Updated News From Kaup
ಹೆಜಮಾಡಿ, ಪಡುಬಿದ್ರಿ, ಎರ್ಮಾಳಿನಲ್ಲಿ ಈದ್ ಮಿಲಾದ್ ಸಂಭ್ರಮ
Posted On: 16 Sep 2024, 07:33 PM
ಪಡುಬಿದ್ರಿ : ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನಾಚರಣೆಯು ಕಾಪು ತಾಲ್ಲೂಕಿನ ಪಡುಬಿದ್ರಿ, ಹೆಜಮಾಡಿ, ಎರ್ಮಾಳಿನಲ್ಲಿ ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಹೆಜಮಾಡಿಯಲ್ಲಿ ಕನ್ನಂಗಾರ್ ಜಮಾಅತ್ನಿಂದ ಕನ್ನಂಗಾರ್ ಜುಮ್ಮಾ ಮಸೀದಿಯಿಂದ ಹೊರಟ ಜಾಥಾವು ಹೆಜಮಾಡಿ ಪೇಟೆ, ಗುಂಡಿ, ಎನ್.ಎಸ್ ರೋಡ್, ಬೀಡಿನ ಗುಡ್ಡೆ ಮೂಲಕ ರಾಷ್ಟ್ರೀಯ ಹೆದ್ದಾರಿಯಾಗಿ ಕನ್ನಂಗಾರ್ ಜುಮ್ಮಾ ಮಸೀದಿಗೆ ಪ್ರವೇಶಿಸಿತು. ಜಾಥಾದಲ್ಲಿ ಮದ್ರಸ ವಿದ್ಯಾರ್ಥಿಗಳ ದಫ್ ಪ್ರದರ್ಶನ ನಡೆಯಿತು. ಪಡುಬಿದ್ರಿ ಜುಮ್ಮಾ ಮಸೀದಿ ವತಿಯಿಂದ ನಡೆದ ಮೀಲಾದ್ ರ್ಯಾಲಿಗೆ ಕಂಚಿನಡ್ಕ ಜುಮ್ಮಾ ಮಸೀದಿಯಲ್ಲಿ ಚಾಲನೆ ನೀಡಲಾಯಿತು. ಕಂಚಿನಡ್ಕ ಮಸೀದಿಯಿಂದ ಹೊರಟ ರ್ಯಾಲಿಯು ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ ಮೂಲಕ ರಾಷ್ಟ್ರೀಯ ಹೆದ್ದಾರಿ ಪಡುಬಿದ್ರಿ ತಲುಪಿ ಮಾರ್ಕೆಟ್ ರಸ್ತೆಯಾಗಿ ಪಡುಬಿದ್ರಿ ಮಸೀದಿ ಪ್ರವೇಶಿಸಿತು. ಮದ್ರಸ ವಿದ್ಯಾರ್ಥಿಗಳಿಂದ ಆಕರ್ಷಕ ಸ್ಕೌಟ್ ಗಮನಸೆಳೆಯಿತು. ಎರ್ಮಾಳು ಜುಮಾ ಮಸೀದಿ ವತಿಯಿಂದ ನಡೆದ ಮೀಲಾದ್ ರ್ಯಾಲಿಯು ಬಡಾ ಎರ್ಮಾಳು ಮಸೀದಿಯಿಂದ ಹೊರಟು ಎರ್ಮಾಳು ಜುಮ್ಮಾ ಮಸೀದಿಗೆ ತಲುಪಿತು.
ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ : 71ನೇ ವಾರ್ಷಿಕ ಮಹಾಸಭೆ
Posted On: 16 Sep 2024, 05:36 PM
ಎರ್ಮಾಳು : ವಿದ್ಯಾಭ್ಯಾಸ, ಆರ್ಥಿಕತೆ, ರಾಜಕೀಯದ ಕೊರತೆಯಿದ್ದ ಸಂದರ್ಭದಲ್ಲಿಯೂ ಮೀನುಗಾರ ಸಮಾಜದ ಹಿರಿಯರ ಚಿಂತನೆಯಿಂದ ಭವಿಷ್ಯದ ಹಿತದೃಷ್ಟಿಯಿಂದ ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಸ್ಥಾಪನೆಯಾಗಿದೆ. ಸೊಸೈಟಿಯ ಬೆಳವಣಿಗೆಗೆ ಗ್ರಾಹಕರು, ಷೇರುದಾರರು, ನಿರ್ದೇಶಕರ ಸಹಕಾರ ಮೂಲ ಕಾರಣ. ಉಚ್ಚಿಲ ಶಾಖೆಯಲ್ಲಿ 4 ಲಕ್ಷ ಲಾಭಾಂಶ ಆಗಿದ್ದು, 4 ಕೋಟಿಯ ವ್ಯವಹಾರವಾಗಿದೆ. ಶೇ.12 ಡಿವಿಡೆಂಡ್ ನೀಡಲಾಗುವುದು ಎಂದು ಸೊಸೈಟಿಯ ಅಧ್ಯಕ್ಷರಾದ ದಿನೇಶ್ ಎರ್ಮಾಳು ಹೇಳಿದರು. ಅವರು ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಇದರ 2023-24 ನೇ ಸಾಲಿನ 71ನೇ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸನ್ಮಾನ /ವಿದ್ಯಾರ್ಥಿ ವೇತನ ವಿತರಣೆ : ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ ಡಾ| ನಾಗೇಶ್ ರವರಿಗೆ ವೈದ್ಯವಾರಿಧಿ ಚಂದ್ರ ಬಿರುದು, ಖ್ಯಾತ ಈಜು ತಜ್ಞ ಈಶ್ವರ್ ಮಲ್ಪೆ ಅವರಿಗೆ ಶರಧಿ ಚಂದ್ರಮ ಬಿರುದು, ಮೊಗವೀರ ಸಮಾಜದ ಹಿರಿಯರಾದ ಪುರಂದರ ಕೆ ಸಾಲ್ಯಾನ್ ಇವರನ್ನು, ಕರಾಟೆಯಲ್ಲಿ ಸಾಧನೆಗೈದ ಬಾಲಪ್ರತಿಭೆ ಸಾನ್ವಿತ್ ಆರ್ ಮೆಂಡನ್ ರನ್ನು ಸನ್ಮಾನಿಸಲಾಯಿತು. ಅತ್ಯಧಿಕ ಅಂಕ ಗಳಿಸಿದ ಸೊಸೈಟಿಯ ಗ್ರಾಹಕರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಅಗಲಿದ ಸೊಸೈಟಿಯ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸೊಸೈಟಿಯ ಅಧ್ಯಕ್ಷರಾದ ದಿನೇಶ್ ಎರ್ಮಾಳು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸೊಸೈಟಿಯ ಉಪಾಧ್ಯಕ್ಷರಾದ ದಿಲೀಪ್ ಕುಮಾರ್, ನಿರ್ದೇಶಕರಾದ ಸುಂದರ್ ಸುವರ್ಣ, ಲೋಕೇಶ್, ಶೋಭ ಅಮೀನ್, ರಾಘವ ಕೋಟ್ಯಾನ್, ಲಕ್ಷ್ಮಣ ಸುವರ್ಣ, ಆಶಾ ಕುಂದರ್, ವಿಠಲ್ ಸುವರ್ಣ, ಶಿವಾಜಿ, ಕಾರ್ಯನಿರ್ವಹಣಾಧಿಕಾರಿ ಅನುಷ, ಸಲಹೆಗಾರರಾದ ಚಂದ್ರಕಾಂತ್, ಎರ್ಮಾಳು ಬಡಾ ಮೊಗವೀರ ಮಹಾಸಭಾದ ಉಪಾಧ್ಯಕ್ಷ ಪುರಂದರ ಕೆ ಸಾಲ್ಯಾನ್, ಮೊಗವೀರ ಸಮಾಜದ ಸಂಘಗಳ ಪ್ರಮುಖರಾದ ಆಶಾ ಪುತ್ರನ್, ಗೀತೇಶ್, ಮೀನಾಕ್ಷಿ ಸಾಲ್ಯಾನ್, ಆರತಿ, ಕುಶಾಲಾಕ್ಷಿ, ಶಾಖಾ ವ್ಯವಸ್ಥಾಪಕಿ ಅಶ್ವಿನಿ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಲಕ್ಷ್ಮಣ್ ಕೆ ಸುವರ್ಣ ಪ್ರಾರ್ಥಿಸಿದರು. ಸೊಸೈಟಿ ಅಧ್ಯಕ್ಷ ದಿನೇಶ್ ಎರ್ಮಾಳು ಸ್ವಾಗತಿಸಿದರು. ಕಾರ್ಯನಿರ್ವಹಣಾಧಿಕಾರಿ ಅನುಷ ವಾರ್ಷಿಕ ವರದಿ ಮಂಡಿಸಿದರು. ಶಿಕ್ಷಕ ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಕಾಂತಾವರ : ಬೇಲಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜೀಣೋದ್ಧಾರ ಬ್ರಹ್ಮಕಲಶ ನಡೆಸುವ ಬಗ್ಗೆ ಪೂರ್ವಭಾವಿ ಸಭೆ
