Updated News From Kaup
ನಾಳೆ (ಸೆ. 3) : ಕಾಪು ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ

Posted On: 02-09-2024 10:09PM
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಜೀರ್ಣೋದ್ದಾರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸೆಪ್ಟೆಂಬರ್ 3ರಂದು ನವದುರ್ಗಾ ಲೇಖನ ಯಜ್ಞ ಮತ್ತು ನವಚಂಡಿಕಾಯಾಗ ಜರಗಲಿದೆ.
ದೇವಸ್ಥಾನದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ ಪಿ ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಇವರ ಉಪಸ್ಥಿತಿಯಲ್ಲಿ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಚಾಲನೆ ನೀಡಲಾಗುವುದು. ಬೆಳಿಗ್ಗೆ 8.30 ಕ್ಕೆ ಅಮ್ಮನ ಸನ್ನಿಧಾನದಲ್ಲಿ ಪ್ರಾರ್ಥನೆ, 8:40 ಕ್ಕೆ ಲೇಖನ ಸಂಕಲ್ಪಕ್ಕೆ ಭಕ್ತಾದಿಗಳನ್ನು ಮಂಗಳ ಗೌರಿ ಮಂಟಪಕ್ಕೆ ಕರೆದೊಯ್ಯುವುದು, 8:50 ಕ್ಕೆ ಲೇಖನ ಸಂಕಲ್ಪದ ಭಕ್ತರು ಆಸೀನರಾಗುವುದು, 9ಕ್ಕೆ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪ ಆರಂಭ, 10.15 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅವದೂತ ವಿನಯ್ ಗುರೂಜಿ, ಗೌರಿಗದ್ದೆ ಉದ್ಘಾಟಿಸಲಿದ್ದಾರೆ. 12 ಗಂಟೆಗೆ ಮಹಾ ಮಂಗಳಾರತಿ, ಮಧ್ಯಾಹ್ನ 1 ಗಂಟೆಗೆ ಪ್ರಸಾದ ಭೋಜನ ವಿತರಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಕಾರ್ಕಳ : ಕ್ರಿಯೇಟಿವ್ ಕಾಲೇಜಿನ ಸಹಕಾರದೊಂದಿಗೆ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ

Posted On: 01-09-2024 10:25PM
ಕಾರ್ಕಳ : ಇಲ್ಲಿನ ಪರಿಸರದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರಾದ ಸುನಿಲ್ ಕುಮಾರ್, ಎಲ್ಲರೂ ಸ್ವಚ್ಛತೆಯನ್ನು ಕಾಪಾಡುವುದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ. ಸ್ವಚ್ಛತೆ ಇರುವ ಕಡೆ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಗಟ್ಟಬಹುದಾಗಿದೆ. ನಮ್ಮ ಮನೆ, ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿದಾಗಲೇ ಸ್ವಚ್ಛ ಭಾರತವಾಗಿ ಮೂಡಿ ಬರಲು ಸಾಧ್ಯ ಎಂದರು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ ಶೆಟ್ಟಿಯವರು ಮಾತನಾಡಿ ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವುದು ನಮ್ಮೆಲ್ಲರ ಕರ್ತವ್ಯ. ಪ್ರಕೃತಿಯನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿಕೊಡಬೇಕಾದರೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಇದು ನಾವು ಅವರಿಗೆ ನೀಡುವ ಉತ್ತಮ ಉಡುಗೊರೆಯಾಗಿದೆ. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎ ಮತ್ತು ಬಿ ಘಟಕದ ಅಧ್ಯಕ್ಷರುಗಳಾದ ಸತೀಶ್ ಪೂಜಾರಿ ಹಾಗೂ ಸುಭಾಷ್, ಸಂಸ್ಥೆಯ ಸಂಸ್ಥಾಪಕರಲ್ಲಿ ಓರ್ವರಾದ ಆದರ್ಶ ಎಂ ಕೆ, ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿಗಳು, ಅರ್ಥಶಾಸ್ತ್ರ ಉಪನ್ಯಾಸಕರಾದ ಉಮೇಶ್, ಬೋಧಕ ಮತ್ತು ಬೋಧಕೇತರ ವೃಂದದವರು, ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್ ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಜೋಡುರಸ್ತೆಯಿಂದ ಹಿರ್ಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಜೂರುವರೆಗೆ, ಮಾವಿನಕಟ್ಟೆಯಿಂದ ಕಾನಂಗಿ ವೆಂಕಟೇಶ್ವರ ದೇವಸ್ಥಾನದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ, ವಾಹನ ಸಂಚಾರಕ್ಕೆ ಅಡಚಣೆಯಾಗುವಂತಿದ್ದ ಗಿಡಗಂಟಿಗಳ ನಿರ್ಮೂಲನೆ ಮಾಡಿ ವಾಹನಗಳ ಸುಲಲಿತ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಶ್ರೀ ನಾರಾಯಣಗುರು ಯುವ ವೇದಿಕೆ ಉಡುಪಿ ವತಿಯಿಂದ ನಾರಾಯಣ ಗುರು ಧ್ವಜಸ್ತಂಭ ಉದ್ಘಾಟನೆ

Posted On: 01-09-2024 10:16PM
ಉದ್ಯಾವರ : ನಾರಾಯಣ ಗುರುಗಳ ತತ್ವ ಸಂದೇಶ ಸಾರುವ ಬ್ರಹ್ಮಶ್ರೀ ನಾರಾಯಣಗುರು ಧ್ವಜಸ್ತಂಭದ ಧ್ವಜಾರೋಹಣ ಕಾರ್ಯಕ್ರಮವನ್ನು ರಾಷ್ಟ್ರೀಯ ಬಿಲ್ಲವ ಮಹಿಳಾ ಮಹಾಮಂಡಲದ ಅಧ್ಯಕ್ಷರಾದ ಗೀತಾಂಜಲಿ ಸುವರ್ಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಶ್ರೀ ನಾರಾಯಣ ಗುರುಗಳ ಆದರ್ಶ, ಸರ್ವ ಧರ್ಮಗಳ ಬಗ್ಗೆ ಅವರ ಕಾಳಜಿ, ಕೆಳ ವರ್ಗದ ಜನರ ಬಗ್ಗೆ ಅವರಿಗಿದ್ದ ದೂರಗಾಮಿ ಆಲೋಚನೆಗಳಿಂದ ಇಂದು ನಮ್ಮಂತ ಹಿಂದುಳಿದ ವರ್ಗ ಗೌರವದಿಂದ ಬಾಳುವಂತೆ ಮಾಡಿದೆ ಎಂದು ತಿಳಿಸಿದರು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ವಾಮನ ಬಂಗೇರ ಮಾತನಾಡಿ, ಶ್ರೀ ನಾರಾಯಣಗುರು ಯುವ ವೇದಿಕೆಯಿಂದ ಹಲವಾರು ವರ್ಷಗಳಿಂದ ನಡೆಯುತ್ತಿರುವ ಸಮಾಜಮುಖಿ ಕೆಲಸ ನಾರಾಯಣ ಗುರುಗಳ ಆಶಯಕ್ಕೆ ಪೂರಕವಾಗಿದೆ ಮತ್ತು ಇದರಿಂದ ನಾರಾಯಣ ಗುರುಗಳ ಸಂದೇಶವನ್ನು ನಾವು ಅನುಸರಿಸಿದಂತೆ ಆಗುತ್ತದೆ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ನಾರಾಯಣಗುರು ಯುವ ವೇದಿಕೆ ಗೌರವಾಧ್ಯಕ್ಷರಾದ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಗಿರೀಶ್ ಕುಮಾರ್ ಉದ್ಯಾವರ, ರಾಘು ಸನಿಲ್, ರಿಯಝ್ ಪಳ್ಳಿ, ದಿವಾಕರ್ ಬೊಳ್ಜೆ, ಸಚಿನ್ ಬೊಳ್ಜೆ, ಸಾಯಿನಾಥ್ ಉದ್ಯಾವರ, ಹರೀಶ್ ಪೂಜಾರಿ ಏಣಗುಡ್ಡೆ, ಸತೀಶ್ ಪೂಜಾರಿ ಬೀರಪ್ಪಾಡಿ, ರೊಯ್ಸ್ ಫೆರ್ನಾಂಡಿಸ್, ಸುಹೈಲ್ ಅಬ್ಬಾಸ್, ದಿನೇಶ್ ಪೂಜರಿ, ಸುಪ್ರೀತ್ ಸುವರ್ಣ, ಕಿಶೋರ್ ಕುಮಾರ್, ಗುಣಕರ್ ಸನಿಲ್, ಪ್ರಕಾಶ್ ಬಂಗೇರ, ಜಯ ಪೂಜಾರಿ, ಹರೀಶ್, ಕೇಶವ ಸನಿಲ್ ಮುಂತಾದವರು ಉಪಸ್ಥಿತರಿದ್ದರು.
