Updated News From Kaup
ಅಖಿಲ ಭಾರತ ದೈವರಾಧಾಕರ ಒಕ್ಕೂಟ ಉಡುಪಿ : ಸಭೆ ; ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 05 Nov 2024, 11:56 AM
ಉಡುಪಿ : ಅಖಿಲ ಭಾರತ ದೈವರಾಧಾಕರ ಒಕ್ಕೂಟ ಉಡುಪಿ (ರಿ.) ಇದರ ಸಭೆ ನ.4ರಂದು ಉಡುಪಿ ತೆಂಕುಪೇಟೆ ಉಡುಪಿ ವುಡ್ ಲಾಂಡ್ಸ್ ಹೋಟೆಲ್ ಹತ್ತಿರ ಇರುವ ಶ್ರೀ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ಜರಗಿತು. ಈ ಸಂದರ್ಭ ಡಿಸೆಂಬರ್ 1 ರಂದು ನಡೆಯಲಿರುವ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಒಕ್ಕೂಟ ಸದಸ್ಯರ ಸಮ್ಮುಖದಲ್ಲಿ ದೈವಗಳಿಗೆ ಪ್ರಾರ್ಥನೆ ಮಾಡಿ ಬಿಡುಗಡೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷರಾದ ವಿನೋದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ದಿನೇಶ್ ಪೂಜಾರಿ, ಒಕ್ಕೂಟದ ಕೋಶಾಧಿಕಾರಿಯಾದ ಭಾಸ್ಕರ್, ಉಪಾಧ್ಯಕ್ಷರಾದ ಸುಧಾಕರ್ ಪಾಣರ, ಜಯ ಮಡಿವಾಳ, ನವೀನ್ ಪಾತ್ರಿ ಕುಂಜಿಬೆಟ್ಟು, ಉದಯ ಮೆಂಡನ್, ವಾಸು ಶೇರಿಗಾರ, ಉಡುಪಿ ಜಿಲ್ಲಾಧ್ಯಕ್ಷರಾದ ಸುಧಾಕರ್ ಶೆಟ್ಟಿ, ಗೋಪಾಲ್ ಮಡಿವಾಳ, ಕೃಷ್ಣ ಮಡಿವಾಳ, ವಿಜಯ ಮಡಿವಾಳ ಹಾಗೂ ತಾಲೂಕು ಅಧ್ಯಕ್ಷರಾದ ರಂಜಿತ್ ಶೇರಿಗಾರ, ಕಾರ್ಯದರ್ಶಿಯಾದ ಶಾಮ್ ರವಿ, ಸುಂದರ, ಸಂದೇಶ್ ಪೂಜಾರಿ, ಆಕಾಶ್, ಒಕ್ಕೂಟದ ಸಂಘಟನೆ ಕಾರ್ಯದರ್ಶಿಯಾದ ರಮೇಶ್ ಪೂಜಾರಿ ಹಾಗೂ ದಿನೇಶ್ ಪಾಣರ ಹಾಗೂ ಸದಸ್ಯರು ಉಪಸ್ಥಿತಿಯಿದ್ದರು.
