Updated News From Kaup

ಕಾಪು ‌: ಶ್ರೀ ರಾಮ ಅನುದಾನಿತ ಹಿ. ಪ್ರಾ. ಶಾಲೆ, ಮಜೂರು - ಕರಂದಾಡಿ - ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ

Thumbnail
Posted On: 14 Jan 2026, 06:54 AM

ಕಾಪು : ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮಜೂರು - ಕರಂದಾಡಿ ಇದರ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ನೆರವೇರಿತು. 

ಕಾರ್ಯಕ್ರಮವನ್ನು  ಉದ್ಯಮಿ ಸಂತೋಷ್ ಶೆಟ್ಟಿ ಪಡುಬಿದ್ರಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮಜೂರು ಮಲ್ಲಾರು ಬದ್ರಿಯಾ ಜುಮ್ಮಾ ಮಸೀದಿಯ ಗುರುಗಳಾದ ಅಬ್ದುರ್ ರಶೀದ್ ಸಖಾಫಿ,ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಕಾಪು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಮಾಜಿ ಜಿಲ್ಲಾಧ್ಯಕ್ಷ  ಪದ್ಮಪ್ರಸಾದ್ ಜೈನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದಿನ್ ಶೇಖ್ ಕರಂದಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕರಂದಾಡಿ  ಪದ್ಮನಾಭ ಶಾನುಭಾಗ್, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪಿ ರವಿರಾಜ್ ಶೆಟ್ಟಿ ಪಂಜಿತ್ತೂರುಗುತ್ತು, ಶಾಲಾ ಮುಖ್ಯ ಶಿಕ್ಷಕ ಆರ್ ಎಸ್ ಕಲ್ಲೂರ, ಹಳೇ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಅಬ್ದುಲ್ ಕರೀಂ, ಕೋಶಾಧಿಕಾರಿ ನಾಗಭೂಷಣ್ ರಾವ್ ಉಪಸ್ಥಿತರಿದ್ದರು. 

ಈ ಸಂದರ್ಭ ಸಂತೋಷ್ ಶೆಟ್ಟಿ ಪಡುಬಿದ್ರಿ ಇವರನ್ನು ಸನ್ಮಾನಿಸಲಾಯಿತು.
 
ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ವಾಸುದೇವ ರಾವ್  ಸ್ವಾಗತಿಸಿದರು. 
ಪ್ರಧಾನ ಕಾರ್ಯದರ್ಶಿ ಎಮ್ ಕೆ ಇಬ್ರಾಹಿಂ ವಂದಿಸಿದರು. ನಿವೃತ್ತ ಮುಖ್ಯ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಶಿರ್ವ : ಸ್ವಾತಂತ್ರ್ಯ ಹೋರಾಟಗಾರ ಕೆ.ಎಲ್.ಶರ್ಮಾ ಕ್ರೀಡಾಂಗಣ ಮತ್ತು ಶಾಲಾ ಸಭಾಂಗಣದ ಉದ್ಘಾಟನೆ

Thumbnail
Posted On: 12 Jan 2026, 08:11 PM

ಶಿರ್ವ : ಬ್ರಿಟಿಷ್ ಸರಕಾರದ ವಿರುದ್ಧ ಹೋರಾಡಿ ಅನೇಕ ವರ್ಷಗಳ ಕಾಲ  ಜೈಲುವಾಸ ಸಹಿತ ಕಠಿಣ ಶಿಕ್ಷೆ ಅನುಭವಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಆದರ್ಶ ಗಾಂಧೀವಾದಿ ಕೆ.ಎಲ್.ಶರ್ಮಾ ಇವರ ನೆನಪಿನಲ್ಲಿ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತ ಅವರ ಮಕ್ಕಳು ಶಾಲಾ ಶತಮಾನೋತ್ಸವದ ಸಂದರ್ಭದಲ್ಲಿ ತಾವು ಕಲಿತ ಶಾಲಾ ಕ್ರೀಡಾಂಗಣವನ್ನು  ನವೀಕರಿಸಿ ಅವರ ನೆನಪಿನಲ್ಲಿ ನೀಡಿದ್ದು ಅದರ ನಾಮಫಲಕವನ್ನು ಪುತ್ರ ರಾಮಕೃಷ್ಣ ಶರ್ಮಾ ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಶರ್ಮಾರವರ ಮಕ್ಕಳಾದ ಶಾರದಾ ಶರ್ಮಾ, ಶಶಿಕಲಾ ಶರ್ಮಾ, ಸುನಂದಾ ಶರ್ಮಾ, ಡಾ.ರಾಧಾಕೃಷ್ಣ ಶರ್ಮಾ, ಸೊಸೆ ಚಂದ್ರಕಾ ಶರ್ಮಾ ಉಪಸ್ಥಿತರಿದ್ದರು.

