Updated News From Kaup
ಕಾಪು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಬಾರದೆಂದು ಕಾಂಗ್ರೆಸ್ ನ ಸೋತ ಅಭ್ಯರ್ಥಿಯಾದ ವಿನಯ್ ಕುಮಾರ್ ಸೊರಕೆ ತಡೆ ಒಡ್ಡುತ್ತಿದ್ದಾರೆ : ಗುರ್ಮೆ ಸುರೇಶ್ ಶೆಟ್ಟಿ
Posted On: 30-07-2024 06:39PM
ಕಾಪು : ವಿಧಾನಸಭಾ ಕ್ಷೇತ್ರದಲ್ಲಿ ವಿನಯ್ ಕುಮಾರ್ ಸೊರಕೆ ಇವರು 2 ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದು, ಜನಾದೇಶ ಇವರ ಪರವಾಗಿ ಇಲ್ಲದೇ ಇದ್ದು, 2 ಬಾರಿ ಸೋತು ಈ ಹತಾಶೆಯಿಂದ ಪ್ರಸ್ತುತ ಶಾಸಕನಾದ ನನ್ನ ಮೇಲೆ ಕ್ಷೇತ್ರದಲ್ಲಿ ಅಭಿವೃದ್ಧಿಯ ಕೆಲಸಗಳು ಆಗುತ್ತಿಲ್ಲವೆಂದು ಸುಳ್ಳು ಆಪಾದನೆಯನ್ನು ಹೊರಿಸಿರುತ್ತಾರೆ ಎಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಂಜನಾ ಜೆ. ಸುವರ್ಣ : ಬೆಂಗಳೂರು ದೂರದರ್ಶನ ಕೇಂದ್ರದ 'ಬಿ' ಗ್ರೇಡ್ ಕಲಾವಿದೆಯಾಗಿ ಆಯ್ಕೆ
Posted On: 29-07-2024 10:39PM
ಉಡುಪಿ : ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಸಂಜನಾ ಜೆ. ಸುವರ್ಣ ಇವರು ಬೆಂಗಳೂರು ದೂರದರ್ಶನ ಕೇಂದ್ರದ 'ಬಿ' ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ.
ರೋಟರಿ ಕ್ಲಬ್ ಉದ್ಯಾವರ : ಕೃಷಿ ಕಾಯಕ ಉತ್ತೇಜಿಸುವ ರೈತ ಮಿತ್ರ ಕಾರ್ಯಕ್ರಮ
Posted On: 29-07-2024 10:35PM
ಉಡುಪಿ : ಗಾಳಿ, ಮಳೆ ಲೆಕ್ಕಿಸದೆ ಕೃಷಿ ಭೂಮಿಯಲ್ಲಿ ದುಡಿಯುತ್ತಿರುವ ರೈತರು ಮತ್ತು ಕೃಷಿಕರನ್ನು ಗುರುತಿಸಿ, ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಗದ್ದೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವ ವಿಶಿಷ್ಟ ಕಾರ್ಯಕ್ರಮ ಉದ್ಯಾವರದಲ್ಲಿ ನಡೆಯಿತು.
ಕಾಪು ಶ್ರೀ ಲಕ್ಷ್ಮಿಜನಾರ್ದನ ದೇವಳಕ್ಕೆ ಚಲನಚಿತ್ರ ನಟ ರಂಗಾಯಣ ರಘು ಭೇಟಿ
Posted On: 29-07-2024 10:21PM
ಕಾಪು : ಇಲ್ಲಿನ ಶ್ರೀ ಲಕ್ಷ್ಮಿಜನಾರ್ದನ ದೇವಳಕ್ಕೆ ಕನ್ನಡ ಖ್ಯಾತ ಚಲನಚಿತ್ರ ನಟ ರಂಗಾಯಣ ರಘು ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕಾಪು ಬಂಟರ ಸಂಘದ ಮಹಿಳಾ ಘಟಕದಿಂದ ಆಟಿಡೊಂಜಿ ದಿನ ಸಂಭ್ರಮ
Posted On: 29-07-2024 07:28PM
ಕಾಪು : ಇಲ್ಲಿನ ಬಂಟರ ಸಂಘ (ರಿ.) ಇದರ ಆಶ್ರಯದಲ್ಲಿ ಕಾಪು ಬಂಟರ ಮಹಿಳಾ ಘಟಕದ ನೇತೃತ್ವದಲ್ಲಿ ಕಾಪು ಶ್ರೀ ಲಕ್ಷ್ಮೀ ಜರ್ನಾದನ ಸಭಾಂಗಣ ಇಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಯಮಿ ದಿವಾಕರ ಶೆಟ್ಟಿ ಮಲ್ಲಾರು, ಮಸ್ಕತ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಮಸ್ಕತ್ನಲ್ಲೂ ಕೂಡ ನಾವು ನಮ್ಮೂರಿನ ಸಂಸ್ಕೃತಿ, ಸಂಸ್ಕಾರದ ಆಟಿಯ ಕೂಟದಂತಹ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ಸನ್ನು ಕಂಡಿದ್ದೇವೆ. ಕಾಪು ಬಂಟರ ಭವನ ನಿರ್ಮಾಣ ಮಾಡುವಲ್ಲಿ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಭರವಸೆಯನ್ನು ನೀಡಿದರು.
