Updated News From Kaup
ಪಡುಬಿದ್ರಿ : ಅಂತಾರಾಜ್ಯ ಬಂಟ ಕ್ರೀಡೋತ್ಸವಕ್ಕೆ ಭೂಮಿ ಪೂಜೆ
Posted On: 10 Oct 2024, 07:08 AM
ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ ಡಿಸೆಂಬರ್ 29 ರಂದು ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿ 66ರ ಭವ್ಯ ಪೆಟ್ರೋಲ್ ಬಂಕ್ ಸಮೀಪದ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಾರಾಜ್ಯ ಬಂಟ ಕ್ರೀಡೋತ್ಸವ-2024 ಎಮ್ಆರ್ಜಿ ಟ್ರೋಫಿ ಕ್ರೀಡೋತ್ಸವದ ಪೂರ್ವಭಾವಿಯಾಗಿ ಬುಧವಾರ ಭೂಮಿ ಪೂಜೆ ನೆರವೇರಿಸಲಾಯಿತು. ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್, ಬಂಟರ ಕ್ರೀಡಾ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕ್ರೀಡೋತ್ಸವದ ಭೂಮಿ ಪೂಜೆಯನ್ನು ಪುಣೆ ಹೋಟೆಲ್ ಉದ್ಯಮಿ ಎರ್ಮಾಳು ಪುಚ್ಚೊಟ್ಟು ಚಂದ್ರಹಾಸ ಶೆಟ್ಟಿ ನೆರವೇರಿಸಿ ಶುಭ ಹಾರೈಸಿದರು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಕ್ರೀಡೋತ್ಸವದಲ್ಲಿ ಇತರ ರಾಜ್ಯಗಳ ಬಂಟರ ಸಂಘಗಳ ತಂಡಗಳು ಪಾಳ್ಗೊಳ್ಳಲಿದೆ. ಕ್ರೀಡೋತ್ಸವವನ್ನು ಸುವ್ಯಸ್ಥಿತವಾಗಿ ನಡೆಸಲು ತೀರ್ಮಾನಿಸಲಾಗಿದ್ದು, ಉಪ ಸಮಿತಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು. ಪಡುಬಿದ್ರಿ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎರ್ಮಾಳು ಶಶಿಧರ್ ಶೆಟ್ಟಿ, ಬಂಟರ ಸಂಘದ ಪೂರ್ವಾಧ್ಯಕ್ಷರುಗಳಾದ ಗುಂಡ್ಲಾಡಿ ಸುರೇಶ್ ಶೆಟ್ಟಿ ಮತ್ತು ನವೀನ್ಚಂದ್ರ ಜೆ. ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಎರ್ಮಾಳು, ಯುವ ವಿಭಾಗದ ಅಧ್ಯಕ್ಷ ನವೀನ್ ಎನ್. ಶೆಟ್ಟಿ, ಕ್ರೀಡಾ ಸಂಚಾಲಕ ವಿನಯ ಶೆಟ್ಟಿ, ಕ್ರೀಡಾ ಸಂಯೋಜಕರಾದ ಶರತ್ ಶೆಟ್ಟಿ, ಸಹ ಸಂಚಾಲಕರಾದ ಹರೀಶ್ ಶೆಟ್ಟಿ ಅವರಾಲು ಮತ್ತು ಸುನಿಲ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಶರ್ಮಿಳಾ ಆರ್.ಶೆಟ್ಟಿ, ಹರೀಶ್ ಶೆಟ್ಟಿ ಪಾದೆಬೆಟ್ಟು, ಶಿವಪ್ರಸಾದ್ ಶೆಟ್ಟಿ, ಮಾಧವ ಶೆಟ್ಟಿ, ಜಯ ಶೆಟ್ಟಿ ಪದ್ರ, ಸುಧಾಕರ ಶೆಟ್ಟಿ, ಶೋಭಾ ಜೆ. ಶೆಟ್ಟಿ, ಅಕ್ಷತಾ ಶೆಟ್ಟಿ, ರಾಧೇಶ್ ಶೆಟ್ಟಿ ಉಪಸ್ಥಿತರಿದ್ದರು.
ಉಚ್ಚಿಲ : ರಸ್ತೆ ದಾಟುವ ಸಂದರ್ಭ ಪತಿ-ಪತ್ನಿಗೆ ಬಸ್ ಡಿಕ್ಕಿ ; ಪತಿ ಮೃತ್ಯು, ಪತ್ನಿ ತೀವ್ರ ಗಾಯ
Posted On: 10 Oct 2024, 07:00 AM
ಉಚ್ಚಿಲ : ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ. 9ರಂದು ರಾತ್ರಿ ನಡೆದಿದೆ. ಮೃತರನ್ನು ಕಾಪು ಭಾರತ್ ನಗರದ ನಿವಾಸಿ ಹಿದಾಯತ್ತುಲ್ಲಾ (55) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರ ಪತ್ನಿ ಸಾವರ್ ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಚ್ಚಿಲ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಇವರು, ದಾರಿ ಮಧ್ಯೆ ಮೂಳೂರಿನಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಹೋಟೆಲಿಗೆ ಹೋಗಲು ಬೈಕನ್ನು ನಿಲ್ಲಿಸಿ ಪತ್ನಿ ಜೊತೆ ರಸ್ತೆ ದಾಟುತಿದ್ದ ಸಂದರ್ಭದಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು ಇವರಿಬ್ಬರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಪತಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇವರು ರಜೆಯಲ್ಲಿ ಊರಿಗೆ ಬಂದಿದ್ದರು. ಕೆಲವೇ ದಿನಗಳಲ್ಲಿ ಮತ್ತೆ ಸೌದಿಗೆ ವಾಪಸ್ ಹೋಗುವವರಿದ್ದರು ಎಂದು ತಿಳಿದು ಬಂದಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಾಪು ತಾಲ್ಲೂಕು ಕಸಾಪ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗಾಗಿ ಕಥೆ ಹಾಗೂ ಕವನ ಸ್ಪರ್ಧೆ
Posted On: 09 Oct 2024, 07:20 PM
ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲ್ಲೂಕು ಘಟಕದವತಿಯಿಂದ ನ.೧೬ ರಂದು ಪಲಿಮಾರಿನಲ್ಲಿ ಜರುಗುವ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕಾಪು ತಾಲ್ಲೂಕಿನ ಪ್ರೌಢ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕವನ ಸ್ಪರ್ಧೆ, ಪದವಿ ಹಾಗೂ ಸಾರ್ವಜನಿಕ ವಿಭಾಗದವರಿಗಾಗಿ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಎರಡೂ ಸ್ಪರ್ಧೆಗಳಲ್ಲಿ ವಿಜೇತರಾದ ತಲಾ ಐದು ಮಂದಿಗೆ ಆಕರ್ಷಕ ಬಹುಮಾನದೊಂದಿಗೆ ಸಮ್ಮೇಳನದಂದು ಗೋಷ್ಠಿಯಲ್ಲಿ ಕಥೆ ಹಾಗೂ ಕವನಗಳನ್ನು ವಾಚನ ಮಾಡುವ ಅವಕಾಶವೂ ಲಭಿಸಲಿದೆ. ವಿವರಗಳು ಈ ಕೆಳಗಿನಂತಿವೆ. ಕವನ ಸ್ಪರ್ಧೆ : ವಿದ್ಯಾರ್ಥಿಗಳು ಅಂಚೆ ಕಾರ್ಡಿನಲ್ಲಿ ೨೦ ಸಾಲುಗಳಿಗೆ ಮೀರದಂತೆ ಸ್ವರಚಿತ ಕವನವನ್ನು ಬರೆದು ಕಳುಹಿಸಬೇಕು. ಕವನವು ಬೇರೆಲ್ಲೂ ಪ್ರಕಟವಾಗಿರಬಾರದು. ಯಾವುದೇ ಜಾತಿ, ಧರ್ಮ, ಜನಾಂಗದ ಕುರಿತಾಗಿ ದ್ವೇಷ ಬಾವನೆಯನ್ನು ಕೆರಳಿಸುವಂತಿರಬಾರದು. ಶಾಲಾ ಮುಖ್ಯಸ್ಥರ ಶಿಫಾರಸ್ಸು ಪತ್ರದೊಂದಿಗೆ ಕವನವನ್ನು ಕಳುಹಿಸಬೇಕು. ಕಥಾ ಸ್ಪರ್ಧೆ : ಸಣ್ಣಕಥೆಗಳನ್ನು ಅಂಚೆ ಕಛೇರಿಯ ಇನ್ಲ್ಯಾಂಡ್ ಲೆಟರ್ ನಲ್ಲಿ ಬರೆದು ಕಳುಹಿಸಬೇಕು. ಹಾಗೂ ೧೫೦ ಪದಗಳನ್ನು ಮೀರದಂತಿರಬೇಕು. ಕಥೆಗಳು ಸ್ವಂತ ರಚನೆಯಾಗಿರಬೇಕು ಹಾಗೂ ಎಲ್ಲಿಯೂ ಪ್ರಕಟವಾಗಿರಬಾರದು. ಜಾತಿ, ಧರ್ಮ, ಜನಾಂಗಗಳ ಕುರಿತು ದ್ವೇಷ ಬಾವನೆಯನ್ನು ಮೂಡಿಸಬಾರದು. ಪದವಿ ವಿದ್ಯಾರ್ಥಿಗಳಾದರೆ ಪ್ರಾಂಶುಪಾಲರ ಶಿಫಾರಸು ಪತ್ರ ಮತ್ತು ಸಾರ್ವಜನಿಕರಾದರೆ ತಮ್ಮ ಆಧಾರ್ ಪತ್ರದ ನಕಲು ಪ್ರತಿಯನ್ನು ಕಥೆಯೊಂದಿಗೆ ಲಗತ್ತಿಸಬೇಕು. ಕವನ ಹಾಗೂ ಕಥೆಗಳನ್ನು ದಿನಾಂಕ ೨೫-೧೦-೨೪ ರ ಒಳಗೆ ತಲುಪುವಂತೆ ಕಳುಹಿಸಬೇಕಾದ ವಿಳಾಸ : ಶ್ರೀ ನೀಲಾನಂದ ನಾಯ್ಕ್, ಗೌರವ ಕಾರ್ಯದರ್ಶಿಗಳು(ಕಸಾಪ), ಪ್ರಾಂಶುಪಾಲರು, ದಂಡತೀರ್ಥ ಪದವಿ ಪೂರ್ವ ಕಾಲೇಜು, ಉಳಿಯಾರಗೋಳಿ, ಕಾಪು ೫೭೪೧೦೬ ಹೆಚ್ಚಿನ ಮಾಹಿತಿಗಾಗಿ ಮೊಬೈಲ್: ೯೮೪೫೯ ೫೪೮೫೩ ಸಂಪರ್ಕಿಸಬಹುದು ಎಂದು ಕಸಾಪ ಕಾಪು ತಾಲೂಕು ಘಟಕದ ಪ್ರಕಟನೆ ತಿಳಿಸಿದೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ
Posted On: 09 Oct 2024, 06:56 PM
ಉಡುಪಿ : ಶರನ್ನವರಾತ್ರಿ ಮಹೋತ್ಸವದ ಪ್ರಥಮ ದಿನ ಉಡುಪಿಯ ಶ್ರೀ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಉಪಸಮಿತಿಯಾದ ಉಡುಪಿ ನಗರಸಭಾ ವ್ಯಾಪ್ತಿಯ ನೂತನ ಕಚೇರಿಯು ಸಮಿತಿಯ ಮಾರ್ಗದರ್ಶಕರು ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ, ಸಮಿತಿಯ ನೇತೃತ್ವವನ್ನು ವಹಿಸಿರುವ ಸಾಯಿರಾಧಾ ಡೆವಲಪರ್ಸ್ ನ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಮತ್ತು ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಉಪಸ್ಥಿತಿಯಲ್ಲಿ ಜರಗಿತು. 9 ಮಹಿಳೆಯರು ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಪ್ರಾಸ್ತವಿಕವಾಗಿ ದೇವಳದ ಜೀರ್ಣೋದ್ಧಾರ ನಡೆದು ಬಂದ ಹಾದಿ ಮತ್ತು ಬ್ರಹ್ಮಕಲಶೋತ್ಸವದ ಪೂರ್ವತಯಾರಿಯ ಬಗ್ಗೆ ಮಾತನಾಡಿದರು. ಶಾಸಕ ಯಶಪಾಲ್ ಸುವರ್ಣ ಮಾತನಾಡಿ ಇನ್ನುಳಿದ ಕೆಲವೇ ತಿಂಗಳು ನಾವೆಲ್ಲ ಸೇರಿ ಕಾಪುವಿನ ಅಮ್ಮನ ದೇವಳದ ಜೀರ್ಣೋದ್ಧಾರಕ್ಕಾಗಿ ಶ್ರಮಿಸಬೇಕಿದೆ ಎಂದರು. ಮಾಜಿ ಶಾಸಕ, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಕೆ. ರಘುಪತಿ ಭಟ್ ಮಾತನಾಡಿ ನವದುರ್ಗಾ ಲೇಖನ ಯಜ್ಞ ಎಂಬುವುದು ಕಾಪುವಿನ ಅಮ್ಮನ ಕ್ಷೇತ್ರಕ್ಕೆ ಮತ್ತು ಧಾರ್ಮಿಕ ವಿಚಾರಕ್ಕೆ ನಮ್ಮ ಮಕ್ಕಳು, ಮೊಮ್ಮಕ್ಕಳನ್ನು ಸೇರಿಸುವಂತಹ ಪ್ರಕ್ರಿಯೆ. ಪ್ರತೀ ಮನೆಯಲ್ಲೂ ನವದುರ್ಗಾ ಲೇಖನ ಬರೆಯಬೇಕು. ಕಾಪುವಿನ ಅಮ್ಮನ ಹೆಸರನ್ನು ಲಕ್ಷಾಂತರ ಜನರು ಬರೆದಾಗ ನೂತನ ದೇಗುಲದಲ್ಲಿ ಕಾಪುವಿನ ಅಮ್ಮನ ಸಾನಿಧ್ಯ ವೃದ್ಧಿಯಾಗಿ ಭಕ್ತರ ದುಃಖ ದುಮ್ಮಾನಗಳು ಶೀಘ್ರವಾಗಿ ಗುಣಮುಖವಾಗುತ್ತದೆ ಎಂಬ ನಂಬಿಕೆ ಮತ್ತು ಅಮ್ಮನ ಅಭಯ ವಾಕ್ಯದೊಂದಿಗೆ ಮುನ್ನಡೆಯುತ್ತಿದ್ದೇವೆ ಎಂದರು. ಈ ಸಂದರ್ಭದಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಸಮಿತಿಯ ಪ್ರಧಾನ ಸಂಚಾಲಕ ಕೊಡವೂರು ದಿವಾಕರ ಶೆಟ್ಟಿ, ಮುಖ್ಯ ಸಂಚಾಲಕ ಗಿರೀಶ್ ಅಂಚನ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ಪ್ರಸಾದ್ ಅಡ್ಯಂತಾಯ, ಪ್ರಧಾನ ಕಾರ್ಯದರ್ಶಿ ಯೋಗೇಶ್ ವಿ ಶೆಟ್ಟಿ, ಕೋಶಾಧಿಕಾರಿ ಕೆ ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ಉಡುಪಿ ನಗರಸಭಾ ಸಮಿತಿಯ ಸಂಚಾಲಕರುಗಳಾದ ರಮೇಶ್ ಶೆಟ್ಟಿ ಕಾಪು ಕೊಲ್ಯ, ಮಂಜುನಾಥ್ ಹೆಬ್ಬಾರ್, ಡಿ. ಬಾಲಕೃಷ್ಣ ಶೆಟ್ಟಿ, ಅಶೋಕ್ ನಾಯ್ಕ್, ಸಂತೋಷ್ ಜತ್ತನ್, ವಿಜಯ ಕೊಡವೂರು, ಸುಂದರ ಕಲ್ಮಾಡಿ, ರಮೇಶ್ ಕಾಂಚನ್, ಕೃಷ್ಣ ರಾವ್ ಕೋಡಂಚ, ಟಿ ಜಿ ಹೆಗ್ಡೆ, ಹರೀಶ್ ಶೆಟ್ಟಿ ಅಂಬಲಪಾಡಿ, ಮಂಜುನಾಥ್ ಶೆಟ್ಟಿಗಾರ್, ಚಂದ್ರಶೇಖರ ಸೇರಿಗಾರ್, ಉದಯ ಕುಮಾರ್ ಶೆಟ್ಟಿ, ಮೋಹನ್ ಶೆಟ್ಟಿ, ಈಶ್ವರ್ ಚಿಟ್ಪಾಡಿ, ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ನಿರೂಪಮ ಪ್ರಸಾದ್, ಸಂಚಾಲಕರುಗಳಾದ ಅಮೃತ ಕೃಷ್ಣಮೂರ್ತಿ, ಪೂರ್ಣಿಮಾ ಸುರೇಶ್ , ಪೂರ್ಣಿಮಾ ಶೆಟ್ಟಿ, ಗಿರಿಜಾ ತಲ್ಲೂರು ಶಿವರಾಮ್ ಶೆಟ್ಟಿ, ಕಲ್ಪನಾ, ಆಶಾ ಜಿ ಶೆಟ್ಟಿ, ವೀಣಾ ಶೆಟ್ಟಿ , ಇಂದಿರಾ ಮಲ್ಪೆ, ಲೇಖನ ಯಜ್ಞ ಸಮಿತಿಯ ಸಂಚಾಲಕ ಸುವರ್ಧನ್ ಉಡುಪಿ ಮತ್ತು ಪ್ರಚಾರ ಸಮಿತಿ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಮತ್ತಿತರರು ಉಪಸ್ಥಿತರಿದ್ದರು.
ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಕಾಪು ಜೆ.ಸಿ.ಐ ವತಿಯಿಂದ ಸನ್ಮಾನ
Posted On: 07 Oct 2024, 09:53 PM
ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿ ಸಮಾಜಕ್ಕೆ ತನ್ನಿಂದಾಗುವ ಸಹಾಯ ಮಾಡುತ್ತ ಸಮಾಜ ಸೇವೆಗಾಗಿ ಹಲವಾರು ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಪಡೆದು ಇತ್ತೀಚೆಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಘಟಕದಿಂದ ಗೌರವ ಡಾಕ್ಟರೆಟ್ ಪದವಿ ಪಡೆದ ಕಾಪುವಿನ ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಜೆ.ಸಿ.ಐ ಕಾಪು ವಲಯದಿಂದ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಪು ಜೆ.ಸಿ.ಐ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಜಗದೀಶ್ ಬಂಗೇರ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಗುರ್ಮೆ, ಪೂರ್ವಧ್ಯಕ್ಷರುಗಳಾದ ದೀಪಕ್ ಕುಮಾರ್ ಎರ್ಮಾಳ್, ಅರುಣ್ ಶೆಟ್ಟಿ ಪಾದೂರು, ರಾಜೇಂದ್ರ ಬಿ.ಕೆ, ಹರೀಶ್ ದೇವಾಡಿಗ, ರಾಕೇಶ್ ಕುಂಜೂರು ಮತ್ತಿತರರು ಉಪಸ್ಥಿತರಿದ್ದರು.
