Updated News From Kaup
ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಕಾಪು ಜೆ.ಸಿ.ಐ ವತಿಯಿಂದ ಸನ್ಮಾನ
Posted On: 07 Oct 2024, 09:53 PM
ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿ ಸಮಾಜಕ್ಕೆ ತನ್ನಿಂದಾಗುವ ಸಹಾಯ ಮಾಡುತ್ತ ಸಮಾಜ ಸೇವೆಗಾಗಿ ಹಲವಾರು ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಪಡೆದು ಇತ್ತೀಚೆಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಘಟಕದಿಂದ ಗೌರವ ಡಾಕ್ಟರೆಟ್ ಪದವಿ ಪಡೆದ ಕಾಪುವಿನ ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಜೆ.ಸಿ.ಐ ಕಾಪು ವಲಯದಿಂದ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಪು ಜೆ.ಸಿ.ಐ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಜಗದೀಶ್ ಬಂಗೇರ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಗುರ್ಮೆ, ಪೂರ್ವಧ್ಯಕ್ಷರುಗಳಾದ ದೀಪಕ್ ಕುಮಾರ್ ಎರ್ಮಾಳ್, ಅರುಣ್ ಶೆಟ್ಟಿ ಪಾದೂರು, ರಾಜೇಂದ್ರ ಬಿ.ಕೆ, ಹರೀಶ್ ದೇವಾಡಿಗ, ರಾಕೇಶ್ ಕುಂಜೂರು ಮತ್ತಿತರರು ಉಪಸ್ಥಿತರಿದ್ದರು.
ಅಕ್ಟೋಬರ್ 8 : ಹೊಸ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಅಷ್ಟೆಮಿ ನಾಟಕ ಪ್ರದರ್ಶನ
Posted On: 07 Oct 2024, 08:30 PM
ಕಾಪು : ನವರಾತ್ರಿ ಉತ್ಸವದ ಪ್ರಯುಕ್ತ ಕಾಪು ಹೊಸ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಇವರ ಕಥೆ - ಸಂಭಾಷಣೆ - ನಿರ್ದೇಶನದ ಚೈತನ್ಯ ಕಲಾವಿದರು ಬೈಲೂರು ಅಭಿನಯಿಸುವ 10 ನೇ ನಾಟಕ ಅಷ್ಟೆಮಿ ಅಕ್ಟೋಬರ್ 8, ಮಂಗಳವಾರ ಸಂಜೆ ಗಂಟೆ 7.30 ಪ್ರದರ್ಶನಗೊಳ್ಳಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಉಡುಪಿ ಉಚ್ಚಿಲ ದಸರಾದಲ್ಲಿ ವೀಣಾ ನಿನಾದ - ಶತವೀಣಾವಲ್ಲರಿ
Posted On: 07 Oct 2024, 08:17 PM
