Updated News From Kaup

ಪ್ರಾಚೀನ ದೇಗುಲಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಶಿಲ್ಪಕಲೆ : ಎಸ್.ಎಲ್. ಭೋಜೇಗೌಡ

Thumbnail
Posted On: 28 Aug 2024, 08:31 PM

ಕಾಪು : ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಅವರು ಪತ್ನಿ ತರ್ಪಣ ಜೊತೆ ಕಾಪು ಮಾರಿಯಮ್ಮನ ಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದರು. ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಅವರು ಈ ಭಾಗದಲ್ಲಿ ಎಲ್ಲಿಯೂ ನಡೆಯದಂತಹ ಕೆಲಸ ಕಾರ್ಯಗಳು ಈ ದೇವಸ್ಥಾನದಲ್ಲಿ ನಡೆಯುತ್ತಿದೆ. ಪ್ರಾಚೀನ ಕಾಲದ ಶಿಲ್ಪಕಲೆಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಕೆತ್ತನೆಗಳು ಅತ್ಯದ್ಭುತವಾಗಿ ಮೂಡಿ ಬಂದಿದ್ದು, ಎಲ್ಲರೂ ಒಮ್ಮೆ ಇಲ್ಲಿಗೆ ಭೇಟಿ ನೀಡಿ ಕಣ್ತುಂಬಿಕೊಳ್ಳಬೇಕು ಎಂದರು. ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ, ಅಭಿವೃದ್ಧಿ ಸಮಿತಿಯ ಗೌರವ ಸಲಹೆಗಾರ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ, ಪ್ರಚಾರ ಸಮಿತಿಯ ಸಂಚಾಲಕ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ ಆಚಾರ್ಯ, ಅಭಿವೃದ್ಧಿ ಸಮಿತಿಯ ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ಪ್ರಚಾರ ಸಮಿತಿಯ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾಪು ಪುರಸಭೆಯ ಅಧ್ಯಕ್ಷರಾಗಿ ಹರಿಣಾಕ್ಷಿ ದೇವಾಡಿಗ ಮತ್ತು ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಆಯ್ಕೆ

Thumbnail
Posted On: 28 Aug 2024, 08:15 PM

ಕಾಪು : ಇಲ್ಲಿನ ಪುರಸಭೆಯ ನೂತನ ಅಧ್ಯಕ್ಷರಾಗಿ ಹರಿಣಾಕ್ಷಿ ದೇವಾಡಿಗ ಮತ್ತು ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಚುನಾವಣಾ ಪ್ರಕ್ರಿಯೆಯ ಮೂಲಕ ಆಯ್ಕೆಯಾಗಿದ್ದಾರೆ. ಆ ಮೂಲಕ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳೆರಡೂ ಬಿಜೆಪಿ ಪಾಲಾಗಿದೆ. 23 ಮಂದಿ ಸದಸ್ಯ ಬಲದ ಕಾಪು ಪುರಸಭೆಯ ಅಧ್ಯಕ್ಷ ಹುದ್ದೆಯು ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಹುದ್ದೆಯು ಪರಿಶಿಷ್ಟ ಜಾತಿಗೆ ಮೀಸಲಾತಿ ಪ್ರಕಟವಾಗಿತ್ತು. ಅಂತಿಮವಾಗಿ ಅಧ್ಯಕ್ಷರಾಗಿ ಹರಿಣಾಕ್ಷಿ ದೇವಾಡಿಗ ಮತ್ತು ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಅವರು 16 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಶೋಭಾ ಎ. ಬಂಗೇರ ಮತ್ತು ಸತೀಶ್ಚಂದ್ರ ಮೂಳೂರು ತಲಾ 9 ಮತ ಗಳಿಸಿದ್ದಾರೆ.‌ ಬಿಜೆಪಿ -12, ಕಾಂಗ್ರೆಸ್ -7, ಎಸ್‌ಡಿಪಿಐ -3, ಜೆಡಿಎಸ್ -1 ಸದಸ್ಯ ಬಲವನ್ನು ಹೊಂದಿದ್ದು, ಶಾಸಕ, ಸಂಸದ ಮತ್ತು ಜೆಡಿಎಸ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ 16 ಮತಗಳನ್ನು ಹೊಂದಿತ್ತು. ಅಧ್ಯಕ್ಷ ಹುದ್ದೆಗೆ ಬಿಜೆಪಿಯೊಳಗೆ ನಾಲ್ಕು ಮಂದಿಗೆ ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಹರಿಣಾಕ್ಷಿ ದೇವಾಡಿಗ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದು, ಉಪಾಧ್ಯಕ್ಷ ಹುದ್ದೆಗೆ ಎಸ್.ಡಿ.ಪಿ.ಐ ನಿಂದ ಬಿಜೆಪಿಗೆ ಪಕ್ಷಾಂತರಗೊಂಡ ಸರಿತಾ ಶಿವಾನಂದ್ ಸ್ಪರ್ಧಿಸಿದ್ದರು. ಕಾಪು ತಹಶೀಲ್ದಾರ್ ಡಾ.‌ಪ್ರತಿಭಾ‌ ಆರ್. ಚುನಾವಣಾಧಿಕಾರಿಯಾಗಿ ಚುನಾವಣೆ ನಡೆಸಿಕೊಟ್ಟರು.

