Updated News From Kaup

ಹಾಜಿ ಕೆ. ಉಮ್ಮರಬ್ಬ ಚಂದ್ರನಗರ ಇವರಿಗೆ ನುಡಿ ನಮನ

Posted On: 19-09-2024 10:36PM

ಕಾಪು : ಚಂದ್ರನಗರ ಕಳತ್ತೂರಿನಲ್ಲಿ ಸುಮಾರು 35 ವರ್ಷಗಳಿಂದ ಜನರಲ್ ಸ್ಟೋರ್ ನಡೆಸುತ್ತಿದ್ದ ಸರಳ ಸಜ್ಜನ ವ್ಯಕ್ತಿ ಸಾಮಾಜಿಕ ಧಾರ್ಮಿಕ ಮುಖಂಡ ಬಟರ್ ಫ್ಲೈ ಗೆಸ್ಟ್ ಹೌಸ್ ನ ನಿರ್ದೇಶಕ ಹಾಜಿ ಕೆ. ಉಮ್ಮರಬ್ಬ ಇತ್ತೀಚಿಗೆ ನಿಧನರಾಗಿದ್ದು, ಆವರ ನುಡಿ ನಮನ ಕಾರ್ಯಕ್ರಮವು ಕಳತ್ತೂರು ಚಂದ್ರನಗರದ ಲೋಕೇಶ್ ಭಟ್ ಹಾಗೂ ದಿನೇಶ್ ಆಚಾರ್ಯ ಐಶ್ವರ್ಯ ಇವರ ನೇತೃತ್ವದಲ್ಲಿ ನುಡಿನಮನ ಕಾರ್ಯಕ್ರಮವು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಇವರ ಅಧ್ಯಕ್ಷತೆಯಲ್ಲಿ ಕುಶಲ ಶೇಖರ್ ಶೆಟ್ಟಿ ಇಂಟರ್ ನ್ಯಾಷನಲ್ ಅಡಿಟೋರಿಯಮ್ ನಲ್ಲಿ ನಡೆಯಿತು.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಶಿಕ್ಷಕರ ದಿನಾಚರಣೆ

Posted On: 19-09-2024 09:46PM

ಕಟಪಾಡಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಉದ್ಯಾವರದ ಸರಕಾರಿ ಪ್ರೌಢಶಾಲೆ, ಪ್ರಾಥಮಿಕ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ನಡೆಸಲಾಯಿತು.

ಕುಂದಾಪುರ : ಸರಕಾರಿ ಜಮೀನನ್ನು ಕೃಷಿ ಭೂಮಿ ಎಂದು ಅಕ್ರಮವಾಗಿ ಮಹಿಳೆಯೋರ್ವರಿಗೆ ಮಂಜೂರಾತಿ ; ದೂರು ದಾಖಲು

Posted On: 19-09-2024 08:47PM

ಕುಂದಾಪುರ : ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗ, ರಾಜಸ್ವ ನಿರೀಕ್ಷರು ಮತ್ತು ತಹಸೀಲ್ದಾ‌ರ್ ಸರಕಾರಿ ಜಮೀನನ್ನು ಕೃಷಿ ಭೂಮಿ ಎಂದು ಪರಿಶೀಲಿಸಿ ಅಕ್ರಮವಾಗಿ ಮಹಿಳೆಯೋರ್ವರಿಗೆ ಮಂಜೂರಾತಿ ಮಾಡಿದ ಕುರಿತು ಪತ್ರಕರ್ತ ಕಿರಣ್ ಪೂಜಾರಿ ಜಿಲ್ಲಾಧಿಕಾರಿ ಸಹಿತ ಸಂಬಂಧಿತ ಇಲಾಖೆಗಳಿಗೆ ದೂರನ್ನು ನೀಡಿದ್ದಾರೆ.

