Updated News From Kaup

ಮಾ.14 : ಯುವಸೇನೆ ಮಡುಂಬು ವೈ.ಎಸ್.ಎಮ್.ಫ್ರೆಂಡ್ಸ್ ಮಡುಂಬು : 19ನೇ ವಾರ್ಷಿಕೋತ್ಸವ

Thumbnail
Posted On: 10 Mar 2026, 11:25 AM

ಕಾಪು : ಯುವಸೇನೆ ಮಡುಂಬು ವೈ.ಎಸ್.ಎಮ್.ಫ್ರೆಂಡ್ಸ್ ಮಡುಂಬು ಇದರ
19ನೇ ವಾರ್ಷಿಕೋತ್ಸವ ಮಾ.14, ಶನಿವಾರ
ರಾತ್ರಿ 7 ಗಂಟೆಯಿಂದ ಮಡುಂಬು ಬೆರ್ಮೋಟ್ಟು ದೇವಸ್ಥಾನದ ಬಳಿ ಜರಗಲಿದೆ.

ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಸಂಸದರಾದ ಕ್ಯಾ. ಬ್ರಿಜೆಶ್ ಚೌಟ, ಮಡುಂಬುವಿನ ಜ್ಯೋತಿಷಿ, ಪುರೋಹಿತರಾದ ಕೆ.ಪಿ ಶ್ರೀನಿವಾಸ ತಂತ್ರಿ, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ, ಮುನಿಯಾಲು, ಶಾಂತ ಎಲೆಕ್ಟಿಕಲ್ಸ್ & ಇಂಜಿನಿಯರಿಂಗ್ ಪ್ರೈ.ಲಿ. ಉಡುಪಿ ಇದರ ಆಡಳಿತ ನಿರ್ದೇಶಕ ಶ್ರೀಪತಿ ಭಟ್ ಉಚ್ಚಿಲ, 
ಫ್ರೆಂಡ್ಸ್ ಕೆಟರರ್ಸ್ ಶಂಕರಪುರ ಮಾಲಕರಾದ  
ನವೀನ್ ಅಮೀನ್, ಪತ್ರಕರ್ತ ರಾಕೇಶ್ ಕುಂಜೂರು, ಇನ್ನಂಜೆಯ ಉದ್ಯಮಿ ದಿನೇಶ್ ಶೆಟ್ಟಿ ಕಲ್ಯಾಲು, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಉಪಸ್ಥಿತರಿರಲಿದ್ದಾರೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಸೇನೆ ಮಡುಂಬು ಇದರ ಅಧ್ಯಕ್ಷರಾದ 
ದೀಪಕ್ ಶೆಟ್ಟಿ ವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 
ಶಾರದಾ ಆರ್ಟ್ಸ್ ಕಲಾವಿದರು (ರಿ.)  ಮಂಜೇಶ್ವರ ಅಭಿನಯದ ಒಂತೆ ಲೇಟಾಂಡ್ ಆಂಡಲಾ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಯುವಸೇನೆ ಮಡುಂಬು ವೈ.ಎಸ್.ಎಮ್.ಫ್ರೆಂಡ್ಸ್ ಮಡುಂಬು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

ಸಮುದ್ರದ ಅಲೆಗಳನ್ನು ಗೆದ್ದ ಮುಂಬೈ ಹುಡುಗಿ : 5 ಕಿ.ಮೀ ಈಜಿ ದಾಖಲೆ ಬರೆದ ದಿಶಿತಾ ಚಂದ್ರಶೇಖರ್ ಪೂಜಾರಿ

Thumbnail
Posted On: 03 Mar 2026, 04:10 PM

ಕಾಪು : ಮುಂಬೈನ ಗೋರೆಗಾಂವ್ ಪಶ್ಚಿಮದ ಓಜೋನ್ ಈಜುಕೊಳದಲ್ಲಿ ತನ್ನ ಎಂಟನೇ ವಯಸ್ಸಿನಿಂದಲೇ ಈಜು ತರಬೇತಿಯನ್ನು ಆರಂಭಿಸಿದ ಬಾಲಕಿ ದಿಶಿತಾ ಚಂದ್ರಶೇಖರ್ ಪೂಜಾರಿ ಈಗ ಸಮುದ್ರದ ಅಲೆಗಳನ್ನು ಮೆಟ್ಟಿ ನಿಂತು ಹೊಸ ಇತಿಹಾಸ ಬರೆದಿದ್ದಾಳೆ. 

