Updated News From Kaup
ಕಾಪು ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಎಸ್. ಶೆಟ್ಟಿ ಆಯ್ಕೆ
Posted On: 29 Oct 2024, 07:15 AM
ಕಾಪು : ಇಲ್ಲಿನ ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ಮನೋಹರ್ ಎಸ್. ಶೆಟ್ಟಿ ಆಯ್ಕೆಯಾಗಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಸೋಮವಾರ ನಡೆದ ನೂತನ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಸರ್ವಾನು ಮತದಿಂದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜರುಗಿತು. ನಿರ್ಮಾಣ ಕ್ಷೇತ್ರದ ಪ್ರಮುಖ ಉದ್ಯಮಿಯಾಗಿರುವ ಮನೋಹರ್ ಎಸ್. ಶೆಟ್ಟಿ, ಔಷಧೋದ್ಯಮ ಹಾಗೂ ಪ್ರವವಾಸೋದ್ಯಮ ಕ್ಷೇತ್ರದಲ್ಲೂ ತೊಡಗಿಕೊಂಡಿದ್ದು, ಅಸೋಸಿಯೇಷನ್ ಆಫ್ ಕೋಸ್ಟಲ್ ಟೂರಿಸಂನ ಜಿಲ್ಲಾಧ್ಯಕ್ಷರಾಗಿದ್ದಾರೆ. ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ, ಕಾಪು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಿತಿಯ ಇತರ ಸದಸ್ಯರಾಗಿ ರವಿ ಕುಮಾರ್ ಭಟ್, ಅಶ್ವಿನಿ ಎಸ್. ಅಂಚನ್, ಶಾಂತಲತಾ ಎಸ್. ಶೆಟ್ಟಿ, ನಾಗರಾಜ ಎಸ್., ಶಶಿಧರ ಎನ್. ಸುವರ್ಣ, ಸದಾನಂದ ಎ.ಸುವರ್ಣ, ಶ್ರೀಕಾಂತ್ ಸೇರಿಗಾರ್ ಕಾಪು ಹಾಗೂ ದೇವಸ್ಥಾನದ ಪ್ರಧಾನ ಅರ್ಚಕ ಆಯ್ಕಯಾಗಿದ್ದಾರೆ.
ಪಡುಬಿದ್ರಿ : ರಾಗ್ ರಂಗ್ ಕಲ್ಚರಲ್ ಹಾಗೂ ಸೋರ್ಟ್ಸ್ ಕ್ಲಬ್ - ಗೂಡುದೀಪ ಸ್ಪರ್ಧೆ ; ಬಹುಮಾನ ವಿತರಣೆ
Posted On: 29 Oct 2024, 07:13 AM
ಪಡುಬಿದ್ರಿ : ಪಡುಬಿದ್ರಿಯ ರಾಗ್ ರಂಗ್ ಕಲ್ಚರಲ್ ಹಾಗೂ ಸೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಪಡುಬಿದ್ರಿಯ ಕೆಪಿಎಸ್ ಶಾಲಾ ಮೈದಾನದಲ್ಲಿ ದ. ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಸಾಂಪ್ರದಾಯಿಕ ಹಾಗೂ ಆಧುನಿಕ ಗೂಡುದೀಪ ಸ್ಪರ್ಧೆ ನಡೆಯಿತು. ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಡಿ. ಆರ್. ರಾಜುರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿ, ಪಡುಬಿದ್ರಿಯ ರಾಗ್ ರಂಗ್ ಸಂಸ್ಥೆ ಅನೇಕ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಗೂಡುದೀಪಗಳ ಸ್ಪರ್ಧೆಯನ್ನೂ ಆಯೋಜಿಸಿ ರಾಷ್ಟ್ರೀಯ ಸಮಗ್ರತೆ, ಭಾವೈಕ್ಯತೆಯ ಸಂಕೇತದೊಂದಿಗೆ ಸಾಂಸ್ಕೃತಿಕವಾಗಿ ಗ್ರಾಮದ ಜನರೆಲ್ಲರೂ ಸಂತೋಷಿತರಾಗುವಂತೆ ಮಾಡಿದ್ದಾರೆ. ದೀಪಗಳ ಹಬ್ಬ ದೀಪಾವಳಿಗೆ ಅದರದ್ದೇ ಆದ ವಿಶಿಷ್ಟ ಮಹತ್ವವಿರುವುದಾಗಿ ಹೇಳಿದರು. ಸನ್ಮಾನ : ಭಾರತೀಯ ನೌಕಾದಳದ ನಿವೃತ್ತ ಗುಣವಂತ ನಿಯಂತ್ರಣ ಅಧಿಕಾರಿ ನಟರಾಜ್ ಪಿ. ಎಸ್ರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಮುಂಬಯಿಯ ಶಿವಾಯ ಫೌಂಡೇಶನ್ನ ಗೌರವಾಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ, ಹಾಜಿ ಗುಲಾಂ ಮಹಮ್ಮದ್, ನವೀನ್ ಎನ್. ಶೆಟ್ಟಿ, ಪಿ. ಕೃಷ್ಣ ಬಂಗೇರ, ರಮೀಝ್ ಹುಸೈನ್, ಶಿವಕುಮಾರ್ ಕರ್ಜೆ, ಗೀತಾ ಅರುಣ್, ರಾಜೇಶ್ವರಿ ಅವಿನಾಶ್ ಮಾತನಾಡಿ, ಶುಭ ಹಾರೈಸಿದರು. ವೇದಿಕೆಯಲ್ಲಿ ಅತಿಥಿಗಳಾಗಿ ಪಡುಬಿದ್ರಿ ಗ್ರಾ. ಪಂ. ಉಪಾಧ್ಯಕ್ಷ ಹೇಮಚಂದ್ರ, ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ ಪಲ್ಲವಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗಣೇಶ್ ಎನ್. ಕೋಟ್ಯಾನ್, ಸುನಿಲ್ ಕುಮಾರ್, ವೈ. ಸುಕುಮಾರ್, ದಿನೇಶ್ ಕೋಟ್ಯಾನ್ ಪಲಿಮಾರು, ನವೀನ್ ಸಾಲ್ಯಾನ್ ಪೆರ್ಡೂರು, ಎಂ. ಎಸ್. ಶಾಫಿ, ಕರುಣಾಕರ ಪೂಜಾರಿ, ಪ್ರಕಾಶ್ ಶೆಟ್ಟಿ ಬಜಗೋಳಿ, ನಮೃತಾ ಮಹೇಶ್, ರಚನ್ ಸಾಲ್ಯಾನ್ ಉಪಸ್ಥಿತರಿದ್ದರು. ರಾಗ್ ರಂಗ್ ಸಂಸ್ಥೆಯ ಅಧ್ಯಕ್ಷ ವಿಶ್ವಾಸ್ ಅಮೀನ್ ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರ್ವಹಿಸಿದರು. ಅವಿತಾ ಪಡುಬಿದ್ರಿ ವಂದಿಸಿದರು. ಉಭಯ ಜಿಲ್ಲೆಗಳಿಂದ 35 ಗೂಡುದೀಪ ಸ್ಪರ್ಧಾಳುಗಳು ಭಾಗವಹಿಸಿದ್ದರು. ರೋಹಿತ್ ಕುಮಾರ್ ಪಜಿರ್, ಮನೋಜ್ ಕನಾಪಡಿ ಮತ್ತು ರಮಾಂಜಿ ಉಡುಪಿ ತೀರ್ಪುಗಾರರಾಗಿದ್ದರು. ಸಾಂಪ್ರದಾಯಿಕ ವಿಭಾಗ : ರಕ್ಷಿತ್ ಕುಮಾರ್ ಮಂಗಳೂರು (ಪ್ರಥಮ), ಆದಿತ್ಯ ಗುರುಪುರ (ದ್ವಿತೀಯ), ದಿಯಾನ್ ಉಡುಪಿ(ತೃತೀಯ). ಆಧುನಿಕ ವಿಭಾಗ : ವಿಠಲ್ ಭಟ್ ಮಂಗಳೂರು (ಪ್ರಥಮ), ಜಗದೀಶ್ ಅಮೀನ್ ಸುಂಕದಕಟ್ಟೆ (ದ್ವಿತೀಯ), ಉಮೇಶ್ ಮಂಗಳೂರು (ತೃತೀಯ) ಬಹುಮಾನಗಳನ್ನು ಗಳಿಸಿದ್ದಾರೆ.
