Updated News From Kaup

ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಸನ್ಮಾನ

Thumbnail
Posted On: 20 Oct 2024, 09:32 AM

ಕಾಪು : ಸಮಾಜ ಸೇವೆಗಾಗಿ ಇತ್ತೀಚೆಗೆ ಗೌರವ ಡಾಕ್ಟರೆಟ್ ಪದವಿ ಪಡೆದ ಕಾಪುವಿನ ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಹಜ್ರತ್ ಸಾದಾತ್ ವೃದ್ದಾಶ್ರಮ ರವರ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ವೃದ್ದಾಶ್ರಮದ ಸ್ಥಾಪಕ ಅಧ್ಯಕ್ಷರಾದ ಮೊಹಮ್ಮದ್ ಶಾಫಿ ಮದಾರಿಯವರ ನೇತೃತ್ವದಲ್ಲಿ ಆಶ್ರಮದ ಖಾಸಗಿ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಡಾ.ಫಾರೂಕ್ ಮೊದಲು 2 ಬಾರಿ ಈ ವೃದ್ದಾಶ್ರಮಕ್ಕೆ ಭೇಟಿ ನೀಡಿದ್ದೆ ಈ ರೀತಿಯ ಸೇವೆಯ ಜೊತೆಗೆ ತಾವು ಮಾಡುತ್ತಿರುವ ಸಮಾಜ ಸೇವೆ ದೇವರು ಮೆಚ್ಚುವಂತದ್ದು ತಮ್ಮ ಸೇವೆ ನಿರಂತರವಾಗಿ ಮುಂದುವರೆಯಲಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವೃದ್ದಾಶ್ರಮ ಅಧ್ಯಕ್ಷರಾದ ನಾಸಿರ್ ಕೊಂಬಗುಡ್ಡೆ, ಮುಸ್ತಾಕ್ ಬೆಳಪು, ಆಶ್ರಮದ ಕಾರ್ಯದರ್ಶಿ ಅಶಿಕ್, ಜಲೀಲ್ ರಝಕ್ (ಕೊಪ್ಪ )ಚಂದ್ರನಗರ ಮತ್ತಿತರರು ಉಪಸ್ಥಿತರಿದ್ದರು.

ಕಾಪು ಹೊಸಮಾರಿಗುಡಿ : ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವದಿನಗಳ ಪರ್ಯಂತ ಭಜನಾ ಸಂಕೀರ್ತನೆ

Thumbnail
Posted On: 19 Oct 2024, 10:43 AM

ಕಾಪು : ಇಲ್ಲಿನ ಮಾರಿಯಮ್ಮನ ಸನ್ನಿದಾನದಲ್ಲಿ ಪ್ರತಿಷ್ಠಾ ಬ್ರಹ್ಮಕಳಶೋತ್ಸವಕ್ಕೆ ಪೂರ್ವಭಾವಿಯಾಗಿ ನವದುರ್ಗಾ ಲೇಖನವನ್ನು ಬರೆಯುವ ಮಹಾ ಸಂಕಲ್ಪವನ್ನು ಲೋಕಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯ ವೃದ್ಧಿಗಾಗಿ ಆಯೋಜಿಸಲಾಗಿದ್ದು ಇದರ ಪ್ರಯುಕ್ತ ಅಕ್ಟೋಬರ್ 20 ರಿಂದ ಮೊದಲ್ಗೊಂಡು 28 ರ ವರೆಗೆ ನವದಿನಗಳ ಪರ್ಯಂತ ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನೊಳಗೊಂಡ 108 ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಅ. 26, ಶನಿವಾರ ಸಾಯಂಕಾಲ 6 ಗಂಟೆಯಿಂದ ಆಹ್ವಾನಿತ ತಂಡಗಳ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಅಕ್ಟೋಬರ್ 29ರ ಮಂಗಳವಾರದಂದು ವಾಗೀಶ್ವರಿ ಪೂಜೆಯ ಮೂಲಕ ಪೂಜ್ಯ ಪೇಜಾವರ ಶ್ರೀಗಳು ನವದುರ್ಗಾ ಲೇಖನವನ್ನು ಬರೆದು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಧಾರ್ಮಿಕ ಸಭಾಕಾರ್ಯಕ್ರಮವನ್ನು ನಡೆಸಿ ನವದುರ್ಗಾ ಲೇಖನದ ಪುಸ್ತಕವನ್ನು ಭಕ್ತಾದಿಗಳಿಗೆ ನೀಡಲಾಗುವುದು ಎಂದು ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಕೆ. ರಘುಪತಿ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 19 (ಇಂದು) : ದೇವದಾಸ್ ಶೆಟ್ಟಿಗೆ ಜಿಲ್ಲಾ ಕ.ಸಾ.ಪ. ಪುರಸ್ಕಾರ

