Updated News From Kaup

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಮುಂಬೈ ಬಂಟರ ಭವನದಲ್ಲಿ ಸ್ವರ್ಣಗೌರಿ ಪೂಜೆ

Thumbnail
Posted On: 17 Oct 2024, 02:45 PM

ಕಾಪು‌ : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮತ್ತು ನವದುರ್ಗಾ ಲೇಖನ ಯಜ್ಞ ಯಶಸ್ವಿಯಾಗಿ, ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಮುಂಬೈನಲ್ಲಿರುವ ಊರಿನ ಬಂಧುಗಳು ಪಾಲ್ಗೊಳ್ಳಲು ಆಮಂತ್ರಿಸಲು ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ‌ ಯಜ್ಞ ಸಮಿತಿ ಪದಾಧಿಕಾರಿಗಳು ಮುಂಬೈಗೆ ತೆರಳಿದ್ದು, ಮಂಗಳವಾರ ಮುಂಬೈ ಬಂಟರ ಭವನದಲ್ಲಿ ನಡೆದ ಸ್ವರ್ಣಗೌರಿ ಪೂಜೆಯಲ್ಲಿ ಭಾಗವಹಿಸಿದರು. ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ, ಸ್ವರ್ಣ ಸಮರ್ಪಣಾ ಸಮಿತಿ ಅಧ್ಯಕ್ಷ ರವಿಸುಂದರ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಮುಂಬಯಿ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಲಾಲಾಜಿ‌ ಆರ್‌‌. ಮೆಂಡನ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ. ಸೋಜ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲಬೆಟ್ಟು, ವಿಶ್ವಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪ್ರಮುಖರಾದ ಆನಂದ ಶೆಟ್ಟಿ, ಡಾ. ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಕೆ. ವಿಶ್ವನಾಥ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ‌ ಯಜ್ಞ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಪಡುಬಿದ್ರಿ : ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿಯಿಂದ ಪೂರ್ವಭಾವಿ ಸಭೆ

Thumbnail
Posted On: 17 Oct 2024, 02:14 PM

ಪಡುಬಿದ್ರಿ : ಉಡುಪಿ - ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ಗುರುವಾರ ಪಡುಬಿದ್ರಿಯ ಉದಯಾದ್ರಿ ಸಭಾಭವನದಲ್ಲಿ ಹೆಜಮಾಡಿ, ಪಡುಬಿದ್ರಿ, ಪಲಿಮಾರು, ಮುದರಂಗಡಿ, ಎಲ್ಲೂರು, ತೆಂಕ, ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಭೆಯು ಜರಗಿತು ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ ಇವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು ಎಂದರು. ಈ ಸಂದರ್ಭದಲ್ಲಿ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಅಭ್ಯರ್ಥಿಗಳಾದ ಕಿಶೋರ್ ಕುಮಾರ್ ಬೊಟ್ಯಾಡಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಅಭ್ಯರ್ಥಿ ಪ್ರಮುಖ್ ಅರುಣ್ ಶೆಟ್ಟಿ ಪಾದೂರು, ಅಭ್ಯರ್ಥಿ ಪ್ರವಾಸ ಪ್ರಮುಖ್ ರಾಜೇಶ್ ಕಾವೇರಿ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಅ.22 : ಬೊಬ್ಬರ್ಯ ಕಟ್ಟೆ ದೈವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Thumbnail
Posted On: 17 Oct 2024, 01:50 PM

ಉಡುಪಿ : ಇಲ್ಲಿನ ತೆಂಕುಪೇಟೆ ವುಡ್ ಲಾಂಡ್ಸ್ ಹೋಟೆಲ್ ಬಳಿಯ ಬೊಬ್ಬರ್ಯ ಕಟ್ಟೆಯ ಬೊಬ್ಬರ್ಯ, ಕಾಂತೇರಿ ಜುಮಾದಿ, ಕಲ್ಕುಡ, ಕೊರಗಜ್ಜಿ ಪರಿವಾರ ದೈವಗಳ ದೈವಸ್ಥಾನದಲ್ಲಿ ಅಕ್ಟೋಬರ್ 22, ಮಂಗಳವಾರ ಬೆಳಿಗ್ಗೆ 8.30 ಗಂಟೆಗೆ ಸರಿಯಾಗಿ ಕಾಂತೇರಿ ಜುಮಾದಿ, ಪಿಲಿಚಂಡಿ, ಪಂಜುರ್ಲಿ ದೈವದ ನೂತನ ಮಣೆಮಂಚ ಸಮರ್ಪಣೆ ಹಾಗೂ ಸಂಜೆ 5 ಗಂಟೆಗೆ ಸರಿಯಾಗಿ ಹೂವಿನ ಪೂಜೆ ಹಾಗೂ ಕಾಂತೇರಿ ಜುಮಾದಿ ದೈವ ದರ್ಶನ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಪ್ರತಿಷ್ಠಿತ ವಫಾ ಸಂಸ್ಥೆಯಿಂದ ಸನ್ಮಾನ