ಡಾ. ವಿಜಯ್ ನೆಗಳೂರು ರವರಿಗೆ ಜೇಸಿ ಟೊಬಿಪ್ ಪ್ರಶಸ್ತಿ
Posted On: 29 Oct 2024, 05:21 AM
ಕಾಪು : ಜೇಸಿಐ ಭಾರತ ವಲಯ 15 ರ ವಲಯ ಸಮ್ಮೇಳನ "ಸಮ್ಮಿಲನ " 2024 ದಲ್ಲಿ ವಲಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಜೆಸಿಐ ಇಂಡಿಯಾ ದಿಂದ ಕೊಡಲ್ಪಡುವ ಮಹೋನ್ನತ ವೃತ್ತಿಪರತೆಯ ಟೋಬಿಪ್ ಪ್ರಶಸ್ತಿಯನ್ನು ವಲಯಾಧ್ಯಕ್ಷ ಗಿರೀಶ್ ಎಸ್.ಪಿ ಯವರು ಜೇಸಿಐಉಡುಪಿ ಇಂದ್ರಾಳಿಯ ಸದಸ್ಯ, ಖ್ಯಾತ ವೈದ್ಯರಾದ ಮತ್ತು ರಾಷ್ಟ್ರೀಯ ತರಬೇತುದಾರ ಡಾ. ವಿಜಯ್ ನೆಗಳೂರುರವರಿಗೆ ಪ್ರದಾನ ಮಾಡಿದರು. ಈ ಸಂದಭ೯ದಲ್ಲಿ ಘಟಕಾಧ್ಯಕ್ಷೆ ಡಾ. ಚಿತ್ರಾ ನೆಗಳೂರು, ವಲಯಾಡಳಿತ ಮಂಡಳಿ ಸದಸ್ಯರು ಘಟಕದ ಪೂವಾ೯ದ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು.
ಕುಲಾಲ ಸಂಘ ಹೆಬ್ರಿ : ದ್ವಿತೀಯ ವರ್ಷದ ಕ್ರೀಡಾಕೂಟ ಸಂಪನ್ನ
Posted On: 29 Oct 2024, 05:17 AM
ಉಡುಪಿ : ಕುಲಾಲ ಸಂಘ (ರಿ.) ಹೆಬ್ರಿ ತಾಲೂಕು ವತಿಯಿಂದ ನಡೆದ ದ್ವಿತೀಯ ವರ್ಷದ ಕ್ರೀಡಾಕೂಟವು ಹೆಬ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಉಪಾಧ್ಯಕ್ಷರಾದ ಅಣ್ಣಪ್ಪ ಕುಲಾಲ್ ಚಾರ ಮಾತನಾಡಿ ಕ್ರೀಡಾ ಕೂಟವು ಮತ್ತು ನವೆಂಬರ್ 17 ರಂದು ನಡೆಯುವ ಮಹಾಸಭೆಯು ಉತ್ತಮ ರೀತಿಯಲ್ಲಿ ನಡೆಯಲಿ ಎಂದು ಹಾರೈಸಿದರು. ಗೌರವಾದ್ಯಕ್ಷರದ ಬೋಜ ಕುಲಾಲ್ ಬೆಳ್ಳಂಜೆ ಮಾತನಾಡಿ ಸಂಘದ ಅಭಿವೃದ್ಧಿ ಆದರೆ ಸಮಾಜವು ಅಭಿವೃದ್ಧಿ ಹೊಂದುತ್ತದೆ ಎಂದು ತಿಳಿಸಿದರು. ಅಧ್ಯಕ್ಷರಾದ ಸುರೇಂದ್ರ ವರಂಗ ಮಾತನಾಡಿ ಕ್ರೀಡಾ ಕೂಟವು ಸಂಘದ ಭವಿಷ್ಯಕ್ಕಾಗಿ ನಮ್ಮ ಸಮಾಜದ ಐಕ್ಯತೆಗಾಗಿ ಎಂದು ಹೇಳಿದರು. ಶ್ರೀರಾಮ್ ಜುವೆಲ್ಲರ್ ಮಾಲಕರಾದ ನಾರಾಯಣ್ ಕೆ ಕುಲಾಲ್, ಪ್ರಧಾನ ಕಾರ್ಯದರ್ಶಿ ಸುದರ್ಶನ್ ಕುಲಾಲ್, ಕ್ರೀಡಾ ಕಾರ್ಯದರ್ಶಿ ಪ್ರಸನ್ನ ಕುಲಾಲ್, ಕೋಶಾಧಿಕಾರಿ ಜಯರಾಮ್ ಹಾಂಡ, ಮಹಿಳಾ ಘಟಕದ ಅದ್ಯಕ್ಷರಾದ ಸುಮಿತ್ರಾ ಕುಲಾಲ್, ಮಹಿಳಾ ಘಟಕದ ಕ್ರೀಡಾ ಕಾರ್ಯದರ್ಶಿ ಅನುಷಾ ಕುಲಾಲ್ ಗುಡ್ಡೆಯಂಗಡಿ, ಹೆಬ್ರಿ ತಾಲೂಕು ಕುಲಾಲ ಸಮಾಜದ ಹಿರಿಯ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು. ರಚಿತಾ ಕುಲಾಲ್ ಸ್ವಾಗತಿಸಿದರು. ಸುಕೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.
ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಕರ್ನಾಟಕ ಇದರ ನೂತನ ರಾಜ್ಯಾಧ್ಯಕ್ಷರಾಗಿ ರಚನ್ ಸಾಲ್ಯಾನ್ ಹೆಜಮಾಡಿ ಆಯ್ಕೆ
Posted On: 27 Oct 2024, 04:03 PM
ಪಡುಬಿದ್ರಿ : ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ( ರಿ.) ಕರ್ನಾಟಕ ಇದರ ನೂತನ ರಾಜ್ಯಾಧ್ಯಕ್ಷರಾಗಿ ಯುವ ನಾಯಕ ರಚನ್ ಸಾಲ್ಯಾನ್ ಹೆಜಮಾಡಿ ಆಯ್ಕೆಯಾಗಿರುತ್ತಾರೆ. ಇವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ( ರಿ.) ಕರ್ನಾಟಕ ಇದರ ವಿವಿಧ ಜಿಲ್ಲೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಎನ್.ಐ.ಟಿ.ಕೆ ಸೀಮನ್ಸ್ ಕೇಂದ್ರದ ಒಡಂಬಡಿಕೆ
Posted On: 27 Oct 2024, 12:35 PM
ಶಿರ್ವ : ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗವು ಸುರತ್ಕಲ್ ಎನ್.ಐ.ಟಿ.ಕೆ ಸೀಮನ್ಸ್ ಕೇಂದ್ರದೊಂದಿಗೆ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಪೂರಕವಾಗಿ ಒಂದು ಒಡಂಬಡಿಕೆಗೆ ಸಹಿ ಹಾಕಲಾಯಿತು. ಸುರತ್ಕಲ್ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ ಸೀಮನ್ಸ್ ಕೇಂದ್ರವನ್ನು ಸ್ಥಾಪಿಸಿದೆ. ವಿದ್ಯಾರ್ಥಿಗಳಿಗೆ ಪ್ರಸ್ತುತ ಕೈಗಾರಿಕೆಗಳಲ್ಲಿ ಉದ್ಯೋಗ ಮಾಡಲು ಬೇಕಾದ ಸೂಕ್ತ ಕೌಶಲ್ಯಗಳ ತರಬೇತಿ ನೀಡುವುದು ಈ ಕೇಂದ್ರದ ಉದ್ದೇಶವಾಗಿದೆ. ಪ್ರಸ್ತುತ ಈ ಕೇಂದ್ರದಲ್ಲಿ ಅತ್ಯಾಧುನಿಕ ಪ್ರಯೋಗಾಲಯಗಳಾದ ಪ್ರಾಡಕ್ಟ್ ಡಿಜಿಟಲೈಜೇಷನ್ ಲ್ಯಾಬ್, ಪ್ರೋಸಸ್ ಡಿಜಿಟಲೈಜೇಷನ್ ಲ್ಯಾಬ್, ಫ್ಯಾಕ್ಟರಿ ಆಟೋಮೇಶನ್ ಲ್ಯಾಬ್, ಮೆಕಟ್ರಾನಿಕ್ಸ್ ಲ್ಯಾಬ್, ಪ್ರೋಟೋಟೈಪ್ ಲ್ಯಾಬ್ ಮತ್ತು ಅಡ್ವಾನ್ಸ್ ಅನಾಲಿಸಿಸ್ ಲ್ಯಾಬ್ಗಳು ಕಾರ್ಯನಿರ್ವಹಿಸುತ್ತಿವೆ. ಈ ಬಡಂಬಡಿಕೆಯಿ೦ದ ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿದ್ಯಾರ್ಥಿಗಳಿಗೆ ವಿವಿಧ ಅತ್ಯಾಧುನಿಕ ಮೆಕ್ಯಾನಿಕಲ್ ಸಾಫ್ಟ್ವೇರ್ ಕೋರ್ಸ್ ಗಳನ್ನು ಕಲಿಯಲು ಮತ್ತು ಇಂಟರ್ನ್ಪ್ ತರಬೇತಿ ಪಡೆಯಲು ಅನುಕೂಲವಾಗಿದೆ. ಒಡಂಬಡಿಕೆಗೆ ಸಹಿ ಹಾಕುವ ಸಂದರ್ಭದಲ್ಲಿ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ರಾಜ ಯತೀಶ್ ಯಾದವ್, ವಿಭಾಗದ ಪ್ರಾಧ್ಯಾಪಕರಾದ ಡಾ. ಭರತ್ ಕೆ ಭಟ್, ಸೀಮನ್ಸ್ ಕೇಂದ್ರದ ಸಂಚಾಲಕರಾದ ಅರುಣಾಚಲಂ ಮತ್ತು