Updated News From Kaup
ಕರಾಟೆಯಲ್ಲಿ ಸಾಣೂರು ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಕು. ಸೃಜನಾ ರಾಜ್ಯಮಟ್ಟಕ್ಕೆ ಆಯ್ಕೆ
Posted On: 20-09-2025 12:31PM
ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಸೃಜನಾ ಆಯ್ಕೆಯಾಗಿದ್ದಾರೆ.
ಸೆ. 21 : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥಾ 2025
Posted On: 20-09-2025 10:07AM
ಉಡುಪಿ: ಒಂದೇ ಜಾತಿ ಒಂದೇ ಮತ ಒಬ್ಬರೇ ದೇವರು ಎಂಬ ವಿಶ್ವಗುರುವಿನ ಸಾರ್ವಕಾಲಿಕ ಸತ್ಯ ಸಂದೇಶ ಸಾರಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ರಾಂತಿಯ ಹರಿಕಾರ, ಸಮಾಜ ಸುಧಾರಣೆಯ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೆ.21,ಆದಿತ್ಯವಾರದಂದು ಉಡುಪಿ ಜಿಲ್ಲಾ ಯುವ ವೇದಿಕೆಯ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬಿಲ್ಲವ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗುರು ಸಂದೇಶ ಸಾಮರಸ್ಯ ಜಾಥಾ 2025 ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸೆ. 22 - ಅ. 2 : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವ - 2025
Posted On: 20-09-2025 09:48AM
ಕಾಪು : ಇಲ್ಲಿನ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸೆ.22 ರಿಂದ ಅ.2ರವರೆಗೆ ಶ್ರೀ ಶರನ್ನವರಾತ್ರಿ ಮಹೋತ್ಸವವು 11 ದಿನಗಳ ಪರ್ಯಂತ ಅಮ್ಮನ ಸನ್ನಿಧಾನದಲ್ಲಿ ಮಾರಿಗುಡಿಯ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು ತಂತ್ರಿಗಳ ಹಾಗೂ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಇವರ ಸಹಯೋಗದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾಹಿತಿ ನೀಡಿದರು. ಕಾಪುವಿನ ಹೊಸ ಮಾರಿಗುಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಕಳ : ಎಬಿವಿಪಿ ವತಿಯಿಂದ ಕಾಲೇಜಿನ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ
Posted On: 20-09-2025 09:38AM
ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಬಿ ಎಸ್ಸಿ ನರ್ಸಿಂಗ್ ಕಾಲೇಜು ಕಾರ್ಕಳದಲ್ಲಿ ಇರುವಂತಹ ಅನೇಕ ಸಮಸ್ಯೆಗಳ ಬಗ್ಗೆ ಸಂಸ್ಥೆಯ ಪ್ರಾಂಶುಪಾಲರಿಗೆ ಮನವಿ ನೀಡಲಾಯಿತು.
ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ : ಮಾತೃ ವಂದನಾ ಕಾರ್ಯಕ್ರಮ
Posted On: 20-09-2025 09:28AM
ಕಾಪು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರು ಇಲ್ಲಿ ಮಾತೃ ವಂದನಾ ಕಾರ್ಯಕ್ರಮವು ನಡೆಯಿತು.
ಕನ್ನಡ ಸಂಘ ಬಹರೈನ್ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ
Posted On: 13-09-2025 08:47AM
ಕಾಪು : ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿಶೇಷ ಶಿಫಾರಸಿನ ಮೇರೆಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕನ್ನಡ ಸಂಘ ಬಹರೈನ್ಗೆ ಒಂದು ಕೋಟಿ ರೂಪಾಯಿಗಳ ಅನುದಾನವನ್ನು ಅಧಿಕೃತವಾಗಿ ಅನುಮೋದಿಸಿದ್ದಾರೆ.