ಅದಮಾರುವಿನಲ್ಲಿ ಮೊಸರು ಕುಡಿಕೆ ಉತ್ಸವ

Thumbnail
Posted On: 27 Aug 2024, 10:55 PM

ಅದಮಾರು : ಮೂಲ ಮಠದ ಆಯೋಜನೆಯಲ್ಲಿ ಶ್ರೀ ಕೃಷ್ಣ ಲೀಲೋತ್ಸವದ ಅಂಗವಾಗಿ ಮೊಸರು ಕುಡಿಕೆ ಉತ್ಸವ ಮಂಗಳವಾರ ಅದಮಾರು ವೃತ್ತದಲ್ಲಿ ನೆರವೇರಿತು. ಸಣ್ಣ ರಥದಲ್ಲಿ ಕೃಷ್ಣನ ಮೂರ್ತಿ ಸಾಗಿ ಬಂದು ಅದಮಾರು ವೃತ್ತದಲ್ಲಿರುವ ಮಠದ ಜಾಗದಲ್ಲಿ ಕೃಷ್ಣನಿಗೆ ಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭ ತಪ್ಪಂಗಾಯಿ, ಮಡಕೆ ಒಡೆಯುವ ಸ್ಪರ್ಧೆ, ಹಗ್ಗ ಜಗ್ಗಾಟ ಸಹಿತ ಹಲವಾರು ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಸ್ಥಳೀಯ ಕುಣಿತ ಭಜನಾ ತಂಡದಿಂದ ಕುಣಿತ ಭಜನೆ, ಮಹಿಳಾ ಚೆಂಡೆ ವಾದನ ಮೆರವಣಿಗೆಯಲ್ಲಿ ಸಾಗಿ ಬಂದಿತು. ಮೊಸರು ಕುಡಿಕೆಯು ಜರಗಿತು. ಈ ಸಂದರ್ಭ ಸ್ಥಳೀಯ ಸಂಘ ಸಂಸ್ಥೆಯ ಪದಾಧಿಕಾರಿಗಳು ಸಹಿತ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ಕಟಪಾಡಿ : ವಿನಯ್ ಬಲ್ಲಾಳ್ ನಿಧನ

