Updated News From Kaup

ಇಂದು (ಆಗಸ್ಟ್ 1) ಪಡುಬಿದ್ರಿಯ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಅಜಕಾಯಿ ಸೇವೆ

Posted On: 01-08-2024 12:55PM

ಪಡುಬಿದ್ರಿ : ಕಾನನದ ನಡುವಿನ ದೈವಿಕ ತಾಣ, ಮರಳೇ ಪ್ರಸಾದವಾಗಿ ಬಡವ ಬಲ್ಲಿದನೆಂಬ ಬೇಧವಿಲ್ಲದೆ ಎಲ್ಲರೂ ನೆಲದ ಮೇಲೆಯೇ ಕುಳಿತುಕೊಂಡು ಭಕ್ತಿ ಪರವಶವಾಗುವ ಕ್ಷೇತ್ರವೇ ಪಡುಬಿದ್ರಿಯ ಖಡ್ಗೇಶ್ವರಿ ಬ್ರಹ್ಮಸ್ಥಾನ. ಎರಡು ವರ್ಷಕ್ಕೊಮ್ಮೆ ನಡೆಯುವ ಢಕ್ಕೆಬಲಿ ಸೇವೆ ವಿಶೇಷವಾಗಿದೆ. ಶ್ರೀ ಕ್ಷೇತ್ರದಲ್ಲಿ ಭಕ್ತ ಜನರು ಪಂಚಾಮೃತ ಸೇವೆ, ಹಗಲು ತಂಬಿಲ,ರಾತ್ರಿ ತಂಬಿಲ ಸೇವೆ ಸಲ್ಲಿಸಲು ಅವಕಾಶವಿದೆ. ಕರ್ಕಾಟಕ (ಆಟಿ) ಮಾಸದಲ್ಲಿ ಈ ಸೇವೆಗಳು ನಡೆಯದಿದ್ದರೂ, ಈ ತಿಂಗಳ 16 ನೇ ದಿನದಂದು ನಡೆಯುವ ಅಜಕಾಯಿ ಸೇವೆ ಪ್ರಮುಖವಾಗಿದೆ.

ಕುಂದಾಪುರ : ಬೃಹತ್ ಗಾತ್ರದ ಹೆಬ್ಬಾವು - ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಟ್ಟ ತಂಡ

Posted On: 31-07-2024 10:01PM

ಕುಂದಾಪುರ : ತಾಲೂಕಿನ ಗಂಗೊಳ್ಳಿ ಗ್ರಾಮದ ಲ್ಯೆಟ್ ಹೌಸ್ ಸಮೀಪ ಗದ್ದೆಮನೆ ನರಸಿಂಹ ಪೂಜಾರಿಯವರ ವಾಸ್ತವ್ಯದ ಮನೆಯ ಸಮೀಪ ಬಂದ 16 ಕೆ.ಜಿ. ತೂಕದ 11 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಒಂದನ್ನು ಸುರಕ್ಷಿತವಾಗಿ ಹಿಡಿದು, ರಕ್ಷಿತಾರಣ್ಯದಲ್ಲಿ ಬಿಡಲಾಯಿತು.

ವಯನಾಡ್ ಭೂಕುಸಿತ : ಸರ್ವ ಸಹಕಾರಕ್ಕೂ ಸಿದ್ಧ - ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ

Posted On: 31-07-2024 09:45PM

ಉಡುಪಿ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಕಳವಳ ವ್ಯಕ್ತಪಡಿಸಿದ್ದು, ದುರಂತದಲ್ಲಿ ನಿರಾಶ್ರಿತರಾದವರ ನೆರವಿಗೆ ಧರ್ಮಪ್ರಾಂತ್ಯ ಎಲ್ಲಾ ರೀತಿಯ ಸಹಕಾರ ನೀಡಲು ಬಯಸಿದೆ ಎಂದು ಹೇಳಿದ್ದಾರೆ.

ಆಗಸ್ಟ್ 1 (ನಾಳೆ) : ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ

Posted On: 31-07-2024 08:46PM

ಉಡುಪಿ : ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜ್‌ಗಳಿಗೆ ಗುರುವಾರ(ಆಗಸ್ಟ್-01) ರಂದು ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಕಾಪು : ಇನ್ನಂಜೆ ಮಹಿಳಾ ಮಂಡಳಿ - ಆಟಿಡೊಂಜಿ ದಿನ ಕಾರ್ಯಕ್ರಮ

Posted On: 31-07-2024 07:43PM

ಕಾಪು : ಇನ್ನಂಜೆ ಮಹಿಳಾ ಮಂಡಳಿ (ರಿ.) ಇದರ ವತಿಯಿಂದ ನಡೆದ "ಆಟಿಡೊಂಜಿ ದಿನ" ಕಾರ್ಯಕ್ರಮವು ಜುಲೈ 28ರಂದು ಇನ್ನಂಜೆ ಯುವಕ ಮಂಡಲದ ಸುವರ್ಣ ಸಭಾಭವನದಲ್ಲಿ ನಡೆಯಿತು. ಮಹಿಳಾ ಮಂಡಳಿಯ ಗೌರವ ಸಲಹೆಗಾರರಾದ ಸಖುನಂದನ್ ಕುಮಾರ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಬೆಳಪು ಹಾಲು ಉತ್ಪಾದಕರ ಸಂಘದ ಮಹಾಸಭೆ ; 25% ಡಿವಿಡೆಂಡ್ ಘೋಷಣೆ

Posted On: 31-07-2024 07:32PM

ಬೆಳಪು : ಬೆಳಪು ಹಾಲು ಉತ್ಪದಕರ ಸಂಘ ಕಳೆದ 25 ವರ್ಷಗಳಿಂದ ನಿರಂತರ ಲಾಭ ಗಳಿಸುತ್ತಿದ್ದು, ಪ್ರತಿದಿನ 89೦ ರಿಂದ 1,000 ಲೀಟರ್ ಹಾಲು ಸ್ಥಳೀಯ ಸದಸ್ಯರಿಂದ ಒಕ್ಕೂಟಕ್ಕೆ ನೀಡುತ್ತಿದ್ದು, 2023- 24ನೇ ಸಾಲಿನಲ್ಲಿ ಸದಸ್ಯರಿಗೆ 25% ಡಿವಿಡೆಂಡ್ ನೀಡಿ ದಾಖಲೆ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಬೆಳಪು ಹಾಲು ಉತ್ಪದಕರ ಸಂಘದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಬೆಳಪು ಹಾಲು ಉತ್ಪಾದಕರ ಸಂಘ ಇನ್ನೂ ಪ್ರಗತಿಯತ್ತ ಸಾಗಬೇಕಿದೆ. ಪ್ರತಿ ಮನೆಯಲ್ಲಿಯೂ ಹಸು ಸಾಕಣೆ ಮಾಡಬೇಕು. ಮಾನವನಿಗೆ ಕೇಳಿದ್ದನ್ನು ಕೊಡುವ ಕಾಮಧೇನು ಹಸುವಾಗಿದ್ದು, ಇದರಿಂದ ಕುಟುಂಬ ನಿರ್ವಹಣೆ, ಮನಸಿಗೆ ನೆಮ್ಮದಿ ಸಾಧ್ಯ. ಹಸು ಸಾಕಲು ಮುಂದೆ ಬಂದರೆ ಕಡಿಮೆ ಬಡ್ಡಿಯಲ್ಲಿ ಬೆಳಪು ಸಹಕಾರಿ ಸಂಘದಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದರು.

ಜುಲೈ 31 : ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Posted On: 31-07-2024 08:45AM

ಕಾಪು‌ : ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಹೆಬ್ರಿ ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 31ರಂದು ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ ಗಳು ಆದೇಶ ನೀಡಿದ್ದಾರೆ.

ಭಾರೀ ಮಳೆ : ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ - ಜುಲೈ 31 (ನಾಳೆ) ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಣೆ

Posted On: 30-07-2024 08:25PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 31 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ರಜೆಯನ್ನು ಘೋಷಿಸಿದೆ.

ಕಾಪು : ಧ್ವನಿ ಬೆಳಕು ಸಂಯೋಜಕರ ಸಂಘಟನೆಯಿಂದ ಕಾಪು ಬಿಲ್ಲವರ ಸಮುದಾಯ ಭವನದ ಕಾಮಗಾರಿಗೆ ಧನಸಹಾಯ

Posted On: 30-07-2024 06:58PM

ಕಾಪು : ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾಪು ವಲಯ ವತಿಯಿಂದ ಕಾಪು ಬಿಲ್ಲವರ ಸಮುದಾಯ ಭವನದ ಕಾಮಗಾರಿಗೆ ರೂಪಾಯಿ 25,000 ಧನ ಸಹಾಯ ಹಸ್ತಾಂತರಿಸಲಾಯಿತು.

ಸಿ ಎ ಫೌಂಡೇಶನ್ ಫಲಿತಾಂಶದಲ್ಲೂ ಮುಂಚೂಣಿಯಲ್ಲಿರುವ ಕ್ರಿಯೇಟಿವ್ ಪಿಯು ಕಾಲೇಜು

Posted On: 30-07-2024 06:43PM

ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.