ಬಂಟಕಲ್ಲು : ಬದುಕಿನಲ್ಲಿ ದುರಾಸೆಗೆ ಒಳಗಾಗದೆ ಇದ್ದುದರಲ್ಲೇ ತೃಪ್ತಿವಂತರಾಗುವ - ಜಸ್ಟಿಸ್ ಸಂತೋಷ್ ಹೆಗ್ಡೆ

Posted On: 01-09-2024 10:09PM
ಬಂಟಕಲ್ಲು : ಕಲಿಕೆಗೆ ಕೊನೆಯಿಲ್ಲ. ಜನನದಿಂದ ಮರಣದವರೆಗೆ ಕಲಿಕೆ ನಿರಂತರ. ಬದುಕಿನಲ್ಲಿ ದುರಾಸೆಗೆ ಒಳಗಾಗದೆ ಇದ್ದುದರಲ್ಲೇ ತೃಪ್ತಿವಂತರಾಗುವ. ಮಾನವರಾಗಿ ಮಾನವೀಯ ಗುಣ ನಮ್ಮಲ್ಲಿರಬೇಕು ಎಂದು ಸವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯ ಮೂರ್ತಿ, ಮಾಜಿ ಲೋಕಾಯುಕ್ತ ಜಸ್ಟಿಸ್ ಸಂತೋಷ್ ಹೆಗ್ಡೆ ಹೇಳಿದರು. ಅವರು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 2024-25ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ ಭಾನುವಾರ ವಿದ್ಯಾಲಯದ ಆವರಣದಲ್ಲಿ ನಡೆದ ಮಾರ್ಗದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ದೇಶದಲ್ಲಿ ವಿವಿಧ ಹಗರಣಗಳು ನಡೆದಿದ್ದು, ಭೃಷ್ಟಾಚಾರ ಸಮಾಜಲ್ಲಿ ಬೇರೂರಿದೆ. ಅದನ್ನು ಬುಡ ಸಮೇತ ಕೀಳಬೇಕಾಗಿದೆ. ಭೃಷ್ಟಾಚಾರದ ನಿರ್ಮೂಲನೆಗೆ ವಿದ್ಯಾರ್ಥಿಗಳು ಸಹಿತ ನಾಗರಿಕರು ಚಿಂತಿಸಬೇಕಾಗಿದೆ. ಕರ್ನಾಟಕ ಲೋಕಾಯುಕ್ತಕ್ಕೆ ಬಂದ ನಂತರ ಬಹಳಷ್ಟು ಅನ್ಯಾಯ, ಅಕ್ರಮಗಳನ್ನು ಕಂಡಿದ್ದೇನೆ. ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಿ ಎಂದರು. ಈ ಸಂದರ್ಭ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್ ಮಾತನಾಡಿ, 14 ವರ್ಷಗಳಿಂದ ಸಂಸ್ಥೆಯು ಉತ್ತಮ ಬೆಳವಣಿಗೆಯನ್ನು ಕಾಣಲು ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಅವಿರತ ಶ್ರಮವಾಗಿದೆ. ನಮ್ಮ ಸಂಸ್ಥೆಯನ್ನು ಅಟೊನೊಮಸ್ ಆಗಿ ಮಾಡುವುದು ನಮ್ಮ ಮುಂದಿನ ಯೋಜನೆಯಾಗಿದೆ ಎಂದರು. ಈ ಸಂದರ್ಭ ಸಂಸ್ಥೆಯ ವಿದ್ಯಾರ್ಥಿ ಅದ್ವೈತ್ ಆಚಾರ್ಯ ತಾನು ಬಿಡಿಸಿದ ಜಸ್ಟಿಸ್ ಸಂತೋಷ್ ಹೆಗ್ಡೆಯವರ ಚಿತ್ರವನ್ನು ಅವರಿಗೆ ಉಡುಗೊರೆಯಾಗಿ ನೀಡಿದನು. ಈ ಸಂದರ್ಭದಲ್ಲಿ ಪೋಷಕರು ಸಂಸ್ಥೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಬೆಳ್ಮಣ್, ಸಂಸ್ಥೆಯ ಉಪ ಪ್ರಾಂಶುಪಾಲ ಡಾ. ಗಣೇಶ್ ಐತಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಅಭಿಷೇಕ್ ಕಿಣಿ ಪ್ರಾರ್ಥಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ರವರು ಅತಿಥಿಗಳನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳನ್ನು ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಲೊಲಿಟ ಪ್ರಿಯ ಕ್ಯಾಸ್ತಲಿನೊ ಪರಿಚಯಿಸಿದರು. ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೀತಿ ಮತ್ತು ಸಚಿನ್ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಡಾ. ದೀಪಿಕಾ ಬಿ ವಿ ವಂದಿಸಿದರು.
