Updated News From Kaup
ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ : ಸೃಜನ ಕುಲಾಲ್ ಗೆ ಚಿನ್ನ, ಬೆಳ್ಳಿ ಪದಕ
Posted On: 11 Dec 2024, 05:06 PM
ಕಾರ್ಕಳ : ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬಾಲಕಿಯರ 16 ವರ್ಷ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಕಾಂತವಾರ ಗ್ರಾಮದ ಬಾರಾಡಿಯ ಸೃಜನ ಕುಲಾಲ್ ಇವರು ಭಾಗವಹಿಸಿ ಚಿನ್ನದ ಪದಕ ಕುಮಿಟೆಯಲ್ಲಿ(ಫೈಟಿಂಗ್ ನಲ್ಲಿ) ಹಾಗೂ ಬೆಳ್ಳಿಯ ಪದಕವನ್ನು ಕಟ ವಿಭಾಗದಲ್ಲಿ ಪಡೆದಿರುತ್ತಾರೆ. ಇವರು ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯಾಗಿದ್ದಾರೆ. ಇವರು ಕಾಂತಾವರ ಗ್ರಾಮದ ಬಾರಾಡಿ ಜಗದೀಶ್ ಕುಲಾಲ್ ಹಾಗೂ ಜ್ಯೋತಿ ಕುಲಾಲ್ ದಂಪತಿಗಳ ಪುತ್ರಿ. ಇವರಿಗೆ ಕರಾಟೆ ಶಿಕ್ಷಕರಾದ ಸತೀಶ್ ಬೆಳ್ಮಣ್ ಹಾಗೂ ಮೃಣಾಲಿ ಶೆಟ್ಟಿ ಇವರು ತರಬೇತಿ ನೀಡಿರುತ್ತಾರೆ. ಕಾಂತಾವರ ಕುಲಾಲ ಸಂಘದ ಅಧ್ಯಕ್ಷರು ವಿಠಲ ಮೂಲ್ಯ ಬೇಲಾಡಿ, ಸಂಘದ ಸರ್ವ ಸದಸ್ಯರು ಶುಭ ಹಾರೈಸಿದ್ದಾರೆ. Hi
ಡಿ.23ರಿಂದ 29: ಪಡುಕುತ್ಯಾರಿನಲ್ಲಿರುವ ಆನೆಗುಂದಿ ಮಠದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ - 2024
Posted On: 11 Dec 2024, 04:53 PM
ಶಿರ್ವ : ಪಡುಕುತ್ಯಾರಿನಲ್ಲಿರುವ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ಡಿಸೆಂಬರ್ 23ರಿಂದ 29ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ 2024 ನಡೆಯಲಿದೆ. ಮಹಾಸಂಸ್ಥಾನದ ಆನೆಗುಂದಿ ಪ್ರತಿಷ್ಠಾನದ ನೇತೃತ್ವದಲ್ಲಿ ಯಕ್ಷಗಾನ ಕಲಾ ಪೋಷಕರ ಸಹಕಾರದೊಂದಿಗೆ ಸತತ4 ನೇ ವರ್ಷದ ಯಕ್ಷಗಾನ ತಾಳಮದ್ದಳೆ ಸಪ್ತಾಹ 2024 ದಶಂಬರ 23 ರಿಂದ ಆರಂಭಗೊಳ್ಳಲಿದೆ. 2021ರಿಂದ ಯಕ್ಷಗಾನ ತಾಳಮದ್ದಳೆ ಸಪ್ತಾಹ ಆರಂಭಗೊಂಡಿದ್ದು, ಕಾರ್ಯಕ್ರಮದಲ್ಲಿ ಪ್ರಸಿದ್ದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರೂ ಪಾಲ್ಗೊಳ್ಳುತ್ತಿದ್ದಾರೆ. ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸುವ ಹಾಗೆಯೇ ಕಲಾವಿದರನ್ನು ಗುರುತಿಸಿ ಗೌರವಿಸುವ ಯಕ್ಷ ಸೇವೆಯನ್ನು ಮಹಾಸಂಸ್ಥಾನದಿಂದ ನಡೆಸಲಾಗುತ್ತಿದೆ. ದಶಂಬರ 23ರಂದು ಸಪ್ತಾಹವನ್ನು ಅಪರಾಹ್ನ 2.30 ಘಂಟೆಗೆ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ದೀಪಪ್ರಜ್ವಲಗೊಳಿಸಿ ಉದ್ಘಾಟಿಸಲಿರುವರು. ಅತಿಥಿಗಳಾಗಿ ಕಣಿಪುರ ಮಾಸ ಪತ್ರಿಕೆ ಸಂಪಾದಕ ಹಾಗೂ ಯಕ್ಷಗಾನ ಚಿಂತಕ ಶ್ರೀ ಎಂ ನಾ ಚಂಬಲ್ತಿಮಾರ್ ಕುಂಬಳೆ ಭಾಗವಹಿಸುವರು. ದಿನಾಂಕ 23 ರಂದು ಅಂಗದ ಸಂಧಾನ , 24ರಂದು ಶಲ್ಯ ಸಾರಥ್ಯ, 25ರಂದು ಜಾಂಬವತಿ ಕಲ್ಯಾಣ, 26ರಂದು ಗುರುದಕ್ಷಿಣೆ, 27ರಂದು ಊರ್ವಶಿ ಶಾಪ, 28ರಂದು ಸಮರ ಸನ್ನಾಹ, 29ರಂದು ಸುಧನ್ವಾರ್ಜುನದೊಂದಿಗೆ ಸಂಪನ್ನಗೊಳಲಿದೆ. ದಶಂಬರ್ 29ರಂದು ಯಕ್ಷಗಾನ ತಾಳಮದ್ದಳೆ ಸಪ್ತಾಹದ ಸಮಾರೋಪದ ವಿಶೇಷ ಸಮಾರಂಭದಲ್ಲಿ ವಿವಿಧ ಗಣ್ಯರು ಯಕ್ಷಗಾನ ಕಲಾ ಪೋಷಕರು ಭಾಗವಹಿಸುವರು. ಜಿ.ಟಿ ಆಚಾರ್ಯ ಮುಂಬಯಿ, ಜನಾರ್ಧನ ಆಚಾರ್ಯ ಕನ್ಯಾನ ಇವರು ತಾಳಮದ್ದಳೆ ಸಪ್ತಾಹ 2024ರ ಸಂಯೋಜಕರಾಗಿದ್ದಾರೆ ಎಂದು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರ್, ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.13 : ಕಾಪು ದಂಡತೀರ್ಥ ಶಾಲಾ ಮೈದಾನದಲ್ಲಿ ಕುಟ್ಯಣ್ಣನ ಕುಟುಂಬ ತುಳು ನೂತನ ನಾಟಕ ಪ್ರದರ್ಶನ
Posted On: 11 Dec 2024, 03:26 PM
ಕಾಪು : ಸಮಾಜತ್ನ ದಿ| ಕೆ. ಲೀಲಾಧರ ಶೆಟ್ಟಿ ಅವರ ಸಾರಥ್ಯದ ಕಾಪು ರಂಗತರಂಗ ಕಲಾವಿದರು ತಂಡದ ಕುಟ್ಯಣ್ಣನ ಕುಟುಂಬ ತುಳು ನೂತನ ನಾಟಕವು ಡಿ.13 ರಂದು ಸಂಜೆ 6:30ಕ್ಕೆ ಕಾಪು ದಂಡತೀರ್ಥ ಶಾಲಾ ಮೈದಾನದಲ್ಲಿ ಪ್ರದರ್ಶನಗೊಳ್ಳಲಿದೆ. ಇಂದಿನ ಪ್ರಸ್ತುತತೆಗೆ ಅನುಗುಣವಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕುಟ್ಯಣ್ಣನ ಕುಟುಂಬ ತುಳು ನಾಟಕವು ಸಾಂಸಾರಿಕ ಮತ್ತು ಹಾಸ್ಯಮಯವಾಗಿ ಮೂಡಿ ಬಂದಿದ್ದು ಕುಟುಂಬ ಕುಳಿತು ವೀಕ್ಷಿಸುವಂತಿದೆ. ಸಂದೀಪ್ ಶೆಟ್ಟಿ ಮಾಣಿಬೆಟ್ಟು ರಚನೆಯ ಈ ನಾಟಕಕ್ಕೆ ಪ್ರಸನ್ನ ಶೆಟ್ಟಿ ಬೈಲೂರು ನಿರ್ದೇಶನ ಮತ್ತು ಶರತ್ ಉಚ್ಚಿಲ ಸಂಗೀತ ನೀಡಿದ್ದಾರೆ. ಪ್ರಥಮ ಪ್ರದರ್ಶನದಲ್ಲೇ ಜನರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದು ಪ್ರದರ್ಶನಗೊಂಡಲ್ಲೆಲ್ಲಾ ಉತ್ತಮ ಜನಸ್ಪಂದನೆ ದೊರಕುತ್ತಿದೆ. ಕಾಪು ಜೇಸಿಐನ ಜೇಸಿ ಭವನ ಮತ್ತು ತರಬೇತಿ ಕೇಂದ್ರದ ವಿಸ್ತರಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಸಹಾಯಾರ್ಥವಾಗಿ ಕುಟ್ಯಣ್ಣನ ಕುಟುಂಬ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾಪು ಜೇಸಿಐ ಮತ್ತು ಕಾಪು ರಂಗತರಂಗ ಕಲಾವಿದರ ಜಂಟಿ ಪ್ರಕಟಣೆಯು ತಿಳಿಸಿದೆ.