ಶಾಲಾ ಸಭಾಂಗಣದ ಉದ್ಘಾಟನೆ : ಶಾಲಾ ಮೂಲ ಸಭಾಭವನವನ್ನು ಸಂಪೂರ್ಣ ನವೀಕರಣಗೊಳಿಸಿದ ಶಾಲಾ ಹಳೆವಿದ್ಯಾರ್ಥಿ ಲೂವಿಸ್ ಮಾರ್ಟಿಸ್ ಮತ್ತು ಸಿಸಿಲಿಯಾ ಮಾರ್ಟಿಸ್, ಹಳೆವಿದ್ಯಾರ್ಥಿನಿಯರಾದ ಅವರ ಮಕ್ಕಳ ಸಹಭಾಗಿತ್ವದಲ್ಲಿ ಶತಮಾನೋತ್ಸವದ ಶುಭಾವಸರದಲ್ಲಿ ನೀಡಿದ್ದು, ಅದರ ಉದ್ಘಾಟನೆಯನ್ನು ಲೂವಿಸ್ ಮಾರ್ಟಿಸ್ ನೆರವೇರಿಸಿದರು. ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಕೆ.ಆರ್.ಪಾಟ್ಕರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ದಾನಗಳಲ್ಲಿ ಅತ್ಯಂತ ಸರ್ವ ಶ್ರೇಷ್ಠ ದಾನವೇ ರಕ್ತದಾನ : ರಕ್ತದಾನಿ ದೇವದಾಸ್ ಪಾಟ್ಕರ್

Thumbnail
Posted On: 12 Jan 2026, 08:09 PM

ಶಿರ್ವ : ಅಪಘಾತ, ತುರ್ತು ಶಸ್ತ್ರಚಿಕಿತ್ಸೆ, ಹೆರಿಗೆ ಸಮಯದಲ್ಲಿ ರಕ್ತದ ಬೇಡಿಕೆ ಅಧಿಕವಾಗಿರುತ್ತದೆ. ಎಷ್ಟೇ ಹಣ ಕೊಟ್ಟರೂ ರಕ್ತ ಸಿಗುವುದಿಲ್ಲ. ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು. ಆರೋಗ್ಯವಂತ ಯುವಕರು, ಯುವತಿಯರು ರಕ್ತದಾನಕ್ಕೆ ಸಜ್ಜಾಗಬೇಕು. ರಕ್ತದಾನ ಅತ್ಯಂತ ಪುಣ್ಯ ಕಾರ್ಯವಾಗಿದ್ದು ದಾನಗಳಲ್ಲಿ ಅತ್ಯಂತ ಸರ್ವ ಶ್ರೇಷ್ಠ ದಾನವೇ ರಕ್ತದಾನ ಎಂದು 80 ಬಾರಿ ರಕ್ತದಾನ ಮಾಡಿದ ಹಾಗೂ ರಾಜ್ಯ ಸರಕಾರದಿಂದ ಶ್ರೇಷ್ಠ ರಕ್ತದಾನಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದೇವದಾಸ್ ಪಾಟ್ಕರ್ ಮುದರಂಗಡಿ ನುಡಿದರು.
ಅವರು ಶತಮಾನೋತ್ಸವದ ಸಂಭ್ರಮದಲ್ಲಿರುವ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿಯ ನೇತೃತ್ವದಲ್ಲಿ ಹಾಗೂ ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಇದರ ಆಶ್ರಯದಲ್ಲಿ ಮಣಿಪಾಲ ಆಸ್ಪತ್ರೆಯ ರಕ್ತನಿಧಿ ವಿಭಾಗದ ಸಹಕಾರದೊಂದಿಗೆ  ರಾಜಾಪುರ ಸಾರಸ್ವತ ಸೇವಾ ವೃಂದ ಬಂಟಕಲ್ಲು, ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್, ರೋಟರಿ ಕ್ಲಬ್ ಶಿರ್ವ,ಲಯನ್ಸ್ ಕ್ಲಬ್ ಬಿ.ಸಿ.ರೋಡ್ ಬಂಟಕಲ್ಲು,  ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ, ಬಿ.ಸಿ.ರೋಡ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್, ಇವರ ಸಹಭಾಗಿತ್ವದಲ್ಲಿ  ಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ  ದೇವದಾಸ್ ಪಾಟ್ಕರ್ ಸಹಿತ 20ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ದಾನಿಗಳನ್ನು ಗೌರವಿಸಲಾಯಿತು. ಶಿಬಿರದ ರಕ್ತದಾನಿಗಳಿಗೆ ವಿಶೇಷ ಕಿಟ್‌ನೀಡಿ ಅಭಿನಂದಿಸಲಾಯಿತು. 

 ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಮಾಧವ ಕಾಮತ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿರ್ವ ಗ್ರಾ.ಪಂ.ಅಧ್ಯೆಕ್ಷೆ ಸವಿತಾ ರಾಜೇಶ್, ಉಪಾಧ್ಯಕ್ಷ ವಿಲ್ಸನ್ ರೊಡ್ರಿಗಸ್, ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ,ಅನಿತಾ ಡಿಸೋಜಾ ಬೆಳ್ಮಣ್, ಶಾಲಾ ಸಂಚಾಲಕ ರಾಮದಾಸ್ ಪ್ರಭು, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶಶಿಧರ ವಾಗ್ಲೆ ಮಾತನಾಡಿದರು.
 ವೇದಿಕೆಯಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳಾದ ಮೇಬಲ್ ಮಿನೇಜಸ್, ಉಮೇಶ್ ರಾವ್, ಡೆನೀಸ್ ಡಿಸೋಜಾ, ಡಾ,ವಿಟ್ಠಲ್ ನಾಯಕ್, ಶಾಲಾ ಮುಖ್ಯ ಶಿಕ್ಷಕಿ ಸಂಗೀತಾ ಪಾಟ್ಕರ್, ವಿಶ್ವನಾಥ್ ಬಾಂದೇಲ್ಕರ್,ಇನ್ನಿತರರು ಉಪಸ್ಥಿತರಿದ್ದರು.

ಸ್ಮಿತಾ ಎಂಟರ್ಪ್ರೈಸಸ್ ಮಾಲಕತ್ವದ ಎಮ್ಆರ್ಪಿಎಲ್ ಪೆಟ್ರೋಲ್ ಪಂಪ್ ಉದ್ಘಾಟನೆ

Thumbnail
Posted On: 09 Jan 2026, 04:17 PM

ಶಿರ್ವ : ಇಲ್ಲಿನ ಪಂಜಿಮಾರು ಶ್ರೀ ಮುಲ್ಕಾಡಿ ದೇವಸ್ಥಾನ ದ್ವಾರದ ಮುಂಭಾಗ ಪ್ರತಿಷ್ಠಿತ ಎಮ್ ಆರ್ ಪಿ ಎಲ್ ಪೆಟ್ರೋಲ್ ಪಂಪ್ ಗ್ರಾಹಕರ ಸೇವೆಗೆ ಲಭ್ಯವಾಗಲಿದೆ.

ಕೃಷ್ಣಾಪುರ ಮಠ ಉಡುಪಿಯ ಶ್ರೀ  ವಿದ್ಯಾಸಾಗರ ತೀರ್ಥ ಸ್ವಾಮೀಜಿ ಆಶೀರ್ವಚಿಸಿ, ನೂತನ ಉದ್ಯಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಿರ್ವ ಚರ್ಚ್ನ ಧರ್ಮ ಗುರು ಡಾ. ಲೆಸಿಲ್ಲೆ ಕ್ಲೇಪೋರ್ಡ್ ಡಿಸೋಜ, ಕತಿಬ್ ಸುನ್ನಿ ಜಾಮಿಯಾ ಮಸೀದಿ ಶಿರ್ವ ಇದರ ಮೌಲನ ಸಿರ್ಜದ್ದುನ್ ಜೈನಿ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತ ರಾಜೇಶ್, ಎಮ್ ಆರ್ ಪಿ ಎಲ್ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಸ್ವಾಮಿ ಪ್ರಸಾದ್, ಅರವಿಂದ್ ಆರ್, ಉದ್ಯಮಿ ನವೀನ್ ಅಮೀನ್ ಶಂಕರಪುರ ಉಪಸ್ಥಿತರಿದ್ದರು.

ಸ್ಥಳೀಯ ರಿಕ್ಷಾ ಚಾಲಕ ಮಾಲಕರ ವತಿಯಿಂದ ಸಿ ಎನ್ ಜಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಸಂಸದರಿಗೆ ಮನವಿ ನೀಡಲಾಯಿತು.

ಸ್ಮಿತಾ ಎಂಟರ್ಪ್ರೈಸ್  ಪ್ರವರ್ತಕ ಸುಬ್ರಹ್ಮಣ್ಯ ಎನ್ ಭಟ್ ಸ್ವಾಗತಿಸಿದರು. 