2023 ಮತ್ತು 2024ರಲ್ಲಿ ಸಿಂಧುದುರ್ಗ ಜಿಲ್ಲೆಯ ಮಾಲ್ವಣ್‌ನ ಚಿವ್ಲಾ ಬೀಚ್‌ನಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಸಮುದ್ರ ಈಜು ಸ್ಪರ್ಧೆಯಲ್ಲಿ ಸತತ ಎರಡು ಬಾರಿ 2 ಕಿಲೋಮೀಟರ್ ದೂರವನ್ನು ಯಶಸ್ವಿಯಾಗಿ ಈಜುವ ಮೂಲಕ ಫಿನಿಶರ್ ಮೆಡಲ್ ಪಡೆದಿದ್ದ ಈಕೆ, 2025ರಲ್ಲಿ ಮುಂಬೈನ ಸನ್ ಕ್ರೋಕ್‌ನಿಂದ ಗೇಟ್‌ವೇ ಆಫ್ ಇಂಡಿಯಾವರೆಗಿನ 2 ಕಿಲೋಮೀಟರ್ ದೂರವನ್ನು ಕ್ರಮಿಸಿ ಎಲ್ಲರ ಗಮನ ಸೆಳೆದಿದ್ದಳು. ಇದೀಗ ತನ್ನ ಸಾಧನೆಯ ಹಾದಿಯನ್ನು ಮತ್ತಷ್ಟು ವಿಸ್ತರಿಸಿರುವ ದಿಶಿತಾ, ಫೆಬ್ರವರಿ 22, 2026ರಂದು ನಡೆದ ಸನ್ ಕ್ರೋಕ್‌ನಿಂದ ಗೇಟ್‌ವೇ ಆಫ್ ಇಂಡಿಯಾವರೆಗಿನ ಕಠಿಣವಾದ 5 ಕಿಲೋಮೀಟರ್ ಸಮುದ್ರ ಈಜು ಸ್ಪರ್ಧೆಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿ ಪದಕ ಮುಡಿಗೇರಿಸಿಕೊಂಡಿದ್ದಾಳೆ.

ಈಕೆ ಗೋರೆಗಾಂವ್ ಪಶ್ಚಿಮ ಕಾಮರಾಜ್ ನಗರ ಶ್ರೀ ರಾಮ ಸಮರ್ಥ್ ಸೊಸೈಟಿ ನಿವಾಸಿ ಚಂದ್ರಶೇಖರ್ ಪೂಜಾರಿ ಮತ್ತು ಸವಿತಾ ಪೂಜಾರಿ ದಂಪತಿಯ ಸುಪುತ್ರಿ ಮತ್ತು ಇನ್ನಂಜೆ ಗ್ರಾಮದ ಮಡುಂಬು ಸಂಜೀವ ಪೂಜಾರಿ ಮತ್ತು ಶಾಂತ ಪೂಜಾರ್ತಿಯವರ ಮೊಮ್ಮಗಳಾಗಿದ್ದು, ಸೈಂಟ್ ಥೋಮಸ್ ಅಕಾಡೆಮಿಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ದಿಶಿತಾಳ ಈ ಅಪ್ರತಿಮ ಸಾಹಸಕ್ಕೆ ಕ್ರೀಡಾ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಮುಂಬೈನ ಕಡಲತೀರದಲ್ಲಿ ಅವಳ ಸಾಧನೆಯ ಹಾದಿ ಇತರ ಯುವ ಈಜುಗಾರರಿಗೆ ಸ್ಫೂರ್ತಿಯಾಗಿದೆ.

