Updated News From Kaup

ಉಡುಪಿ : ಕನ್ನಡ ಚಲನಚಿತ್ರ - ಉಡುಪಿ ನ್ಯೂಸ್ ಮುಹೂರ್ತ

Posted On: 08-08-2024 08:28PM

ಉಡುಪಿ : ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕನ್ನಡ ಚಲನಚಿತ್ರ ಉಡುಪಿ ನ್ಯೂಸ್ ನ ಮುಹೂರ್ತ ಜರಗಿತು.

ಆಗಸ್ಟ್ 11 : ಪಡುಬಿದ್ರಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಟಿದ ತಮ್ಮನ

Posted On: 08-08-2024 08:01PM

ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಪಡುಬಿದ್ರಿ, ಮಹಿಳಾ ಕಾಂಗ್ರೆಸ್ ಪಡುಬಿದ್ರಿ ಹಾಗೂ ಯುವ ಕಾಂಗ್ರೆಸ್ ಪಡುಬಿದ್ರಿ ಇದರ ಆಶ್ರಯದಲ್ಲಿ ಆಗಸ್ಟ್ 11, ಆದಿತ್ಯವಾರ ಪೂರ್ವಾಹ್ನ ಗಂಟೆ 9.30 ಕ್ಕೆ ಸರಿಯಾಗಿ ಸುಜಾತಾ ಆಡಿಟೋರಿಯಂ ಸಭಾಂಗಣದ ಕಾಂಗ್ರೆಸ್ ಹಿರಿಯ ಮುತ್ಸದ್ದಿ ದಿ.ವೈ ಹಿರಿಯಣ್ಣ ಸಭಾ ವೇದಿಕೆಯಲ್ಲಿ ಆಟಿದ ತಮ್ಮನ ತುಳುನಾಡಿನ ಆಚಾರ ವಿಚಾರಗಳು ನಶಿಸಿ ಹೋಗದಂತೆ ಯುವ ಪೀಳಿಗೆಗೆ ಪ್ರೇರಣೆ ನೀಡುವ ಅಮೋಘ ಕಾರ್ಯಕ್ರಮದ ಜೊತೆಗೆ ವಿಶೇಷ ಆಕರ್ಷಣೆಯಾಗಿ ನೃತ್ಯೋತ್ಸವ ವೈಭವ ಜರುಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಗ್ರಾಮೀಣ ಕಾಂಗ್ರೆಸ್ ಸಮಿತಿ ಪಡುಬಿದ್ರಿ ಅಧ್ಯಕ್ಷರಾದ ಕರುಣಾಕರ್ ಎಮ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಣಿಯೂರು : ಶೈಕ್ಷಣಿಕ ಪರಿಕರಗಳ ವಿತರಣೆ

Posted On: 07-08-2024 09:24PM

ಕಾಪು : ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಣಿಯೂರು ಇಲ್ಲಿ 2024 -25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅದಾನಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾದ ಶೈಕ್ಷಣಿಕ ಪರಿಕರಗಳನ್ನು ಬೆಳಪು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಾ| ದೇವಿ ಪ್ರಸಾದ್ ಶೆಟ್ಟಿ ವಿತರಿಸಿದರು.

ಕಾಪು : ನಿಸರ್ಗ ಫ್ರೆಂಡ್ಸ್ ವತಿಯಿಂದ ಶಂಕರಪುರ ಇನ್ನಂಜೆ ಮಾರ್ಕೆಟ್ ರಸ್ತೆಯಲ್ಲಿ ಶ್ರಮದಾನ

Posted On: 07-08-2024 09:16PM

ಕಾಪು : ನಿಸರ್ಗ ಫ್ರೆಂಡ್ಸ್ (ರಿ.) ಇದರ ವತಿಯಿಂದ ಶಂಕರಪುರ ಇನ್ನಂಜೆ ಮಾರ್ಕೆಟ್ ರಸ್ತೆಯಲ್ಲಿ ಸಾರ್ವಜನಿಕರು ಸಂಚರಿಸಲು ಅನಾನುಕೂಲ ವಾಗುತ್ತಿದ ಗಿಡ, ಪೊದೆಗಳನ್ನು ಕಡಿದು ಸ್ಥಳೀಯ ಗ್ರಾಮಸ್ಥರ ಸಹಕಾರ ದೊಂದಿಗೆ ಸ್ವಚ್ಚ ಗೊಳಿಸಲಾಯಿತು.

ಕಾಪು : ಅಗಲಿದ ಜಯಕರ ಸುವರ್ಣರಿಗೆ ನುಡಿ ನಮನ

Posted On: 07-08-2024 05:49PM

ಕಾಪು : ಉಡುಪಿ ಜಿಲ್ಲಾ ಕಾರ್ಯ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಅವರಿಗೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನುಡಿ ನಮನವನ್ನು ಸಂಘದ ಕಛೇರಿಯಲ್ಲಿ ಸಲ್ಲಿಸಲಾಯಿತು.