ಪಡುಬಿದ್ರಿ ದೇವಳದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಲೇಖನ ಯಜ್ಞದ ಕುರಿತು ಸಭೆ
Posted On: 04 Nov 2024, 06:59 PM
ಪಡುಬಿದ್ರಿ : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪಡುಬಿದ್ರಿ ವ್ಯಾಪ್ತಿಯ ಎಲ್ಲಾ ಸಮುದಾಯದ ವತಿಯಿಂದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಆದಿತ್ಯವಾರ ಜರಗಿದ ಪೂರ್ವಭಾವಿ ಸಭೆಯನ್ನು 9 ಸಮುದಾಯದ 9 ಜನ ಮಹಿಳೆಯರಿಂದ 9 ನವದುರ್ಗ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಮಾಜಿ ಶಾಸಕ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ. ರಘುಪತಿ ಭಟ್ ಅವರು ನವದುರ್ಗಾ ಲೇಖನ ಯಜ್ಞದ ಕುರಿತು ಸಂಪೂರ್ಣ ವಿವರಣೆ ನೀಡಿ ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ ದೇವಳದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ವೈ. ಶಶಿಧರ್ ಶೆಟ್ಟಿ, ವಿಶು ಕುಮಾರ್ ಶೆಟ್ಟಿಬಾಲ್, ವೈ ಸುಧೀರ್ ಕುಮಾರ್, ವಿಷ್ಣುಮೂರ್ತಿ, ಶಶಿಕಾಂತ್ ಪಡುಬಿದ್ರಿ, ಪ್ರಕಾಶ್ ಶೆಟ್ಟಿ ಪಡುಹಿತ್ಲು, ಸಂಪತ್ ಕುಮಾರ್, ಸುಕುಮಾರ್ ಶ್ರೀಯಾನ್ ಸುಧಾಕರ್ ಮಡಿವಾಳ, ಭರತ್ ದೇವಾಡಿಗ, ಮುಂಡಾಳ ಗೊಡ್ಡ ಸಮಾಜದ ಪ್ರಮುಖರು, ಅರುಣ್ ಶೆಟ್ಟಿ ಪಾದೂರು, ಶೇಖರ ಶೆಟ್ಟಿ ಕಲ್ಯ, ಪ್ರಭಾಸ್ ಶೆಟ್ಟಿ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ವಿಶ್ವನಾಥ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮತ್ತಿತರರು ಉಪಸ್ಥಿತರಿದ್ದರು. ಅನಿತಾ ವಿಶು ಕುಮಾರ್ ಪ್ರಾರ್ಥಿಸಿದರು. ಹೊಸಮಾರಿಗುಡಿ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿ ಬ್ರಹ್ಮಕಲಶೋತ್ಸವದ ಬಗ್ಗೆ ವಿವರಿಸಿದರು. ಯೋಗಿಶ್ ಶೆಟ್ಟಿ ಬಾಲಾಜಿ ಪ್ರಸ್ತಾವಿಸಿದರು. ಮುರಳಿನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ್ ಶೆಟ್ಟಿ ಪಡುಹಿತ್ಲು ವಂದಿಸಿದರು.
ತುಳುಕೂಟ ಪುಣೆ ರಾಷ್ಟೀಯ ತುಳು ಪ್ರಶಸ್ತಿಗೆ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಆಯ್ಕೆ
Posted On: 03 Nov 2024, 03:13 PM
ಕಾಪು : ಮಹಾರಾಷ್ಟ್ರ ತುಳುಕೂಟ ಪುಣೆ (ರಿ.) 2024 ತುಳುನಾಡ ಜಾತ್ರೆ ಬೊಳ್ಳಿ ಪರ್ಬ ಕಾರ್ಯಕ್ರಮ ನ.10, ರವಿವಾರ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನ ಸಭಾಂಗಣದಲ್ಲಿ ಹಲವಾರು ಗಣ್ಯತಿಗಣ್ಯರ ಸಮ್ಮುಖದಲ್ಲಿ ಸಮಾಜ ಸೇವೆಗಾಗಿ ಕೊಡಲ್ಪಡುವ 2024 ರ ರಾಷ್ಟ್ರೀಯ ತುಳು ಪ್ರಶಸ್ತಿಗೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಸೇರಿ ನೂರಾರು ಪ್ರಶಸ್ತಿ ಪಡೆದ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಆಯ್ಕೆಯಾಗಿದ್ದಾರೆಂದು ತುಳುಕೂಟ ಇದರ ಅಧ್ಯಕ್ಷರು ದಿನೇಶ್ ಶೆಟ್ಟಿ ಕಳತ್ತೂರು ಉಪಾಧ್ಯಕ್ಷರಾದ ಉದಯ ಶೆಟ್ಟಿ ಕಳತ್ತೂರು ಪ್ರ.ಕಾರ್ಯದರ್ಶಿ ರೋಹಿತ್ ಡಿ ಶೆಟ್ಟಿ ನಗ್ರಿಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳ ಕರ್ನಾಟಕ ರಾಜ್ಯೋತ್ಸವ -2024 ಬಾಲಪ್ರಶಸ್ತಿಗೆ ಅರ್ಜಿ ಆಹ್ವಾನ
