Updated News From Kaup
ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ
Posted On: 07 Sep 2024, 02:27 PM
ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಮನೆಗೆ ಬೇಕಾಗುವ ಎಲ್ಲಾ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯಲಿದೆ. ಮನೆ ನಿರ್ಮಾಣಕ್ಕೆ ಹಾಗೂ ಕಮರ್ಷಿಯಲ್ ಕಟ್ಟಡಕ್ಕೆ ಬೇಕಾಗುವ ಎಲ್ಲಾ ವಸ್ತುಗಳು ಕ್ಲಪ್ತ ಸಮಯದಲ್ಲಿ ಜನರಿಗೆ ಸಿಗಬೇಕೆಂಬ ಉದ್ದೇಶದಿಂದ ಶ್ರೀ ದುರ್ಗಾ ಹಾರ್ಡ್ ವೇರ್ ಸೇವೆಗೆ ಲಭ್ಯವಿದೆ. ತಲ್ಲೂರು, ಹಟ್ಟಿ ಅಂಗಡಿ, ಉಪ್ಪಿನ ಕುದ್ರು, ಹೆಮ್ಮಾಡಿ, ಜಾಲಾಡಿ ಭಾಗದವರಿಗೆ ಮನೆ, ಹಾಗೂ ಕಮರ್ಷಿಯಲ್ ಕಟ್ಟಡ ನಿರ್ಮಾಣ ಮಾಡುವವರಿಗೆ ನಿಮ್ಮ ಹತ್ತಿರದ ತಲ್ಲೂರು ಶ್ರೀ ದುರ್ಗಾ ಹಾರ್ಡ್ ವೇರ್ ಒಮ್ಮೆ ಭೇಟಿ ನೀಡಿ. ಗ್ರಾಮೀಣ ಭಾಗದ ಜನರ ಜೀವನದ ಶೈಲಿಯ ಮನೆ ನಿರ್ಮಾಣದ ಎಲ್ಲಾ ವಸ್ತುಗಳು ರಿಯಾಯಿತಿ ದರದಲ್ಲಿ ದೊರೆಯುತ್ತದೆ.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ : ಗಣೇಶ ಮೂರ್ತಿ ಪ್ರತಿಷ್ಠೆ
Posted On: 07 Sep 2024, 12:25 PM
ಉಚ್ಚಿಲ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉಚ್ಚಿಲ ಇದರ ಆಯೋಜನೆಯಲ್ಲಿ 37ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಮೂರ್ತಿ ಪ್ರತಿಷ್ಠೆಯು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬಳಿಯ ಶ್ರೀಮತಿ ಶಾಲಿನಿ ಡಾ. ಜಿ ಶಂಕರ್ ತೆರೆದ ಸಭಾಂಗಣದ ಶ್ರೀ ಲಕ್ಷ್ಮಿ ಮಂಟಪದಲ್ಲಿ ನೆರವೇರಿತು. ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ. ಶುಕ್ರವಾರ ಸಂಜೆ ಮೃಣ್ಮಯ ಗಣೇಶನ ಮೂರ್ತಿಯನ್ನು ಮಲ್ಪೆಯಿಂದ ತಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಇರಿಸಲಾಗಿತ್ತು. ಶನಿವಾರ ಬೆಳಿಗ್ಗೆ ವಿಗ್ರಹ ಮೆರವಣಿಗೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ಶುದ್ಧೀಕರಣ, ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ, ಗಣ ಯಾಗ, ಮಹಾಪೂಜೆ ನೆರವೇರಿತು. ಪೂಜಾವಿಧಿ ವಿಧಾನಗಳನ್ನು ಮಹಾಲಕ್ಷ್ಮೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯ ನೆರವೇರಿಸಿದರು. ಇಂದಿನಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ. ಈ ಸಂದರ್ಭ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ, ಉಪಾಧ್ಯಕ್ಷ ಕೃಷ್ಣ ಕುಮಾರ್ ಪೊಲ್ಯ, ಕಾರ್ಯದರ್ಶಿ ರವಿಕಿರಣ್ ಉಚ್ಚಿಲ, ಜೊತೆ ಕಾರ್ಯದರ್ಶಿ ವಿನೋದ್ ಸುವರ್ಣ, ಕೋಶಾಧಿಕಾರಿ ವೇ.