Updated News From Kaup
ಅದಮಾರು ಮಠದ ಹಿರಿಯ ಸ್ವಾಮೀಜಿಗೆ ಜೈ ತುಲುನಾಡ್ ಸಂಘಟನೆಯಿಂದ ಮನವಿ
Posted On: 04-09-2024 07:33PM
ಕಾಪು : ಜೈ ತುಲುನಾಡ್ (ರಿ.) ಸಂಘಟನೆಯ ವತಿಯಿಂದ ಉಡುಪಿಯ ಅದಮಾರು ಮಠದ ಸ್ವಾಮೀಜಿಗೆ ಅದಮಾರು ಮಠದ ಅಧೀನ ದೇವಸ್ಥಾನ, ಶಿಕ್ಷಣ ಸಂಸ್ಥೆ ಶಾಖಾಮಠದಲ್ಲಿ ತುಳುನಾಡಿನ ಮಣ್ಣಿನ ಭಾಷೆಯಾದ ತುಲುಲಿಪಿಯಲ್ಲಿ ನಾಮ ಫಲಕ ಅಳವಡಿಸಲು ಹಾಗೂ ಅಧೀನ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ಉಚಿತವಾಗಿ ತುಲು ಲಿಪಿಯನ್ನು ಕಲಿಸಲು ಸಹಕಾರ ಇದರ ಬಗ್ಗೆ ಮನವಿಯನ್ನು ನೀಡಲಾಯಿತು.
ಕಾಪು : ಸರಕಾರಿ ಉರ್ದು ಸಂಯುಕ್ತ ಪ್ರೌಢಶಾಲೆ ಮಲ್ಲಾರು - ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ
Posted On: 04-09-2024 07:17PM
ಕಾಪು : ತಾಲೂಕಿನ ಸರಕಾರಿ ಉರ್ದು ಸಂಯುಕ್ತ ಪ್ರೌಢಶಾಲೆ ಮಲ್ಲಾರು ಇಲ್ಲಿ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಬುಧವಾರ ಆಚರಿಸಲಾಯಿತು.
ಉದ್ಯಮಿ ಪಡುಬಿದ್ರಿ ಅನಂತ್ ರಾಜ್ ಹುಟ್ಟು ಹಬ್ಬದ ನಿಮಿತ್ತ ಕೌಡೂರು ಹೊಸ ಬೆಳಕು ವೃದ್ಧಾಶ್ರಮಕ್ಕೆ ಪರಿಕರಗಳ ಹಸ್ತಾಂತರ
Posted On: 04-09-2024 07:04PM
ಪಡುಬಿದ್ರಿ : ಬೆಂಗಳೂರಿನ ಖ್ಯಾತ ಉದ್ಯಮಿ ರಾಜ್ ಅಸೋಸಿಯೇಟ್ಸ್ ಸಂಸ್ಥೆ ಅಡಳಿತ ನಿರ್ದೇಶಕ ಪಡುಬಿದ್ರಿ ಅನಂತ್ ರಾಜ್ ರವರ 75ನೇ ಹುಟ್ಟು ಹಬ್ಬದ ಸಲುವಾಗಿ ಅವರ ಸುಪುತ್ರಿ ಶ್ರುತಿ ಅನಂತ್ ರಾಜ್ ರವರು ರೂ. 51,320 ಮೌಲ್ಯದ ಪರಿಕರಗಳನ್ನು ಕೌಡೂರಿನ ಹೊಸ ಬೆಳಕು ವೃದ್ಧಾಶ್ರಮಕ್ಕೆ ಕೊಡುಗೆಯಾಗಿ ನೀಡಿದರು.
ಕಾಪು : ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಚಾಲನೆ
Posted On: 04-09-2024 07:00PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿರುವ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ನಾಳೆ (ಸೆ. 3) : ಕಾಪು ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ
Posted On: 02-09-2024 10:09PM
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಜೀರ್ಣೋದ್ದಾರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸೆಪ್ಟೆಂಬರ್ 3ರಂದು ನವದುರ್ಗಾ ಲೇಖನ ಯಜ್ಞ ಮತ್ತು ನವಚಂಡಿಕಾಯಾಗ ಜರಗಲಿದೆ.
ಕಾರ್ಕಳ : ಕ್ರಿಯೇಟಿವ್ ಕಾಲೇಜಿನ ಸಹಕಾರದೊಂದಿಗೆ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ
Posted On: 01-09-2024 10:25PM
ಕಾರ್ಕಳ : ಇಲ್ಲಿನ ಪರಿಸರದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.