ಪ್ರವಾದಿಗಳು ದೇವನ ಆದೇಶದಂತೆ ಬದುಕಿ ತೋರಿಸಿದವರು : ಆಲ್ಬನ್ ರೋಡ್ರಿಗಸ್
Posted On: 12-09-2025 03:01PM
ಕಾಪು : ಪ್ರವಾದಿ ಮುಹಮ್ಮದರು ದೇವನ ವತಿಯಿಂದ ಭೂಮಿಯ ಮೇಲೆ ನಿಯುಕ್ತಿಗೊಂಡ ಪ್ರವಾದಿ. ದೇವನ ಆದೇಶದಂತೆ ಬದುಕಿ ತೋರಿಸಿದವರು. ಧರ್ಮ ಗ್ರಂಥಗಳಲ್ಲಿ ಉಲ್ಲೇಖಿಸಿದಂತೆ ಸಮಾಜ ಕೆಟ್ಟು ಹೋದ ಸಂಧರ್ಭದಲ್ಲಿ ಜನ ಕಲ್ಯಾಣಕ್ಕಾಗಿ ದೇವನು ಆಯಾಯ ಕಾಲದಲ್ಲಿ ಮನುಷ್ಯರ ನಡುವಿನಿಂದಲೇ ಪ್ರವಾದಿಗಳನ್ನು ಸೃಷ್ಟಿಸುತ್ತಾನೆ ಎಂದು ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಆಲ್ಬನ್ ರೋಡ್ರಿಗಸ್ ಹೇಳಿದರು. ಅವರು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕಾಪು ತಾಲೂಕು ಘಟಕ ವತಿಯಿಂದ ಹೋಟೆಲ್ ಕೆ. ಒನ್. ನಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ ಎಂಬ ವಿಚಾರಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ರಾ.ಹೆ.ಯ ಗುಂಡಿ ಮುಚ್ಚಿಸಿ : ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ರಿಂದ ಡಿ.ಸಿ.ಗೆ ಮನವಿ
Posted On: 12-09-2025 02:55PM
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲ -ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಪಾಯಕಾರಿಯಾದ ದೊಡ್ಡ ದೊಡ್ಡ ಗುಂಡಿಗಳಿಂದ ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು. ಇದ್ದರಿಂದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳು ನಡೆಯುತ್ತಿದ್ದು. ಈ ಮಾರ್ಗವಾಗಿ ದಿನನಿತ್ಯ ಸಂಚಾರಿಸುವ ಶಾಲಾ -ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ಕರ್ನಾಟಕ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಉಡುಪಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಪಲಿಮಾರು ಸ.ಪ.ಪೂ.ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
Posted On: 10-09-2025 06:36PM
ಪಲಿಮಾರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ಆಯೋಜಿಸಲಾಗಿತ್ತು.
ಸೆ.12 : ಬೆಳಪು ಗ್ರಾಮ ಪಂಚಾಯತ್ ಗೆ ಆರ್.ಬಿ.ಐ ನಿರ್ದೇಶಕರ ತಂಡ ಭೇಟಿ
Posted On: 10-09-2025 09:54AM
ಕಾಪು : ಬೆಳಪು ಗ್ರಾಮ ಪಂಚಾಯತಿಗೆ ಸೆ.12 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಭಾರತ ಸರಕಾರದ ಆರ್.ಬಿ.ಐ ನಿರ್ದೇಶಕರಾದ ಸೋನಾಲಿ ಸೇನ್ ಗುಪ್ತ, ಆರ್.ಬಿ.ಐ ಬೆಂಗಳೂರು ಎ.ಜಿ.ಎಂ ಅರುಣ್ ಕುಮಾರ್. ಯೂನಿಯನ್ ಬ್ಯಾಂಕಿನ ಜನರಲ್ ಮ್ಯಾನೇಜರ್ ರಾಜೇಂದ್ರ ಕುಮಾರ್ ಹಾಗೂ ಯೂನಿಯನ್ ಬ್ಯಾಂಕ್ ನ ರೀಜನಲ್ ಮ್ಯಾನೇಜರ್ ಅಶೋಕ್ ಕುಮಾರ್. ಲೀಡ್ ಬ್ಯಾಂಕ್ ಮ್ಯಾನೇಜರ್, ಕೆನರಾ ಬ್ಯಾಂಕ್ ಹರೀಶ್ ಜಿ. ಯೂನಿಯನ್ ಬ್ಯಾಂಕ್ ಡೆಪ್ಯೂಟಿ ರೀಜನಲ್ ಮುಖ್ಯಸ್ಥ ಸತ್ಯ ಬ್ರತೋ ಭಾದುರಿರವರ ಉನ್ನತ ಮಟ್ಟದ ತಂಡ ಪಂಚಾಯತ್ ಮಟ್ಟಕ್ಕೆ ಪ್ರಥಮವಾಗಿ ಬೆಳಪು ಗ್ರಾಮವನ್ನು ಆಯ್ಕೆ ಮಾಡಿ ಭೇಟಿ ನೀಡಲಿದ್ದಾರೆಂದು ಬೆಳಪು `ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
