Updated News From Kaup
ಉಡುಪಿ : ಅಖಿಲ ಭಾರತ ದೈವಾರಾಧಕರ ಒಕ್ಕೂಟದಿಂದ ಉಡುಪಿ ನಗರ ಸಭೆಯ ನೂತನ ಅಧ್ಯಕ್ಷರಿಗೆ ಅಭಿನಂದನೆ
Posted On: 06 Sep 2024, 07:30 AM
ಉಡುಪಿ : ಅಖಿಲ ಭಾರತ ದೈವಾರಾಧಕರ ಒಕ್ಕೂಟ ಉಡುಪಿ (ರಿ.) ಒಕ್ಕೂಟದ ಪರವಾಗಿ ಉಡುಪಿ ನಗರ ಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಭಾಕರ್ ಪೂಜಾರಿ ಅವರನ್ನು ಒಕ್ಕೂಟದ ಪರವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ವಿನೋದ್ ಶೆಟ್ಟಿ, ಗೌರವಾಧ್ಯಕ್ಷರಾದ ಗಣೇಶ್ ದೇವಾಡಿಗ, ಸಂಘಟನೆ ಕಾರ್ಯದರ್ಶಿ ರಮೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಪೂಜಾರಿ, ಕೋಶಾಧಿಕಾರಿ ಸಮಿತ್ ಶೆಟ್ಟಿ, ಉಡುಪಿ ಜಿಲ್ಲಾ ಸಂಘಟನೆ ಕಾರ್ಯದರ್ಶಿ ಚರಣ್ ರಾಜ್ ಪೂಜಾರಿ, ಕಾರ್ಯಕಾರಿ ಸಮಿತಿ ಸದಸ್ಯ ಪ್ರಶಾಂತ್ ಶೆಟ್ಟಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ಯಾಮ, ಒಕ್ಕೂಟದ ಸಂಘಟನೆ ಕಾರ್ಯದರ್ಶಿ ಮೋಹನ್ ಶೆಟ್ಟಿ, ಸದಸ್ಯರು ಉಪಸ್ಥಿತಿಯಿದ್ದರು.
ಸೆಪ್ಟೆಂಬರ್ 7ರಿಂದ 10ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ ಇದರ 37ನೇ ವರ್ಷದ ಗಣೇಶೋತ್ಸವ
Posted On: 06 Sep 2024, 07:21 AM
ಉಚ್ಚಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉಚ್ಚಿಲ ಇದರ ಆಯೋಜನೆಯಲ್ಲಿ37ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆಪ್ಟೆಂಬರ್ ೦7ರ ಶನಿವಾರದಿಂದ ಸೆಪ್ಟೆಂಬರ್ 10 ಮಂಗಳವಾರ ತನಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬಳಿಯ ಶ್ರೀಮತಿ ಶಾಲಿನಿ ಡಾ. ಜಿ ಶಂಕರ್ ತೆರೆದ ಸಭಾಂಗಣದ ಶ್ರೀ ಲಕ್ಷ್ಮಿ ಮಂಟಪದಲ್ಲಿ ಜರಗಲಿದೆ. ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವವು 37ನೇ ವರ್ಷಾಚರಣೆ ಮಾಡುತ್ತಿದ್ದು, ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸೆಪ್ಟೆಂಬರ್ 7, ಶನಿವಾರ ಬೆಳಿಗ್ಗೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಿಂದ ವಿಗ್ರಹ ಮೆರವಣಿಗೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ಶುದ್ಧೀಕರಣ, ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ, ಗಣ ಯಾಗ, ಮಹಾಪೂಜೆ ನೆರವೇರಲಿದೆ. ಸಂಜೆ, ಶಾಲಾ ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ, ಮ್ಯಾಜಿಕ್ ಶೋ, ನೃತ್ಯ ವಿದುಷಿ, ಮಂಗಳ ಕಿಶೋರ್ ದೇವಾಡಿಗ ನೇತೃತ್ವದ ನಟೇಶ ನೃತ್ಯ ನಿಕೇತನ ಉಚ್ಚಿಲ ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ, ನೃತ್ಯ ವೈಭವ ನಡೆಯಲಿದೆ. ಬಳಿಕ ಉಚ್ಚಿಲ ರಾತ್ರಿ ಪೂಜೆ, ರಂಗ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸೆಪ್ಟೆಂಬರ್ 8, ಭಾನುವಾರ ಗೋಪಿಕಾ ಮತ್ತು ಸತೀಶ್ ಮಯ್ಯ, ದುಬೈ ಇವರಿಂದ ಗಣಪತಿ ಅಥರ್ವ ಶೀರ್ಷ ಯಾಗ ನೆರವೇರಲಿದೆ. ಸಂಜೆ ಶಾಲಾ ಮಕ್ಕಳಿಗೆ ನೃತ್ಯ ಸ್ಪರ್ಧೆ ನಡೆಯಲಿದೆ. ಬಳಿಕ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಕುಣಿತ ಭಜನಾ ತಂಡದಿಂದ ಕುಣಿತ ಭಜನೆ, ರಾತ್ರಿ ಪೂಜೆ, ರಂಗ ಪೂಜೆ, ಪ್ರಸಾದ ವಿತರಣೆ ನೆರವೇರಿಲಿದೆ. ರಾತ್ರಿ 9 ಗಂಟೆಗೆ ಯಶಸ್ವಿ ಕಲಾವಿದೆರ್ ಮಂಜೇಶ್ವರ ಇವರಿಂದ "ಅಬ್ಬರ" ತುಳು ಹಾಸ್ಯಮಯ ನಾಟಕ ನಡೆಯಲಿದೆ. ಸೆಪ್ಟೆಂಬರ್ 9, ಸೋಮವಾರ, ಶ್ರೀಮತಿ ಮತ್ತು ಶ್ರೀಪತಿ ಭಟ್, ಶಾಂತಾ ಎಲೆಕ್ಟ್ರಿಕಲ್ಸ್ ಪೈ. ಲಿಮಿಟೆಡ್ ಉಡುಪಿ ಇವರಿಂದ 108 ತೆಂಗಿನಕಾಯಿಯ ಗಣ ಹೋಮ ನೆರವೇರಲಿದೆ. ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ. ಸಂಜೆ ಬಹುಮಾನ ವಿತರಣಾ ಕಾರ್ಯಕ್ರಮ, ರಾತ್ರಿ ಪೂಜೆ, ರಂಗಪೂಜೆ, ಪ್ರಸಾದ ವಿತರಣೆಯ ಬಳಿಕ ಪ್ರಶಸ್ತಿ ವಿಜೇತ ತೆಲಿಕೆದ ಕಲಾವಿದೆರ್ ಕೊಯಿಲ ಇವರಿಂದ "ಗೆಂದಗಿಡಿ" ತುಳು ನಾಟಕ ಪ್ರಸಾರಗೊಳ್ಳಲಿದೆ. ಸೆಪ್ಟೆಂಬರ್ 10, ಮಂಗಳವಾರ ಗಣ ಯಾಗ, ವಿಶೇಷ ಅಪ್ಪದ ಸೇವೆ, ರಂಗ ಪೂಜೆ, ವಿಸರ್ಜನಾ ಪೂಜೆ, ಪ್ರಸಾದ ವಿತರಣೆ ಸಂಪನ್ನಗೊಳ್ಳಲಿದೆ. ಸಂಜೆ 4 ಗಂಟೆಗೆ ಶ್ರೀದೇವರ ಮೆರವಣಿಗೆಯು ಸೆಕ್ಸೋಫೋನ್, ಚೆಂಡೆ, ವಾದ್ಯ, ಕುಣಿತ ಭಜನೆ, ಬ್ಯಾಂಡ್, ವಿವಿಧ ವೇಷ ಭೂಷಣ, ಕೀಲು ಕುದುರೆ, ಡಿ.ಜೆ ಸೌಂಡ್ಸ್ ಹಾಗೂ ಸ್ತಬ್ಧ ಚಿತ್ರಗಳನ್ನು ಒಳಗೊಂಡ ಟ್ಯಾಬ್ಲೋಗಳ ಶೋಭಾ ಯಾತ್ರೆಯೊಂದಿಗೆ ಎರ್ಮಾಳು ಶ್ರೀ ಜನಾರ್ಧನ ದೇಗುಲದವರೆಗೆ ಸಾಗಿ, ಅಲ್ಲಿಂದ ಮೂಳೂರು ಅಟೋ ನಿಲ್ದಾಣದವರೆಗೆ ಬಂದು ಉಚ್ಚಿಲ ಬದ್ಧಿಂಜೆ ಮಠದ ಪುಷ್ಕರಣಿಯಲ್ಲಿ ಜಲ ಸ್ಥಂಭನ ಗೊಳ್ಳಲಿದೆ ಈ ಬಗ್ಗೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ
Posted On: 05 Sep 2024, 11:43 PM
ಉಚ್ಚಿಲ : ದ.ಕ. ಮೊಗವೀರ ಮಹಾಸಭಾದ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್ ಅನುದಾನದಿಂದ ಸುಮಾರು 5,20,750 ರೂ. ಮೊತ್ತದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಗುರುವಾರ ಸಂಜೆ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು. ಮೊಗವೀರ ಮುಂದಾಳು, ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರದ ರುವಾರಿ ನಾಡೋಜ ಡಾ. ಜಿ ಶಂಕರ್ರವರಿಗೆ ಕರ್ನಾಟಕ ಬ್ಯಾಂಕಿನ ಉಡುಪಿ ರೀಜನಲ್ ಹೆಡ್ ವಾದಿರಾಜ ಭಟ್ರವರು ವಾಹನದ ಕೀಲಿಕೈಯನ್ನು ಹಸ್ತಾಂತರಿಸಿದರು. ಮೊದಲಿಗೆ ದೇವಳದ ಅರ್ಚಕ ವೇದಮೂರ್ತಿ ವಿಷ್ಣುಮೂರ್ತಿ ಭಟ್ರವರು ವಾಹನದ ಪೂಜಾ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭ ನಾಡೋಜ ಡಾ. ಜಿ ಶಂಕರ್ ಮಾತನಾಡಿ, ಉಚ್ಚಿಲ ದಸರಾ ಸಂದರ್ಭ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಈ ವಾಹನವು ಉಪಯೋಗವಾಗಲಿದೆ. ಕರ್ನಾಟಕ ಬ್ಯಾಂಕಿನ ಸಂಬಂಧವು ಮಹಾಲಕ್ಷ್ಮೀ ದೇವಸ್ಥಾನದೊಂದಿಗೆ ಉತ್ತಮವಾಗಿದ್ದು, ಇಂತಹ ಕಾರ್ಯಗಳಿಂದ ಸಂಬಂಧ ಇನ್ನಷ್ಟು ಹೆಚ್ಚಾಗಲಿ ಎಂದರು. ಕರ್ನಾಟಕ ಬ್ಯಾಂಕಿನ ವಾದಿರಾಜ ಭಟ್ ಮಾತನಾಡಿ, ನಮ್ಮ ಬ್ಯಾಂಕಿನ ಸಿಎಸ್ಆರ್ ಯೋಜನೆಯಡಿ ನಾವು 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಹಸ್ತಾಂತರಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಕಾರ ನೀಡಲಿದ್ದೇವೆ ಎಂದರು. ಈ ಸಂದರ್ಭ ನಾಡೋಜ ಡಾ. ಜಿ. ಶಂಕರ್, ಗುಂಡು ಬಿ. ಅಮೀನ್, ವಿನಯ್ ಕರ್ಕೇರ, ಗಿರಿಧರ ಸುವರ್ಣ, ಮೋಹನ್ ಬೇಂಗ್ರೆ, ಶರಣ್ ಮಟ್ಟು, ಸುಧಾಕರ ಕುಂದರ್, ಸುಭಾಶ್ಚಂದ್ರ ಕಾಂಚನ್, ನಾರಾಯಣ ಕರ್ಕೇರ, ಸುಜಿತ್ ಸಾಲ್ಯಾನ್ ಮೂಲ್ಕಿ, ಪುಂಡಲೀಕ ಹೊಸಬೆಟ್ಟು, ರವೀಂದ್ರ ಶ್ರೀಯಾನ್, ನಾರಾಯಣ ಕುಂದರ್ ಕಲ್ಮಾಡಿ, ಮೋಹನ್ ಬಂಗೇರ ಕಾಪು, ವಿಠಲ ಕರ್ಕೇರಾ, ಸುಧಾಕರ ಸುವರ್ಣ ಉಚ್ಚಿಲ, ಸುಗುಣಾ ಕರ್ಕೇರ, ಕರ್ನಾಟಕ ಬ್ಯಾಂಕಿನ ಮಹಾಪ್ರಬಂಧಕ ಮನೋಜ್ ಕೋಟ್ಯಾನ್, ಅಂಬಾಗಿಲು ಶಾಖಾ ಪ್ರಬಂಧಕ ಶಶಿಕಾಂತ್ ಬಂಗೇರ ದೇವಳದ ಮನೇಜರ್ ಸತೀಷ್ ಅಮೀನ್ ಪಡುಕೆರೆ ಮತ್ತಿತರರು ಉಪಸ್ಥಿತರಿದ್ದರು.
