Updated News From Kaup

ಚಿಕಿತ್ಸೆಗೆ ಸಹಾಯದ ನಿರೀಕ್ಷೆಯಲ್ಲಿ ಪಡುಬಿದ್ರಿ ಧನ್ವಂತರಿ ಮಾರ್ಗದ ನಿವಾಸಿ

Posted On: 15-09-2024 11:40AM

ಪಡುಬಿದ್ರಿ : ಶ್ವಾಸಕೋಶದ ಸಮಸ್ಯೆಯಿಂದ ಉಡುಪಿಯ ಆದರ್ಶ ಹಾಸ್ಪಿಟಲ್ನಲ್ಲಿ ಸುಮಾರು 15 ದಿನಗಳಲ್ಲಿ 5 ಲಕ್ಷ ಬಿಲ್ಲು ಪಾವತಿಸಿ, ಇದೀಗ ಮತ್ತೆ ಚಿಕಿತ್ಸೆಗೆ ಉಡುಪಿಯ ಮಿಷನ್ ಹಾಸ್ಪಿಟಲ್ ನಲ್ಲಿ ಇದ್ದು ಜೀವನ್ಮರಣ ಸ್ಥಿತಿಯಲ್ಲಿರುವ ವ್ಯಕ್ತಿ ಪಡುಬಿದ್ರಿಯ ಧನ್ವಂತರಿ ಮಾರ್ಗದ ನಿವಾಸಿ ಕೃಷ್ಣ ಮೂಲ್ಯ.

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕೋತ್ಸವ 2024 ಸಂಪನ್ನ

Posted On: 14-09-2024 09:29PM

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗವು ಸಂಸ್ಥೆಯ ಇನ್ನೋವೇಶನ್ ಘಟಕ, ಐಎಸ್‌ಟಿಇ ಘಟಕ ಮತ್ತು ಐಇಇಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ನಡೆಸಿದ ರಾಷ್ಟ್ರ ಮಟ್ಟದ 36 ಗಂಟೆಗಳ ಹ್ಯಾಕೋತ್ಸವ 2024 ಇದರ ಸಮಾರೋಪ ಸಮಾರಂಭವು ಕಾಲೇಜಿನ ಆವರಣದಲ್ಲಿ ನಡೆಯಿತು.

ಕಾಪು : ಬಿಜೆಪಿ ವತಿಯಿಂದ ಮೀಸಲಾತಿ ರದ್ದುಪಡಿಸುವ ಹೇಳಿಕೆ ವಿರುದ್ಧ ಪ್ರತಿಭಟನೆ

Posted On: 14-09-2024 09:15PM

ಕಾಪು : ಸೂಕ್ತ ಸಂದರ್ಭದಲ್ಲಿ ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೇರಿಕಾದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ರಾಹುಲ್ ಗಾಂಧಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕಾಪು ಪೇಟೆಯಲ್ಲಿ ಆಯೋಜಿಸಲಾಗಿತ್ತು.

ಸೆ. 15 : ಜೇಸಿಐ ಕಾಪು - ಜೇಸಿ ಸಪ್ತಾಹ - 2024

Posted On: 14-09-2024 08:48PM

ಕಾಪು : ಜೇಸಿಐ ಕಾಪು ಇದರ ಜೇಸಿ ಸಪ್ತಾಹ 2024 ಅಂಗವಾಗಿ ಸೆಪ್ಟೆಂಬರ್ 15, ಡೈಮಂಡ್ಸ್ 7ನೇ ದಿನ ಡ್ಯಾಝಲ್ ವಿದ್ ಡೈಮಂಡ್ಸ್ ಕಾರ್ಯಕ್ರಮದ ಅಂಗವಾಗಿ ಕಾಪುವಿನ ವೀರಭದ್ರ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಮಕ್ಕಳಿಗೆ ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ.