Thumbnail
Posted On: 17 Oct 2024, 01:42 PM

ಕಾಪು : ಉಡುಪಿ-ಮಂಗಳೂರು ನಗರದ ಪ್ರತಿಷ್ಠಿತ ಸುಪ್ರಸಿದ್ದ ವಫಾ ಸಂಸ್ಥೆಯವರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಡಾ.ಎಂ.ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರನ್ನು ವಫಾ ಸಂಸ್ಥೆಯು ಬೈಕಂಪಾಡಿ ಅಡ್ಕ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಫಾ ಸಂಸ್ಥೆಯ ಸ್ಥಾಪಕರಾದ ಅಬ್ದುಲ್ ವಹಾಬ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಫಾರೂಕ್ ಅವರ ಸಮಾಜ ಸೇವೆಯು ಹೀಗೆ ಮುಂದುವರಿಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್ ಮೊಹಮ್ಮದ್, ಮಂಗಳೂರು ಮಾಜಿ ಮೇಯರ್ ಅಶ್ರಫ್, ತುಳುವಿನ ಪ್ರಖ್ಯಾತ ಚಿತ್ರನಟರಾದ ದೇವಿದಾಸ್ ಕಾಪಿಕಾಡ್, ಸುಮಂತ, ರಾಹುಲ್ ಅಮೀನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಶರ್ಫುದ್ದಿನ್ ಶೇಕ್, ಸಾಹಿತಿ ಮುಸ್ತಾಕ್ ಹೆನ್ನಾಬೈಲು, ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷರಾದ ತಸ್ನೀನ್ ಅರಾ, ಉಡುಪಿ ಜಿಲ್ಲಾ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶೇಕಬ್ಬ ಉಚ್ಚಿಲ, ವಫಾ ಸಂಸ್ಥೆಯ ಮುಂದಾಳು ಜುನೈದ್ ಉಚ್ಚಿಲ ಮತ್ತಿತರರು ಉಪಸ್ಥಿತರಿದ್ದರು.

ಅ.20 : ಕಾಪು ತಾಲೂಕು ಪರಿವಾರ ನಾಯಕ ಸಮುದಾಯದ ಮಹಾಸಭೆ

Thumbnail
Posted On: 16 Oct 2024, 09:29 AM

ಕಾಪು : ಕಾಪು ತಾಲೂಕು ಪರಿವಾರ ನಾಯಕ ಸಮುದಾಯದ ಮಹಾಸಭೆಯು ಅಕ್ಟೋಬರ್ 20, ಆದಿತ್ಯವಾರ ಬೆಳಿಗ್ಗೆ 10 ಘಂಟೆಗೆ ಸರಿಯಾಗಿ ಮಜೂರು ಪಂಚಾಯತ್ ಸಭಾಂಗಣದಲ್ಲಿ ಕಾಪು ತಾಲೂಕಿನ ಅದ್ಯಕ್ಷರಾದ ನೀಲಾನಂದ್ ನಾಯ್ಕ್ ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಈ ಮಹಾಸಭೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ್, ಉಡುಪಿ ತಾಲೂಕು ಸಂಘದ ಅಧ್ಯಕ್ಷರಾದ ಶೇಖರ್ ನಾಯ್ಕ್, ಮಂಗಳೂರು ತಾಲೂಕು ಸಂಘದ ಅಧ್ಯಕ್ಷರಾದ ಜಯಂತ್ ನಾಯ್ಕ್ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ - ಕನ್ನಡ ವೀಡಿಯೋ ಅಲ್ಬಮ್ ಸಾಂಗ್ ಬಿಡುಗಡೆ