ಅಕ್ಟೋಬರ್ 8 : ಹೊಸ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಅಷ್ಟೆಮಿ ನಾಟಕ ಪ್ರದರ್ಶನ
Posted On: 07 Oct 2024, 08:30 PM
ಕಾಪು : ನವರಾತ್ರಿ ಉತ್ಸವದ ಪ್ರಯುಕ್ತ ಕಾಪು ಹೊಸ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಇವರ ಕಥೆ - ಸಂಭಾಷಣೆ - ನಿರ್ದೇಶನದ ಚೈತನ್ಯ ಕಲಾವಿದರು ಬೈಲೂರು ಅಭಿನಯಿಸುವ 10 ನೇ ನಾಟಕ ಅಷ್ಟೆಮಿ ಅಕ್ಟೋಬರ್ 8, ಮಂಗಳವಾರ ಸಂಜೆ ಗಂಟೆ 7.30 ಪ್ರದರ್ಶನಗೊಳ್ಳಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಉಡುಪಿ ಉಚ್ಚಿಲ ದಸರಾದಲ್ಲಿ ವೀಣಾ ನಿನಾದ - ಶತವೀಣಾವಲ್ಲರಿ
Posted On: 07 Oct 2024, 08:17 PM
ಉಚ್ಚಿಲ : ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ಶಾಲಿನಿ ಡಾ.ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಸೋಮವಾರ ಏಕಕಾಲದಲ್ಲಿ ನೂರೊಂದು ವೀಣಾವಾದನ ಶತವೀಣಾವಲ್ಲರಿ ಜರಗಿತು. ಪವನ ಬಿ.ಆಚಾರ್ ಕಲಾಸ್ಪಂದನ ಕಲಾ ಶಾಲೆ ಮಣಿಪಾಲ ಇವರ ನಿರ್ದೇಶನದಲ್ಲಿ ಸುಪ್ರಸಿದ್ಧ ವೀಣಾವಾದಕರ ಜೊತೆ ಹಿರಿಯ ಕಿರಿಯ ವೀಣಾವಾದಕರು ವೀಣೆಯನ್ನು ನುಡಿಸಿದರು. ಮೃದಂಗದಲ್ಲಿ ಡಾ. ಬಾಲಚಂದ್ರ ಆಚಾರ್, ರಿದಮ್ ಪ್ಯಾಡ್ನಲ್ಲಿ ಕಾರ್ತಿಕ್ ಭಟ್ ಇನ್ನಂಜೆ, ತಂಬೂರಿಯಲ್ಲಿ ವಿದುಷಿ ಸುರೇಖಾ ಎ. ಭಟ್, ತಾಳ ಹೇಮಲತಾ ರಾವ್, ಜೊತೆಗೆ 101 ವೀಣಾ ವಾದಕರು ಸಹಕರಿಸಿದ್ದರು. ಈ ಸಂದರ್ಭ ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ದೇವಳದ ಪ್ರಧಾನ ಅರ್ಚಕ ವೇ|ಮೂ| ಕೆ.ವಿ. ರಾಘವೇಂದ್ರ ಉಪಾಧ್ಯಾಯ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ದಸರಾ ಮಹೋತ್ಸವ ಸಂಚಾಲಕ ವಿನಯ ಕರ್ಕೆರ ಮಲ್ಪೆ, ಸದಸ್ಯರಾದ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳು, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ ಅಮೀನ್ ಕಿದಿಯೂರು, ಸತೀಶ್ ಎಸ್ ಅಮೀನ್ ಬೆಣ್ಣೆ ಕುದ್ರು, ಮಂಜುನಾಥ್ ಸುವರ್ಣ ಬ್ರಹ್ಮಾವರ, ರವೀಂದ್ರ ಶ್ರೀಯಾನ್ ಹಿರಿಯಡ್ಕ, ಶಿವರಾಮ ಕೋಟ, ಲೋಕೇಶ್ ಮೆಂಡನ್ ಉಪ್ಪೂರು, ಕೇಶವ ಎಂ ಕೋಟ್ಯಾನ್ ಮಲ್ಪೆ, ಗಿರೀಶ್ ಕುಮಾರ್ ಪಿತ್ರೋಡಿ, ಜಯಂತ್ ಸಾಲ್ಯಾನ್ ಕನಕೋಡ, ಕಿರಣ್ ಕುಮಾರ್ ಪಿತ್ರೋಡಿ, ಸುಧಾಕರ ವಿ ಸುವರ್ಣ ಉಚ್ಚಿಲ, ನಾರಾಯಣ ಸಿ ಕರ್ಕೇರ ಪಡುಬಿದ್ರಿ ಕಾಡಿಪಟ್ಣ, ಸತೀಶ್ ಆರ್ ಕರ್ಕೇರ ಸುರತ್ಕಲ್, ವಿಜಯ ಸುವರ್ಣ ಕುಳಾಯಿ, ಹೇಮಂತ್ ತಿಂಗಳಾಯ ಹೊಯ್ಗೆ ಬಜಾರ್, ಪುರುಷೋತ್ತಮ ಕೋಟ್ಯಾನ್ ಬೋಳೂರು, ಯಶವಂತ್ ಪಿ ಮೆಂಡನ್ ಬೋಳೂರು, ಮೊದಲಾದವರು ಉಪಸ್ಥಿತರಿದ್ದರು. ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ನಿರೂಪಿಸಿ, ವಂದಿಸಿದರು.
