Updated News From Kaup
ಉಡುಪಿ ಉಚ್ಚಿಲ ದಸರಾ - 2024 : ಉಡುಪಿ ಜಿಲ್ಲಾಧಿಕಾರಿಯವರಿಂದ ಚಾಲನೆ
Posted On: 03-10-2024 02:16PM
ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರ ಸಹಯೋಗದೊಂದಿಗೆ 3ನೇ ಬಾರಿಗೆ ಅಕ್ಟೋಬರ್ 3ರಿಂದ 12ರವರೆಗೆ ನಡೆಯಲಿರುವ ಉಡುಪಿ ಉಚ್ಚಿಲ ದಸರಾ-2024ಕ್ಕೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿಯವರು ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಈ ಬಾರಿಯ ಉಡುಪಿ ಉಚ್ಚಿಲ ದಸರಾ ಹಬ್ಬಕ್ಕೆ ಚಾಲನೆ ನೀಡಲಾಗಿದೆ. ತಾಯಿ ಶಾರದೆ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಹಾರೈಸಿದರು.
ಮಾತೃಜಾ ಸೇವಾ ಸಿಂಧು ನಿಟ್ಟೆ : 25 ನೇ ಸೇವಾ ಯೋಜನೆ ಹಸ್ತಾಂತರ
Posted On: 03-10-2024 07:26AM
ಕಾರ್ಕಳ : ನಿಟ್ಟೆಯ ಮಾತೃಜಾ ಸೇವಾ ಸಿಂಧು ತಂಡ ಈ ಬಾರಿ ಕುತ್ಯಾರು ಭಾಗದ ಶರತ್ ಅವರ ವೈದ್ಯಕೀಯ ಚಿಕಿತ್ಸೆಯ ಮನವಿಗೆ ಸ್ಪಂದಿಸಿ 15,000 ಮೊತ್ತದ ಧನಸಹಾಯವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬೆಳ್ಮಣ್ ಇಲ್ಲಿಯ ಅರ್ಚಕರ ಹಾಗೂ ತಂಡದ ಸದಸ್ಯರ ಉಪಸ್ಥಿತಿಯಲ್ಲಿ ಶರತ್ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.
ಮತ್ತೆ ಬಂದಿದೆ ನವರಾತ್ರಿ : ನಮ್ಮ ಬದುಕಿನ ವಿಜಯದ ಹಬ್ಬವಾಗಲಿ
Posted On: 03-10-2024 07:21AM
ಕೆಡುಕಿನ ವಿರುದ್ಧ ಒಳಿತಿನ ವಿಜಯವನ್ನು ನಾವು ನವರಾತ್ರಿ ಹಬ್ಬದ ಮೂಲಕ ಸ್ಮರಿಸುತ್ತೇವೆ. ನವರಾತ್ರಿಯು ದುರ್ಗಾ ದೇವಿಗೆ ಸಮರ್ಪಿತವಾದ ಮಂಗಳಕರ ಹಬ್ಬವಾಗಿದೆ. ಒಂಬತ್ತು ರಾತ್ರಿಗಳ ಸಾಂಕೇತಿಕ ಆಚರಣೆಯಾಗಿರುವ ಈ ಹಬ್ಬಉತ್ತರ ಮತ್ತು ಪೂರ್ವ ಭಾರತದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಆಚರಣೆಯು ಹಲವಾರು ನೃತ್ಯ ಪ್ರದರ್ಶನಗಳನ್ನು, ವಿವಿಧ ವಿಶೇಷ ಪಾಕವಿಧಾನಗಳನ್ನು ಮತ್ತು ದುರ್ಗಾ ದೇವಿಗೆ ಸಲ್ಲಿಸುವ ಪ್ರಾರ್ಥನೆಗಳನ್ನು ಒಳಗೊಂಡಿರುತ್ತದೆ.