Thumbnail
Posted On: 14 Oct 2024, 11:19 PM

ಪಡುಬಿದ್ರಿ : ಪುರಾತನ ದೇವಸ್ಥಾನದ ಹಿನ್ನೆಲೆಯನ್ನು ಇಂದಿನ ಜನತೆಗೆ ತಿಳಿಯಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಇಂದಿನ ಯುವ ಜನತೆ ನಮ್ಮ ಸಂಸ್ಕೃತಿ, ಸಂಪ್ರದಾಯ ಉಳಿಸುವ ಕಾರ್ಯ ಮಾಡಬೇಕಾಗಿದೆ. ಇಂತಹ ಅಲ್ಬಮ್ ಸಾಂಗ್ ನ ಜೊತೆ ಚಲನಚಿತ್ರ ಕೂಡಾ ನಿರ್ಮಾಣವಾಗಲಿ ಎಂದು‌ ಮಾಜಿ ತಾಲೂಕು ಪಂ‌ಚಾಯತ್ ಸದಸ್ಯ ನವೀನಚಂದ್ರ ಜೆ ಶೆಟ್ಟಿ ‌ ಹೇಳಿದರು. ಅವರು ಪಡುಬಿದ್ರಿ ಭಾರತ್ ಸಿನಿಮಾದಲ್ಲಿ ನಡೆದ "ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ" ಕನ್ನಡ ವಿಡಿಯೋ ಅಲ್ಬಮ್ ಸಾಂಗ್ ನ ಪ್ರದರ್ಶನ ವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ವಂದನಾ ರೃೆ, ಕಾಪು ರಕ್ಷಣಾಪುರ ಜವನರ್ ಅಧ್ಯಕ್ಷರಾದ ನವೀನ್ ಎನ್ ಶೆಟ್ಟಿ, ಉಡುಪಿ ಜಿಲ್ಲಾ ಮೀನುಗಾರರ ‌ಕಾಂಗ್ರೇಸ್ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್, ಕಾಪು ತಾಲೂಕು ಪತ್ರಕರ್ತರ ಸಂಘ ದ ಮಾಜಿ ಅಧ್ಯಕ್ಷ ಸುರೇಶ್ ಎರ್ಮಾಳ್, ಸಾಮಾಜಿಕ ಹೋರಾಟಗಾರ ಶೇಖರ್ ಹೆಜ್ಮಾಡಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ‌ಸಮಿತಿ ಅಧ್ಯಕ್ಷ ಕರುಣಾಕರ್ ಪೂಜಾರಿ, ಪಡುಬಿದ್ರಿ ರೋಟರಿ ಕ್ಲಬ್ ಪೂರ್ವ ಅಧ್ಯಕ್ಷೆ ಗೀತಾ ಅರುಣ್, ನಿಯೋಜಿತ ಅಧ್ಯಕ್ಷ ಸುನಿಲ್ ಕುಮಾರ್, ಪಡುಬಿದ್ರಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಯಶೋಧ ಪಡುಬಿದ್ರಿ, ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಅಧ್ಯಕ್ಷ ರಚನ್ ಸಾಲ್ಯಾನ್, ಇನ್ನರ್ ವೀಲ್ ಕ್ಲಬ್ ಪೂರ್ವ ಅಧ್ಯಕ್ಷೆ ನಮೃತಾ ಮಹೇಶ್, ನಿರ್ದೇಶಕ ಶರತ್ ಎಸ್ ಪೂಜಾರಿ, ನಿರ್ಮಾಪಕ ಸಂತೋಷ್ ಪಡುಬಿದ್ರಿ, ನಾಯಕಿ ನಟಿ ಸುಪ್ರೀತಾ ಪೂಜಾರಿ ಪಾಂಗಾಳ, ಗಾಯಕಿ ನಮಿತಾ ಕಾರ್ಕಳ, ಭಜನಾ ಗಾಯಕ ಸುರೇಶ್ ಪಲಿಮಾರ್ ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿ, ವಂದಿಸಿದರು. ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ - ಕನ್ನಡ ವೀಡಿಯೋ ಅಲ್ಬಮ್ ಸಾಂಗ್ ವೀಕ್ಷಣೆಗೆ ಲಿಂಕ್ ಕ್ಲಿಕ್ ಮಾಡಿ