Posted On: 03 Nov 2024, 02:26 PM
ಕಟಪಾಡಿ : ಇನ್ವೆಂಜರ್ ಫೌಂಡೇಷನ್ ಮಂಗಳೂರು, ಸೃಷ್ಠಿ ಫೌಂಡೇಶನ್ ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ, ಮಾನ್ಯ ಎಜ್ಯುಕೇಷನಲ್ ಆಂಡ್ ಕಲ್ಚರಲ್ ಫೌಂಡೇಶನ್ ಮಸ್ಕತ್ ವತಿಯಿಂದ ನೀಡಲಾಗುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ-2024 ಬಾಲಪ್ರಶಸ್ತಿಗೆ ಅರ್ಹ ಪ್ರತಿಭಾವಂತ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 5ರಿಂದ 15 ವರ್ಷದೊಳಗಿನ ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಚಿತ್ರಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಬಹುಮುಖ ಪ್ರತಿಭೆಗಳನ್ನು ಬಾಲಪ್ರಶಸ್ತಿಗೆ ಪರಿಗಣಿಸಲಾಗುವುದು. ಯಾವುದೇ ಕ್ಷೇತ್ರದಲ್ಲಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಸಾಧನೆಗಳ ಕುರಿತ ಸವಿವರ ಮಾಹಿತಿಯನ್ನು ಸೂಕ್ತ ಸ್ವಯಂ ದೃಢೀಕರಣ ಮಾಡಿ ಅರ್ಜಿಯನ್ನು ನ.15 ರೊಳಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು. ಕಾಮತ್ ಸರ್ವಿಸಸ್, ಎಸ್.ವಿ.ಎಸ್ ಹಿರಿಯ ಪ್ರಾಥಮಿಕ ಶಾಲೆ ಎದುರು, ಹಳೇ ರಸ್ತೆ ಕಟಪಾಡಿ ಅಂಚೆ ಉಡುಪಿ ಜಿಲ್ಲೆ-574105. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕೆ.ನಾಗೇಶ್ ಕಾಮತ್ - 9886432197, ಪ್ರಕಾಶ ಸುವರ್ಣ ಕಟಪಾಡಿ - 9964019229 ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭಾ ಪ್ರದರ್ಶನಕ್ಕೂ ಅವಕಾಶ ನೀಡಿ ಸೂಕ್ತ ವೇದಿಕೆ ಕಲ್ಪಿಸುವ ವಿನೂತನ ಕಾರ್ಯಕ್ರಮವನ್ನು ನವೆಂಬರ್ ತಿಂಗಳಾಂತ್ಯಕ್ಕೆ ಆಯೋಜಿಸಲಾಗಿದೆ. ಇದೇ ವೇಳೆ ಗಾನಗಂಧರ್ವ ಎಸ್ಪಿಬಿ ಸಂಗೀತೋತ್ಸವ ಹಾಗೂ ಪ್ರಶಸ್ತಿ ವಿಜೇತ ಮಕ್ಕಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಳತ್ತೂರು ದಿವಾಕರ ಡಿ. ಶೆಟ್ಟಿಯವರ ಮನೆಯಲ್ಲಿ ಸೌಹಾರ್ದ ದೀಪಾವಳಿ ಆಚರಣೆ
Posted On: 02 Nov 2024, 10:35 PM