ಅ.11 : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ - ಹುಲಿ ವೇಷ ಕುಣಿತ ಸ್ಪರ್ಧೆ
Posted On: 07 Oct 2024, 08:10 PM
ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಅಕ್ಟೋಬರ್ 11 ರಂದು ಮಧ್ಯಾಹ್ನ 3.30 ಗಂಟೆಗೆ ಕಾಪುವಿನ ಬಂಟರ ಸಂಘದ ಆವರಣದಲ್ಲಿ ಆಯೋಜಿಲಾಗಿದೆಂದು ರಕ್ಷಣಾಪುರ ಜವನೆರ್ ಕಾಪು ತಂಡದ ಅಧ್ಯಕ್ಷ ನವೀನ್ ಎನ್ ಶೆಟ್ಟಿ ತಿಳಿಸಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ದಸರಾ ಹಬ್ಬದ ಪ್ರಯುಕ್ತ ರಾಜಕೀಯ ರಹಿತವಾಗಿ “ಕಾಪು ಪಿಲಿ ಪರ್ಬ -02"ನಡೆಯಲಿದ್ದು ಊರು ಪರವೂರಿನ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಝಿ ಕನ್ನಡ ಡ್ರಾಮ ಜೂನಿಯರ್ಸ್ ಸೀಜನ್ 4 ವಿಜೇತೆ ಸಮೃದ್ಧಿ ಮೊಗವೀರ ತಂಡದವರಿಂದ ಯಕ್ಷ ನೃತ್ಯ ರೂಪಕ, ಕಿನ್ನಿಗೊಳಿ ಕ್ರೀಪ್ಸ್ ಇನ್ ಕ್ರಿವ್ ಸ್ಟುಡಿಯೋ ಡ್ಯಾನ್ಸ್ ತಂಡದಿಂದ ನೃತ್ಯ ವೈಭವ, ಕುಣಿತ ಭಜನೆ ನಡೆಯಲಿದೆ. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ತಲಾ ಒಂದು ಲಕ್ಷ, ಎಪ್ಪತೈದು ಸಾವಿರ, ಮೂವತ್ತು ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗುತ್ತದೆ. ವಿಶೇಷ ಕರಿಹುಲಿ, ಅಕ್ಕಿಮುಡಿ ಹಾರಿಸುವುದು, ಅತ್ಯುತ್ತಮ ಹುಲಿ, ವೈಯಕ್ತಿಕ ವೇಷ ಕುಣಿತದಾರ, ಮತ್ತು ಭಾಗವಹಿಸಿದ ಎಲ್ಲಾ ತಂಡಗಳಿಗೆ ಪ್ರೋತ್ಸಾಹ ಬಹುಮಾನ ನೀಡಲಾಗುವುದು. ವಿಶೇಷ ಆಕರ್ಷಣೆಯಾಗಿ ಕೋಸ್ಟಲ್ವುಡ್ನ ಸಿನಿ ತಾರೆಯರು, ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ಪ್ರವೇಶ ನೀಡಿದ್ದು ಸುಮಾರು ಹತ್ತಕ್ಕೂ ಅಧಿಕ ಹುಲಿ ವೇಷ ತಂಡ ಭಾಗವಹಿಸುವ ನಿರೀಕ್ಷೆ ಇಡಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭ ರಕ್ಷಣಾಪುರ ಜವನೆರ್ ಕಾಪು ತಂಡದ ಪ್ರಮುಖರಾದ ಗಣೇಶ್ ಕೋಟ್ಯಾನ್, ಕಾರ್ತಿಕ್ ಅಮೀನ್, ರಮೀಜ್ ಹುಸೇನ್, ದೀಪಕ್ ಕುಮಾರ್ ಎರ್ಮಾಳು, ಶಾಂತಲತಾ ಶೆಟ್ಟಿ, ಆಶಾ ಅಂಚನ್, ಅಶ್ವಿನಿ ನವೀನ್, ಅಖಿಲೇಶ್ ಕೋಟ್ಯಾನ್, ದೇವರಾಜ್ ಕೋಟ್ಯಾನ್, ಸುಧೀರ್ ಕರ್ಕೇರ ಉಪಸ್ಥಿತರಿದ್ದರು.