ಚೆನ್ನೈಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತರಾದ ಕಾಪುವಿನ ಮೊಹಮ್ಮದ್ ಫಾರೂಕ್ ಚಂದ್ರನಗರ

Posted On: 01-09-2024 08:26PM
ಕಾಪು : ಸಮಾಜ ಸೇವೆಯನ್ನು ಪರಿಗಣಿಸಿ ಕಾಪುವಿನ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಭಾನುವಾರ ಚೆನ್ನೈ ನ ಭಾರತೀಯ ವಿದ್ಯಾ ಕೇಂದ್ರ ಭವನದಲ್ಲಿ ಪೀಪಲ್ ಫೋರಂ ಆಫ್ ಇಂಡಿಯಾ ಭಾರತ್ ಸೇವಕ್ ಸಮಾಜ್ ಸಂಘಟಿಸಿದ ಕಾರ್ಯಕ್ರಮದಲ್ಲಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯ ಚೆನ್ನೈ ಘಟಕದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ ಸ್ಥಾಪಕರು ಹಾಗೂ ಕುಲಪತಿಗಳಾದ ಡಾ. ಪಿ. ಮ್ಯಾನುವಲ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ ಉಪಕುಲಪತಿಗಳು ಹಾಗೂ ತಮಿಳುನಾಡಿನ ನಿವೃತ್ತ ನ್ಯಾಯಾಧೀಶರಾದ ಡಾ. ಕೆ ವೆಂಕಟೇಶನ್, ತಮಿಳುನಾಡಿನ ನಿವೃತ್ತ ಸ್ಪೆಷಲ್ ಕಮಿಷನರ್ ಹಾಗೂ ಪ್ರಿನ್ಸಿಪಲ್ ಸೆಕ್ರೆಟರಿ ಕೆ ಸಂಪತ್ ಕುಮಾರ್, ವರ್ಲ್ಡ್ ಫೀಸ್ ಇನ್ಸ್ಟಿಟ್ಯೂಟ್ ಯುನೈಟೆಡ್ ನೇಶನ್ ಸ್ಥಾಪಕ ಡಾ. ಪರ್ವಿಂದರ್ ಸಿಂಗ್, ಅಪೋಲೋ ಪ್ಯಾರ ಮೆಡಿಕಲ್ ಮತ್ತು ನರ್ಸಿಂಗ್ ಕೌನ್ಸಿಲ್ ನಿರ್ದೇಶಕಿ ಪ್ರೊ. ಡಾ. ಎಂ. ರಜಿನಿ, ಚೆನ್ನೈನ ನಿವೃತ್ತ ಅಸಿಸ್ಟೆಂಟ್ ಕಮಿಷನರ್ ಡಾ. ಕೆ. ರಾಜಾರಾಮ್, ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಡಾ. ವಿಪಿನ್ ಗೌರ್, ಜಿಎಚ್ಪಿಯು ತಮಿಳುನಾಡು ಮತ್ತು ಪಾಂಡಿಚೆರಿ ಉಪ ನಿರ್ದೇಶಕ ಡಾ.ಕೆ.ವಲರ್ಮತಿ, ಪುದುಚೇರಿ ನಿವೃತ್ತ ಎಸ್ಪಿ ಡಾ. ಎನ್. ರಾಮಚಂದ್ರನ್, ಜಿಎಚ್ಪಿಯು ಎಸ್ ಎಸ್ ಮೀಡಿಯಾ ಅಂಡ್ ಪ್ರೊಡಕ್ಷನ್ ಕೊಲ್ಕತ್ತಾ ರಿಜನ್ ಉಪ ನಿರ್ದೇಶಕ ಸುಭಾಸಿಶ್ ಸಹ, ಜಿಎಚ್ಪಿಯು ಕರ್ನಾಟಕ ಉಪ ನಿರ್ದೇಶಕ ಡಾ. ಎಂ. ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.