ಕಾಪು : 28ನೇ ಎಸ್‌ಎನ್‌ಜಿ ಟ್ರೋಫಿ ಓಪನ್ ಚೆಸ್ ಟೂರ್ನಮೆಂಟ್ ಸಂಪನ್ನ

Thumbnail
Posted On: 06 Jan 2026, 08:55 AM

ಕಾಪು : ಶ್ರೀ ನಾರಾಯಣ ಗುರು ಶಾಲಾ ಆಫ್ ಚೆಸ್, ಕಾಪು ಸಂಸ್ಥೆಯು ಮಂಗಳೂರು‌  ಅಫಿಲಿಯನ್ಸ್ ಟೆಕ್ನಾಲಜೀಸ್ ಅವರ ಸಹಯೋಗದಲ್ಲಿ ಕಾಪು ಶ್ರೀ ಹಳೆ ಮಾರಿಯಮ್ಮ ಸಭಾ ಭವನದಲ್ಲಿ 28ನೇ ಎಸ್‌ಎನ್‌ಜಿ ಟ್ರೋಫಿ ಓಪನ್ ಚೆಸ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಟೂರ್ನಮೆಂಟ್‌ನಲ್ಲಿ ಲಕ್ಷಿತ್ ಬಿ. ಸಾಲಿಯಾನ್ ಅವರು 6 ಸುತ್ತುಗಳಲ್ಲಿ 6 ಅಂಕಗಳನ್ನು ಗಳಿಸಿ ಯಾವುದೇ ಸೋಲು ಕಾಣದೆ ಚಾಂಪಿಯನ್ ಆಗಿ ಹೊರಹೊಮ್ಮಿದರು. 

ದಕ್ಷಿಣ ಕನ್ನಡದ ವಿಹಾನ್ ಶೆಟ್ಟಿ ಅವರು ದ್ವಿತೀಯ ಸ್ಥಾನ, ಹಾಗೂ ದಕ್ಷಿಣ ಕನ್ನಡದ ಆರೂಷ್ ಭಟ್ ಅವರು ತೃತೀಯ ಸ್ಥಾನ ಪಡೆದುಕೊಂಡರು.

ಈ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳಿಂದ 300ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು. 

ಬಹುಮಾನ ವಿತರಕರಾಗಿ ಅವಿನಾಶ್ ಶೆಟ್ಟಿ ಸ್ಥಾಪಕರು ಎಫಿಲಿಯನ್ಸ್ ಟೆಕ್ನಾಲಜಿಸ್ ಮಂಗಳೂರು, ಮುಖ್ಯ ಅತಿಥಿಗಳಾಗಿ ಸುನಿಲ್ ಪೂಜಾರಿ ಕಾರ್ಯದರ್ಶಿ ಯುವವಾಹಿನಿ ಕಾಪು, ಜ್ಯೋತಿ ಇಂಗ್ಲೀಷ್ ಉಪನ್ಯಾಸಕರು ಸರ್ಕಾರಿ ಪಿಯು ಕಾಲೇಜು ಬೈಲೂರು, ಸುಧಾಕರ್ ಸಾಲ್ಯಾನ್, ಕಾಪು ಸಂಸ್ಥೆಯ ಅಧ್ಯಕ್ಷ  ಉಮಾನಾಥ ಕಾಪು, ನಾಗೇಶ್ ಕಾರಂತ್ ಪಾಂಗಾಳ, ನಿರ್ದೇಶಕಿ ಸೌಂದರ್ಯ ಯು ಕೆ ಉಪಸ್ಥಿತರಿದ್ದರು. 

ಸ್ಥಾಪಕ ಸಾಕ್ಷಾತ್ ಯುಕೆ ಸ್ವಾಗತಿಸಿದರು. ಬಾಬು ಜೆ ಪೂಜಾರಿ ಉಪ್ಪುಂದ ನಿರೂಪಿಸಿದರು.

 

ಜ.1 -ಜ.14 : ಶ್ರೀ ಸಾಯಿ ಈಶ್ವರ್‌ರಿಂದ ಅಯ್ಯಪ್ಪಸ್ವಾಮಿ ವ್ರತಧಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ

Thumbnail
Posted On: 05 Jan 2026, 09:30 PM

ಕಾಪು : ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಶಂಕರಪುರ ಉಡುಪಿ ಜಿಲ್ಲೆ ಸಹಭಾಗಿತ್ವದಲ್ಲಿ ಶ್ರೀ ಸಾಯಿ ಈಶ್ವರ್‌ಗುರೂಜಿಯವರ ಮಾರ್ಗ ದರ್ಶನದಲ್ಲಿ ಜ.1ರಿಂದ ಜ. 14ರ ವರೆಗೆ ಉಡುಪಿ, ಮಂಗಳೂರು ಹೆದ್ದಾರಿಯಾಗಿ ಶಬರಿಮಲೆ ಯಾತ್ರೆ ಮಾಡುವ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ ಹಾಗೂ ವಿಶ್ರಾಂತಿಯ ವ್ಯವಸ್ಥೆ ಕಾಪು ಪಾಂಗಾಳ ಸೇತುವೆಯ ಬಳಿ ವ್ಯವಸ್ಥೆ ಮಾಡಲಾಗಿದೆ ಎಂದು  ಶ್ರೀ ಕ್ಷೇತ್ರದ ಪ್ರಕಟನೆ ತಿಳಿಸಿದೆ.

 

ಧರ್ಮ ಒಂದೇ ಅದುವೆ ವಿಶ್ವ ಮಾನವ ಧರ್ಮ : ಡಾ ಸುರೇಶ ನೆಗಳಗುಳಿ

Thumbnail
Posted On: 05 Jan 2026, 08:59 AM

ಪಡುಬಿದ್ರಿ : ಕುವೆಂಪು ಜನ್ಮ ದಿನದ ನೆನಪಿನಲ್ಲಿ ಓ ನನ್ನ ಚೇತನಾ ವಿಚಾರಗೋಷ್ಠಿ,  ಕವಿಗೋಷ್ಠಿಯು ಭಾನುವಾರ ಪಡುಬಿದ್ರಿಯ ಸುಝ್ಲಾನ್ ಕಾಲೋನಿಯ ಸಭಾಭವನದಲ್ಲಿ  ನಡೆಯಿತು.
ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ರಾಣಿ ಪುಷ್ಪಲತಾ ಅವರ ಸಾರಥ್ಯದಲ್ಲಿ ನಡೆದ ಸಮಾರಂಭವನ್ನು ಮಂಗಳೂರಿನ ಕಣಚೂರು ಆಯುರ್ವೇದ ಕಾಲೇಜಿನ ಪ್ರಧಾನ ಸಲಹೆಗಾರ ಡಾ ಸುರೇಶ ನೆಗಳಗುಳಿಯವರು ಉದ್ಘಾಟಿಸಿ, ಕುವೆಂಪು ಅವರ ಬಗ್ಗೆ ಮಾತನಾಡಿ ವಿಶ್ವ ಮಾನವಧರ್ಮಕ್ಕೆ ಮಿಗಿಲಾದ ಧರ್ಮ ಬೇರೆ ಇಲ್ಲ ಎನ್ನುತ್ತಾ ಸ್ವರಚಿತ ಕವನಗಳನ್ನು ವಾಚಿಸಿದರು.

ರಾಣಿ ಪುಷ್ಪಲತಾ ದೇವಿಯವರು ಅಧ್ಯಕ್ಷತೆ ವಹಿಸಿದ್ದರು.

ಸಾಮಾಜಿಕ ಚಿಂತಕ ರಂಜನ್ ಕುಮಾರ್,
ಶಿಕ್ಷಕಿ ಕವಯಿತ್ರಿ ಶರಣ್ಯ ಬೆಳುವಾಯಿ, NSCDF ಅಧ್ಯಕ್ಷ ಗಂಗಾಧರ ಗಾಂಧೀ, ಮತ್ತು NSCDF ಅಂತಾರಾಷ್ಟ್ರೀಯ ವಕ್ತಾರ ಕೆ.ಎಂ.ಇಲಿಯಾಸ್ ಮುಖ್ಯ ಅತಿಥಿಗಳಾಗಿದ್ದರು.

ಬಳಿಕ ನಡೆದ ಕವಿಗೋಷ್ಠಿ ಅಧ್ಯಕ್ಷತೆಯನ್ನು ಮಣಿಪಾಲದ ಹಿಪ್ನೋಥೆರಪಿಸ್ಟ್ ಕವಯಿತ್ರಿ ಜ್ಯೋತಿ ಮಹದೇವ್  ವಹಿಸಿದ್ದರು.