ಸೆಪ್ಟೆಂಬರ್ 9 : ಪಡುಬಿದ್ರಿ ಸಿಎ ಸೊಸೈಟಿ - ನೂತನ ಕಟ್ಟಡ ಸಹಕಾರ ಸಂಕೀರ್ಣ, ನವೀಕೃತ ಹವಾನಿಯಂತ್ರಿತ ಪಲಿಮಾರು ಶಾಖೆಯ ಉದ್ಘಾಟನೆ
Posted On: 05 Sep 2024, 11:29 PM
ಪಡುಬಿದ್ರಿ : 67 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಎ ವರ್ಗದ ಬ್ಯಾಂಕ್ ಆಗಿ ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ಇದರ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯು ಸೆಪ್ಟೆಂಬರ್ 9, ಸೋಮವಾರ ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸೊಸೈಟಿಯ ಪ್ರಧಾನ ಕಚೇರಿ ಸಹಕಾರ ಸಂಗಮದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ಇವರು ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ನೂತನ ಶಾಖಾ ಕಟ್ಟಡವು ವಿಶಾಲವಾದ ನವೀಕೃತ ಹವಾನಿಯಂತ್ರಿತ ಶಾಖೆಯೊಂದಿಗೆ ವಿಶಾಲವಾದ ಭದ್ರತಾ ಕೊಠಡಿ ಗ್ರಾಹಕರಿಗೆ ಸೇಫ್ ಲಾಕರ್ ಸೌಲಭ್ಯವನ್ನು ಹೊಂದಿದೆ. ಶಾಖೆಯೊಂದಿಗೆ ಅಂಗಡಿ ಕೋಣೆಗಳನ್ನು ಹೊಂದಿದ್ದು ಈ ಅಂಗಡಿ ಕೋಣೆಗಳಲ್ಲಿ ಕೃಷಿ ಉಪಕರಣ ಮಾರಾಟ ವಿಭಾಗ, ಇ -ಅಶ್ವ ಇಲೆಕ್ಟ್ರಿಕ್ ಸ್ಕೂಟರ್ ಮಾರಾಟ ವಿಭಾಗವನ್ನು ನೂತನವಾಗಿ ಪ್ರಾರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಡಾ. ಎಮ್.ಎನ್ ರಾಜೇಂದ್ರ ಕುಮಾರ್, ಕೋಟಾ ಶ್ರೀನಿವಾಸ ಪೂಜಾರಿ, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ಭಾರತ ಕಬ್ಬಡಿ ತಂಡದ ಮಾಜಿ ನಾಯಕರಾದ ಶೇಖರ ಶೆಟ್ಟಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಯುವ ಸಮಾಜ ಸೇವಕರಾದ ಶರಣ್ ಮಟ್ಟು ಇವರಿಗೆ ಅಭಿನಂದನೆಯು ನಡೆಯಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸೊಸೈಟಿಯ ನಿರ್ದೇಶಕರುಗಳಾದ ರಸೂಲ್ ವೈ.ಜಿ, ಗಿರೀಶ್ ಪಲಿಮಾರು, ಮಾಧವ ಆಚಾರ್ಯ, ರಾಜಾರಾಮ್ ರಾವ್, ಸ್ಟ್ಯಾನಿ ಕ್ವಾಡ್ರಸ್, ಕುಸುಮ ಪುತ್ರನ್, ಕಾಂಚನಾ, ಸುಚರಿತ ಎಲ್ ಅಮೀನ್, ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್ ಉಪಸ್ಥಿತರಿದ್ದರು.