ಸೈಂಟ್ ಜೋನ್ಸ್ ಅಕಾಡೆಮಿ ಶಂಕರಪುರ : ಉಡುಪಿ ವಲಯ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಕೂಟ ಸಂಪನ್ನ

Posted On: 01-09-2024 07:30PM
ಶಿರ್ವ : ಸೈಂಟ್ ಜೋನ್ಸ್ ಅಕಾಡೆಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಶಂಕರಪುರದಲ್ಲಿ ಉಡುಪಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಹ್ಯಾಂಡ್ಬಾಲ್ ಪಂದ್ಯಾಕೂಟವನ್ನು ಆಯೋಜಿಸಲಾಯಿತು.

ಈ ಪಂದ್ಯಾಕೂಟದಲ್ಲಿ ಶಾಲಾ ಸಂಚಾಲಕರಾದ ರೆ| ಫಾ| ಡಾ| ಪ್ರಕಾಶ್ ಅನಿಲ್ ಕ್ಯಾಸ್ತೆಲಿನೊ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ರೆನ್ ಟ್ರೆವರ್ ಡಾಯಸ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಚಂದ್ರಶೇಖರ್ ಸುವರ್ಣ, ಸೈಂಟ್ ಜಾನ್ ಎವಾಂಜೆಲಿಸ್ಟ್ ಚರ್ಚಿನ ಸಹಾಯಕ ಧರ್ಮಗುರುಗಳು ಹಾಗೂ ಚರ್ಚ್ ಪಾಲನಾ ಮಂಡಳಿಯ ಪದಾಧಿಕಾರಿಗಳು, ರಕ್ಷಕ ಶಿಕ್ಷಕ ಸಂಘ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಸರಿತಾ ಮೆಲ್ವಿಟಾ ಡಿಸೋಜರವರು ಉಪಸ್ಥಿತರಿದ್ದರು.
ಒಟ್ಟು 15 ತಂಡಗಳು ಈ ಪಂದ್ಯಾಕೂಟದಲ್ಲಿ ಭಾಗವಹಿಸಿದ್ದವು.
ವಿಶ್ವ ಹಿಂದೂ ಪರಿಷತ್ ಮೂಡುಬೆಳ್ಳೆ : ವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ, ಸ್ಥಾಪನಾ ದಿನಾಚರಣೆ

Posted On: 01-09-2024 07:16PM
ಕಾಪು : ವಿಶ್ವ ಹಿಂದೂ ಪರಿಷತ್ ಮೂಡುಬೆಳ್ಳೆ ಘಟಕದ ವತಿಯಿಂದ ವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ ಹಾಗೂ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಭಾನುವಾರ ನೆಲ್ಲಿಕಟ್ಟೆಯಲ್ಲಿ ನೆರವೇರಿತು.

ವಿಶ್ವ ಹಿಂದೂ ಪರಿಷತ್ ವತಿಯಿಂದ ಪೋಸ್ಟ್ ಮ್ಯಾನ್ ರಮೇಶ್ ನಾಯ್ಕ್ ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನೆಲ್ಲಿಕಟ್ಟೆಯಲ್ಲಿ ರಾಮ ಜಾನಕಿ ಕಟ್ಟೆಯನ್ನು ನಿರ್ಮಿಸುವುದಾಗಿ ನಿರ್ಣಯಿಸಲಾಯಿತು.