ಕವಿಗಳಾದ ಅಶ್ವಿನಿ ಕೊಂಜಾಡಿ, ,ವಾಣಿಶ್ರೀ ಅಶೋಕ್ ಐತಾಳ್, ಕೆ ಮಂಜುನಾಥ್ ಗುಂಡ್ಮಿ, ಶಾಲಿನಿ ಕೆಮ್ಮಣ್ಣು, ಗಿರೀಶ್ ಪೆರಿಯಡ್ಕ,ಆಂಟೋನಿ ಲೂಯಿಸ್ ಮಣಿಪಾಲ, ಮಾರುತಿ ಕೆ.ಪಿ.,ಮಾಲತಿ ರಮೇಶ್ ಕೆಮ್ಮಣ್ಣು, ಅವನೀಶ್ ಐತಾಳ್, ಪಿ. ಆಯಿಷಾ ಪೆರ್ನೆ,ವಿನೋದಾ ಪ್ರಕಾಶ್ ಪಡುಬಿದ್ರಿ,ಸುಮಾ ಕಿರಣ್, ಜಯಂತಿ ಎಸ್. ನಂದಳಿಕೆ,ಸುಲೋಚನ ನವೀನ್, ತನೀರಾ,ಆತೂರ್ ಸುಮಯ್ಯಾ, ಎಂ ಪಾಟೀಲ್ ದೇರಳಕಟ್ಟೆ,ಆಕೃತಿ ಐ.ಎಸ್. ಭಟ್, ಮೂಗಪ್ಪ ಗಾಳೇರ,ಪೂರ್ಣಿಮಾ ಅನಿಲ್‌ ಮಣಿಪಾಲ,ಸ್ಮಿತಾ ಅಶೋಕ್ ಪರ್ಕಳ, ಮಂಡ್ಯ ಅನಾರ್ಕಲಿ ಸಲೀಂ  ಮಂಗಳೂರು, ಗಂಗಾಧರ ಗಾಂಧಿ ಮತ್ತಿತರರು ಕಾವ್ಯವಾಚನ ಮಾಡಿದರು. ಭಾಗವಹಿಸಿದ  ಕವಿಗಳಲ್ಲೆರಿಗೂ ಪ್ರಶಂಶನ ಪತ್ರ ಹಾಗೂ ಕೃತಿಗಳನ್ನು ನೀಡಿ ಗೌರವಿಸಲಾಯಿತು.

ರಶ್ಮಿ ಸನಿಲ್  ಕಾರ್ಯಕ್ರಮ ನಿರೂಪಿಸಿದರು.

    

ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ : ಕಾಪು ಮಾರಿಯಮ್ಮ ದೇವಳ ಭೇಟಿ

Thumbnail
Posted On: 04 Jan 2026, 06:29 PM

ಕಾಪು : ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.

ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ಗಾಯಕ ವಿಜಯ ಪ್ರಕಾಶ್ ದೇವಳದಲ್ಲಿರುವ ಕರ್ನಾಟಕದ ಬೃಹತ್ ಘಂಟೆಯನ್ನು ಬಾರಿಸಿದರು. ಒಂದು ದಿನದ ವಿಶೇಷ ಅನ್ನದಾನ ಸೇವೆಯನ್ನು ನೀಡಿ, ನವದುರ್ಗಾ ಲೇಖನ ಮಂಟಪದ ಲೇಖನ ಯಜ್ಞದ ಪುಣ್ಯ ಭೂಮಿಯಲ್ಲಿ  ಮೊದಲ ದಿನದ ಲೇಖವನ್ನು ಬರೆದರು ಇನ್ನುಳಿದ ಲೇಖನವನ್ನು 9 ದಿನಗಳವರೆಗೆ ಮನೆಯಲ್ಲಿಯೇ ಬರೆದು ಶಾಶ್ವತ ಸೇವೆಯೊಂದಿಗೆ ಸಮರ್ಪಿಸುವುದಾಗಿ ಹೇಳಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಗೌರವಿಸಲಾಯಿತು.

ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾದವ ಆರ್. ಪಾಲನ್, ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ಜಯರಾಮ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜ. 4: ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕುಂಭ ಕಲಾವಳಿ ಕಾರ್ಯಕ್ರಮ

Thumbnail
Posted On: 03 Jan 2026, 11:58 AM

ಮಂಗಳೂರು : ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ  ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ(ರಿ.) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ  ಹಾಗೂ ದಾಸ್  ಚಾರಿಟೇಬಲ್  ಸೇವಾ ಟ್ರಸ್ಟ್ (ರಿ.)ಮಂಗಳೂರು ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪದಗ್ರಹಣ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ, ಕಾರ್ಯಕ್ರಮ, ಸಾಧಕರಿಗೆ ಸನ್ಮಾನ,  ಆಸಕ್ತರಿಗೆ ನೆರವು ಕಾರ್ಯಕ್ರಮ ಜನವರಿ 4 ರಂದು ನಡೆಯಲ್ಲಿದೆ.