ನಾಳೆ (ಡಿ.12) : ಕಾಪುವಿನಲ್ಲಿ ಬೃಹತ್ ರಕ್ತದಾನ ಶಿಬಿರ
Posted On: 11 Dec 2024, 07:43 AM
ಕಾಪು : ಸಮಾಜ ರತ್ನ ದಿ| ಕೆ. ಲೀಲಾಧರ ಶೆಟ್ಟಿ ಮತ್ತು ದಿ| ವಸುಂದರಾ ಎಲ್. ಶೆಟ್ಟಿ ಇವರ ಫ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಮಾಜ ಸೇವಕ ಕಾಪು ಸೂರಿ ಶೆಟ್ಟಿ, ದಿ | ಲೀಲಾಧರ ಶೆಟ್ಟಿ ಕುಟುಂಬಿಕರು ಹಾಗೂ ಅವರ ಅಭಿಮಾನಿ ಬಳಗ, ಕಾಪು ಪುರಸಭೆಯ ಪೌರ ಕಾರ್ಮಿಕರ ಸಹಕಾರದಲ್ಲಿ ಗುರುವಾರ (ಡಿ.12)ದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಶ್ರೀ ವೀರಭದ್ರ ದೇವಸ್ಥಾನ ಸಭಾಂಗಣ, ಕಾಪು ಇಲ್ಲಿ ಬೃಹತ್ ರಕ್ತದಾನ ಶಿಬಿರ ಜರಗಲಿದೆ. ಕಾರ್ಯಕ್ರಮವನ್ನು ಸಾಯಿರಾಧಾ ಗ್ರೂಪ್ ಆಡಳಿತ ನಿರ್ದೇಶಕ ಮನೋಹರ್, ಎಸ್, ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಕಾಪು ಪುರಸಭೆ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ, ಕಾಪು ತಾಲೂಕು ತಹಶಿಲ್ದಾರ್ ಡಾ. ಪ್ರತಿಭಾ ಆರ್., ಕಾಪು ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ಚಿಕ್ಕಲಪದನಿ, ಬಾಲಾಜಿ ಯೋಗೀಶ್ ಶೆಟ್ಟಿ ಕಾಪು, ಶ್ರೀಧರ್ ಸಿ, ಶೆಟ್ಟಿ ಮುಲುಂದು, ಮುಂಬೈ, ಉದ್ಯಮಿ ಪ್ರಭಾಕರ್ ಎಸ್, ಪೂಜಾರಿ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ವೈದಾಧಿಕಾರಿ ಡಾ| ವೀಣಾ ಕುಮಾರಿ, ಕಾಪು ಬಂಟರ ಸಂಘ ಮಹಿಳಾ ವಿಭಾಗದ ಅಧ್ಯಕ್ಷರಾದ ಜಯಲಕ್ಷ್ಮಿ ಸುರೇಶ್ ಶೆಟ್ಟಿ, ಮೋಹನ್ ಶೆಟ್ಟಿ, ಕುಟಚಾದ್ರಿ, ಕರಂದಾಡಿ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ| ರಾಜಶ್ರೀ ಕಿಣಿ, ವೈದ್ಯಾಧಿಕಾರಿ ಡಾ| ದೃತಿ ವಿ ಆಳ್ವ, ಮಹೇಶ್ ಎಸ್ ಶೆಟ್ಟಿ ಹೊಸರಸು ಹೊಸಮನೆ ಪಣಿಯೂರು, ಉದ್ಯಮಿ ಖಾದರ್ ಶಾಲಿ ಮೂಳೂರು ಭಾಗವಹಿಸಲಿದ್ದಾರೆ. ಈ ಸಂದರ್ಭ ಕಾಪು ಪುರಸಭೆಯ ಒಟ್ಟು 38 ಜನ ಪೌರಕಾರ್ಮಿಕರಿಗೆ ಹಾಗೂ ಸಮಾಜ ಸೇವಕ ದೆಂದೂರು ಅಶೋಕ್ ಶೆಟ್ಟಿಯವರಿಗೆ ಸನ್ಮಾನವು ನಡೆಯಲಿದೆ. ಅದೇ ದಿನ ಬೆಳಿಗ್ಗೆ 8 ಗಂಟೆಗೆ ಮಜೂರು ಸರ್ಕಲ್ ಬಳಿಯ ಲೀಲಾಧರ ಶೆಟ್ಟಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಕಾರ್ಯಕ್ರಮ ನಡೆಯಲಿದೆ ಎಂದು ಸಮಾಜ ಸೇವಕ ಕಾಪು ಸೂರಿ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 15 ರಿಂದ ಮಾ. 12 ರವರೆಗೆ ಪಡುಬಿದ್ರಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಢಕ್ಕೆಬಲಿ ಸೇವೆ
Posted On: 11 Dec 2024, 07:13 AM
ಪಡುಬಿದ್ರಿ : ಎರಡು ವರ್ಷಗಳಿಗೊಮ್ಮೆ ಜರಗುವ ಪಡುಬಿದ್ರಿಯ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಈ ಬಾರಿ ದಾಖಲೆಯ 44 ಢಕ್ಕೆಬಲಿ ಸೇವೆಗಳು ನೆರವೇರಲಿದೆ. ಜ. 15ರಂದು ಮಂಡಲ ಹಾಕುವ ಢಕ್ಕೆಬಲಿ ಸೇವೆಯೊಂದಿಗೆ ಆರಂಭಗೊಳ್ಳಲಿದೆ. ಮಾ. 12ರಂದು ಮಂಡಲ ವಿಸರ್ಜನೆಯ ಢಕ್ಕೆಬಲಿ ಸೇವೆಯೊಂದಿಗೆ ಈ ಬಾರಿಯ ಸೇವೆಗಳು ಸಂಪನ್ನಗೊಳ್ಳಲಿವೆ. ಇದರಲ್ಲಿ ಜ. 26ರಂದು ನಡೆಯಲಿರುವ ನಾಗಮಂಡಲ ಸೇವೆ, ಜ. 19ರಂದು ಹೆಜಮಾಡಿಯ ಬ್ರಹ್ಮಸ್ಥಾನ ಹಾಗೂ ಜ. 21 ರಂದು ಪಡುಬಿದ್ರಿಯ ಮುರುಡಿ ಬ್ರಹ್ಮಸ್ಥಾನದಲ್ಲಿ ಜರಗುವ ಢಕ್ಕೆಬಲಿ ಸೇವೆಗಳೂ ಸೇರಿರುವುದಾಗಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ವೈ. ಎನ್. ರಾಮಚಂದ್ರ ರಾವ್ ತಿಳಿಸಿದ್ದಾರೆ.
