಮತ್ತು ಶ್ರೀ ಅನಂತ ಕೃಷ್ಣ ಅಸ್ರಣ್ಣ ಕಟೀಲು ಆಶೀರ್ವಚನಗೈದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಣೆ ತುಳುಕೂಟ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಕಳತ್ತೂರು, ತುಳುಕೂಟ ರಜತ ಮಹೋತ್ಸವ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಪುತ್ತೂರು ವಹಿಸಿದ್ದರು. ಈ‌ ಸಂದರ್ಭ ಉಡುಪಿ ಜಿ ಫ್ಯಾಮಿಲಿ ಟ್ರಸ್ಟ್ ಸ್ಥಾಪಕದ್ಯಾಕ್ಷರಾದ ನಾಡೋಜ ಡಾ.ಜಿ ಶಂಕರ್, ಎಂ.ಆರ್. ಜಿ ಗ್ರೂಪ್ಸ್ ಡಾ.ಪ್ರಕಾಶ್ ಶೆಟ್ಟಿ, ಜಾಗಾತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷರಾದ ಎ ಸಿ ಭಂಡಾರಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಾ.ಕೆ ಧರಣಿದೇವಿ ಮಾಲಗತ್ತಿ ಐ.ಪಿ.ಎಸ್, ಅನಿವಾಸಿ ಭಾರತೀಯ ಡಾ.ಡೇವಿಡ್ ಫ್ರಾಂಕ್ ಫೆರ್ನಾಂಡಿಸ್, ಮುನಿಯಾಲು ಟ್ರಸ್ಟ್ ಉದಯಕುಮಾರ್ ಶೆಟ್ಟಿ ಮುನಿಯಾಲು, ಉಡುಪಿ ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು, ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಮೊಗವೀರ ಸಭಾ ಅಧ್ಯಕ್ಷರಾದ ಜಯ ಕೋಟ್ಯಾನ್, ತುಳುಕೂಟ ಪುಣೆ ಉಪಾಧ್ಯಕ್ಷರಾದ ಉದಯ ಶೆಟ್ಟಿ ಕಳತ್ತೂರು, ಪ್ರ.ಕಾರ್ಯದರ್ಶಿ ರೋಹಿತ್ ಡಿ ಶೆಟ್ಟಿ ನಗ್ರಿಗುತ್ತು, ರವಿಶಂಕರ್ ಶೆಟ್ಟಿ ಬಡಾಜೆ ಬಂಟ್ವಾಳ, ಭಾರತ್ ಕೋ ಆಪರೇಟಿವ್ ಮುಂಬೈ ಕಾರ್ಯಧ್ಯಕ್ಷರಾದ ಸೂರ್ಯಕಾಂತ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.