Updated News From Kaup

92ನೇ ಹೇರೂರಿನ ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆ

Thumbnail
Posted On: 27 Aug 2024, 07:19 AM

ಶಿರ್ವ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, 92ನೇ ಹೇರೂರಿನ ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿ (ರಿ.) ವತಿಯಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಊರಿನ ಹೆಚ್ಚಿನ ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಂಡರು. ತೀರ್ಪುಗಾರರಾಗಿ ಬಂಟಕಲ್ಲು ದುರ್ಗಾಪರಮೇಶ್ವರಿ ಶಾಲೆಯ ಮುಖ್ಯ ಶಿಕ್ಷಕಿ ಸಂಗೀತ ಪಾಟ್ಕರ್, ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢ ಶಾಲೆಯ ಶಿಕ್ಷಕರಾದ ದುರ್ಗಯ್ಯ ನಾಯಕ್ ಮತ್ತು ಸುಜಿತ್ ಕುಮಾರ್ ರವರು ಕಾರ್ಯನಿರ್ವಹಿಸಿದರು. ನಂತರ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ, ಮಂಡಳಿಯ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿ, ಕಾರ್ಯದರ್ಶಿ ಚರಣ್ ಎಸ್. ದೇವಾಡಿಗ ಹಾಗೂ ಮಹಿಳಾ ಬಳಗದ ಅಧ್ಯಕ್ಷರಾದ ಸುಂದರಿ ನಾರಾಯಣ ರಾವ್ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ರಾಜೇಶ್ ಜೋಗಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರಾದ ಮಾಧವ ಆಚಾರ್ಯ ವಂದಿಸಿದರು.

ಪಡುಬಿದ್ರಿ ಬಂಟರ ಭವನದಲ್ಲಿ ವೃತ್ತಿ ಅಭಿವೃದ್ಧಿ, ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ

Thumbnail
Posted On: 25 Aug 2024, 08:22 PM

ಪಡುಬಿದ್ರಿ : ಸಂಸ್ಕೃತಿಯನ್ನು ಅರಿತು‌ ನಮ್ಮ ಮಕ್ಕಳು ‌ಬೆಳೆಯಬೇಕಿದೆ. ಯಶಸ್ಸು ಸಾಧನೆಯ ಹಿಂದೆ ಶ್ರಮವಿರಬೇಕು. ಮೊದಲು ತಂದೆ ತಾಯಿ, ಊರಿನ ದೈವ, ದೇವರು, ಗುರುಗಳ ಆಶೀರ್ವಾದ ಅನಿವಾರ್ಯ. ನಮ್ಮ ಕಾರ್ಯ ಹುಟ್ಟೂರಿಗೆ ಧನ್ಯತೆ ತರಬೇಕಾಗಿದೆ. ವೈಫಲ್ಯ, ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಯಶಸ್ಸು ಸಾಧ್ಯ ಎಂದು ಎಂ ಆರ್ ಜಿ ಗ್ರೂಪ್ ಮುಖ್ಯಸ್ಥ ಡಾ. ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಂಟರ ಸಂಘ ಮತ್ತು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಸಹಯೋಗದಲ್ಲಿ ಭಾನುವಾರ ಪಡುಬಿದ್ರಿ ಬಂಟರ ಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಒಂದು ದಿನದ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ದಿವ್ಯಾರಾಣಿ ಪ್ರದೀಪ್, ಮೈತ್ರಿ ಮಲ್ಲಿ, ಡಾ. ಸಿ. ಕೆ.ಮಂಜುನಾಥ್, ಡಾ. ಶುಭ, ಡಾ.ಪ್ರವೀಣ್ ಶೆಟ್ಟಿ, ಡಾ. ಸುಧೀರಾಜ್, ಹರೀಶ್ ಜಿ. ಮೊದಲಾದವರು ಮಹಿಳಾ ಸಬಲೀಕರಣ, ಸ್ವ ಉದ್ಯೋಗ, ಕಮ್ಯುನಿಕೇಷನ್ ಸ್ಕಿಲ್, ಇಂಟರ್ವ್ಯೂ ತಯಾರಿ, ಬ್ಯಾಂಕ್ ಸಹಾಯ ವಿಷಯಗಳ ಬಗ್ಗೆ ತರಬೇತಿ ನೀಡಿದರು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿ ಪ್ರಸಾದ್‌ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪಡುಬಿದ್ರಿ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಶಶಿಧರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ದ ಮಾಜಿ ಅಧ್ಯಕ್ಷರುಗಳಾದ ರವೀಂದ್ರನಾಥ್ ಜಿ ಹೆಗ್ಡೆ, ಸುರೇಶ್ ಶೆಟ್ಟಿ, ಸಾಂತೂರು ಭಾಸ್ಕರ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿ, ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ವಿಜಿತ್ ಶೆಟ್ಟಿ, ಪದ್ಮನಾಭ ಹೆಗ್ಡೆ ಉಪಸ್ಥಿತರಿದ್ದರು. ಡಾ.ದೇವಿ ಪ್ರಸಾದ್‌ ಶೆಟ್ಟಿ ಸ್ವಾಗತಿಸಿದರು. ಉಡುಪಿ ಗ್ರಾಮೀಣ ಬಂಟರ ಸಂಘ ಟ್ರಸ್ಟ್‌ನ ಅಧ್ಯಕ್ಷ ಅಶೋಕ ಕುಮಾರ್‌ ಶೆಟ್ಟಿ ಪ್ರಸ್ತಾವನೆಗೈದರು. ಜಯ ಶೆಟ್ಟಿ ಪದ್ರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ಪೊಲಿಟೆಕ್ನಿಕ್, ಇಂಜಿನಿಯರಿಂಗ್, ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಸುಮಾರು 200 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಭಾಗವಹಿಸಿದವರಿಗೆ ಪ್ರಮಾಣಪತ್ರ ನೀಡಲಾಯಿತು.