Thumbnail
Posted On: 27 Aug 2024, 10:41 PM

ಕಟಪಾಡಿ : ಇಲ್ಲಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಕಟಪಾಡಿ ಬೀಡು ಮನೆತನದ ವಿನಯ್ ಬಲ್ಲಾಳ್ ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ವಿಧಿ ವಿಧಾನ ಅವರ ಸ್ವಗೃಹ ಕಟಪಾಡಿಯ ಮೂಡಬೆಟ್ಟುವಿನಲ್ಲಿ ಬುಧವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಫ್ರೆಂಡ್ಸ್ ಗ್ರೂಪ್ ಕಳತ್ತೂರು : 3ನೇ ವರ್ಷದ ಮುದ್ದು ಕೃಷ್ಣ ಸ್ಪರ್ಧೆ ಸಂಪನ್ನ

Thumbnail
Posted On: 27 Aug 2024, 10:33 PM

ಕಾಪು : ಫ್ರೆಂಡ್ಸ್ ಗ್ರೂಪ್ ಕಳತ್ತೂರು ಇವರ ವತಿಯಿಂದ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ 3ನೇ ವರ್ಷದ ಮುದ್ದು ಕೃಷ್ಣ ಸ್ಪರ್ಧೆ ಭಾನುವಾರ ಕುಶಲಶೇಖರ ಶೆಟ್ಟಿ ಇಂಟರ್ನ್ಯಾಷನಲ್ ಆಡಿಟೋರಿಯಂ ಇಲ್ಲಿ ಜರಗಿತು. ಕಳತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ದಿವಾಕರ ಶೆಟ್ಟಿ ಕಳತ್ತೂರು, ಅಶೋಕ್ ರಾವ್, ಪ್ರದೀಪ್ ರಾವ್, ಶಾರದೇಶ್ವರಿ ಗುರ್ಮೆ, ಅನಿತ ಉಪಾಧ್ಯಾಯ, ಫ್ರೆಂಡ್ಸ್ ಗ್ರೂಪ್ ಗೌರವಾಧ್ಯಕ್ಷ ರಂಗನಾಥ ಶೆಟ್ಟಿ, ಅಧ್ಯಕ್ಷರಾದ ರೋಹಿತ್ ರಾವ್, ಫ್ರೆಂಡ್ಸ್ ಗ್ರೂಪ್ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಕೀರ್ತನ್, ಶ್ರೇಯಾ, ಕುಮಾರಿ ಸುರಕ್ಷ ಸಹಕರಿಸಿದ್ದರು. ಸುನೀತ ರಂಗನಾಥ್ ಸ್ವಾಗತಿಸಿದರು. ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು. ಶಶಿಕಲಾ ವಂದಿಸಿದರು. ವಿಜೇತರಿಗೆ ಬಹುಮಾನವನ್ನು ವಿತರಿಸಿ, ಸ್ಪರ್ಧಿಸಿದ ಎಲ್ಲಾ ಮಕ್ಕಳಿಗೆ ಗೌರವ ಸ್ಮರಣಿಕೆ ನೀಡಲಾಯಿತು.

ಶ್ರೀ ಕೃಷ್ಣ ಜನ್ಮಾಷ್ಟಮಿ : ಶ್ರೀ ಕ್ಷೇತ್ರ ಶಂಕರಪುರ ವತಿಯಿಂದ ಮೂಡೆ ಹಾಲು, ಸಾಯಿ ತುತ್ತು ವಿತರಣೆ

Thumbnail
Posted On: 27 Aug 2024, 10:17 PM

ಕಟಪಾಡಿ‌ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ (ರಿ.) ವತಿಯಿಂದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಆಶೀವಾರ್ದದದೊಂದಿಗೆ ಶ್ರೀ ಕೃಷ್ಣಾಷ್ಟಮಿಯ ಪ್ರಯುಕ್ತ ಉಡುಪಿ ವಿಟ್ಲಪಿಂಡಿಯಂದು ಮೂಡೆ ಹಾಲು ಮತ್ತು ಸಾಯಿ ತುತ್ತು ಮಂಗಳವಾರದಂದು ಉಡುಪಿ ಎಮ್.ಎಲ್.ಎ ಕಛೇರಿಯ ಮುಂಭಾಗದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಎ.ಸುವರ್ಣ, ಗೀತಾಂಜಲಿ ಎಮ್.ಸುವರ್ಣ, ವೀಣಾ ಎಸ್. ಶೆಟ್ಟಿ , ನೀತಾ ಪ್ರಭು, ಅಭಿರಾಜ್ ಸುವರ್ಣ, ಶ್ರೀವಾಸ್ತ, ದೀಪಾ, ರೇಷ್ಮಾ ಸಂತೋಷ್, ಮಹೇಶ್ ಜತ್ತನ್, ಸತೀಶ್ ದೇವಾಡಿಗ, ಅನುರಾಧ ಸಂತೋಷ್, ನಿಲೇಶ್, ಅಜಯ್, ಶಶಾಂಕ್, ಆರ್ಯನ್, ಅಂಕಿತ್ ಉಪಸ್ಥಿತರಿದ್ದರು.