Posted On: 16 Sep 2024, 03:43 PM
ಕಾಂತಾವರ : ಗ್ರಾಮದ ಬೇಲಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮ ಬೈದರ್ಕೆಳ ಯುವ ಸೇವಾ ಸಮಿತಿಯಿಂದ ಪಂಚಕಜ್ಜಾಯ ಸೇವೆ ಮತ್ತು ಜೀಣೋದ್ಧಾರ ಬ್ರಹ್ಮಕಲಶ ನಡೆಸುವುದರ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಬ್ರಹ್ಮ ಬೈದರ್ಕಳ ಯುವ ಸೇವಾ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು : ವಾರ್ಷಿಕ ಮಹಾಸಭೆ
Posted On: 16 Sep 2024, 03:32 PM
ಕಾಪು : ಪರಿಸರದ ಜನಪ್ರಿಯ ಆರ್ಥಿಕ ಸಂಸ್ಥೆ ಅಕ್ಷಯಧಾರ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ 2023–24ನೇ ಸಾಲಿನ ವಾರ್ಷಿಕ ಮಹಾಸಭೆ ಕಾಪು ಭಾಸ್ಕರ ಸೌಧದಲ್ಲಿ ಜರಗಿತು. ಸೊಸೈಟಿಯ ಅಧ್ಯಕ್ಷ ಲವ ಕರ್ಕೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಆರ್ಥಿಕ ಸಂಸ್ಥೆ ಮಧ್ಯಮ ವರ್ಗದ, ಸಣ್ಣ ಉದ್ದಿಮೆದಾರರ ಅಗತ್ಯತೆಗಳಿಗೆ ಸ್ಪಂದಿಸಿ, ಅವರ ಬೆಳವಣಿಗೆಗೆ ಪೂರಕವಾಗಿ ಸೇವೆ ಸಲ್ಲಿಸುತ್ತಿದೆ. ಸೊಸೈಟಿಯು ಗ್ರಾಹಕರಿಗೆ ಗುಣಮಟ್ಟದ ಸೇವೆ, ಸೌಲಭ್ಯ ನೀಡುತ್ತಿದ್ದು, ನಮ್ಮ ಸಂಸ್ಥೆಯ ಬೆಳವಣಿಗೆಗೆ ಸಹಕರಿಸಿ ಎಂದರು. ಶೇರುದಾರರಿಗೆ, ಠೇವಣಿದಾರರಿಗೆ ಹಾಗೂ ವಿವಿಧ ಖಾತೆಗಳನ್ನು ತೆರೆದು ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಿದ ಎಲ್ಲಾ ಗ್ರಾಹಕರಿಗೂ ಅಭಿನಂದನೆ ಸಲ್ಲಿಸಿದರು. ಸೊಸೈಟಿಯ ಷೇರುದಾರರಾದ ಉಮನಾಥ ಬಂಗೇರ, ಶೀಲ ರಾಜ್ ಪುತ್ರನ್ ಪೊಲಿಪು, ಸೀತಾರಾಮ್ ಸಾಲಿಯನ್, ಸುಂದರ್ ಸುವರ್ಣ ಪೊಲಿಪು, ಸೀತಾಲಕ್ಷ್ಮಿ ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆ ನೀಡಿದರು. ಈ ಸಂಧರ್ಭ ಸೊಸೈಟಿಯ ಶೇರುದಾರರಾದ ಹಾಗೂ ಸಂಸ್ಥೆಯ ಮಾರ್ಗದರ್ಶಕರಾಗಿದ್ದ ಈ ಬಾರಿ ಕಾಪು ಪುರಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹರಿಣಾಕ್ಷಿ ದೇವಾಡಿಗ ಅವರನ್ನು ಸೊಸೈಟಿಯ ಪರವಾಗಿ ಸನ್ಮಾನಿಸಲಾಯಿತು. ಸೊಸೈಟಿಯ ಉಪಾಧ್ಯಕ್ಷರು, ನಿರ್ದೇಶಕರುಗಳು, ಸಿಬ್ಬಂದಿ, ಶೇರುದಾರರು, ಗ್ರಾಹಕರು, ಠೇವಣಿದಾರರು ಉಪಸ್ಥಿತರಿದ್ದರು. ನಿರ್ದೇಶಕ ಶಿವರಾಮ್ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಅಮಿತಾ ದೇವಾಡಿಗ ವಾರ್ಷಿಕ ವರದಿಯನ್ನು ಮಂಡಿಸಿದರು. ಸೊಸೈಟಿಯ ನಿರ್ದೇಶಕ ಜಗದೀಶ್ ಮೆಂಡನ್ ಗತ ವರ್ಷದ ಆಯ ವ್ಯಯ ಪಟ್ಟಿ ವಾಚಿಸಿದರು. ನಿರ್ದೇಶಕ ಪ್ರದೀಪ್ ಕುಮಾರ್ ಉಳಿಯರಗೋಳಿ ಸನ್ಮಾನಿತರನ್ನು ಪರಿಚಯಿಸಿದರು. ಅಮಿತಾ ದೇವದಾಸ್ ವಂದಿಸಿದರು.
ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಇಂಜಿನಿಯಸ್೯ ದಿನಾಚರಣೆ ; ಸನ್ಮಾನ
Posted On: 16 Sep 2024, 03:21 PM
ಉಚ್ಚಿಲ : ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಇಂಜಿನಿಯಸ್೯ ದಿನಾಚರಣೆ ಆಚರಿಸಲಾಯಿತು. ಇಂಜಿನಿಯಸ್೯ ದಿನದ ಪ್ರಯುಕ್ತ ಇಂಜಿನಿಯರ್ ಅರಿಫ್ ಕಾಸಿಂ ಉಚ್ಚಿಲ ಇವರನ್ನು ಸನ್ಮಾನಿಸಲಾಯಿತು. ಉಚ್ಚಿಲ ರೋಟರಿ ಕ್ಲಬ್ ಅಧ್ಯಕ್ಷರಾದ ಇಬಾದುಲ್ಲ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉಚ್ಚಿಲ ರೋಟರಿಯ ಕಾರ್ಯದರ್ಶಿ ಸತೀಶ್ ಕುಂಡಂತಾಯ, ರೋಟರಿ ಕಾರ್ಕಳದ ಅಧ್ಯಕ್ಷರಾದ ಇಕ್ಬಾಲ್ ಅಹ್ಮದ್, ಉಪಾಧ್ಯಕ್ಷ ಬಾಲಕೃಷ್ಣ ದೇವಾಡಿಗ, ಕಾರ್ಯದರ್ಶಿ ಗಣೇಶ್ ಸಾಲ್ಯಾನ್, ಮಮತಾ ಶೆಟ್ಟಿ, ಚೇತನ್ ನಾಯಕ್, ಉಚ್ಚಿಲ ರೋಟರಿ ಕ್ಲಬ್ ಪದಾಧಿಕಾರಿಗಳಾದ ಅಚ್ಯುತ ಶೆಣೈ, ನಜ್ಮ, ಚಂದ್ರಹಾಸ ಪೂಜಾರಿ, ಶೇಖಬ್ಬ, ಶಿಮಾಜ್, ಸುಧಾಕರ್, ಇಂಟರ್ಯಾಕ್ಟ್ ಕ್ಲಬ್ ಸಂಯೋಜಕರಾದ ಸುರೇಶ್ ಆಚಾರ್ಯ, ರಾಜೇಶ್ ಉಪಸ್ಥಿತರಿದ್ದರು.
