Updated News From Kaup

ಅಕ್ಟೋಬರ್ 3 : ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಉಪ ಸಮಿತಿಯಾದ ಉಡುಪಿ ನಗರಸಭಾ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭ

Posted On: 29-09-2024 08:18PM

ಕಾಪು : ಉಡುಪಿ ನಗರಸಭಾ ವ್ಯಾಪ್ತಿಯ ಜನರನ್ನು ನವದುರ್ಗಾ ಲೇಖನ ಯಜ್ಞದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಉಪ ಸಮಿತಿಯಾದ ಉಡುಪಿ ನಗರಸಭಾ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭವು ಅಕ್ಟೋಬರ್ 3, ಗುರುವಾರ ಅಪರಾಹ್ನ 04:30ಕ್ಕೆ ನಡೆಯಲಿದೆ.

ಹಿಂದು ಸಮಾಜ ಉದಾರ ಭಾವನೆಯನ್ನು ಹೊಂದಿದೆ : ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ

Posted On: 29-09-2024 07:54PM

ಪಡುಬಿದ್ರಿ : ಹಿಂದು ಸಮಾಜ ಉದಾರ ಭಾವನೆಯನ್ನು ಹೊಂದಿದೆ. ಎಲ್ಲರೂ ಒಟ್ಟಿಗೆ ಒಂದಾಗಿ ಬಾಳಬೇಕೆಂಬ ಕಲ್ಪನೆಯೂ ಇದೆ. ಆದರೆ ಆ ಭಾವನೆಯು ಅನ್ಯರಿಗೂ ಇದ್ದಲ್ಲಿ ಮಾತ್ರ ಅದು ಯಶಸ್ಸು ಕಾಣಲು ಸಾಧ್ಯ. ನಮ್ಮ ಉಳಿವಿಗಾಗಿ ನಾವು ಜಾಗೃತರಾಗಿರಬೇಕು. ಜಾತೀಯತೆಯಲ್ಲಿ ಹರಿದು ಹಂಚಿ ಹೋಗದೇ, ಸಮಾಜ ಮುಖಿಯಾಗಿ ಹಿಂದುತ್ವ ಜಾಗೃತಗೊಳ್ಳಬೇಕಿದೆ. ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರು ಈ ಬಗ್ಗೆ ಚಿಂತಿಸಿ ಸಮಾಜದ ರಕ್ಷಣೆಗೆ ಮಹತ್ವದ ನಿರ್ಧಾರದೊಂದಿಗೆ ಮುಂದಡಿ ಇರಿಸುವ ಅವಶ್ಯಕತೆ ಇದೆ ಎಂದು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀ ಪೀಠದ ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು. ಅವರು ಭಾನುವಾರ ಕಾಪು ತಾಲೂಕು ವಿಶ್ವ ಹಿಂದು ಪರಿಷದ್ ವತಿಯಿಂದ ಪಡುಬಿದ್ರಿ ಬಂಟರ ಭವನದಲ್ಲಿ ನಡೆದ ವಿಶ್ವ ಹಿಂದು ಪರಿಷದ್ನ ಷಷ್ಠಿಪೂರ್ತಿ ವರ್ಷದ ಪ್ರಯುಕ್ತ ಹಿಂದೂ ಸಮಾವೇಶದಲ್ಲಿ ಆಶೀರ್ವಚನ ನೀಡುತ್ತಾ ಮಾತನಾಡಿದರು.

