Updated News From Kaup
ಹೆಜಮಾಡಿ : ಕಣ್ಣಂಗಾರು ಜುಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಹಮೀದ್ ಆಯ್ಕೆ
Posted On: 27 Aug 2024, 06:41 PM
ಹೆಜಮಾಡಿ : ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ವಕ್ಫ್ ಆಡಳಿತಕ್ಕೆ ಒಳಪಟ್ಟಿದ್ದ ಕಣ್ಣಂಗಾರು ಜಮಾತಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಹಾಜಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಜುಮಾ ಮಸೀದಿಯ ಆಡಳಿತ ಅಧಿಕಾರಿ ಕೆ.ಎಂ.ಕೆ. ಮಂಜನಾಡಿ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿತ ಸಭೆಯಲ್ಲಿ ಮುಂದಿನ ಮೂರು ವರ್ಷಗಳಿಗೆ ಈ ಆಯ್ಕೆ ನಡೆದಿದೆ. ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಮಿಲಾಫ್, ಪ್ರಧಾನ ಕಾರ್ಯದರ್ಶಿ ಶೇಖ್ ಅಬ್ದುಲ್ಲಾ ಹಾಜಿ ಮಿನಾ, ಕೋಶಾಧಿಕಾರಿ ಅಬ್ದುಲ್ ಖಾದರ್ ಹಾಜಿ, ಜತೆಕಾರ್ಯದರ್ಶಿ ಕೆ. ಅಬ್ದುಲ್ ಮಜೀದ್ ಮೆಹರಾಜ್ ಆಯ್ಕೆಯಾದರು. ಸದಸ್ಯರಿಗಾಗಿ ನಡೆದ ಚುನಾವಣೆಗೆ 14 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಹಿಂಪಡೆಯುವ ದಿನ ಕೋಟೆ ಶೇಖಬ್ಬ ಹಾಜಿ, ಮುಹಮ್ಮದ್ ಕಬೀರ್ ಮತ್ತು ಶಾಹುಲ್ ಹಮೀದ್ ನಾಮಪತ್ರ ಹಿಂಪಡೆದಿದ್ದರು. ಇದರಿಂದ ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ರಹಿಮಾನ್ ಭಾವ, ಶೇಖ್ ಅಬ್ದುಲ್ಲಾ, ಅಬ್ದುಲ್ ಹಮೀದ್, ಕೆ. ಅಬ್ದುಲ್ ಮಜೀದ್, ಇಬ್ರಾಹಿಂ ಖಲೀಲ್, ಮುಹಮ್ಮದ್ ಕಬೀರ್, ಮುಹಮ್ಮದ್ ಸಿರಾಜ್, ಮೊಹಮ್ಮದ್ ಶರೀಫ್, ಅಬ್ದುಲ್ ಖಾದಿರಿ, ಅಬ್ದುಲ್ ಹಮೀದ್, ಮೊಹಮ್ಮದ್ ಇರ್ಷಾದ್ ಅವಿರೋಧವಾಗಿ ಆಯ್ಕೆಯಾಗಿರುವ ಬಗ್ಗೆ ಚುನಾವಣಾ ಅಧಿಕಾರಿ ಕೆ.ಎಂ.ಕೆ. ಮಂಜನಾಡಿ ಘೋಷಿಸಿದ್ದರು. ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ಮುತ್ತಲಿ, ಉಪಾಧ್ಯಕ್ಷ ಎಂ.ಎಸ್. ಅಬ್ದುಲ್ ರಝಾಕ್ ಹಾಜಿ, ಎಂ.ಪಿ.ಮೊಯಿದಿನಬ್ಬ, ಸದಸ್ಯರಾದ ಹಮೀದ್ ಮೂಳೂರು, ಮನ್ಸೂರ್, ಅಸೀಫ್ ಕಟಪಾಡಿ, ಅಬ್ದುಲ್ ರಹಿಮಾನ್, ಉಡುಪಿ ಜಿಲ್ಲಾ ವಕ್ಫ್ ಅಧಿಕಾರಿ ನಾಝಿಯ ಅವರು ಪ್ರಮಾಣ ಪತ್ರ ನೀಡಿ ಗೌರವಿಸಿದರು. ಸಲಹಾ ಸಮಿತಿ ಸದಸ್ಯರಾದ ಹನೀಫ್, ಶಫಿ ಹಾಜಿ, ಸೈಯ್ಯದ್, ಆಸೀಫ್ ಉಪಸ್ಥಿತರಿದ್ದರು. ಮಸೀದಿ ಮುರ್ರಿಸ್ ಅಶ್ರಫ್ ಸಖಾಫಿ ದುವಾ ನೆರವೇರಿಸಿದರು.