ಉಚ್ಚಿಲ : ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ಶಾಲಿನಿ ಡಾ.ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಸೋಮವಾರ ಏಕಕಾಲದಲ್ಲಿ ನೂರೊಂದು ವೀಣಾವಾದನ ಶತವೀಣಾವಲ್ಲರಿ ಜರಗಿತು. ಪವನ ಬಿ.ಆಚಾರ್ ಕಲಾಸ್ಪಂದನ ಕಲಾ ಶಾಲೆ ಮಣಿಪಾಲ ಇವರ ನಿರ್ದೇಶನದಲ್ಲಿ ಸುಪ್ರಸಿದ್ಧ ವೀಣಾವಾದಕರ ಜೊತೆ ಹಿರಿಯ ಕಿರಿಯ ವೀಣಾವಾದಕರು ವೀಣೆಯನ್ನು ನುಡಿಸಿದರು. ಮೃದಂಗದಲ್ಲಿ ಡಾ. ಬಾಲಚಂದ್ರ ಆಚಾರ್, ರಿದಮ್ ಪ್ಯಾಡ್ನಲ್ಲಿ ಕಾರ್ತಿಕ್ ಭಟ್ ಇನ್ನಂಜೆ, ತಂಬೂರಿಯಲ್ಲಿ ವಿದುಷಿ ಸುರೇಖಾ ಎ. ಭಟ್, ತಾಳ ಹೇಮಲತಾ ರಾವ್, ಜೊತೆಗೆ 101 ವೀಣಾ ವಾದಕರು ಸಹಕರಿಸಿದ್ದರು. ಈ ಸಂದರ್ಭ ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ದೇವಳದ ಪ್ರಧಾನ ಅರ್ಚಕ ವೇ|ಮೂ| ಕೆ.ವಿ. ರಾಘವೇಂದ್ರ ಉಪಾಧ್ಯಾಯ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ದಸರಾ ಮಹೋತ್ಸವ ಸಂಚಾಲಕ ವಿನಯ ಕರ್ಕೆರ ಮಲ್ಪೆ, ಸದಸ್ಯರಾದ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳು, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ ಅಮೀನ್ ಕಿದಿಯೂರು, ಸತೀಶ್ ಎಸ್ ಅಮೀನ್ ಬೆಣ್ಣೆ ಕುದ್ರು, ಮಂಜುನಾಥ್ ಸುವರ್ಣ ಬ್ರಹ್ಮಾವರ, ರವೀಂದ್ರ ಶ್ರೀಯಾನ್ ಹಿರಿಯಡ್ಕ, ಶಿವರಾಮ ಕೋಟ, ಲೋಕೇಶ್ ಮೆಂಡನ್ ಉಪ್ಪೂರು, ಕೇಶವ ಎಂ ಕೋಟ್ಯಾನ್ ಮಲ್ಪೆ, ಗಿರೀಶ್ ಕುಮಾರ್ ಪಿತ್ರೋಡಿ, ಜಯಂತ್ ಸಾಲ್ಯಾನ್ ಕನಕೋಡ, ಕಿರಣ್ ಕುಮಾರ್ ಪಿತ್ರೋಡಿ, ಸುಧಾಕರ ವಿ ಸುವರ್ಣ ಉಚ್ಚಿಲ, ನಾರಾಯಣ ಸಿ ಕರ್ಕೇರ ಪಡುಬಿದ್ರಿ ಕಾಡಿಪಟ್ಣ, ಸತೀಶ್ ಆರ್ ಕರ್ಕೇರ ಸುರತ್ಕಲ್, ವಿಜಯ ಸುವರ್ಣ ಕುಳಾಯಿ, ಹೇಮಂತ್ ತಿಂಗಳಾಯ ಹೊಯ್ಗೆ ಬಜಾರ್, ಪುರುಷೋತ್ತಮ ಕೋಟ್ಯಾನ್ ಬೋಳೂರು, ಯಶವಂತ್ ಪಿ ಮೆಂಡನ್ ಬೋಳೂರು, ಮೊದಲಾದವರು ಉಪಸ್ಥಿತರಿದ್ದರು. ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ನಿರೂಪಿಸಿ, ವಂದಿಸಿದರು.