ನನಗೆ ನೀಡಿದ ನಿತ್ಯಾನಂದಾನುಗ್ರಹ ಪ್ರಶಸ್ತಿ ಸಮ್ಮಾನ ಅವಿಸ್ಮರಣೀಯ : ಡಾ.ಕೆ. ಪ್ರಕಾಶ್ ಶೆಟ್ಟಿ

Posted On: 29-09-2024 07:42PM

ಪಡುಬಿದ್ರಿ : ಪಡುಬಿದ್ರಿಯ ಅಳಿಯನಾಗಿ ನನಗೆ ಪ್ರೀತಿ, ಸ್ನೇಹ ನೀಡಿದ್ದೀರಿ. ನಿಮ್ಮ ಅಭಿಮಾನಕ್ಕೆ ಚಿರ ಋಣಿ. ನೀವೆಲ್ಲ ದೇವರಿಗೆ ಸಮಾನ. ನನಗೆ ನೀಡಿದ ನಿತ್ಯಾನಂದಾನುಗ್ರಹ ಪ್ರಶಸ್ತಿ ಸಮ್ಮಾನ ಅವಿಸ್ಮರಣೀಯ. ಈ ಊರಿನ ದೇವಳದ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ನಾವೆಲ್ಲಾ ಒಗ್ಗಟ್ಟಾಗ ಬೇಕಿದೆ. ಬಂಟ ಸಮಾಜದ ಅಭ್ಯದಯಕ್ಕಾಗಿ ದುಡಿಯಲು ಸದಾ ಸಿದ್ಧ ಎಂದು ಬೆಂಗಳೂರಿನ ಉದ್ಯಮಿ, ಎಂಆರ್ ಜಿ ಗ್ರೂಪ್ ನ ಚೇರ್ಮನ್, ಆಡಳಿತ ನಿರ್ದೇಶಕ ಡಾ.ಕೆ.ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ, ಸಿರಿಮುಡಿ ದತ್ತಿನಿಧಿ ಟ್ರಸ್ಟ್‌ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ಸಮಸ್ತ ಬಂಟ ಸಮಾಜದ ಪರವಾಗಿ ಇತ್ತೀಚೆಗೆ ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾಗಿ “ಶ್ರೀ ಗುರು ನಿತ್ಯಾನಂದಾನುಗ್ರಹ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಕಾಪು : ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Posted On: 29-09-2024 09:10AM

ಕಾಪು : ರೇಬಿಸ್ ರೋಗವನ್ನು ತಡೆಗಟ್ಟುವ ಜಾಗೃತಿಗಾಗಿ ಸೆಪ್ಟೆಂಬರ್ 28ನ್ನು ವಿಶ್ವ ರೇಬಿಸ್ ದಿನವಾಗಿ ಆಚರಿಸಲಾಗುತ್ತಿದೆ. ರೇಬಿಸ್ ರೋಗವು ನಾಯಿ ಮತ್ತು ಬೆಕ್ಕು ಕಡಿತದಿಂದ ಬರುತ್ತದೆ. ಈ ಪ್ರಾಣಿಗಳಿಂದ ಕಚ್ಚಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಬೇಕು. ಎಚ್ಚರಿಕೆಯ ಕ್ರಮವಾಗಿ ಎಲ್ಲಾ ಸಾಕುಪ್ರಾಣಿಗಳಿಗೆ ರೇಬಿಸ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಆಕಸ್ಮಿಕವಾಗಿ ಪ್ರಾಣಿಗಳ ಕಡಿತವಾದರೆ ಪಶು ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದರೆ ಮಾರಣಾಂತಿಕ ರೋಗದಿಂದ ದೂರವಿರಬಹುದೆಂದು ಕಾಪು ತಾಲೂಕು ಪಶುವೈದ್ಯಾಧಿಕಾರಿ ಡಾ. ಅರುಣ್ ಹೆಗ್ಡೆ ತಿಳಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ಪಶುಪಾಲನ ಮತ್ತು ಪಶು ವೈದ್ಯ ಸೇವಾ ಇಲಾಖೆ, ಪಶು ಚಿಕಿತ್ಸಾಲಯ ಶಿರ್ವ, ರೋಟರಿ ಕ್ಲಬ್ ಶಿರ್ವ ಸಹಯೋಗದಲ್ಲಿ ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಜರುಗಿದ ರೇಬಿಸ್ ಜಾಗೃತಿ ಶಿಬಿರದಲ್ಲಿ ಅವರು ಮಾಹಿತಿ ನೀಡಿದರು.

ನವೆಂಬರ್ 16 : ಪಲಿಮಾರಿನಲ್ಲಿ ಕಾಪು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ - ಪೂರ್ವಭಾವಿ ಸಭೆ

Posted On: 29-09-2024 09:06AM

ಪಲಿಮಾರು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ 16, ಶನಿವಾರ ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜರುಗಲಿದ್ದು, ಸಮ್ಮೇಳನದ ಸಿದ್ಧತಾ ಪೂರ್ವಭಾವಿ ಸಭೆಯು ಕಸಾಪ ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆಯವರ ಅಧ್ಯಕ್ಷತೆಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಸೆಪ್ಟೆಂಬರ್ 29 (ನಾಳೆ) : ಕಾರ್ಕಳ ಕುಲಾಲ ಸಂಘದ ವಾರ್ಷಿಕ ಮಹಾಸಭೆ

Posted On: 28-09-2024 09:20PM

ಕಾರ್ಕಳ : ತಾಲೂಕಿನ ಕುಲಾಲ ಸುಧಾರಕ ಸಂಘ (ರಿ.) ಜೋಡುರಸ್ತೆ ಕಾರ್ಕಳ ಇದರ 29 ನೇ ವರ್ಷದ ಮಹಾಸಭೆ, ಶ್ರೀ ಸತ್ಯ ನಾರಾಯಣ ಪೂಜೆ, ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ ಸಂಘದ ಸಭಾ ಭವನದಲ್ಲಿ ನಡೆಯಲಿದೆ ಎಂದು ಸಂಘದ ಪ್ರಮುಖರು ತಿಳಿಸಿರುವರು.