    

ಕಾಪು ಶ್ರೀ ಹೊಸಮಾರಿಗುಡಿ : ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Thumbnail
Posted On: 03 Mar 2026, 11:38 AM

ಕಾಪು : ಇಲ್ಲಿನ ಶ್ರೀ ಹೊಸಮಾರಿಗುಡಿ ದೇವಳದಲ್ಲಿ ಉಚ್ಚಂಗಿ ಸಹಿತ ಶ್ರೀಮಾರಿಯಮ್ಮ ದೇವಿಯ ಪುನ:ಪ್ರತಿಷ್ಠೆಯ ಪ್ರಥಮ ವರ್ಧಂತ್ಯೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಅನುಷ್ಠಾನಗಳು, ಕ್ಷೇತ್ರದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿಗಳ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಇವರ ಸಹಭಾಗಿತ್ವದಲ್ಲಿ ಗದ್ದಿಗೆಯ ಶ್ರೀಚಕ್ರಯಂತ್ರ ಪೂಜಾ, ದಿವ್ಯ ಶ್ರೀಚಕ್ರಯಂತ್ರ ದರ್ಶನ, ಖಡ್ಗಮಾಲಾಮಂತ್ರ ಹೋಮ, ಶ್ರೀಯಂತ್ರ ಪ್ರಸನ್ನಪೂಜಾ ಕಾರ್ಯಗಳು ಜರಗಿದವು.

ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆಯೂ ನಡೆಯಿತು. 

ಈ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ಸಮಿತಿಗಳ ಮುಖ್ಯಸ್ಥರು, ಶ್ರೀಕ್ಷೇತ್ರದ ಭಗವದ್ಭಕ್ತರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸಮಾರಿಗುಡಿ : ಪ್ರತಿಷ್ಠಾ ವರ್ಧಂತಿ - ಮಾತೃ ವೈಭವ

Thumbnail
Posted On: 01 Mar 2026, 05:20 PM

ಕಾಪು : ಶ್ರೀ ಹೊಸ ಮಾರಿಗುಡಿಯಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪುನ: ಪ್ರತಿಷ್ಠೆಯ ಪ್ರಥಮ ವರ್ಧಂತಿ ಮಹೋತ್ಸವ ಅಂಗವಾಗಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ “ಮಾತೃ ವೈಭವ”ಭಕ್ತಿ ಭಾವಗಳ ಕಲರವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

   ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ಕೆ. ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಸಮಿತಿ ಮತ್ತು ಮಾತೃ ವೈಭವ ಸೇವಾ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.

   ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಮಂಜುಳಾ ಟಿ. ಎನ್., ಶ್ರುತಿ ಹರಿರಾಮ್ ಶಂಕರ್, ಬೀನಾ ವಾಸುದೇವ ಶೆಟ್ಟಿ, ರಂಜನಿ ಸುಧಾಕರ ಹೆಗ್ಡೆ ತುಂಗಾ, ಅನುರಾಧ ಮನೋಹರ್ ಶೆಟ್ಟಿ, ಮಮತಾ ಯೋಗೀಶ್ ಶೆಟ್ಟಿ, ವಿದ್ಯಾ ರವಿಕಿರಣ್, ಲಕ್ಷ್ಮೀ ಶ್ರೀನಿವಾಸ ತಂತ್ರಿ, ಸುಗುಣಾ ರತ್ನಾಕರ್ ಶೆಟ್ಟಿ ನಡಿಕೆರೆ ಸೇರಿದಂತೆ 81 ಮಂದಿ ಮಹಿಳೆಯರು ಮಾತೃ ವೈಭವ ದೀಪ ಪ್ರಜ್ವಲನೆಗೈದರು.

  ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಶಾಸಕ ಸುರೇಶ್ ಬಾಬು ಚಿಕ್ಕನಾಯಕಹಳ್ಳಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಶ್ರೀ ಹೊಸ ಮಾರಿಗುಡಿಯ  ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ ಎಸ್. ಶೆಟ್ಟಿ, ಗಂಗಾಧರ ಸುವರ್ಣ, ರಮೇಶ್ ಹೆಗ್ಡೆ ಕಲ್ಯ, ಉದಯ ಸುಂದರ್ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಭಗವಾನ್ ದಾಸ್ ಶೆಟ್ಟಿಗಾರ್, ಪ್ರಭಾಕರ ಎಸ್. ಪೂಜಾರಿ, ಹರಿಯಪ್ಪ ಕೋಟ್ಯಾನ್, ಲಕ್ಷ್ಮೀಶ ತಂತ್ರಿ ಮೊದಲಾದವರು ಉಪಸ್ಥಿತರಿದ್ದರು.

ಮಾರ್ಚ್ 1 : ಕಾಂತನಾಧಿಕಾರಿ ಜುಮಾದಿ ದೇವಸ್ಥಾನ ಪಯ್ಯಾರು, ಕಳತ್ತೂರು - ವರ್ಧಂತ್ಯುತ್ಸವ ಹಾಗೂ ಕಾಲಾವಧಿ ನೇಮ

Thumbnail
Posted On: 28 Feb 2026, 02:15 PM

ಕಾಪು : ಇತಿಹಾಸ ಪ್ರಸಿದ್ಧ ಕಳತ್ತೂರು ಪಯ್ಯಾರು ಶ್ರೀ ಕಾಂತನಾಧಿಕಾರಿ ಜುಮಾದಿ ದೈವಸ್ಥಾನ ಇಲ್ಲಿ ಜುಮಾದಿ ಮತ್ತು ಜುಮಾದಿ ಬಂಟ ದೈವಗಳ ನೇಮ ಹಾಗೂ ನಾಗದೇವರ ವರ್ಧಂತ್ಯುತ್ಸವದ ಅಂಗವಾಗಿ ನವಕ ಕಲಾತತ್ವ ಹೋಮ, ನವಕ ಕಲಶಾಭಿಷೇಕ, ಚಂಡಿಕಾಹೋಮ ಆಗಮ ಮತ್ತು ಜ್ಯೋತಿಷ್ಯ ವಿದ್ವಾನ್ ನೀಲಾವರ ಶ್ರೀ ರಘುರಾಮ ಮದ್ಯಸ್ತರ ನೇತೃತ್ವದಲ್ಲಿ ಮಾರ್ಚ್ 1ರ ಭಾನುವಾರ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವುದು.

 ಬೆಳಿಗ್ಗೆ ಗಂಟೆ 9 ರಿಂದ ಗುರು ಗಣಪತಿ ಪ್ರಾರ್ಥನೆ, ಪುಣ್ಯಹವಾಚನ, ನವಕಪ್ರಧಾನ, ಕಲಶ ಸ್ಥಾಪನೆ, ಕಲಾತತ್ವ ಹೋಮ, ಪೂರ್ಣಹುತಿ, ನವಕ ಕಲಶಾಭಿಷೇಕ, ಚಂಡಿಕಾ ಹೋಮ, ಪೂರ್ಣಾಹುತಿ ಮಹಾಪೂಜೆ, ನಾಗದೇವರಿಗೆ ನವಕಪ್ರಧಾನ ಕಲಶ ತತ್ವ ಹೋಮ, ಕಲಶಾಭಿಷೇಕ, ತನು ತಂಬಿಲ, ಮಹಾಪೂಜೆ, ಮಲೆ ಜುಮಾದಿ ಸನ್ನಿಧಾನಕ್ಕೆ ಮೆರವಣಿಗೆ ಮತ್ತು ಪ್ರಸನ್ನ ಪೂಜೆ, ನೇಮದ ಚಪ್ಪರ ಆರೋಹಣ, ಮದ್ಯಾಹ್ನ ಗಂಟೆ 1ರಿಂದ ಅನ್ನ ಸಂತರ್ಪಣೆ, ಸಂಜೆ 6 ಗಂಟೆಗೆ ಭoಡಾರ ಇಳಿಯುವುದು.