ಅ.11 : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ - ಹುಲಿ ವೇಷ ಕುಣಿತ ಸ್ಪರ್ಧೆ
Posted On: 07 Oct 2024, 08:10 PM
ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಅಕ್ಟೋಬರ್ 11 ರಂದು ಮಧ್ಯಾಹ್ನ 3.30 ಗಂಟೆಗೆ ಕಾಪುವಿನ ಬಂಟರ ಸಂಘದ ಆವರಣದಲ್ಲಿ ಆಯೋಜಿಲಾಗಿದೆಂದು ರಕ್ಷಣಾಪುರ ಜವನೆರ್ ಕಾಪು ತಂಡದ ಅಧ್ಯಕ್ಷ ನವೀನ್ ಎನ್ ಶೆಟ್ಟಿ ತಿಳಿಸಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ದಸರಾ ಹಬ್ಬದ ಪ್ರಯುಕ್ತ ರಾಜಕೀಯ ರಹಿತವಾಗಿ “ಕಾಪು ಪಿಲಿ ಪರ್ಬ -02"ನಡೆಯಲಿದ್ದು ಊರು ಪರವೂರಿನ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಝಿ ಕನ್ನಡ ಡ್ರಾಮ ಜೂನಿಯರ್ಸ್ ಸೀಜನ್ 4 ವಿಜೇತೆ ಸಮೃದ್ಧಿ ಮೊಗವೀರ ತಂಡದವರಿಂದ ಯಕ್ಷ ನೃತ್ಯ ರೂಪಕ, ಕಿನ್ನಿಗೊಳಿ ಕ್ರೀಪ್ಸ್ ಇನ್ ಕ್ರಿವ್ ಸ್ಟುಡಿಯೋ ಡ್ಯಾನ್ಸ್ ತಂಡದಿಂದ ನೃತ್ಯ ವೈಭವ, ಕುಣಿತ ಭಜನೆ ನಡೆಯಲಿದೆ. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ತಲಾ ಒಂದು ಲಕ್ಷ, ಎಪ್ಪತೈದು ಸಾವಿರ, ಮೂವತ್ತು ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗುತ್ತದೆ. ವಿಶೇಷ ಕರಿಹುಲಿ, ಅಕ್ಕಿಮುಡಿ ಹಾರಿಸುವುದು, ಅತ್ಯುತ್ತಮ ಹುಲಿ, ವೈಯಕ್ತಿಕ ವೇಷ ಕುಣಿತದಾರ, ಮತ್ತು ಭಾಗವಹಿಸಿದ ಎಲ್ಲಾ ತಂಡಗಳಿಗೆ ಪ್ರೋತ್ಸಾಹ ಬಹುಮಾನ ನೀಡಲಾಗುವುದು. ವಿಶೇಷ ಆಕರ್ಷಣೆಯಾಗಿ ಕೋಸ್ಟಲ್ವುಡ್ನ ಸಿನಿ ತಾರೆಯರು, ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ಪ್ರವೇಶ ನೀಡಿದ್ದು ಸುಮಾರು ಹತ್ತಕ್ಕೂ ಅಧಿಕ ಹುಲಿ ವೇಷ ತಂಡ ಭಾಗವಹಿಸುವ ನಿರೀಕ್ಷೆ ಇಡಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭ ರಕ್ಷಣಾಪುರ ಜವನೆರ್ ಕಾಪು ತಂಡದ ಪ್ರಮುಖರಾದ ಗಣೇಶ್ ಕೋಟ್ಯಾನ್, ಕಾರ್ತಿಕ್ ಅಮೀನ್, ರಮೀಜ್ ಹುಸೇನ್, ದೀಪಕ್ ಕುಮಾರ್ ಎರ್ಮಾಳು, ಶಾಂತಲತಾ ಶೆಟ್ಟಿ, ಆಶಾ ಅಂಚನ್, ಅಶ್ವಿನಿ ನವೀನ್, ಅಖಿಲೇಶ್ ಕೋಟ್ಯಾನ್, ದೇವರಾಜ್ ಕೋಟ್ಯಾನ್, ಸುಧೀರ್ ಕರ್ಕೇರ ಉಪಸ್ಥಿತರಿದ್ದರು.
ಕಟಪಾಡಿ ಪೇಟೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
Posted On: 05 Oct 2024, 06:31 PM
ಕಟಪಾಡಿ : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನವನ್ನು ಶನಿವಾರ ಕಟಪಾಡಿ ಪೇಟೆಯಲ್ಲಿ ನಡೆಸಲಾಯಿತು. ಅಭಿಯಾನದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ್ ಕಿಣಿ, ಸುಭಾಸ್ ಬಲ್ಲಾಳ್, ಪವಿತ್ರಾ ಶೆಟ್ಟಿ, ಈಶ್ವರ್ ಕಟಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷರಾದ ವೀಣಾ ಶೆಟ್ಟಿ, ಶಕ್ತಿ ಕೇಂದ್ರದ ಸಂತೋಷ್ ಏಣಗುಡ್ಡೆ, ನಿತಿನ್ ಮೂಡುಬೆಟ್ಟು, ಹರ್ಷಿತ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಚ್ಚಿಲ : ಮುದ್ದು ಮಕ್ಕಳಿಗಾಗಿ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ
Posted On: 05 Oct 2024, 06:24 PM
ಉಚ್ಚಿಲ : ಉಡುಪಿ ಉಚ್ಚಿಲ ದಸರಾ -2024 ರ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದಲ್ಲಿ ಮೂರರಿಂದ ಒಂಭತ್ತು ವರ್ಷ ವಯಸ್ಸಿನ ಮುದ್ದು ಮಕ್ಕಳಿಗಾಗಿ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯು ಶ್ರೀಮತಿ ಶಾಲಿನಿ ಡಾ| ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಶನಿವಾರ ಜರಗಿತು. ಸ್ಪರ್ಧೆಯಲ್ಲಿ ಅದ್ವಿತಿ ಎ. ಪೂಜಾರಿ, ಕೋಟ ಪ್ರಥಮ, ತಪಸ್ಯ ನಾಗಪ್ರಸಾದ್,ಮಲ್ಪೆ ದ್ವಿತೀಯ, ಸನಿಹ ಕೆ. ಕಾಪು ತೃತೀಯ ಬಹುಮಾನ ಪಡೆದಿರುತ್ತಾರೆ. ಪ್ರೋತ್ಸಾಹಕರ ಬಹುಮಾನವಾಗಿ ತಲಾ ರೂ. ಒಂದು ಸಾವಿರ ನೀಡಲಾಗಿದ್ದು, ಒಟ್ಟು 62 ಸ್ಪರ್ಧಿಗಳು ಭಾಗವಹಿಸಿದ್ದರು. ತೀರ್ಪುಗಾರರಾಗಿ ವಿದ್ಯುಷಿ ರಶ್ಮಿ ಸರಳಾಯ, ಮಂಗಳೂರು, ಶ್ರದ್ಧಾ ಪ್ರಭು ಮಂಗಳೂರು, ದೀಪ್ತಿಶ್ರೀ ಜೋಗಿ ಮಂಗಳೂರು ಸಹಕರಿಸಿದ್ದರು.
ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಕಾಯಕ ರತ್ನ ರಾಜ್ಯ ಪ್ರಶಸ್ತಿ ಪ್ರದಾನ
Posted On: 05 Oct 2024, 02:48 PM
ಉಡುಪಿ : ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ಉಡುಪಿ ಜಿಲ್ಲಾ ವತಿಯಿಂದ ಇತ್ತಿಚೆಗೆ ಗೌರವ ಡಾಕ್ಟರೆಟ್ ಪಡೆದ ಕಾಪುವಿನ ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಕಾಯಕ ರತ್ನ ರಾಜ್ಯ ಪ್ರಶಸ್ತಿಯನ್ನು ವಿಶ್ವ ಮನವಾದಿಕಾರ ಹಕ್ಕು ಲೋಕ ಪರಿಷತ್ ಇದರ ಅಂತರಾಷ್ಟ್ರೀಯ ಅಧ್ಯಕ್ಷರಾದ ಸಮಾಜ ರತ್ನ ಡಾ.ಶಂಕರ್ ಶೆಟ್ಟಿ ಉಡುಪಿ ಲಯನ್ಸ್ ಕ್ಲಬ್ ನಲ್ಲಿ ನಡೆದ ನೂತನ ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಡಾ.ಎಂ ಫಾರೂಕ್ ರವರ ಸಮಾಜ ಸೇವೆ ಪರಿಗಣಿಸಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದಿದ್ದಾರೆ ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಕೊಂಡಾಡಿದರು ಹಾಗೂ ಮುಂದೆಯೂ ದೇವರು ಅವರ ಸಮಾಜ ಸೇವೆ ಮುಂದುವರೆಸಲು ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ವಿಶ್ವ ಮಾನವಾಧಿಕಾರಿ ಹಕ್ಕು ಲೋಕ ಪರಿಷತ್ ಇದರ ಕಾನೂನು ಸಲಹೆಗಾರರು ಶ್ಯಾಮ ಸುಂದರ ನಾಯರಿ, ಜಿಲ್ಲಾಧ್ಯಕ್ಷರಾದ ಎಂ.ಇಕ್ಬಾಲ್ ಕುಂಜಿಬೆಟ್ಟು, ಕುಂದಾಪುರ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ, ಉಡುಪಿ ನ್ಯಾಯವಾದಿ ಅಖಿಲ್ ಬಿ ಹೆಗ್ಡೆ, ಮೊಹಮ್ಮದ್ ಇಕ್ಬಾಲ್ ಮನ್ನಾ ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಕೋಟೆ ಶ್ರೀ ಗಡು ಮಾರಿಯಮ್ಮ ಹಾಗೂ ಚಾಮುಂಡೇಶ್ವರಿ ದೇವಸ್ಥಾನ ಮಲ್ಲಾರು - ನವರಾತ್ರಿ ಮಹೋತ್ಸವ
Posted On: 05 Oct 2024, 09:07 AM
ಕಾಪು : ಕೋಟೆ ಶ್ರೀ ಗಡು ಮಾರಿಯಮ್ಮ ಹಾಗೂ ಚಾಮುಂಡೇಶ್ವರಿ ದೇವಸ್ಥಾನ ಮಲ್ಲಾರು, ಕಾಪು ಇಲ್ಲಿಯ ಶ್ರೀ ದೇವಿಯ ಸನ್ನಿಧಾನದಲ್ಲಿ ಅ. 03 ಗುರುವಾರದಿಂದ ನವರಾತ್ರಿ ಮಹೋತ್ಸವ ಆರಂಭಗೊಂಡಿದ್ದು ಅ. 12, ಶನಿವಾರದವರೆಗೆ ಜರಗಲಿದೆ. ಅ.06, ಭಾನುವಾರ ಉಳಿಯಾರು ಯು. ಕೃಷ್ಣಮೂರ್ತಿ ಆಚಾರ್ಯರವರ ನೇತೃತ್ವದಲ್ಲಿ ಬೆಳಿಗ್ಗೆ ಗಂಟೆ 11ಕ್ಕೆ ಚಂಡಿಕಾ ಹೋಮ ನಡೆಯಲಿರುವುದು. ಮಧ್ಯಾಹ್ನ ಗಂಟೆ 12.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಮಧ್ಯಾಹ ಗಂಟೆ 3 ಕ್ಕೆ ಮಹಾಪೂಜೆ ಹಾಗೂ ದರ್ಶನ ಸೇವೆ ಜರಗಲಿರುವುದು. ಭಕ್ತಾಭಿಮಾನಿಗಳು ಈ ಕಾರ್ಯಕ್ರಮಗಳಿಗೆ ಆಗಮಿಸಿ, ತನು-ಮನ-ಧನಗಳಿಂದ ಸಹಕರಿಸಿ, ಶ್ರೀ ಮಾರಿಯಮ್ಮ ದೇವರ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೇವಿಯ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕೆಂದು ಕೋಟೆ ಶ್ರೀ ಗಡು ಮಾರಿಯಮ್ಮ ಹಾಗೂ ಚಾಮುಂಡೇಶ್ವರಿ ದೇವಸ್ಥಾನ, ಮಲ್ಲಾರು ಕಾಪು ದೇವಳದ ಪ್ರಕಟಣೆ ತಿಳಿಸಿದೆ.