ಚಿಕಿತ್ಸೆಗೆ ಸಹಾಯದ ನಿರೀಕ್ಷೆಯಲ್ಲಿ ಪಡುಬಿದ್ರಿ ಧನ್ವಂತರಿ ಮಾರ್ಗದ ನಿವಾಸಿ
Posted On: 15 Sep 2024, 11:40 AM
ಪಡುಬಿದ್ರಿ : ಶ್ವಾಸಕೋಶದ ಸಮಸ್ಯೆಯಿಂದ ಉಡುಪಿಯ ಆದರ್ಶ ಹಾಸ್ಪಿಟಲ್ನಲ್ಲಿ ಸುಮಾರು 15 ದಿನಗಳಲ್ಲಿ 5 ಲಕ್ಷ ಬಿಲ್ಲು ಪಾವತಿಸಿ, ಇದೀಗ ಮತ್ತೆ ಚಿಕಿತ್ಸೆಗೆ ಉಡುಪಿಯ ಮಿಷನ್ ಹಾಸ್ಪಿಟಲ್ ನಲ್ಲಿ ಇದ್ದು ಜೀವನ್ಮರಣ ಸ್ಥಿತಿಯಲ್ಲಿರುವ ವ್ಯಕ್ತಿ ಪಡುಬಿದ್ರಿಯ ಧನ್ವಂತರಿ ಮಾರ್ಗದ ನಿವಾಸಿ ಕೃಷ್ಣ ಮೂಲ್ಯ. ಇವರ ಕುಟುಂಬ ಇದ್ದ ಎಲ್ಲಾ ಹಣವನ್ನು ಆಸ್ಪತ್ರೆಗೆ ಪಾವತಿಸಿ ಇದೀಗ ದಾನಿಗಳಿಂದ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಕೃಷ್ಣ ಮೂಲ್ಯರಿಗೆ ನೆರವು ನೀಡುವವರು ಅವರ ಮಗಳ ಗೂಗಲ್ ಪೆ ನಂಬರ್ ಗೆ ಅಥವಾ ಕೃಷ್ಣ ಮೂಲ್ಯರ ಬ್ಯಾಂಕ್ ಖಾತೆಗೆ ಹಣ ಕಳುಹಿಸಬಹುದು Gpay number:9632492659 Krishna moolya ac 01382200051071 IFSC CNRB0010138 padubidri
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕೋತ್ಸವ 2024 ಸಂಪನ್ನ
Posted On: 14 Sep 2024, 09:29 PM
ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗವು ಸಂಸ್ಥೆಯ ಇನ್ನೋವೇಶನ್ ಘಟಕ, ಐಎಸ್ಟಿಇ ಘಟಕ ಮತ್ತು ಐಇಇಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ನಡೆಸಿದ ರಾಷ್ಟ್ರ ಮಟ್ಟದ 36 ಗಂಟೆಗಳ ಹ್ಯಾಕೋತ್ಸವ 2024 ಇದರ ಸಮಾರೋಪ ಸಮಾರಂಭವು ಕಾಲೇಜಿನ ಆವರಣದಲ್ಲಿ ನಡೆಯಿತು. ಪ್ರೈಮ್ ಸೋಪಿಕ್ ಟೆಕ್ನಾಲಜೀಸ್, ಮಂಗಳೂರು ಇದರ ಸಹ ಸಂಸ್ಥಾಪಕರು ಮತ್ತು ಹಿರಿಯ ತಾಂತ್ರಿಕ ಅಧಿಕಾರಿ ದುರ್ಗಾ ಪ್ರಸಾದ್ ಶೆಟ್ಟಿ ಮಾತನಾಡಿ, ಇಂತಹ ಹ್ಯಾಕಥಾನ್ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ವಿದ್ಯಾರ್ಥಿಗಳು ಪಡೆಯಬಹುದಾದ ತಾಂತ್ರಿಕ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಚೀನ ಕಾಲದಲ್ಲಿದ್ದ ತಾಂತ್ರಿಕ ಪ್ರಗತಿಯ ಬಗ್ಗೆ ತಿಳಿಸಿದರು. ಸಂಸ್ಥೆಯು ಇಂತಹ ಕಾರ್ಯಕ್ರಮವನ್ನು ಆಯೋಜಿಸಿದಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್ರವರು ಮಾತನಾಡಿ, ನಕಲಿ ಕರೆ ಪತ್ತೆ, ವಂಚನೆಯಂತಹ ಸಾಮಾಜಿಕ ಸಮಸ್ಯೆಯನ್ನು ಬಗೆಹರಿಸಲು ಇಂತಹ ಕಾರ್ಯಕ್ರಮಗಳು ಪ್ರಮುಖ ವೇದಿಕೆಯಾಗಿದೆ ಎಂದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹ್ಯಾಕೋತ್ಸವದಲ್ಲಿ ನೆಹರು ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಕೊಯಂಬತ್ತೂರ್ ಇಲ್ಲಿನ ವಿದ್ಯಾರ್ಥಿಗಳ "ಸ್ಟೇಲ್ ಅಪ್" ತಂಡವು ಪ್ರಥಮ ಸ್ಥಾನ ಪಡೆದು ಟ್ರೋಫಿಯೊಂದಿಗೆ 40 ಸಾವಿರ ರೂಪಾಯಿ ನಗದು ಬಹುಮಾನವನ್ನು ಪಡೆದುಕೊಂಡಿತು. ವಿಶ್ವಕರ್ಮ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಪುಣೆ, ವಿದ್ಯಾರ್ಥಿಗಳ "ಟೀಮ್ 7'' ತಂಡವು ದ್ವಿತೀಯ ಸ್ಥಾನ ಪಡೆದು 25 ಸಾವಿರ ರೂಪಾಯಿ ನಗದು ಬಹುಮಾನವನ್ನು ಪಡೆದುಕೊಂಡಿತು, ಎಂಐಟಿ ಮಣಿಪಾಲದ ವಿದ್ಯಾರ್ಥಿಗಳ "ಆಕ್ಟೇವಿಯನ್' ತಂಡ ಮತ್ತು ಶ್ರೀ ಸಾಯಿರಾಮ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ "ಎಲ್ಸನ್ - ಸರ್ಕ್ಸ್" ತಂಡವು 12ಸಾವಿರ ನಗದು ಬಹುಮಾನದೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿತು. ಎನ್ಎಂಐಇಟಿ, ಪುಣೆ, ವಿದ್ಯಾರ್ಥಿಗಳ "ಟೀಮ್ ಯುಗ" ತಂಡವು 10 ಸಾವಿರ ನಗದು ಬಹುಮಾನದೊಂದಿಗೆ ಅತ್ಯುತ್ತಮ ಯೋಜನೆ ಪ್ರಶಸ್ತಿಯನ್ನು ಪಡೆದುಕೊಂಡಿತು.
ಕಾಪು : ಬಿಜೆಪಿ ವತಿಯಿಂದ ಮೀಸಲಾತಿ ರದ್ದುಪಡಿಸುವ ಹೇಳಿಕೆ ವಿರುದ್ಧ ಪ್ರತಿಭಟನೆ
Posted On: 14 Sep 2024, 09:15 PM
ಕಾಪು : ಸೂಕ್ತ ಸಂದರ್ಭದಲ್ಲಿ ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೇರಿಕಾದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ರಾಹುಲ್ ಗಾಂಧಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕಾಪು ಪೇಟೆಯಲ್ಲಿ ಆಯೋಜಿಸಲಾಗಿತ್ತು. ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ರವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ರಮೇಶ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಚಂದ್ರ ಪಂಚವಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಯಾದ ಗೋಪಾಲಕೃಷ್ಣ ರಾವ್, ಕ್ಷೇತ್ರ ಕಾರ್ಯದರ್ಶಿ ಎಂ.ಜಿ ನಾಗೇಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ರೈತ ಮೋರ್ಚಾ ಅಧ್ಯಕ್ಷರಾದ ಕೃಷ್ಣ ರಾವ್, ಜಿಲ್ಲಾ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ಸದಾನಂದ, ಎಸ್.ಸಿ ಮೋರ್ಚಾ ಪ್ರಮುಖರಾದ ಪಾರ್ಥ ಸಾರಥಿ, ಚಂದ್ರ ಮಲ್ಲಾರು, ಕಾರ್ಯಾಲಯ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಲ್ಲಾರು, ಪಕ್ಷದ ವಿವಿಧ ಸ್ತರದ ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಸೆ. 15 : ಜೇಸಿಐ ಕಾಪು - ಜೇಸಿ ಸಪ್ತಾಹ - 2024