ಕಾಪು : ಸಮಾಜ ಸೇವಕ ಕೃಷಿಕ ಕಳತ್ತೂರು ದಿವಾಕರ ಡಿ. ಶೆಟ್ಟಿಯವರ ಮನೆಯಲ್ಲಿ ಕ್ರಿಶ್ಚಿಯನ್ ಬಾಂಧವರೊಂದಿಗೆ ಹಾಗೂ ಊರಿನವರೊಂದಿಗೆ ದೀಪಾವಳಿ ಹಬ್ಬ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಲಿಯೋ ಮೆಂಡೋನ್ಸರವರು ಮಾತನಾಡಿ, ನಾವು ಪ್ರತಿ ವರ್ಷವು ದೀಪಾವಳಿ ಹಬ್ಬವನ್ನು ಸೌಹಾರ್ದಯುತವಾಗಿ ನಮ್ಮ ಗ್ರಾಮದ ಬೇರೆ ಬೇರೆ ಮನೆಗಳಲ್ಲಿ ಆಚರಿಸುತ್ತ ಬಂದಿದ್ದೇವೆ. ಈ ವರ್ಷ ದಿವಂಗತ ದೇಜು ಶೆಟ್ಟಿ ಮತ್ತು ಜಲಜ ಶೆಟ್ಟಿಯವರ ಮಗನಾದ ದಿವಾಕರ ಡಿ. ಶೆಟ್ಟಿ ಯವರ ಮನೆಯಲ್ಲಿ ದೀಪಾವಳಿ ಆಚರಣೆ ಮಾಡಿದ್ದು ನಮ್ಮ ಸೌಭಾಗ್ಯವಾಗಿದೆ. ದಿವಾಕರ ಡಿ. ಶೆಟ್ಟಿಯವರ ಕುಟುಂಬ ಊರಿನವರೊಂದಿಗೆ ಎಲ್ಲಾ ಜಾತಿ, ಧರ್ಮದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುತ್ತಾರೆ ಎಂದು ತಿಳಿಸಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿದರು. ಕಳತ್ತೂರು ಚರ್ಚ್ ನ ಅಧ್ಯಕ್ಷೆಯಾದ ಗ್ಲಾಡಿಸ್ ಅಲ್ಮೆಡರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಬಂಟಕಲ್ಲು ಸಾಮೂಹಿಕ ವಾಹನ ಪೂಜೆ
Posted On: 02 Nov 2024, 06:56 PM
ಬಂಟಕಲ್ಲು : ವಾಹನಗಳನ್ನು ಚಲಾಯಿಸುವಾಗ ಸಾರಿಗೆ ನಿಯಮವನ್ನು ಪಾಲಿಸುವುದರೊಂದಿಗೆ ಶ್ರಧ್ಧಾ ಭಕ್ತಿಯಿಂದ ವಾಹನ ಚಲಾಯಿಸಿದರೆ ಅಫಘಾತರಹಿತವಾಗಿ ಸುರಕ್ಷಿತ ಚಾಲನೆ ಸಾಧ್ಯವಾಗುವುದು ಎಂದು ಶಿರ್ವ ಪೊಲೀಸ್ ಠಾಣಾಧಿಕಾರಿ ಶಕ್ತೀವೇಲುರವರು ತಿಳಿಸಿದರು. ಅವರು ಬಂಟಕಲ್ಲು ರಾಜಾಪುರ ಸಾರಸ್ವತ ಸೇವಾ ವೃಂದದ ಆಶ್ರಯದಲ್ಲಿ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆದ 9 ನೇ ವರ್ಷದ ಸಾಮೂಹಿಕ ವಾಹನ ಪೂಜೆಗೆ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿ ಮಾತನಾಡಿದರು. ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣುವ ವಾಹನ ಪೂಜೆಯು ವಾಹನಗಳ ಮೇಲಿನ ಶ್ರದ್ಧೆ, ಭಕ್ತಿಯನ್ನು ತೋರಿಸುತ್ತದೆ ಎಂದು ಅವರು ತಿಳಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಆಡಳಿತ ಮೋಕ್ತೇಸರರಾದ ಜಯರಾಮ ಪ್ರಭು, ಬೆಳ್ಳೆ ಗ್ರಾ. ಪಂ. ಉಪಾಧ್ಯಕ್ಷರಾದ ಶಶಿಧರ ವಾಗ್ಲೆಯವರು ಶುಭಹಾರೈಸಿದರು. ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಉಮೇಶ್ ಪ್ರಭು, ಹಿರಿಯ ಶಿಕ್ಷಕ ಪುಂಡಲೀಕ ಮರಾಠೆ, ನಿವೃತ್ತ ಶಿಕ್ಷಕ ದಯಾನಂದ ಕಾಮತ್, ಬಂಟಕಲ್ಲು ಕಾರು ಚಾಲಕ ಮಾಲಕ ಸಂಘದ ಅಧ್ಯಕ್ಷ ಉಮೇಶ್ ರಾವ್, ಆಡಳಿತ ಮಂಡಳಿಯ ದೇವದಾಸ ಪಾಟ್ಕರ್, ರಾಮದಾಸ ಪ್ರಭು, ನಿವೃತ್ತ ಯೋಧ ರಾಜೇಂದ್ರ ಪಾಟ್ಕರ್, ಅಂಗನವಾಡಿ ಶಿಕ್ಷಕಿ ವಿನಯಾ ಕುಂದರ್, ಉದ್ಯಮಿ ರಾಘವೇಂದ್, ನಾಯಕ್, ಅನಂತರಾಮ ವಾಗ್ಲೆ, ಆಶಿಷ್ ಪಾಟ್ಕರ್, ವಿರೇಂದ್ರ ಪಾಟ್ಕರ್ ಉಪಸ್ಥಿತರಿದ್ದರು. ಅರ್ಚಕ ಶ್ರೀಕಾಂತ ಭಟ್ ಗೋವು ಪೂಜೆಯ ಬಳಿಕ ಧಾರ್ಮಿಕ ಪೂಜಾವಿಧಾನಗಳನ್ನು ನಡೆಸಿಕೊಟ್ಟರು. ರಾ.ಸಾ ಸೇವಾ ವೃಂದದ ಅಧ್ಯಕ್ಷ ಕೆ ಆರ್ ಪಾಟ್ಕರ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಾ ವೃಂದದ ಕಾರ್ಯದರ್ಶಿ ವಿಶ್ವನಾಥ ಬಾಂದೇಲ್ಕರ್ ವಂದಿಸಿದರು. ನೂರಕ್ಕೂ ಮಿಕ್ಕಿದ ವಿವಿಧ ವಾಹನಗಳು ಪೂಜಿಸಲ್ಪಟ್ಟವು.