ಪಡುಬಿದ್ರಿ : ಬಾಲ ಗಣಪತಿಯ ಜಲಸ್ತಂಭನ

Thumbnail
Posted On: 13 Oct 2024, 10:44 AM

ಪಡುಬಿದ್ರಿ : ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಹಿಂದಿನ ಕಾಲದಲ್ಲಿ ಮಕ್ಕಳಿಂದಲೇ ನಿರ್ಮಿತವಾದ ಕ್ಷೇತ್ರವೆಂಬ ಪ್ರತೀತಿಯಿರುವ ಬಾಲ ಗಣಪತಿಯ ಜಲಸ್ತಂಭನ ಶನಿವಾರ ಸಂಜೆ ಜರಗಿತು. ವಿಶೇಷವಾಗಿ ಗಣೇಶ ಚತುರ್ಥಿಯಿಂದ ಮೊದಲ್ಗೊಂಡು ನವರಾತ್ರಿಯಾದ್ಯಂತ ಪ್ರತಿದಿನ ಸಾಯಂಕಾಲ ಭಕ್ತರಿಂದ ಹರಕೆಯ ರೂಪವಾಗಿ ರಂಗಪೂಜೆ ನಡೆಯುತ್ತದೆ. ವಿಜಯದಶಮಿಯಂದು ಬೆಳಗ್ಗಿನಿಂದ ಪೂಜಾ ವಿಧಿವಿಧಾನಗಳು ನಡೆದು ಸಂಜೆ ಪಲ್ಲಕ್ಕಿಯ ಮೂಲಕ ಗಣಪತಿಯ ಮೃಣ್ಮಯ ಮೂರ್ತಿಯು ಶ್ರೀ ಕ್ಷೇತ್ರದಿಂದ ಪೇಟೆಗೆ ಸಾಗಿ‌ ಅಲ್ಲಿಂದ ಹಿಂತಿರುಗಿ ಕೆಳಗಿನ ಪೇಟೆಯ ರಸ್ತೆಯ ಮೂಲಕ ಬೀಚ್ ರಸ್ತೆಗೆ ಸಾಗಿ ಗುಡ್ಡೆಚ್ಚಿಗೆ ತಲುಪಿ ಅಲ್ಲಿ ಕಟ್ಟೆ ಪೂಜೆ, ತಪ್ಪಂಗಾಯಿ‌ ಸೇವೆಯ ಬಳಿಕ‌ ಮುಂದೆ ಸಾಗಿ ಸಮುದ್ರದಲ್ಲಿ ಗಣಪತಿಯ ಮೂರ್ತಿಯನ್ನು ಜಲಸ್ತಂಭನ ಮಾಡಲಾಯಿತು. ಮೆರವಣಿಗೆಯಲ್ಲಿ ಕುಣಿತ ಭಜನಾ ತಂಡ, ವಿವಿಧ ವೇಷಗಳು, ಹುಲಿವೇಷ ಕುಣಿತ ತಂಡ ಪಾಲ್ಗೊಂಡಿದ್ದವು.