 ಭಕ್ತಿ ಸುಧೆ ಕಾರ್ಯಕ್ರಮ. ರಾತ್ರಿ ಗಂಟೆ 8 ರಿಂದ ಅನ್ನ ಸಂತರ್ಪಣೆ. ರಾತ್ರಿ ಘಂಟೆ 9:30 ಕ್ಕೆ ಜುಮಾದಿ ಮತ್ತು ಬಂಟ ಹಾಗೂ ಪರಿವಾರ ದೈವಗಳ ನೇಮ ನಡೆಯಲಿದೆ ಎಂದು ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಚಂದ್ರ ಗುರ್ಮೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ : ಡಾ. ಜಾನಪದ ಎಸ್ ಬಾಲಾಜಿ

Thumbnail
Posted On: 28 Feb 2026, 02:15 PM

ಉಡುಪಿ : ಮೇಕೆಕಟ್ಟು ನಂದಿಕೇಶ್ವರ  ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ ವಿಶ್ವ ಬುಡಕಟ್ಟು  ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ
ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ಮಾತನಾಡುತ್ತಾ, ಬುಡಕಟ್ಟು ಸಮುದಾಯದವರಿಗೆ ಪಾರಂಪರಿಕ ಜ್ಞಾನವಿರುತ್ತದೆ. ಕುಡುಬಿ ಸಮುದಾಯಗಳ ಪಾರಂಪರಿಕ ಆಚರಣೆಗಳು, ಮೌಕಿಕ ಪರಂಪರೆ ಹಾಗೂ ಪ್ರದರ್ಶನ ಕಲೆಗಳ ಕುರಿತು ಪಠ್ಯಆಗಬೇಕು ಹಾಗೂ ಪ್ರತ್ಯೇಕ  ಕರ್ನಾಟಕ ಬುಡಕಟ್ಟು ಅಕಾಡೆಮಿ ಸ್ಥಾಪನೆಯಾಗಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ  ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ  ಡಾ ಗಣೇಶ್ ಗಂಗೊಳ್ಳಿ,  ಜನಪದ ಹಾಗೂ ಬುಡಕಟ್ಟು ಕಲಾವಿದರ ಕುರಿತು  ಉಡುಪಿ ಜಿಲ್ಲಾಧ್ಯಂತ ಸಮೀಕ್ಷೆ ಕೈಗೊಳ್ಳಲಾಗುವುದು  ದಶಮಾನೋತ್ಸವ ಅಂಗವಾಗಿ ಗ್ರಾಮ ಘಟಕಗಳನ್ನು ಸಹ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

 ಹಿರಿಯ ಕುಡುಬಿ ಹೋಳಿ ಕಲಾವಿದರಾದ ಶೀನ ನಾಯ್ಕ್ ಮಂಡಕರ ಹಾಗೂ ರಾಮಣ್ಣ ನಾಯ್ಕ್ ರವರನ್ನು ಅಭಿನಂದಿಸಿ ಗೌರವಿಸಲಾಯಿತು.

 ಕುಡುಬಿ ಸಮುದಾಯದ ನೃತ್ಯ ಪ್ರದರ್ಶನ ಹಾಗೂ ಕೋಲಾಟವನ್ನು  ಏರ್ಪಡಿಸಲಾಗಿತ್ತು.