ಜೈ ತುಲುನಾಡ್ ಕಾರ್ಲ ವಲಯ : 2024-25 ಸಾಲ್ದ ಕೂಡು ಪಟ್ಟಾಂಗೊ
Posted On: 08 Dec 2024, 09:59 PM
ಕಾರ್ಲ : ಜೈ ತುಲುನಾಡ್ (ರಿ.) ಕಾರ್ಲ ವಲಯೊದ 2024-25 ಸಾಲ್ದ ಕೂಡು ಪಟ್ಟಾಂಗೊ ಕಾರ್ಲದ ಶ್ರೀ ಅನಂತಶಯನ ಕ್ಷೇತ್ರೊಡ್ ಐತಾರ ಜೈ ತುಲುನಾಡ್ (ರಿ.) ಕೇಂದ್ರ ಸಮಿತಿದ ಪ್ರಧಾನ ಕಾರ್ಯಂತೆರ್ ಪೂರ್ಣಿಮಾ ಬಂಟ್ವಾಳ ಮೇರ್ನ ಮುತಾಲಿಕೆಡ್ ನಡತ್ಂಡ್. ಕಾರ್ಲಡ್ ಜೈ ತುಲುನಾಡ್ (ರಿ.) ಕಾರ್ಲ ಎಗ್ಗೆದ ರಚನೆ, ತುಲು ಬಾಸೆದ ಬೊಕ್ಕ ಲಿಪಿತ ಬುಲೆಚ್ಚಿಲ್ಗ್ ಬೋಡಾಪುನ ಪುನೆಪುಗ್ ಯೋಜನೆ ಮಲ್ತೆರ್. ಜೈ ತುಲುನಾಡ್ (ರಿ.) ಸಂಘಟನೆದ ಪದುಕೆರಾಯಿನ ರವಿಚಂದ್ರ ಕಾರ್ಲ, ಅಶ್ವಿನಿ ಕಾರ್ಲ, ಮಹೇಶ್ ಮೊಯ್ಲಿ, ನಿತಿನ್ ನಲ್ಲೂರು, ವೈಶಾಖ್ ಕಾರ್ಕಳ, ಶರತ್ರಾಜ್ ಕಡಬ, ಪ್ರಶಾಂತ್, ನಿಶಾ ಶೆಟ್ಟಿ, ಸುದಿತ್ ಶಿವಪುರ ಅಂಚೆನೆ ಸ್ಥಾಪಕ ಸಮಿತಿದ ಸದಾಶಿವ ಮುದ್ರಾಡಿ, ಸುಮಂತ್ ಹೆಬ್ರಿ ಉಪಸ್ಥಿತೆರಾದಿತ್ತೆರ್.
ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ಸರಿಪಡಿಸುವಂತೆ ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯರಿಂದ ಪತ್ರ
Posted On: 08 Dec 2024, 07:36 PM
ಕಾಪು : ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಕಾಪು ಕೊಪ್ಪಲಂಗಡಿಯ ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಹೆಜಮಾಡಿಯಿಂದ ಬೈಂದೂರುವರೆಗಿನ NH: 66 ಹೆದ್ದಾರಿಯ ಅಂಚುಗಳು ಮತ್ತು ಗುಂಡಿಗಳು ದುಃಸ್ಥಿತಿಯಲ್ಲಿದ್ದು, ಇದು ಪ್ರಯಾಣಿಕರ ಸುರಕ್ಷತೆಗೆ ಗಮನಾರ್ಹ ಅಪಾಯವನ್ನುಂಟು ಮಾಡಿದೆ. ರಸ್ತೆಯ ಸ್ಥಿತಿಯು ಚಾಲಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದು ಮಾತ್ರವಲ್ಲದೆ ಅಪಘಾತಗಳು, ಪಾದಚಾರಿಗಳಿಗೆ, ವಯೋವೃದ್ಧರಿಗೆ, ಶಾಲೆಗೆ ಹೋಗುವ ಮಕ್ಕಳಿಗೆ ಅಪಾಯವನ್ನು ಹೆಚ್ಚಿಸುತ್ತದೆ. ಮೇಲಾಗಿ, ಹಾಳಾದ ರಸ್ತೆ/ಅಂಚುಗಳು, ದಾರಿಗಳು ವಾಹನಗಳಿಗೆ ಹಾನಿಯನ್ನುಂಟು ಮಾಡುತ್ತಿದ್ದು, ಪ್ರಯಾಣಿಕರಿಗೆ ಆರ್ಥಿಕ ನಷ್ಟವನ್ನು ಉಂಟುಮಾಡುತ್ತದೆ. ಸರಿಯಾದ ಬೀದಿ ದೀಪಗಳನ್ನು ಸಹ ಒದಗಿಸಿ. ಗುಂಡಿಗಳು ಮತ್ತು ಹಾಳಾಗಿರುವ ರಸ್ತೆಯ ಅಂಚುಗಳನ್ನು ಸರಿಪಡಿಸಲು ತಕ್ಷಣ ಕ್ರಮಕೈಗೊಳ್ಳಲು ಪತ್ರದಲ್ಲಿ ವಿನಂತಿಸಿದ್ದಾರೆ. ರಾತ್ರಿ ಸಂಚರಿಸುವ ವಾಹನಗಳಿಗೆ ರಸ್ತೆಯ ಫಲಕಗಳು ಸರಿಯಾಗಿ ಕಾಣಿಸದೆ ಇರುವುದರಿಂದ, ವಾಹನಗಳಿಗೆ ತೊಂದರೆಯಾಗಿ ಅಪಘಾತಕ್ಕೆ ಎಡೆ ಮಾಡಿಕೊಡುತ್ತದೆ. ಈ ಬಗ್ಗೆ ಮತ್ತು ಸರ್ವಿಸ್ ರಸ್ತೆಯನ್ನು ಮಾಡಲು ಆಗ್ರಹಿಸಿರುತ್ತಾರೆ. ಈ ಬಗ್ಗೆ ಜಿಲ್ಲಾಧಿಕಾರಿಯ ಗಮನಕ್ಕೂ ತಂದಿರುತ್ತಾರೆ.