ಜಿಲ್ಲಾ ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ಪ್ರಮುಖ್ ಪೂರ್ಣಿಮಾ ಸುರೇಶ್, ವಿಹಿಂಪ ಕಾಪು ತಾಲೂಕು ಕಾರ್ಯದರ್ಶಿ ರಾಜೇಂದ್ರ ಶೆಣೈ, ಕಾಪು ತಾಲೂಕು ಬಜರಂಗದಳ ಸಂಚಾಲಕ್ ಆನಂದ್ ಶಿರ್ವ, ತಾಲೂಕು ಸಾಪ್ತಾಹಿಕ ಮಿಲನ್ ನೀರಜ್ ಪೂಜಾರಿ, ಕಾಪು ತಾಲೂಕು ಮಾತೃಶಕ್ತಿ ಪ್ರಮುಖ್ ವಾಣಿ ಆಚಾರ್ಯ, ಬೆಳ್ಳೆ ಘಟಕದ ಮಾತೃಶಕ್ತಿ ಪ್ರಮುಖ್ ಅಶಾಶೆಟ್ಟಿ , ಕಾರ್ಯದರ್ಶಿ ಅಭಿಷೇಕ್ ಆಚಾರ್ಯ, ಸಂಚಾಲಕ್ ಮಿಥುನ್ ಪೂಜರಿ, ಗೋರಕ್ಷ ಪ್ರಮುಖ್ ಪವನ್ ಆಚಾರ್ಯ, ಗೌರವ ಸಲಹೆಗಾರರಾದ ನಾಗರಾಜ್ ಭಟ್ ಹಾಗೂ ಸಂಘಟನಾ ಪ್ರಮುಖರಾದ ದೀಪಕ್ ಮೂಡುಬೆಳ್ಳೆ ಮತ್ತಿತರರು ಉಪಸ್ಥಿತರಿದ್ದರು.
ಸೆಪ್ಟೆಂಬರ್ 3 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞ - ಸಂಕಲ್ಪ ಸ್ವೀಕಾರ

Posted On: 01-09-2024 07:02PM
ಕಾಪು : ಹೊಸ ಮಾರಿಗುಡಿಯ ಜೀರ್ಣೋದ್ಧಾರ, ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಮಾರಿಯಮ್ಮ ದೇವಿಯ ಭಕ್ತರನ್ನು ಸೇರಿಸಿಕೊಂಡು ನವದುರ್ಗಾ ಲೇಖನ ಯಜ್ಞವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 3 ರಂದು ಬೆಳಿಗ್ಗೆ ಮಂಗಳ ಗೌರಿ ಪೂಜೆಯೊಂದಿಗೆ ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ ಸ್ವೀಕಾರ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಹೇಳಿದರು. ಅವರು ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ವಿಶ್ವ ವ್ಯಾಪಿಯಾಗಿ ನೆಲೆಸಿರುವ ಭಕ್ತರ ಆರಾಧನಾ ಕ್ಷೇತ್ರವಾಗಿದೆ ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರ ಶ್ರದ್ದಾ ಕೇಂದ್ರವಾಗಿರುವ ಅತ್ಯಂತ ಪವಾಡ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿಯ ಮಾರಿಯಮ್ಮನ ಸನ್ನಿಧಿಯಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದ ಪ್ರಥಮ ಹಂತದ ಜೀರ್ಣೋದ್ದಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಮುಂದಿನ ಮಾರ್ಚ್ ತಿಂಗಳಲ್ಲಿ ನಡೆಯುವ ಜೀರ್ಣೋದ್ದಾರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನವದುರ್ಗಾ ಲೇಖನ ಯಜ್ಞ ನಡೆಯಲಿದೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ನವದುರ್ಗಾ ಲೇಖನ ಯಜ್ಞ ಮತ್ತು ನವಚಂಡಿಯಾಗವನ್ನು ಕೈಗೊಳ್ಳಲಾಗಿದ್ದು ಇದಕ್ಕಾಗಿ ಪ್ರತ್ಯೇಕ ಸಮಿತಿಯನ್ನು ರಚನೆ ಮಾಡಲಾಗಿದೆ ಈ ಸಮಿತಿಯ ಮುಖಾಂತರ ನವದುರ್ಗಾ ಲೇಖನ ಯಜ್ಞದಲ್ಲಿ ಸಂಕಲ್ಪ ಪೂರ್ವಕವಾಗಿ ಭಾಗಿಯಾಗಿ ಅಮ್ಮನ ಅನುಗ್ರಹವನ್ನು ಪಡೆಯಲು ಭಕ್ತಾದಿಗಳಿಗೆ ಅವಕಾಶವನ್ನು ಒದಗಿಸಿಕೊಡಲಾಗುತ್ತಿದೆ. ದೇವಸ್ಥಾನದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ ಪಿ ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಇವರ ಉಪಸ್ಥಿತಿಯಲ್ಲಿ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಚಾಲನೆ ನೀಡಲಾಗುವುದು. ಬೆಳಿಗ್ಗೆ 8.30 ಕ್ಕೆ ಅಮ್ಮನ ಸನ್ನಿಧಾನದಲ್ಲಿ ಪ್ರಾರ್ಥನೆ, 8:40 ಕ್ಕೆ ಲೇಖನ ಸಂಕಲ್ಪಕ್ಕೆ ಭಕ್ತಾದಿಗಳನ್ನು ಮಂಗಳ ಗೌರಿ ಮಂಟಪಕ್ಕೆ ಕರೆದೊಯ್ಯುವುದು, 8:50 ಕ್ಕೆ ಲೇಖನ ಸಂಕಲ್ಪದ ಭಕ್ತರು ಆಸೀನರಾಗುವುದು, 9ಕ್ಕೆ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪ ಆರಂಭ, 10.15 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, 12 ಗಂಟೆಗೆ ಮಹಾ ಮಂಗಳಾರತಿ, ಮಧ್ಯಾಹ್ನ 1:00 ಗೆ ಪ್ರಸಾದ ಭೋಜನ ವಿತರಣೆ ನಡೆಯಲಿದೆ.
ನವದುರ್ಗಾ ಲೇಖನ ಯಜ್ಞದ ಪುಸ್ತಕ ಪಡೆಯಲು ನೋಂದಾವಣೆ ಮಾಡಿ, ಸಂಕಲ್ಪ ಸ್ವೀಕರಿಸುವ ಭಕ್ತರು ರೂ. 199 ನೀಡಿ, ಹೆಸರು ನೋಂದಾಯಿಸಿದ ಬಳಿಕ ಮಂಗಳಗೌರಿ ಪೂಜೆಯಲ್ಲಿ ಪಾಲ್ಗೊಂಡು, ನವದುರ್ಗಾ ಲೇಖನ ಯಜ್ಞದ ಸಂಕಲ್ಪ ಸ್ವೀಕರಿಸಲು ಅವಕಾಶ ಮಾಡಿಕೊಡಲಾಗುವುದು. ಮುಂದಿನ ಅಕ್ಟೋಬರ್ 28 ರ ವರೆಗೆ ನೊಂದಾವಣೆಗೆ ಅವಕಾಶವಿದ್ದು ಅಕ್ಟೋಬರ್ 29 ರಂದು ಶ್ರೀ ವಾಗೀಶ್ವರಿ ಪೂಜೆಯೊಂದಿಗೆ ನವದುರ್ಗಾ ಲೇಖನ ಯಜ್ಞದ ಪುಸ್ತಕ ಬಿಡುಗಡೆಗೊಳಿಸಲಾಗುವುದು. ಅಕ್ಟೋಬರ್ 29 ರ ನಂತರ 45 ದಿನಗಳವರೆಗೆ ರಶೀದಿ ಮಾಡಿ ಲೇಖನ ಯಜ್ಞದ ಪುಸ್ತಕವನ್ನು ಪಡೆಯಲು ಅವಕಾಶವಿದೆ ಎಂದರು.