ಗ್ರಾಹಕರ ಗಮನಕ್ಕೆ - ಮಹಾಲಕ್ಷ್ಮಿ ಗಾರ್ಮೆಂಟ್ಸ್ ಪಾಂಗಾಳದಿಂದ ಕಾಪುವಿಗೆ ಸ್ಥಳಾಂತರ

Posted On: 17-09-2024 10:25PM

ಜನರ ಅಚ್ಚುಮೆಚ್ಚಿನ ಮಹಾಲಕ್ಷ್ಮಿ ಗಾರ್ಮೆಂಟ್ಸ್ ಪಾಂಗಾಳ ಮಳಿಗೆಯು ಇನ್ನು ಮುಂದೆ ಕಾಪು ಪೇಟೆಯ ಸುಪ್ರೀಮ್ ಮೆಡಿಕಲ್ ನ ಹತ್ತಿರ ಮುಖ್ಯ ರಸ್ತೆ ಕಾಪು ಇಲ್ಲಿಗೆ ಸ್ಥಳಾಂತರಗೊಂಡಿದೆ. ಗ್ರಾಹಕರು ನಮ್ಮೊಂದಿಗೆ ಸಹಕರಿಸಬೇಕಾಗಿ ವಿನಂತಿ.

ಕಾಪು ಮಾರಿಯಮ್ಮ, ಉಚ್ಚಂಗಿ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ : ನವದುರ್ಗಾ ಲೇಖನ ಯಜ್ಞ - ಗ್ರಾಮ ಸಮಿತಿ, ವಾರ್ಡ್ ಸಮಿತಿಗಳ ಸಭೆ

Posted On: 16-09-2024 07:49PM

ಕಾಪು : ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಮತ್ತು ಪುರಸಭಾ ವ್ಯಾಪ್ತಿಯ ಪ್ರತಿಯೊಂದು ವಾರ್ಡ್ಗಳಲ್ಲಿ ಸಮಿತಿ ರಚಿಸಲಾಗಿದ್ದು ಈ ಎಲ್ಲಾ ಸಮಿತಿಯ ಮುಖ್ಯ ಸಂಚಾಲಕರು ಹಾಗೂ ಸಂಚಾಲಕರುಗಳಿಗೆ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಭಾನುವಾರ ಕರೆದ ಸಭೆಯಲ್ಲಿ ಸುಮಾರು 300ಕ್ಕೂ ಅಧಿಕ ಮಂದಿ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಹೆಜಮಾಡಿ, ಪಡುಬಿದ್ರಿ, ಎರ್ಮಾಳಿನಲ್ಲಿ ಈದ್ ಮಿಲಾದ್ ಸಂಭ್ರಮ

Posted On: 16-09-2024 07:33PM

ಪಡುಬಿದ್ರಿ : ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನಾಚರಣೆಯು ಕಾಪು ತಾಲ್ಲೂಕಿನ ಪಡುಬಿದ್ರಿ, ಹೆಜಮಾಡಿ, ಎರ್ಮಾಳಿನಲ್ಲಿ ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ : 71ನೇ ವಾರ್ಷಿಕ ಮಹಾಸಭೆ