ಕೇಂದ್ರದ ವಿದ್ಯಾರ್ಥಿ ಸಂಚಾಲಕರಾದ ಆರೀ ರಾಯ್ಸನ್ಟ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರಕ್ಕೆ ತಂತ್ರಜ್ಞಾನ ನೆರವು ಒದಗಿಸುವ ಪುಣೆಯ 3ಡಿ ಇಂಜಿನಿಯರಿಂಗ್ ಆಟೋಮೇಶನ್ ಸಂಸ್ಥೆಯ ವ್ಯವಸ್ಥಾಪಕರಾದ ಹೃಷಿಕೇಶ್ ಕೋಲಪ್ಕರ್ ಆನ್ಲೈನ್ ಮೂಲಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ಮಾಡಿಕೊಂಡ ಒಡಂಬಡಿಕೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಮತ್ತು ಉಪಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್ ಅಭಿನಂದಿಸಿದ್ದಾರೆ.
ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ : ಉಡುಪಿ ಜಿಲ್ಲಾ ಚುನಾವಣೆ ; ಪದಗ್ರಹಣ ಕಾರ್ಯಕ್ರಮ
Posted On: 27 Oct 2024, 12:25 PM
ಉಡುಪಿ : ವಿದ್ಯಾರ್ಥಿಗಳು ದೇಶದ ಭವಿಷ್ಯ ಸಾಮಾಜಿಕ ನ್ಯಾಯ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವವನ್ನು ಬೆಳೆಸುವ ಕೆಲಸವನ್ನು ಹಲವಾರು ವರ್ಷಗಳಿಂದ ಸರ್ವ ಕಾಲೇಜು ವಿದ್ಯಾರ್ಥಿ ಸಂಘಟನೆ ನಡೆಸುತ್ತಿದೆ ಈ ಸಂಘಟನೆಯನ್ನು ಪ್ರತಿಯೊಂದು ಕಾರ್ಯಕ್ರಮ ಗಳಲ್ಲಿ ಕೂಡ ನಾನು ಭಾಗವಹಿಸುತ್ತಿದ್ದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಸುವ ಕೆಲಸ ನಡೆಯಲಿ ಎಂದು ಶ್ರೀ ಶ್ರೀ ಶ್ರೀ ಈಶ ವಿಠ್ಠಲ್ ದಾಸ ಸ್ವಾಮೀಜಿ ಹೇಳಿದರು. ಅವರು ತುಳುಜಾ ಭವಾನಿ ಸಭಾ ಭವನ ಕುಂಜಿಬೆಟ್ಟು ಉಡುಪಿಯಲ್ಲಿ ಜರಗಿದ ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ಕರ್ನಾಟಕ (ರಿ.) ಇದರ ಉಡುಪಿ ಜಿಲ್ಲಾ 2024-25 ನೇ ಸಾಲಿನ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರಸಾದ್ ರಾಜ್ ಕಾಂಚನ್ ಅವರು ಪಕ್ಷಾತೀತವಾಗಿ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ತುಂಬಿಸುವ ಕೆಲಸ ಮಾಡುತ್ತಿರುವ ಸಂಘಟನೆಯ ಕಾರ್ಯ ಶ್ಲಾಘನಿಯ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ವಿಜಯ ಕೊಡವೂರು,ಪ್ರಕಾಶ್ ಶೆಟ್ಟಿ ಬಜಗೋಳಿ, ನವೀನ್ ಚಂದ್ರ ಶೆಟ್ಟಿ, ಸಂತೋಷ ಶೆಟ್ಟಿ ಪಡುಬಿದ್ರಿ, ಮನೋಜ್ ಕೋಡಿಕೆರೆ, ವಿಶ್ವಾಸ ವಿ ಅಮೀನ್, ಕರುಣಾಕರ ಶೆಟ್ಟಿ ಮುದ್ರಾಡಿ, ತುಳು ಕೂಟದ ಪುಣೆ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ, ಸುಕುಮಾರ್ ಎಣ್ಣೆ ಹೊಳೆ, ರಮೇಶ್ ಶೆಟ್ಟಿ ದುಬೈ, ಆಶಿಕ್ ಶೆಟ್ಟಿ ಮುದ್ರಾಡಿ, ರೂಪೇಶ್ ಕಲ್ಮಾಡಿ, ಚಲನಚಿತ್ರ ನಟ ಸೂರ್ಯೋದಯ ಪೆರಂಪಲ್ಲಿ, ಚಲನಚಿತ್ರ ನಟಿಯರಾದ ಚಿರಶ್ರೀ ಅಂಚನ್, ವೆನ್ಸಿಟಾ ಡಯಾಸ್, ಸಿಂಚನ ಪ್ರಕಾಶ್, ಸ್ಪೂರ್ತಿ ಡಿ ಶೆಟ್ಟಿ, ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಸಂಘಟನೆ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಸ್ವಾಗತಿಸಿದರು. ಸಂಘಟನೆ ಸಂಸ್ಥಾಪಕರಾದ ಶಿವಕುಮಾರ್ ಕರ್ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು. ವಿದ್ಯಾರ್ಥಿಗಳ ವಿಜಯೋತ್ಸವ ಮೆರವಣಿಗೆಯು ನಡೆಯಿತು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಕುಣಿತ ಭಜನಾ ಸ್ಪರ್ಧೆ
Posted On: 27 Oct 2024, 11:44 AM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅ.29ರಂದು ನಡೆಯಲಿರುವ ವಾಗೀಶ್ವರಿ ಪೂಜೆ ಹಾಗೂ ನವದುರ್ಗಾ ಲೇಖನ ಯಜ್ಞದ ಲೇಖನಕ್ಕೆ ಚಾಲನೆ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಮೂರು ಜಿಲ್ಲೆಗಳ 15 ತಂಡಗಳಿಂದ ನಡೆದ ಕುಣಿತ ಭಜನಾ ಸ್ಪರ್ಧೆಯನ್ನು ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಕಾಪು ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಈಗಾಗಲೇ 108 ತಂಡಗಳಿಂದ ಭಜನೆ ನಡೆದಿದೆ. ಮುಂದೆಯೂ ಶ್ರೀ ದೇವಳದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು. ಶ್ರೀ ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ರಘುಪತಿ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿದರು. ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ರವಿಕಿರಣ್, ಉಪಾಧ್ಯಕ್ಷ ಮಾಧವ ಆರ್. ಪಾಲನ್, ಶ್ರೀ ನವದುರ್ಗಾ ಲೇಖನ ಯಜ್ಞ ಸಮತಿ ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಕೋಶಾಧಿಕಾರಿ ವಿಶ್ವನಾಥ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಭಜನೆಯ ಉಸ್ತುವಾರಿಗಳಾದ ಸಂತೋಷ್ ಶೆಟ್ಟಿ ಮಂಗಳೂರು, ರಮೇಶ್ ಕಲ್ಮಾಡಿ ಮತ್ತಿತರರು ಉಪಸ್ಥಿತರಿದ್ದರು. ವಿದ್ವಾನ್ ದಾಮೋದರ ಶರ್ಮ ಬಾರ್ಕೂರು ಮತ್ತು ಮನೋಜ್ ವಾಮಂಜೂರು ನಿರೂಪಿಸಿದರು.
ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ನಮ್ಮ ಸಮುದಾಯಕ್ಕೆ ಸಂದ ಗೌರವ : ಬಾಬು ಕೊರಗ
Posted On: 27 Oct 2024, 08:27 AM
ಕಾಪು : ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲ್ಲೂಕು ಘಟಕದ ವತಿಯಿಂದ ನವೆಂಬರ್ 16ರಂದು ಫಲಿಮಾರಿನಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಬಾಬು ಕೊರಗ ಅವರನ್ನು ಅವರ ಮೂಲ ಮನೆ ಪಾಂಗಾಳದ ಮಠದ ಕಾಡು, ಮಂಡೇಡಿಯ ಕುಡ್ಡು ಕೊರಗ ಅವರ ನಿವಾಸದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಜಂಟಿಯಾಗಿ ಸಮ್ಮೇಳದ ಆಹ್ವಾನ ಪತ್ರಿಕೆಯನ್ನು ನೀಡಿ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಬಾಬು ಕೊರಗ, ಸಮುದಾಯಗಳಲ್ಲಿ ಸಾವಿರ ವರ್ಷದ ಇತಿಹಾಸವಿರುವ ಸಮುದಾಯ ಕೊರಗ ಸಮುದಾಯ. ಅಂತಹ ಸಮುದಾಯದ ತನ್ನನ್ನು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗೆ ಗುರುತಿಸಿರುವುದು ನಮ್ಮ ಸಮುದಾಯಕ್ಕೆ ಸಂದ ಗೌರವ ಎಂದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು. ಈ ಸಂದರ್ಭದಲ್ಲಿ ಬಾಬು ಕೊರಗ ಅವರ ಕುಟುಂಬದ ಹಿರಿಯರಾದ ಕುಡ್ಡು ಕೊರಗರವರನ್ನು ಸನ್ಮಾನಿಸಲಾಯಿತು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಜಿಲ್ಲಾ ಸಭಾಭವನ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಕೆ.ದೇವದಾಸ್ ಹೆಬ್ಬಾರ್, ಸಮಾ ಜದ ಪ್ರಮುಖರಾದ ಸುಂದರ ಟಿ., ಜಿಲ್ಲಾ ಸಮಿತಿಯ ನರಸಿಂಹಮೂರ್ತಿ, ಸಮಿತಿಯ ಸದಸ್ಯ ಅನಂತ ಮೂಡಿತ್ತಾಯ, ಕೊರಗ ಸಮುದಾಯದ ಪ್ರಮುಖರಾದ ರಮೇಶ್ ಬಜ್ಪೆ ಉಪಸ್ಥಿತರಿದ್ದರು. ಕ.ಸಾ.ಪ. ಕಾಪು ತಾಲ್ಲೂಕು ಸಮಿತಿಯ ಸದಸ್ಯರಾದ ಸುಧಾಕರ ಪೂಜಾರಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಕೆ.ಆರ್.ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ವಂದಿಸಿದರು.
ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ಅರಣ್ಯಾಧಿಕಾರಿಯ ಮಾತುಗಳು ಖಂಡನೀಯ : ಪ್ರವೀಣ್ ಪೂಜಾರಿ
Posted On: 27 Oct 2024, 07:09 AM
ಉಡುಪಿ : ಅರಣ್ಯಾಧಿಕಾರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಜೀವ ಪೂಜಾರಿ ಕಾಣಿಯೂರು ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅವಮಾನದ ಮಾತುಗಳನ್ನಾಡಿರುವುದು ಖಂಡನೀಯ ಎಂದು ಬಿಲ್ಲವ ಯುವ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಹೇಳಿಕೆ ನೀಡಿದ್ದಾರೆ. ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಸಾಮಾಜಿಕ ಸ್ವಾಸ್ಥ್ಯದ ಕುರಿತು ಕಾಳಜಿ ವಹಿಸಬೇಕಾಗಿದೆ. ಸುಖಾಸುಮ್ಮನೆ ಮನಸ್ಸಿಗೆ ಬಂದಂತೆ ಆಡಿಕೊಂಡರೆ ಅದು ಶೋಭೆಯಲ್ಲ. ಹೆಣ್ಣು ಮಕ್ಕಳು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದನ್ನೆ ಗುರಿಯಾಗಿಸಿ ಮಾತನ್ನಾಡಿದ ಸಂಜೀವ ಪೂಜಾರಿಯವರು ಇನ್ನು ಮುಂದಾದರೂ ತನ್ನನ್ನು ತಾನು ತಿದ್ದಿಕೊಳ್ಳುವುದು ಕ್ಷೇಮವೆನಿಸುತ್ತದೆ. ಸರ್ಕಾರಿ ಅಧಿಕಾರಿ ಸಂಜೀವ ಪೂಜಾರಿಯವರ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಖಂಡಿಸುತ್ತದೆ.