ಕಾಪು : ಟೀಮ್ ಭಗ್ವ ಉಡುಪಿ ಪದಾಧಿಕಾರಿಗಳ ಆಯ್ಕೆ

Posted On: 14-09-2024 07:57PM

ಕಾಪು : ಟೀಮ್ ಭಗ್ವ ಉಡುಪಿ ಇದರ 2024-2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಿನಕರ್ ನಂದಳಿಕೆ, ಉಪಾಧ್ಯಕ್ಷರಾಗಿ ಶ್ರವಣ್ ದೇವಾಡಿಗ, ಕಾರ್ತಿಕ್ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಮಿಥುನ್ ಪೂಜಾರಿ, ಕಾರ್ಯದರ್ಶಿಗಳಾಗಿ ಸುಕೇಶ್ ಅಮೀನ್, ಪವನ್ ದೇವಾಡಿಗ, ಸಹ ಕಾರ್ಯದರ್ಶಿಗಳಾಗಿ ಕಿರಣ್ ಮುಳೂರು, ಕಿಶೋರ್ ಪೂಜಾರಿ, ಕೋಶಾಧಿಕಾರಿಗಳಾಗಿ ಅಪ್ಪು ಕೋಟಿಯನ್, ಸಾತ್ವಿಕ್ ಪೂಜಾರಿ ಆಯ್ಕೆಯಾಗಿದ್ದಾರೆ.

ಸೆ.17 : ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನ ಮಾಡಿದ ವ್ಯಕ್ತಿಯ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

Posted On: 13-09-2024 10:37AM

ಉಡುಪಿ : ಸಮಾನತೆಯನ್ನು ಬೋಧಿಸಿ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳನ್ನು ನಂಬುವ ಕುಲದವರಿಂದಲೇ ನಾರಾಯಣಗುರುಗಳಿಗೆ ಮತ್ತು ಮಹಿಳೆಯೋರ್ವರಿಗೆ ಅವಮಾನವಾದ ಘಟನೆ ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿ ಸಭೆಯಲ್ಲಿ ನಡೆದಿದ್ದು ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ.

ಬೆಳಪು ಕೈಗಾರಿಕಾ ಪಾರ್ಕಿನಲ್ಲಿ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ

Posted On: 11-09-2024 12:43PM

ಕಾಪು : ಬೆಳಪು ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ಪಣಿಯೂರು ಬೆಳಪುವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕುರಿತು ಸಭೆ ಮಂಗಳವಾರ ಎಸ್ ಎನ್ ಕ್ರಯೋಜೆನಿಕ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಜರಗಿತು. ಬೆಳಪು ಕೈಗಾರಿಕಾ ಪ್ರದೇಶದಲ್ಲಿ ಸುಮಾರು 54 ಕೈಗಾರಿಕಾ ಕೇಂದ್ರಗಳು ಪ್ರಾರಂಭಗೊಳ್ಳಲಿದ್ದು ಈಗಾಗಲೇ ಹಲವಾರು ಸಣ್ಣ ಕೈಗಾರಿಕೆಗಳು ಪ್ರಾರಂಭವಾಗಿದ್ದು ಅದಕ್ಕೆ ಪಣಿಯುರಿನಿಂದ ಬೆಳಪುವಿಗೆ ಬರುವ ಸಂಪರ್ಕ ರಸ್ತೆ ತೀರಾ ಹದೆಗಟ್ಟಿದ್ದು ಇದರ ಅಗಲೀಕರಣಗೊಳಿಸಲು ಅಭಿವೃದ್ಧಿಪಡಿಸಲು ಸುಮಾರು 6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯನ್ನು KIADB ಯವರು ಸಿದ್ಧಪಡಿಸಿದ್ದು ಸುಮಾರು 2.70 ಎಕರೆ ಜಾಗ ರೈತರಿಂದ ಭೂಸ್ವಾಧೀನ ಪಡಿಸಿಕೊಂಡಿದ್ದು ಗ್ರಾಮಸ್ಥರಿಗೆ ಪರಿಹಾರ ನೀಡದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರು ತಕ್ಷಣ ಪರಿಹಾರವನ್ನು ರೈತರಿಗೆ ನೀಡಿ ಎಲ್ಲಾ ಸಣ್ಣ ಕೈಗಾರಿಕೆಗಳು ತೀರಾ ನಷ್ಟದಲ್ಲಿ ಇರುವುದರಿಂದ ರಸ್ತೆ ಅಭಿವೃದ್ಧಿಪಡಿಸಿ 6 ಕೋಟಿ ಹೊರೆಯನ್ನ ಕೈಗಾರಿಕಾ ಮಾಲಕರಿಗೆ ಹಾಕುವುದು ಸೂಕ್ತವಲ್ಲ ಇದನ್ನು ಸರಕಾರ, ಸಂಸದರು, ಶಾಸಕರ ಗಮನಕ್ಕೆ ತಂದು ರಸ್ತೆ ಅಭಿವೃದ್ಧಿಗೊಳಿಸಲು ಕಾರ್ಯ ಮಾಡುತ್ತೇನೆ ಎಂದು ತಿಳಿಸಿದರು.