ಹೆಜಮಾಡಿ‌ : ಕಣ್ಣಂಗಾರು ಜುಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಹಮೀದ್ ಆಯ್ಕೆ

Thumbnail
Posted On: 27 Aug 2024, 06:41 PM

ಹೆಜಮಾಡಿ‌ : ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ವಕ್ಫ್ ಆಡಳಿತಕ್ಕೆ ಒಳಪಟ್ಟಿದ್ದ ಕಣ್ಣಂಗಾರು ಜಮಾತಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಹಾಜಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಜುಮಾ ಮಸೀದಿಯ ಆಡಳಿತ ಅಧಿಕಾರಿ ಕೆ.ಎಂ.ಕೆ. ಮಂಜನಾಡಿ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿತ ಸಭೆಯಲ್ಲಿ ಮುಂದಿನ ಮೂರು ವರ್ಷಗಳಿಗೆ ಈ ಆಯ್ಕೆ ನಡೆದಿದೆ. ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಮಿಲಾಫ್, ಪ್ರಧಾನ ಕಾರ್ಯದರ್ಶಿ ಶೇಖ್ ಅಬ್ದುಲ್ಲಾ ಹಾಜಿ ಮಿನಾ, ಕೋಶಾಧಿಕಾರಿ ಅಬ್ದುಲ್ ಖಾದರ್ ಹಾಜಿ, ಜತೆಕಾರ್ಯದರ್ಶಿ ಕೆ. ಅಬ್ದುಲ್ ಮಜೀದ್ ಮೆಹರಾಜ್ ಆಯ್ಕೆಯಾದರು. ಸದಸ್ಯರಿಗಾಗಿ ನಡೆದ ಚುನಾವಣೆಗೆ 14 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಹಿಂಪಡೆಯುವ ದಿನ ಕೋಟೆ ಶೇಖಬ್ಬ ಹಾಜಿ, ಮುಹಮ್ಮದ್ ಕಬೀರ್ ಮತ್ತು ಶಾಹುಲ್ ಹಮೀದ್ ನಾಮಪತ್ರ ಹಿಂಪಡೆದಿದ್ದರು. ಇದರಿಂದ ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ರಹಿಮಾನ್ ಭಾವ, ಶೇಖ್ ಅಬ್ದುಲ್ಲಾ, ಅಬ್ದುಲ್ ಹಮೀದ್, ಕೆ. ಅಬ್ದುಲ್ ಮಜೀದ್, ಇಬ್ರಾಹಿಂ ಖಲೀಲ್, ಮುಹಮ್ಮದ್ ಕಬೀರ್, ಮುಹಮ್ಮದ್ ಸಿರಾಜ್, ಮೊಹಮ್ಮದ್ ಶರೀಫ್, ಅಬ್ದುಲ್ ಖಾದಿರಿ, ಅಬ್ದುಲ್ ಹಮೀದ್, ಮೊಹಮ್ಮದ್ ಇರ್ಷಾದ್ ಅವಿರೋಧವಾಗಿ ಆಯ್ಕೆಯಾಗಿರುವ ಬಗ್ಗೆ ಚುನಾವಣಾ ಅಧಿಕಾರಿ ಕೆ.ಎಂ.ಕೆ. ಮಂಜನಾಡಿ ಘೋಷಿಸಿದ್ದರು. ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ಮುತ್ತಲಿ, ಉಪಾಧ್ಯಕ್ಷ ಎಂ.ಎಸ್. ಅಬ್ದುಲ್ ರಝಾಕ್ ಹಾಜಿ, ಎಂ.ಪಿ.ಮೊಯಿದಿನಬ್ಬ, ಸದಸ್ಯರಾದ ಹಮೀದ್ ಮೂಳೂರು, ಮನ್ಸೂರ್, ಅಸೀಫ್ ಕಟಪಾಡಿ, ಅಬ್ದುಲ್ ರಹಿಮಾನ್, ಉಡುಪಿ ಜಿಲ್ಲಾ ವಕ್ಫ್ ಅಧಿಕಾರಿ ನಾಝಿಯ ಅವರು ಪ್ರಮಾಣ ಪತ್ರ ನೀಡಿ ಗೌರವಿಸಿದರು. ಸಲಹಾ ಸಮಿತಿ ಸದಸ್ಯರಾದ ಹನೀಫ್, ಶಫಿ ಹಾಜಿ, ಸೈಯ್ಯದ್, ಆಸೀಫ್ ಉಪಸ್ಥಿತರಿದ್ದರು. ಮಸೀದಿ ಮುರ‍್ರಿಸ್ ಅಶ್ರಫ್ ಸಖಾಫಿ ದುವಾ ನೆರವೇರಿಸಿದರು.