ಈ ಸಂದರ್ಭ ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ರಘುಪತಿ ಭಟ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ಯೋಗೀಶ್ ವಿ ಶೆಟ್ಟಿ ಬಾಲಾಜಿ, ನವದುರ್ಗಾ ಲೇಖನ ಯಜ್ಞ ಸಮಿತಿ ಮುಂಬೈಯ ಹರೀಶ್ ಶೆಟ್ಟಿ ಎರ್ಮಾಳು, ಚಂದ್ರಹಾಸ ಶೆಟ್ಟಿ ಮುಂಬೈ ಉಪಸ್ಥಿತರಿದ್ದರು
ಕಾಪು : ಕಳತ್ತೂರು ಪಿ.ಕೆ.ಎಸ್ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ; ಸನ್ಮಾನ

Posted On: 30-08-2024 06:49AM
ಕಾಪು : ತಾಲೂಕಿನ ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಪೇದೆಗೆ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು.

ಸನ್ಮಾನ / ಪುರಸ್ಕಾರ : 33 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಂಸ್ಥೆಯ ಪೇದೆ ನಾರಾಯಣರವರಿಗೆ ಸನ್ಮಾನ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಿಧ್ಯಾವರ್ಧಕ ಸಂಘದ ಸಂಚಾಲಕರಾದ ಶಿವರಾಮ ಶೆಟ್ಟಿ, ವಿಧ್ಯಾವರ್ಧಕ ಸಂಘ ಪಿ.ಕೆ.ಎಸ್ ಪ್ರೌಢಶಾಲೆ ಅಧ್ಯಕ್ಷರಾದ ನಿತ್ಯಾನಂದ ಆರ್ ಶೆಟ್ಟಿ, ವಿಧ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಗುರ್ಮೆ, ಸದಸ್ಯರಾದ ವೇಣುಗೋಪಾಲ ಎಂ, ಲವ ಶೆಟ್ಟಿ, ಗೋಪಾಲಕೃಷ್ಣ ಭಟ್, ಯೋಗೀಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಶೆಟ್ಟಿ ಪೈಯಾರು, ಮುಖ್ಯ ಶಿಕ್ಷಕರಾದ ಗಂಗಾ ನಾಯ್ಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಶಂಕರಪುರ ವತಿಯಿಂದ ನ್ಯಾಪ್ಕಿನ್ ಬರ್ನಿಂಗ್ ಮೆಷಿನ್ ಕೊಡುಗೆ

Posted On: 29-08-2024 05:54PM
ಕಾಪು : ರೋಟರಿ ಕ್ಲಬ್ ಶಂಕರಪುರದ ಪ್ರಾಯೋಜಕತ್ವದಲ್ಲಿ ಇನ್ನಂಜೆಯ ಎಸ್ ವಿ ಎಚ್ ಇಂಗ್ಲಿಷ್ ಮೀಡಿಯಂ ಶಾಲೆಗೆ ನ್ಯಾಪ್ಕಿನ್ ಬರ್ನಿಂಗ್ ಮೆಷಿನ್ ಕೊಡುಗೆ ನೀಡಲಾಯಿತು.
ವಲಯ 5 ರ ಮಾಜಿ ಸಹಾಯಕ ಗವರ್ನರ್ ರೋ. ನವೀನ್ ಅಮೀನ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋ. ಮಾಲಿನಿ ಶೆಟ್ಟಿ ವಹಿಸಿದ್ದರು.
ವಲಯ 5 ರ ಸಹಾಯಕ ಗವರ್ನರ್ ರೋ. ಅನಿಲ್ ಡೆಸಾ, ಇನ್ನಂಜೆ ಎಸ್ ವಿ ಎಚ್ ಸಂಸ್ಥೆಗಳ ಆಡಳಿತಾಧಿಕಾರಿ ಮಂಜುಳಾ ನಾಯಕ್, ಪ್ರಾಂಶುಪಾಲರುಗಳಾದ ಮಮತಾ ಅಂಚನ್ ಮತ್ತು ಸುಷ್ಮಾ, ರೋಟರಿ ಕ್ಲಬ್ ಶಂಕರಪುರದ ಸದಸ್ಯರು, ರೋಟರಿ ಸಮುದಾಯದಳದ ಕಾರ್ಯದರ್ಶಿ ಆರ್ ಸಿ ಸಿ ವಜ್ರೇಶ್ ಆಚಾರ್ಯ ಮತ್ತು ಸದಸ್ಯರು, ಶಾಲಾ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.