ಕಲ್ಪನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ
Posted On: 04 Sep 2024, 10:35 PM
ಕಾಪು : ಕಲ್ಪನೆ ಕನ್ನಡ ಆಲ್ಬಂ ಸಾಂಗ್ magical star manglore ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ನಟ ಸಂದೀಪ್ ಶೆಟ್ಟಿ ಮಾಣಿಬೆಟ್ಟು ಆಲ್ಬಂ ಸಾಂಗ್ ಬಿಡುಗಡೆ ಮಾಡಿದರು. ಈ ಹಾಡಿಗೆ ನಿರ್ದೇಶನ ಹಾಗೂ ಸಾಹಿತ್ಯ ಆರ್. ಕೆ ಮುಲ್ಕಿ, ಗಾಯನ , ನಟನೆ ಮತ್ತು ಪ್ರೊಡ್ಯೂಸಿಂಗ್ ಗಣೇಶ್ ಆಚಾರ್ಯ, ಎಡಿಟಿಂಗ್ ಮತ್ತು ಪೋಸ್ಟರ್ ಡಿಸೈನಿಂಗ್ ಎಸ್. ಕೆ ಮುಲ್ಕಿ, ನಟನೆಯಲ್ಲಿ ಪ್ರೀತಾ ಡಿಸೋಜ ಮತ್ತು ಹಿತು ಮಂಗಳೂರು, ಡಿಓಪಿ ಸಚ್ಚು ವರು ಎಸ್ ಬಿ ಎಸ್ ಇವರು ಪ್ರಸ್ತುತ ಪಡಿಸಿರುವ ಹೊಚ್ಚ ಹೊಸ ಆಲ್ಬಮ್ ಸಾಂಗ್ ಇದಾಗಿದೆ. ಈ ಲಿಂಕ್ ಮುಖಾಂತರ ವಿಡಿಯೋ ವೀಕ್ಷಿಸಲು ಅವಕಾಶವಿದೆ.
ಅದಮಾರು ಮಠದ ಹಿರಿಯ ಸ್ವಾಮೀಜಿಗೆ ಜೈ ತುಲುನಾಡ್ ಸಂಘಟನೆಯಿಂದ ಮನವಿ
Posted On: 04 Sep 2024, 07:33 PM
ಕಾಪು : ಜೈ ತುಲುನಾಡ್ (ರಿ.) ಸಂಘಟನೆಯ ವತಿಯಿಂದ ಉಡುಪಿಯ ಅದಮಾರು ಮಠದ ಸ್ವಾಮೀಜಿಗೆ ಅದಮಾರು ಮಠದ ಅಧೀನ ದೇವಸ್ಥಾನ, ಶಿಕ್ಷಣ ಸಂಸ್ಥೆ ಶಾಖಾಮಠದಲ್ಲಿ ತುಳುನಾಡಿನ ಮಣ್ಣಿನ ಭಾಷೆಯಾದ ತುಲುಲಿಪಿಯಲ್ಲಿ ನಾಮ ಫಲಕ ಅಳವಡಿಸಲು ಹಾಗೂ ಅಧೀನ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ಉಚಿತವಾಗಿ ತುಲು ಲಿಪಿಯನ್ನು ಕಲಿಸಲು ಸಹಕಾರ ಇದರ ಬಗ್ಗೆ ಮನವಿಯನ್ನು ನೀಡಲಾಯಿತು. ಜೈ ತುಲುನಾಡ್ (ರಿ.) ಸಂಘದ 10ನೇ ವರ್ಷದ ಸಂಭ್ರಮಾಚರಣೆಯ ಹೊಸ್ತಿಲಲ್ಲಿದ್ದು ಸಂಘದ 10 ವರ್ಷದ ಕಾರ್ಯವೈಖರಿಯ ಬಗ್ಗೆ ತಿಳಿಸಲಾಯಿತು. ಹಿರಿಯ ಸ್ವಾಮಿಗಳು ಯಾವುದೇ ಒಂದು ಫಲಾಪೇಕ್ಷೆ ಇಲ್ಲದೇ ತುಲುಭಾಷೆಯ,ಲಿಪಿಯ ಉಳಿವಿಗಾಗಿ ಶ್ರಮಿಸುತ್ತಿರುವ ಸಂಘಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಜೈ ತುಲು ನಾಡ್ (ರಿ.) ಇದರ ಕೇಂದ್ರ ಸಮಿತಿಯ ಜೊತೆ ಕಾರ್ಯದರ್ಶಿಯಾದ ಪ್ರಜ್ಞಾಶ್ರೀ ಎಂ. ಕೊಡವೂರ್, ಸಂಘಟನಾ ಕಾರ್ಯದರ್ಶಿಯಾದ ಸಂತೋಷ್.ಎನ್.ಎಸ್ ಕಟಪಾಡಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸಾಗರ್ ಬನ್ನಂಜೆ, ಸದಸ್ಯರಾದ ಕಿನ್ನು ಒಡಿಪು, ಸುಪ್ರಿಯಾ ಕೊಡವೂರ್, ಶಿವಪ್ರಸಾದ್ ಮಣಿಪಾಲ್, ಅಂಬಿಕಾ ಕನ್ನರ್ಪಾಡಿ, ಯೋಗಿನಿ ಕೊರಂಗ್ರಪಾಡಿ ಉಪಸ್ಥಿತರಿದ್ದರು.