ನ. 4 : ಕಾಪು ಪೊಲಿಪುವಿನ ಮಿಸ್ಕೀನ್ ಎಂಪವರ್ ಮೆಂಟ್ ಫೌಂಡೇಶನ್ ಸಂಸ್ಥೆಯ ದಶಮಾನೋತ್ಸವ
Posted On: 02 Nov 2024, 04:38 PM
ಕಾಪು : ಇಲ್ಲಿನ ಪೊಲಿಪು ಜಾಮಿಯಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮಿಸ್ಕೀನ್ ಎಂಪವರ್ ಮೆಂಟ್ ಫೌಂಡೇಶನ್ ಪೊಲಿಪು, ಕಾಪು ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮ ನವೆಂಬರ್ 4 ರಂದು ಸಂಜೆ 6ಗಂಟೆಗೆ ಕಾಪುವಿನ ಮಜೂರು ಸರ್ಕಲ್ ಬಳಿಯ ಖಾಸಗಿ ಮೈದಾನದಲ್ಲಿ ಜರಗಲಿದೆ ಎಂದು ಸಂಸ್ಥೆಯ ಸಲಹೆಗಾರ ಅಮೀರ್ ಹಂಝ ಹೇಳಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ದಶಮಾನೋತ್ಸವದ ಪ್ರಯುಕ್ತ ಏಕ ದಿನ ಮತ ಪ್ರಭಾಷಣ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪೊಲಿಪು ಜಾಮಿಯಾ ಮಸೀದಿಯ ಖತೀಬರಾದ ಮುಹಮ್ಮದ್ ಇರ್ಷಾದ್ ಸಅದಿಯವರು ಉದ್ಘಾಟಿಸಲಿದ್ದು, ಕಾಪು ಖಾಝಿ ಅಲ್ ಹಾಜ್ ಪಿ.ಬಿ. ಅಹಮ್ಮದ್ ಮುಸ್ಲಿಯಾರ್ ರವರು ದುಅ ಮಾಡಲಿದ್ದಾರೆ. ಪ್ರಸಿದ್ದ ಮತ ಪಂಡಿತ ಅಂತರಾಷ್ಟ್ರೀಯ ವಾಗ್ಮಿ ಅಲ್ ಹಾಫಿಳ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂರವರು ಮತ ಪ್ರಭಾಷಣವನ್ನು ಮಾಡಲಿದ್ದಾರೆ. ಮಿಸ್ಕೀನ್ ಎಂಪವರ್ ಮೆಂಟ್ ಫೌಂಡೇಶನ್ ಕಳೆದ 10 ವರ್ಷಗಳಿಂದ, ಸಮುದಾಯದ ಬಡವರ್ಗದವರ ಸಂಪೂರ್ಣ ಸಬಲೀಕರಣಕ್ಕಾಗಿ ರೂಪುಗೊಂಡ ಸಂಸ್ಥೆಯಾಗಿ ಸಾಂಧರ್ಭಿಕ ಅವಶ್ಯಕತೆಗಳ ನಿವಾರಣೆಗಳನ್ನು ಮಾತ್ರ ಮಾಡದೇ, ಶಾಶ್ವತವಾದ ಪರಿಹಾರವನ್ನು ನೀಡುವ ಸಂಸ್ಥೆಯಾಗಿರುತ್ತದೆ. ಕಾರ್ಯಕ್ರಮದಲ್ಲಿ ಮಜೂರು ಬದ್ರಿಯಾ ಮಸೀದಿಯ ಜಮಾಅತ್ ಮತ್ತು ಅದರ ಅಂಗ ಸಂಸ್ಥೆಗಳು, ಪಕೀರ್ಣಕಟ್ಟೆಯ ಜಮಾಅತ್ ಸದ್ಯಸರು ಸಹಕರಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ನಝೀರ್ ಕೆ.ಹಸನ್, ಕಾರ್ಯದರ್ಶಿ ಮುಹಮ್ಮದ್ ಮಹ್ಸೂಲ್ ಅಮೀರ್, ಇಮ್ತಿಯಾಜ್ ಅಹಮದ್, ಸರ್ಫರಾಜ್ ಚಪ್ಪು ಉಪಸ್ಥಿತರಿದ್ದರು.
