Updated News From Kaup
ಅ. 19 (ಇಂದು) : ದೇವದಾಸ್ ಶೆಟ್ಟಿಗೆ ಜಿಲ್ಲಾ ಕ.ಸಾ.ಪ. ಪುರಸ್ಕಾರ
Posted On: 19 Oct 2024, 10:39 AM
ಕಾಪು : ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ ರುವಾರಿ, ನೆಲಮೂಲ ಪಾರಂಪರಿಕ ಹಿನ್ನೆಲೆಯ ಕೊರಗ ಸಮುದಾಯದ ಶ್ರೇಯೋಭಿವೃದ್ಧಿಗೆ ತನ್ನ ಸಮಸ್ತ ಜೀವನವನ್ನೇ ಮುಡಿಪಾಗಿರಿಸಿದ ಕಾಪು ಕಲ್ಯಾ ದೇವದಾಸ್ ಶೆಟ್ಟಿ ಅವರಿಗೆ ಅ.19ರಂದು ಸಂಜೆ 4 ಗಂಟೆಗೆ ಕಲ್ಯಾದಲ್ಲಿ ನಡೆಯುವ ಉಡುಪಿ ಜಿಲ್ಲಾ ಕಸಾಪ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 27 : ಹೇರೂರು ಫ್ರೆಂಡ್ಸ್ ಕ್ಲಬ್, 92 ಹೇರೂರು - ಗೂಡುದೀಪ ಸ್ಪರ್ಧೆ
Posted On: 19 Oct 2024, 10:38 AM
ಕಾಪು : ಹೇರೂರು ಫ್ರೆಂಡ್ಸ್ ಕ್ಲಬ್, 92 ಹೇರೂರು ಇವರ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ 92 ಹೇರೂರಿನ ಹಾಗೂ ಹೇರೂರಿನ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅಕ್ಟೋಬರ್ 27, ಆದಿತ್ಯವಾರ ಸಂಜೆ 4 ಗಂಟೆಗೆ ಸಾರ್ವಜನಿಕ ವೇದಿಕೆ, 92 ಹೇರೂರು ಇಲ್ಲಿ ಗೂಡುದೀಪ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 2,500, ದ್ವಿತೀಯ ಬಹುಮಾನ ರೂ. 1,500, ತೃತೀಯ ಬಹುಮಾನ ರೂ.1,000 ನಗದು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 10: ಫಲಿಮಾರುವಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
Posted On: 18 Oct 2024, 01:22 PM
ಪಡುಬಿದ್ರಿ : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಫಲಿಮಾರು, ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.), ಉಡುಪಿ, ರಕ್ತನಿಧಿ ವಿಭಾಗ ಕೆ.ಎಂ.ಸಿ. ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 10, ಆದಿತ್ಯವಾರ ಬೆಳಿಗ್ಗೆ 9 ರಿಂದ ಅಪರಾಹ್ನ ಗಂಟೆ 2 ರ ವರೆಗೆ ಶ್ರೀ ಗಣೇಶ ಮಂಟಪ, ಫಲಿಮಾರು ಇಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜರಗಲಿದೆ. ಹೆಚ್ಚಿನ ಮಾಹಿತಿಗಾಗಿ ರಿತೇಶ್ ದೇವಾಡಿಗ 8660365719, ಹರೀಶ್ 9964553031 ರನ್ನು ಸಂಪರ್ಕಿಸಬಹುದು ಎಂದು ಸಂಘ ಸಂಸ್ಥೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
Posted On: 17 Oct 2024, 10:23 PM