ಉಡುಪಿ ಉಚ್ಚಿಲ ದಸರಾ - 2024 ಸಂಪನ್ನ

Thumbnail
Posted On: 13 Oct 2024, 02:10 AM

ಕಾಪು : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ - 2024 ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ನವದುರ್ಗೆಯರು ಸಹಿತ ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನ ಕಾರ್ಯಕ್ರಮ‌ ಕಾಪುವಿನ ಕಡಲ ಕಿನಾರೆಯಲ್ಲಿ ನಡೆಯಿತು. ಮೆರವಣಿಗೆಯಲ್ಲಿ ಸಾಗಿ ಬಂದ ದೇವಿಯರ ವಿಗ್ರಹಗಳಿಗೆ ಕಡಲ ಕಿನಾರೆಯಲ್ಲಿ ಕಾಶಿ ಗಂಗಾರತಿ ಮಾದರಿಯಲ್ಲಿ ಗಂಗಾರತಿ ಜೊತೆಗೆ ಸೇರಿದ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಮಹಾ ಮಂಗಳಾರತಿ ನೆರವೇರಿದ ಬಳಿಕ ಏಕಕಾಲದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ವಿಗ್ರಹಗಳನ್ನು ಸಮುದ್ರದಲ್ಲಿ ಜಲಸ್ತಂಭನ ಮಾಡಲಾಯಿತು. ಸುಡುಮದ್ದು ಪ್ರದರ್ಶನ, ರಸಮಮಜರಿ ಕಾರ್ಯಕ್ರಮವೂ ನಡೆಯಿತು. ಈ ಸಂದರ್ಭ ದೇವಳದ ರುವಾರಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಸಮಿತಿಯ ಗೌರವ ಸಲಹೆಗಾರ ನಾಡೋಜ ಡಾ. ಜಿ ಶಂಕರ್‌, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್‌, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಾಜನ ಸಂಘದ ಉಪಾಧ್ಯಕ್ಷರಾದ ದಿನೇಶ್‌ ಎರ್ಮಾಳು, ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್ ಸಹಿತ ಗಣ್ಯರು ಉಪಸ್ಥಿತರಿದ್ದರು. ಜಲಸ್ತಂಭನ ಸಂದರ್ಭ 250 ಜನ ಸ್ವಯಂ ಸೇವಕರು ಸಹಕರಿಸಿದ್ದರು.

3ನೇ ವರ್ಷದ ಉಡುಪಿ ಉಚ್ಚಿಲ ದಸರಾ - 2024 ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ

Thumbnail
Posted On: 12 Oct 2024, 06:19 PM

ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ - 2024 ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಡ್ರೋನ್ ಪುಷ್ಪ ಸಿಂಚನ : ನವದುರ್ಗೆಯರ ಸಹಿತ ಶಾರದಾ ಮೂರ್ತಿಗೆ ಮಹಾಪೂಜೆಯ ಬಳಿಕ ವಿಶೇಷವಾಗಿ ಡ್ರೋನ್ ಮೂಲಕ ಶ್ರೀ ಶಾರದಾದೇವಿ ಮತ್ತು ನವದುರ್ಗೆಯರ ವಿಗ್ರಹಗಳಿಗೆ ಪುಷ್ಪ ಸಿಂಚನ ಮಾಡಲಾಯಿತು. ಉಚ್ಚಿಲ ದೇವಳದಿಂದ ರಾಷ್ಟ್ರೀಯ ಹೆದ್ದಾರಿ 66ರ ಪೂರ್ವಬದಿಯಲ್ಲಿ ದಕ್ಷಿಣಕ್ಕೆ ಎರ್ಮಾಳು ಮಸೀದಿವರೆಗೆ ಸಾಗಿ ಅಲ್ಲಿಂದ ಯೂ ಟರ್ನ್ ಪಡೆದು, ಉಚ್ಚಿಲ- ಮೂಳೂರು-ಕಾಪುವರೆಗೆ ಸಾಗಿ, ಕಾಪು ಕೊಪ್ಪಲಂಗಡಿ ಬಳಿ ಹೆದ್ದಾರಿಯ ಎಡಭಾಗದ ಬೀಚ್‌ ರಸ್ತೆಗೆ ತಿರುಗಿ ಅಲ್ಲಿಂದ ಕಾಪು ಬೀಚ್‌ವರೆಗೆ ಸಾಗಲಿದೆ. ಶೋಭಾಯಾತ್ರೆಯಲ್ಲಿ ಮೈಸೂರು ದಸರಾ ಅಂಬಾರಿ ಪ್ರತಿಕೃತಿಯು ಮುಂಭಾಗದಲ್ಲಿ ಸಾಗಿ, ಶ್ರೀ ಶಾರದಾದೇವಿ ಹಾಗೂ ನವದುರ್ಗೆಯರ ಟ್ಯಾಬ್ಲೊಗಳೊಂದಿಗೆ ತುಳು ನಾಡಿನ ಸಂಸ್ಕೃತಿ ಬಿಂಬಿಸುವ, ಮೀನುಗಾರಿಕೆಯನ್ನು ಪ್ರತಿಬಿಂಬಿಸುವ ಹಾಗೂ ಮೊಗವೀರ ಸಮಾಜದ ಗುರುಗಳಾದ ಮಾಧವ ಮಂಗಳ ಗುರುಗಳು, ಸದಿಯ ಸಾಹುಕಾರರ ಸಹಿತ ವಿವಿಧ ಟ್ಯಾಬ್ಲೊಗಳು, ಕಲಾ ತಂಡ ಗಳು, ಭಜನಾ ತಂಡಗಳು, ಚೆಂಡೆ ವಾದ್ಯ, ಕೊಂಬು ಕಹಳೆ, ಡಿಜೆ ಸಂಗೀತ ಸಹಿತ ಸಹಸ್ರಾರು ಭಕ್ತಾದಿಗಳ ಜತೆಗೆ ಶೋಭಾಯಾತ್ರೆ ಸಾಗಿತು. ಗಂಗಾರತಿ, ಸುಡುಮದ್ದು : ಕಾಪು ಬೀಚ್ ಬಳಿ ಬೃಹತ್‌ ಗಂಗಾರತಿ, ಸುಮಂಗಲೆಯರಿಂದ ಮಹಾಮಂಗಳಾರತಿ, ಸುಡುಮದ್ದು ಪ್ರದರ್ಶನ, ಕಾಪು ಬೀಚ್ ಬಳಿ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಕಾಪು ಬೀಚ್ ಬಳಿ ಸಮುದ್ರದಲ್ಲಿ ಶಾರದೆ ಸಹಿತ ನವದುರ್ಗೆಯರ ವಿಗ್ರಹಗಳನ್ನು ಸಾಂಪ್ರದಾಯಿಕವಾಗಿ ಜಲಸ್ತಂಭನಗೊಳಿಸಲಾಗುವುದು. ಉಡುಪಿ ಉಚ್ಚಿಲ ದಸರಾ ರೂವಾರಿಯಾದ ನಾಡೋಜ ಡಾ.ಜಿ.ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉದ್ಯಮಿ ಆನಂದ್ ಸಿ ಕುಂದರ್ ಹಾಗೂ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು. ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕಾಪು ಸಿಪಿಐ ಜಯಶ್ರೀ, ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಕುಮಾರ್ ಎಂ.ಎಸ್., ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ನೇತೃತ್ವದಲ್ಲಿ ಸೂಕ್ತ ಭದ್ರತೆಯ ಜೊತೆಗೆ ಸಾವಿರಾರು ಸ್ವಯಂ ಸೇವಕರು ಶಿಸ್ತು ಪಾಲನೆಯಲ್ಲಿ ಸಹಕರಿಸಿದ್ದರು.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ಅವಹೇಳನ - ಕಠಿಣ ಕ್ರಮ ಕೈಗೊಳ್ಳಲು ಮನವಿ‌