Thumbnail
Posted On: 19 Oct 2024, 10:39 AM

ಕಾಪು : ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ ರುವಾರಿ, ನೆಲಮೂಲ ಪಾರಂಪರಿಕ ಹಿನ್ನೆಲೆಯ ಕೊರಗ ಸಮುದಾಯದ ಶ್ರೇಯೋಭಿವೃದ್ಧಿಗೆ ತನ್ನ ಸಮಸ್ತ ಜೀವನವನ್ನೇ ಮುಡಿಪಾಗಿರಿಸಿದ ಕಾಪು ಕಲ್ಯಾ ದೇವದಾಸ್ ಶೆಟ್ಟಿ ಅವರಿಗೆ ಅ.19ರಂದು ಸಂಜೆ 4 ಗಂಟೆಗೆ ಕಲ್ಯಾದಲ್ಲಿ ನಡೆಯುವ ಉಡುಪಿ ಜಿಲ್ಲಾ ಕಸಾಪ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 27 : ಹೇರೂರು ಫ್ರೆಂಡ್ಸ್ ಕ್ಲಬ್, 92 ಹೇರೂರು - ಗೂಡುದೀಪ ಸ್ಪರ್ಧೆ

Thumbnail
Posted On: 19 Oct 2024, 10:38 AM

ಕಾಪು : ಹೇರೂರು ಫ್ರೆಂಡ್ಸ್ ಕ್ಲಬ್, 92 ಹೇರೂರು ಇವರ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ 92 ಹೇರೂರಿನ ಹಾಗೂ ಹೇರೂರಿನ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅಕ್ಟೋಬರ್ 27, ಆದಿತ್ಯವಾರ ಸಂಜೆ 4 ಗಂಟೆಗೆ ಸಾರ್ವಜನಿಕ ವೇದಿಕೆ, 92 ಹೇರೂರು ಇಲ್ಲಿ ಗೂಡುದೀಪ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 2,500, ದ್ವಿತೀಯ ಬಹುಮಾನ ರೂ. 1,500, ತೃತೀಯ ಬಹುಮಾನ ರೂ.1,000 ನಗದು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 10: ಫಲಿಮಾರುವಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Thumbnail
Posted On: 18 Oct 2024, 01:22 PM

ಪಡುಬಿದ್ರಿ : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಫಲಿಮಾರು, ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.), ಉಡುಪಿ, ರಕ್ತನಿಧಿ ವಿಭಾಗ ಕೆ.ಎಂ.ಸಿ. ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 10, ಆದಿತ್ಯವಾರ ಬೆಳಿಗ್ಗೆ 9 ರಿಂದ ಅಪರಾಹ್ನ ಗಂಟೆ 2 ರ ವರೆಗೆ ಶ್ರೀ ಗಣೇಶ ಮಂಟಪ, ಫಲಿಮಾರು ಇಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜರಗಲಿದೆ. ಹೆಚ್ಚಿನ ಮಾಹಿತಿಗಾಗಿ ರಿತೇಶ್ ದೇವಾಡಿಗ 8660365719, ಹರೀಶ್ 9964553031 ರನ್ನು ಸಂಪರ್ಕಿಸಬಹುದು ಎಂದು ಸಂಘ ಸಂಸ್ಥೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