ಪಡುಬಿದ್ರಿ ಸಿಎ ಸೊಸೈಟಿ : ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ; ನವೀಕೃತ ಹವಾನಿಯಂತ್ರಿತ ಶಾಖೆ ಲೋಕಾರ್ಪಣೆ

Posted On: 10-09-2024 11:39AM

ಪಡುಬಿದ್ರಿ : ಇಲ್ಲಿನ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ಇದರ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯು ಉದ್ಘಾಟನೆಗೊಂಡಿತು.

ಜಿಲ್ಲೆಯಲ್ಲಿ ಸಂಘಟನಾ ಶಕ್ತಿಯಿಲ್ಲದ ಕಾಂಗ್ರೆಸ್ಸಿಗರಿಗೆ ಸೇಡಿನ ರಾಜಕೀಯವೊಂದೇ ಶ್ರೀ ರಕ್ಷೆಯಾಗಿದೆ : ಶಿಲ್ಪಾ ಜಿ ಸುವರ್ಣ

Posted On: 09-09-2024 08:21PM

ಉಡುಪಿ : ಜಿಲ್ಲೆಯ ಕುಂದಾಪುರದ ಶಿಕ್ಷಕರಾದ ಬಿ ಜಿ ರಾಮಕೃಷ್ಣ ಅವರಿಗೆ ಅಂತಿಮಗೊಳಿಸಲಾಗಿದ್ದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆಹಿಡಿಯುವ ಮೂಲಕ ಮತೀಯವಾದಿಗಳ ಆಶಯಗಳಿಗೆ ಪೂರಕವಾಗಿ ನಡೆದುಕೊಂಡಂತಹ ರಾಜ್ಯ ಕಾಂಗ್ರೆಸ್ ಸರಕಾರದ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾವು ಪ್ರತಿಭಟನೆಯನ್ನು ನಡೆಸಿತ್ತು. ಪ್ರತಿಭಟನೆಯನ್ನು ನಡೆಸಿದಂತಹ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಸಹಿತ ನಮ್ಮ ಪಕ್ಷದ 11 ಮಂದಿ ಪದಾಧಿಕಾರಿಗಳ ಮೇಲೆ ರಾಜ್ಯ ಸರಕಾರದ ಒತ್ತಡಕ್ಕೆ ಮಣಿದು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿರುವುದು ಖಂಡನೀಯ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೆ ಸುವರ್ಣ ತಿಳಿಸಿದ್ದಾರೆ.

ಪಡುಬಿದ್ರಿ ರೋಟರಿ, ಇನ್ನರ್‌ವೀಲ್ ಕ್ಲಬ್ - ಮುದ್ದು ಕೃಷ್ಣ ಮತ್ತು ಯಶೋಧ ಕೃಷ್ಣ ಸ್ಪರ್ಧೆ

Posted On: 08-09-2024 08:21AM

ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಮತ್ತು ಇನ್ನರ್‌ವೀಲ್ ಕ್ಲಬ್ ಪಡುಬಿದ್ರಿ ಇವರ ಸಂಯುಕ್ತಾಶ್ರಯದಲ್ಲಿ "ಮುದ್ದು ಕೃಷ್ಣ" ಮತ್ತು "ಯಶೋಧ ಕೃಷ್ಣ" ಸ್ಪರ್ಧೆಯನ್ನು ಪಡುಬಿದ್ರಿಯ ಸಹಕಾರ ಸಂಘದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಉದ್ಘಾಟಿಸಿದರು.