Updated News From Kaup
ಕಾಪು ಜೇಸಿಐ ಸಂಸ್ಥೆಗೆ ಜೇಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ನ್ಯಾಯವಾದಿ ಜೆ ಎಫ್ ಎಸ್ ರೆಖೇಶ್ ಶರ್ಮ ಭೇಟಿ
Posted On: 22-08-2024 06:14PM
ಕಾಪು : ಜಾಗತಿಕವಾಗಿ 115 ದೇಶದಲ್ಲಿ ಯುವ ನಾಯಕರು, ಉದ್ಯಮಿಗಳ ಜೊತೆಗೆ 5 ಲಕ್ಷ ಸಕ್ರಿಯ ಸದಸ್ಯರನ್ನು ಹೊಂದಿರುವ ಜೇಸಿಐ ಸಂಸ್ಥೆಯು ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು ವಿವಿಧ ಝೋನ್ ಗಳ ಘಟಕಗಳ ಭೇಟಿಯ ಜೊತೆಗೆ ಸಮಾಜಮುಖಿ ಕಾರ್ಯಗಳಿಗೆ ಚಾಲನೆ ಕಾರ್ಯ ನೀಡಲಾಗುತ್ತಿದೆ ಎಂದು ಜೇಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ನ್ಯಾಯವಾದಿ ಜೆ ಎಫ್ ಎಸ್ ರೆಖೇಶ್ ಶರ್ಮ ಹೇಳಿದರು. ಅವರು ಜೇಸಿಐ ಕಾಪು ಭೇಟಿಯ ಸಂದರ್ಭ ಕಾಪುವಿನ ಮಂದಾರ ಹೊಟೇಲ್ ಸಭಾಂಗಣದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಐವನ್ ಡಿಸೋಜ ಮನೆ ಮೇಲಿನ ದಾಳಿ ಖಂಡನೀಯ : ಗುಲಾಂ ಮೊಹಮ್ಮದ್
Posted On: 22-08-2024 05:41PM
ಪಡುಬಿದ್ರಿ : ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದೊಂದು ಮೃಗೀಯ ವರ್ತನೆಯಾಗಿದ್ದು ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ.
ಪಡುಬಿದ್ರಿ : ಮುಂಡಾಲ ಯುವ ವೇದಿಕೆ ಮತ್ತು ಗಜಾನನ ಭಜನಾ ಮಂದಿರ - ರಕ್ಷಾಬಂಧನ ಕಾರ್ಯಕ್ರಮ
Posted On: 21-08-2024 09:44PM
ಪಡುಬಿದ್ರಿ : ಬೊಗ್ಗರಿಲಚ್ಚಿಲ್ ನ ಗಜಾನನ ಭಜನಾ ಮಂದಿರ ಮತ್ತು ಮುಂಡಾಲ ಯುವ ವೇದಿಕೆ (ರಿ.) ಪಡುಬಿದ್ರಿ ವತಿಯಿಂದ ಮಂಗಳವಾರ ರಕ್ಷಾಬಂಧನ ಕಾರ್ಯಕ್ರಮ ಜರಗಿತು.
ಕಾಪು : ದಂಡತೀರ್ಥ ಕನ್ನಡ ಮಾಧ್ಯಮ ಶಾಲೆ - ಸಮವಸ್ತ್ರ ವಿತರಣೆ
Posted On: 21-08-2024 09:30PM
ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉಳಿಯಾರಗೋಳಿ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಸಮವಸ್ತ್ರ ವಿತರಿಸಲಾಯಿತು.
ಆಗಸ್ಟ್ 25 : ಪಡುಬಿದ್ರಿ ಬಂಟರ ಸಂಘದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ
Posted On: 21-08-2024 09:10PM
ಪಡುಬಿದ್ರಿ : ಇಲ್ಲಿನ ಬಂಟರ ಸಂಘ ಮತ್ತು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್, ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಯೋಜನೆಯಲ್ಲಿ ಆಗಸ್ಟ್ 25 ರಂದು ಪಡುಬಿದ್ರಿ ಬಂಟರ ಸಂಘ ಸಭಾಭವನದಲ್ಲಿ ಯುವಕರಿಗೆ ಮತ್ತು ಮಹಿಳೆಯರಿಗೆ ಒಂದು ದಿನದ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಗ್ರಾಮೀಣ ಬಂಟರ ಸಂಘ ಟ್ರಸ್ಟ್ ನ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ ಮತ್ತು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರು ಡಾ. ದೇವಿಪ್ರಸಾದ್ ಶೆಟ್ಟಿಯವರು ಬುಧವಾರ ಪಡುಬಿದ್ರಿ ಬಂಟರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪಡುಬಿದ್ರಿ : ಕಾಂಗ್ರೆಸ್ ಪಕ್ಷದ ವತಿಯಿಂದ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ
Posted On: 21-08-2024 05:31PM
ಪಡುಬಿದ್ರಿ : ಪಡುಬಿದ್ರಿ - ಕಾರ್ಕಳ ರಸ್ತೆಯಲ್ಲಿ ಕಂಚಿನಡ್ಕ ಪ್ರದೇಶದಲ್ಲಿ ರಾಜ್ಯ ಸರಕಾರ ನಿರ್ಮಾಣ ಮಾಡಲು ಉದ್ದೇಶಿಸಿದ ಸುಂಕ ವಸೂಲಾತಿ ಕೇಂದ್ರದ ವಿರುದ್ಧ ಬುಧವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ ಜರಗಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪಡುಬಿದ್ರಿ-ಕಾರ್ಕಳ ರಸ್ತೆಯ ಟೋಲ್ ಗೇಟ್ ಬಿಜೆಪಿ ಸರಕಾರ ಇರುವಾಗ ರೂಪಿತವಾದ ಯೋಜನೆಯಾಗಿದೆ. ಬೆಳ್ಮಣ್ ಭಾಗದಲ್ಲಿಯ ಪ್ರತಿಭಟನೆ ನಂತರ ಕಂಚಿನಡ್ಕ ಪ್ರದೇಶದಲ್ಲಿ ಟೋಲ್ ಗೇಟ್ ಸ್ಥಾಪನೆಗೆ ಬಿಜೆಪಿ ಸರಕಾರವೇ ಕಾರಣವಾಗಿದೆ. ಇಲ್ಲಿ ಕಾಂಗ್ರೆಸ್ ಪಕ್ಷದ ಯಾವ ಪಾತ್ರವೂ ಇಲ್ಲ. ಮೊದಲೇ ಟೋಲ್ ಆಗಬೇಕೆನ್ನುವ ಹಿನ್ನೆಲೆಯಲ್ಲಿ ರಸ್ತೆ ನಿರ್ಮಾಣ ಮಾಡಿ, ಇದೀಗ ಟೋಲ್ ಗೇಟ್ ನಿರ್ಮಾಣಕ್ಕೂ ಮುಂದಾಗಿರುವುದು ಬಿಜೆಪಿ.
ಕಾಪು ವಲಯ ಕುಲಾಲ ಸಂಘದ ಮಹಿಳಾ ಘಟಕದ ನೂತನ ಅಧ್ಯಕ್ಷೆ, ಕಾರ್ಯದರ್ಶಿ ಆಯ್ಕೆ
Posted On: 21-08-2024 05:06PM
ಕಾಪು : ಕುಲಾಲ ಸಂಘ (ರಿ.) ಕಾಪು ವಲಯ ಇದರ 2024 - 2026ರ ಅವಧಿಗೆ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಸುಮಲತಾ ಶೇಖರ್ ಇನ್ನoಜೆ ಮತ್ತು ನೂತನ ಕಾರ್ಯದರ್ಶಿಯಾಗಿ ಸುಜಾತ ಹರೀಶ್ ಕುಲಾಲ್ ಕಳತ್ತೂರು ಆಯ್ಕೆಯಾಗಿರುತ್ತಾರೆ.
ಆಗಸ್ಟ್ 22 : ಜೆಸಿಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ರಿಕೇಶ್ ಶರ್ಮ ಶಂಕರಪುರ ಭೇಟಿ
Posted On: 21-08-2024 04:56PM
ಕಟಪಾಡಿ : ಜೆಸಿಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ JFS C.R. ರಿಕೇಶ್ ಶರ್ಮ ಆಗಸ್ಟ್ 22 ರಂದು ಸಂಜೆ 7 ಗಂಟೆಗೆ ಜೆಸಿಐ ಶಂಕರಪುರ ಜಾಸ್ಮಿನ್ ಘಟಕಕ್ಕೆ ಆಗಮಿಸಲಿದ್ದಾರೆ. ಬಹು ಘಟಕ ಸಮಾವೇಶದಲ್ಲಿ ಪಾಲ್ಗೊಂಡು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ವಿವಿಧ ಘಟಕಗಳ ಅಧ್ಯಕ್ಷರುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜೆಸಿಐ ಶಂಕರಪುರ ಜಾಸ್ಮಿನ್ ಇದರ ಅಧ್ಯಕ್ಷರಾದ ಜೆಸಿ ಹರೀಶ್ ಪೂಜಾರಿ ಇನ್ನಂಜೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಚ್ಚಿಲ ರೋಟರಿ ಕ್ಲಬ್ : ಡೆಂಗ್ಯು, ಮಲೇರಿಯಾ ಜಾಗೃತಿ ಕಾರ್ಯಕ್ರಮ ; ಕರಪತ್ರ ಹಂಚಿಕೆ
Posted On: 20-08-2024 05:44PM
ಉಚ್ಚಿಲ : ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಉಚ್ಚಿಲದ ಸರಸ್ವತಿ ಮಂದಿರ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಡೆಂಗ್ಯು ಮತ್ತು ಮಲೇರಿಯಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಲಿಮಾ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಉಡುಪಿ : ರಾಜ್ಯಮಟ್ಟದ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ
Posted On: 20-08-2024 10:45AM
ಉಡುಪಿ : ಕಲಿಮಾ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ವತಿಯಿಂದ ಬೆಂಗಳೂರಿನ ಬಿ. ಬಿ.ಎಂ. ಪಿ ಮೈದಾನ ಜಯಂತಿನಗರ ಹೊರಮಾವು ಎಂಬಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಬ್ರಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಶಾಸಕ ಡಿ, ಕೆ ಗೋಪಾಲ್ ಉದ್ಘಾಟಿಸಿದರು.