ಕಾಪು : ಸರಕಾರಿ ಉರ್ದು ಸಂಯುಕ್ತ ಪ್ರೌಢಶಾಲೆ ಮಲ್ಲಾರು - ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ
Posted On: 04 Sep 2024, 07:17 PM
ಕಾಪು : ತಾಲೂಕಿನ ಸರಕಾರಿ ಉರ್ದು ಸಂಯುಕ್ತ ಪ್ರೌಢಶಾಲೆ ಮಲ್ಲಾರು ಇಲ್ಲಿ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಬುಧವಾರ ಆಚರಿಸಲಾಯಿತು. ಶಿಕ್ಷಕರಿಗೆ ಮನೋರಂಜನಾತ್ಮಕ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸುವ ಮೂಲಕ ಗುರುವಂದನೆ ಸಲ್ಲಿಸಲಾಯಿತು. ಬಶೀರ್ ಅಹ್ಮದ್ ಸಭಾಧ್ಯಕ್ಷತೆ ವಹಿಸಿದ್ದರು. ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಫೂರ್ ಅಹ್ಮದ್, ಉಪಾಧ್ಯಕ್ಷರಾದ ಮಹೇಶ್ ಬೆಳಪು, ಕಾರ್ಯದರ್ಶಿಯಾದ ಅಲ್ತಾಫ್ ಮಲ್ಲಾರ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವೀಣಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕಾತುನ್ ಬಿ, ಮೌಲಾನಾ ಶಾಲೆಯ ಮುಖ್ಯೋಪಾಧ್ಯಾಯರಾದ ವಿದ್ಯಾ, ಕಾಪು ಪುರಸಭಾ ಸದಸ್ಯರಾದ ನೂರುದ್ದೀನ್, ದಾನಿಗಳಾದ ಷಫೀಕಾಝಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ರಾಜೇಂದ್ರ ಸ್ವಾಗತಿಸಿದರು. ಹಸೀನಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಕಾತುನ್ ಬಿ ವಂದಿಸಿದರು.
ಉದ್ಯಮಿ ಪಡುಬಿದ್ರಿ ಅನಂತ್ ರಾಜ್ ಹುಟ್ಟು ಹಬ್ಬದ ನಿಮಿತ್ತ ಕೌಡೂರು ಹೊಸ ಬೆಳಕು ವೃದ್ಧಾಶ್ರಮಕ್ಕೆ ಪರಿಕರಗಳ ಹಸ್ತಾಂತರ
Posted On: 04 Sep 2024, 07:04 PM
ಪಡುಬಿದ್ರಿ : ಬೆಂಗಳೂರಿನ ಖ್ಯಾತ ಉದ್ಯಮಿ ರಾಜ್ ಅಸೋಸಿಯೇಟ್ಸ್ ಸಂಸ್ಥೆ ಅಡಳಿತ ನಿರ್ದೇಶಕ ಪಡುಬಿದ್ರಿ ಅನಂತ್ ರಾಜ್ ರವರ 75ನೇ ಹುಟ್ಟು ಹಬ್ಬದ ಸಲುವಾಗಿ ಅವರ ಸುಪುತ್ರಿ ಶ್ರುತಿ ಅನಂತ್ ರಾಜ್ ರವರು ರೂ. 51,320 ಮೌಲ್ಯದ ಪರಿಕರಗಳನ್ನು ಕೌಡೂರಿನ ಹೊಸ ಬೆಳಕು ವೃದ್ಧಾಶ್ರಮಕ್ಕೆ ಕೊಡುಗೆಯಾಗಿ ನೀಡಿದರು. ಇದೇ ಸಂದರ್ಭ ಪಡುಬಿದ್ರಿ ಬಾಲಪ್ಪ ಗುರಿಕಾರ ನಟರಾಜ್ ರಾವ್ ರವರು 7 ಕಾಟ್ ,7 ಬೆಡ್ 7 ದಿಂಬುಗಳನ್ನು ವೃದ್ಧಾಶ್ರಮಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ರೋಟರಿ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ನಿಕಟ ಪೂರ್ವ ಕಾರ್ಯದರ್ಶಿ ಪವನ್ ಸಾಲ್ಯಾನ್, ನಿಯೋಜಿತ ಅಧ್ಯಕ್ಷ ಸುನಿಲ್ ಕುಮಾರ್, ಹೊಸ ಬೆಳಕು ಸಂಸ್ಥೆಯ ಆಡಳಿತ ನಿರ್ದೇಶಕಿ ತನುಲಾ ಉಪಸ್ಥಿತರಿದ್ದರು.