 

ಉಡುಪಿ ಹಾಗೂ ದಕ್ಷಿಣ ಜಿಲ್ಲಾ ಕುಲಾಲ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಅಭೂತಪೂರ್ವ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿ ಎಂದು ದಕ್ಸಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಲ| ಅನಿಲ್ ದಾಸ್. ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ ) ಮಂಗಳೂರು ಪರವಾಗಿ ನಮ್ಮ ಕಾಪು ನ್ಯೂಸ್ ಗೆ ತಿಳಿಸಿದ್ದಾರೆ.

ಪೆರ್ಡೂರು : ಹಿರಿಯೆರೊಟ್ಟುಗೊಂಜಿ ದಿನ ವಿಶೇಷ ಕಾರ್ಯಕ್ರಮ

Thumbnail
Posted On: 02 Jan 2026, 03:31 PM

ಉಡುಪಿ : ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ ಪೆರ್ಡೂರು ವತಿಯಿಂದ ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ 'ಹಿರಿಯೆರೊಟ್ಟುಗೊಂಜಿ ದಿನ' ವಿಶೇಷ ಕಾರ್ಯಕ್ರಮವು ಸಂಭ್ರಮದಿಂದ ಜರಗಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 60 ರಿಂದ 96 ವರ್ಷ ವಯಸ್ಸಿನ ನೂರಾರು ಹಿರಿಯ ನಾಗರಿಕರು ಪಾಲ್ಗೊಂಡು ಆಡಿ, ಹಾಡಿ, ನರ್ತಿಸಿ ಹರ್ಷದಿಂದ ದಿನವಿಡೀ ಸಂಭ್ರಮಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಗ್ರಾಮದ ಮುಖಂಡ ಹಾಗೂ ಸಮಿತಿಯ ಗೌರವಾಧ್ಯಕ್ಷ ಕೆ. ಶಾಂತಾರಾಮ ಸೂಡ, ಇಂದಿನ ಹಲವಾರು ಮುಂದುವರಿದ ಕುಟುಂಬಗಳಲ್ಲಿ ವೃದ್ಧಾಪ್ಯ ಒಂದು ರೀತಿಯಲ್ಲಿ ಶಾಪದಂತಾಗಿದೆ. ಅನೇಕ ಹಿರಿಯರು ಮನರಂಜನೆ ಹಾಗೂ ಸಾಮಾಜಿಕ ಚಟುವಟಿಕೆಗಳಿಂದ ವಂಚಿತರಾಗಿ ನೀರಸ ಜೀವನ ನಡೆಸುತ್ತಿದ್ದಾರೆ. ಅಂತಹ ಹಿರಿಯರಲ್ಲಿ ಜೀವನೋತ್ಸಾಹ ತುಂಬಲು ಈ ರೀತಿಯ ಕಾರ್ಯಕ್ರಮಗಳು ಅತ್ಯಗತ್ಯ. ಸಮಾಜದ ಅಗತ್ಯಗಳನ್ನು ಅರಿತು ಸಮಿತಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಸಮಾರೋಪ ಸಮಾರಂಭ : ಸಮಿತಿಯ ಅಧ್ಯಕ್ಷ ಸತೀಶ್ ಕೋಟ್ಯಾನ್ ಮಾತನಾಡಿ, ದೇವರ ನಂತರದ ಸ್ಥಾನ ಹೆತ್ತವರದು. ವೃದ್ದಾಪ್ಯದಲ್ಲಿ ಮಕ್ಕಳಂತೆಯೇ ಹಿರಿಯರಿಗೂ ಪ್ರೀತಿ, ಕಾಳಜಿ ನೀಡಬೇಕಿದೆ. ಯೌವನದಿಂದ ವೃದ್ಧಾಪ್ಯದವರೆಗೂ ಕುಟುಂಬದ ಸುಖಸಂತೋಷಕ್ಕಾಗಿ ನಿಸ್ವಾರ್ಥವಾಗಿ ದುಡಿದ ಹಿರಿಯರು ಜೀವನದ ಮುಸ್ಸಂಜೆಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದು ದುಃಖಕರ. ಕುಟುಂಬ ಹಾಗೂ ಸಮಾಜದಲ್ಲಿ ಹಿರಿಯರು ಸಂತಸದಿಂದ ಬದುಕುವ ಅವಕಾಶ ಸಿಗಬೇಕೆಂಬ ಉದ್ದೇಶದಿಂದ ಇಡೀ ದಿನದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇಂದು ಹಿರಿಯರು ಸಂಭ್ರಮಿಸಿದ ರೀತಿಯನ್ನು ಕಂಡಾಗ ಸಮಿತಿಯ ಪ್ರಯತ್ನ ಸಾರ್ಥಕವಾಗಿದೆ. ಎಲ್ಲೆಡೆ ಸಂಘ-ಸಂಸ್ಥೆಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ನಾಟಿ ವೈದ್ಯರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿರುವ 96 ವರ್ಷದ ರಾಧಾ ಶೆಟ್ಟಿ (ಹೊಳಿಂಜೆ) ಹಾಗೂ 70 ವರ್ಷದ ಸುಂದರಿ ಆಚಾರ್ಯ (ಬುಕ್ಕಿಗುಡ್ಡೆ) ಅವರನ್ನು ಸನ್ಮಾನಿಸಲಾಯಿತು.

ಖ್ಯಾತ ವಾಗ್ಮಿ ಹಾಗೂ ಹಿರಿಯ ನಾಗರಿಕರ ಜಾಗೃತಿಗಾಗಿ ಶ್ರಮಿಸುತ್ತಿರುವ ನಿತ್ಯಾನಂದ ಭಟ್ (ಉಡುಪಿ) ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಹಿರಿಯರು-ಕಿರಿಯರ ನಡುವೆ ಸಮನ್ವಯದ ಬದುಕು ಹಾಗೂ ಹಿರಿಯರಿಗಾಗಿ ಇರುವ ಕಾನೂನು ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ತೀರ್ಥಹಳ್ಳಿಯ ಖ್ಯಾತ ಗಾಯಕ ರಮೇಶ್ ಹುಣಸೆಮಕ್ಕಿ ಅವರ ಹಾಡುಗಳು ಹಿರಿಯರನ್ನು ರಂಜಿಸಿತು.

ಹಲವು ಹಿರಿಯರು ತಮ್ಮೊಳಗಿನ ಪ್ರತಿಭೆಗಳನ್ನು ಪ್ರದರ್ಶಿಸಿದರು. ಮಲ್ಪೆಯ ಲೀಲಾವತಿ ಅವರ ಕುಟುಂಬವು ಮಕ್ಕಳು, ಮೊಮ್ಮಕ್ಕಳು ಹಾಗೂ ಸೊಸೆಯಂದಿರೊಂದಿಗೆ ಸೇರಿ ಜಲಸಂರಕ್ಷಣೆಯ ಕುರಿತ ಛದ್ಮವೇಷದ ಮೂಲಕ ಜನಜಾಗೃತಿ ಮೂಡಿಸಿತು. ಮೊಮ್ಮಕ್ಕಳೊಂದಿಗೆ ಹುಲಿ ವೇಷದಲ್ಲಿ ಕುಣಿದು ಹಿರಿಯರು ವಿಶೇಷ ಗಮನ ಸೆಳೆದರು. 

ಹಿರಿಯರೊಬ್ಬರು ತಮ್ಮ ಭಾವನೆ ವ್ಯಕ್ತಪಡಿಸಿ, "ನಾವೂ ಎಲ್ಲರಂತೆ ಸಂಭ್ರಮಿಸಬೇಕೆಂಬ ಆಸೆ ಇದ್ದರೂ ಅವಕಾಶಗಳು ಕಡಿಮೆ. ನಮ್ಮಿಗಾಗಿ ಇಡೀ ದಿನ ಮೀಸಲಿಟ್ಟು ಮಕ್ಕಳಂತೆ ಕುಣಿಯಲು ಅವಕಾಶ ಕಲ್ಪಿಸಿದ ಸಮಿತಿಗೆ ದೇವರು ಎಲ್ಲವನ್ನೂ ಕರುಣಿಸಲಿ. ಇಂತಹ ಕಾರ್ಯಕ್ರಮಗಳು ಎಲ್ಲೆಡೆ ನಡೆಯಲಿ" ಎಂದು ಹೇಳಿದರು.

ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷ ಸತೀಶ್ ಕೋಟ್ಯಾನ್, ಗೌರವಾಧ್ಯಕ್ಷ ಕೆ. ಶಾಂತಾರಾಮ ಸೂಡ, ಮುಖ್ಯ ಅತಿಥಿ ನಿತ್ಯಾನಂದ ಭಟ್, ಕಾರ್ಯದರ್ಶಿ ರವೀಂದ್ರ ನಾಡಿಗ್, ಜತೆ ಕಾರ್ಯದರ್ಶಿ ಸತೀಶ್‌ ಕುಲಾಲ್ ಉಪಸ್ಥಿತರಿದ್ದರು. 
ಪ್ರತೀಕ್ಷಾ ಕೋಟ್ಯಾನ್ ಪ್ರಾರ್ಥಿಸಿ, ಪ್ರಭಾಕರ ಶೆಟ್ಟಿ ಪ್ರಸ್ತಾವನೆಗೈದು, ಸ್ವಾಗತಿಸಿ,  ವಂದಿಸಿದರು. ಉಪೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.