ಮಲ್ಪೆಯಲ್ಲಿ ಮತ್ಸ್ಯ ಕ್ಷಾಮ : ಮೀನುಗಾರರ ಸಂಕಷ್ಟ ಪರಿಹಾರಕ್ಕೆ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಸಮುದ್ರ ಪೂಜೆ
Posted On: 02-10-2024 04:51PM
ಮಲ್ಪೆ : ಮತ್ಸ್ಯ ಕ್ಷಾಮದಿಂದ ಮೀನುಗಾರರ ಸಂಕಷ್ಟ ಪರಿಹಾರಕ್ಕಾಗಿ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮಪೀಠ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಮಲ್ಪೆಯಲ್ಲಿ ಬುಧವಾರ 108 ಪುಣ್ಯ ಕ್ಷೇತ್ರ ಪ್ರಸಾದ ಸಮುದ್ರಕ್ಕೆ ಸಮರ್ಪಿಸಿದರು.
ನೆಹರು ಯುವ ಕೇಂದ್ರ : ಸ್ವಚ್ಚತಾ ಹಿ ಸೇವಾ ಕಾಯ೯ಕ್ರಮ
Posted On: 02-10-2024 04:08PM
ಉಡುಪಿ : ಗಾಂಧೀಜಿಯವರಂತಹ ವ್ಯಕ್ತಿಗಳು ಪ್ರಪಂಚದಲ್ಲಿ ಯಾರೂ ಇರಲು ಅಸಾಧ್ಯ. ಅವರ ವ್ಯಕ್ತಿತ್ವವನ್ನು ನಾವೆಲ್ಲರೂ ಅರ್ಥ ಮಾಡಿದಾಗ ಅವರಲ್ಲಿರುವ ಅಪೂರ್ವ ಶಕ್ತಿ ನಮಗೆ ತಿಳಿಯಲು ಸಾಧ್ಯ ಎಂದು ರೆಡ್ ಕ್ರಾಸ್ ಸೊಸೈಟಿ ಉಡುಪಿ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ಗಾಂಧಿ ಜಯಂತಿಯ ಪ್ರಯುಕ್ತ ನೆಹರು ಯುವ ಕೇಂದ್ರ ಜಿಲ್ಲಾಡಳಿತ ಉಡುಪಿ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಲ್ಪೆ ಸಮುದ್ರ ತೀರದಲ್ಲಿ ನಡೆದ ಸ್ವಚ್ಛತಾ ಹಿ ಸೇವಾ 2024 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮಾನಸಿಕ ಸ್ವಚ್ಛತೆ, ಭೌತಿಕ ಸ್ವಚ್ಛತೆ ಮತ್ತು ಪರಿಸರ ಸ್ವಚ್ಛತೆಯ ಬಗ್ಗೆ ಗಾಂಧೀಜಿಯವರು ಹೆಚ್ಚಿನ ಒತ್ತನ್ನು ನೀಡಿದರು ಈ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನ ಗಾಂಧೀಜಿಯವರಿಗೆ ಸಲ್ಲಿಸಿದ ಅಪೂರ್ವ ನಮನವಾಗಿದೆ ಎಂದು ಹೇಳಿದರು.
ಉಚ್ಚಿಲ ರೋಟರಿ ಕ್ಲಬ್, ಉಚ್ಚಿಲ ಸರಸ್ವತಿ ಮಂದಿರ ಶಾಲೆ : ಉಚ್ಚಿಲ ಬೀಚ್ನಲ್ಲಿ ಸ್ವಚ್ಛ ಭಾರತ್ ಅಭಿಯಾನ
Posted On: 02-10-2024 04:03PM
ಉಚ್ಚಿಲ : ಗಾಂಧಿ ಜಯಂತಿ ಅಂಗವಾಗಿ ಉಚ್ಚಿಲ ರೋಟರಿ ಕ್ಲಬ್ ಮತ್ತು ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಸಹಯೋಗದಲ್ಲಿ ಸ್ವಚ್ಛ ಭಾರತ್ ಅಭಿಯಾನ ಬುಧವಾರ ಉಚ್ಚಿಲ ಬೀಚ್ ನಲ್ಲಿ ನಡೆಯಿತು.
ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ ವತಿಯಿಂದ ಸಾಮಾಜಿಕ ಕಾರ್ಯ
Posted On: 02-10-2024 03:51PM
ಪಡುಬಿದ್ರಿ : ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಕರಾವಳಿ ಸ್ಟಾರ್ಸ್ ನಡಿಪಟ್ನ ಪಡುಬಿದ್ರಿ ಸಂಸ್ಥೆಯ ಸದಸ್ಯರು ಪಡುಬಿದ್ರಿ ಬೀಚ್ ಗೆ ಹೋಗುವ ರಸ್ತೆಯ ಮಧ್ಯೆ ಕಾಮಿನಿ ನದಿಗೆ ನಿರ್ಮಾಣವಾದ ಸೇತುವೆಯಲ್ಲಿ ಹೊಂಡಬಿದ್ದು ಕಬ್ಬಿಣದ ಸರಳುಗಳು ಕಾಣುತ್ತಿದ್ದು ಅದನ್ನು ಸರಿಪಡಿಸಿ ಕಾಂಕ್ರೀಟ್ ಹಾಕಿದರು.
ಉಡುಪಿ : ಉಚಿತ ಬೃಹತ್ ವೈದ್ಯಕೀಯ ಶಿಬಿರ
Posted On: 01-10-2024 12:41PM
ಉಡುಪಿ : ಆರೋಗ್ಯದಲ್ಲಿ ಪ್ರಾಥಮಿಕ ಹಂತದ ಪರೀಕ್ಷೆ ಮತ್ತು ರೋಗ ಪತ್ತೆ ಹಚ್ಚುವಿಕೆ ಇದನ್ನು ನಾವು ಉಚಿತ ಆರೋಗ್ಯ ಶಿಬಿರದಲ್ಲಿ ಮಾಡಬಹುದಾಗಿದೆ ಹೀಗಾಗಿ ಈ ಶಿಬಿರಗಳು ನಮ್ಮ ಆರೋಗ್ಯದ ರಕ್ಷಣೆಯ ಪ್ರಮುಖ ಹಂತವಾಗಿದೆ ಎಂದು ಜಿಲ್ಲಾ ಸಜ೯ನ್ ಡಾ. ಅಶೋಕ್ ಟಿ ತಿಳಿಸಿದರು. ಅವರು ಕಲ್ಯಾಣಪುರ ನೇಜಾರು ಸಮುದಾಯ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.
ಕಾಪು : ಜಮೀಯತುಲ್ ಫಲಾಹ್ ಕಾಪು ಘಟಕದಿಂದ ವಿದ್ಯಾರ್ಥಿ ವೇತನ ವಿತರಣೆ
Posted On: 30-09-2024 01:43PM
ಕಾಪು : ಜಮೀಯತುಲ್ ಫಲಾಹ್ ಕಾಪು ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಶನಿವಾರ ಕಾಪುವಿನ ಕೆ1 ಹೊಟೇಲ್ನಲ್ಲಿ ನಡೆಯಿತು. ಕಾಪು ತಾಲ್ಲೂಕಿನ ಪ್ರತಿಭಾವ್ನಿತ 66 ವಿದ್ಯಾರ್ಥಿಗಳಿಗೆ ಒಟ್ಟು 2.64 ಲಕ್ಷ ರೂ. ಆರೋಗ್ಯ ಸಹಾಯಕ್ಕಾಗಿ 40 ಸಾವಿರ ರೂ. ಸೇರಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೌಲ್ಯವನ್ನು ಅರ್ಹರಿಗೆ ವಿತರಿಸಲಾಯಿತು.
ತರಬೇತಿ ಸಮ್ಮೇಳನ - ಜೇಸಿಐ ಉಡುಪಿ ಸಿಟಿ ಘಟಕಕ್ಕೆ ಹಲವು ಪ್ರಶಸ್ತಿ
Posted On: 30-09-2024 11:16AM
ಉಡುಪಿ : ಜೇಸಿಐ ಉಡುಪಿ ಸಿಟಿ ಘಟಕವು ಜೇಸಿಐ ವಲಯ 15 ರ ವತಿಯಿಂದ ಶಂಕರಪುರದಲ್ಲಿ ನಡೆದ ವಲಯದ ಪ್ರಥಮ ತರಬೇತಿ ಸಮ್ಮೇಳನ ಇನ್ಸ್ಪಾಯರ್ - 2024 ರಲ್ಲಿ ಅತ್ಯುತ್ತಮ ಹೊಸ ತರಬೇತುದಾರ ಪುರಸ್ಕಾರ ಸಹಿತ ವಿವಿಧ ಪ್ರಶಸ್ತಿಗೆ ಭಾಜನವಾಗಿದೆ.