ಉಚ್ಚಿಲ ದಸರಾ - 2024 ಆಮಂತ್ರಣ ಪತ್ರಿಕೆ ಬಿಡುಗಡೆ

Thumbnail
Posted On: 27 Aug 2024, 12:54 PM

ಉಚ್ಚಿಲ : ದ.ಕ ಮೊಗವೀರ ಮಹಾಜನ ಸಂಘ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ "ಉಚ್ಚಿಲ ದಸರಾ -2024" ರ ಆಮಂತ್ರಣ ಪತ್ರಿಕೆಯನ್ನು ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಬಿಡುಗಡೆಗೊಳಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ.ರಾಘವೇಂದ್ರ ಉಪಾಧ್ಯಾಯರವರು ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ನಾಡೋಜ ಡಾ.ಜಿ.ಶಂಕರ್ ಮಾತನಾಡಿ, ಈ ಬಾರಿ ಅದ್ದೂರಿಯಾಗಿ ಉಚ್ಚಿಲ ದಸರಾ -2024 ನ್ನು ಆಚರಿಸಲಾಗುವುದು. ಉಚ್ಚಿಲ ದಸರ ಅಕ್ಟೋಬರ್ 3 ರಿಂದ ಅಕ್ಟೋಬರ್ 12ರವರೆಗೆ ನಡೆಯಲಿದ್ದು, ನೃತ್ಯ ವೈವಿಧ್ಯ ದೇಹದಾಢ್ಯಸ್ಪರ್ಧೆ, ಹೆಣ್ಣು ಮಕ್ಕಳ ಹುಲಿ ಕುಣಿತ ಸ್ಪರ್ಧೆ, ಸಾಮೂಹಿಕ ದಾಂಡಿಯ ನೃತ್ಯ ಇತ್ಯಾದಿ ವಿಶೇಷಗಳು ಇರಲಿವೆ. ಸರ್ವರು ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಕಾಪು ನಾಲ್ಕುಪಟ್ಣ ಮೊಗವೀರ ಮಹಾ ಸಭಾದ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ಆಡಳಿತ ಮಂಡಳಿಯ ಸದಸ್ಯರು, ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಮೊದಲಾದವರು ಉಪಸ್ಥಿತರಿದ್ದರು.

ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಂತಾವರ ಕುಲಾಲ ಸಂಘಟನೆಯಿಂದ ಧನಸಹಾಯ

Thumbnail
Posted On: 27 Aug 2024, 09:59 AM

ಕಾಪು : ಪುಣೆಯಲ್ಲಿ ವಾಸವಿರುವ ಕಾರ್ಕಳ ತಾಲೂಕಿನ ಬೇಲಾಡಿಯ ಬಾಬು‌ ಮೂಲ್ಯರ ಸಹೋದರಿ ಸುಮಲತಾ ಮೂಲ್ಯ ತೀವ್ರ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಪುಣೆಯ ಸಹ್ಯಾದ್ರಿ ಆಸ್ಪತ್ರೆಯಲ್ಲಿ ತಿಂಗಳುಗಳ ಕಾಲ ಜೀವನ್ಮರಣ ಸ್ಥಿತಿಯಲ್ಲಿ ನರಳಿ ಸಾಲ- ಸೋಲ ಮಾಡಿ ಲಕ್ಷಗಟ್ಟಲೆ ಹಣವನ್ನು ಆಸ್ಪತ್ರೆಗೆ ಕಟ್ಟಬೇಕಾಗಿ ಬಂತು. ಕಡುಬಡತನದಿಂದ ದಿನಗೂಲಿ ಮಾಡಿ ಜೀವನ ನೆಡೆಸುತ್ತಿದ್ದ ಕಷ್ಟದ ಬದುಕು ಸುಮಲತಾರದ್ದು. ಕೈ ಹಿಡಿದ ಗಂಡ ಅಗಲಿ ವರ್ಷ ಹಲವಾಗಿದೆ. ಒಬ್ಬಳು ಮಗಳ ಜೊತೆ ಬದುಕು ಸವೆಸುತ್ತಿದ್ದ ಅವರಿಗೆ ಡೆಂಗ್ಯೂ ವಕ್ಕರಿಸಿ ಚಿತ್ರ ಹಿಂಸೆ ನೀಡಿತು. ಈ ಸಂದರ್ಭ ಅವರ ನೆರವಿಗೆ ಧಾವಿಸಿ ಬಂದದ್ದು ಸಜ್ಜನ ದಾನಿಗಳು. ಕಾಪು ಕುಲಾಲ ಯುವ ವೇದಿಕೆ ಮತ್ತು ಕಾಂತಾವರ ಕುಲಾಲ ಸಂಘಟನೆಯ ಸಹಭಾಗಿತ್ವದಲ್ಲಿ ಒಟ್ಟಾದ ರೂ.35,200 ಹಣವನ್ನು ಅವರ ಮಡಿಲಿಗೆ ಹಾಕಿ ನೆರವಿನ ಹಾರೈಕೆಯನ್ನು ಅವರಿಗೆ ನೀಡಲಾಯ್ತು. ಈ ಸಂದರ್ಭ ಕುಲಾಲ ಸುಧಾರಕ ಸಂಘ ಪುಣೆ ಇದರ ಅಧ್ಯಕ್ಷರಾದ ದೊಡ್ಡಣ್ಣ ಸಿ ಮೂಲ್ಯ, ಕಾಪು ಕುಲಾಲ ಯುವವೇದಿಕೆಯ ಉದಯ ಕುಲಾಲ್ ಕಳತ್ತೂರು, ಕಾಂತಾವರ ಕುಲಾಲ ಸಂಘಟನೆಯ ಸಂತೋಷ್ ಕುಲಾಲ್ ಬೇಲಾಡಿ, ಪುಣೆ ಪಿಂಪ್ರಿ ಚಿಂಚಿವಾಡ್ ಕುಲಾಲ ಸಂಘಟನೆಯ (PCMC(R))ಸದಸ್ಯ ಉಮೇಶ್ ಮೂಲ್ಯ ಆಕ್ರೋಡಿ ಉಪಸ್ಥಿತರಿದ್ದರು. ಈ ಮಾತೃಹೃದಯಿ ನೊಂದಜೀವಕ್ಕೆ ಮುಂದಕ್ಕೆ ನೆರವಿನ ಧಾರೆ ಹರಿಸುವವರು ಸುಮಲತಾ ಕುಲಾಲ್ ಅವರ ಬ್ಯಾಂಕ್ ಖಾತೆಗೆ ಅಥವಾ ಗೂಗಲ್ ಪೇ ನಂಬರ್ ಗೆ ಹಣ ವರ್ಗಾವಣೆ ಮಾಡಬಹುದು. BANK DETAILS: BANK NAME : JANATHA SAHAKARI BANK BHAVANI PETH NAME :SUMALATHA YOGISH A/C NUMBER : 003220100021915 IFSC CODE :JSBP0000003 GPAY NUMBER, CONTACT NUMBER :7709407409