Thumbnail
Posted On: 12 Oct 2024, 10:01 AM

ಉಡುಪಿ : ಕೇಂದ್ರ ಸಂಪುಟ ಸಚಿವರಾದ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಅವಹೇಳನಕಾರಿ ಹಾಗೂ ಅತ್ಯಂತ ಕೀಳು ಮಟ್ಟದ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ರವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಮತ್ತು ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ, ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನು ಒಳಗೊಂಡ ತಂಡ ಅಪರ ಜಿಲ್ಲಾಧಿಕಾರಿ ಮಮತಾ ದೇವಿಯವರಿಗೆ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಧ್ಯಕ್ಷ ವಾಸುದೇವರಾವ್, ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ ಹೆಜಮಾಡಿ, ಜಿಲ್ಲಾ ಕಾರ್ಯದರ್ಶಿಗಳಾದ ಜಯರಾಮ ಆಚಾರ್ಯ, ರಮೇಶ್ ಕುಂದಾಪುರ, ಕಾರ್ಕಳ ಬ್ಲಾಕ್ ಅಧ್ಯಕ್ಷರು ಶ್ರೀಕಾಂತ್ ಹೆಬ್ರಿ, ಕಾಪು ಬ್ಲಾಕ್ ಅಧ್ಯಕ್ಷ ದೇವರಾಜ್ ತೊಟ್ಟಂ, ವೆಂಕಟೇಶ್ ಎಂ ಟಿ, ಬಿ ಕೆ ಮೊಹಮ್ಮದ್, ಅಶ್ರಫ್ ಪಡುಬಿದ್ರಿ, ರಂಗ ಕೋಟ್ಯಾನ್, ಇಸ್ಮಾಯಿಲ್ ಹೆಜಮಾಡಿ ಮತ್ತಿತರರು ಉಪಸ್ಥಿತರಿದ್ದರು.