ಹೆಜಮಾಡಿ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗ - ಶೂ, ಸಾಕ್ಸ್ ವಿತರಣೆ ; ಆರೋಗ್ಯ ಮಾಹಿತಿ ಕಾರ್ಯಕ್ರಮ
Posted On: 29-07-2024 06:58PM
ಹೆಜಮಾಡಿ : ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಜಮಾಡಿ ಇಲ್ಲಿ ಸರಕಾರದ ವತಿಯಿಂದ ನೀಡಲಾಗುವ ಶೂ,ಸಾಕ್ಸ್ ವಿತರಣಾ ಕಾರ್ಯಕ್ರಮ ಸೋಮವಾರ ಜರಗಿತು.
ಕಾಪು : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ - ಕಾಪು ವಲಯದ ಕುಟುಂಬ ಸಮ್ಮಿಲನ ಕಾರ್ಯಕ್ರಮ
Posted On: 29-07-2024 06:47PM
ಕಾಪು : ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಾಪು ವಲಯದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು K1 ಹೋಟೆಲ್ ಕಾಪು ಇಲ್ಲಿ ಜರಗಿತು.
ಪಡುಬಿದ್ರಿ : ಕೃಷಿಗೆ ಒತ್ತು ನೀಡದ ಕಾರಣ ಕೃಷಿ ನಾಶದ ಅಂಚಿಗೆ ಸಾಗುತ್ತಿದೆ - ವಿನಯ ಕುಮಾರ್ ಸೊರಕೆ
Posted On: 29-07-2024 06:22PM
ಪಡುಬಿದ್ರಿ : ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಇಂದಿನ ಜನಾಂಗ ಕೃಷಿಗೆ ಒತ್ತು ನೀಡದ ಕಾರಣ ಕೃಷಿ ನಾಶದ ಅಂಚಿಗೆ ಸಾಗುತ್ತಿದೆ. ಕೃಷಿಯಿಂದ ನಮ್ಮ ಹಿರಿಯರು ಆರೋಗ್ಯಕರ ಮತ್ತು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದರು. ಇಂದು ಅತೀ ವೇಗದ ಆಧುನಿಕ ಬದುಕಿಗೆ ಒಗ್ಗಿಕೊಳ್ಳುವ ಪರಿಸ್ಥಿತಿಗೆ ಬಂದಿದೆ. ಇದರಿಂದ ಆರೋಗ್ಯಕರ ಭೂಮಿ ತಾಯಿಯ ಮಣ್ಣಿನಿಂದ ದೂರ ಸರಿಯುವಂತಾಗಿದೆ. ಸಂಬಂಧಗಳು ಕಳೆದು ಕೊಳ್ಳುವಂತಾಗಿದೆ. ಆದ್ದರಿಂದ ಯುವ ಪೀಳಿಗೆ ಕೃಷಿ ಬದುಕಿನತ್ತ ಒಲುವು ಮೂಡಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಕರ್ನಾಟಕದ ಸರಕಾರದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪಡುಬಿದ್ರಿ ಬ್ರಹ್ಮಸ್ಥಾನದ ಬಳಿಯ ಗದ್ದೆಯಲ್ಲಿ ನಡೆದ ಆಟಿಡೊಂಜಿ ಕೆಸರ್ದ ಕಂಡದ ಗೊಬ್ಬುಲು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಪಡುಬಿದ್ರಿ : ನಡಿಪಟ್ಣದಲ್ಲಿ ಕಡಲಬ್ಬರಕ್ಕೆ ರಸ್ತೆ ಕುಸಿತ ; ಜುಲೈ 31 ರವರೆಗೆ ಬ್ಲೂ ಫ್ಲ್ಯಾಗ್ ಬೀಚ್ ಗೆ ನಿರ್ಬಂಧ
Posted On: 29-07-2024 07:13AM
ಪಡುಬಿದ್ರಿ : ಕಡಲ್ಕೊರೆತ ಉಂಟಾಗುತ್ತಿರುವ ನಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಬಳಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂಫ್ಲ್ಯಾಗ್ ಬೀಚ್ಗೆ ತೆರಳುವ ಸಂಪರ್ಕ ರಸ್ತೆಯ ತಳ ಭಾಗಕ್ಕೆ ತೆರೆಗಳು ಅಪ್ಪಳಿಸಿ ರಸ್ತೆಯ ಒಂದು ಭಾಗ ಕುಸಿದಿದೆ.
ಕಾಪು : ಇನ್ನಂಜೆ ಮಹಿಳಾ ಮಂಡಳಿ - ಆಟಿಡೊಂಜಿ ದಿನ
Posted On: 29-07-2024 07:01AM
ಕಾಪು : ಇನ್ನಂಜೆ ಮಹಿಳಾ ಮಂಡಳಿ (ರಿ.) ಇನ್ನಂಜೆ ಇದರ ಆಶ್ರಯದಲ್ಲಿ ಸುವರ್ಣ ಸಭಾ ಭವನ ಯುವಕ ಮಂಡಲ(ರಿ.) ಇನ್ನಂಜೆ ಇಲ್ಲಿ ರವಿವಾರ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು.