  ದೇಗುಲದ ಟ್ರಸ್ಟಿ  ರಾಜಾರಾಮ್ ಶೆಟ್ಟಿ, ಪ್ರತಾಪ್ ಶೆಟ್ಟಿ ಕೊಳ್ಕೆಬೈಲು, ಜಿಲ್ಲಾ ಪ್ರ. ಕಾರ್ಯದರ್ಶಿ ರಾಘವೇಂದ್ರ ಪ್ರಭು ಕವಾ೯ಲು, ಸದಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿಗೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ

Thumbnail
Posted On: 26 Feb 2026, 07:11 PM

ಕಾಪು :  ಶ್ರೀ ಹೊಸ ಮಾರಿಗುಡಿ ದೇವಳದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ - ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಗುರುವಾರ ಸಂಜೆ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವದಿಂದ ಜರಗಿತು.

ಕಾಪು ಉಳಿಯಾರಗೋಳಿ ದಂಡತೀರ್ಥ ಮಠದ ಬಳಿಯಿಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಕಾಪು ಮಾರಿಯಮ್ಮನ ಭಕ್ತಾಧಿಗಳು, ಕಾಪುವಿನ ಅಮ್ಮನ ಮಕ್ಕಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಹೊರೆ ಕಾಣಿಕೆ ಸಮರ್ಪಿಸಲಾಯಿತು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಮಾತೃವೈಭವ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಹೊರೆಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಯೋಗೀಶ್ ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು.

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ

Thumbnail
Posted On: 20 Feb 2026, 03:06 PM

ಕಾಪು : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಜಾವಾಣಿಯ ಹಮೀದ್ ಪಡುಬಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೊಸದಿಗಂತದ ಪುಂಡಲೀಕ ಮರಾಠೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

  ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಕಾಪು ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.

  ಉಪಾಧ್ಯಕ್ಷರಾಗಿ ವಿಜಯವಾಣಿಯ ಹೇಮನಾಥ ಪಡುಬಿದ್ರಿ, ಕೋಶಾಧಿಕಾರಿಯಾಗಿ ಸ್ಪಂದನಾ ಟಿವಿಯ ಸಂತೋಷ್ ನಾಯ್ಕ್, ಕಾರ್ಯದರ್ಶಿಯಾಗಿ ಉದಯವಾಣಿಯ ಸತೀಶ್ಚಂದ್ರ ಶೆಟ್ಟಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

 7 ಜನ ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಸಂಘದ ಸದಸ್ಯರು ಆಯ್ಕೆ ಆಗಿದ್ದಾರೆ. 

   ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಸಹಕರಿಸಿದರು.

 ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಪೆರ್ಡೂರು : ನಿವೃತ್ತ ಯೋಧ ರಮೇಶ್ ಕುಲಾಲರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ

Thumbnail
Posted On: 14 Feb 2026, 04:29 PM

ಉಡುಪಿ : ದೂಪದಕಟ್ಟೆ ಬೈರಂಪಳ್ಳಿಯ ನಿವಾಸಿ, ಭಾರತೀಯ ಸೇನೆಯಲ್ಲಿ ಸುದೀರ್ಘ ವರ್ಷದ ಸೇವೆ ಮಾಡಿ ನಿವೃತ್ತಿ ಹೊಂದಿದ  ಯೋಧ ರಮೇಶ್ ಕುಲಾಲರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮವು ಶ್ರೀ ವಾಸುಕಿ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ, ದೂಪದ ಕಟ್ಟೆ ಪೆರ್ಡೂರು ಮುಂದಾಳತ್ವದಲ್ಲಿ ಗ್ರಾಮಸ್ಥರ ಉಪಸ್ಥಿತಿಯಲ್ಲಿ, ರಮೇಶ್ ಕುಲಾಲರ ಅಭಿಮಾನಿ ಬಳಗದಿಂದ  ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದು ಪೆರ್ಡೂರು ದೂಪದ ಕಟ್ಟೆ ಬೈರಂಪಳ್ಳಿಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಉಪಾಧ್ಯಕ್ಷೆ ಅಮ್ಮಣ್ಣಿ ಶೆಟ್ಟಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಪೆರ್ಜೆ, ಭೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿಯಾನಂದ ಹೆಗ್ಡೆ, ಕುಂಬಾರರ ಗುಡಿ ಕೈಗಾರಿಕಾ ಸೇವಾ ಸಹಕಾರಿ  ಸಂಘದ ಅಧ್ಯಕ್ಷರು ಸಂತೋಷ್ ಕುಲಾಲ್ ಪಕ್ಕಾಲು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೂಪದಕಟ್ಟೆಯ ಮುಖ್ಯೋಪಾಧ್ಯಾಯ  ಗೋಪಾಲ ನಾಯ್ಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಪೆರ್ಡೂರು ಕುಲಾಲ ಸಂಘದ ಅಧ್ಯಕ್ಷ ಕಾಳು ಕುಲಾಲ್, ನಾನಿಲ್ತಾರು ಕುಲಾಲ ಸಂಘದ ಅಧ್ಯಕ್ಷ ಜಯರಾಮ ಕುಲಾಲ್ ಅಗ್ಗರಟ್ಟ, ದೀಪಕ್ ಬೆಳ್ಮಣ್, ರಾಮ ಕುಲಾಲ್ ಪಕ್ಕಾಲು, ಗಣೇಶ್ ಕುಲಾಲ್ ಪಕ್ಕಾಲು, ಕೃಷ್ಣ ಕುಲಾಲ್ ಪೆರ್ಡೂರು, ರೇಷ್ಮಾ ಶೆಟ್ಟಿ ಇನ್ನ, ಗೋವಿಂದ ಕುಲಾಲ್ ದೂಪದಕಟ್ಟೆ, ಸುರೇಶ್ ಡಿ ಕುಲಾಲ್, ಸುಕೇಶ್ ಶೆಟ್ಟಿ, ನಾಗೇಶ್ ಕುಲಾಲ್ ಸೇರಿದಂತೆ ರಮೇಶ್ ಕುಲಾಲ್ ಅಭಿಮಾನಿ ಬಳಗದವರು  ಉಪಸ್ಥಿತರಿದ್ದರು. 

ಸಂಘಟಕ  ಸುಭಾಸ್ ಶೆಟ್ಟಿ ಎಲ್ಲರನ್ನು ಸ್ವಾಗತಿಸಿ, ಸುಧಾಕರ್ ಕುಲಾಲ್ ಪಟ್ಲ ವಂದಿಸಿದರು.

ಓಮಾನ್ ಲ್ಲಿ ರಸ್ತೆ ಅಪಘಾತ : ಕಾಪುವಿನ ಕಳತ್ತೂರು ನಿವಾಸಿ ಚೇತನ್ ಸಾವು

Thumbnail
Posted On: 10 Feb 2026, 07:33 PM

ಕಾಪು : ದುಡಿಮೆ ಅರಸಿ ಗಲ್ಪ್ ರಾಷ್ಟ್ರದ ಓಮನ್ ನಲ್ಲಿದ್ದ  ಕಳತ್ತೂರಿನ ಚೇತನ್ ಕುಲಾಲ್ ಭೀಕರ ಅಪಘಾತದಲ್ಲಿ ಮರಣ ಹೊಂದಿರುತ್ತಾರೆ.

 ಎರಡು ದಿನದಲ್ಲಿ ಚೇತನ್ ಪಾರ್ಥಿವ ಶರೀರ ಕಳತ್ತೂರು ಮನೆಗೆ ಬರಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಚೇತನ್ ಕುಲಾಲ್ ಎಳವೆಯಲ್ಲಿಯೇ  ತಾಯಿಯನ್ನು ಕಳೆದು ಕೊಂಡು ದೊಡ್ಡಮ್ಮನ ಆಸರೆಯಲ್ಲಿ ಬೆಳೆದವರು. ಸಹೋದರಿ ಮತ್ತು ಕುಟುಂಬವರ್ಗ ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.