ಉಚ್ಚಿಲ ದಸರಾ - 2024 ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 27 Aug 2024, 12:54 PM
ಉಚ್ಚಿಲ : ದ.ಕ ಮೊಗವೀರ ಮಹಾಜನ ಸಂಘ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ "ಉಚ್ಚಿಲ ದಸರಾ -2024" ರ ಆಮಂತ್ರಣ ಪತ್ರಿಕೆಯನ್ನು ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಬಿಡುಗಡೆಗೊಳಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ.ರಾಘವೇಂದ್ರ ಉಪಾಧ್ಯಾಯರವರು ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ನಾಡೋಜ ಡಾ.ಜಿ.ಶಂಕರ್ ಮಾತನಾಡಿ, ಈ ಬಾರಿ ಅದ್ದೂರಿಯಾಗಿ ಉಚ್ಚಿಲ ದಸರಾ -2024 ನ್ನು ಆಚರಿಸಲಾಗುವುದು. ಉಚ್ಚಿಲ ದಸರ ಅಕ್ಟೋಬರ್ 3 ರಿಂದ ಅಕ್ಟೋಬರ್ 12ರವರೆಗೆ ನಡೆಯಲಿದ್ದು, ನೃತ್ಯ ವೈವಿಧ್ಯ ದೇಹದಾಢ್ಯಸ್ಪರ್ಧೆ, ಹೆಣ್ಣು ಮಕ್ಕಳ ಹುಲಿ ಕುಣಿತ ಸ್ಪರ್ಧೆ, ಸಾಮೂಹಿಕ ದಾಂಡಿಯ ನೃತ್ಯ ಇತ್ಯಾದಿ ವಿಶೇಷಗಳು ಇರಲಿವೆ. ಸರ್ವರು ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಕಾಪು ನಾಲ್ಕುಪಟ್ಣ ಮೊಗವೀರ ಮಹಾ ಸಭಾದ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ಆಡಳಿತ ಮಂಡಳಿಯ ಸದಸ್ಯರು, ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಮೊದಲಾದವರು ಉಪಸ್ಥಿತರಿದ್ದರು.
ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಂತಾವರ ಕುಲಾಲ ಸಂಘಟನೆಯಿಂದ ಧನಸಹಾಯ
Posted On: 27 Aug 2024, 09:59 AM
ಕಾಪು : ಪುಣೆಯಲ್ಲಿ ವಾಸವಿರುವ ಕಾರ್ಕಳ ತಾಲೂಕಿನ ಬೇಲಾಡಿಯ ಬಾಬು ಮೂಲ್ಯರ ಸಹೋದರಿ ಸುಮಲತಾ ಮೂಲ್ಯ ತೀವ್ರ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಪುಣೆಯ ಸಹ್ಯಾದ್ರಿ ಆಸ್ಪತ್ರೆಯಲ್ಲಿ ತಿಂಗಳುಗಳ ಕಾಲ ಜೀವನ್ಮರಣ ಸ್ಥಿತಿಯಲ್ಲಿ ನರಳಿ ಸಾಲ- ಸೋಲ ಮಾಡಿ ಲಕ್ಷಗಟ್ಟಲೆ ಹಣವನ್ನು ಆಸ್ಪತ್ರೆಗೆ ಕಟ್ಟಬೇಕಾಗಿ ಬಂತು. ಕಡುಬಡತನದಿಂದ ದಿನಗೂಲಿ ಮಾಡಿ ಜೀವನ ನೆಡೆಸುತ್ತಿದ್ದ ಕಷ್ಟದ ಬದುಕು ಸುಮಲತಾರದ್ದು. ಕೈ ಹಿಡಿದ ಗಂಡ ಅಗಲಿ ವರ್ಷ ಹಲವಾಗಿದೆ. ಒಬ್ಬಳು ಮಗಳ ಜೊತೆ ಬದುಕು ಸವೆಸುತ್ತಿದ್ದ ಅವರಿಗೆ ಡೆಂಗ್ಯೂ ವಕ್ಕರಿಸಿ ಚಿತ್ರ ಹಿಂಸೆ ನೀಡಿತು. ಈ ಸಂದರ್ಭ ಅವರ ನೆರವಿಗೆ ಧಾವಿಸಿ ಬಂದದ್ದು ಸಜ್ಜನ ದಾನಿಗಳು. ಕಾಪು ಕುಲಾಲ ಯುವ ವೇದಿಕೆ ಮತ್ತು ಕಾಂತಾವರ ಕುಲಾಲ ಸಂಘಟನೆಯ ಸಹಭಾಗಿತ್ವದಲ್ಲಿ ಒಟ್ಟಾದ ರೂ.35,200 ಹಣವನ್ನು ಅವರ ಮಡಿಲಿಗೆ ಹಾಕಿ ನೆರವಿನ ಹಾರೈಕೆಯನ್ನು ಅವರಿಗೆ ನೀಡಲಾಯ್ತು. ಈ ಸಂದರ್ಭ ಕುಲಾಲ ಸುಧಾರಕ ಸಂಘ ಪುಣೆ ಇದರ ಅಧ್ಯಕ್ಷರಾದ ದೊಡ್ಡಣ್ಣ ಸಿ ಮೂಲ್ಯ, ಕಾಪು ಕುಲಾಲ ಯುವವೇದಿಕೆಯ ಉದಯ ಕುಲಾಲ್ ಕಳತ್ತೂರು, ಕಾಂತಾವರ ಕುಲಾಲ ಸಂಘಟನೆಯ ಸಂತೋಷ್ ಕುಲಾಲ್ ಬೇಲಾಡಿ, ಪುಣೆ ಪಿಂಪ್ರಿ ಚಿಂಚಿವಾಡ್ ಕುಲಾಲ ಸಂಘಟನೆಯ (PCMC(R))ಸದಸ್ಯ ಉಮೇಶ್ ಮೂಲ್ಯ ಆಕ್ರೋಡಿ ಉಪಸ್ಥಿತರಿದ್ದರು. ಈ ಮಾತೃಹೃದಯಿ ನೊಂದಜೀವಕ್ಕೆ ಮುಂದಕ್ಕೆ ನೆರವಿನ ಧಾರೆ ಹರಿಸುವವರು ಸುಮಲತಾ ಕುಲಾಲ್ ಅವರ ಬ್ಯಾಂಕ್ ಖಾತೆಗೆ ಅಥವಾ ಗೂಗಲ್ ಪೇ ನಂಬರ್ ಗೆ ಹಣ ವರ್ಗಾವಣೆ ಮಾಡಬಹುದು. BANK DETAILS: BANK NAME : JANATHA SAHAKARI BANK BHAVANI PETH NAME :SUMALATHA YOGISH A/C NUMBER : 003220100021915 IFSC CODE :JSBP0000003 GPAY NUMBER, CONTACT NUMBER :7709407409
ಶ್ರೀ ಕೃಷ್ಣ ಜನ್ಮಾಷ್ಟಮಿ : ರವಿ ಕಟಪಾಡಿ ತಂಡದಿಂದ ಈ ಬಾರಿ ಅಷ್ಟಮಿಗೆ ಅವತಾರ್ 2 ವೇಷ
Posted On: 27 Aug 2024, 07:39 AM
ಕಟಪಾಡಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಊರೆಲ್ಲಾ ಸಂಭ್ರಮದಿಂದಿರಲು ಕಟಪಾಡಿಯ ರವಿಯವರು ಈ ಬಾರಿಯೂ ವೇಷ ಹಾಕಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳ ಚಿಕಿತ್ಸೆಗೆ ತನ್ನಿಂದಾದ ಸಹಾಯದ ಬೆಂಬಲ ನೀಡಲಿದ್ದಾರೆ. ಇದಕ್ಕಾಗಿ ಅವರು ಈ ಬಾರಿ ಆಯ್ಕೆ ಮಾಡಿದ ವೇಷ ಅವತಾರ್ 2. ಇವರೊಂದಿಗೆ ಆಶಿಕ್ ಎಂಬ ಯುವಕ ವೇಷ ಧರಿಸಿದ್ದು, ವಿಶೇಷವಾಗಿದೆ. ರವಿ ಕಟಪಾಡಿ ಈ ಬಾರಿ ಶಾಲಾ ಮಕ್ಕಳಿಗೆ ಮನರಂಜನೆ ನೀಡುವ ಇಂಗಿತ ವ್ಯಕ್ತಪಡಿಸಿದ್ದು, ಸೋಮವಾರ ಕಟಪಾಡಿ, ಶಂಕರಪುರ, ಉದ್ಯಾವರ ಶಾಲೆಗಳಿಗೆ ಭೇಟಿ ನೀಡಿ ಮಂಗಳವಾರ ಉಡುಪಿಯಾದ್ಯಂತ ಸಂಚರಿಸಿ ಹಣ ಸಂಗ್ರಹಿಸಲು ತಂಡದೊಂದಿಗೆ ತೆರಳಿದರು. ಈ ಬಾರಿ ಮೂರು ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ ಮಾಡಲಿದ್ದು, ಇದುವರೆಗೆ 9 ವರ್ಷದಲ್ಲಿ 130 ಮಕ್ಕಳಿಗೆ 1ಕೋಟಿ 28ಲಕ್ಷ ರೂ.ವೈದ್ಯಕೀಯ ವೆಚ್ಚಸಹಾಯ ಹಸ್ತ ನೀಡಿ ವೆಚ್ಚ ಭರಿಸಿದಾಗಿ ಹೇಳಿದರು. ದಿನೇಶ್ ಮಟ್ಟುರವರು ಇವರ ಅವತಾರ್ಗೆ ಬಣ್ಣ ಬಳಿದಿದ್ದು ಮನಮೋಹಕ ವೇಷ ಜನ ಮನ ಸೆಳೆಯುತ್ತಿದೆ.
92ನೇ ಹೇರೂರಿನ ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆ
Posted On: 27 Aug 2024, 07:19 AM
ಶಿರ್ವ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, 92ನೇ ಹೇರೂರಿನ ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿ (ರಿ.) ವತಿಯಿಂದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಊರಿನ ಹೆಚ್ಚಿನ ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಂಡರು. ತೀರ್ಪುಗಾರರಾಗಿ ಬಂಟಕಲ್ಲು ದುರ್ಗಾಪರಮೇಶ್ವರಿ ಶಾಲೆಯ ಮುಖ್ಯ ಶಿಕ್ಷಕಿ ಸಂಗೀತ ಪಾಟ್ಕರ್, ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢ ಶಾಲೆಯ ಶಿಕ್ಷಕರಾದ ದುರ್ಗಯ್ಯ ನಾಯಕ್ ಮತ್ತು ಸುಜಿತ್ ಕುಮಾರ್ ರವರು ಕಾರ್ಯನಿರ್ವಹಿಸಿದರು. ನಂತರ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ, ಮಂಡಳಿಯ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿ, ಕಾರ್ಯದರ್ಶಿ ಚರಣ್ ಎಸ್. ದೇವಾಡಿಗ ಹಾಗೂ ಮಹಿಳಾ ಬಳಗದ ಅಧ್ಯಕ್ಷರಾದ ಸುಂದರಿ ನಾರಾಯಣ ರಾವ್ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ರಾಜೇಶ್ ಜೋಗಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರಾದ ಮಾಧವ ಆಚಾರ್ಯ ವಂದಿಸಿದರು.