Posted On: 16-09-2024 05:36PM

ಎರ್ಮಾಳು : ವಿದ್ಯಾಭ್ಯಾಸ, ಆರ್ಥಿಕತೆ, ರಾಜಕೀಯದ ಕೊರತೆಯಿದ್ದ ಸಂದರ್ಭದಲ್ಲಿಯೂ ಮೀನುಗಾರ ಸಮಾಜದ ಹಿರಿಯರ ಚಿಂತನೆಯಿಂದ ಭವಿಷ್ಯದ ಹಿತದೃಷ್ಟಿಯಿಂದ ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಸ್ಥಾಪನೆಯಾಗಿದೆ. ಸೊಸೈಟಿಯ ಬೆಳವಣಿಗೆಗೆ ಗ್ರಾಹಕರು, ಷೇರುದಾರರು, ನಿರ್ದೇಶಕರ ಸಹಕಾರ ಮೂಲ ಕಾರಣ. ಉಚ್ಚಿಲ ಶಾಖೆಯಲ್ಲಿ 4 ಲಕ್ಷ ಲಾಭಾಂಶ ಆಗಿದ್ದು, 4 ಕೋಟಿಯ ವ್ಯವಹಾರವಾಗಿದೆ. ಶೇ.12 ಡಿವಿಡೆಂಡ್ ನೀಡಲಾಗುವುದು ಎಂದು ಸೊಸೈಟಿಯ ಅಧ್ಯಕ್ಷರಾದ ದಿನೇಶ್ ಎರ್ಮಾಳು ಹೇಳಿದರು. ಅವರು ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಇದರ 2023-24 ನೇ ಸಾಲಿನ 71ನೇ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾಂತಾವರ : ಬೇಲಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜೀಣೋದ್ಧಾರ ಬ್ರಹ್ಮಕಲಶ ನಡೆಸುವ ಬಗ್ಗೆ ಪೂರ್ವಭಾವಿ ಸಭೆ

Posted On: 16-09-2024 03:43PM

ಕಾಂತಾವರ : ಗ್ರಾಮದ ಬೇಲಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮ ಬೈದರ್ಕೆಳ ಯುವ ಸೇವಾ ಸಮಿತಿಯಿಂದ ಪಂಚಕಜ್ಜಾಯ ಸೇವೆ ಮತ್ತು ಜೀಣೋದ್ಧಾರ ಬ್ರಹ್ಮಕಲಶ ನಡೆಸುವುದರ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು : ವಾರ್ಷಿಕ ಮಹಾಸಭೆ

Posted On: 16-09-2024 03:32PM

ಕಾಪು : ಪರಿಸರದ ಜನಪ್ರಿಯ ಆರ್ಥಿಕ ಸಂಸ್ಥೆ ಅಕ್ಷಯಧಾರ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ 2023–24ನೇ ಸಾಲಿನ ವಾರ್ಷಿಕ ಮಹಾಸಭೆ ಕಾಪು ಭಾಸ್ಕರ ಸೌಧದಲ್ಲಿ ಜರಗಿತು. ಸೊಸೈಟಿಯ ಅಧ್ಯಕ್ಷ ಲವ ಕರ್ಕೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಆರ್ಥಿಕ ಸಂಸ್ಥೆ ಮಧ್ಯಮ ವರ್ಗದ, ಸಣ್ಣ ಉದ್ದಿಮೆದಾರರ ಅಗತ್ಯತೆಗಳಿಗೆ ಸ್ಪಂದಿಸಿ, ಅವರ ಬೆಳವಣಿಗೆಗೆ ಪೂರಕವಾಗಿ ಸೇವೆ ಸಲ್ಲಿಸುತ್ತಿದೆ. ಸೊಸೈಟಿಯು ಗ್ರಾಹಕರಿಗೆ ಗುಣಮಟ್ಟದ ಸೇವೆ, ಸೌಲಭ್ಯ ನೀಡುತ್ತಿದ್ದು, ನಮ್ಮ ಸಂಸ್ಥೆಯ ಬೆಳವಣಿಗೆಗೆ ಸಹಕರಿಸಿ ಎಂದರು. ಶೇರುದಾರರಿಗೆ, ಠೇವಣಿದಾರರಿಗೆ ಹಾಗೂ ವಿವಿಧ ಖಾತೆಗಳನ್ನು ತೆರೆದು ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಿದ ಎಲ್ಲಾ ಗ್ರಾಹಕರಿಗೂ ಅಭಿನಂದನೆ ಸಲ್ಲಿಸಿದರು.

ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಇಂಜಿನಿಯಸ್೯ ದಿನಾಚರಣೆ ; ಸನ್ಮಾನ

Posted On: 16-09-2024 03:21PM

ಉಚ್ಚಿಲ : ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಇಂಜಿನಿಯಸ್೯ ದಿನಾಚರಣೆ ಆಚರಿಸಲಾಯಿತು.