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ : ಕಾಪು ವಲಯದ 33ನೇ ವಾರ್ಷಿಕ ಸಭೆ

Posted On: 05-08-2024 07:38PM

ಕಾಪು : ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಘಟನೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ ಕಾಪು ವಲಯದ 33ನೇ ವಾರ್ಷಿಕ ಸಭೆ ಉಚ್ಚಿಲ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆಯಿತು.

ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ವತಿಯಿಂದ ಆಟಿದ ಗಮ್ಮತ್ತ್

Posted On: 04-08-2024 05:29PM

ಪಡುಬಿದ್ರಿ : ಜಾನಪದ ಶೃೆಲಿಯ ಬದುಕು, ಆಹಾರ ಪದ್ದತಿಗಳು ಇಂದಿಗೂ ರೋಗ ಮುಕ್ತ ಜೀವನಕ್ಕೆ ಶಕ್ತಿಯಾಗಿದೆ. ಇಂದಿನ ಅಧುನಿಕ ಆಹಾರ ಪದ್ದತಿಗಳು ಮನುಷ್ಯನ ಆಯುಷ್ಯವನ್ನು ನುಂಗಿ ಬಿಡುತ್ತಿದೆ. ಹಿಂದಿನ ಹಿರಿಯರ ಜೀವನ ನಮ್ಮಗೆಲ್ಲ ಮಾದರಿಯಾಗಿದೆ.‌ ಸೂರ್ಯನ ಬೆಳಕು ಕಡೆಮೆಯಾದಂತೆ ಅಟಿ ತಿಂಗಳಲ್ಲಿ ರೋಗರೋಜಿನ ಗಳು ಹೆಚ್ಚಾಗುತ್ತಿದ್ದವು. ಇದಕ್ಕಾಗಿ ವಿವಿಧ ಗಿಡ ಮೂಲಿಕೆಗಳ ಕಷಾಯ, ಆಹಾರ ಪದಾರ್ಥಗಳನ್ನು ಸೇವಿಸುತ್ತಿದ್ದರು ಎಂದು ಸುರತ್ಕಲ್ ರಿದಮ್ ಫೌಂಡೇಶನ್ ನಿರ್ದೇಶಕ ಸುಧಾಕರ್ ಸಾಲ್ಯಾನ್ ‌ಹೇಳಿದರು. ಅವರು ಪಡುಬಿದ್ರಿ ‌ರೋಟರಿ ಕ್ಲಬ್ ‌ಮತ್ತು ಇನ್ನರ್ ವೀಲ್ ಕ್ಲಬ್ ವತಿಯಿಂದ ಪಡುಬಿದ್ರಿ ಸಹಕಾರ ‌ಸಂಗಮದಲ್ಲಿ ನಡೆದ ಆಟಿದ ಗಮ್ಮತ್ತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಣೆ

Posted On: 04-08-2024 05:15PM

ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಸಂಸ್ಥೆಯ ವತಿಯಿಂದ ಸತತ ಐದನೇ ವರುಷದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಿಸಲಾಯಿತು.

ತೆಂಕ ಎರ್ಮಾಳು ಅಟೋ ರಿಕ್ಷಾ ನಿಲ್ದಾಣಕ್ಕೆ ಸಿಮೆಂಟ್ ಬೆಂಚ್‌ಗಳ ಕೊಡುಗೆ

Posted On: 04-08-2024 04:57PM

ಎರ್ಮಾಳು : ತೆಂಕ ಎರ್ಮಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಟೋ ರಿಕ್ಷಾ ನಿಲ್ದಾಣಕ್ಕೆ ಬಹುದಿನಗಳ ಬೇಡಿಯ ಸಿಮೆಂಟ್ ಬೆಂಚ್‌ಗಳನ್ನು ದಾನಿಯೋರ್ವರು ನೀಡಿದ್ದು, ಈ ಸಂದರ್ಭ ಅವರನ್ನು ಎರ್ಮಾಳು ಅಟೋ ಯೂನಿಯನ್ ವತಿಯಿಂದ ಗೌರವಿಸಲಾಯಿತು.

ಪಡುಬಿದ್ರಿ : ರಸ್ತೆ ದುರಸ್ತಿ ಕಾರ್ಯ ಪೂರ್ಣ ; ಸೋಮವಾರದಿಂದ ಬ್ಲೂ ಫ್ಲಾಗ್ ಬೀಚ್ ವೀಕ್ಷಣೆಗೆ ಅವಕಾಶ

Posted On: 04-08-2024 04:54PM

ಪಡುಬಿದ್ರಿ : ಕಡಲ ಕೊರೆತದಿಂದಾಗಿ ರಸ್ತೆಯ ಸಂಪರ್ಕವನ್ನು ಕಳೆದುಕೊಂಡಿದ್ದ ಬ್ಲೂ ಫ್ಲಾಗ್ ಬೀಚ್ ಗೆ ಹೋಗುವ ಮಾರ್ಗದ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು ಆಗಸ್ಟ್ 5, ಸೋಮವಾರದಿಂದ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಮಾಡಲಾಗಿದೆ.