Updated News From Kaup
ಇನ್ನಂಜೆ ಯುವಕ ಮಂಡಲದ ಪದಗ್ರಹಣ

Posted On: 15-08-2024 02:04PM
ಇನ್ನಂಜೆ : ಯುವಕ ಮಂಡಲದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವು ಇನ್ನಂಜೆಯಲ್ಲಿ ಜರಗಿತು.
ಯುವಕ ಮಂಡಲದ ನಿರ್ಗಮನ ಅಧ್ಯಕ್ಷ ದಿವೇಶ್ ಶೆಟ್ಟಿಯವರು ನಿಯೋಜಿತ ಅಧ್ಯಕ್ಷ ಮಧುಸೂಧನ್ ಆಚಾರ್ಯರವರಿಗೆ, ನಿರ್ಗಮನ ಕಾರ್ಯದರ್ಶಿ ಹರೀಶ್ ಪೂಜಾರಿಯವರು ನಿಯೋಜಿತ ಕಾರ್ಯದರ್ಶಿಯಾದ ಪವನ್ ಕುಮಾರ್ ರವರಿಗೆ ಅಧಿಕಾರ ಹಸ್ತಾಂತರಿಸಿದರು.
ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ನವೀನ್ ಶೆಟ್ಟಿˌ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಪ್ರೈಮರಿ ದೈಹಿಕ ಶಿಕ್ಷಣ ಶಿಕ್ಷಕರಾದ ರವಿ, ಪಂಚಾಯತ್ ಸದಸ್ಯರುಗಳು, ನೂತನವಾಗಿ ಆಯ್ಕೆಯಾದ ಯುವಕ ಮಂಡಲದ 18 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಇನ್ನಂಜೆ ಯುವಕ ಮಂಡಲ, ರೋಟರಿ ಸಮುದಾಯ ದಳ : ಬ್ಯಾಡ್ಮಿಂಟನ್ ಕೋರ್ಟ್ ಕೊಡುಗೆ

Posted On: 15-08-2024 01:51PM
ಕಾಪು : ತಾಲೂಕಿನ ಇನ್ನಂಜೆ ಯುವಕ ಮಂಡಲದ ಅಧ್ಯಕ್ಷರಾದ ದಿವೇಶ್ ಶೆಟ್ಟಿ ಹಾಗೂ ರೋಟರಿ ಸಮುದಾಯ ದಳದ ಅಧ್ಯಕ್ಷರಾದ ಪ್ರಶಾಂತ್ ಆಚಾರ್ಯರವರು ಕೊಡುಗೆಯಾಗಿ ನೀಡಿದ ಬ್ಯಾಡ್ಮಿಂಟನ್ ಕೋರ್ಟ್ ನ್ನು ಇನ್ನಂಜೆ ಎಸ್ ವಿ ಎಚ್ ಶಾಲಾ ದೈಹಿಕ ಶಿಕ್ಷಕ ನವೀನ್ ಶೆಟ್ಟಿಯವರು ಉದ್ಘಾಟಿಸಿ ಯುವಕ ಮಂಡಲದ ನಿಯೋಜಿತ ಅಧ್ಯಕ್ಷರಾದ ಮಧುಸೂಧನ್ ಆಚಾರ್ಯರವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪಂಚಾಯತ್ ಸದಸ್ಯರುಗಳು ಮತ್ತು ಯುವಕ ಮಂಡಲ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಎರ್ಮಾಳು ತೆಂಕ ಅಟೋ ಯೂನಿಯನ್ : 78ನೇ ಸ್ವಾತಂತ್ರೋತ್ಸವ ಆಚರಣೆ

Posted On: 15-08-2024 01:41PM
ಎರ್ಮಾಳು : 78ನೇ ಸ್ವಾತಂತ್ರೋತ್ಸವದ ಅಂಗವಾಗಿ ಎರ್ಮಾಳು ತೆಂಕ ಅಟೋ ಯೂನಿಯನ್ ವತಿಯಿಂದ ಆಚರಿಸಲ್ಪಟ್ಟ ಕಾರ್ಯಕ್ರಮದಲ್ಲಿ ಯೂನಿಯನ್ ಅಧ್ಯಕ್ಷ ಪತ್ರಕರ್ತ ಸುರೇಶ್ ಎರ್ಮಾಳು ಧ್ವಜಾರೋಹಣ ಗೈದರು.
ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ರಾಜು ಪೂಜಾರಿ, ಕಾರ್ಯದರ್ಶಿ ಭರತ್ ಶೆಟ್ಟಿಗಾರ್, ಗ್ರಾ.ಪಂ.ಸದಸ್ಯರಾದ ಸಂತೋಷ್, ಮನೋಜ್ ಶೆಟ್ಟಿ, ಮೋಹನ್, ಕೇಶವ ಮೊಯಿಲಿ, ವಿನಿತ್ ತಲವಾರ್ ಸಹಿತ ಯೂನಿಯನ್ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಆಗಸ್ಟ್ 16 : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ - 11ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ

Posted On: 15-08-2024 01:36PM
ಶಿರ್ವ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ಇದರ ವತಿಯಿಂದ ಆಗಸ್ಟ್ 16, ಶುಕ್ರವಾರ ಬೆಳಿಗ್ಗೆ ಗಂಟೆ 9 ರಿಂದ 11ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ಗಾಂಧಿನಗರ ಕಲಾ ವೃಂದದ ವೇದಿಕೆಯಲ್ಲಿ ಜರಗಲಿದೆ.
ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಕಲಶ ಪ್ರತಿಷ್ಠೆ, ಚೂಡಿ ಪೂಜೆ, ಕುಂಕುಮಾರ್ಚನೆ, ಭಜನಾ ಕಾರ್ಯಕ್ರಮ, ಮಂಗಳಾರತಿ ಮಹಾಪೂಜೆ, ಅನ್ನ ಸಂತರ್ಪಣೆಯು ನಡೆಯಲಿದೆ ಎಂದು ಶ್ರೀ ವಿಷ್ಣು ಕಲಾವೃಂದದ ಪ್ರಕಟಣೆ ತಿಳಿಸಿದೆ.
ಉಚ್ಚಿಲ : ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು - ಮಧ್ಯರಾತ್ರಿ ಧ್ವಜಾರೋಹಣ

Posted On: 15-08-2024 01:23PM
ಉಚ್ಚಿಲ : ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಆಗಸ್ಟ್ 14 ರ ಮಧ್ಯರಾತ್ರಿ 12ಗಂಟೆಗೆ ಸದಸ್ಯರಾದ ಕಾರ್ತಿಕ್ ಸುವರ್ಣ ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನ ಆಚರಿಸಿದರು.
ಕಾರ್ಯಕ್ರಮದಲ್ಲಿ ಟ್ರಸ್ಟಿ ಪ್ರತೀಕ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ ಪಿ, ಸದಸ್ಯರಾದ ಸುಜಯ್ ಪೂಜಾರಿ, ಅಶೋಕ್ ಕರ್ಕೇರ ವಿಪಿನ್ ಮೊಗವೀರ, ರಾಜ್ ಪಡುಬಿದ್ರಿ, ಪ್ರಜೇಶ್, ವಿಕಾಸ್ ಪೂಜಾರಿ, ತಟಮನ್ವಿತ್ ಹವ್ಯಾಸ್ ಪೂಜಾರಿ, ಗಗನ್ ಮೆಂಡನ್ ಗುರುರಾಜ್, ತನೀಶ್ ಉಪಸ್ಥಿತರಿದ್ದರು.
ಕಾಪು : ರೋಟರಿ ಸಮುದಾಯದಳ ಇನ್ನಂಜೆ ಪದಪ್ರದಾನ

Posted On: 13-08-2024 10:07PM
ಕಾಪು : ರೋಟರಿ ಸಮುದಾಯದಳ ಇನ್ನಂಜೆ ಇದರ ಪದಪ್ರದಾನ ಸಮಾರಂಭವು ರೋಟರಿ ಭವನ ಶಂಕರಪುರದಲ್ಲಿ ಜರುಗಿತು.
ನೂತನ ಅಧ್ಯಕ್ಷರಾದ ಪ್ರಶಾಂತ್ ಆಚಾರ್ಯ ಮತ್ತು ನೂತನ ಕಾರ್ಯದರ್ಶಿಯಾದ ವಜ್ರೇಶ್ ಆಚಾರ್ಯ ಇವರಿಗೆ ಪದಪ್ರಧಾನವನ್ನು ರೋಟರಿ ಶಂಕರಪುರದ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಇವರು ನೆರವೇರಿಸಿದರು.
ರೋಟರಿ ಸಮುದಾಯದಳ 3182 ರ ಜಿಲ್ಲಾ ಸಭಾಪತಿಯಾದ ಪುಂಡಲೀಕ ಮರಾಠೆ ಇವರು ಆರ್ ಸಿ ಸಿ ಬಗ್ಗೆ ಮಾಹಿತಿ ನೀಡಿದರು.
ವಲಯ 5 ರ ಸಹಾಯಕ ಗವರ್ನರ್ ಅನಿಲ್ ಡೆಸಾ, ಆರ್ ಸಿ ಸಿ ಜಿಲ್ಲಾ ಪ್ರತಿನಿಧಿಯಾದ ಪ್ರಸಾದ್ ಪಾದೂರು ಉಪಸ್ಥಿತರಿದ್ದರು. ರವಿ ಪ್ರಸಾದ್ ಸ್ವಾಗತಿಸಿದರು. ಜೇಸುದಾಸ್ ಸೋನ್ಸ್ ವರದಿ ವಾಚಿಸಿದರು. ಕಾರ್ಯಕ್ರಮವನ್ನು ಚಂದ್ರ ಪೂಜಾರಿ ನಿರೂಪಿಸಿದರು.
ಆಗಸ್ಟ್ 15 : ಗ್ರಾಮೀಣ ಕಾಂಗ್ರೆಸ್ ಸಮಿತಿ ಪಡುಬಿದ್ರಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Posted On: 13-08-2024 10:02PM
ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಸಮಿತಿ ಪಡುಬಿದ್ರಿ ವತಿಯಿಂದ ಆಗಸ್ಟ್ 15, ಗುರುವಾರ ಪೂರ್ವಾಹ್ನ 8 ಗಂಟೆಗೆ ಸರಿಯಾಗಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಪಂಡಿತ್ ತೋಮ ಪೂಜಾರಿ ಆಯುರ್ವೇದ ಸ್ಟೋರ್ ನ ಮುಂಭಾಗ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಧ್ವಜಸ್ತಂಭದಲ್ಲಿ ಮಾಜಿ ಸಚಿವ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆರವರ ಉಪಸ್ಥಿತಿಯಲ್ಲಿ ಜರುಗಲಿದೆ ಎಂದು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕರುಣಾಕರ್ ಎಮ್. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ : ಕಂಚಿನಡ್ಕ ಬಳಿ ಟೋಲ್ ನಿರ್ಮಾಣ - ಅಧಿಕಾರಿಗಳು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ

Posted On: 13-08-2024 05:16PM
ಪಡುಬಿದ್ರಿ : ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಬಳಿ ಟೋಲ್ ಬೂತ್ ನಿರ್ಮಾಣದ ಬಗ್ಗೆ ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳನ್ನು ಟೋಲ್ ವಿರೋಧಿ ಹೋರಾಟ ಸಮಿತಿಯವರು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ನಡೆದಿದೆ.