ಜೈ ತುಲುನಾಡ್ ಕುಡ್ಲ ಎಗ್ಗೆದ ಗುರ್ಕಾರ್ಲು ಆದ್ ಮನೀಶ್ ಕುಮಾರ್ ಅಜತ್ತ್ ಬತ್ತೆರ್
Posted On: 04 Oct 2024, 04:34 PM
ಕುಡ್ಲ : ಜೈ ತುಲುನಾಡ್ (ರಿ.) ಕುಡ್ಲ ಎಗ್ಗೆದ ವರ್ಸದ ಕೂಡುಪಟ್ಟಾಂಗ ಬೊಕ್ಕ ಪದಗ್ರಹಣ ಲೇಸ್ ಕುಳೂರುದ ಫಲ್ಗುಣ್ ಸಭಾಂಗಣಡ್ ನಡತ್ಂಡ್. ಜೈ ತುಲುನಾಡ್ (ರಿ.) ಕೇಂದ್ರ ಸಮಿತಿದ ಮುತಾಲಿಕೆಡ್ ಪೊಸ ಪಧಾದಿಕಾರಿಲೆನ ಅಜಪುನ ಪ್ರಕ್ರಿಯೆ ನಡತ್ಂಡ್. ಕುಡ್ಲ ಎಗ್ಗೆದ ಪೊಸ ಗುರ್ಕಾರ್ಲು ಆದ್ ಮನೀಶ್ ಕುಮಾರ್ ಅಜತ್ ಬತ್ತೆರ್, ಒತ್ತು ಗುರ್ಕಾರ್ಲು ಚೇತನ್ ಅಂಚನ್, ಕಾರ್ಯಂತೆರ್ ಆದ್ ಲತಾ ಡಿಂಪಲ್ , ಒತ್ತು ಕಾರ್ಯಂತೆರ್ ಆದ್ ರಾಜೇಶ್ ಶೆಟ್ಟಿ ಬೊಕ್ಕ ಚಂದ್ರಶೇಖರ್ ತುಲುವೆ, ಪನವುದ ಪಾಲವೆರ್ ಆದ್ ಪುನೀತ್ ಕುಮಾರ್, ಒತ್ತು ಪನವುದ ಪಾಲವೆರ್ ಆದ್ ನಾಗರಾಜ್ ಶೆಟ್ಟಿಗಾರ್, ಸಂಘಟನಾ ಕಾರ್ಯಂತೆರ್ ಆದ್ ಭವಿಷ್ಯ ಎಸ್ ಸ, ಒತ್ತು ಸಂಘಟನಾ ಕಾರ್ಯಂತೆರ್ ಅಕ್ಷಿತ್ ಶೆಟ್ಟಿ, ಕಾರ್ಯಕಾರಿ ಸಮಿತಿದ ಪದುಕೆರ್ ಆದ್ ದುರ್ಗಾ ಪ್ರಸಾದ್ ರೈ, ಕೀರ್ತನ್ ಆರ್ ಕೋಟ್ಯಾನ್, ಶರತ್ರಾಜ್ ಬೊಕ್ಕ ಸಂಕೇತ್ ಯೆಯ್ಯಾಡಿ ಅಜತ್ತ್ ಬೈದೆರ್. ಈ ಪೊರ್ತುಡು ಜೈ ತುಲುನಾಡ್(ರಿ.) ಕೇಂದ್ರ ಸಮಿತಿದ ಗುರ್ಕಾರ್ಲು ಉದಯ ಪೂಂಜಾ ತಾಳಿಪಾಡಿ ಗುತ್ತು, ಪ್ರಧಾನ ಕಾರ್ಯಂತೆರ್ ಪೂರ್ಣಿಮಾ ಬಂಟ್ವಾಳ, ಪನವುದ ಪಾಲವೆರ್ ರಾಜಶ್ರೀ ದೇವಿಪುರ, ಒತ್ತು ಸಂಘಟನಾ ಕಾರ್ಯಂತೆರ್ ಚಿತ್ರಾಕ್ಷಿ ತೆಗ್ಗು, ಕಾರ್ಯಕಾರಿ ಸಮಿತಿ ಪದುಕೆರ್ ಜೀವಿತಾ ಕುತ್ತಾರ್, ಅಶ್ವಿತಾ, ತಾಪಕ ಸಮಿತಿದ ಪದುಕೆರ್ ರಕ್ಷಿತ್ರಾಜ್ ಬಜಾಲ್, ಕುಡ್ಲ ಎಗ್ಗೆದ ಮಾಜಿ ಗುರ್ಕಾರ್ಲು ನಿರಂಜನ್ ಕರ್ಕೇರ ಬೊಕ್ಕ ಕೂಟದ ಪದುಕೆರ್ ಪಾಲ್ ಪಡೆದಿತ್ತೆರ್. ತಾಪಕ ಸಮಿತಿದ ಪದುಕೆರ್ ಕಿರಣ್ ತುಲುವೆ ಲೇಸ್ ಸುದಾರಿಕೆ ಮಲ್ತೆರ್.