ಶಿರ್ವ : ರೋಟರಿ ಕ್ಲಬ್, ಇನ್ನರ್ ವಿಲ್ ಶಂಕರಪುರ - ಶಾಲಾ ಇಂಟರಾಕ್ಟ್ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಸ್ಪರ್ಧೆ ಸಂಪನ್ನ

Thumbnail
Posted On: 25 Aug 2024, 07:42 PM

ಶಿರ್ವ : ರೋಟರಿ ಕ್ಲಬ್ ಶಂಕರಪುರ ಮತ್ತು ಇನ್ನರ್ ವಿಲ್ ಶಂಕರಪುರ ಇವರ ಜಂಟಿ ಆಶ್ರಯದಲ್ಲಿ ಇನ್ನಂಜೆ ಮತ್ತು ಶಂಕರಪುರ ಶಾಲಾ ಇಂಟರಾಕ್ಟ್ ವಿದ್ಯಾರ್ಥಿಗಳಿಗೆ ಪ್ರತಿಭಾನ್ವೇಷಣೆ ಸ್ಪರ್ಧೆಯನ್ನು ದಿ. ಸಾವ್ಯಾ ಸಬೀನಾ ಡೆಸಾ ಇವರ ಸ್ಮರಣಾರ್ಥ ಫ್ರಾನ್ಸಿಸ್ ಡೆಸಾ ಮತ್ತು ಅಗ್ನೆಸ್ ಡೆಸಾ ಇವರ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆಗ್ನೆಸ್ ಡೆಸಾ ಇವರು ನೆರವೇರಿಸಿದರು. ರೋಟರಿ ಜಿಲ್ಲೆ 3182 ರ ಇಂಟರಾಕ್ಟ್ ಜಿಲ್ಲಾ ಸಭಾಪತಿಯಾದ ಕೃಷ್ಣ ಕಾಂಚನ್ ಮತ್ತು ರೋಟರಿ ಜಿಲ್ಲೆ ವಲಯ 5 ಸಹಾಯಕ ಗವರ್ನರ್ ಆದ ಅನಿಲ್ ಡೆಸಾ ಶಂಕರಪುರ, ಯೂತ್ ಸರ್ವಿಸ್ ಡೈರೆಕ್ಟರ್ ಜೇಸನ್ ಡಿ ಸೋಜಾ, ರೋಟರಿ ಮತ್ತು ಇನ್ನರ್ ವಿಲ್ ಕಾರ್ಯದರ್ಶಿಗಳಾದ ಅನಿಲ್ದಾ ನೋರೋನ್ನಾ ಮತ್ತು ಮೇಬಲ್ ಮಾರ್ಟೀಸ್ ಉಪಸ್ಥಿತರಿದ್ದರು. ಇಂಟ್ರಾಕ್ಟ್ ಮಕ್ಕಳಿಗಾಗಿ ಭಾಷಣ ಸ್ಪರ್ಧೆ, ದೇಶಭಕ್ತಿ ಗೀತೆ, ಜನಪದ ಶೈಲಿಯ ನೃತ್ಯ, ಮತ್ತು ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಶಂಕರಪುರದ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಮತ್ತು ಇನ್ನರ್ ವಿಲ್ ಅಧ್ಯಕ್ಷರಾದ ಸಮೀರಾ ರೆಬೆಲ್ಲೋ ವಹಿಸಿದ್ದರು. ಸ್ಪರ್ಧೆಯ ತೀರ್ಪುಗಾರರಾಗಿ ಗಣೇಶ್ ಎಲ್ಲೂರು ಮತ್ತು ಚಿನ್ಮಯ್ ಭಟ್ ಸಹಕರಿಸಿದ್ದರು. ರಸಪ್ರಶ್ನೆ ಸ್ಪರ್ಧೆಯನ್ನು ಒಲಿವರ್ ರೆಬೆಲ್ಲೋ ಮತ್ತು ಕಾರ್ಯಕ್ರಮವನ್ನು ಫ್ಲಾವಿಯ ಮೆನೇಜಸ್ ನಿರೂಪಿಸಿದರು.