ಸ್ಥಳ ಪರಿಶೀಲನೆಗಾಗಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಎಕ್ಸಿಕ್ಯೂಟಿವ್ ಎಂಜಿನಿಯರ್ ರಘು ಎಲ್ ಹಾಗೂ ಸಹಾಯಕ ಎಂಜಿನಿಯರ್ ಹೇಮಂತ್ ಕುಮಾರ್ ಆಗಮಿಸಿದ್ದರು. ಅಧಿಕಾರಗಳು ಸ್ಥಳಕ್ಕೆ ಬರುವ ಸುದ್ದಿ ತಿಳಿದು ಸ್ಥಳದಲ್ಲಿ ಟೋಲ್ ವಿರೋಧಿ ಹೋರಾಟಗಾರರು ಸ್ಥಳದಲ್ಲಿ ಜಮಾಯಿಸಿದ್ದರು.
ಸ್ಥಳಕ್ಕೆ ಬಂದ ಅಧಿಕಾರಿಗಳು ಹಾಗೂ ಟೋಲ್ವಿರೋಧಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿದಾಗ ಪೋಲಿಸರ ಮಧ್ಯ ಪ್ರವೇಶದಿಂದ ತಿಳಿಯಾಗಿ ಬಳಿಕ ಮಾಹಿತಿ ನೀಡಲು ಮುಂದಾದಾಗ ಟೋಲ್ ವಿರೋಧಿ ಹೋರಾಟಗಾರರು ಯಾವುದೇ ಕಾರಣಕ್ಕೂ ಇಲ್ಲಿ ಟೋಲ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದರು.
ಟೋಲ್ ವಿರೋಧ ಹೋರಾಟ ಸಮಿತಿಯ ಸುಹಾಸ್ ಹೆಗ್ಡೆ ಮಾತನಾಡಿ ಟೋಲ್ನಿರ್ಮಾಣ ಪ್ರಸ್ತಾವನೆ ಇಲ್ಲಿಗೆ ಕೈಬಿಡಬೇಕು ಎಂದು ಒತ್ತಾಯಿಸಿ ಐದು ದಿನಗಳ ಒಳಗಾಗಿ ಬೃಹತ್ ಮಟ್ಟದ ಪ್ರತಿಭಟನೆಯನ್ನು ಆಯೋಜಿಸಲಾಗುವುದು ಎಂದರು.
ಪಡುಬಿದ್ರಿ : ಕಾರ್ಕಳ -ಪಡುಬಿದ್ರಿ ರಸ್ತೆ ಟೋಲ್ ಬೂತ್ ನಿರ್ಮಾಣದ ವಿರುದ್ಧ ಜನಾಗ್ರಹ ಸಭೆ

Posted On: 12-08-2024 08:41PM
ಪಡುಬಿದ್ರಿ : ಹೋರಾಟದ ಸಂಕಲ್ಪದೊಂದಿಗೆ ಶಾಸಕನಾಗಿ ನಿಮ್ಮ ಜೊತೆ ಇರುತ್ತೇನೆ. ನಾವು ಕೈಗೆ ಬಳೆ ತೊಟ್ಟಿಲ್ಲ. ನಾವೆಲ್ಲರೂ ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಟ್ಟಾಗಬೇಕು. ನಮ್ಮಲ್ಲಿ ವಿಶ್ವಾಸವಿರಬೇಕು. ಕಂಚಿನಡ್ಕ ಟೋಲ್ ಹಿಂಪಡೆಯದ ಹೊರತು ಹೋರಾಟ ನಿಲ್ಲದು. ಕಾಪು ಕ್ಷೇತ್ರದಲ್ಲಿ ರಾಜ್ಯ ಸರಕಾರ ಮಾಡಲು ಉದ್ದೇಶಿಸಿರುವ ಟೋಲ್ ಎಂದಿಗೂ ಆಗಲು ಬಿಡುವುದಿಲ್ಲ ಎಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಕಾರ್ಕಳ -ಪಡುಬಿದ್ರಿ ರಸ್ತೆಯ ಟೋಲ್ ಬೂತ್ ನಿರ್ಮಾಣದ ವಿರುದ್ಧ ಪಡುಬಿದ್ರಿ ಉದಯಾದ್ರಿ ದೇವಸ್ಥಾನದಲ್ಲಿ ಜರಗಿದ ಜನಾಗ್ರಹ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಬೆಳ್ಮಣ್ ಟೋಲ್ ಹೋರಾಟ ಸಮಿತಿಯ ಪ್ರಮುಖ, ನ್ಯಾಯವಾದಿ ಸರ್ವಜ್ಞ ತಂತ್ರಿ ಮಾತನಾಡಿ ಜನ ಸೇರಿದಾಗ ಮಾತ್ರ ಹೋರಾಟ ಯಶಸ್ಸು ಸಾಧ್ಯ. ಎಲ್ಲಾ ನಾಯಕರು ಬೆಂಬಲ ನೀಡಬೇಕು. ಜನಾಂದೋಲನ ಉಗ್ರ ಹೋರಾಟವಾಗಬೇಕು. ಸರಕಾರ ಈ ರೀತಿ ಜನರಿಂದ ಟೋಲ್ ಸಂಗ್ರಹಿಸುವ ಬದಲು ನಮ್ಮಲ್ಲಿಯ ಕಾರ್ಯಕ್ರಮಗಳ ಸಂದರ್ಭ ಭಿಕ್ಷಾ ಪಾತ್ರೆ ಇಡಲಿ. ಕಂಚಿನಡ್ಕ ಟೋಲ್ ಹಿಂಪಡೆಯದ ಹೊರತು ಹೋರಾಟ ನಿಲ್ಲದು. ಆರ್ ಟಿ ಐ ಕಾರ್ಯಕರ್ತರಾದ ರಮಾನಾಥ ಮಾತನಾಡಿ ಪ್ರಸ್ತುತ ಇಲ್ಲಿ 5 -6 ಬ್ಲಾಕ್ ಸ್ಪಾಟ್, ಎರಡು ಅಪಾಯಕಾರಿ ಸೇತುವೆ, ಎರಡು ಪೊಲೀಸ್ ಸ್ಟೇಷನ್ಗಳಲ್ಲಿ ನೂರಾರು ಅಪಘಾತಗಳ ದೂರುಗಳಿವೆ. ನಮ್ಮ ರಾಜ್ಯದಲ್ಲಿ ಇಂತಹ ಮೂರು ಹೈವೇಗಳಿದ್ದು ಅಲ್ಲಿ ರಾಷ್ಟ್ರೀಯ ಹೆದ್ದಾರಿ ಇಲ್ಲದಾಗಿದೆ. ಈ ಭಾಗದ ವ್ಯಾಪಾರ, ಉದ್ದಿಮೆಗಳು ಅತಿ ಹೆಚ್ಚಿನ ಸುಂಕವನ್ನು ಸರಕಾರಕ್ಕೆ ಸಲ್ಲಿಸುತ್ತಿದ್ದಾರೆ. ಈ ಅಂಶಗಳನ್ನು ಕಾನೂನು ತಜ್ಞರೊಂದಿಗೆ ಚರ್ಚಿಸಿ ನ್ಯಾಯಾಲಕ್ಕೆ ತಿಳಿಸಬೇಕಾಗಿದೆ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ಪ್ರಮುಖ ಅನ್ಸಾರ್ ಅಹಮದ್, ಗುತ್ತಿಗೆದಾರ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್ ಚಂದ್ರ ಶೆಟ್ಟಿ, ಕಾಪು ಕ್ಷೇತ್ರದ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಸಾಮಾಜಿಕ ಕಾರ್ಯಕರ್ತೆ ಅನಿತಾ ಡಿಸೋಜ, ಕೆನರಾ ಬಸ್ ಮಾಲಕರ ಸಂಘದ ಪ್ರತಿನಿಧಿ ಜ್ಯೋತಿ ಪ್ರಸಾದ್, ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಅಸೋಸಿಯೇಷನ್ ಸದಸ್ಯ ರಮೇಶ್ ಕೋಟ್ಯಾನ್ ಅಭಿಪ್ರಾಯ ಮಂಡಿಸಿದರು ಜನಾಂದೋಲನದಲ್ಲಿ ಜನಾಗ್ರಹ : ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕಂಚಿನಡ್ಕ ಪ್ರದೇಶದಲ್ಲಿ ಉದ್ದೇಶಿಸಿರುವ ಸುಂಕ ವಸೂಲಾತಿ ಕೇಂದ್ರಕ್ಕೆ ಸಮಸ್ತ ಕಾರ್ಕಳ ಪಡುಬಿದ್ರಿ ಹೆದ್ದಾರಿಯನ್ನು ಅವಲಂಬಿಸಿರುವ ಸುಮಾರು 40 ಹಳ್ಳಿಗಳ ಜನತೆಯ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಈ ರಾಜ್ಯ ಹೆದ್ದಾರಿಯಲ್ಲಿ ಸುಂಕ ವಸೂಲಾತಿ ಕೇಂದ್ರ ಸ್ಥಾಪಿಸಲು ಅವಕಾಶ ಕೊಡುವುದಿಲ್ಲ. ಈ ಜನಾಗ್ರಹ ಸಭೆಯ ಮೂಲಕ ರಾಜ್ಯ ಸರಕಾರವನ್ನು ಒತ್ತಾಯಿಸುವುದೇನೆಂದರೆ ಜನ ವಿರೋಧಿಯಾಗಿರುವ ಈ ಸುಂಕ ವಸೂಲಾತಿ ಕೇಂದ್ರದ ಪ್ರಸ್ತಾವನೆಯನ್ನು ಈ ಕೂಡಲೇ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ 40 ಹಳ್ಳಿಯ ಜನರು ಸೇರಿ ಜನಾಂದೋಲನದ ಮೂಲಕ ಉಗ್ರ ಹೋರಾಟ ಮಾಡಲು ಸಿದ್ಧರಿದ್ದೇವೆ ಹಾಗೂ ಜನರ ವಿರೋಧದ ನಡುವೆಯೂ ಸುಂಕ ವಸೂಲಾತಿ ಕೇಂದ್ರ ಸರಕಾರ ರಚಿಸಲು ಮುಂದಾದರೆ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ಸರಕಾರ ಸಂಪೂರ್ಣ ಹೊಣೆಯಾಗಲಿದೆ ಎಂದು ಎಚ್ಚರಿಕೆಯ ಸಂದೇಶ ನೀಡುತ್ತಿದ್ದೇವೆ ಎಂದು ಅಭಿಪ್ರಾಯ ಮಂಡಿಸಲಾಯಿತು.
ಜನಾಗ್ರಹ ಸಭೆಯಲ್ಲಿ ಉದ್ಯಮಿ ಸುಹಾಸ್ ಹೆಗ್ಡೆ ನಂದಳಿಕೆಯವರನ್ನು ಸರ್ವಾನುಮತದಿಂದ ಕಾರ್ಕಳ -ಪಡುಬಿದ್ರಿ ಟೋಲ್ ವಿರೋಧಿ ಹೋರಾಟದ ಅಧ್ಯಕ್ಷರನ್ನಾಗಿ ಮತ್ತು ಸಮಿತಿಯ ಪದಾಧಿಕಾರಿಗಳನ್ನು ಆರಿಸಲಾಯಿತು. ವಿವಿಧ ರಾಜಕೀಯ ಪಕ್ಷದ ಮುಖಂಡರುಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. ದೀಪಕ್ ಕಾಮತ್ ಕಾಂಜರಕಟ್ಟೆ ನಿರೂಪಿಸಿದರು.