ಕಟಪಾಡಿ ಪೇಟೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
Posted On: 05 Oct 2024, 06:31 PM
ಕಟಪಾಡಿ : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನವನ್ನು ಶನಿವಾರ ಕಟಪಾಡಿ ಪೇಟೆಯಲ್ಲಿ ನಡೆಸಲಾಯಿತು. ಅಭಿಯಾನದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ್ ಕಿಣಿ, ಸುಭಾಸ್ ಬಲ್ಲಾಳ್, ಪವಿತ್ರಾ ಶೆಟ್ಟಿ, ಈಶ್ವರ್ ಕಟಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷರಾದ ವೀಣಾ ಶೆಟ್ಟಿ, ಶಕ್ತಿ ಕೇಂದ್ರದ ಸಂತೋಷ್ ಏಣಗುಡ್ಡೆ, ನಿತಿನ್ ಮೂಡುಬೆಟ್ಟು, ಹರ್ಷಿತ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಚ್ಚಿಲ : ಮುದ್ದು ಮಕ್ಕಳಿಗಾಗಿ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ
Posted On: 05 Oct 2024, 06:24 PM
ಉಚ್ಚಿಲ : ಉಡುಪಿ ಉಚ್ಚಿಲ ದಸರಾ -2024 ರ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದಲ್ಲಿ ಮೂರರಿಂದ ಒಂಭತ್ತು ವರ್ಷ ವಯಸ್ಸಿನ ಮುದ್ದು ಮಕ್ಕಳಿಗಾಗಿ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯು ಶ್ರೀಮತಿ ಶಾಲಿನಿ ಡಾ| ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಶನಿವಾರ ಜರಗಿತು. ಸ್ಪರ್ಧೆಯಲ್ಲಿ ಅದ್ವಿತಿ ಎ. ಪೂಜಾರಿ, ಕೋಟ ಪ್ರಥಮ, ತಪಸ್ಯ ನಾಗಪ್ರಸಾದ್,ಮಲ್ಪೆ ದ್ವಿತೀಯ, ಸನಿಹ ಕೆ. ಕಾಪು ತೃತೀಯ ಬಹುಮಾನ ಪಡೆದಿರುತ್ತಾರೆ. ಪ್ರೋತ್ಸಾಹಕರ ಬಹುಮಾನವಾಗಿ ತಲಾ ರೂ. ಒಂದು ಸಾವಿರ ನೀಡಲಾಗಿದ್ದು, ಒಟ್ಟು 62 ಸ್ಪರ್ಧಿಗಳು ಭಾಗವಹಿಸಿದ್ದರು. ತೀರ್ಪುಗಾರರಾಗಿ ವಿದ್ಯುಷಿ ರಶ್ಮಿ ಸರಳಾಯ, ಮಂಗಳೂರು, ಶ್ರದ್ಧಾ ಪ್ರಭು ಮಂಗಳೂರು, ದೀಪ್ತಿಶ್ರೀ ಜೋಗಿ ಮಂಗಳೂರು ಸಹಕರಿಸಿದ್ದರು.