ಮೂ. ವಿಷ್ಣುಮೂರ್ತಿ ಉಪಾಧ್ಯಾಯ, ಮನೋಜ್ ಶೆಟ್ಟಿ ಪೊಲ್ಯ, ಮಹೇಶ್ ಉಚ್ಚಿಲ, ಅಶೋಕ್ ಆರ್. ಕರ್ಕೇರಾ, ಅಶೋಕ್ ಆಚಾರ್ಯ, ವಿಜಯ ಆಚಾರ್ಯ ಉಚ್ಚಿಲ, ಸುನಿಲ್ ಶೆಟ್ಟಿ, ಅಕ್ಷಯ್ ದೇಜಾಡಿ, ಗುರುರಾಜ್ ಉಚ್ಚಿಲ, ಮಹೇಶ್ ಶೆಟ್ಟಿ ಪೊಲ್ಯ, ಮಾಧವ ಆಚಾರ್ಯ ಉಚ್ಚಿಲ, ಅಕ್ಷಯ್ ಉಚ್ಚಿಲ, ಪ್ರಮೋದ್ ಆಚಾರ್ಯ, ವಿಶು ಉಚ್ಚಿಲ, ಅನಿಲ್ ಉಚ್ಚಿಲ, ರಾಜೇಶ್ ಶೆಟ್ಟಿ ಎರ್ಮಾಳು, ಆಯುಷ್ ಪೂಜಾರಿ, ಅಶಿತ್ ಪೊಲ್ಯ, ಕಿರಣ್, ಮನ್ವೀತ್, ಹರ್ಷಿತ್ ಆಚಾರ್ಯ, ಸೃಜನ್ ಪೂಜಾರಿ, ಹರ್ಷಿತ್ ಪೂಜಾರಿ, ಸಂಪತ್ ಪೊಲ್ಯ, ಪ್ರಥಮ್ ಉಚ್ಚಿಲ, ಸಾಗರ್ ಪೊಲ್ಯ ಉಪಸ್ಥಿತರಿದ್ದರು.
ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಶಿಕ್ಷಕರಿಗೆ ಸನ್ಮಾನ
Posted On: 06 Sep 2024, 02:03 PM
ಉಚ್ಚಿಲ : ಶಿಕ್ಷಕರ ದಿನಾಚರಣೆ ಅಂಗವಾಗಿ ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಉಚ್ಚಿಲ ಸರಸ್ವತಿ ಮಂದಿರ ಶಾಲೆಯ 6 ಶಿಕ್ಷಕರನ್ನು ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 3ನೇ ರ್ಯಾಂಕ್ ಪಡೆದ ಓರ್ವ ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ, ರಾಜ್ಯದಲ್ಲಿ 3ನೇ ರ್ಯಾಂಕ್ ಪಡೆದ ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ವಿದ್ಯಾರ್ಥಿಯಾಗಿದ್ದ ಸಮಥ್೯ ಜೋಶಿ, ಶಾಲೆಯ ಮುಖ್ಯ ಶಿಕ್ಷಕ ಬಾಬುರಾಯ ಆಚಾರ್ಯ, ಶಿಕ್ಷಕರಾದ ಸದಾಶಿವ ನಾಯಕ್, ಮಮತ, ವಿಜಯಲಕ್ಷ್ಮಿ, ಜ್ಯೋತಿ, ಪ್ರಗತಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಚ್ಚಿಲ ರೋಟರಿ ಅಧ್ಯಕ್ಷರಾದ ಇಬಾದುಲ್ಲ ವಹಿಸಿದ್ದರು. ಈ ಸಂದರ್ಭ ರೋಟರಿ ಕ್ಲಬ್ ಸದಸ್ಯರಾದ ಕಾರ್ಯದರ್ಶಿ ಸತೀಶ್ ಕುಂಡಂತಾಯ, ಅಚ್ಯುತ ಶೆಣೈ, ನಜ್ಮ, ಚಂದ್ರಹಾಸ ಪೂಜಾರಿ, ಸತೀಶ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿಯಲ್ಲಿ ವಿದ್ಯಾರ್ಥಿಗಳ ದಾರಿ ತಪ್ಪಿಸುವ ವಾತಾವರಣ : ಜಿಲ್ಲಾಧಿಕಾರಿಗೆ ಮನವಿ