ಕಾಪು : ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಚಾಲನೆ
Posted On: 04 Sep 2024, 07:00 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿರುವ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿಗಳ ಉಪಸ್ಥಿತಿಯಲ್ಲಿ ಮಂಗಳ ಗೌರಿ ನವದುರ್ಗಾ ಲೇಖನ ಸಂಕಲ್ಪ ಪೂಜೆ ನೆರವೇರಿತು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶ್ರೀ ವಿನಯ್ ಗುರೂಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಾಸುದೇವಶೆಟ್ಟಿ, ಕಾರ್ಯಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ನವದುರ್ಗಾ ಯಜ್ಞ ಲೇಖನ ಸಮಿತಿಯ ಅಧ್ಯಕ್ಷ ರಘುಪತಿ ಭಟ್ ದೇವಸ್ಥಾನದ ಅಭಿವೃದ್ಧಿ ಕಾರ್ಯ ಹಾಗೂ ನವದುರ್ಗ ಲೇಖನದ ಯಜ್ಞದ ಬಗ್ಗೆ ಮಾಹಿತಿಯನ್ನು ನೀಡಿದರು. ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ರವಿ ಸುಂದರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ನಾಡೋಜ ಜಿ ಶಂಕರ್, ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಆಂಧ್ರ ಪ್ರದೇಶದ ಶಾಸಕ ಅಮಿಲಿನೆನಿ ಸುರೇಂದ್ರ ಬಾಬು, ತಹಶೀಲ್ದಾರ್ ಡಾ.ಪ್ರತಿಭಾ ಆರ್. , ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ನಾಳೆ (ಸೆ. 3) : ಕಾಪು ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ
Posted On: 02 Sep 2024, 10:09 PM
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಜೀರ್ಣೋದ್ದಾರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸೆಪ್ಟೆಂಬರ್ 3ರಂದು ನವದುರ್ಗಾ ಲೇಖನ ಯಜ್ಞ ಮತ್ತು ನವಚಂಡಿಕಾಯಾಗ ಜರಗಲಿದೆ. ದೇವಸ್ಥಾನದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ ಪಿ ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಇವರ ಉಪಸ್ಥಿತಿಯಲ್ಲಿ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಚಾಲನೆ ನೀಡಲಾಗುವುದು. ಬೆಳಿಗ್ಗೆ 8.30 ಕ್ಕೆ ಅಮ್ಮನ ಸನ್ನಿಧಾನದಲ್ಲಿ ಪ್ರಾರ್ಥನೆ, 8:40 ಕ್ಕೆ ಲೇಖನ ಸಂಕಲ್ಪಕ್ಕೆ ಭಕ್ತಾದಿಗಳನ್ನು ಮಂಗಳ ಗೌರಿ ಮಂಟಪಕ್ಕೆ ಕರೆದೊಯ್ಯುವುದು, 8:50 ಕ್ಕೆ ಲೇಖನ ಸಂಕಲ್ಪದ ಭಕ್ತರು ಆಸೀನರಾಗುವುದು, 9ಕ್ಕೆ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪ ಆರಂಭ, 10.15 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅವದೂತ ವಿನಯ್ ಗುರೂಜಿ, ಗೌರಿಗದ್ದೆ ಉದ್ಘಾಟಿಸಲಿದ್ದಾರೆ. 12 ಗಂಟೆಗೆ ಮಹಾ ಮಂಗಳಾರತಿ, ಮಧ್ಯಾಹ್ನ 1 ಗಂಟೆಗೆ ಪ್ರಸಾದ ಭೋಜನ ವಿತರಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