ಉಡುಪಿ : ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯೋತ್ಸವವನ್ನು ಉಡುಪಿಯ ಮಥುರಾ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿತ್ತು. ಉದ್ಯಮಿ ವಿಶ್ವನಾಥ ಶೆಣೈ ಯವರು ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು. ಭಾರತ್ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡವೂರು ಮಾತನಾಡಿ ಸಂಘಟನೆಯಲ್ಲಿ ಬಲವಿದೆ. ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಸರಕಾರದ ಮಟ್ಟಕ್ಕೂ ನಮ್ಮ ಬೇಡಿಕೆಯನ್ನು ತಲುಪಿಸಲು ಸಾಧ್ಯ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಮಾತನಾಡಿ ಜಯಂತ್ಯೋತ್ಸವವನ್ನು ಆಚರಿಸುವ ಮೂಲಕ ಶ್ರೇಷ್ಠ ದಾರ್ಶನಿಕ ವಾಲ್ಮೀಕಿ ಮಹರ್ಷಿಯನ್ನು ನೆನಪಿಸುವ ಮಹತ್ ಕಾರ್ಯವನ್ನು ಮಾಡಿರುವುದು ಶ್ಲಾಘನೀಯ ಎಂದರು. ಮಹರ್ಷಿ ವಾಲ್ಮೀಕಿ ಸಂಘಟನೆಯ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮೀಜಿ ಚಿಕ್ಕಮಠ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಂಜನಿ ವಸಂತ್, ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ, ಶಾಂತಪ್ಪ ದೊರೆ, ಆನಂದ ವಾಲ್ಮೀಕಿ, ಗೋಪಾಲ ದೇವದುರ್ಗ, ಶಿವರಾಜ್ ವಾಲಿಕಾರ್, ಕನಕ, ದೇವು ದೊರೆ, ಗೋಪಾಲ ದೊರೆ, ಸಂಗನಗೌಡ ಸಾತಿಹಾಳ ಉಪಸ್ಥಿತರಿದ್ದರು. ಉಡುಪಿ ತಾಲ್ಲೂಕು ಕಸಾಪ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.
ಅ. 27 : ರಾಗ್ ರಂಗ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ವತಿಯಿಂದ ಉಭಯ ಜಿಲ್ಲಾ ಮಟ್ಟದ
Posted On: 17 Oct 2024, 08:48 PM
ಪಡುಬಿದ್ರಿ : ರಾಗ್ ರಂಗ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ಇದರ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಉಭಯ ಜಿಲ್ಲಾ ಮಟ್ಟದ "ಗೂಡುದೀಪ ಸ್ಪರ್ಧೆ" ಅಕ್ಟೋಬರ್ 27, ಆದಿತ್ಯವಾರ ಸಂಜೆ 6 ಗಂಟೆಗೆ ಬೋರ್ಡ್ ಶಾಲಾ ಮೃೆದಾನ( ಕರ್ನಾಟಕ ಪಬ್ಲಿಕ್ ಸ್ಕೂಲ್) ಪಡುಬಿದ್ರಿ ಇಲ್ಲಿ ಆಯೋಜಿಸಲಾಗಿದೆ. ಸಾಂಪ್ರದಾಯಿಕ ಗೂಡುದೀಪ ಮತ್ತು ಆಧುನಿಕ ಗೂಡುದೀಪ ಸ್ಪರ್ಧಾ ವಿಭಾಗಗಳಿದ್ದು, ನೊಂದಾವಣೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನೃತ್ಯ ವೈಭವವೂ ಜರಗಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7090460951 ಸಂಪರ್ಕಿಸಿ ಎಂದು ರಾಗ್ ರಾಂಗ್ ಕಲ್ಚರಲ್ ಕ್ಲಬ್ ಪಡುಬಿದ್ರಿ ಅಧ್ಯಕ್ಷರಾದ ವಿಶ್ವಾಸ್ ವಿ.ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧೆಯ ನಿಯಮಗಳು: ಸಾಂಪ್ರದಾಯಿಕ ಮತ್ತು ಆಧುನಿಕ ವಿಭಾಗದಲ್ಲಿ ಗೂಡುದೀಪ ಸ್ಪರ್ಧೆ ನಡೆಯಲಿದೆ. ಪ್ರತಿ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ವಿಜೇತರಿಗೆ ನಗದು, ಶ್ವಾಶತ ಫಲಕ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಸಂಜೆ 5 ಗಂಟೆಗೆ ತಮ್ಮ ಗೂಡುದೀಪದೊಂದಿಗೆ ಶಾಲಾ ಮೈದಾನದಲ್ಲಿ ಹಾಜರಿರಬೇಕು. ಎಲ್ಲ ಗೂಡುದೀಪಗಳಿಗೆ ವಿದ್ಯುದ್ದೀಪದ ವ್ಯವಸ್ಥೆ ಮಾಡಿಕೊಡಲಾಗುವುದು.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಆಯ್ಕೆ
Posted On: 17 Oct 2024, 08:16 PM
ಕಾಪು : ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರಿ.) ಕರ್ನಾಟಕ (ರುಪ್ಸ) ಇವರು ಕೊಡ ಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾಪು ತಾಲೂಕಿನ ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಇವರು ಆಯ್ಕೆಯಾಗಿದ್ದಾರೆ. ಅಕ್ಟೋಬರ್ 21, ಸೋಮವಾರ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾಪು : ವಾಲ್ಮೀಕಿಯವರ ಸಂದೇಶಗಳು ಬಾಳಿನ ಬೆಳಕು - ತಹಶಿಲ್ದಾರ್ ಡಾ. ಪ್ರತಿಭಾ ಆರ್
Posted On: 17 Oct 2024, 02:58 PM
ಕಾಪು : ವಾಲ್ಮೀಕಿಯವರಂತೆ ಮನಃ ಪರಿವರ್ತನೆ ಮಾಡಿಕೊಂಡು ಸದ್ಗಗುಣವಂತರಾಗಲು ಎಲ್ಲರಿಗೂ ಸಾಧ್ಯವಿದೆ. ಜಗತ್ತಿನ ಪ್ರಥಮ ಕಾವ್ಯ ರಚನೆಕಾರರಾದ ವಾಲ್ಮೀಕಿಯವರ ಹಿರಿಮೆ ಎಂದೆಂದಿಗೂ ಪ್ರಾಥಃಸ್ಮರಣೀಯ ಎಂದು ಕಾಪು ತಾಲೂಕು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಹೇಳಿದರು. ಅವರು ಗುರುವಾರ ಕಾಪು ತಹಶಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂತಹ ಮಹಾನ್ ವ್ಯಕ್ತಿಯ ಜಯಂತಿ ಸಾರ್ಥಕತೆ ಹೊಂದಬೇಕಾದರೆ ಮಹರ್ಷಿಯವರು ರಾಮಾಯಣದ ಮೂಲಕ ನೀಡಿರುವ ಪಿತೃ ವಾಕ್ಯ ಪರಿಪಾಲನೆ, ಪಿತೃದೇವೋಭವ, ಮಮತೆ, ಸಮತೆ, ಭ್ರಾತೃತ್ವ ತ್ಯಾಗ ದೇಶಪ್ರೇಮ, ಅಳಿಲುಸೇವೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಯುವ ಜನತೆಗೆ ಒಳ್ಳೆಯ ಹಾದಿಯಲ್ಲಿ ನಡೆಯಲು ಅದ್ಭುತ ಸಂದೇಶವನ್ನು ಮಹರ್ಷಿ ನೀಡಿದ್ದಾರೆ ಎಂದರು. ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಸವರಾಜು, ಉಪ ತಹಶಿಲ್ದಾರ್ ಗಳಾದ ರವಿಕಿರಣ್, ದೇವಕಿ, ಅಶೋಕ್ ಕೋಟೆಕಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಕ್ಕುಂಜ : ಅಯ್ಯಪ್ಪ ಶಿಬಿರದ ಮಂಟಪ ನಿರ್ಮಾಣ, ಇನ್ನಿತರ ಕಾರ್ಯಕ್ಕೆ ಭಕ್ತವೃಂದ ಸಹಕರಿಸುವಂತೆ ಮನವಿ
Posted On: 17 Oct 2024, 02:47 PM
ಕಾಪು : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ದಿ| ಸೂರ್ಯ ಕುಲಾಲ್ ಕುಕ್ಕುಂಜ ಗುರುಸ್ವಾಮಿಯಾಗಿ ಸ್ಥಾಪಿಸಿದ ಅಯ್ಯಪ್ಪ ಭಕ್ತವೃಂದ (ರಿ.) ಕುಕ್ಕುಂಜ ಕಳತ್ತೂರು ಶಿಬಿರ 25 ವರ್ಷ ಪೂರೈಸಿದ್ದು, ಇದೀಗ ಮಂಟಪ ರಚನೆ ಹಾಗೂ ಇನ್ನಿತರ ಕೆಲವು ಕೆಲಸಗಳು ಶಿಬಿರದ ಮಹಾಪೂಜೆಯ ಮೊದಲು ಆಗಬೇಕಿದ್ದು ಭಕ್ತವೃಂದ ತಮ್ಮಿಂದಾದಷ್ಟು ಧನ ಸಹಾಯ ನೀಡಬೇಕಾಗಿ ಶಿಬಿರದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಮುಂಬೈ ಬಂಟರ ಭವನದಲ್ಲಿ ಸ್ವರ್ಣಗೌರಿ ಪೂಜೆ
Posted On: 17 Oct 2024, 02:45 PM
ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮತ್ತು ನವದುರ್ಗಾ ಲೇಖನ ಯಜ್ಞ ಯಶಸ್ವಿಯಾಗಿ, ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಮುಂಬೈನಲ್ಲಿರುವ ಊರಿನ ಬಂಧುಗಳು ಪಾಲ್ಗೊಳ್ಳಲು ಆಮಂತ್ರಿಸಲು ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಪದಾಧಿಕಾರಿಗಳು ಮುಂಬೈಗೆ ತೆರಳಿದ್ದು, ಮಂಗಳವಾರ ಮುಂಬೈ ಬಂಟರ ಭವನದಲ್ಲಿ ನಡೆದ ಸ್ವರ್ಣಗೌರಿ ಪೂಜೆಯಲ್ಲಿ ಭಾಗವಹಿಸಿದರು. ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ, ಸ್ವರ್ಣ ಸಮರ್ಪಣಾ ಸಮಿತಿ ಅಧ್ಯಕ್ಷ ರವಿಸುಂದರ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಮುಂಬಯಿ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಲಾಲಾಜಿ ಆರ್. ಮೆಂಡನ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ. ಸೋಜ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲಬೆಟ್ಟು, ವಿಶ್ವಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪ್ರಮುಖರಾದ ಆನಂದ ಶೆಟ್ಟಿ, ಡಾ. ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಕೆ. ವಿಶ್ವನಾಥ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಪಡುಬಿದ್ರಿ : ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿಯಿಂದ ಪೂರ್ವಭಾವಿ ಸಭೆ
Posted On: 17 Oct 2024, 02:14 PM
ಪಡುಬಿದ್ರಿ : ಉಡುಪಿ - ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ಗುರುವಾರ ಪಡುಬಿದ್ರಿಯ ಉದಯಾದ್ರಿ ಸಭಾಭವನದಲ್ಲಿ ಹೆಜಮಾಡಿ, ಪಡುಬಿದ್ರಿ, ಪಲಿಮಾರು, ಮುದರಂಗಡಿ, ಎಲ್ಲೂರು, ತೆಂಕ, ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಭೆಯು ಜರಗಿತು ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ ಇವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು ಎಂದರು. ಈ ಸಂದರ್ಭದಲ್ಲಿ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಅಭ್ಯರ್ಥಿಗಳಾದ ಕಿಶೋರ್ ಕುಮಾರ್ ಬೊಟ್ಯಾಡಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಅಭ್ಯರ್ಥಿ ಪ್ರಮುಖ್ ಅರುಣ್ ಶೆಟ್ಟಿ ಪಾದೂರು, ಅಭ್ಯರ್ಥಿ ಪ್ರವಾಸ ಪ್ರಮುಖ್ ರಾಜೇಶ್ ಕಾವೇರಿ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