ನ. 23 - 24 : ಕೋಸ್ಟಲ್ ಕಾರ್ನಿವಾಲ್ ಪಡುಬಿದ್ರಿ 2024 ; ಎರಡು ದಿನದ ಬೀಚ್ ಉತ್ಸವ
Posted On: 02 Nov 2024, 04:25 PM
ಪಡುಬಿದ್ರಿ : ಜೆಸಿಐ ಪಡುಬಿದ್ರಿ ಇದರ 50 ನೇ ವರ್ಷ ಆಚರಣೆಯ ಸಂಭ್ರಮಾಚರಣೆ ಪ್ರಯುಕ್ತ ಜೆಸಿಐ ಪಡುಬಿದ್ರಿ ಆಯೋಜನೆಯಲ್ಲಿ ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನವೆಂಬರ್ 23 ಮತ್ತು 24 ರಂದು ಎರಡು ದಿನದ ಬೀಚ್ ಉತ್ಸವ ಕೋಸ್ಟಲ್ ಕಾರ್ನಿವಾಲ್ ಪಡುಬಿದ್ರಿ 2024 ಕಾರ್ಯಕ್ರಮ ಜರಗಲಿದೆ ಎಂದು ಕಾರ್ಯಕ್ರಮ ಮುಖ್ಯಸ್ಥ ವೈ ಸುಕುಮಾರ್ ಹೇಳಿದರು. ಅವರು ಶನಿವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜೆಸಿಐ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕೋಸ್ಟಲ್ ಕಾರ್ನಿವಾಲ್ 2024 ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಜೂನಿಯರ್ ಹಾಗು ಸೀನಿಯರ್ ಓಪನ್ ವಾಟರ್ ಸೀ ಸ್ವಿಮ್ಮಿಂಗ್ ಸ್ಪರ್ಧಾ ಕೂಟ, ಸಾರ್ವಜನಿಕರಿಗೆ ಮುಕ್ತ ಹಾಗೂ ವಿಶೇಷ ಬೆರ್ ಫೂಟ್ ರನ್, ಆಹಾರ ಮೇಳ, ಉದ್ಯಮ ಮೇಳ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಪ್ರತಿಭೆಗಳಿಂದ, ಪ್ರಸಿದ್ದ ಕಲಾವಿದರಿಂದ ಮ್ಯೂಸಿಕಲ್ ನೈಟ್, ಸ್ಯಾಂಡ್ ಹಾಗೂ ಕ್ರಾಫ್ಟ್ ಆರ್ಟ್ ಸ್ಪರ್ಧೆ ಹಾಗೂ ಪ್ರದರ್ಶನ, ವಿವಿಧ ಮನೋರಂಜನಾ ಹಾಗೂ ಬೀಚ್ ಕ್ರೀಡೆಗಳು, ಬೀಚ್ ಕ್ಯಾಂಪಿಂಗ್ ಇರಲಿವೆ. ವಿವಿಧ ಕ್ಷೇತ್ರಗಳ ಸಾಧಕರು, ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಬೀಚ್ ಕ್ರೀಡೆಗಳು ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಜರಗಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮ, ಫುಡ್ ಫೆಸ್ಟ್ ಮುಖ್ಯ ಬೀಚ್ ಬಳಿ ನಡೆಯಲಿವೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜೆಸಿಐ ಪಡುಬಿದ್ರಿ ಪೂರ್ವಾಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕರಾದ ವೇಣುಗೋಪಾಲ್ ಎಸ್ ಜೆ, ಸುರೇಶ್ ಪಡುಬಿದ್ರಿ, ಯಶೋದ ಪಡುಬಿದ್ರಿ, ಸಮಿತ್ ಎರ್ಮಾಳು, ಮಕರಂದ, ಮನು ಉದಯ ಶೆಟ್ಟಿ, ಶ್ರೀನಿವಾಸ ಶರ್ಮ, ಅಶ್ವಥ್, ಪ್ರಸನ್ನ ಉಪಸ್ಥಿತರಿದ್ದರು.
ನ. 16 -17 : ಎರಡು ದಿನಗಳ ಉದ್ಯೋಗ ಮೇಳ
Posted On: 02 Nov 2024, 04:16 PM
ಕಾಪು : ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳ ನಗರ, ಮಣಿಪುರ, ಉಡುಪಿ ಇವರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ವತಿಯಿಂದ 3 ನೇ ಬಾರಿ ಬೃಹತ್ ಎರಡು ದಿನಗಳ ಉದ್ಯೋಗ ಮೇಳ ನವೆಂಬರ್ 16 ಮತ್ತು 17 ರಂದು ಎಂ ಆರ್ ಜಿ ಗ್ರೂಪ್ ಪ್ರಯೋಜಕತ್ವದಲ್ಲಿ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಗ್ರಾಮೀಣ ಬಂಟರ ಸಂಘದ ಟ್ರಸ್ಟ್ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಶನಿವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 16 ರಂದು ಬೆಳಿಗ್ಗೆ 9:45 ಕ್ಕೆ ಎಂ ಆರ್ ಜಿ ಗ್ರೂಪ್ ಛೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಉದ್ಘಾಟನೆ ಮಾಡಲಿದ್ದು, ಗಣ್ಯರು, ಸಂಸದರು, ಶಾಸಕಕರು, ಮಾಜಿ ಶಾಸಕರು ಮತ್ತು ಮಂತ್ರಿಗಳು, ವಿವಿಧ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ. ಸಮಾರೋಪ ನ.17 ರಂದು ಬೆಳಿಗ್ಗೆ 11:45 ಕ್ಕೆ ನಡೆಯಲಿದೆ. ಎರಡು ಬಾರಿ ನಡೆದ ಉದ್ಯೋಗ ಮೇಳದಲ್ಲಿ 1,300 ಕ್ಕಿಂತಲೂ ಹೆಚ್ಚು ಅಭ್ಯರ್ಥಿಗಳಿಗೆ ಉತ್ತಮ ಕಂಪನಿಗಳಲ್ಲಿ ಉದ್ಯೋಗ ಸಿಕ್ಕಿದೆ. 30 ಕಂಪನಿಗಳು ಬರಲಿದ್ದು, ಈ ಬಾರಿ 1,200 ರಿಂದ 1,500 ಅಭ್ಯರ್ಥಿಗಳಿಗೆ ಉದ್ಯೋಗ ಸಿಗಬಹುದೆಂಬ ನಿರೀಕ್ಷೆಯಿದೆ. ರಿಜಿಸ್ಟ್ರೇಷನ್ ಉಚಿತವಾಗಿದೆ. ಐಟಿ, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್, ಸಿವಿಲ್ ಮತ್ತು ಇನ್ನಿತರ ಬ್ರಾಂಚ್ ನಲ್ಲಿ ಇಂಜಿನಿಯರಿಂಗ್, ಡಿಪ್ಲೊಮ ಮತ್ತು ಐಟಿಐ ಮಾಡಿದ ಮತ್ತು ಅಂತಿಮ ವರ್ಷದಲ್ಲಿ ಕಲಿಯುತ್ತಿರುವ ಅಭ್ಯರ್ಥಿಗಳಿಗೆ ಇಂಟರ್ವ್ಯೂ ನಲ್ಲಿ ಭಾಗವಹಿಸಲು ಅವಕಾ ಗಳಿವೆ. ಈಗ ರಿಜಿಸ್ಟರ್ ಮಾಡಿದ ಕಂಪನಿ ಗಳ ಪ್ರಕಾರ ಸುಮಾರು 1000 ಹುದ್ದೆಗಳಿಗೆ ಇಂಜಿನಿಯರಿಂಗ್ ಫೀಲ್ಡ್ ನಲ್ಲಿ ಅವಕಾಶಗಳಿವೆ. ಬಿ. ಎ. ಬಿ. ಕಾಮ್, ಬಿ.