Thumbnail
Posted On: 17 Oct 2024, 10:23 PM

ಉಡುಪಿ : ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯೋತ್ಸವವನ್ನು ಉಡುಪಿಯ ಮಥುರಾ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿತ್ತು. ಉದ್ಯಮಿ ವಿಶ್ವನಾಥ ಶೆಣೈ ಯವರು ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು. ಭಾರತ್ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡವೂರು ಮಾತನಾಡಿ ಸಂಘಟನೆಯಲ್ಲಿ ಬಲವಿದೆ. ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಸರಕಾರದ ಮಟ್ಟಕ್ಕೂ ನಮ್ಮ ಬೇಡಿಕೆಯನ್ನು ತಲುಪಿಸಲು ಸಾಧ್ಯ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಮಾತನಾಡಿ ಜಯಂತ್ಯೋತ್ಸವವನ್ನು ಆಚರಿಸುವ ಮೂಲಕ ಶ್ರೇಷ್ಠ ದಾರ್ಶನಿಕ ವಾಲ್ಮೀಕಿ ಮಹರ್ಷಿಯನ್ನು ನೆನಪಿಸುವ ಮಹತ್ ಕಾರ್ಯವನ್ನು ಮಾಡಿರುವುದು ಶ್ಲಾಘನೀಯ ಎಂದರು. ಮಹರ್ಷಿ ವಾಲ್ಮೀಕಿ ಸಂಘಟನೆಯ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮೀಜಿ ಚಿಕ್ಕಮಠ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಂಜನಿ ವಸಂತ್, ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ, ಶಾಂತಪ್ಪ ದೊರೆ, ಆನಂದ ವಾಲ್ಮೀಕಿ, ಗೋಪಾಲ ದೇವದುರ್ಗ, ಶಿವರಾಜ್ ವಾಲಿಕಾರ್, ಕನಕ, ದೇವು ದೊರೆ, ಗೋಪಾಲ ದೊರೆ, ಸಂಗನಗೌಡ ಸಾತಿಹಾಳ ಉಪಸ್ಥಿತರಿದ್ದರು. ಉಡುಪಿ ತಾಲ್ಲೂಕು ಕಸಾಪ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

ಅ. 27 : ರಾಗ್ ರಂಗ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ವತಿಯಿಂದ ಉಭಯ ಜಿಲ್ಲಾ ಮಟ್ಟದ

Thumbnail
Posted On: 17 Oct 2024, 08:48 PM

ಪಡುಬಿದ್ರಿ : ರಾಗ್ ರಂಗ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ಇದರ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಉಭಯ ಜಿಲ್ಲಾ ಮಟ್ಟದ "ಗೂಡುದೀಪ ಸ್ಪರ್ಧೆ" ಅಕ್ಟೋಬರ್ 27, ಆದಿತ್ಯವಾರ ಸಂಜೆ 6 ಗಂಟೆಗೆ ಬೋರ್ಡ್ ಶಾಲಾ ಮೃೆದಾನ( ಕರ್ನಾಟಕ ಪಬ್ಲಿಕ್ ಸ್ಕೂಲ್) ಪಡುಬಿದ್ರಿ ಇಲ್ಲಿ ಆಯೋಜಿಸಲಾಗಿದೆ. ಸಾಂಪ್ರದಾಯಿಕ ಗೂಡುದೀಪ ಮತ್ತು ಆಧುನಿಕ ಗೂಡುದೀಪ ಸ್ಪರ್ಧಾ ವಿಭಾಗಗಳಿದ್ದು, ನೊಂದಾವಣೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ‌ ನೃತ್ಯ ವೈಭವವೂ ಜರಗಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7090460951 ಸಂಪರ್ಕಿಸಿ ಎಂದು ರಾಗ್ ರಾಂಗ್ ಕಲ್ಚರಲ್ ಕ್ಲಬ್ ಪಡುಬಿದ್ರಿ ಅಧ್ಯಕ್ಷರಾದ ವಿಶ್ವಾಸ್ ವಿ.ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧೆಯ ನಿಯಮಗಳು: ಸಾಂಪ್ರದಾಯಿಕ ಮತ್ತು ಆಧುನಿಕ ವಿಭಾಗದಲ್ಲಿ ಗೂಡುದೀಪ ಸ್ಪರ್ಧೆ ನಡೆಯಲಿದೆ. ಪ್ರತಿ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ವಿಜೇತರಿಗೆ ನಗದು, ಶ್ವಾಶತ ಫಲಕ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಸಂಜೆ 5 ಗಂಟೆಗೆ ತಮ್ಮ ಗೂಡುದೀಪದೊಂದಿಗೆ ಶಾಲಾ ಮೈದಾನದಲ್ಲಿ ಹಾಜರಿರಬೇಕು. ಎಲ್ಲ ಗೂಡುದೀಪಗಳಿಗೆ ವಿದ್ಯುದ್ದೀಪದ ವ್ಯವಸ್ಥೆ ಮಾಡಿಕೊಡಲಾಗುವುದು.

ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಆಯ್ಕೆ

Thumbnail
Posted On: 17 Oct 2024, 08:16 PM

ಕಾಪು : ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರಿ.) ಕರ್ನಾಟಕ (ರುಪ್ಸ) ಇವರು ಕೊಡ ಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾಪು ತಾಲೂಕಿನ ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಇವರು ಆಯ್ಕೆಯಾಗಿದ್ದಾರೆ. ಅಕ್ಟೋಬರ್ 21, ಸೋಮವಾರ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಾಪು : ವಾಲ್ಮೀಕಿಯವರ ಸಂದೇಶಗಳು ಬಾಳಿನ ಬೆಳಕು - ತಹಶಿಲ್ದಾರ್ ಡಾ. ಪ್ರತಿಭಾ ಆರ್

Thumbnail
Posted On: 17 Oct 2024, 02:58 PM

ಕಾಪು : ವಾಲ್ಮೀಕಿಯವರಂತೆ ಮನಃ ಪರಿವರ್ತನೆ ಮಾಡಿಕೊಂಡು ಸದ್ಗಗುಣವಂತರಾಗಲು ಎಲ್ಲರಿಗೂ ಸಾಧ್ಯವಿದೆ. ಜಗತ್ತಿನ ಪ್ರಥಮ ಕಾವ್ಯ ರಚನೆಕಾರರಾದ ವಾಲ್ಮೀಕಿಯವರ ಹಿರಿಮೆ ಎಂದೆಂದಿಗೂ ಪ್ರಾಥಃಸ್ಮರಣೀಯ ಎಂದು ಕಾಪು ತಾಲೂಕು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಹೇಳಿದರು. ಅವರು ಗುರುವಾರ ಕಾಪು ತಹಶಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂತಹ ಮಹಾನ್ ವ್ಯಕ್ತಿಯ ಜಯಂತಿ ಸಾರ್ಥಕತೆ ಹೊಂದಬೇಕಾದರೆ ಮಹರ್ಷಿಯವರು ರಾಮಾಯಣದ ಮೂಲಕ ನೀಡಿರುವ ಪಿತೃ ವಾಕ್ಯ ಪರಿಪಾಲನೆ, ಪಿತೃದೇವೋಭವ, ಮಮತೆ, ಸಮತೆ, ಭ್ರಾತೃತ್ವ ತ್ಯಾಗ ದೇಶಪ್ರೇಮ, ಅಳಿಲುಸೇವೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಯುವ ಜನತೆಗೆ ಒಳ್ಳೆಯ ಹಾದಿಯಲ್ಲಿ ನಡೆಯಲು ಅದ್ಭುತ ಸಂದೇಶವನ್ನು ಮಹರ್ಷಿ ನೀಡಿದ್ದಾರೆ ಎಂದರು. ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಸವರಾಜು, ಉಪ ತಹಶಿಲ್ದಾರ್ ಗಳಾದ ರವಿಕಿರಣ್, ದೇವಕಿ, ಅಶೋಕ್ ಕೋಟೆಕಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕುಕ್ಕುಂಜ : ಅಯ್ಯಪ್ಪ ಶಿಬಿರದ ಮಂಟಪ ನಿರ್ಮಾಣ, ಇನ್ನಿತರ ಕಾರ್ಯಕ್ಕೆ ಭಕ್ತವೃಂದ ಸಹಕರಿಸುವಂತೆ ಮನವಿ

Thumbnail
Posted On: 17 Oct 2024, 02:47 PM

ಕಾಪು : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ದಿ| ಸೂರ್ಯ ಕುಲಾಲ್ ಕುಕ್ಕುಂಜ ಗುರುಸ್ವಾಮಿಯಾಗಿ ಸ್ಥಾಪಿಸಿದ ಅಯ್ಯಪ್ಪ ಭಕ್ತವೃಂದ (ರಿ.) ಕುಕ್ಕುಂಜ ಕಳತ್ತೂರು ಶಿಬಿರ 25 ವರ್ಷ ಪೂರೈಸಿದ್ದು, ಇದೀಗ ಮಂಟಪ ರಚನೆ ಹಾಗೂ ಇನ್ನಿತರ ಕೆಲವು ಕೆಲಸಗಳು ಶಿಬಿರದ ಮಹಾಪೂಜೆಯ ಮೊದಲು ಆಗಬೇಕಿದ್ದು ಭಕ್ತವೃಂದ ತಮ್ಮಿಂದಾದಷ್ಟು ಧನ ಸಹಾಯ ನೀಡಬೇಕಾಗಿ ಶಿಬಿರದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.