Posted On: 14 Sep 2024, 08:48 PM
ಕಾಪು : ಜೇಸಿಐ ಕಾಪು ಇದರ ಜೇಸಿ ಸಪ್ತಾಹ 2024 ಅಂಗವಾಗಿ ಸೆಪ್ಟೆಂಬರ್ 15, ಡೈಮಂಡ್ಸ್ 7ನೇ ದಿನ ಡ್ಯಾಝಲ್ ವಿದ್ ಡೈಮಂಡ್ಸ್ ಕಾರ್ಯಕ್ರಮದ ಅಂಗವಾಗಿ ಕಾಪುವಿನ ವೀರಭದ್ರ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಮಕ್ಕಳಿಗೆ ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಫ್ಯಾಶನ್ ಶೋ ಸ್ಪರ್ಧೆಯು ವಿಭಾಗ 1ರಲ್ಲಿ 5,6 ಮತ್ತು 7ನೇ ತರಗತಿ, ವಿಭಾಗ 2 ರಲ್ಲಿ 8,9 ಮತ್ತು 10ನೇ ತರಗತಿ ಹುಡುಗರಿಗೆ ಮತ್ತು ಹುಡುಗಿಯರಿಗೆ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಸಮಯ 2+1 ನಿಮಿಷ ಇರಲಿದೆ. ವಿಜೇತರಿಗೆ ರಾಜ ರಾಣಿ ಸ್ಪರ್ಧೆ. ಡ್ಯಾನ್ಸ್ ಧಮಾಕ (SOLO DANCE) ವಿಭಾಗದಲ್ಲಿ 13 ವರ್ಷದ ಕೆಳಗಿನವರಿಗೆ ಮತ್ತು 13 ವರ್ಷದ ಮೇಲ್ಪಟ್ಟವರಿಗೆ ನಡೆಯಲಿದ್ದು,ಸಮಯ 3+1 ನಿಮಿಷ ಇರಲಿದೆ. ಮಹಿಳೆಯರಿಗೆ ಸಾಂಪ್ರದಾಯಿಕ ಉಡುಗೆ ತೊಡುಗೆ ಸ್ಪರ್ಧೆಯಿದ್ದು, ಸಮಯ 2 ನಿಮಿಷ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 9731851936, 944850172
ಕಾಪು : ಟೀಮ್ ಭಗ್ವ ಉಡುಪಿ ಪದಾಧಿಕಾರಿಗಳ ಆಯ್ಕೆ
Posted On: 14 Sep 2024, 07:57 PM
ಕಾಪು : ಟೀಮ್ ಭಗ್ವ ಉಡುಪಿ ಇದರ 2024-2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಿನಕರ್ ನಂದಳಿಕೆ, ಉಪಾಧ್ಯಕ್ಷರಾಗಿ ಶ್ರವಣ್ ದೇವಾಡಿಗ, ಕಾರ್ತಿಕ್ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಮಿಥುನ್ ಪೂಜಾರಿ, ಕಾರ್ಯದರ್ಶಿಗಳಾಗಿ ಸುಕೇಶ್ ಅಮೀನ್, ಪವನ್ ದೇವಾಡಿಗ, ಸಹ ಕಾರ್ಯದರ್ಶಿಗಳಾಗಿ ಕಿರಣ್ ಮುಳೂರು, ಕಿಶೋರ್ ಪೂಜಾರಿ, ಕೋಶಾಧಿಕಾರಿಗಳಾಗಿ ಅಪ್ಪು ಕೋಟಿಯನ್, ಸಾತ್ವಿಕ್ ಪೂಜಾರಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಮಿಥುನ್ ಪೊಲಿಪು, ಚಿತ್ತನ್ ಪೂಜಾರಿ, ಕಲ್ಯಾ ಯೋಗೀಶ್ ಶೆಟ್ಟಿ, ಗೌರವ ಸಲಹೆಗರರಾಗಿ ಸುಧೀರ್ ಸೋನು, ಪ್ರವೀಣ್ ಆಚಾರ್ಯ, ಸತೀಶ್ ಪೂಜಾರಿ ಕೂತಡಿ, ಸುರೇಂದ್ರ ಶೆಟ್ಟಿ, ದೀಪಕ್ ಮೂಡುಬೆಳ್ಳೆ, ರೋಷನ್ ಶೆಟ್ಟಿ, ಅರುಣ್ ಶೆಟ್ಟಿ, ಕಾನೂನು ಸಲಹೆಗಾರರಾಗಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಸಂಘಟನ ಕಾರ್ಯದರ್ಶಿಯಾಗಿ ಅರುಣ್ ಪೆರ್ನಾಕಿಲ, ಸುಶ್ಮಿತ್ ಪೂಜಾರಿ, ಮಾಧ್ಯಮ ಸಂಚಾಲಕರಾಗಿ ಲವ ಸುವರ್ಣ ಕಾಪು, ಸಾಮಾಜಿಕ ಜಾಲತಾಣದ ಪ್ರಮುಖರಾಗಿ ತುಷಾರ್ ಪೂಜಾರಿ, ಅಜಿತ್ ಪೂಜಾರಿ, ಶಶಾಂಕ್ ಪೂಜಾರಿ ಆಯ್ಕೆಯಾಗಿದ್ದಾರೆ.