ಎಸ್ಸಿ, ಬಿ. ಬಿಎಂ, ಬಿ. ಸಿ. ಎ ಮತ್ತು ಇನ್ನಿತರ ಡಿಗ್ರಿ ಮಾಡಿದವರಿಗೆ ಮತ್ತು ಎಂ. ಸಿ. ಎ, ಎಂ. ಬಿ. ಎ, ಎಂ. ಎಸ್ಸಿ, ಮಾಡಿದ ಅಭ್ಯರ್ಥಿಗಳಿಗೆ ಸುಮಾರು 500 ಕ್ಕಿಂತಲೂ ಹೆಚ್ಚು ಹುದ್ದೆ ಗಳಿಗೆ ಅವಕಾಶ ಗಳಿವೆ. ಇಂಟರ್ವ್ಯೂ ಒಳ್ಳೆದು ಮಾಡುವ ಅಭ್ಯರ್ಥಿ ಗಳಿಗೆ ಒಳ್ಳೆಯ ಕಂಪನಿಗಳಲ್ಲಿ ಉದ್ಯೋಗ ಸಿಗುವ ಸದವಕಾಶ ಇದೆ. ಪ್ರತಿಯೊಬ್ಬ ವಿದ್ಯಾರ್ಥಿಗೆ 5 ಕಂಪನಿಗಳಲ್ಲಿ ಇಂಟರ್ವ್ಯೂನಲ್ಲಿ ಭಾಗವಹಿಸಲು ಅವಕಾಶವಿದೆ. ಉಡುಪಿ ಮತ್ತು ದ.ಕ. ಜಿಲ್ಲೆಯ ನಿರುದ್ಯೋಗಿ ಯುವಕರು, ಯುವತಿಯರು ಉದ್ಯೋಗ ಮೇಳದ ಪ್ರಯೋಜನ ಪಡೆಯಲು ಕರೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರೋಗ್ರಾಮ್ ಡೈರೆಕ್ಟರ್ ಪ್ರೊ. ದಿವ್ಯ ರಾಣಿ ಪ್ರದೀಪ್, ಇಂಟರ್ವ್ಯೂ ಸಮಿತಿ ಛೇರ್ಮನ್ ಗುರು ಪ್ರಶಾಂತ್, ವಿಜಿತ್ ಶೆಟ್ಟಿ, ಪದ್ಮನಾಭ ಹೆಗ್ಡೆ, ಎಚ್ ಬಿ ಶೆಟ್ಟಿ, ದಯಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕೆ ಕೆ ಫ್ರೆಂಡ್ಸ್ ಕಡಂಬು ಶಿರ್ವ ವತಿಯಿಂದ ಕಡಂಬು ಮೈದಾನದಲ್ಲಿ ರಾರಾಜಿಸಿದ ಬೃಹತ್ ಗೂಡುದೀಪ
Posted On: 01 Nov 2024, 12:34 PM
ಶಿರ್ವ : ಕೆ ಕೆ ಫ್ರೆಂಡ್ಸ್ ಕಡಂಬು ಶಿರ್ವ ಇದರ ವತಿಯಿಂದ ದೀಪಾವಳಿಯ ಪ್ರಯುಕ್ತ ಬೃಹತ್ ಗಾತ್ರದ ಗೂಡುದೀಪ ಕಡಂಬು ಮೈದಾನದಲ್ಲಿ ಅಳವಡಿಸಿ ದೀಪಾವಳಿ ಆಚರಿಸಲಾಯಿತು. ಸುಮಾರು 9 ಫೀಟ್ ಎತ್ತರ ಮತ್ತು 5 ಫೀಟ್ ಅಗಲವಿದ್ದು, ಜೊತೆಗೆ ಲೈಟಿಂಗ್ಸ್ ನಿಂದ ಗೂಡುದೀಪ ರಾರಾಜಿಸುತ್ತಿದೆ. ಕೆ ಕೆ ಫ್ರೆಂಡ್ಸ್ ಇದರ ಎಲ್ಲಾ ಸದಸ್ಯರು ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