ಗೌರವ ಡಾಕ್ಟರೆಟ್ ಪಡೆದ ಡಾ.ಎಂ. ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಸನ್ಮಾನ
Posted On: 04 Oct 2024, 04:05 PM
ಕಾಪು : ಗೌರವ ಡಾಕ್ಟರೆಟ್ ಪಡೆದ ಡಾ.ಎಂ ಫಾರೂಕ್ ಉಮ್ಮರಬ್ಬ ಇವರಿಗೆ ಮಜೂರು ಉಮಾತ್ಮ ಇದ್ದಿನಬ್ಬ ಫ್ಯಾಮಿಲಿ ಗ್ರೂಪ್ ನಿಂದ ಸನ್ಮಾನ ಕಾರ್ಯಕ್ರಮ ಚಂದ್ರನಗರ ಬಟರ್ ಫ್ಲೈ ಪಾರ್ಟಿ ಹಾಲ್ ಮರ್ಹೂಂ ಹಾಜಿ ಉಮ್ಮರಬ್ಬ ವೇದಿಕೆಯಲ್ಲಿ ಬದ್ರಿಯಾ ಜುಮ್ಮಾ ಮಸ್ಜಿದ್ ಧರ್ಮಗುರುಗಳಾದ ಅಬ್ದುಲ್ ರಶೀದ್ ಸಖಾಫಿಯವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗುರುಗಳು ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ರವರ ಸಾಮಾಜಿಕ ಕಳಕಳಿಯ ಕಾರ್ಯಕ್ರಮ ದೇವರು ಮೆಚ್ಚುವಂತದ್ದು. ನಾನು ಅವರ ಹಲವಾರು ಸಮಾಜ ಸೇವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಮುಂದೆಯೂ ನೂರಾರು ಸಾಮಾಜಿಕ ಕಾರ್ಯಕ್ರಮ ಮಾಡಲು ಅಲ್ಲಾಹು ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಉಮಾತ್ಮ ಇದ್ದಿನಬ್ಬ ಫ್ಯಾಮಿಲಿ ಗ್ರೂಪ್ ಇದರ ಪ್ರದಾನ ಕಾರ್ಯದರ್ಶಿ ಫಯಾಜ್ ಹಾಜಿ ಮಜೂರು, ಗೌರವ ಅಧ್ಯಕ್ಷರಾದ ಹಸನಬ್ಬ ಮಜೂರು, ಸದಸ್ಯರುಗಳಾದ ಎಸ್. ಎ ಅಬ್ದುಲ್ ರಝಕ್ (ಕೊಪ್ಪ) ಚಂದ್ರನಗರ, ದಫ್ ಉಸ್ತಾದ್ ಪಿ ಪಿ ಬಷೀರ್ ಪಕೀರಣಕಟ್ಟೆ, ಹಾಜಿ ಬಾವು ಚಂದ್ರನಗರ, ಕೇರಿಮ್ ಚಂದ್ರನಗರ, ಮೊಹಮ್ಮದ್ ಸಾದಿಕ್ ಚಂದ್ರನಗರ, ರಝಕ್ ಮಲ್ಲಾರು, ಬಾವ ಕಲ್ಯಾ, ಹಸನ್ ಕಲ್ಯಾ, ರಝಕ್ ಕಲ್ಯಾ, ರಫೀಕ್ ಪಕೀರಣಕಟ್ಟೆ, ರಝಕ್ ಮಲ್ಲಾರು, ಶೇಕ್ ಪಕೀರಣಕಟ್ಟೆ, ಮಯ್ಯದ್ದಿ ಪಕೀರಣಕಟ್ಟೆ, ಶಂಶುದ್ದೀನ್ ಚಂದ್ರನಗರ, ಹಮೀದ್ ಪಯ್ಯಾರು,ಹನೀಫ್ ಪಕೀರಣಕಟ್ಟೆ ,ಅಶ್ರಫ್ ಪಯ್ಯಾರು, ಆಶೀಕ್ ಮಲ್ಲಾರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