ಕಾಪು : ವಲಯ ಕುಲಾಲ ಸಂಘದ ಅಧ್ಯಕ್ಷರಾಗಿ ಹರೀಶ್ ಕುಲಾಲ್ ಬೆಳ್ಳಿಬೆಟ್ಟು ಆಯ್ಕೆ

Posted On: 12-08-2024 09:02AM
ಕಾಪು : ಕಾಪು ವಲಯ ಕುಲಾಲ ಸಂಘದ ಅಧ್ಯಕ್ಷರಾಗಿ ಹರೀಶ್ ಕುಲಾಲ್ ಬೆಳ್ಳಿಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ಬಿಳಿಯಾರು, ಉಪಾಧ್ಯಕ್ಷರಾಗಿ ಉದಯ ಕುಲಾಲ್ ಕಳತ್ತೂರು ಆಯ್ಕೆಯಾಗಿದ್ದಾರೆ.
ಸಲಹಾ ಸಮಿತಿ ಪ್ರಮುಖರಾಗಿ ಕುಟ್ಟಿ ಮೂಲ್ಯ ಬಡಿಕೇರಿ, ಸಮಿತಿ ನಿರ್ದೇಶಕರಾಗಿ ರಾಜೇಶ್ ಕುಲಾಲ್ ಬೊಬ್ಬೆಟ್ಟು, ಸಂದೀಪ್ ಬಂಗೇರ ಶಂಕರಪುರ, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಎಸ್ ಮೂಲ್ಯ, ಕೋಶಾಧಿಕಾರಿಯಾಗಿ ಸುರೇಶ್ ಕುಲಾಲ್ ಕೆಮುಂಡೆಲು, ಲೆಕ್ಕ ಪರಿಶೋಧಕರಾಗಿ ಧೀರಜ್ ಕುಲಾಲ್ ಕುತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಯೋಗೀಶ್ ಕುಲಾಲ್ ಪಡುಕುತ್ಯಾರು, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಮಾಧವ ಮೂಲ್ಯ ಕುಕ್ಕುಂಜ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸತೀಶ್ ಕುಲಾಲ್ ಕಳತ್ತೂರು, ಅರುಣ್ ಕುಲಾಲ್ ಮುಳೂರು, ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ಸುಮಂತ್ ಕುಲಾಲ್ ಪಾದೂರು, ಯೋಗೀಶ್ ಕುಲಾಲ್ ಉಳ್ಳೂರು, ಸುರೇಶ್ ಸಾಲಿಯಾನ್ ಕಬಡಿ ಪಡುಬೆಳ್ಳೆ, ಹರಿಶ್ಚಂದ್ರ ಮೂಲ್ಯ ಇರಂದಾಡಿ, ಜನಾರ್ದನ್ ಕುಲಾಲ್ ಪಣಿಯೂರು, ಗಣೇಶ್ ಕುಲಾಲ್ ಎಲ್ಲೂರು, ಭರತ್ ಕುಲಾಲ್ ಶಂಕರಪುರ, ಮನೋಜ್ ಕುಲಾಲ್ ಕುತ್ಯಾರು, ಕಾರ್ತಿಕ್ ಕುಲಾಲ್ ಎರ್ಮಾಳ್ ಆಯ್ಕೆ ಆಗಿರುವರು.
ಗೌರವ ಅಧ್ಯಕ್ಷರಾಗಿ ರಾಘು ಮೂಲ್ಯ ಮುಂಬೈ, ಯೋಗೀಶ್ ಕುಲಾಲ್ ಶಿರ್ವ, ಅಶೋಕ್ ಕುಲಾಲ್ ಮುಂಬೈ, ಜಯ ಅಂಚನ್ ಮುಂಬೈ, ದಿನೇಶ್ ಕುಲಾಲ್ ಮುಂಬೈ, ರಮೇಶ್ ಕುಲಾಲ್ ಮುಂಬೈ, ಜಯ ಮೂಲ್ಯ ಮುಂಬೈ ಇವರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.