Posted On: 06 Sep 2024, 01:25 PM
ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ದಾರಿ ತಪ್ಪಿಸುವ ವಾತಾವರಣವನ್ನು ಮಂಗಳೂರು ನಗರದಲ್ಲಿ ನಿರ್ಮಾಣವಾಗುತ್ತಿದೆ ಎಂದು ಸರ್ವಕಾಲೇಜು ವಿದ್ಯಾರ್ಥಿ ಶಕ್ತಿ ಕರ್ನಾಟಕ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಚನ್ ಸಾಲಿಯಾನ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರು ಪಬ್ ಗಳಲ್ಲಿ ಗಾಂಜಾ, ಚರಸ್, ಡ್ರಗ್ಸ್ ಮುಂತಾದ ಮಾದಕ ವಸ್ತುಗಳನ್ನು ಬಳಸುವ ಬಗ್ಗೆ, ಕೆಲವು ಪ್ರಕರಣಗಳಲ್ಲಿ ಬಂಧಿತ ಆರೋಪಿತರ ಹೇಳಿಕೆಗಳಿಂದ ತಿಳಿದುಬಂದಿದೆ. ರಾತ್ರಿ ಸಮಯದಲ್ಲಿ ನಿಯಮ ಮೀರಿ ಮ್ಯೂಸಿಕ್ ಡಿಜೆ ಅಳವಡಿಸಿಕೊಂಡು ಕಾರ್ಯಚರಿಸುತ್ತಿರುವ ಪಬ್ಗಳ ಸಂಖ್ಯೆ ಗಣನೀಯ ಪಬ್ಗಳ ವಿರುದ್ಧ ಧ್ವನಿ ಎತ್ತಿದರೆ ಅಂತ ಸಂಘಟನೆಗಳಿಗೆ ಬೆದರಿಕೆ ಕರೆ ಕೂಡ ಬರುತ್ತಿರುವುದರಿಂದ ಯಾರೂ ಕೂಡ ಈ ಬಗ್ಗೆ ದೂರು ನೀಡಲು ಮುಂದಾಗುತ್ತಿಲ್ಲ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ರಾತ್ರಿಯಿಂದ ಬೆಳಗಿನ ಜಾವದವರೆಗೂ ಕಾರ್ಯಚರಿಸುತ್ತಿರುವ ಪಬ್ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಿಲ್ಲ. ಜೋಡಿಗಳಿಗೆ ಮಾತ್ರ ಪ್ರವೇಶ ಎಂಬ ನಿಯಮ ರೂಪಿಸಿ ಪಬ್ ಗೆ ಪ್ರವೇಶಿಸುವರು ಆನೈತಿಕ ಚಟುವಟಿಕೆ ನಡೆಸಲು ಪರೋಕ್ಷವಾಗಿ ಸಹಕಾರಿಯಾಗಿದ್ದು ಮಂಗಳೂರು ನಗರ, ಪರಿಸರದಲ್ಲಿ ವಸತಿ ಗೃಹಗಳಲ್ಲಿ, ಪ್ರತ್ಯೇಕ ಇರುವ ಮನೆಗಳಲ್ಲಿ, ಪ್ಲಾಟ್ಗಳಲ್ಲಿ, ಕೆಲವು ಜನಪ್ರತಿನಿಧಿಗಳ ಬೆಂಬಲದಿಂದ ಆಮಾಯಕ ವಿದ್ಯಾರ್ಥಿನಿಯರನ್ನು, ಯುವತಿಯರನ್ನು, ಮಹಿಳೆಯರನ್ನು ಬಳಸಿಕೊಂಡು ಹೈಟೆಕ್ ಅನೈತಿಕ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದು ಮಾದಕ ವಸ್ತುಗಳ ಮಾರಾಟ ಚಾಲ ಬಹಿರಂಗವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಇಂತಹ ಅಕ್ರಮ ಚಟುವಟಿಕೆ ಮೇಲೆ ಕಠಿಣ ಕ್ರಮ ಕೈಗೊಂಡು, ಸುಮೊಟೋ ಕೇಸ್ ದಾಖಲಿಸಬೇಕು. ಎಲ್ಲಾ ವಿದ್ಯಾರ್ಥಿಗಳು ರಾತ್ರಿ 11 ಗಂಟೆ ಒಳಗೆ ತಮ್ಮ ತಮ್ಮ ಹಾಸ್ಟೆಲ್ ಪಿ ಜಿ ಸೇರಿಕೊಳ್ಳುವಂತೆ ನಿಯಮ ರೂಪಿಸುವ ಮೂಲಕ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಬಹುದಾಗಿದೆ. ಅದೇ ರೀತಿ ಮಂಗಳೂರು ನಗರದಲ್ಲಿ ನಡೆಯುತ್ತಿರುವ ಈ ಅಕ್ರಮ ಚಟುವಟಿಕೆ ವಿರುದ್ಧ ತಾವು, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಉಡುಪಿ : ಅಖಿಲ ಭಾರತ ದೈವಾರಾಧಕರ ಒಕ್ಕೂಟದಿಂದ ಉಡುಪಿ ನಗರ ಸಭೆಯ ನೂತನ ಅಧ್ಯಕ್ಷರಿಗೆ ಅಭಿನಂದನೆ
Posted On: 06 Sep 2024, 07:30 AM
ಉಡುಪಿ : ಅಖಿಲ ಭಾರತ ದೈವಾರಾಧಕರ ಒಕ್ಕೂಟ ಉಡುಪಿ (ರಿ.) ಒಕ್ಕೂಟದ ಪರವಾಗಿ ಉಡುಪಿ ನಗರ ಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಭಾಕರ್ ಪೂಜಾರಿ ಅವರನ್ನು ಒಕ್ಕೂಟದ ಪರವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ವಿನೋದ್ ಶೆಟ್ಟಿ, ಗೌರವಾಧ್ಯಕ್ಷರಾದ ಗಣೇಶ್ ದೇವಾಡಿಗ, ಸಂಘಟನೆ ಕಾರ್ಯದರ್ಶಿ ರಮೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಪೂಜಾರಿ, ಕೋಶಾಧಿಕಾರಿ ಸಮಿತ್ ಶೆಟ್ಟಿ, ಉಡುಪಿ ಜಿಲ್ಲಾ ಸಂಘಟನೆ ಕಾರ್ಯದರ್ಶಿ ಚರಣ್ ರಾಜ್ ಪೂಜಾರಿ, ಕಾರ್ಯಕಾರಿ ಸಮಿತಿ ಸದಸ್ಯ ಪ್ರಶಾಂತ್ ಶೆಟ್ಟಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ಯಾಮ, ಒಕ್ಕೂಟದ ಸಂಘಟನೆ ಕಾರ್ಯದರ್ಶಿ ಮೋಹನ್ ಶೆಟ್ಟಿ, ಸದಸ್ಯರು ಉಪಸ್ಥಿತಿಯಿದ್ದರು.
ಸೆಪ್ಟೆಂಬರ್ 7ರಿಂದ 10ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ ಇದರ 37ನೇ ವರ್ಷದ ಗಣೇಶೋತ್ಸವ
Posted On: 06 Sep 2024, 07:21 AM
ಉಚ್ಚಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉಚ್ಚಿಲ ಇದರ ಆಯೋಜನೆಯಲ್ಲಿ37ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆಪ್ಟೆಂಬರ್ ೦7ರ ಶನಿವಾರದಿಂದ ಸೆಪ್ಟೆಂಬರ್ 10 ಮಂಗಳವಾರ ತನಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬಳಿಯ ಶ್ರೀಮತಿ ಶಾಲಿನಿ ಡಾ. ಜಿ ಶಂಕರ್ ತೆರೆದ ಸಭಾಂಗಣದ ಶ್ರೀ ಲಕ್ಷ್ಮಿ ಮಂಟಪದಲ್ಲಿ ಜರಗಲಿದೆ. ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವವು 37ನೇ ವರ್ಷಾಚರಣೆ ಮಾಡುತ್ತಿದ್ದು, ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸೆಪ್ಟೆಂಬರ್ 7, ಶನಿವಾರ ಬೆಳಿಗ್ಗೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಿಂದ ವಿಗ್ರಹ ಮೆರವಣಿಗೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ಶುದ್ಧೀಕರಣ, ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ, ಗಣ ಯಾಗ, ಮಹಾಪೂಜೆ ನೆರವೇರಲಿದೆ. ಸಂಜೆ, ಶಾಲಾ ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ, ಮ್ಯಾಜಿಕ್ ಶೋ, ನೃತ್ಯ ವಿದುಷಿ, ಮಂಗಳ ಕಿಶೋರ್ ದೇವಾಡಿಗ ನೇತೃತ್ವದ ನಟೇಶ ನೃತ್ಯ ನಿಕೇತನ ಉಚ್ಚಿಲ ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ, ನೃತ್ಯ ವೈಭವ ನಡೆಯಲಿದೆ. ಬಳಿಕ ಉಚ್ಚಿಲ ರಾತ್ರಿ ಪೂಜೆ, ರಂಗ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸೆಪ್ಟೆಂಬರ್ 8, ಭಾನುವಾರ ಗೋಪಿಕಾ ಮತ್ತು ಸತೀಶ್ ಮಯ್ಯ, ದುಬೈ ಇವರಿಂದ ಗಣಪತಿ ಅಥರ್ವ ಶೀರ್ಷ ಯಾಗ ನೆರವೇರಲಿದೆ. ಸಂಜೆ ಶಾಲಾ ಮಕ್ಕಳಿಗೆ ನೃತ್ಯ ಸ್ಪರ್ಧೆ ನಡೆಯಲಿದೆ. ಬಳಿಕ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಕುಣಿತ ಭಜನಾ ತಂಡದಿಂದ ಕುಣಿತ ಭಜನೆ, ರಾತ್ರಿ ಪೂಜೆ, ರಂಗ ಪೂಜೆ, ಪ್ರಸಾದ ವಿತರಣೆ ನೆರವೇರಿಲಿದೆ. ರಾತ್ರಿ 9 ಗಂಟೆಗೆ ಯಶಸ್ವಿ ಕಲಾವಿದೆರ್ ಮಂಜೇಶ್ವರ ಇವರಿಂದ "ಅಬ್ಬರ" ತುಳು ಹಾಸ್ಯಮಯ ನಾಟಕ ನಡೆಯಲಿದೆ. ಸೆಪ್ಟೆಂಬರ್ 9, ಸೋಮವಾರ, ಶ್ರೀಮತಿ ಮತ್ತು ಶ್ರೀಪತಿ ಭಟ್, ಶಾಂತಾ ಎಲೆಕ್ಟ್ರಿಕಲ್ಸ್ ಪೈ. ಲಿಮಿಟೆಡ್ ಉಡುಪಿ ಇವರಿಂದ 108 ತೆಂಗಿನಕಾಯಿಯ ಗಣ ಹೋಮ ನೆರವೇರಲಿದೆ. ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ. ಸಂಜೆ ಬಹುಮಾನ ವಿತರಣಾ ಕಾರ್ಯಕ್ರಮ, ರಾತ್ರಿ ಪೂಜೆ, ರಂಗಪೂಜೆ, ಪ್ರಸಾದ ವಿತರಣೆಯ ಬಳಿಕ ಪ್ರಶಸ್ತಿ ವಿಜೇತ ತೆಲಿಕೆದ ಕಲಾವಿದೆರ್ ಕೊಯಿಲ ಇವರಿಂದ "ಗೆಂದಗಿಡಿ" ತುಳು ನಾಟಕ ಪ್ರಸಾರಗೊಳ್ಳಲಿದೆ. ಸೆಪ್ಟೆಂಬರ್ 10, ಮಂಗಳವಾರ ಗಣ ಯಾಗ, ವಿಶೇಷ ಅಪ್ಪದ ಸೇವೆ, ರಂಗ ಪೂಜೆ, ವಿಸರ್ಜನಾ ಪೂಜೆ, ಪ್ರಸಾದ ವಿತರಣೆ ಸಂಪನ್ನಗೊಳ್ಳಲಿದೆ. ಸಂಜೆ 4 ಗಂಟೆಗೆ ಶ್ರೀದೇವರ ಮೆರವಣಿಗೆಯು ಸೆಕ್ಸೋಫೋನ್, ಚೆಂಡೆ, ವಾದ್ಯ, ಕುಣಿತ ಭಜನೆ, ಬ್ಯಾಂಡ್, ವಿವಿಧ ವೇಷ ಭೂಷಣ, ಕೀಲು ಕುದುರೆ, ಡಿ.ಜೆ ಸೌಂಡ್ಸ್ ಹಾಗೂ ಸ್ತಬ್ಧ ಚಿತ್ರಗಳನ್ನು ಒಳಗೊಂಡ ಟ್ಯಾಬ್ಲೋಗಳ ಶೋಭಾ ಯಾತ್ರೆಯೊಂದಿಗೆ ಎರ್ಮಾಳು ಶ್ರೀ ಜನಾರ್ಧನ ದೇಗುಲದವರೆಗೆ ಸಾಗಿ, ಅಲ್ಲಿಂದ ಮೂಳೂರು ಅಟೋ ನಿಲ್ದಾಣದವರೆಗೆ ಬಂದು ಉಚ್ಚಿಲ ಬದ್ಧಿಂಜೆ ಮಠದ ಪುಷ್ಕರಣಿಯಲ್ಲಿ ಜಲ ಸ್ಥಂಭನ ಗೊಳ್ಳಲಿದೆ ಈ ಬಗ್ಗೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ
Posted On: 05 Sep 2024, 11:43 PM
ಉಚ್ಚಿಲ : ದ.ಕ. ಮೊಗವೀರ ಮಹಾಸಭಾದ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್ ಅನುದಾನದಿಂದ ಸುಮಾರು 5,20,750 ರೂ. ಮೊತ್ತದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಗುರುವಾರ ಸಂಜೆ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು. ಮೊಗವೀರ ಮುಂದಾಳು, ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರದ ರುವಾರಿ ನಾಡೋಜ ಡಾ. ಜಿ ಶಂಕರ್ರವರಿಗೆ ಕರ್ನಾಟಕ ಬ್ಯಾಂಕಿನ ಉಡುಪಿ ರೀಜನಲ್ ಹೆಡ್ ವಾದಿರಾಜ ಭಟ್ರವರು ವಾಹನದ ಕೀಲಿಕೈಯನ್ನು ಹಸ್ತಾಂತರಿಸಿದರು. ಮೊದಲಿಗೆ ದೇವಳದ ಅರ್ಚಕ ವೇದಮೂರ್ತಿ ವಿಷ್ಣುಮೂರ್ತಿ ಭಟ್ರವರು ವಾಹನದ ಪೂಜಾ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭ ನಾಡೋಜ ಡಾ. ಜಿ ಶಂಕರ್ ಮಾತನಾಡಿ, ಉಚ್ಚಿಲ ದಸರಾ ಸಂದರ್ಭ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಈ ವಾಹನವು ಉಪಯೋಗವಾಗಲಿದೆ. ಕರ್ನಾಟಕ ಬ್ಯಾಂಕಿನ ಸಂಬಂಧವು ಮಹಾಲಕ್ಷ್ಮೀ ದೇವಸ್ಥಾನದೊಂದಿಗೆ ಉತ್ತಮವಾಗಿದ್ದು, ಇಂತಹ ಕಾರ್ಯಗಳಿಂದ ಸಂಬಂಧ ಇನ್ನಷ್ಟು ಹೆಚ್ಚಾಗಲಿ ಎಂದರು. ಕರ್ನಾಟಕ ಬ್ಯಾಂಕಿನ ವಾದಿರಾಜ ಭಟ್ ಮಾತನಾಡಿ, ನಮ್ಮ ಬ್ಯಾಂಕಿನ ಸಿಎಸ್ಆರ್ ಯೋಜನೆಯಡಿ ನಾವು 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಹಸ್ತಾಂತರಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಕಾರ ನೀಡಲಿದ್ದೇವೆ ಎಂದರು. ಈ ಸಂದರ್ಭ ನಾಡೋಜ ಡಾ. ಜಿ. ಶಂಕರ್, ಗುಂಡು ಬಿ. ಅಮೀನ್, ವಿನಯ್ ಕರ್ಕೇರ, ಗಿರಿಧರ ಸುವರ್ಣ, ಮೋಹನ್ ಬೇಂಗ್ರೆ, ಶರಣ್ ಮಟ್ಟು, ಸುಧಾಕರ ಕುಂದರ್, ಸುಭಾಶ್ಚಂದ್ರ ಕಾಂಚನ್, ನಾರಾಯಣ ಕರ್ಕೇರ, ಸುಜಿತ್ ಸಾಲ್ಯಾನ್ ಮೂಲ್ಕಿ, ಪುಂಡಲೀಕ ಹೊಸಬೆಟ್ಟು, ರವೀಂದ್ರ ಶ್ರೀಯಾನ್, ನಾರಾಯಣ ಕುಂದರ್ ಕಲ್ಮಾಡಿ, ಮೋಹನ್ ಬಂಗೇರ ಕಾಪು, ವಿಠಲ ಕರ್ಕೇರಾ, ಸುಧಾಕರ ಸುವರ್ಣ ಉಚ್ಚಿಲ, ಸುಗುಣಾ ಕರ್ಕೇರ, ಕರ್ನಾಟಕ ಬ್ಯಾಂಕಿನ ಮಹಾಪ್ರಬಂಧಕ ಮನೋಜ್ ಕೋಟ್ಯಾನ್, ಅಂಬಾಗಿಲು ಶಾಖಾ ಪ್ರಬಂಧಕ ಶಶಿಕಾಂತ್ ಬಂಗೇರ ದೇವಳದ ಮನೇಜರ್ ಸತೀಷ್ ಅಮೀನ್ ಪಡುಕೆರೆ ಮತ್ತಿತರರು ಉಪಸ್ಥಿತರಿದ್ದರು.
ಸೆಪ್ಟೆಂಬರ್ 9 : ಪಡುಬಿದ್ರಿ ಸಿಎ ಸೊಸೈಟಿ - ನೂತನ ಕಟ್ಟಡ ಸಹಕಾರ ಸಂಕೀರ್ಣ, ನವೀಕೃತ ಹವಾನಿಯಂತ್ರಿತ ಪಲಿಮಾರು ಶಾಖೆಯ ಉದ್ಘಾಟನೆ
Posted On: 05 Sep 2024, 11:29 PM
ಪಡುಬಿದ್ರಿ : 67 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಎ ವರ್ಗದ ಬ್ಯಾಂಕ್ ಆಗಿ ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ಇದರ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯು ಸೆಪ್ಟೆಂಬರ್ 9, ಸೋಮವಾರ ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸೊಸೈಟಿಯ ಪ್ರಧಾನ ಕಚೇರಿ ಸಹಕಾರ ಸಂಗಮದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ಇವರು ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ನೂತನ ಶಾಖಾ ಕಟ್ಟಡವು ವಿಶಾಲವಾದ ನವೀಕೃತ ಹವಾನಿಯಂತ್ರಿತ ಶಾಖೆಯೊಂದಿಗೆ ವಿಶಾಲವಾದ ಭದ್ರತಾ ಕೊಠಡಿ ಗ್ರಾಹಕರಿಗೆ ಸೇಫ್ ಲಾಕರ್ ಸೌಲಭ್ಯವನ್ನು ಹೊಂದಿದೆ. ಶಾಖೆಯೊಂದಿಗೆ ಅಂಗಡಿ ಕೋಣೆಗಳನ್ನು ಹೊಂದಿದ್ದು ಈ ಅಂಗಡಿ ಕೋಣೆಗಳಲ್ಲಿ ಕೃಷಿ ಉಪಕರಣ ಮಾರಾಟ ವಿಭಾಗ, ಇ -ಅಶ್ವ ಇಲೆಕ್ಟ್ರಿಕ್ ಸ್ಕೂಟರ್ ಮಾರಾಟ ವಿಭಾಗವನ್ನು ನೂತನವಾಗಿ ಪ್ರಾರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಡಾ. ಎಮ್.ಎನ್ ರಾಜೇಂದ್ರ ಕುಮಾರ್, ಕೋಟಾ ಶ್ರೀನಿವಾಸ ಪೂಜಾರಿ, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ಭಾರತ ಕಬ್ಬಡಿ ತಂಡದ ಮಾಜಿ ನಾಯಕರಾದ ಶೇಖರ ಶೆಟ್ಟಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಯುವ ಸಮಾಜ ಸೇವಕರಾದ ಶರಣ್ ಮಟ್ಟು ಇವರಿಗೆ ಅಭಿನಂದನೆಯು ನಡೆಯಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸೊಸೈಟಿಯ ನಿರ್ದೇಶಕರುಗಳಾದ ರಸೂಲ್ ವೈ.ಜಿ, ಗಿರೀಶ್ ಪಲಿಮಾರು, ಮಾಧವ ಆಚಾರ್ಯ, ರಾಜಾರಾಮ್ ರಾವ್, ಸ್ಟ್ಯಾನಿ ಕ್ವಾಡ್ರಸ್, ಕುಸುಮ ಪುತ್ರನ್, ಕಾಂಚನಾ, ಸುಚರಿತ ಎಲ್ ಅಮೀನ್, ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್ ಉಪಸ್ಥಿತರಿದ್ದರು.
ಕಲ್ಪನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ
Posted On: 04 Sep 2024, 10:35 PM
ಕಾಪು : ಕಲ್ಪನೆ ಕನ್ನಡ ಆಲ್ಬಂ ಸಾಂಗ್ magical star manglore ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ನಟ ಸಂದೀಪ್ ಶೆಟ್ಟಿ ಮಾಣಿಬೆಟ್ಟು ಆಲ್ಬಂ ಸಾಂಗ್ ಬಿಡುಗಡೆ ಮಾಡಿದರು. ಈ ಹಾಡಿಗೆ ನಿರ್ದೇಶನ ಹಾಗೂ ಸಾಹಿತ್ಯ ಆರ್. ಕೆ ಮುಲ್ಕಿ, ಗಾಯನ , ನಟನೆ ಮತ್ತು ಪ್ರೊಡ್ಯೂಸಿಂಗ್ ಗಣೇಶ್ ಆಚಾರ್ಯ, ಎಡಿಟಿಂಗ್ ಮತ್ತು ಪೋಸ್ಟರ್ ಡಿಸೈನಿಂಗ್ ಎಸ್. ಕೆ ಮುಲ್ಕಿ, ನಟನೆಯಲ್ಲಿ ಪ್ರೀತಾ ಡಿಸೋಜ ಮತ್ತು ಹಿತು ಮಂಗಳೂರು, ಡಿಓಪಿ ಸಚ್ಚು ವರು ಎಸ್ ಬಿ ಎಸ್ ಇವರು ಪ್ರಸ್ತುತ ಪಡಿಸಿರುವ ಹೊಚ್ಚ ಹೊಸ ಆಲ್ಬಮ್ ಸಾಂಗ್ ಇದಾಗಿದೆ. ಈ ಲಿಂಕ್ ಮುಖಾಂತರ ವಿಡಿಯೋ ವೀಕ್ಷಿಸಲು ಅವಕಾಶವಿದೆ.
ಅದಮಾರು ಮಠದ ಹಿರಿಯ ಸ್ವಾಮೀಜಿಗೆ ಜೈ ತುಲುನಾಡ್ ಸಂಘಟನೆಯಿಂದ ಮನವಿ
Posted On: 04 Sep 2024, 07:33 PM
ಕಾಪು : ಜೈ ತುಲುನಾಡ್ (ರಿ.) ಸಂಘಟನೆಯ ವತಿಯಿಂದ ಉಡುಪಿಯ ಅದಮಾರು ಮಠದ ಸ್ವಾಮೀಜಿಗೆ ಅದಮಾರು ಮಠದ ಅಧೀನ ದೇವಸ್ಥಾನ, ಶಿಕ್ಷಣ ಸಂಸ್ಥೆ ಶಾಖಾಮಠದಲ್ಲಿ ತುಳುನಾಡಿನ ಮಣ್ಣಿನ ಭಾಷೆಯಾದ ತುಲುಲಿಪಿಯಲ್ಲಿ ನಾಮ ಫಲಕ ಅಳವಡಿಸಲು ಹಾಗೂ ಅಧೀನ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ಉಚಿತವಾಗಿ ತುಲು ಲಿಪಿಯನ್ನು ಕಲಿಸಲು ಸಹಕಾರ ಇದರ ಬಗ್ಗೆ ಮನವಿಯನ್ನು ನೀಡಲಾಯಿತು. ಜೈ ತುಲುನಾಡ್ (ರಿ.) ಸಂಘದ 10ನೇ ವರ್ಷದ ಸಂಭ್ರಮಾಚರಣೆಯ ಹೊಸ್ತಿಲಲ್ಲಿದ್ದು ಸಂಘದ 10 ವರ್ಷದ ಕಾರ್ಯವೈಖರಿಯ ಬಗ್ಗೆ ತಿಳಿಸಲಾಯಿತು. ಹಿರಿಯ ಸ್ವಾಮಿಗಳು ಯಾವುದೇ ಒಂದು ಫಲಾಪೇಕ್ಷೆ ಇಲ್ಲದೇ ತುಲುಭಾಷೆಯ,ಲಿಪಿಯ ಉಳಿವಿಗಾಗಿ ಶ್ರಮಿಸುತ್ತಿರುವ ಸಂಘಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಜೈ ತುಲು ನಾಡ್ (ರಿ.) ಇದರ ಕೇಂದ್ರ ಸಮಿತಿಯ ಜೊತೆ ಕಾರ್ಯದರ್ಶಿಯಾದ ಪ್ರಜ್ಞಾಶ್ರೀ ಎಂ. ಕೊಡವೂರ್, ಸಂಘಟನಾ ಕಾರ್ಯದರ್ಶಿಯಾದ ಸಂತೋಷ್.ಎನ್.ಎಸ್ ಕಟಪಾಡಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸಾಗರ್ ಬನ್ನಂಜೆ, ಸದಸ್ಯರಾದ ಕಿನ್ನು ಒಡಿಪು, ಸುಪ್ರಿಯಾ ಕೊಡವೂರ್, ಶಿವಪ್ರಸಾದ್ ಮಣಿಪಾಲ್, ಅಂಬಿಕಾ ಕನ್ನರ್ಪಾಡಿ, ಯೋಗಿನಿ ಕೊರಂಗ್ರಪಾಡಿ ಉಪಸ್ಥಿತರಿದ್ದರು.