ಶ್ರೀ ನಾರಾಯಣಗುರು ಯುವ ವೇದಿಕೆ ಉಡುಪಿ ವತಿಯಿಂದ ನಾರಾಯಣ ಗುರು ಧ್ವಜಸ್ತಂಭ ಉದ್ಘಾಟನೆ
Posted On: 01-09-2024 10:16PM
ಉದ್ಯಾವರ : ನಾರಾಯಣ ಗುರುಗಳ ತತ್ವ ಸಂದೇಶ ಸಾರುವ ಬ್ರಹ್ಮಶ್ರೀ ನಾರಾಯಣಗುರು ಧ್ವಜಸ್ತಂಭದ ಧ್ವಜಾರೋಹಣ ಕಾರ್ಯಕ್ರಮವನ್ನು ರಾಷ್ಟ್ರೀಯ ಬಿಲ್ಲವ ಮಹಿಳಾ ಮಹಾಮಂಡಲದ ಅಧ್ಯಕ್ಷರಾದ ಗೀತಾಂಜಲಿ ಸುವರ್ಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಶ್ರೀ ನಾರಾಯಣ ಗುರುಗಳ ಆದರ್ಶ, ಸರ್ವ ಧರ್ಮಗಳ ಬಗ್ಗೆ ಅವರ ಕಾಳಜಿ, ಕೆಳ ವರ್ಗದ ಜನರ ಬಗ್ಗೆ ಅವರಿಗಿದ್ದ ದೂರಗಾಮಿ ಆಲೋಚನೆಗಳಿಂದ ಇಂದು ನಮ್ಮಂತ ಹಿಂದುಳಿದ ವರ್ಗ ಗೌರವದಿಂದ ಬಾಳುವಂತೆ ಮಾಡಿದೆ ಎಂದು ತಿಳಿಸಿದರು.
ಬಂಟಕಲ್ಲು : ಬದುಕಿನಲ್ಲಿ ದುರಾಸೆಗೆ ಒಳಗಾಗದೆ ಇದ್ದುದರಲ್ಲೇ ತೃಪ್ತಿವಂತರಾಗುವ - ಜಸ್ಟಿಸ್ ಸಂತೋಷ್ ಹೆಗ್ಡೆ
Posted On: 01-09-2024 10:09PM
ಬಂಟಕಲ್ಲು : ಕಲಿಕೆಗೆ ಕೊನೆಯಿಲ್ಲ. ಜನನದಿಂದ ಮರಣದವರೆಗೆ ಕಲಿಕೆ ನಿರಂತರ. ಬದುಕಿನಲ್ಲಿ ದುರಾಸೆಗೆ ಒಳಗಾಗದೆ ಇದ್ದುದರಲ್ಲೇ ತೃಪ್ತಿವಂತರಾಗುವ. ಮಾನವರಾಗಿ ಮಾನವೀಯ ಗುಣ ನಮ್ಮಲ್ಲಿರಬೇಕು ಎಂದು ಸವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯ ಮೂರ್ತಿ, ಮಾಜಿ ಲೋಕಾಯುಕ್ತ ಜಸ್ಟಿಸ್ ಸಂತೋಷ್ ಹೆಗ್ಡೆ ಹೇಳಿದರು. ಅವರು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 2024-25ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ ಭಾನುವಾರ ವಿದ್ಯಾಲಯದ ಆವರಣದಲ್ಲಿ ನಡೆದ ಮಾರ್ಗದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ದೇಶದಲ್ಲಿ ವಿವಿಧ ಹಗರಣಗಳು ನಡೆದಿದ್ದು, ಭೃಷ್ಟಾಚಾರ ಸಮಾಜಲ್ಲಿ ಬೇರೂರಿದೆ. ಅದನ್ನು ಬುಡ ಸಮೇತ ಕೀಳಬೇಕಾಗಿದೆ. ಭೃಷ್ಟಾಚಾರದ ನಿರ್ಮೂಲನೆಗೆ ವಿದ್ಯಾರ್ಥಿಗಳು ಸಹಿತ ನಾಗರಿಕರು ಚಿಂತಿಸಬೇಕಾಗಿದೆ. ಕರ್ನಾಟಕ ಲೋಕಾಯುಕ್ತಕ್ಕೆ ಬಂದ ನಂತರ ಬಹಳಷ್ಟು ಅನ್ಯಾಯ, ಅಕ್ರಮಗಳನ್ನು ಕಂಡಿದ್ದೇನೆ. ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಿ ಎಂದರು. ಈ ಸಂದರ್ಭ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು.
ಚೆನ್ನೈಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತರಾದ ಕಾಪುವಿನ ಮೊಹಮ್ಮದ್ ಫಾರೂಕ್ ಚಂದ್ರನಗರ
Posted On: 01-09-2024 08:26PM
ಕಾಪು : ಸಮಾಜ ಸೇವೆಯನ್ನು ಪರಿಗಣಿಸಿ ಕಾಪುವಿನ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಭಾನುವಾರ ಚೆನ್ನೈ ನ ಭಾರತೀಯ ವಿದ್ಯಾ ಕೇಂದ್ರ ಭವನದಲ್ಲಿ ಪೀಪಲ್ ಫೋರಂ ಆಫ್ ಇಂಡಿಯಾ ಭಾರತ್ ಸೇವಕ್ ಸಮಾಜ್ ಸಂಘಟಿಸಿದ ಕಾರ್ಯಕ್ರಮದಲ್ಲಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯ ಚೆನ್ನೈ ಘಟಕದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನಿಸಲಾಯಿತು.
ಸೈಂಟ್ ಜೋನ್ಸ್ ಅಕಾಡೆಮಿ ಶಂಕರಪುರ : ಉಡುಪಿ ವಲಯ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಕೂಟ ಸಂಪನ್ನ
Posted On: 01-09-2024 07:30PM
ಶಿರ್ವ : ಸೈಂಟ್ ಜೋನ್ಸ್ ಅಕಾಡೆಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಶಂಕರಪುರದಲ್ಲಿ ಉಡುಪಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಹ್ಯಾಂಡ್ಬಾಲ್ ಪಂದ್ಯಾಕೂಟವನ್ನು ಆಯೋಜಿಸಲಾಯಿತು.