ಶ್ರೀ ಕೃಷ್ಣ ‌ಜನ್ಮಾಷ್ಟಮಿ : ರವಿ ಕಟಪಾಡಿ ತಂಡದಿಂದ ಈ ಬಾರಿ ಅಷ್ಟಮಿಗೆ ಅವತಾರ್ 2 ವೇಷ

Thumbnail
Posted On: 27 Aug 2024, 07:39 AM

ಕಟಪಾಡಿ : ಶ್ರೀ ಕೃಷ್ಣ ‌ಜನ್ಮಾಷ್ಟಮಿ ಊರೆಲ್ಲಾ ಸಂಭ್ರಮದಿಂದಿರಲು‌ ಕಟಪಾಡಿಯ ರವಿಯವರು ಈ ಬಾರಿಯೂ ವೇಷ ಹಾಕಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳ ಚಿಕಿತ್ಸೆಗೆ ತನ್ನಿಂದಾದ ಸಹಾಯದ ಬೆಂಬಲ ನೀಡಲಿದ್ದಾರೆ. ಇದಕ್ಕಾಗಿ ಅವರು ಈ ಬಾರಿ ಆಯ್ಕೆ ಮಾಡಿದ ವೇಷ ಅವತಾರ್ 2. ಇವರೊಂದಿಗೆ‌ ಆಶಿಕ್ ಎಂಬ ಯುವಕ ವೇಷ ಧರಿಸಿದ್ದು, ವಿಶೇಷವಾಗಿದೆ. ರವಿ ಕಟಪಾಡಿ ಈ ಬಾರಿ ಶಾಲಾ ಮಕ್ಕಳಿಗೆ ಮನರಂಜನೆ ನೀಡುವ ಇಂಗಿತ ವ್ಯಕ್ತಪಡಿಸಿದ್ದು, ಸೋಮವಾರ ಕಟಪಾಡಿ, ಶಂಕರಪುರ, ಉದ್ಯಾವರ ಶಾಲೆಗಳಿಗೆ ಭೇಟಿ ನೀಡಿ ಮಂಗಳವಾರ ಉಡುಪಿಯಾದ್ಯಂತ ಸಂಚರಿಸಿ ಹಣ ಸಂಗ್ರಹಿಸಲು ತಂಡದೊಂದಿಗೆ ತೆರಳಿದರು. ಈ ಬಾರಿ ಮೂರು ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ ಮಾಡಲಿದ್ದು, ಇದುವರೆಗೆ 9 ವರ್ಷದಲ್ಲಿ 130 ಮಕ್ಕಳಿಗೆ 1ಕೋಟಿ 28ಲಕ್ಷ ರೂ.ವೈದ್ಯಕೀಯ ವೆಚ್ಚಸಹಾಯ ಹಸ್ತ ನೀಡಿ ವೆಚ್ಚ ಭರಿಸಿದಾಗಿ ಹೇಳಿದರು. ದಿನೇಶ್ ಮಟ್ಟುರವರು ಇವರ ಅವತಾರ್‌ಗೆ ಬಣ್ಣ ಬಳಿದಿದ್ದು ಮನಮೋಹಕ ವೇಷ ಜನ ಮನ ಸೆಳೆಯುತ್ತಿದೆ.