ಪಡುಬಿದ್ರಿ ಬಂಟರ ಭವನದಲ್ಲಿ ವೃತ್ತಿ ಅಭಿವೃದ್ಧಿ, ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ
Posted On: 25 Aug 2024, 08:22 PM
ಪಡುಬಿದ್ರಿ : ಸಂಸ್ಕೃತಿಯನ್ನು ಅರಿತು ನಮ್ಮ ಮಕ್ಕಳು ಬೆಳೆಯಬೇಕಿದೆ. ಯಶಸ್ಸು ಸಾಧನೆಯ ಹಿಂದೆ ಶ್ರಮವಿರಬೇಕು. ಮೊದಲು ತಂದೆ ತಾಯಿ, ಊರಿನ ದೈವ, ದೇವರು, ಗುರುಗಳ ಆಶೀರ್ವಾದ ಅನಿವಾರ್ಯ. ನಮ್ಮ ಕಾರ್ಯ ಹುಟ್ಟೂರಿಗೆ ಧನ್ಯತೆ ತರಬೇಕಾಗಿದೆ. ವೈಫಲ್ಯ, ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಯಶಸ್ಸು ಸಾಧ್ಯ ಎಂದು ಎಂ ಆರ್ ಜಿ ಗ್ರೂಪ್ ಮುಖ್ಯಸ್ಥ ಡಾ. ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಂಟರ ಸಂಘ ಮತ್ತು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಸಹಯೋಗದಲ್ಲಿ ಭಾನುವಾರ ಪಡುಬಿದ್ರಿ ಬಂಟರ ಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಒಂದು ದಿನದ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ದಿವ್ಯಾರಾಣಿ ಪ್ರದೀಪ್, ಮೈತ್ರಿ ಮಲ್ಲಿ, ಡಾ. ಸಿ. ಕೆ.ಮಂಜುನಾಥ್, ಡಾ. ಶುಭ, ಡಾ.ಪ್ರವೀಣ್ ಶೆಟ್ಟಿ, ಡಾ. ಸುಧೀರಾಜ್, ಹರೀಶ್ ಜಿ. ಮೊದಲಾದವರು ಮಹಿಳಾ ಸಬಲೀಕರಣ, ಸ್ವ ಉದ್ಯೋಗ, ಕಮ್ಯುನಿಕೇಷನ್ ಸ್ಕಿಲ್, ಇಂಟರ್ವ್ಯೂ ತಯಾರಿ, ಬ್ಯಾಂಕ್ ಸಹಾಯ ವಿಷಯಗಳ ಬಗ್ಗೆ ತರಬೇತಿ ನೀಡಿದರು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪಡುಬಿದ್ರಿ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಶಶಿಧರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ದ ಮಾಜಿ ಅಧ್ಯಕ್ಷರುಗಳಾದ ರವೀಂದ್ರನಾಥ್ ಜಿ ಹೆಗ್ಡೆ, ಸುರೇಶ್ ಶೆಟ್ಟಿ, ಸಾಂತೂರು ಭಾಸ್ಕರ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿ, ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ವಿಜಿತ್ ಶೆಟ್ಟಿ, ಪದ್ಮನಾಭ ಹೆಗ್ಡೆ ಉಪಸ್ಥಿತರಿದ್ದರು. ಡಾ.ದೇವಿ ಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಉಡುಪಿ ಗ್ರಾಮೀಣ ಬಂಟರ ಸಂಘ ಟ್ರಸ್ಟ್ನ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಪ್ರಸ್ತಾವನೆಗೈದರು. ಜಯ ಶೆಟ್ಟಿ ಪದ್ರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ಪೊಲಿಟೆಕ್ನಿಕ್, ಇಂಜಿನಿಯರಿಂಗ್, ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಸುಮಾರು 200 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಭಾಗವಹಿಸಿದವರಿಗೆ ಪ್ರಮಾಣಪತ್ರ ನೀಡಲಾಯಿತು.
ಶಿರ್ವ : ರೋಟರಿ ಕ್ಲಬ್, ಇನ್ನರ್ ವಿಲ್ ಶಂಕರಪುರ - ಶಾಲಾ ಇಂಟರಾಕ್ಟ್ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಸ್ಪರ್ಧೆ ಸಂಪನ್ನ
Posted On: 25 Aug 2024, 07:42 PM
ಶಿರ್ವ : ರೋಟರಿ ಕ್ಲಬ್ ಶಂಕರಪುರ ಮತ್ತು ಇನ್ನರ್ ವಿಲ್ ಶಂಕರಪುರ ಇವರ ಜಂಟಿ ಆಶ್ರಯದಲ್ಲಿ ಇನ್ನಂಜೆ ಮತ್ತು ಶಂಕರಪುರ ಶಾಲಾ ಇಂಟರಾಕ್ಟ್ ವಿದ್ಯಾರ್ಥಿಗಳಿಗೆ ಪ್ರತಿಭಾನ್ವೇಷಣೆ ಸ್ಪರ್ಧೆಯನ್ನು ದಿ. ಸಾವ್ಯಾ ಸಬೀನಾ ಡೆಸಾ ಇವರ ಸ್ಮರಣಾರ್ಥ ಫ್ರಾನ್ಸಿಸ್ ಡೆಸಾ ಮತ್ತು ಅಗ್ನೆಸ್ ಡೆಸಾ ಇವರ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆಗ್ನೆಸ್ ಡೆಸಾ ಇವರು ನೆರವೇರಿಸಿದರು. ರೋಟರಿ ಜಿಲ್ಲೆ 3182 ರ ಇಂಟರಾಕ್ಟ್ ಜಿಲ್ಲಾ ಸಭಾಪತಿಯಾದ ಕೃಷ್ಣ ಕಾಂಚನ್ ಮತ್ತು ರೋಟರಿ ಜಿಲ್ಲೆ ವಲಯ 5 ಸಹಾಯಕ ಗವರ್ನರ್ ಆದ ಅನಿಲ್ ಡೆಸಾ ಶಂಕರಪುರ, ಯೂತ್ ಸರ್ವಿಸ್ ಡೈರೆಕ್ಟರ್ ಜೇಸನ್ ಡಿ ಸೋಜಾ, ರೋಟರಿ ಮತ್ತು ಇನ್ನರ್ ವಿಲ್ ಕಾರ್ಯದರ್ಶಿಗಳಾದ ಅನಿಲ್ದಾ ನೋರೋನ್ನಾ ಮತ್ತು ಮೇಬಲ್ ಮಾರ್ಟೀಸ್ ಉಪಸ್ಥಿತರಿದ್ದರು. ಇಂಟ್ರಾಕ್ಟ್ ಮಕ್ಕಳಿಗಾಗಿ ಭಾಷಣ ಸ್ಪರ್ಧೆ, ದೇಶಭಕ್ತಿ ಗೀತೆ, ಜನಪದ ಶೈಲಿಯ ನೃತ್ಯ, ಮತ್ತು ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಶಂಕರಪುರದ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಮತ್ತು ಇನ್ನರ್ ವಿಲ್ ಅಧ್ಯಕ್ಷರಾದ ಸಮೀರಾ ರೆಬೆಲ್ಲೋ ವಹಿಸಿದ್ದರು. ಸ್ಪರ್ಧೆಯ ತೀರ್ಪುಗಾರರಾಗಿ ಗಣೇಶ್ ಎಲ್ಲೂರು ಮತ್ತು ಚಿನ್ಮಯ್ ಭಟ್ ಸಹಕರಿಸಿದ್ದರು. ರಸಪ್ರಶ್ನೆ ಸ್ಪರ್ಧೆಯನ್ನು ಒಲಿವರ್ ರೆಬೆಲ್ಲೋ ಮತ್ತು ಕಾರ್ಯಕ್ರಮವನ್ನು ಫ್ಲಾವಿಯ ಮೆನೇಜಸ್ ನಿರೂಪಿಸಿದರು.
ಕಾಪು : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ವತಿಯಿಂದ ಸಮುದಾಯ ಭವನದ ಕಾಮಗಾರಿಗೆ ಧನ ಸಹಾಯ
Posted On: 25 Aug 2024, 07:29 PM
ಕಾಪು : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ಇವರ ವತಿಯಿಂದ ಕಾಪು ಬಿಲ್ಲವರ ಸಮುದಾಯ ಭವನದ ಕಾಮಗಾರಿಗೆ ರೂಪಾಯಿ 20,482 ಧನ ಸಹಾಯ ನೀಡಲಾಯಿತು. ಈ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ಮತ್ತು ಕಾಪು ಬಿಲ್ಲವರ ಸಂಘದ ಪ್ರಮುಖರು ಉಪಸ್ಥಿತರಿದ್ದರು.
ಕಾಪು : ಮೊಹಮ್ಮದ್ ಫಾರೂಕ್ ಚಂದ್ರನಗರ - ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ
Posted On: 25 Aug 2024, 12:38 PM
ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿರುವ ಉಡುಪಿ ಜಿಲ್ಲೆ ಕಾಪು ತಾಲೂಕಿನ ಕಳತ್ತೂರು ಗ್ರಾಮದ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಇದರ ಆಡಳಿತ ನಿರ್ದೇಶಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆ ಪರಿಗಣಿಸಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಯು.ಎಸ್.ಎ ಚೆನ್ನೈ(ತಮಿಳುನಾಡು) ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಇದರ ಸ್ಥಾಪಕ ಅಧ್ಯಕ್ಷರಾದ ಡಾ.ಪಿ.ಎಂ ಮನವಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಸಮಾಜ ಸೇವೆಗಾಗಿ ಉಡುಪಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ,ಸೇರಿದಂತೆ ಯು.ಎ.ಇ ದುಬೈ ಯೂತ್ ಐಕಾನ್ ಅಂತರಾಷ್ಟ್ರೀಯ ಪ್ರಶಸ್ತಿ ,ಗೋವಾದ ಜನಸೇವಾ ಸದ್ಭಾವನ್ ಪುರಸ್ಕಾರ್ ಪ್ರಶಸ್ತಿ ,ದೆಹಲಿಯ ಏಷ್ಯಾ ಫೆಸಿಫಿಕ್ ಗೋಲ್ಡ್ ಸ್ಟಾರ್ ಪ್ರಶಸ್ತಿ, ಕೇರಳದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ವತಿಯಿಂದ ಸಾಧಕ ರತ್ನ ಪ್ರಶಸ್ತಿ, ಕೈರಳಿ ಪ್ರಕಾಶನ ಕಾಸರಗೋಡು ಸಮಾಜ ರತ್ನ ಪ್ರಶಸ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಾಧಕ ರತ್ನ ಪ್ರಶಸ್ತಿ ಸೇರಿದಂತೆ ಸಾಮಾಜಿಕ ರಾಜಕೀಯ ಧಾರ್ಮಿಕ ಕ್ಷೇತ್ರದಲ್ಲಿ ನೂರಾರು ಸಂಘ ಸಂಸ್ಥೆಗಳು ಗೌರವಿಸಿ ಜಿಲ್ಲಾ ರಾಜ್ಯ ರಾಷ್ಟೀಯ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.
ಕಾಪು : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹರ್ದ ಕೋ-ಆಪರೇಟಿವ್ ಸೊಸೈಟಿ - ವೃದ್ಧಾಶ್ರಮ ಭೇಟಿ ; ಅಗತ್ಯ ವಸ್ತುಗಳ ವಿತರಣೆ
Posted On: 24 Aug 2024, 11:47 PM
ಕಾಪು : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಇದರ ಮೂಡುಬೆಳ್ಳೆ ಹಾಗು ಕಾಪು ಶಾಖೆಯ ವತಿಯಿಂದ ಅಗಸ್ಟ್ 24 ರಂದು 78 ನೇ ಸ್ವಾತಂತ್ಯೋತ್ಸವದ ಪ್ರಯುಕ್ತ ವಿಶ್ವಾಸದ ಮನೆ ಕರುಣಾಯಲ ವೃದ್ಧಾಶ್ರಮಕ್ಕೆ ಭೇಟಿ ನೀಡಲಾಯಿತು. ಈ ಸಂದರ್ಭ ಸುಮಾರು 185 ಬೆಡ್ಶೀಟ್ ಮತ್ತು ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಶಿರ್ವ ಠಾಣಾಧಿಕಾರಿ ಶಕ್ತಿವೇಲು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಾಜ್೯ ಜೆರಾಲ್ಡ್ ಫೆರ್ನಾಂಡಿಸ್, ವಿಶ್ವಾಸದ ಮನೆ ಕರುಣಾಯಲ ವೃದ್ಧಾಶ್ರಮದ ಮೇಲ್ವಿಚಾರಕರಾದ ಮ್ಯಾಥಿವ್, ಮೂಡುಬೆಳ್ಳೆ ಶಾಖೆಯ ವ್ಯವಸ್ಥಾಪಕರಾದ ಪ್ರೀತಿ ಚಿಪ್ಕ್ ರ್ ಹಾಗು ಕಾಪು ಶಾಖೆಯ ವ್ಯವಸ್ಥಾಪಕರಾದ ರೋಹನ್ ಪಿಂಟೋ ಉಪಸ್ಥಿತರಿದ್ದರು. ವೃದ್ಧಾಶ್ರಮದ ಸಿಬ್ಬಂದಿಗಳು, ಕಾಪು ಹಾಗು ಮೂಡುಬೆಳ್ಳೆಯ ಸಿಬ್ಬಂದಿಗಳು ಸಹಕರಿಸಿದರು. ಕಲ್ಯಾಣಪುರ ಶಾಖಾ ವ್ಯವಸ್ಥಾಪಕರಾದ ಅಭಿಜಿತ್ ಪಾಂಡೇಶ್ವರ ಕಾರ್ಯಕ್ರಮ ನಿರೂಪಿಸಿದರು.