ಮುಂಡಾಲ ಯುವವೇದಿಕೆ ಪಡುಬಿದ್ರಿ : ಪಿರಾಕ್ದ ಗೊಬ್ಬುಲ್ನ ಬುಲೆಚ್ಚಿಲ್ - ಗ್ರಾಮೀಣ ಕ್ರೀಡಾಕೂಟ ಉದ್ಘಾಟನೆ
Posted On: 08 Dec 2024, 01:14 PM
ಪಡುಬಿದ್ರಿ : ಮುಂಡಾಲ ಯುವವೇದಿಕೆ (ರಿ.) ಪಡುಬಿದ್ರಿ ನೇತೃತ್ವದಲ್ಲಿ ಉಡುಪಿ, ಮಂಗಳೂರುವರೆಗಿನ ಮುಂಡಾಲ ಸಮಾಜ ಬಾಂಧವರಿಗಾಗಿ ನಡೆದ "ಪಿರಾಕ್ದ ಗೊಬ್ಬುಲ್ನ ಬುಲೆಚ್ಚಿಲ್" ಗ್ರಾಮೀಣ ಕ್ರೀಡಾಕೂಟ ಭಾನುವಾರ ಪಡುಬಿದ್ರಿ ಬೋರ್ಡುಶಾಲಾ ಮೈದಾನದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿತೇಂದ್ರ ಫುಟಾರ್ಡೊ ಉದ್ಘಾಟಿಸಿ ಶುಭ ಹಾರೈಸಿದರು. ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ಯುವಕ ವೃಂದದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮಾತನಾಡಿ, ಇಂದಿನ ಮಕ್ಕಳು ಬಹುಪಾಲು ಸಮವನ್ನು ಮೊಬೈಲ್ ನಲ್ಲಿ ವ್ಯಯಿಸುವ ಇಂದಿನ ಕಾಲಘಟ್ಟದಲ್ಲಿ ತುಳುನಾಡಿನ ಹಿಂದಿನ ಕಾಲದ ಕ್ರೀಡೆಗಳನ್ನು ಮಕ್ಕಳಿಗೆ ಪರಿಚಯಿಸಬೇಕಾಗಿದೆ. ಹಳ್ಳಿಯ ಆಟಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ಉತ್ತಮ. ಈ ನಿಟ್ಟಿನಲ್ಲಿ ಪಡುಬಿದ್ರಿ ಮುಂಡಾಲ ಯುವವೇದಿಕೆಯ ಕಾರ್ಯ ಶ್ಲಾಘನೀಯ ಎಂದರು. ವೇದಿಕೆಯಲ್ಲಿ ರಮೇಶ್ ಯು., ಕಿರಣ್ ಕುಮಾರ್ ಕೊಡಿಯಾಲ್ ಬೈಲ್, ಕೃಷ್ಣ ಶೆಟ್ಟಿ ಪೊಸ್ರಾಲ್, ಕೆ. ಸತ್ಯಶಂಕರ ಶೆಟ್ಟಿ, ರಘುರಾಜ್ ಕದ್ರಿ, ವಿನಯ್, ಪ್ರಕಾಶ್ ಕೋಡಿಕಲ್, ಜಾನಪದ ವಿದ್ವಾಂಸ ಕೆ.ಕೆ. ಪೇಜಾವರ ಮತ್ತಿತರರು ಉಪಸ್ಥಿತರಿದ್ದರು. ಸುರೇಶ್ ಪಡುಬಿದ್ರಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು.
ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ
Posted On: 07 Dec 2024, 07:44 PM
ಉಡುಪಿ : ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಡಿ.8 ರಂದು ವಿಜಯಪುರ ಬಸವನಬಾಗೇವಾಡಿಯಲ್ಲಿ ನಡೆಯುವ ವಾಷಿ೯ಕೋತ್ಸವ ಮತ್ತು ಶರಣ ಸಮ್ಮೇಳನದಲ್ಲಿ ನೀಡಲಾಗುವ ಬಸವ ಶ್ರೀ ಪ್ರಶಸ್ತಿಗೆ ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಆಯ್ಕೆಯಾಗಿದ್ದಾರೆ. ಕಾಯ೯ಕ್ರಮವು ಬಸವಬಾಗೇವಾಡಿಯ ವಿರಕ್ತಮಠದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.6 - 12 : ಪಡುಕುತ್ಯಾರು ಆನೆಗುಂದಿ ಮಠದಲ್ಲಿ ಕೋಟಿ ಕುಂಕುಮಾರ್ಚನೆ
Posted On: 07 Dec 2024, 06:36 PM
ಪಡುಕುತ್ಯಾರು : ಪಡುಕುತ್ಯಾರಿನಲ್ಲಿರುವ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ 2025 ರ ಜನವರಿ 6ರಿಂದ 12ರ ತನಕ ಕೋಟಿ ಕುಂಕುಮಾರ್ಚನೆಯು ಶ್ರೀ ಸರಸ್ವತೀ ಮಾತೃಮಂಡಳಿ, ಆನೆಗುಂದಿ ಪ್ರತಿಷ್ಠಾನದ ವ್ಯಾಪ್ತಿಯ ದೇವಸ್ಥಾನಗಳು ಹಾಗೂ ಸ್ಥಳೀಯ ಪಂಚಾಯತುಗಳ ಹಿಂದೂ ಸಮಾಜ ಬಾಂಧವರ ನೇತೃತ್ವದಲ್ಲಿ ನಡೆಯಲಿದೆ. ಮಹಾಸಂಸ್ಥಾನದ ವಿವಿಧ ಯೋಜನೆಗಳ ಸಾಕಾರ ಮತ್ತು ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ಕೇಪಳಪುಷ್ಪದೊಂದಿಗೆ ಶ್ರೀ ಸರಸ್ವತೀ ಯಾಗ ಶಾಲೆಯಲ್ಲಿ ನಡೆಯುವ ಕೋಟಿ ಕುಂಕುಮಾರ್ಚನೆಯ ವೇಳೆ ವಿವಿಧ ಹೋಮ-ಯಜ್ಞಗಳನ್ನುಆಯೋಜಿಸಲಾಗಿದೆ. ಈ ಕೋಟಿ ಕುಂಕುಮಾರ್ಚನೆಯ ಸುಸಮಯದಲ್ಲಿ ಅಷ್ಟಚಾತ್ವಾರಿಂಶತ್ ನಾರಿಕೇಳ ಗಣಯಾಗ, ರುದ್ರ ಯಾಗ ಮಹಾ ಮೃತ್ಯುಂಜಯ ಯಾಗ, ವಿಷ್ಣು ಹವನ, ಸೌರ ಸೂಕ್ತ ಹೋಮ, ಶ್ರೀ ಸರಸ್ವತೀ ಹೋಮ, ದುರ್ಗಾ ಹೋಮ, ವಿಶ್ವಕರ್ಮ ಹೋಮ, ನವಗ್ರಹ ಹೋಮ ದಶ ಸಹಸ್ರ ಕದಳಿ ಶ್ರೀ ಲಲಿತಾ ಸಹಸ್ರನಾಮಗಳೊಂದಿಗೆ ಹೋಮಗಳು, ಶ್ರೀ ಸೂಕ್ತ ಹೋಮ ಎಂಬೀ ಹೋಮ ಯಜ್ಞಗಳು ಇದೇ ವೇಳೆ ಸಂಪನ್ನಗೊಳ್ಳಲಿದೆ. ಕೋಟಿ ಕುಂಕುಮಾರ್ಚನೆಯ ಆಯೋಜನೆಯ ಬಗ್ಗೆ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಿದ್ದರು. ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಹಿಂದೂ ಸಮಾಜದ ಮುಖಂಡರುಗಳಾದ ಪ್ರಸಾದ್ ಶೆಟ್ಟಿ ಕುತ್ಯಾರು, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ.ಸುವರ್ಣ, ಲತಾ ಎಸ್ ಆಚಾರ್ಯ ಕುತ್ಯಾರು, ದಿವ್ಯಾ ಶೆಟ್ಟಿಗಾರ್, ಶರ್ಮಿಳಾ, ಮೋಹಿನಿ ಸಿ. ಹೆಗ್ಡೆ, ಇಂದಿರಾ ಆಚಾರ್ಯ, ಶಿವರಾಮ ಭಂಡಾರಿ, ಪ್ರಸಾದ್ ಶೆಟ್ಟಿ ವಳದೂರು, ಜನಾರ್ಧನ ಆಚಾರ್ಯ ಕಳತ್ತೂರು, ನವೀನ್ ಶೆಟ್ಟಿ ಕುತ್ಯಾರು, ಶೈಲೇಶ್ ಕುತ್ಯಾರು, ನಾಗರತ್ನ, ವಿನೋದ, ಗೀತಾ, ಲತಾ ಎಸ್. ಎಂ. ಮುಂತಾದವರು ಭಾಗವಹಿಸಿ, ಮಾಹಿತಿ ನೀಡಿದರು. ದಶಂಬರ 11ರಂದು ಸಭೆ : ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ ಮಹಾಸಂಸ್ಥಾನದ ವ್ಯಾಪ್ತಿಯ ದೇವಸ್ಥಾನಗಳ ಮುಖಂಡರು, ಸಹಟ್ರಸ್ಟ್ , ಸಂಸ್ಥೆಗಳ ಮುಖಂಡರು ಹಾಗೂ ಸ್ಥಳೀಯ ಗ್ರಾಮಗಳ ಹಿಂದೂ ಸಂಘಟನೆಗಳ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರ ಸಭೆಯು ದಶಂಬರ 11ರಂದು ಅಪರಾಹ್ನ 3 ಘಂಟೆಗೆ ಪಡುಕುತ್ಯಾರು ಆನೆಗುಂದಿ ಮಠದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಮಹಾಸಂಸ್ಥಾನದ ಶ್ರೀ ಸರಸ್ವತೀ ಮಾತೃಮಂಡಳಿಯ ಅಧ್ಯಕ್ಷೆ ಸಂಧ್ಯಾಲಕ್ಷ್ಮಣ ಆಚಾರ್ಯ ಉಡುಪಿ, ಬಿ.ಸೂರ್ಯಕುಮಾರ್ ಹಳೆಯಂಗಡಿ, ಅರವಿಂದ ವೈ. ಆಚಾರ್ಯ ಬೆಳುವಾಯಿ , ಬಿ.ಎಂ ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ ನ್ಯಾಯವಾದಿ ಕೆ. ಪ್ರಭಾಕರ ಆಚಾರ್ಯ ಕೋಟೆಕಾರು, ಕೆ. ನಾಗರಾಜ ಆಚಾರ್ಯ ಕಾಡಬೆಟ್ಟು, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ತ್ರಾಸಿ ಸುಧಾಕರ ಆಚಾರ್ಯ,ಗುರುರಾಜ ಕೆ.ಜೆ ಆಚಾರ್ಯ ಮಂಗಳೂರು, ಗಣೇಶ್ ಆಚಾರ್ಯ ಕೆಮ್ಮಣ್ಣು, ಬೆಳುವಾಯಿ ಸುಂದರ ಆಚಾರ್ಯ ಮಂಗಳೂರು, ಜಿ.ಟಿ ಆಚಾರ್ಯ ಮುಂಬಯಿ, ದಿನೇಶ್ ಆಚಾರ್ಯ ಕಿನ್ನಿಗೋಳಿ, ವಿದ್ವಾನ್ ಬ್ರಹ್ಮಶ್ರೀ ಅಕ್ಷಯ ಶರ್ಮಾ ಕಟಪಾಡಿ, ಕೇಶವ ಶರ್ಮಾ ಇರುವೈಲು, ಮನೋಜ್ ಶರ್ಮಾ ಕಟಪಾಡಿ, ಲೋಲಾಕ್ಷ ಶರ್ಮಾ ಕಟಪಾಡಿ, ದಯಾನಂದ ಆಚಾರ್ಯ ತೆಂಕನಿಡಿಯೂರು, ಉಷಾ ಜಿ.ಟಿ ಆಚಾರ್ಯ, ರಮಾ ನವೀನ್ ಆಚಾರ್ಯ ಕಾರ್ಕಳ ಆಶಾ ಎನ್ ಆಚಾರ್ಯ, ಭಾಗವಹಸಿದ್ದರು. ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರ್ ಸ್ವಾಗತಿಸಿ, ಕಾರ್ಯದರ್ಶಿ ಕನ್ಯಾನ ಜನಾರ್ದನ ಆಚಾರ್ಯ ವಂದಿಸಿದರು.