ಕಾಪು‌ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ವತಿಯಿಂದ ಸಮುದಾಯ ಭವನದ ಕಾಮಗಾರಿಗೆ ಧನ ಸಹಾಯ

Thumbnail
Posted On: 25 Aug 2024, 07:29 PM

ಕಾಪು : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ಇವರ ವತಿಯಿಂದ ಕಾಪು ಬಿಲ್ಲವರ ಸಮುದಾಯ ಭವನದ ಕಾಮಗಾರಿಗೆ ರೂಪಾಯಿ 20,482 ಧನ ಸಹಾಯ ನೀಡಲಾಯಿತು. ಈ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ಮತ್ತು ಕಾಪು ಬಿಲ್ಲವರ ಸಂಘದ ಪ್ರಮುಖರು ಉಪಸ್ಥಿತರಿದ್ದರು.

ಕಾಪು : ಮೊಹಮ್ಮದ್ ಫಾರೂಕ್ ಚಂದ್ರನಗರ - ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ

Thumbnail
Posted On: 25 Aug 2024, 12:38 PM

ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿರುವ ಉಡುಪಿ ಜಿಲ್ಲೆ ಕಾಪು ತಾಲೂಕಿನ ಕಳತ್ತೂರು ಗ್ರಾಮದ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಇದರ ಆಡಳಿತ ನಿರ್ದೇಶಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆ ಪರಿಗಣಿಸಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಯು.ಎಸ್.ಎ ಚೆನ್ನೈ(ತಮಿಳುನಾಡು) ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಇದರ ಸ್ಥಾಪಕ ಅಧ್ಯಕ್ಷರಾದ ಡಾ.ಪಿ.ಎಂ ಮನವಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಸಮಾಜ ಸೇವೆಗಾಗಿ ಉಡುಪಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ,ಸೇರಿದಂತೆ ಯು.ಎ.ಇ ದುಬೈ ಯೂತ್ ಐಕಾನ್ ಅಂತರಾಷ್ಟ್ರೀಯ ಪ್ರಶಸ್ತಿ ,ಗೋವಾದ ಜನಸೇವಾ ಸದ್ಭಾವನ್ ಪುರಸ್ಕಾರ್ ಪ್ರಶಸ್ತಿ ,ದೆಹಲಿಯ ಏಷ್ಯಾ ಫೆಸಿಫಿಕ್ ಗೋಲ್ಡ್ ಸ್ಟಾರ್ ಪ್ರಶಸ್ತಿ, ಕೇರಳದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ಸಾಧಕ ರತ್ನ ಪ್ರಶಸ್ತಿ, ಕೈರಳಿ ಪ್ರಕಾಶನ ಕಾಸರಗೋಡು ಸಮಾಜ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಾಧಕ ರತ್ನ ಪ್ರಶಸ್ತಿ ಸೇರಿದಂತೆ ಸಾಮಾಜಿಕ ರಾಜಕೀಯ ಧಾರ್ಮಿಕ ಕ್ಷೇತ್ರದಲ್ಲಿ ನೂರಾರು ಸಂಘ ಸಂಸ್ಥೆಗಳು ಗೌರವಿಸಿ ಜಿಲ್ಲಾ ರಾಜ್ಯ ರಾಷ್ಟೀಯ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

ಕಾಪು : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹರ್ದ ಕೋ-ಆಪರೇಟಿವ್ ಸೊಸೈಟಿ - ವೃದ್ಧಾಶ್ರಮ ಭೇಟಿ ; ಅಗತ್ಯ ವಸ್ತುಗಳ ವಿತರಣೆ

Thumbnail
Posted On: 24 Aug 2024, 11:47 PM

ಕಾಪು : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಇದರ ಮೂಡುಬೆಳ್ಳೆ ಹಾಗು ಕಾಪು ಶಾಖೆಯ ವತಿಯಿಂದ ಅಗಸ್ಟ್ 24 ರಂದು 78 ನೇ ಸ್ವಾತಂತ್ಯೋತ್ಸವದ ಪ್ರಯುಕ್ತ ವಿಶ್ವಾಸದ ಮನೆ ಕರುಣಾಯಲ ವೃದ್ಧಾಶ್ರಮಕ್ಕೆ ಭೇಟಿ ನೀಡಲಾಯಿತು. ಈ ಸಂದರ್ಭ ಸುಮಾರು 185 ಬೆಡ್‌ಶೀಟ್ ಮತ್ತು ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಶಿರ್ವ ಠಾಣಾಧಿಕಾರಿ ಶಕ್ತಿವೇಲು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಾಜ್೯ ಜೆರಾಲ್ಡ್ ಫೆರ್ನಾಂಡಿಸ್, ವಿಶ್ವಾಸದ ಮನೆ ಕರುಣಾಯಲ ವೃದ್ಧಾಶ್ರಮದ ಮೇಲ್ವಿಚಾರಕರಾದ ಮ್ಯಾಥಿವ್, ಮೂಡುಬೆಳ್ಳೆ ಶಾಖೆಯ ವ್ಯವಸ್ಥಾಪಕರಾದ ಪ್ರೀತಿ ಚಿಪ್ಕ್ ರ್ ಹಾಗು ಕಾಪು ಶಾಖೆಯ ವ್ಯವಸ್ಥಾಪಕರಾದ ರೋಹನ್ ಪಿಂಟೋ ಉಪಸ್ಥಿತರಿದ್ದರು. ವೃದ್ಧಾಶ್ರಮದ ಸಿಬ್ಬಂದಿಗಳು, ಕಾಪು ಹಾಗು ಮೂಡುಬೆಳ್ಳೆಯ ಸಿಬ್ಬಂದಿಗಳು ಸಹಕರಿಸಿದರು. ಕಲ್ಯಾಣಪುರ ಶಾಖಾ ವ್ಯವಸ್ಥಾಪಕರಾದ ಅಭಿಜಿತ್ ಪಾಂಡೇಶ್ವರ ಕಾರ್ಯಕ್ರಮ ನಿರೂಪಿಸಿದರು.

ಪಡುಬಿದ್ರಿ ರೋಟರಿ ಕ್ಲಬ್ ಗೆ 11 ಜಿಲ್ಲಾ ಪ್ರಶಸ್ತಿಗಳು

Thumbnail
Posted On: 24 Aug 2024, 10:58 PM

ಶಿವಮೊಗ್ಗ : ಇಲ್ಲಿನ ಕೂಸ್ಮ ಕ್ಲಬ್ ಸಭಾಂಗಣದಲ್ಲಿ ಶನಿವಾರ ನಡೆದ‌ ರೋಟರಿ ಕ್ಲಬ್ ಇದರ 2023-24 ರ ಸಾಲಿನ ಪ್ರಗತಿ ಜಿಲ್ಲಾ ಅರ್ವಾಡ್ ನೃೆಟ್ ಕಾರ್ಯಕ್ರಮದಲ್ಲಿ ಪಡುಬಿದ್ರಿ ರೋಟರಿ ಕ್ಲಬ್ ಗೆ 11 ಜಿಲ್ಲಾ ಪ್ರಶಸ್ತಿ ಲಭಿಸಿದೆ. ನಿಯೋಜಿತ ಜಿಲ್ಲಾ ಗರ್ವನರ್ ಬಿ.ಎಮ್ ಭಟ್, ನಿಕಟ ಪೂರ್ವ ಜಿಲ್ಲಾ ಗರ್ವನರ್ ಬಿ.ಸಿ ಗೀತಾ, ಜಿಲ್ಲಾ ಕಾರ್ಯದರ್ಶಿ ಡಾ. ಪ್ರೀತಿ ಮೋಹನ್, ಅವಾರ್ಡ್ ಚೇರ್ಮನ್ ಡಾ. ಜಯ ಗೌರಿ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ರೋಟರಿ ಕ್ಲಬ್ ನ ಪೂರ್ವ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಪೂರ್ವ ಸಹಾಯಕ ಗರ್ವನರ್ ಗಳಾದ ಶೃೆಲೇಂದ್ರ ರಾವ್, ವೃೆ. ಸುಧೀರ್ ಕುಮಾರ್, ಪೂರ್ವ ಅಧ್ಯಕ್ಷರಾದ ಪಿ. ಕೃಷ್ಣ ಬಂಗೇರ, ಗೀತಾ ಅರುಣ್, ಗಣೇಶ್ ಆಚಾರ್ಯ ಎರ್ಮಾಳು, ನಿಯೋಜಿತ ಅಧ್ಯಕ್ಷ ಸುನಿಲ್ ಕುಮಾರ್, ನಿಕಟ ಪೂರ್ವ ಕಾರ್ಯದರ್ಶಿ ಪವನ್ ಸಾಲ್ಯಾನ್, ಕಾರ್ಯದರ್ಶಿ ಹೇಮಲತಾ ಸುವರ್ಣ, ಸದಸ್ಯರಾದ ಶೋಭಾ ಚಂದ್ರಶೇಖರ್, ಆರತಿ ಘೋರೃೆ ಉಪಸ್ಥಿತರಿದ್ದರು.

ಪಡುಬಿದ್ರಿ : ಕಂಚಿನಡ್ಕ ಟೋಲ್ ಗೇಟ್ ವಿರುದ್ಧ ಬೃಹತ್ ಪ್ರತಿಭಟನೆ ; ಸಾವಿರಾರು ಮಂದಿ ಭಾಗಿ

Thumbnail
Posted On: 24 Aug 2024, 06:38 PM

ಪಡುಬಿದ್ರಿ : ಇಲ್ಲಿನ ಕಂಚಿನಡ್ಕದಲ್ಲಿ ರಾಜ್ಯ ಸರಕಾರ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರಸ್ತಾವಿತ ಕಂಚಿನಡ್ಕದ ಟೋಲ್‌ ಪ್ರದೇಶದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್‌ ರವರ ಮೂಲಕವಾಗಿ ಜಿಲ್ಲಾಡಳಿತ ಮತ್ತು ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಮಾತನಾಡಿ, ತಾತ್ಕಾಲಿಕ ತಡೆ ಸ್ವಾಗತಾರ್ಹ. ಕಂಚಿನಡ್ಕದ ಟೋಲ್ ಗೇಟ್ ವಿರೋಧಿ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಿರುವುದು ಹೋರಾಟಕ್ಕೆ ಬಲ ಬಂದಿದೆ. ಈ ಯೋಜನೆ ಸಂಪೂರ್ಣ ರದ್ದುಗೊಳ್ಳುವ ತನಕ ಹೋರಾಟ ಮುಂದುವರಿಯಲಿದೆ. ರಾಜ್ಯ ಸರಕಾರ ಕೂಡಲೇ ಸಂಪೂರ್ಣ ರದ್ಧು ಪಡಿಸಿ ಆದೇಶ ಹೊರಡಿಸಲಿ ಎಂದು ಆಗ್ರಹಿಸಿದರು. ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈಗಾಗಲೇ ಲೋಕೋಪಯೋಗಿ ಇಲಾಖಾ ಸಚಿವರು ತಾತ್ಕಾಲಿಕ ರದ್ದು ಎಂಬ ಆದೇಶ ಹೊರಡಿಸಿದ್ದಾರೆ. ಆದರೆ ಈ ಆದೇಶ ಶಾಶ್ವತ ರದ್ದಾಗಬೇಕು ಎಂದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ, ಮುದರಂಗಡಿ ಚರ್ಚ್ ನ ಧರ್ಮಗುರು ರೆ. ಫಾ. ಫೆಡ್ರಿಕ್ ಡಿ ಸೋಜ, ಉಡುಪಿ ಶಾಸಕ ಯಶಪಾಲ್ ಸುವರ್ಣ, ವಿಧಾನ‌ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಕೆ. ರಘುಪತಿ ಭಟ್, ಪ್ರಮುಖರಾದ ಯೋಗೀಶ್ ಶೆಟ್ಟಿ ಬಾಲಾಜಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಅನ್ಸಾರ್ ಅಹಮದ್ ಮೊದಲಾದವರು ಮಾತನಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳು, ಕಾಪು, ಕಾರ್ಕಳ, ಉಡುಪಿ, ಮೂಲ್ಕಿ ತಾಲೂಕು ಮತ್ತು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸುತ್ತಲಿನ‌ 40 ಗ್ರಾಮಗಳ ಸಾರ್ವಜನಿಕರು ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಸರ್ವಜ್ಞ ತಂತ್ರಿ ಕಾರ್ಯಕ್ರಮ ನಿರೂಪಿಸಿದರು. ಸಭೆಯ ಬಳಿಕ ಕಂಚಿನಡ್ಕದಿಂದ ಪಡುಬಿದ್ರಿ ಜಂಕ್ಷನ್ ವರೆಗೆ ಜಾಥಾ ನಡೆಯಿತು. ಪೋಲಿಸ್ ಇಲಾಖೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.

ಜೆಸಿಐ ಶಂಕರಪುರ ಜಾಸ್ಮಿನ್ : ಬಹು ಘಟಕ ಸಮಾವೇಶ

Thumbnail
Posted On: 23 Aug 2024, 08:24 PM

ಶಿರ್ವ : ಜೆಸಿಐ ರಾಷ್ಟ್ರೀಯ ಅಧ್ಯಕ್ಷರ ಬಹು ಘಟಕ ಸಮಾವೇಶವು ಜೇಸಿಐ ಶಂಕರಪುರ ಜಾಸ್ಮಿನ್ ಆಥಿತ್ಯದಲ್ಲಿ ಶಂಕರಪುರ ಜೇಸಿ ಭವನದಲ್ಲಿ ನಡೆಯಿತು. ಜೇಸಿ ಭಾರತದ ರಾಷ್ಟ್ರೀಯ ಅಧ್ಯಕ್ಷ ಜೆ ಎಫ್ ಎಸ್ ರೆಕೇಶ್ ಶರ್ಮ ಇವರನ್ನು ಸನ್ಮಾನಿಸಲಾಯಿತು. ಈ‌ ಸಂದರ್ಭ ಮಾತನಾಡಿದ ಅವರು, ಯುವ ಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿ ಸಮಾಜದ ಮುಂಚೂಣಿಯ ನಾಯಕರನ್ನಾಗಿಸುವಲ್ಲಿ ಜೇಸಿ ಸಂಸ್ಥೆಯು ಸಕ್ರಿಯವಾಗಿ ಶ್ರಮಿಸುತ್ತಿದ್ದು, ಈ ಸಂಸ್ಥೆಯಿಂದ ಮೂಡಿ ಬಂದ ಹಲವಾರು ಮಂದಿ ಇಂದು ಸಮಾಜದ ಮುಂಚೂಣಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು. ಜಾಸ್ಮಿನ್ ಜೇಸಿಯ ಅಧ್ಯಕ್ಷರಾದ ಜೇಸಿ ಹರೀಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರಾದ ಜೆಸಿಐ ಸೆನೆಟರ್ ಕಾರ್ತಿಕೇಯ ಮಧ್ಯಸ್ಥ, ವಲಯ ಅಧ್ಯಕ್ಷರಾದ ಜೆಸಿಐ ಸೆನೆಟರ್ ಅಡ್ವೊಕೇಟ್ ಗಿರೀಶ್ ಎಸ್ ಪಿ, ವಲಯ ಆಡಳಿತ ಮಂಡಳಿಯ ಸದಸ್ಯರು, ವಲಯ ಹದಿನೈದರ ಘಟಕ ಅಧ್ಯಕ್ಷರುಗಳು, ಶಂಕರಪುರ ಜಾಸ್ಮಿನ್ ಪೂರ್ವಧ್ಯಕ್ಷರು, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು. ಜೇಸಿ ನವೀನ್ ಅಮೀನ್ ವಂದಿಸಿದರು.

ಪಡುಬಿದ್ರಿ : ಕಂಚಿನಡ್ಕ ಟೋಲ್ ತಡೆ ಆದೇಶ - ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Thumbnail
Posted On: 23 Aug 2024, 08:13 PM

ಪಡುಬಿದ್ರಿ : ಇಲ್ಲಿನ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಟೋಲ್ ಗೇಟ್ ಗೆ ಸರಕಾರದಿಂದ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆಯಲ್ಲಿ ಪಡುಬಿದ್ರಿ ಪೇಟೆಯಲ್ಲಿ ಶುಕ್ರವಾರ ಸಂಜೆ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಾಚರಿಸಲಾಯಿತು. ಕಳೆದ ಬುಧವಾರ ಪಡುಬಿದ್ರಿಯ ಕಂಚಿನಡ್ಕದಲ್ಲಿ ಟೋಲ್ ರದ್ಧತಿ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಆಯೋಜನೆಯಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು. ಗುರುವಾರ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗ ಲೋಕೋಪಯೋಗಿ ಸಚಿವ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಟೋಲ್ ರದ್ದತಿಗೆ ಮನವಿ ಸಲ್ಲಿಸಿ ಇಲ್ಲಿಯ ವಸ್ತುಸ್ಥಿತಿಯನ್ನು ಸಚಿವರಿಗೆ ಮನವರಿಕೆ ಮಾಡಿದ್ದರು. ಅದರಂತೆ ಶುಕ್ರವಾರ ಲೋಕೋಪಯೋಗಿ ಸಚಿವರು ಕಂಚಿನಡ್ಕದಲ್ಲಿ ಟೋಲ್ ಗೇಟ್ ನಿರ್ಮಾಣವನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಬಗ್ಗೆ ಆದೇಶ ಹೊರಡಿಸಿದ್ದು ಕಾಂಗ್ರೆಸ್ ನಿಯೋಗಕ್ಕೆ ಮೊದಲ ಹಂತದಲ್ಲಿ ಜಯ ಸಿಕ್ಕಿದಂತಾಗಿದೆ. ಈ ಸಂದರ್ಭ ಕಾಂಗ್ರೆಸ್ ಮುಖಂಡರುಗಳಾದ ಗೀತಾ ವಾಗ್ಳೆ, ಶಾಂತಲತಾ ಶೆಟ್ಟಿ, ನವೀನ್ ಚಂದ್ರ ಜೆ ಶೆಟ್ಟಿ, ನವೀನ್ ಎನ್ ಶೆಟ್ಟಿ, ಶೇಖರ್ ಹೆಜಮಾಡಿ, ರಮೀಝ್ ಹುಸೇನ್, ಶರ್ಫುದ್ದೀನ್ ಶೇಖ್, ಅಝೀಝ್ ಕಣ್ಣಂಗಾರು, ವೈ ಸುಕುಮಾರ್, ಕರುಣಾಕರ ಪೂಜಾರಿ, ಅಶೋಕ್ ಸಾಲ್ಯಾನ್, ದೀಪಕ್ ಎರ್ಮಾಳು, ದಿವಾಕರ ಶೆಟ್ಟಿ, ವಿಶ್ವಾಸ್ ಅಮೀನ್, ಜ್ಯೋತಿ ಮೆನನ್, ಅಶೋಕ್ ನಾಯರಿ, ವೈ ಸುಧೀರ್ ಕುಮಾರ್, ಸುನಿಲ್ ಬಂಗೇರ, ಶಫಿ ಪಡುಬಿದ್ರಿ, ರಾಜೇಶ್ ಶೇರಿಗಾರ್, ಸಂತೋಷ್ ಪಡುಬಿದ್ರಿ, ಕೀರ್ತಿ ಪಡುಬಿದ್ರಿ, ಫಾರೂಕ್ ಚಂದ್ರನಗರ ಮತ್ತಿತರರು ಉಪಸ್ಥಿತರಿದ್ದರು.