ನ. 16 - 18 : ಪಡುಬಿದ್ರಿಯಲ್ಲಿ ಕಡಲ್ ಫಿಶ್ ಕ್ರಿಕೆಟರ್ಸ್ ವತಿಯಿಂದ ರಾಷ್ಟ್ರ ಮಟ್ಟದ ಕ್ರಿಕೆಟ್ ಪಂದ್ಯಾವಳಿ

Posted On: 28-09-2024 11:15AM

ಪಡುಬಿದ್ರಿ : ಕಡಲ್ ಫಿಶ್ ಕ್ರಿಕೆಟರ್ಸ್ ಪಡುಬಿದ್ರಿ ವತಿಯಿಂದ ನವೆಂಬರ್ 16ರಿಂದ 18ರವರೆಗೆ ರಾಷ್ಟ್ರ ಮಟ್ಟದ ಅಹರ್ನಿಶಿ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಪಡುಬಿದ್ರಿ ಎಸ್.ಎಸ್.ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಸುದ್ದಿಗೋಷ್ಠಿಯಲ್ಲಿ ತಂಡದ ಅಧ್ಯಕ್ಷ ಚೇತನ್‌ ಕುಮಾ‌ರ್ ಮಾಹಿತಿ ನೀಡಿದರು.

ಅಕ್ಟೋಬರ್ 3 -12 : ವೈಭವದ ಉಡುಪಿ ಉಚ್ಚಿಲ ದಸರಾ - 2024

Posted On: 25-09-2024 08:04PM

ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ವರ್ಷದ ಉಡುಪಿ ಉಚ್ಚಿಲ ದಸರಾ-2024ವನ್ನು ಅಕ್ಟೋಬರ್ 3 ರಿಂದ 12 ರ ತನಕ ಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಭಕ್ತರ ಸಹಕಾರದೊಂದಿಗೆ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ನಾಡೋಜ ಡಾ.ಜಿ.ಶಂಕರ್ ಹೇಳಿದರು. ಅವರು ಉಚ್ಚಿಲದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸೆ. 29 : ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ

Posted On: 25-09-2024 12:10PM

ಪಡುಬಿದ್ರಿ : ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ 'ಸಿರಿಮುಡಿ ದತ್ತಿನಿಧಿ ಟ್ರಸ್ಟ್' ಬಂಟರ ಸಂಘ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ಸೆಪ್ಟೆಂಬರ್ 29, ಆದಿತ್ಯವಾರ ಪಡುಬಿದ್ರಿ ಬಂಟರ ಸಂಘದಲ್ಲಿ ಸಮಸ್ತ ಬಂಟ ಸಮಾಜದ ಪರವಾಗಿ ಇತ್ತೀಚೆಗೆ ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಬಂಟ ಸಮಾಜದ ದಾನಿ ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ 'ಶ್ರೀ ಗುರು ನಿತ್ಯಾನಂದಾನುಗ್ರಹ' ಪ್ರಶಸ್ತಿಯನ್ನು ನೀಡಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿಯವರು ಪಡುಬಿದ್ರಿ ಬಂಟರ ಸಂಘದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಸಮಾರೋಪ

Posted On: 25-09-2024 09:59AM

ಕಾಪು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಮತ್ತು ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯಚೈತನ್ಯ ಹೈಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಸಮಾರೋಪವು ಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಅಸ್ಸೆಟ್ ಕಾರ್ಯದರ್ಶಿ ಗುರುರಾಜ ಕೆ.ಜೆ ಮಾತನಾಡಿ, ಪ್ರಥಮ ಬಾರಿಗೆ ಸಂಸ್ಥೆಯಲ್ಲಿ ಕ್ರೀಡಾಕೂಟವನ್ನು ಸಂಘಟಿಸಲು ಸಹಕರಿಸಿದ ಶಾಲಾ ಶಿಕ್ಷಣ ಇಲಾಖೆ ಮತ್ತು ದಾನಿಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದರು.